ಲೇಖಕ: admin

ಮಡಿಕೇರಿ ಆ.13 NEWS DESK : ಮಾದಾಪುರದ ಜಂಬೂರು ಬಾಣೆಯ ಬಡಾವಣೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರವನ್ನು ಬ್ರಿಟಿಷ್ ಹೋರಾಟದಿಂದ ಮುಕ್ತಗೊಳಿಸಲು ಸ್ವತಂತ್ರ್ಯ ಹೋರಾಟಗಾರರು ಮಾಡಿದ ತ್ಯಾಗಬಲಿದಾನವನ್ನು ವಿವರಿಸಿದರು. ಈ ಸಂದರ್ಭ ಗ್ರಾಮಸ್ಥರು ಹಾಜರಿದ್ದರು.

Read More

ಕೂಡಿಗೆ ಆ.15 NEWS DESK : ಕೊಡಗಿನ ಸೈನಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸೈನಿಕ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್ ಶಾಲೆಯ ಜನರಲ್ ತಿಮ್ಮಯ್ಯ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ನಂತರ ಶಾಲೆಯ ಅಶ್ವದಳದೊಂದಿಗೆ ಆಗಮಿಸಿ, ಶಾಲೆಯಲ್ಲಿನ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛವನ್ನು ಸಲ್ಲಿಸುವುದರ ಮೂಲಕ ಗೌರವ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಅವರು, ಬ್ರಿಟಿಷರ ಆಳ್ವಿಕೆಯಿಂದ ಭಾರತದ ಸ್ವಾತಂತ್ರ್ಯವನ್ನು ಪಡೆದುಕೊಳ್ಳುವಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸುವುದರೊಂದಿಗೆ, ಕೊಡಗಿನ ವೀರ ಯೋಧರಿಗೆ ಗೌರವವನ್ನು ಸಮರ್ಪಿಸಿದರು. ಎಲ್ಲಾ ವಿದ್ಯಾರ್ಥಿಗಳು ಭಾರತೀಯ ಸಶಸ್ತ್ರ ಪಡೆಗಳಲ್ಲಿ ವೃತ್ತಿಜೀವನವನ್ನು ನಡೆಸಲು ಪ್ರೋತ್ಸಾಹಿಸುವುದರೊಂದಿಗೆ ರಾಷ್ಟ್ರದ ಗಡಿ ಪ್ರದೇಶಗಳನ್ನು ರಕ್ಷಿಸುವಲ್ಲಿ ನಮ್ಮ ವೀರಯೋಧರ ಮಹತ್ವವನ್ನು ತಿಳಿಸಿದರು. ಜೊತೆಗೆ ಭಾರತೀಯ ಸಶಸ್ತ್ರ ಪಡೆಗಳ ಶ್ರೇಷ್ಠತೆಯನ್ನು ಮತ್ತು ಶಾಲೆಯ ಪ್ರಾಥಮಿಕ ಧ್ಯೇಯವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಬೇಕೆಂದು ಎಲ್ಲಾ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಶಾಲೆಯ ವಿದ್ಯಾರ್ಥಿಗಳು ತೋರಿದ ಮನೋಜ್ಞ ಪಥ ಸಂಚಲವನ್ನು ಅಭಿನಂದಿಸುವುದರೊಂದಿಗೆ, ಇದು ಅವರ ನಿರಂತರ…

Read More

ವಿರಾಜಪೇಟೆ ಆ.15 NEWS DESK : ಪಟ್ಟಣದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳು ಹಾಗೂ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ.ಫಾ.ಜೇಮ್ಸ್ ಡೊಮಿನಿಕ್  ದ್ವಜಾರೋಹಣವನ್ನು ನೆರವೇರಿಸಿದರು. ನಂತರ ಮಾತನಾಡಿದ ಅವರು, ಭಾರತದ ಸ್ವಾತಂತ್ರವು ಹಲವಾರು ಮಹಾನ್ ವ್ಯಕ್ತಿಗಳ ತ್ಯಾಗ ಬಲಿದಾನಗಳ ಸಂಕೇತವಾಗಿದೆ. ನಮ್ಮ ಹಿರಿಯರು ಕಷ್ಟ ಪಟ್ಟು ಹೋರಾಟ ಮಾಡಿ ನಮಗೆ ಸ್ವಾತಂತ್ರವನ್ನು ದೊರಕಿಸಿಕೊಟ್ಟಿದ್ದು, ರಾಷ್ಟ್ರದ ಪ್ರತಿಯೊಬ್ಬರು ಅದನ್ನು ಉಳಿಸಿ ಬೆಳೆಸಬೇಕು ಎಂದರು. ವಿದ್ಯಾರ್ಥಿಗಳು ರಾಷ್ಟ್ರಪ್ರೇಮವನ್ನು ಮೈಗೂಡಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಸಂತ ಅನ್ನಮ್ಮ ಪದವಿ ಕಾಲೇಜಿನ ವ್ಯವಸ್ಥಾಪಕ ಹಾಗೂ ಪಿ.ಯು.ಕಾಲೇಜು ಪ್ರಾಂಶುಪಾಲ ರೆ.ಫಾ.ಮದಲೈ ಮುತ್ತು, ಪದವಿ ಕಾಲೇಜು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಬೆನ್ನಿ ಜೋಸೆಫ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿಯರಾದ ಸಿಸ್ಟರ್ ರೋಸಿ, ಸಿಸ್ಟರ್ ಐಡಾ ಹಾಜರಿದ್ದರು. ವಿದ್ಯಾಸಂಸ್ಥೆಯ ಎನ್. ಎಸ್. ಎಸ್, ಎನ್. ಸಿ. ಸಿ, ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳು, ಭೋದಕ -ಬೋಧಕೇತರ…

Read More

ಮಡಿಕೇರಿ ಆ.15 NEWS DESK : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು. ಒಳ ರೋಗಿಗಳ ವಿಭಾಗದಲ್ಲಿ ದಾಖಲಾಗಿರುವ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ಡೀನ್ ಡಾ.ವಿಶಾಲ್ ಕುಮಾರ್, ಡಾ‌.ನಂಜುಂಡಯ್ಯ ಇತರರು ಇದ್ದರು.

Read More

ಮಡಿಕೇರಿ ಆ.15 NEWS DESK : ರಾಷ್ಟ್ರ ಭಕ್ತಿ ಮತ್ತು ರಾಷ್ಟ್ರ ಪ್ರೇಮವನ್ನು ಪ್ರತಿಯೊಬ್ಬ ಭಾರತೀಯರು ಮೈಗೂಡಿಸಿಕೊಳ್ಳುವ ಮೂಲಕ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ ಹಿರಿಯ ಟ್ರಸ್ಟಿಗಳಾದ ಟಿ.ಪಿ. ರಮೇಶ್ ಕರೆ ನೀಡಿದರು. ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಪತ್ರಿಕಾ ಭವನದಲ್ಲಿ ಆಯೋಜಿತ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ತ್ರಿವರ್ಣ ಧ್ವಜಾರೋಹಣ ನೆರವೇರಿಸಿದ ಅವರು, ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗಳನ್ನು ಮಾಡಿದವರನ್ನು ಯುವ ಸಮೂಹ ಸ್ಮರಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆಯೆಂದು ತಿಳಿಸಿದರು. ಸ್ವಾತಂತ್ರ್ಯೋತ್ಸವದಲ್ಲಿ ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್, ಟ್ರಸ್ಟಿ ಶ್ರೀಧರ್ ಹೂವಲ್ಲಿ ಹಾಗೂ ವ್ಯವಸ್ಥಾಪಕಿ ಯಮುನ, ಸವಿತ, ರಾಜೇಶ್ ಹಾಗೂ ಯಶೋಧ, ವರ್ತಕರಾದ ರೆಹಮಾನ್, ಅಶ್ರಫ್, ಮಕ್ಕಳಾದ ತರುಣ್ ಬಜೆಕೋಡಿ, ಜೆ.ಎ.ಚರಿತಾ ಮತ್ತಿತರರು ಭಾಗವಹಿಸಿದ್ದರು.

Read More

ಮಡಿಕೇರಿ ಆ.15 NEWS DESK : ಭಾರತೀಯರಲ್ಲಿ ಅದು ಪೂರ್ಣವಾಗಿ ಸತ್ಯ ಎನಿಸುತ್ತದೆ. ಭಾರತಕ್ಕೆ ಸ್ವಾತಂತ್ರ್ಯ ಬಂದು 77 ವರ್ಷಗಳೇ ಕಳೆದು ಹೋಗಿದೆ. ಭಾರತೀಯರಿಗೆ ಸ್ವಾತಂತ್ರ್ಯ ಎಂದರೆ ಏನು ಎಂದು ಅರಿಯುವುದೇ ಕಷ್ಟವಾಗಿದೆ. ಇಂದಿನ ಪೀಳಿಗೆಗೆ ಯಾಕೆ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತೇವೆ ಎಂಬುದು ಅರಿವು ಇರುವುದಿಲ್ಲ. ನಮಗೆ ಸ್ವಾತಂತ್ರ್ಯ ದಿನಾಚರಣೆ ಎಂದರೆ ಒಂದು ದಿನದ ರಜೆ, ಮೈದಾನದಲ್ಲಿ ಧ್ವಜಾರೋಹಣೆ, ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಅತಿಥಿಗಳಿಂದ ಸಿದ್ಧ ಭಾಷಣದ ವರದಿ ವಾಚನ ಹೊರತು ಅರ್ಥಪೂರ್ಣವಾದ ಆಚರಣೆ ಆಗುವುದೇ ಇಲ್ಲ. ನಿಜವಾದ ಸ್ವಾತಂತ್ರ್ಯ ಎಂದರೆ ಗುಲಾಮಗಿರಿಯಿಂದ ಮುಕ್ತಿ ಎಂದು ಅರ್ಥ. ಅಂದು ಬ್ರಿಟಿಷರಿಂದ ಮುಕ್ತಿ ಪಡೆದ ನಾವು ನಮ್ಮ ದೇಶದಲ್ಲಿ ಬಂದಿಗಳು ಎಂಬುದನ್ನು ಅರಿಯಬೇಕು. ಇಂದು ರಾಷ್ಟ್ರ ಅಧಿಕಾರಿ ಶಾಹಿಗಳಿಂದ, ಬಂಡವಾಳ ಶಾಹಿಗಳಿಂದ ಬಂದಿಯಾಗಿದ್ದೇವೆ ಎಂಬುದನ್ನು ಅರಿತೇ ಇಲ್ಲ. ಬ್ರಿಟಿಷರ ಕಾಲದಲ್ಲಿ ಉತ್ತಮ ಆಡಳಿತ ಇತ್ತು ಎಂಬುದನ್ನು ನಾವು ಅವರ ಆಡಳಿತ ವೈಖರಿಯನ್ನು ಇತಿಹಾಸದಲ್ಲಿ ಅವಲೋಕಿಸಿದಾಗ ತಿಳಿಯುತ್ತದೆ. ಅದಕ್ಕೆ ಸಾಕ್ಷಿ ಎಂಬಂತೆ ಅಂದು ಅವರು…

Read More

ಸಿದ್ದಾಪುರ ಆ.15 NEWS DESK : ಪ್ರೌಢ ಶಾಲಾ ವಿಭಾಗದ ವಿರಾಜಪೇಟೆ ತಾಲ್ಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಕೊಂಡಂಗೇರಿ ಸರ್ಕಾರಿ ಪ್ರೌಢಶಾಲೆಯ ವಿದಾರ್ಥಿ ಮೊಹಮ್ಮದ್ ಹರ್ಷಾದ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಸಿದ್ದಾಪುರದ ಸೆಚಿಟನರಿ ಚರ್ಚ್ ಸಂಭಾಂಗಣದಲ್ಲಿ ‘ನವ ಭಾರತದ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ’ ಎಂಬ ವಿಷಯದಲ್ಲಿ ನಡೆದ ಭಾಷಣ ಸ್ಪರ್ಧೆಯಲ್ಲಿ ವಿರಾಜಪೇಟೆ ತಾಲ್ಲೂಕಿನ 31 ವಿದ್ಯಾರ್ಥಿಗಳು ಪಾಲ್ಗೊಂಡರು. ದ್ವಿತೀಯ ಬಹುಮಾನವನ್ನು ವಿರಾಜಪೇಟೆಯ ಸಚಿತ ಅನ್ನಮ್ಮ ಪ್ರೌಢ ಶಾಲೆಯ ವಿದ್ಯಾರ್ಥಿ ಡೀನ್ ಸಾಲ್ವೋ ಡಿಸೋಜ, ತೃತೀಯ ಬಹುಮಾನವನ್ನು ಕಳತ್ಮಾಡುವಿನ ಲಯನ್ಸ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶಕ್ತ ಚಂಗಪ್ಪ ಪಡೆದುಕೊಂಡರು. ಕಾರ್ಯಕ್ರಮವನ್ನು ಸಿದ್ದಾಪುರ ಸಂತ ಜೋಸೆಫರ ಚರ್ಚ್ ನ ಧರ್ಮಗುರುಗಳಾದ ಫಾ.ಮೈಕಲ್ ಮರಿ ಉದ್ಗಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ತಮಗೆ ಲಭಿಸಿದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಭಾಷಣ ಸ್ಪರ್ಧೆಗಳು ನಾಯಕತ್ವ ಗುಣವನ್ನು ಬೆಳೆಸಲು…

Read More

ಮಡಿಕೇರಿ ಆ.15 NEWS DESK : ಕೊಡಗು ಜಿಲ್ಲಾಡಳಿತ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯು ನಗರದ ಕೋಟೆ ಆವರಣದಲ್ಲಿ ಅರ್ಥಪೂರ್ಣವಾಗಿ ಜರುಗಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಧ್ವಜಾರೋಹಣ ನೆರವೇರಿಸಿದರು. ಶಾಸಕ ಡಾ.ಮಂತರ್ ಗೌಡ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಏರ್ ಮಾರ್ಷಲ್ (ನಿ) ಕೆ.ಸಿ.ಕಾರ್ಯಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಇತರರು ಪಾಲ್ಗೊಂಡಿದ್ದರು. ಮಳೆಯ ಸಿಂಚನದ ನಡುವೆಯೂ ವಿವಿಧ ಶಾಲೆಯ ವಿದ್ಯಾರ್ಥಿಗಳು ದೇಶಭಕ್ತಿ ಕುರಿತು ನೃತ್ಯ ಪ್ರದರ್ಶನ ನೀಡಿದ್ದು ವಿಶೇಷವಾಗಿತ್ತು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಜವಹರಲಾಲ್ ನೆಹರು, ಡಾ.ಬಿ.ಆರ್.ಅಂಬೇಡ್ಕರ್ ಹೀಗೆ ಸ್ವಾತಂತ್ರ್ಯ ಕ್ಕಾಗಿ ಹೊರಾಟ ಮಾಡಿದ ಮಹನೀಯರು ಹಾಗೂ ರಾಷ್ಟ್ರದ ಸೇನಾ ಪ್ರಥಮ ಮಹಾದಂಡ ನಾಯಕ ಫೀಲ್ಡ್ ಮಾರ್ಷಲ್‌ ಕಾರ್ಯಪ್ಪ ಸೇರಿದಂತೆ ಹಲರನ್ನು ಸ್ಮರಿಸಿದ್ದು…

Read More