*ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ಗೌರವಿಸೋಣ* (ಪಿ.ಎ.ಹನೀಫ್)
ಲೇಖಕ: admin
*ರಾಷ್ಟ್ರದ ಏಕತೆಗೆ ಪಣ ತೊಡೋಣ* (ಧರ್ಮಜ ಉತ್ತಪ್ಪ)
*ಭಾರತೀಯರಾದ ನಾವು ದೇಶದ ಪ್ರಗತಿಗೆ ಶ್ರಮಿಸೋಣ* (ಆರ್.ಪಿ.ಚಂದ್ರಶೇಖರ್)
*ರಾಷ್ಟ್ರ ರಕ್ಷಣೆ ಮತ್ತು ರಾಷ್ಟ್ರಭಕ್ತಿಗೆ ನಾವೆಲ್ಲರೂ ಬದ್ಧರಾಗಿರೋಣ* (ಬಲ್ಲಾರಂಡ ಮಣಿ ಉತ್ತಪ್ಪ)
*ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕರು ಬಲಿದಾನ ಮಾಡಿದ್ದಾರೆ. ಸ್ವತಂತ್ರ ಭಾರತದ ಅಭಿವೃದ್ಧಿಗಾಗಿ ನಾವೆಲ್ಲರೂ ಶ್ರಮಿಸೋಣ* (ಎನ್.ಬಾಲಚಂದ್ರ ನಾಯರ್, ಅಧ್ಯಕ್ಷರು, ಕರಿಕೆ ಗ್ರಾಮ ಪಂಚಾಯ್ತಿ)
*ಸ್ವಾತಂತ್ರ್ಯ ಸೇನಾನಿಗಳಿಗೆ ಗೌರವ ನಮನ : ಸರ್ವರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯಗಳು*
*ವಿವಿಧತೆಯಲ್ಲಿ ಏಕತೆಯನ್ನು ಸಾರುವ ಶ್ರೇಷ್ಠ ಭಾರತ ನಮ್ಮದು, ಅಭಿವೃದ್ಧಿಯ ಕಾರ್ಯಗಳು ಮೂಲಕ ದೇಶದ ಕೀರ್ತಿ ಪತಾಕೆ ಹಾರಿಸೋಣ* (ಎಂ.ಎಂ.ಮಹಮ್ಮದ್ ಯಾಕುಬ್, ನಾಮ ನಿರ್ದೇಶಿತ ಸದಸ್ಯರು, ಮಡಿಕೇರಿ ನಗರಸಭೆ)*
ಮಡಿಕೇರಿ ಆ.14 NEWS DESK : ಭಾರತೀಯ ಭೂ ಸರ್ವೇಕ್ಷಣಾ(ಜಿಎಸ್ಐ) ಅಧಿಕಾರಿಗಳ ತಂಡವು ತಾಲ್ಲೂಕಿನ ಮದೆನಾಡು, ಕರ್ತೋಜಿ, ಕೊಯನಾಡು ಶಾಲೆ ಮತ್ತಿತರ ಭೂಕುಸಿತ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. ಭಾರತೀಯ ಭೂ ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳಾದ ಸೆಂಥಿಲ್ ಕುಮಾರ್ ಮತ್ತು ಸೋವೆಶ್ ಅವರ ನೇತೃತ್ವದ ತಂಡವು ಭೇಟಿ ನೀಡಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹಲವು ಮಾಹಿತಿ ನೀಡಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂ ವಿಜ್ಞಾನಿಗಳಾದ ರಾಹುಲ್, ಲಾಯಲ್, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಅನನ್ಯ ವಾಸುದೇವ್ ಇದ್ದರು.
ಮಡಿಕೇರಿ ಆ.14 NEWS DESK : ರೈತರು ಭತ್ತ ಕೃಷಿ ಪದ್ಧತಿಯನ್ನು ಮತ್ತಷ್ಟು ಹೆಚ್ಚಿಸಬೇಕು. ಯಾವುದೇ ಕಾರಣಕ್ಕೂ ಭತ್ತ ಕೃಷಿ ಪದ್ಧತಿಯಿಂದ ಹಿಂಜರಿಕೆ ಬೇಡ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಸಲಹೆ ನೀಡಿದರು. ವಿರಾಜಪೇಟೆ ತಾಲೂಕಿನ ಬೊಳ್ಳುಮಾಡು ಗ್ರಾಮದ ಮಾತಂಡ ಶಕು ಅಕ್ಕಮ್ಮ ಹಾಗೂ ಮನು ಇವರ ಗದ್ದೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ನಡೆದ ‘ಬೇಲ್ ನಮ್ಮೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ದಕ್ಷಿಣ ಭಾರತದಲ್ಲಿ ಭತ್ತ ಪ್ರಮುಖ ಆಹಾರ ಬೆಳೆಯಾಗಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಭತ್ತ ಕೃಷಿಯಿಂದ ವಿಮುಖರಾಗದೆ, ಭತ್ತ ಕೃಷಿಯನ್ನು ಮುಂದುವರೆಸಿಕೊಂಡು ಹೋಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು. ಭತ್ತ ಕೃಷಿ ಮಾಡುವುದರಿಂದ ಅಂತರ್ಜಲವು ಸಹ ಹೆಚ್ಚಾಗಲಿದೆ. ಆದ್ದರಿಂದ ಭತ್ತ ಉತ್ಪಾದನೆಯಿಂದ ಲಾಭ-ನಷ್ಟ ಬಗ್ಗೆ ನೋಡದೆ ಭತ್ತ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಎನ್.ಎಸ್.ಭೋಸರಾಜು ಹೇಳಿದರು. ಕರ್ನಾಟಕದ ಉತ್ತರ ಭಾಗದ ತುಂಗಾಭದ್ರ ಮತ್ತು ಆಲಮಟ್ಟಿ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತ…
ಸುಂಟಿಕೊಪ್ಪ ಆ.14 NEWS DESK : ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಗುಡುಗು ಸಹಿತ ಬಾರಿ ಮಳೆಯಾಗಿದ್ದು, ಕೆಲವು ಮನೆಗಳಿಗೆ ನೀರು ನುಗ್ಗಿದೆ. ಮಳೆಯ ರಭಸಕ್ಕೆ ಸುಂಟಿಕೊಪ್ಪದಿಂದ ಗದ್ದೆಹಳ್ಳಕ್ಕಾಗಿ ಹರಿಯುವ ತೋಡು ತುಂಬಿಕೊಂಡ ಪರಿಣಾಮ ಗದ್ದೆಹಳ್ಳ ಗಿರಿಯಪ್ಪ ಮನೆ ತಗ್ಗು ಪ್ರದೇಶದಲ್ಲಿ ನಿರ್ಮಿಸಲಾಗಿರುವ 10 ರಿಂದ 12 ಮನೆಗಳಿಗೆ ಮಳೆಯ ನೀರು ಸೇರಿದಂತೆ ಕೊಳಚೆ ನೀರು ನುಗ್ಗಿ ಮನೆಯ ಗೃಹೋಪಯೋಗಿ ವಸ್ತುಗಳು ಹಾಗೂ ಪಿಠೋಪಕರಣಗಳು ಹಾನಿಯಾಗುವ ಆತಂಕ ಸೃಷ್ಟಿಯಾಯಿತು. ಕಳೆದ ಕೆಲವು ವರ್ಷಗಳಿಂದ ಈ ಭಾಗದ ಗದ್ದೆಹಳ್ಳ ಗಿರಿಯಪ್ಪ ಮನೆ ಭಾಗದಲ್ಲಿ ಹರಿಯುತ್ತಿರುವ ತೋಡಿನ ನೀರು ಮಳೆಬಂದಾಗ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನುಗ್ಗುತ್ತಿದೆ. ಈ ಬಗ್ಗೆ ಸಂಬಂಧಿಸಿ ಇಲಾಖೆಯವರಿಗೆ ದೂರು ನೀಡಲಾಗಿದ್ದರೂ ಅಧಿಕಾರಿಗಳು ಬಂದು ಭೇಟಿ ನೀಡಿ ಹೋಗುತ್ತಿದ್ದಾರೆ ಹೊರತು ಶಾಶ್ವತ ಪರಿಹಾರಕ್ಕೆ ಮುಂದಾಗುತ್ತಿಲ್ಲ ಎಂದು ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳಕ್ಕೆ ಸುಂಟಿಕೊಪ್ಪ ಗ್ರಾ.ಪಂ ಅಧಕ್ಷ ಪಿ.ಆರ್.ಸುನಿಲ್ಕುಮಾರ್ ಹಾಗೂ ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಪಂಚಾಯಿತಿ ಸದಸ್ಯರುಗಳಾದ ಪಿ.ಎಫ್.ಸಬಾಸ್ಟೀನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮ…






