ಮಡಿಕೇರಿ NEWS DESK ಆ.28 : ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದ್ದು, ಫಲಾನುಭವಿಗಳಿಗೆ ಎಲ್ಲಾ ಸೌಲಭ್ಯ ದೊರೆಯುತ್ತಿದೆ ಎಂದು ಮಡಿಕೇರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಮಂದ್ರೀರ ಜಿ.ಮೋಹನ್ ದಾಸ್ ಅವರು ತೃಪ್ತಿ ವ್ಯಕ್ತಪಡಿಸಿದ್ದಾರೆ. ಮಡಿಕೇರಿ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಮಿತಿಯ ಸದಸ್ಯರು ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಿದರು. ಸಂಬಂಧಪಟ್ಟ ಇಲಾಖೆಗಳಿಂದ ಅಗತ್ಯ ಮಾಹಿತಿಗಳನ್ನು ಪಡೆದುಕೊಳ್ಳಬೇಕು. ಹೋಬಳಿ ಮಟ್ಟದಲ್ಲಿ ಕುಂದುಕೊರತೆ ಸಭೆಯನ್ನು ನಡೆಸಿ ಗ್ರಾಮಸ್ಥರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಎಲ್ಲಾ ಸದಸ್ಯರು ಮುಂದಾಗಬೇಕು. ಈ ಪ್ರಯತ್ನಕ್ಕೆ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕು. ಮುಂದಿನ ದಿನಗಳಲ್ಲಿ ನಡೆಯುವ ಜಿಲ್ಲಾ ಮಟ್ಟದ ಸಭೆಯಲ್ಲಿ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿ ಪರಿಹಾರ ಪಡೆಯಲಾಗುವುದು ಎಂದು ತಿಳಿಸಿದರು. ::: ಗೃಹಲಕ್ಷ್ಮಿ ಯೋಜನೆ :::…
ಲೇಖಕ: admin
ಮಡಿಕೇರಿ ಆ.28 NEWS DESK : ಕುಶಾಲನಗರ 220/11 ಕೆವಿ, ಸುಂಟಿಕೊಪ್ಪ 66/11 ಕೆವಿ ಮತ್ತು ಸೋಮವಾರಪೇಟೆ 33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಆ.29 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕುಶಾಲನಗರ ಪಟ್ಟಣ, ಹೆಬ್ಬಾಲೆ ಶಿರಂಗಾಲ, ಕೂಡಿಗೆ, ರಸಲ್ಪುರ, ಭುವನಗಿರಿ, ಬಲಮುರಿ, ಹಾರಂಗಿ, ನಂಜರಾಯಪಟ್ಟಣ, ಎಸ್.ಎಲ್.ಎನ್, ಸಿದ್ದಲಿಂಗಪುರ ಕಾವೇರಿ ನಿಸರ್ಗಧಾಮ, ಸೋಮೇಶ್ವರ, ಕೂಡುಮಂಗಳೂರು, ಸುಂಟಿಕೊಪ್ಪ, ಮಳ್ಳೂರು, ಹೊಸಕೋಟೆ, ನಾಕೂರು, ಮಾದಾಪುರ, ಸೂರ್ಲಬ್ಬಿ, ಹಟ್ಟಿಹೊಳೆ, ಕಾಂಡನಕೊಲ್ಲಿ, ಗರ್ವಾಲೆ, ಬಿಳಿಗೇರಿ, ಕಂಬಿಬಾಣೆ, ಕೊಡಗರಹಳ್ಳಿ, ಉಪ್ಪುತೋಡು, ಚೆಟ್ಟಳ್ಳಿ, ಶಿರಂಗಾಲ, ವಾಲ್ನೂರು ತ್ಯಾಗತ್ತೂರು, ಮತ್ತಿಕಾಡು, ಕೆದಕಲ್, ಸೋಮವಾರಪೇಟೆ ಟೌನ್, ಶಾಂತಳ್ಳಿ, ಗೌಡಳ್ಳಿ, ಅಬ್ಬೂರುಕಟ್ಟೆ, ಐಗೂರು, ಬಜೇಗುಂಡಿ, ದೊಡ್ಡಮಳ್ತೆ, ಮಸಗೋಡು, ಕರ್ಕಳ್ಳಿ, ಹಾನಗಲ್ಲು, ಬೇಳೂರು, ಯಡವಾರೆ, ಕುಂಬೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಇಇ ಅನಿತಾ ಬಾಯಿ ಕೋರಿದ್ದಾರೆ.
ಮಡಿಕೇರಿ ಆ.28 NEWS DESK : ಸ್ವಂತ ಉದ್ಯಮ ಆರಂಭಿಸುವ ಮೂಲಕ ಜನತೆಯ ಆರ್ಥಿಕ ಸ್ಥಿತಿ ಸುಧಾರಣೆಯಾದರೆ ವಿಕಸಿತ ಭಾರತ ನಿರ್ಮಾಣ ಮಾಡಲು ಸಾಧ್ಯ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪಿ.ಗಂಗಾಧರ್ ನಾಯ್ಕ್ ಅಭಿಪ್ರಾಯಪಟ್ಟರು. ನಗರದ ಗಾಂಧಿ ಭವನದಲ್ಲಿ ಖಾದಿ ಗ್ರಾಮೋದ್ಯೋಗ ಆಯೋಗ ಕರ್ನಾಟಕ ಸರ್ಕಾರ ಮತ್ತು ಮೈಸೂರಿನ ಸರ್ವೋದಯ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ನಡೆದ ಪ್ರಧಾನಮಂತ್ರಿ ಉದ್ಯೋಗ ಸೃಜನ ಅರಿವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ಹಲವು ಯೋಜನೆಗಳ ಸೌಲಭ್ಯ ಪಡೆಯಲು ಪ್ರತಿಯೊಬ್ಬರೂ ಮುಂದಾಗಬೇಕು. ಸ್ವ ಉದ್ಯೋಗ ಕೈಗೊಳ್ಳುವುದರಿಂದ ದೇಶಕ್ಕೂ ಲಾಭವಿದೆ, ದೇಶದ ಆರ್ಥಿಕ ಪ್ರಗತಿಗೂ ಕಾರಣವಾಗುತ್ತದೆ. ಬ್ಯಾಂಕ್ ಜೊತೆಗೆ ವ್ಯವಹಾರ ಮಾಡುವಾಗ ಆರ್ಥಿಕ ಶಿಸ್ತು ಮುಖ್ಯ, ಸ್ವ ಉದ್ಯೋಗ ಕೈಗೊಳ್ಳುವುದರಿಂದ ಉದ್ಯಮಿಯಾಗಿ ಬೆಳೆದು ಆರ್ಥಿಕವಾಗಿ ಪ್ರಗತಿ ಹೊಂದಬಹುದು. ಪ್ರತಿಯೊಬ್ಬರೂ ಸರ್ಕಾರದ ಸೌಲಭ್ಯವನ್ನು ಪಡೆದುಕೊಂಡು ಸ್ವಾವಲಂಬಿಗಳಾಗಬೇಕೆಂದು ಕರೆ ನೀಡಿದರು. ಖಾದಿ ಗ್ರಾಮೋದ್ಯೋಗ ಇಲಾಖೆಯ ಅಧಿಕಾರಿ ರಾಮಕೃಷ್ಣ ಆಚಾರ್ ಮಾತನಾಡಿ, ಸೇವಾ ವಲಯ ಮತ್ತು ಉತ್ಪಾದನಾ ವಲಯ ಎರಡು ವಿಧದಲ್ಲಿ…
ಸುಂಟಿಕೊಪ್ಪ, ಆ.28 NEWS DESK : ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕ್ಷೇತ್ರ ರೈತರ ಹಿತಾಶಕ್ತಿ ಕಾಪಾಡಿಕೊಂಡು ಬರುತ್ತಿದ್ದು, ವರ್ಷದಿಂದ ವರ್ಷಕ್ಕೆ ಲಾಭಾಂಶ ಹೆಚ್ಚಿಸುತ್ತಾ ಪ್ರಗತಿ ಪಥದತ್ತ ಸಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ಹೇಳಿದರು. ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ನರೇಂದ್ರ ಮೋದಿ ಭವನದಲ್ಲಿ ಆಯೋಜಿಸಲಾಗಿದ್ದು, ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರಸಕ್ತ ಸಾಲಿನಲ್ಲಿ ಕಾಫಿಗೆ ಹೂವು ಮಳೆಯ ಕೊರತೆ ಹಾಗೂ ಇದೀಗ ಅತಿವೃಷ್ಠಿಯಿಂದ ಬೆಳೆಗಾರರ ಫಸಲು ನಷ್ಟವಾಗಿದ್ದು, ಸಹಕಾರ ರೈತರ ಸಾಲವನ್ನು ಮನ್ನಾ ಮಾಡಬೇಕೆಂದು ಆಗ್ರಹಿಸಿದರು. ಚೆಟ್ಟಳ್ಳಿ ಕೃಷಿಪತ್ತಿನ ಸಹಕಾರ ಸಂಘವು ಚೆಟ್ಟಳ್ಳಿ ವ್ಯಾಪ್ತಿಯ ವಿವಿಧ ಸಮಾಜಕ್ಕೆ ಹಾಗೂ ಐನ್ಮನೆ ಅಭಿವೃದ್ಧಿಗೆ ಆರ್ಥಿಕ ನೆರವು ನೀಡುತ್ತಾ ಬರುತ್ತಿದ್ದು, ರೈತರು ಆರ್ಥಿಕವಾಗಿ ಸದೃಢವಾಗಲು ಎಲ್ಲಾ ರೀತಿಯ ನೆರವು ನೀಡಲಾಗುತ್ತಿದೆ. ಸಹಕಾರ ಸಂಘದಲ್ಲಿ ಈ ಹಿಂದೆ ಮನೆಯಲ್ಲಿ ಗಂಡ ಹೆಂಡತಿ ಮಾತ್ರ ಸದಸ್ಯರಾಗುತ್ತಿದ್ದರು. ಈಗ ಆ ಕುಟುಂಬದ ಮಕ್ಕಳನ್ನು ಸದಸ್ಯರನ್ನಾಗಿಸುವ…
ಮಡಿಕೇರಿ ಆ.28 NEWS DESK : ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾಗಿ ಡಾ.ದೀಪಿಕಾ ಮೂರ್ತಿ ನಿಯೋಜನೆಗೊಂಡರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಆದೇಶದ ಮೇರೆಗೆ ಡಾ.ದೀಪಿಕಾ ಅಧಿಕಾರ ಸ್ವೀಕರಿಸಿದರು. ಆರೋಗ್ಯ ಈ ಸಂದರ್ಭ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಜರಿದ್ದರು.
ಮಡಿಕೇರಿ ಆ.28 NEWS DESK : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಗೋಣಿಕೊಪ್ಪ ಸೇವಾ ಕೇಂದ್ರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನ ಸಂಭ್ರಮದಿಂದ ಆಚರಿಸಲಾಯಿತು. ಸುಮಾರು 35ಕ್ಕೂ ಹೆಚ್ಚಿನ ಮಕ್ಕಳು ರಾಧಾಕೃಷ್ಣನ ವೇಷಧರಿಸಿ ಕಾರ್ಯಕ್ರಮಕ್ಕೆ ಮೆರಗು ನೀಡಿ ಸಂಭ್ರಮ ಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಇಂದಿನ ಒತ್ತಡ ಜೀವನದಲ್ಲಿ ಪ್ರತಿಯೊಬ್ಬರಿಗೂ ಆಧ್ಯಾತ್ಮಿಕತೆಯ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು. ಪ್ರವಚನಕಾರರಾಗಿ ಆಗಮಿಸಿದ ಹಾಸನ ಸೇವಾ ಕೇಂದ್ರ ಸಂಚಾಲಕಿ ಬ್ರಹ್ಮಾಕುಮಾರಿ ಆಶಾಕ್ಕ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಧ್ಯಾತ್ಮಿಕ ರಹಸ್ಯವನ್ನು ಸವಿಸ್ತಾರವಾಗಿ ತಿಳಿಸಿಕೊಟ್ಟರು. ಶ್ರೀ ಕೃಷ್ಣನು ಸರ್ವಗುಣ ಸಂಪನ್ನ, ಸಂಪೂರ್ಣ ನಿರ್ವಿಕಾರಿ, ಅಹಿಂಸ ಪರಮೋದರ್ಮಿ, ಮರ್ಯಾದ ಪುರುಷೋತ್ತಮ, ಹದಿನಾರು ಕಲ ಸಂಪನ್ನ ಹಾಗೂ ಸಂಪೂರ್ಣ ಪವಿತ್ರನಾಗಿದ್ದನು ಅದನ್ನು ಪ್ರತಿಯೊಬ್ಬರು ಅರಿತು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ನಾವು ಸಹ ದೈವತ್ವ ಪಡೆದುಕೊಳ್ಳಲು ಸಾಧ್ಯ. ಶ್ರೀ ಕೃಷ್ಣನ ಜೀವನ ಚರಿತ್ರೆಯಲ್ಲಿ ಬರುವ ಒಂದೊಂದು ಘಟನೆಗಳಲ್ಲಿ ಆಳವಾದ ಆಧ್ಯಾತ್ಮಿಕ ರಹಸ್ಯ…
ಮಡಿಕೇರಿ ಆ.28 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಕೊಡವ ಪರಿಕರಗಳಾದ ದುಡಿ, ಧೋಳ್, ಕೊಂಬು, ತಾಳ, ಒಡಿಕತ್ತಿಗಳಿಗೆ ಅರ್ಹ ಕಲಾವಿದರುಗಳು ಹಾಗೂ ದೇವನೆಲೆ, ಐನ್ಮನೆ ಮತ್ತು ನೋಂದಾಯಿತ ಸಂಘ-ಸಂಸ್ಥೆ-ಸಮಾಜಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸ ಬಯಸುವವರು ಸ್ವವಿವರಗಳನ್ನು ದಾಖಲೆ ಸಮೇತವಾಗಿ ಸಲ್ಲಿಸುವುದು. ತಮಗಳ ಸೇವಾಕ್ಷೇತ್ರದಲ್ಲಿನ ಅನುಭವ ಹಾಗೂ ಕೊಡವ ಸಂಸ್ಕೃತಿಗೆ ನೀಡಿರುವ ಕೊಡುಗೆಗಳ ದಾಖಲೆಗಳನ್ನು ಸಲ್ಲಿಸುವುದು. ಕೊಡವ ಅಕಾಡೆಮಿಯಿಂದ ಅರ್ಹತೆಯ ಮೇರೆಗೆ ಪರಿಕರಗಳನ್ನು ಪಡೆಯುವ ವ್ಯಕ್ತಿಗಳು, ಸಂಸ್ಥೆಗಳು ಅಕಾಡೆಮಿಯ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದರ ಜೊತೆಗೆ ಕೊಡವ ಸಂಸ್ಕೃತಿಯ ಬೆಳವಣಿಗೆಗೆ ಶ್ರಮಿಸುವಂತೆ ದೃಡೀಕರಿಸುವುದು ಕಡ್ಡಾಯವಾಗಿದೆ. ಧೋಳ್, ಕೊಂಬುಗಳನ್ನು ಪಡೆಯುವ ಕಲಾವಿದರು ಕೊಡವ ಸಂಸ್ಕೃತಿ ಪಾಲಕರು ಹಾಗೂ ಕೊಡವ ಭಾಷಿಕರಾಗಿದ್ದು ಅಕಾಡೆಮಿಯ ಕಾರ್ಯಕ್ರಮಗಳಿಗೆ ಆಹ್ವಾನದ ಮೇರೆ ನಿಯಮಾನುಸಾರ ಭಾಗವಹಿಸುವಂತವರಾಗಿರತಕ್ಕದ್ದು. ಅಕಾಡೆಮಿಯ ಶರತ್ತುಗಳು ಹಾಗೂ ನೀತಿ ನಿಯಮಗಳಿಗೆ ಹೊಂದಿಕೊಂಡು ಕೊಡವ ಸಂಸ್ಕೃತಿಯ ಪೋಷಣೆಗೆ ಸದಾ ಸಿದ್ದರಿರಬೇಕು. ಈ ಹಿಂದೆ ಪರಿಕರಗಳನ್ನು ಪಡೆದಿರುವವರು ಅರ್ಜಿ ಸಲ್ಲಿಸುವಂತಿಲ್ಲ. ಅಂತಹವರ ಅರ್ಜಿಯನ್ನು ತಿರಸ್ಕರಿಸಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ…
ನಾಪೋಕ್ಲು ಆ.28 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಮತ್ತು ವಾಟೆಕಾಡು ಶ್ರೀ ವಿಘ್ನೇಶ್ವರ ಸೇವಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ವಾಟೆಕಾಡುವಿನಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ವಾಟೆಕಾಡು ಸಮುದಾಯ ಭವನ ಮತ್ತು ಅಂಗನವಾಡಿ ಕೇಂದ್ರದ ಸುತ್ತಲ್ಲು ಬೆಳೆದಿದ್ದ ಗಿಡಗಂಟಿ ಹಾಗೂ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಮಿತಿಯ ಪದಾಧಿಕಾರಿಗಳು ಸ್ವಚ್ಛಗೊಳಿಸಿದರು. ಈ ಸಂದರ್ಭ ಶ್ರೀ ವಿಘ್ನೇಶ್ವರ ಸೇವಾ ಸಮಿತಿ ಅಧ್ಯಕ್ಷ ಹೆಚ್.ಜೆ.ಶರಣು, ಕಾರ್ಯದರ್ಶಿ ಅಭಿ, ಹೆಚ್.ಜೆ.ಗಣೇಶ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳಾದ ಸರಸ್ವತಿ, ಸುಮ್ಮಿ, ಸೀತೆ, ರಂಜು , ರೂಪ ಮತ್ತು ಇತರರು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಆ.28 NEWS DESK : ಅಯ್ಯಂಗೇರಿ ಚಿನ್ನತಪ್ಪ (ಶ್ರೀ ಕೃಷ್ಣ ) ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮುಂಜಾನೆ ಶ್ರೀ ಕೃಷ್ಣನಿಗೆ ಅಲಂಕಾರ ಹಾಗೂ ವಿಶೇಷ ಪೂಜೆಗಳನ್ನು ಸಲ್ಲಿಸಲಾಯಿತು. ನಂತರ ನೆರೆದ್ದವರಿಗೆ ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನದಾನ ನೆರವೇರಿತು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಆ.28 NEWS DESK : ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ಯುವಕ ಸಂಘದ ಆಶ್ರಯದಲ್ಲಿ ಕೈಲ್ ಮುಹೂರ್ತ (ಕೈಲ್ಪೊಳ್ದ್) ಹಬ್ಬದ ಪ್ರಯುಕ್ತ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕ್ರೀಡಾಕೂಟ ನಡೆಯಿತು. ಯೂತ್ ಕ್ಲಬ್ ಅಧ್ಯಕ್ಷ ಕಾಳೆಯಂಡ ರಿನೇಶ್ ಪೊನ್ನಪ್ಪ ಅಧ್ಯಕ್ಷತೆಯಲ್ಲಿ ನಡೆದ ಕ್ರೀಡಾಕೂಟವನ್ನು ನಿವೃತ್ತ ಎಸ್ಪಿ ಬೊಳ್ಯೆಪಂಡ ರವಿ ಮಾಚಯ್ಯ ತೆಂಗಿನಕಾಯಿಗೆ ಗುಂಡು ಹೊಡೆಯುವ ಮೂಲಕ ಉದ್ಘಾಟಿಸಿದರು. ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ಬೊಳ್ಯಪಂಡ ಜಾನ್ ಪೂಣಚ್ಚ ಪ್ರಥಮ, ಕಾಳಚಂಡ ಹರ್ಷ ಉತ್ತಯ್ಯ ದ್ವಿತೀಯ, ಬೇತು ಗ್ರಾಮದ ಕಾಫಿ ಬೆಳೆಗಾರ ಕುಟ್ಟಂಚೆಟ್ಟೀರ ಶ್ಯಾಂ ಬೋಪಣ್ಣ, ಕೊಂಡೀರ ಕಾಳಯ್ಯ, ಠಾಣಾಧಿಕಾರಿ ಮಂಜುನಾಥ್ ಸಂಘದ ಪದಾಧಿಕಾರಿಗಳು ಸದಸ್ಯರು ಹಾಗೂ ಇನ್ನಿತರರು ಪಾಲ್ಗೊಂಡಿದ್ದರು. ಬಲ್ಲಮಾವಟಿ :: ಸಮೀಪದ ಬಲ್ಲಮಾವಟಿ ಗ್ರಾಮದ ಅಪೋಲೋ ಯುವಕ ಸಂಘ ಮತ್ತು ಕಾವೇರಿ ಮಹಿಳಾ ಸಮಾಜದ ಸಂಯುಕ್ತ ಆಶ್ರಯದಲ್ಲಿ ನಾಡಹಬ್ಬ ಕೈ ಮುಹೂರ್ತ ಪ್ರಯುಕ್ತ ಆಟೋಟ ಕೂಟ ಜರುಗಿತು. ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಗ್ರಾ.ಪಂ…






