ವಿರಾಜಪೇಟೆ NEWS DESK ಆ.27 : ಯು ಎಸ್ ಎ ಡ್ಯಾನ್ಸ್ ಸ್ಟುಡಿಯೋ ಅವರ ಅಪ್ಪು ಫಾರೆವರ್ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯ ಆಶ್ರಯದಲ್ಲಿ ನಡೆದ ಸ್ಪರ್ಧಾ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ತನ್ವಿ ದೇಚಮ್ಮ ಕೆ.ಸಿ ಅವರು ಸೋಲೊ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ತನ್ವಿ ದೇಚಮ್ಮ ವಿರಾಜಪೇಟೆಯ ಕೋರಂಡ ಆಶಾ ಅವರ ಪುತ್ರಿಯಾಗಿದ್ದು, ಎಸ್ಎಂಎಸ್ ಅಕಾಡೆಮಿ ಆಫ್ ಸೆಂಟ್ರಲ್ ಎಜುಕೇಶನ್ ಅರಮೇರಿ ಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಇಂಟೋಪೀಸ್ ಡಾನ್ಸ್ ಸ್ಟುಡಿಯೋ ನೃತ್ಯ ಶಾಲೆಯಲ್ಲಿ ನೃತ್ಯ ಅಭ್ಯಾಸ ಮಾಡುತ್ತಿದ್ದು, ನೃತ್ಯ ಸಂಯೋಜಕ ವಿಷ್ಣು ಅವರು ತರಬೇತಿ ನೀಡುತ್ತಿದ್ದಾರೆ.
ಲೇಖಕ: admin
ವಿರಾಜಪೇಟೆ NEWS DESK ಆ.27 : ಹಿರಿಯ ಪತ್ರಕರ್ತ ಮತ್ತು ಕಿತ್ತಳೆ ನಾಡು ಕನ್ನಡ ವಾರಪತ್ರಿಕೆಯ ಪ್ರಧಾನ ಸಂಪಾದಕರೂ ಆಗಿರುವ ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ನ ಸ್ಥಾಪಕ ಅಧ್ಯಕ್ಷ ಕುವೇಂಡ ವೈ.ಹಂಝತುಲ್ಲಾ ಅವರು 2022ನೇ ಸಾಲಿನ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಯು.ಎಚ್.ಉಮರ್, ಕುವೇಂಡ ವೈ. ಹಂಝತುಲ್ಲಾ ಅವರು ಬ್ಯಾರಿ ಟೈಮ್ಸ್ ಮತ್ತು ಕಿತ್ತಳೆ ನಾಡು ಕನ್ನಡ ವಾರಪತ್ರಿಕೆಯ ಪ್ರಧಾನ ಸಂಪಾದಕರಾಗಿ ಕನ್ನಡ ಪತ್ರಿಕೋದ್ಯಮಕ್ಕೆ ಮತ್ತು ಬ್ಯಾರಿ ಸಾಹಿತ್ಯಕ್ಕೆ ಕಳೆದ ನಾಲ್ಕು ದಶಕಗಳಿಂದ ನೀಡಿದ ಕೊಡುಗೆಯನ್ನು ಪರಿಗಣಿಸಿ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಗೊಳಿಸಲಾಗಿದೆ. ಚಿಂತನಾಶೀಲಾ ವ್ಯಕ್ತಿತ್ವ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಅವರ ರಚನಾತ್ಮಕ ಸಮಾಜಮುಖಿ ಕಾರ್ಯ ಚಟುವಟಿಕೆಗಳು, ಕನ್ನಡಪರ ಕಾಳಜಿ ಮತ್ತು ಅವರ ಸಂವೇದನಾಶೀಲತೆ ಮೊದಲಾದವುಗಳನ್ನು ಅಕಾಡೆಮಿಯ ಪ್ರಶಸ್ತಿ ಆಯ್ಕೆ ಸಮಿತಿ ಅಂಗೀಕರಿಸಿದ್ದು, ಈ ಎಲ್ಲಾ ಮಾನದಂಡದಲ್ಲಿ ಅಕಾಡೆಮಿಯ ಗೌರವ…
ವಿರಾಜಪೇಟೆ NEWS DESK ಆ.27 : ವಿರಾಜಪೇಟೆ ಕಾವೇರಿ ಪದವಿಪೂರ್ವ ಕಾಲೇಜು 2024-25ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ಘಾಟನಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಮೋಟಯ್ಯ ಅವರು ಆಯ್ಕೆಯಾದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು ನೈತಿಕ ಮೌಲ್ಯಗಳ ಜೊತೆಯಲ್ಲಿ ಮಾನವೀಯ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಯೋಗ, ಜ್ಞಾನ, ಏಕಾಗ್ರತೆಯ ಮೂಲಕ ಜೀವನದ ಗುರಿ ಸಾಧಿಸಬೇಕು. ಸಮಾಜಮುಖಿಗಳಾಗಿ ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜ್ ನ ಪ್ರಾಂಶುಪಾಲ ಎನ್.ಎಂ.ನಾಣಯ್ಯ ಅವರು ವಿದ್ಯಾರ್ಥಿಗಳು ಜೀವನದಲ್ಲಿ ನಾಯಕತ್ವ ಮತ್ತು ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಎಂ.ಪಿ.ದಮಯಂತಿ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಬೆನಡಿಕ್ ಸಾಲ್ಡಾನ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಅಧಿಕಾರಿ ಪಮಿತ, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು…
ಮಡಿಕೇರಿ NEWS DESK ಆ.27 : ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾ ಘಟಕ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ,ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗ ಇವುಗಳ ಸಂಯುಕ್ತಾಶ್ರಯದಲ್ಲಿ ದಿನಾಂಕ 29-8-2024 ರಂದು ವಿಶ್ವ ಜಾನಪದ ದಿನಾಚಣೆ ಅಂಗವಾಗಿ ಜಾನಪದ ವೈವಿಧ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ನಗರದ ಜೂನಿಯರ್ ಕಾಲೇಜಿನ ಆವರಣದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಉದ್ಘಾಟಿಸಲಿದ್ದಾರೆ.ಅಧ್ಯಕ್ಷತೆಯನ್ನು ಜಾನಪದ ಪರಿಷತ್ನ ಕೊಡಗು ಘಟಕದ ಅಧ್ಯಕ್ಷರಾದ ಬಿ.ಜಿ.ಅನಂತಶಯನ ವಹಿಸಲಿದ್ದು,ಮುಖ್ಯ ಅತಿಥಿಗಳಾಗಿ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪಿ.ಕೆ.ವೆಂಕಟೇಶ್ ಪ್ರಸನ್ನ ಪಾಲ್ಗೊಳ್ಳಲಿದ್ದಾರೆ.ಅತಿಥಿಗಳಾಗಿ ಜಾನಪದ ಪರಿಷತ್ ಕೊಡಗು ಘಟಕದ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್,ಖಜಾಂಚಿ ಸಂಪತ್ ಕುಮಾರ್,ಕಾರ್ಯದರ್ಶಿ ಉಜ್ವಲ್ ರಂಜಿತ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರು,ಕೊಡಗು ವಿವಿ ಸಿಂಡಿಕೇಟ್ ಸದಸ್ಯರಾದ ಡಾ.ಕಾವೇರಿ ಪ್ರಕಾಶ್,ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಎಚ್.ಟಿ.ಅನಿಲ್ ಭಾಗವಹಿಸಲಿದ್ದಾರೆ.ಶನಿವಾರ ಸಂತೆಯ ಕಲಾವಿದ ಮೊಗೆರ ಸುರೇಶ್,ಮಡಿಕೇರಿಯ…
ನಂಜರಾಯಪಟ್ಟಣ NEWS DESK ಆ.27 : ನಂಜರಾಯಪಟ್ಟಣ ಮುಸ್ಲಿಂ ಜಮಾಅತ್ ಕಮಿಟಿ, ರಕ್ತ ನಿಧಿ ಕೇಂದ್ರ ಜಿಲ್ಲಾಸ್ಪತ್ರೆ ಹಾಗೂ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಇದರ ಸಹಭಾಗಿತ್ವದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ 2ನೇ ವರ್ಷದ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರ ನಂಜರಾಯಪಟ್ಟಣ ನೂರುಲ್ ಇಸ್ಲಾಂ ಮದರಸದಲ್ಲಿ ನಡೆಯಿತು. ನಂಜರಾಯಪಟ್ಟಣ ಮಹಲ್ ಖತೀಬ ಮಹಮ್ಮದ್ ಸಹದಿ ಉಸ್ತಾದ್ ಅವರು ಪ್ರಾರ್ಥನೆ ಮಾಡುವ ಮೂಲಕ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು. ನಂಜರಾಯಪಟ್ಟಣ ಗ್ರಾಮ ಪಂಚಾಯತಿ ಅಧ್ಯಕ್ಷ ಸಿ.ಎಲ್.ವಿಶ್ವ ಅವರು ಮಾತನಾಡಿ ನಂಜರಾಯಪಟ್ಟಣ ಮುಸ್ಲಿಂ ಜಮಾಅತ್ ವತಿಯಿಂದ ಈ ರೀತಿಯ ಸಮಾಜಮುಖಿ ಕಾರ್ಯ ನಡೆಯುತ್ತಿರುವುದು ಶ್ಲಾಘನೀಯ. ಜನಪರ ಕಾರ್ಯಕ್ರಮಗಳಿಗೆ ಗ್ರಾ.ಪಂ ಸಂಪೂರ್ಣ ಸಹಕಾರ ನೀಡಲಿದೆ ಎಂದರು. ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ ಅವರು ಮಾತನಾಡಿ ಗ್ರಾಮೀಣ ಭಾಗದಲ್ಲಿ ರಕ್ತದಾನ ಶಿಬಿರ ನಡೆಯುತ್ತಿರುವುದು ಸ್ವಾಗತಾರ್ಹ. ಇನ್ನು ಮುಂದೆಯೂ ಹೆಚ್ಚು ಹೆಚ್ಚು ಶಿಬಿರಗಳು ನಡೆಯಲಿ, ಜಮಾಅತ್ ಕಮಿಟಿಯಿಂದ ರೋಗಿಗಳಿಗೆ ಸಹಾಯ ಹಸ್ತ ಸಿಗಲಿ ಎಂದು ತಿಳಿಸಿದರು. ಜಮಾಅತ್ ಅಧ್ಯಕ್ಷ…
ಮಡಿಕೇರಿ NEWS DESK ಆ.27 : ನಾಗರಹೊಳೆ ಭಾಗದ ವೀರನಹೊಸಹಳ್ಳಿ ಪ್ರಾದೇಶಿಕ ಅರಣ್ಯದಲ್ಲಿ ಜಿಂಕೆ ಭೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪದಡಿ ಕಿರಂಗೂರು ಗೇಟ್ ಬಳಿ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಹನಗೋಡು ಹೋಬಳಿಯ ಭರತವಾಡಿ ಹಾಡಿಯ ರುದ್ರ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತನ ಬಳಿಯಿಂದ 2ಕೆ.ಜಿಯಷ್ಟು ಜಿಂಕೆ ಮಾಂಸ, ಜಿಂಕೆ ಚರ್ಮ, ಕೃತ್ಯಕ್ಕೆ ಬಳಸಿದ್ದ ಬೈಕ್ ಮತ್ತು ಒಂದು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ತಲೆಮರೆಸಿಕೊಂಡ ಆರೋಪಿಗಳನ್ನು ಕಪ್ಪನಕಟ್ಟೆ ಹಾಡಿಯ ರಾಮು ಹಾಗೂ ಅವ್ವು ಎಂದು ಗುರುತಿಸಲಾಗಿದೆ. ಜಿಂಕೆಯನ್ನು ಭೇಟೆಯಾಡಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಹುಣಸೂರು ವನ್ಯಜೀವಿ ವಿಭಾಗದ ಆರ್.ಎಫ್.ಓ.ಸುಬ್ರಮಣ್ಯ ಕೆ.ಇ, ಆನೆಚೌಕೂರು ವಲಯದ ಡಿಆರ್ಎಫ್ಓ ಶಿವಕುಮಾರ್, ಗಸ್ತು ಅರಣ್ಯ ಪಾಲಕರು ಹಾಗೂ ಸಿಬ್ಬಂದಿಗಳು ಹನಗೋಡಿಗೆ ಸಮೀಪದ ಕಿರಂಗೂರು ಗೇಟ್ ಬಳಿ ದಾಳಿ ನಡೆಸಿದರು. ತಲೆ ಮರೆಸಿಕೊಂಡ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಚುರುಕುಗೊಂಡಿದೆ.
ಬೆಳಗಾವಿ NEWS DESK ಆ.26 : ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ ಎಂದು ರಾಯಬಾಗ್ ತಾಲ್ಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಮುಖ್ಯಮಂತ್ರಿಗಳಿಗೆ ಆಶೀರ್ವಾದ ಮಾಡಿದರು. ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನನಿಲ್ದಾಣದಲ್ಲಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಬಳಿಕ ಅಕ್ಕಾತಾಯಿ ಸಿಎಂಗೆ ತುಂಬು ಹೃದಯದಿಂದ ಆಶೀರ್ವದಿಸಿದರು. *ಕೈ ಮೇಲಾಗ್ಲಿ-ದೇಶ ಆಳು ದೊರೆಯೇ* ನಾಡಿಗೆ ಅನ್ನ ಕೊಡೋ ದೊರೆ ನೀನು. ನಿಮ್ಮ ಕೈ ಇನ್ನೂ ಮೇಲಾಗ್ಲಿ. ನಾಡ ಆಳುವ ದೊರೆ ನೀನು ದೇಶ ಆಳ್ಬೇಕು. ಹಿಂಗಾ ಆಳ್ಕೊತಾ ಹೋಗ್ತಾ ಇರ್ಬೇಕು. ನಾಡಿಗೆ ಒಳ್ಳೇದಾಗೈತ್ರಿ ಎಂದರು. ಅಕ್ಕಾತಾಯಿ ಜೊತೆ ಬಂದಿದ್ದ ಮುತ್ತೈದೆಯರು ಒಟ್ಟಾಗಿ ಮುಖ್ಯಮಂತ್ರಿಗಳಿಗೆ, ನಾವು ಲಕ್ಷ್ಮೀದೇವಿಗೆ ಪೂಜೆ ಮಾಡೀವಿ. ಕಂಟಕ ನಾಶ ಆಗ್ಲಿ ಅಂತ ದೇವಿಗೆ ಕೈಮುಗಿದೀವಿ ಎಂದು ಹಾರೈಸಿದರು. *ನಿಮ್ಮ ಆಶೀರ್ವಾದ ಹೀಗೇ ಇರಲಿ* ಅಕ್ಕಾತಾಯಿ ಮತ್ತು ಮುತ್ತೈದೆಯರ ಆಶೀರ್ವಾದ ಸ್ವೀಕರಿಸಿದ ಮುಖ್ಯಮಂತ್ರಿಗಳು ನಿಮ್ಮ ಆಶೀರ್ವಾದ ಹೀಗೇ ಇರಲಿ. ನಮ್ಮ ಸರ್ಕಾರ ಇರುವವರೆಗೂ ಗೃಹಲಕ್ಷ್ಮಿ ಯೋಜನೆ…
ಮಡಿಕೇರಿ NEWS DESK ಆ.26 : ಸಂಭವನೀಯ ಪ್ರಾಕೃತಿಕ ವಿಕೋಪದ ಪಟ್ಟಿಯಲ್ಲಿರುವ ದೊಡ್ಡಪುಲಿಕೋಟು ಗ್ರಾಮದ ನದಿ ಪಾತ್ರದಲ್ಲಿ ರೆಸಾರ್ಟ್ ನಿರ್ಮಾಣದ ಪ್ರಯತ್ನಗಳು ನಡೆಯುತ್ತಿದ್ದು, ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡಬಾರದು ಎಂದು ದೊಡ್ಡಪುಲಿಕೋಟು ಗ್ರಾಮ ಹಿತ ರಕ್ಷಣಾ ಸಮಿತಿ ಜಿಲ್ಲಾಡಳಿತವನ್ನು ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಬಲ್ಲಮಾವಟಿ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಕರವಂಡ ಲವ ನಾಣಯ್ಯ ಮಾತನಾಡಿ, ದೊಡ್ಡಪುಲಿಕೋಟು ಮತ್ತು ಪೇರೂರು ಗ್ರಾಮದ ಸರಹದ್ದಿನಲ್ಲಿ, ಕಾವೇರಿಯ ಉಪನದಿ “ಕಪ್ಪೊಳೆ”ಯ ಸಮೀಪದಲ್ಲೆ ರೆಸಾರ್ಟ್ ನಿರ್ಮಾಣಕ್ಕೆ ಭರದಿಂದ ಕೆಲಸ ಕಾರ್ಯಗಳು ನಡೆಯುತ್ತಿದೆ. ಇದನ್ನು ಸಂಬಂಧಪಟ್ಟ ಇಲಾಖೆ ತಕ್ಷಣ ನಿಲ್ಲಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ನಮ್ಮ ಬೇಡಿಕೆಗೆ ಸೂಕ್ತ ಸ್ಪಂದನ ದೊರಕದಿದ್ದಲ್ಲಿ ಸೆ.20 ರ ಬಳಿಕ ಗ್ರಾಮಸ್ಥರ ಸಹಕಾರದೊಂದಿಗೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ರೆಸಾರ್ಟ್ ನಿರ್ಮಾಣಕ್ಕೆ ಬಲ್ಲಮಾವಟಿ ಗ್ರಾಮ ಪಂಚಾಯ್ತಿ ಆಕ್ಷೇಪಣಾ ರಹಿತ ಪತ್ರವನ್ನು ನೀಡಿಲ್ಲ. ಹೀಗಿದ್ದೂ ಕಾಮಗಾರಿ ನಡೆಯುತ್ತಿದ್ದು, ಸಮೀಪವೇ ಗ್ರಾಮ ವ್ಯಾಪ್ತಿಯ ಸುಮಾರು 250 ಕುಟುಂಬಗಳು, ಶ್ರೀ ಕೋಟೆ ಭಗವತಿ ದೇವಸ್ಥಾನ,…
ಮಡಿಕೇರಿ NEWS DESK ಆ.26 : ರಾಷ್ಟ್ರದ ಗಡಿಗಳನ್ನು ಕಾಯುವ ಯೋಧ ಮತ್ತು ಆತನ ಮಗಳ ನಡುವಿನ ಆತ್ಮೀಯ ಸಂಬಂಧಗಳ ಹೂರಣವನ್ನು ಹೊಂದಿದ ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್ ಬೆಳ್ಳಿ” ರಾಜ್ಯದ ವಿವಿಧೆಡೆಗಳಲ್ಲಿ ಸೆ.13 ರಂದು ಬಿಡುಗಡೆಗೊಳ್ಳಲಿದೆ ಎಂದು ಚಿತ್ರ ನಿರ್ಮಾಪಕ ಮಹೇಂದ್ರ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರ ಸೇವೆಯಲ್ಲಿ ನಿರತ ಕೊಡಗಿನ ಯೋಧ, ಮನೆಯಲ್ಲಿ ಅಪ್ಪನ ಬರುವಿಕೆಗಾಗಿ ಕಾಯುವ ಪುಟ್ಟ ಮಗಳ ನಿರೀಕ್ಷೆ, ಬಾಂಧವ್ಯದ ಅಂಶಗಳನ್ನು ಒಳಗೊಂಡಂತೆ ದಿ ಜರ್ನಿ ಆಫ್ ಬೆಳ್ಳಿಯನ್ನು ನಿರ್ಮಿಸಲಾಗಿದೆ. ಇದು ಜಿಲ್ಲೆಯ ಕುಶಾಲನಗರ, ಸಿದ್ದಾಪುರ, ಶನಿವಾರಸಂತೆ ಸೇರಿದಂತೆ ರಾಜ್ಯದ ಸುಮಾರು 35 ಚಿತ್ರ ಮಂದಿರಗಳಲ್ಲಿ ತೆರೆ ಕಾಣಲಿದೆಯೆಂದು ಮಾಹಿತಿಯನ್ನಿತ್ತರು. ಚಲನ ಚಿತ್ರ ನಿರ್ದೇಶಕಿ ಗೌರಿ ಶ್ರೀನಿವಾಸ್ ಮಾತನಾಡಿ, ಚಲನ ಚಿತ್ರದ ಯೋಧನ ಪಾತ್ರದಲ್ಲಿ ರಂಗಕರ್ಮಿ ಮಾಲತೇಶ್ ಅವರು ಮತ್ತು ಅವರ ಮಗಳಾಗಿ ಹುಬ್ಬಳ್ಳಿಯ ಸಂಗನಗೌಡ ಮತ್ತು ನಯನಾ ಪಾಟೀಲ ಅವರ ಪುತ್ರಿ ಹತ್ತರ ಪ್ರಾಯದ ಸಮನ್ವಿ ಎಸ್. ಪಾಟೀಲ್ ಮನೋಜ್ಞವಾಗಿ…
ಮಡಿಕೇರಿ NEWS DESK ಆ.26 : ಕೊಡಗು ಜಿಲ್ಲೆಯಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರವನ್ನು ಆರಂಭಿಸಬೇಕೆಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ. ಈ ಕುರಿತು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆದು ಪಾಸ್ ಪೋರ್ಟ್ ಸೇವಾ ಕೇಂದ್ರದ ಅಗತ್ಯತೆಯ ಬಗ್ಗೆ ವಿವರಿಸಿದ್ದಾರೆ. ಸೇವಾ ಕೇಂದ್ರವನ್ನು ಶೀಘ್ರ ಮಂಜೂರು ಮಾಡಬೇಕೆಂದು ಕೋರಿಕೊಂಡಿದ್ದಾರೆ.






