ಮಡಿಕೇರಿ ಆ.14 NEWS DESK : ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತದಿಂದ ವಿವಿಧ ಕಾರ್ಯಕ್ರಮಗಳ ಅಯೋಜನೆ ಮೂಲಕ ಮೂರು ದಿನಗಳ ಕಾಲ ಏರ್ಪಡಿಸಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ದೊರೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದರು. ಕಂದಾಯ, ಪಂಚಾಯತ್ ರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ನಗರಾಭಿವೃದ್ಧಿ, ಪೌರಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ವಿವಿಧ ಕಾರ್ಯಕ್ರಮಗಳು ಆರಂಭಗೊಂಡವು. ಹರ್ ಘರ್ ತಿರಂಗಾ ಅಭಿಯಾನ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸರ್ಕಾರದ ನಿರ್ದೇಶನದಂತೆ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಶಾಲಾ ಕಾಲೇಜುಗಳಲ್ಲಿ ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. ಹಾಗೆಯೇ ಕಾಲ್ನಾಡಿಗೆ ಜಾಥಾ ಕಾರ್ಯಕ್ರಮಗಳು ಜಿಲ್ಲೆಯ ವಿವಿಧ ಭಾಗಗಳಲ್ಲಿ ಜರುಗಲಿವೆ ಎಂದು ತಿಳಿಸಿದರು. ಹರ್ ಘರ್ ತಿರಂಗಾ…
ಲೇಖಕ: admin
ಮಡಿಕೇರಿ ಆ.14 NEWS DESK : ಮಡಿಕೇರಿ ಗ್ರಾಮಾಂತರ ಮಂಡಲದ ಪೆರಾಜೆ ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಬೈಕ್ ಜಾಥ ನಡೆಯಿತು. ಮಂಡಲ ಯುವಮೋರ್ಚಾ ಅಧ್ಯಕ್ಷ ಚೇತನ್ ಬಂಗೇರ ಅವರ ನಿರ್ದೇಶನದಂತೆ ಪೆರಾಜೆ ಶಕ್ತಿಕೇಂದ್ರ ಯುವಮೋರ್ಚಾದ ಅಧ್ಯಕ್ಷ ಪ್ರದೀಪ್ ಅವರ ಮುಂದಾಳತ್ವದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ 40 ಬೈಕ್ಗಳಲ್ಲಿ ಸುಮಾರು 4 ಕಿ.ಮೀ ಗಳವರೆಗೆ ಜಾಥಾ ನಡೆಸಿದರು. ಈ ಸಂದರ್ಭ ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗೇಶ್ ಕುಂದಲ್ಪಡಿ, ಯುವಮೋರ್ಚಾ ಮಂಡಲ ಪ್ರಧಾನಕಾರ್ಯದರ್ಶಿ ಪ್ರವೀಣ್ ಮಜಿಕೊಡಿ, ಶಕ್ತಿ ಕೇಂದ್ರ ಪ್ರಮುಖ್ ಶುಭಾಷ್, ಸಹ ಪ್ರಮುಖ್ ಉದಯ್ ಕುಂಬಲಚೇರಿ, ಗ್ರಾ.ಪಂ ಸದಸ್ಯರು, ಸಹಕಾರಿ ಸಂಘಗಳ ಚುನಾಯಿತ ಪ್ರತಿನಿಧಿಗಳು, ಪಕ್ಷದ ಪ್ರಮುಖರು, ಹಿರಿಯ ಕಿರಿಯ ಕಾರ್ಯಕರ್ತರು ಹಾಜರಿದ್ದರು.
ಕುಶಾಲನಗರ, ಆ.14 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಮತ್ತು ಸಂಘದ ಕುಶಾಲನಗರ ವಲಯದ ವತಿಯಿಂದ ಶಾಲೆಯ ಜೆ.ಸಿ.ಬೋಸ್ ಇಕೋ ಕ್ಲಬ್, ಎನ್.ಎಸ್.ಎಸ್.ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ ಹಾಗೂ ರೆಡ್ ರಿಬ್ಬನ್ ಕ್ಲಬ್ ಆಶ್ರಯದಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಏರ್ಪಡಿಸಿದ್ದ ಪರಿಸರ ಮಾಹಿತಿ ಕಾರ್ಯಕ್ರಮದ ಅಂಗವಾಗಿ ಶಾಲಾವರಣದಲ್ಲಿ ಅರಣ್ಯ ಸಸಿನೆಟ್ಟು ಪರಿಸರ ಸಂರಕ್ಷಣೆ ಕುರಿತು ಮಾಹಿತಿ ನೀಡಲಾಯಿತು. ಶಾಲಾವರಣದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ಡಿ.ಭಾಸ್ಕರ್ ನಾಯಕ್, ಮುಂದಿನ ಉತ್ತಮ ಭವಿಷ್ಯಕ್ಕಾಗಿ ನಾವು ಪರಿಸರ ಸಂರಕ್ಷಣೆಗೆ ಸಂಕಲ್ಪ ತೊಡಬೇಕು ಎಂದರು. ಅರಣ್ಯ ಗಿಡಗಳನ್ನು ನೆಡಲು ವಿದ್ಯಾರ್ಥಿಗಳು ಹಾಗೂ ಜನರನ್ನು ಪ್ರೋತ್ಸಾಹಿಸಲು ಸರ್ಕಾರವು ವಿವಿಧ ಹಂತಗಳಲ್ಲಿ ವಿವಿಧ ನೆಡುತೋಪು ಅಭಿಯಾನಗಳನ್ನು ಆಯೋಜಿಸುತ್ತಿದೆ. ಪ್ರತಿಯೊಬ್ಬರೂ ಪ್ರಕೃತಿ ಮಾತೆಯಾದ ತಮ್ಮ ತಾಯಿ ಹೆಸರಿನಲ್ಲಿ ಒಂದು ಗಿಡ ನೆಟ್ಟು ಪೋಷಿಸಿ…
ಮಡಿಕೇರಿ ಆ.14 NEWS DESK : “ಬಾಲಗೋಕುಲ ಮಡಿಕೇರಿ” ಇವರ ವತಿಯಿಂದ *ದಿನಾಂಕ: 25-08-2024* ರಂದು ಹದಿನಾಲ್ಕು ವರ್ಷದೊಳಗಿನ ಮಕ್ಕಳಿಗೆ “ಶ್ರೀ ಕೃಷ್ಣ ಜನ್ಮಾಷ್ಟಮಿ”ಯ ಪ್ರಯುಕ್ತ “ಶ್ರೀ ಕೃಷ್ಣ, ರುಕ್ಮಣಿ, ರಾಧೆ, ದೇವಕಿ, ಯಶೋದೆ ಹಾಗೂ ವಸುದೇವರ ಛದ್ಮವೇಷ” ಸಮಾಗಮ ನಡೆಯಲಿದೆ. ಈ “ಶ್ರೀ ಕೃಷ್ಣ ಜನ್ಮಾಷ್ಟಮಿ” ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಎಲ್ಲಾ ಛದ್ಮವೇಷದಾರಿಗಳಿಗೆ ಪ್ರಶಂಸನಾ ಪತ್ರವನ್ನು ನೀಡಲಾಗುವುದು, ಭಾಗವಹಿಸಲು ಇಚ್ಚಿಸುವವರು: ದಿನಾಂಕ: 20-08-2024 ರೊಳಗೆ ಈ ಕೆಳಗಿನ ಸಂಪರ್ಕ ಸಂಖ್ಯೆಗಳಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಕೊಳ್ಳಬೇಕಾಗಿ ಕೋರಿಕೆ. ಮೊಬೈಲ್ ಸಂಖ್ಯೆ: 9480170308, 9448541328 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಆ.14 NEWS DESK : ಮಡಿಕೇರಿ ನಗರದ ಶಾಂತಿನಿಕೇತನ ಯುವಕ ಸಂಘದ ಅಧ್ಯಕ್ಷರಾಗಿ ಸತತ 27 ನೇ ಬಾರಿಗೆ ಕೆ.ಹೆಚ್.ಚೇತನ್ ಪುನರ್ ಆಯ್ಕೆಯಾಗಿದ್ದಾರೆ. 46ನೇ ವರ್ಷದ ಗಣೇಶೋತ್ಸವವನ್ನು ಅದ್ದೂರಿಯಾಗಿ ನಡೆಸಲು ಸಂಘ ನಿರ್ಧರಿಸಿದೆ. ನಗರದಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಯೋಗೇಶ್ ಕುಮಾರ್, ಸಹಕಾರ್ಯದರ್ಶಿಯಾಗಿ ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿ ಗಳಾಗಿ ಸತೀಶ್ ರೈ, ಲೋಕೇಶ್ ರೈ, ಖಜಾಂಚಿಯಾಗಿ ಪ್ರಮೋದ್ ರಾಜ, ಸಹ ಖಜಾಂಚಿಯಾಗಿ ಪ್ರದೀಪ್ ಕುಟ್ಟಪ್ಪ ಹಾಗೂ ಇತರ ಉಪ ಸಮಿತಿಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. 46ನೇ ವರ್ಷದ ಗಣೇಶೋತ್ಸವವನ್ನು 15 ದಿನಗಳ ಕಾಲ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಜ್ರಂಭಣೆಯಿಂದ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಗಣೇಶೋತ್ಸವ ಪ್ರಯುಕ್ತ ಪ್ರತಿದಿನ ರಾತ್ರಿ 8 ಗಂಟೆಗೆ ಮಹಾಪೂಜೆಯ ನಂತರ ಭಜನೆ ಕಾರ್ಯಕ್ರಮ ಹಾಗೂ ಸೆ.15 ರಂದು ಸಾರ್ವಜನಿಕರಿಗಾಗಿ ಕ್ರೀಡಾಕೂಟವನ್ನು ಏರ್ಪಡಿಸಲಾಗಿದ್ದು, ಸಾರ್ವಜನಿಕರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನೂತನ ಪದಾಧಿಕಾರಿಗಳು ಮನವಿ ಮಾಡಿದರು. :: ಗಣೇಶೋತ್ಸವ ::…
ಮರಗೋಡು ಆ.13 NEWS DESK : ಐರಿಮಕ್ಕಡ ಕೂಟ ಹಾಗೂ ಐಮಂಡ ಪೊಮ್ಮಕ್ಕಡ ಕೂಟದಿಂದ ಇದೇ ಮೊದಲ ಬಾರಿಗೆ ಮರಗೋಡಿನಲ್ಲಿ ನಡೆದ ಕೆಸರು ಗದ್ದೆ ಕ್ರೀಡಾಕೂಟ ಸಂಭ್ರಮದಿಂದ ನಡೆಯಿತು. ಐಮಂಡ ಗಣೇಶ್ ಹಾಗೂ ರೂಪೇಶ್ ಕುಮಾರ್ ಅವರ ಗದ್ದೆಯಲ್ಲಿ ಆಯೋಜಿಸಲಾಗಿದ್ದ ಕ್ರೀಡಾಕೂಟದಲ್ಲಿ ಐಮಂಡ ಕುಟುಂಬಸ್ಥರು ಹಾಗೂ ಐರಿ ಮಕ್ಕಡ ಕೂಟದ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಬೆಳಗ್ಗೆ ಗದ್ದೆ ಪೂಜೆಯ ಬಳಿಕ ಸಾಂಪ್ರದಾಯಿಕ ನಾಟಿ ಮಾಡಿ ಕೆಸರು ಗದ್ದೆ ಕ್ರೀಡೆಗೆ ಚಾಲನೆ ನೀಡಲಾಯಿತು. ಬಳಿಕ ವಿವಿಧ ವಯೋಮಾನದ ಪುರುಷರು, ಮಹಿಳೆಯರು, ಹಿರಿಯರಿಗೆ ವೈವಿಧ್ಯಮಯ ಸ್ಪರ್ಧೆಗಳು ನಡೆಯಿತು. ಪುಟ್ಟ ಮಕ್ಕಳಿಗೆ 50 ಮೀಟರ್ ಓಟ, ಅವಿವಾಹಿತ ಯುವಕರು ಹಾಗೂ ಯುವತಿಯರಿಗೆ 100 ಮೀ ಓಟ, ವಿವಾಹಿತ ಪುರುಷರು ಹಾಗೂ ಮಹಿಳೆಯರಿಗೆ 100 ಮೀ ಓಟ, 50 ವರ್ಷ ಮೇಲ್ಪಟ್ಟ ಹಿರಿಯರಿಗೆ 100 ಮೀ. ಓಟದ ಸ್ಪರ್ಧೆ ನಡೆಯಿತು. ಅಲ್ಲದೆ ಮಹಿಳೆಯರ ತಂಡಗಳ ಮಧ್ಯೆ ಏರ್ಪಡಿಸಲಾಗಿದ್ದ ಹಗ್ಗ ಜಗ್ಗಾಟ ಹಾಗೂ ಹ್ಯಾಂಡ್ ಬಾಲ್ ಸ್ಪರ್ಧೆ ರೋಚಕವಾಗಿತ್ತು. ಇದೇ…
ಸಿದ್ದಾಪುರ ಆ.13 NEWS DESK : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ವತಿಯಿಂದ ಗುಯ್ಯ ಗ್ರಾಮದ ಆಗಸ್ತೇಶ್ವರ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಸುಮಾರು 20ಕ್ಕೂ ಹೆಚ್ಚು ಒಕ್ಕೂಟದ ಮಹಿಳೆಯರು ಸೇರಿ ದೇವಾಲಯದ ಆವರಣದಲ್ಲಿ ಬೆಳೆದಿದ್ದ ಕಾಡುಗಳನ್ನು ಕಡಿದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಶುಚಿಗೊಳಿದರು. ಈ ಸಂದರ್ಭ ಸೇವಾ ಪ್ರತಿನಿಧಿ ಉಷಾ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಸಿದ್ದಾಪುರ ಗುಯ್ಯ ಒಕ್ಕೂಟದ ವತಿಯಿಂದ ಪ್ರತಿ ವರ್ಷ ಸ್ವಚ್ಛತಾ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸುಂದರ ಪರಿಸರ ನಿರ್ಮಾಣ ಮಾಡಲು ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ದೇವಾಲಯದ ಪ್ರಮುಖರಾದ ರಾಮಚಂದ್ರ ಭಟ್ ಮಾತನಾಡಿ, ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮೂಲಕ ಪರಿಸರ ಕಾಳಜಿಯೊಂದಿಗೆ ಸ್ವಚ್ಛತಾ ಅಭಿಯಾನದ ಮೂಲಕ ಜಾಗೃತಿ ಮೂಡಿಸಿ ಧಾರ್ಮಿಕ ಕೇಂದ್ರಗಳ ಆವರಣವನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸುವುದರೊಂದಿಗೆ ಕಾಳಜಿ ಹೊಂದಿರುವ ಸೇವಾ ಪ್ರತಿನಿಧಿಗಳ ಕಾರ್ಯದ ಬಗ್ಗೆ ಮೆಚ್ಚಿಗೆ ವ್ಯಕ್ತಪಡಿಸಿದರು. ಒಕ್ಕೂಟದ ಅಧ್ಯಕ್ಷ ಉದಯ್, ಪ್ರಮುಖರಾದ ನವ್ಯಜ್ಯೋತಿ, ಕಾಮದೇನು, ಅಗಸ್ತ್ಯೇಶ್ವರ, ಸ್ವಪ್ನ,…
ಮಡಿಕೇರಿ ಆ.13 NEWS DESK : ಮಡಿಕೇರಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ದಿ. ದಂಬೆಕೋಡಿ.ಎ ಚಿಣ್ಣಪ್ಪ ಅವರ ಹೆಸರಿನಲ್ಲಿ ಅವರ ಪತ್ನಿ ದಂಬೆಕೋಡಿ ಲೀಲಾವತಿ ಚಿಣ್ಣಪ್ಪ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ರೂ 50,000 ವನ್ನು ದತ್ತಿನಿಧಿಯಾಗಿ ಸ್ಥಾಪಿಸಿರುತ್ತಾರೆ. ದತ್ತಿಯ ಆಶಯವು ಮಡಿಕೇರಿ ತಾಲೂಕಿನ ವಿದ್ಯಾರ್ಥಿಗಳಲ್ಲಿ ಹತ್ತನೇ ತರಗತಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಯನ್ನು ಗೌರವಿಸಿ, ನಗದು ಬಹುಮಾನ ಮತ್ತು ಪಾರಿತೋಷಕ ನೀಡಿ ಪ್ರೋತ್ಸಾಹಿಸುವುದು. ದತ್ತಿಯ ಮೊತ್ತದ ಚೆಕ್ ಅನ್ನು ಜಿಲ್ಲಾ ಕಸಾಪದ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಜಿಲ್ಲಾ ಗೌರವ ಕಾರ್ಯದರ್ಶಿ ರೇವತಿ ರಮೇಶ್ ಹಾಗೂ ಜಿಲ್ಲಾ ಸಮಿತಿ ಸದಸ್ಯ ಕೆ.ಟಿ.ಬೇಬಿ ಮ್ಯಾಥ್ಯು ದಂಬೆಕೋಡಿ ಲೀಲಾವತಿ ಚಿಣ್ಣಪ್ಪ ಅವರಿಂದ ಸ್ವೀಕರಿಸಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಪಿ ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಆ.13 NEWS DESK : 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಚೆಶೈರ್ ಹೋಮ್ಸ್ ಇಂಡಿಯಾ ಕೂರ್ಗ್ ವಿಶೇಷ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನ ನಡೆಯಿತು. ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು. ನಂತರ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಈ ಸಂದರ್ಭ ಶಾಲೆಯ ಅಧ್ಯಕ್ಷರಾದ ಗೀತಾ ಚಂಗಪ್ಪ, ಗೌರವ ಕಾರ್ಯದರ್ಶಿ ಆಶಾ ಸುಬ್ಬಯ್ಯ, ಮುಖ್ಯೋಪಾಧ್ಯಾಯ ಶಿವರಾಜ್, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಕಾರ್ಕಳ ಆ.13 NEWS DESK : ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ‘ ನಶಾಮುಕ್ತ ಭಾರತ ಅಭಿಯಾನ ‘ 5ನೇ ವರ್ಷದ ಆಚರಣೆಯ ಪ್ರಯುಕ್ತವಾಗಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಡ್ರಗ್ಸ್ ವಿರುದ್ಧ ಸಾಮೂಹಿಕ ಪ್ರತಿಜ್ಞಾವಿಧಿ ಕಾರ್ಯಕ್ರಮ ನಡೆಯಿತು. ಮಾದಕ ವ್ಯಸನವು ವ್ಯಕ್ತಿ, ಕುಟುಂಬ ಮತ್ತು ಸಮಾಜದ ಮೇಲೆ ಯಾವ ರೀತಿಯ ವಿನಾಶಕಾರಿ ಪರಿಣಾಮ ಬೀರಿದೆ ಎಂಬ ಅಂಶಗಳನ್ನು ತಿಳಿಸಿ, ಜಾಗೃತಿ ಮೂಡಿಸಲಾಯಿತು. ಈ ಸಂದರ್ಭ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವೃಂದದವರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಜರಿದ್ದರು. ಹಿಂದಿ ಭಾಷಾ ವಿಭಾಗ ಮುಖ್ಯಸ್ಥ ವಿನಾಯಕ ಜೋಗ್ ಪ್ರತಿಜ್ಞಾವಿಧಿ ಬೋಧಿಸಿದರು.






