ಮಡಿಕೇರಿ NEWS DESK ಆ.26 : ಪ್ರಾಕೃತಿಕ ವಿಕೋಪ ಸಂತ್ರಸ್ತರಿಗಾಗಿ ಭಾರತ್ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಪಕ್ಷದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾದ್ಯಂತ ಒಟ್ಟು 72,750 ರೂ.ಗಳನ್ನು ಸಂಗ್ರಹಿಸಿ ರಾಜ್ಯ ಸಮಿತಿಗೆ ಕಳುಹಿಸಲಾಗಿದೆ ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ರಮೇಶ್ ಹಾಗೂ ಸದಸ್ಯ ಎನ್.ಡಿ.ಕುಟ್ಟಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರೂರು ಗುಡ್ಡ ಕುಸಿತ, ನೆರೆಹಾವಳಿಯಿಂದ ಹಾನಿಗೀಡಾದ ಭಾಗದ ಸಂತ್ರಸ್ತರಿಗೆ ಮತ್ತು ಕೇರಳ ರಾಜ್ಯದ ವಯನಾಡಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ನೊಂದಿರುವವರಿಗೆ ತುರ್ತು ಸಹಾಯಕ್ಕಾಗಿ ಪಕ್ಷದ ಕೇಂದ್ರ ಸಮಿತಿಯ ಸೂಚನೆಯಂತೆ ಜಿಲ್ಲೆಯಲ್ಲಿ ಹಣ ಸಂಗ್ರಹಿಸಲಾಯಿತು. ವಿರಾಜಪೇಟೆಯಲ್ಲಿ ರೂ.32,162, ಸಿದ್ದಾಪುರದಲ್ಲಿ ರೂ.26,210 ಮತ್ತು ನೆಲ್ಲಿಹುದಿಕೇರಿಯಲ್ಲಿ ರೂ.14,380 ಸಂಗ್ರಹಿಸಲಾಗಿದೆ. ಸಾರ್ವಜನಿಕರು, ವ್ಯಾಪಾರಿಗಳು, ಪಕ್ಷದ ಸದಸ್ಯರು, ಹಿತೈಷಿಗಳು ಸಹಾಯ ಮಾಡಿದ್ದು, ಇವರುಗಳಿಗೆ ಪಕ್ಷದ ಜಿಲ್ಲಾ ಸಮಿತಿಯಿಂದ ಧನ್ಯವಾದಗಳನ್ನು ಸಲ್ಲಿಸುವುದಾಗಿ ತಿಳಿಸಿದರು.
ಲೇಖಕ: admin
ಮಡಿಕೇರಿ NEWS DESK ಆ.26 : ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಇಂದು ಮೈಸೂರು ಅಗ್ನಿಶಾಮಕ ದಳದ ಕೇಂದ್ರಕ್ಕೆ ಭೇಟಿ ನೀಡಿದರು. ಅಗ್ನಿಶಾಮಕ ದಳದ ತುರ್ತು ಪ್ರಕ್ರಿಯೆಗಳ ಸಿದ್ಧತೆಗಳನ್ನು ಪರಿಶೀಲಿಸಿದ ಅವರು, ಪಾರಂಪರಿಕ ಅಗ್ನಿಶಾಮಕ ಕಟ್ಟಡದ ರಕ್ಷಣೆ ಹಾಗೂ ಅದನ್ನು ಪುನಃಸ್ಥಾಪಿಸುವ ಯೋಜನೆಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಎಲ್ಲರಿಗೂ ಸುರಕ್ಷಿತ ಭವಿಷ್ಯವನ್ನು ಖಚಿತಪಡಿಸಿಕೊಳ್ಳಲು ಒಟ್ಟಾಗಿ ಶ್ರಮಿಸುವುದು ನಮ್ಮ ಗುರಿ ಎಂದು ಯದುವೀರ್ ತಿಳಿಸಿದರು.
ವಿರಾಜಪೇಟೆ ಆ.26 NEWS DESK : ರಾಜ್ಯಾದ್ಯಂತ ಪ್ರಖ್ಯಾತವಾಗಿರುವ ವಿರಾಜಪೇಟೆಯ ಐತಿಹಾಸಿಕ ಗೌರಿ- ಗಣೇಶ ಉತ್ಸವ ಕಾನೂನು ಕಟ್ಟಳೆಗಳನ್ನು ಪಾಲನೆ ಮಾಡುವುದರೊಂದಿಗೆ ವಿಜೃಂಭಣೆಯಿಂದ, ಅಹಿತಕರ ಘಟನೆಗಳಿಗೆ ಅನುವು ಮಾಡಿಕೊಡದೆ ಸಾಮರಸ್ಯದ ಹಬ್ಬವಾಗಿ ಆಚರಣೆಯಾಗಲಿ ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ನಗರದ ಪುರಸಭಾಂಗಣದಲ್ಲಿ ಆಯೋಜಿತ ಸಭೆಯಲ್ಲಿ ಮಾತನಾಡಿದ ಅವರು, ಉತ್ಸವದ ಶೋಭಾಯಾತ್ರೆಯಲ್ಲಿ ಮಂಟಪಗಳು ಚಲಿಸುವ ಮುಕ್ಯ ರಸ್ತೆ ಒಳಗೊಂಡಂತೆ ಗುಂಡಿ ಬಿದ್ದ ನಗರದ ರಸ್ತೆಗಳನ್ನು ದುರಸ್ತಿ ಪಡಿಸಿವುದು ಸೇರಿದಂತೆ ಪಾದಚಾರಿ ಹಾದಿಯ ಕಾಮಗಾರಿಗಳಿಗೆ ಮಲೆಹಾನಿ ಪರಿಹಾರ ಹಣವನ್ನು ಬಳಕೆ ಮಾಡುವಂತೆ ತಹಶೀಲ್ದಾರ್ ಗೆ ಸ್ಪಷ್ಟ ಸೂಚನೆಯನ್ನು ನೀಡಿದರು. ಉತ್ಸವದ ಸಂದರ್ಭ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೆ ಶಾಂತಿ ಸುವ್ಯವಸ್ಥೆಯೊಂದಿಗೆ ಹಬ್ಬ ಆಚರಿಸಲು ಸಹಕರಿಸಯವಂತೆ ಮನವಿ ಮಾಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಗಲಭೆಗೆ ಕಾರಣರಾದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಪಷ್ಟ ನಿರ್ದೇಶನ ನೀಡಿದರು. ಪುರಸಭಾ ಮುಖ್ಯಾಧಿಕಾರಿ ಚಂದ್ರ ಕುಮಾರ್ ಮಾತನಾಡಿ, ಉತ್ಸವದ ಸಂದರ್ಭ ಕರ್ನಾಟಕ ಮಾಲಿನ್ಯ…
ವಿರಾಜಪೇಟೆ ಆ.26 NEWS DESK : ನಾಟ್ಯ ಮಯೂರಿ ನೃತ್ಯ ಶಾಲೆ ಹಾಗೂ ಬೆಂಗಳೂರಿನ ಡಿವೈನ್ ಟೆಂಪಲ್ ಫೌಂಡೇಶನ್ ಸಹಯೋಗದಲ್ಲಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಪಿ.ಎನ್ ಚೈತ್ರ ಅವರಿಗೆ ನೃತ್ಯ ಸಾಧನೆಗಾಗಿ ರಾಷ್ಟ್ರಮಟ್ಟದ ಮಿನುಗುತಾರೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ವಿರಾಜಪೇಟೆಯ ವಿನಾಯಕ ಶಾಲೆಯಲ್ಲಿ ಹಾಗೂ ಹೆಗ್ಗಳ ಗ್ರಾಮದಲ್ಲಿ ನೃತ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ.ಎನ್ ಚೈತ ಹೆಗ್ಗಳ ಗ್ರಾಮದ ಪಿ.ಎಸ್.ನಾಣಿ ಹಾಗೂ ಪಿ.ಎನ್. ಪ್ರೇಮ ದಂಪತಿಗಳ ಪುತ್ರಿ.
ಮಡಿಕೇರಿ ಆ.26 NEWS DESK : ಜೀವನದಲ್ಲಿ ನಿಂತ ನೀರಾಗದೆ ಹರಿವ ನೀರಿನಂತೆ ಬದುಕನ್ನು ಮುನ್ನಡೆಸಬೇಕು. ಉತ್ತಮ ಬದುಕು ರೂಪಿಸಿಕೊಳ್ಳಲು ಮುಂದಾಗಬೇಕು. ಆ ನಿಟ್ಟಿನಲ್ಲಿ ಮಹಾಭಾರತದಲ್ಲಿ ಶ್ರೀಕೃಷ್ಣನ ಸಂದೇಶಗಳು ಧನಾತ್ಮಕ ಚಿಂತನೆಯನ್ನು ಒಳಗೊಂಡಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ‘ಶ್ರೀಕೃಷ್ಣ ಜನ್ಮಾಷ್ಠಮಿ’ ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು. ಶ್ರೀಕೃಷ್ಣನ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಹೆಚ್ಚಿನ ಗೌರವ ಮತ್ತು ಭಕ್ತಿ ಇದೆ. ಶ್ರೀಕೃಷ್ಷನ ವೇಷದಲ್ಲಿ ಮಕ್ಕಳನ್ನು ಕಾಣುತ್ತೇವೆ. ಜೊತೆಗೆ ಶ್ರೀಕೃಷ್ಣನನ್ನು ಮಹಾಭಾರತದಲ್ಲಿ ಸಾರಥಿಯಾಗಿ ನೋಡುತ್ತೇವೆ ಎಂದು ವರ್ಣಿಸಿದರು. ಮಹಾಭಾರತದಲ್ಲಿ ಶ್ರೀಕೃಷ್ಣನ ಬಗ್ಗೆ ಒಳ್ಳೆಯ ಸಂದೇಶ ತಿಳಿಯುತ್ತೇವೆ. ಯಾವುದೇ ಫಲಾಪೇಕ್ಷೆ ಇಲ್ಲದೆ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿ ಬದುಕನ್ನು ಉತ್ತಮ ಪಡಿಸಿಕೊಳ್ಳಬೇಕು ಎಂಬ ಸಂದೇಶವನ್ನು ಶ್ರೀಕೃಷ್ಣ ಸಾರಿದ್ದಾರೆ ಎಂದರು. ಶ್ರೀ ಕೃಷ್ಣ ಒಂದು ರೀತಿ ವಿಶಿಷ್ಟ ಚೇತನರಾಗಿದ್ದಾರೆ. ಅರಾಜಕತೆ, ಅಧರ್ಮ ಸಹಿಸುತ್ತಿರಲಿಲ್ಲ ಎಂದು ಅವರು ಹೇಳಿದರು.…
ಮಡಿಕೇರಿ ಆ.26 NEWS DESK : ಭಾಗಮಂಡಲದ ವಿ.ಎಸ್.ಎಸ್.ಎನ್ ಸಭಾಂಗಣದಲ್ಲಿ ಆರಂಭವಾದ ಜಾನ್ ಡಾನ್ಸ್ ಗ್ಯಾಲರಿ ನೃತ್ಯ ಸಂಸ್ಥೆಯನ್ನು ಭಾಗಮಂಡಲ ಗ್ರಾ.ಪಂ ಅಧ್ಯಕ್ಷ ಕಾಳನ ರವಿ ಉದ್ಘಾಟಿಸಿ, ಶುಭಹಾರೈಸಿದರು. ಜಾನ್ ಡಾನ್ಸ್ ಗ್ಯಾಲರಿಯ ನಿರ್ದೇಶಕ ನಾಗರಾಜ್ ಸ್ವಾಗತಿಸಿ, ನೃತ್ಯ ಹಾಗೂ ಕರಾಟೆಯ ಮಹತ್ವವವನ್ನು ವಿವರಿಸಿದರು. ಬದುಕಿಗೆ ಉತ್ತಮ ಸಂಸ್ಕಾರ ನೀಡಿ ಸಮಾಜದಲ್ಲಿ ಗೌರವವನ್ನು ತಂದುಕೊಡಬಲ್ಲ ಕಲೆಗಳು ನಮ್ಮ ಬದುಕಿನಲ್ಲಿ ಬೆರೆತಾಗ ಬದುಕಿಗೆ ಮಾನ್ಯತೆ ಬರುತ್ತದೆ. ಈ ನಿಟ್ಟಿನಲ್ಲಿ ನೃತ್ಯ ಹಾಗೂ ಕರಾಟೆಯು ಒಂದಾಗಿದ್ದು, ಇದು ಜಡತ್ವದಿಂದ ತುಂಬಿದ ವ್ಯಕ್ತಿಯ ಬದುಕಿನಲ್ಲಿ ನವಚೈತನ್ಯವನ್ನು ನೀಡಿ ಮನಸ್ಸನ್ನು ಮುದಗೊಳಿಸಿಸುತ್ತದೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಲು ಸಹಕಾರಿಯಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ವಿ.ಎಸ್.ಎಸ್.ಎನ್ ಅಧ್ಯಕ್ಷ ಹೊಸೂರು ಸತೀಶ್ ಕುಮಾರ್, ಕಾವೇರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ದಾಮೋದರ್ ನಾಯ್ಕ, ರಾಜರಾಜೇಶ್ವರಿ ಶಾಲೆಯ ಮುಖ್ಯ ಅಧ್ಯಾಪಕ ಕವನ್, ಕರಾಟೆ ಮಾಸ್ಟರ್ ಕೆ.ಜೆ.ಇಮ್ಮಾನುವಲ್, ನೃತ್ಯ ಸಂಯೋಜಕರಾದ ಪೃಥ್ವಿ ನಾಯ್ಕ್, ಗಾಡ್ ವಿನ್ ದಿನಕರ್, ಸಹಾಯಕ ನೃತ್ಯ ಸಂಯೋಜಕರಾದ ಬೃಂದಾ…
ಮಡಿಕೇರಿ ಆ.26 NEWS DESK : ವಿಶ್ವ ಹಿಂದು ಪರಿಷತ್ ಮಡಿಕೇರಿ ಗ್ರಾಮಾಂತರ ಘಟಕದ ವತಿಯಿಂದ ಮೂರ್ನಾಡಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. 6 ವರ್ಷದೊಳಗಿನ 67 ಪುಟಾಣಿಗಳು ಬಾಲಕೃಷ್ಣರಾಗಿ ಮಿಂಚಿದರು. ಮೂರ್ನಾಡಿನ ಗೌಡ ಸಮಾಜದಲ್ಲಿ ನಡೆದ ಶ್ರೀಕೃಷ್ಣ ಜನ್ಮಾಷ್ಟಮಿಯ ಛದ್ಮವೇಷ ಸ್ಪರ್ಧೆಯಲ್ಲಿ ಪುಟಾಣಿಗಳು ಅತಿ ಉತ್ಸಾಹದಿಂದ ಪಾಲ್ಗೊಂಡರು. ಮಕ್ಕಳು ಶ್ರೀಕೃಷ್ಣನ ವೇಷಧಾರಿಗಳಾಗಿ ಮಿಂಚಲು ಪೋಷಕರು ಸಹಕರಿಸಿದರು. ಬಾಲಕೃಷ್ಣರ ಕಲರವ ಕಂಡು ಪ್ರೇಕ್ಷಕರು ಚಪ್ಪಾಳೆಯ ಸುರಿಮಳೆಗೈದರು. ::: ಛದ್ಮವೇಷ ವಿಜೇತರು :::ಎರಡೂವರೆಯಿಂದ ಮೂರೂವರೆ ವರ್ಷದೊಳಗಿನ ಮಕ್ಕಳ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಅವಿಶ್ ಬಿದ್ದಪ್ಪ, ದ್ವಿತೀಯ ಅನ್ವಿಕಾ ಕಾರ್ಯಪ್ಪ, ತೃತೀಯ ಸ್ಥಾನವನ್ನು ಚಿನ್ವಿತಾ ನಂದೀಶ್ ಗಳಿಸಿದರು.ಮೂರೂವರೆಯಿಂದ ನಾಲ್ಕೂವರೆ ವರ್ಷದೊಳಗಿನ ಮಕ್ಕಳ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಸಾನ್ವಿ, ದ್ವಿತೀಯ ಧನ್ವಿಕ್ ಪೂವಯ್ಯ, ತೃತೀಯ ಧ್ವನಿ, ನಾಲ್ಕೂವರೆಯಿಂದ ಆರು ವರ್ಷದೊಳಗಿನ ಮಕ್ಕಳ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮನಸ್ವಿ, ದ್ವಿತೀಯ ನೂತನ್ ಬಿ.ವೈ ಹಾಗೂ ತೃತೀಯ ಸ್ಥಾನ ದಿಯಾ ರೈ ಪಡೆದುಕೊಂಡರು. ಸ್ಪರ್ಧೆಯ ನಂತರ ನಡೆದ ಸಭಾ…
ಸೋಮವಾರಪೇಟೆ ಆ.26 NEWS DESK : ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸೋಮವಾರಪೇಟೆಯ ಕ್ರೀಡಾಪಟು ತರುಣ್ ಮುರಳೀಧರ್ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಆಯ್ಕೆಯಾಗಿದ್ದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕರ್ನಾಟಕ ವಿದ್ಯಾಭಾರತಿ ಸಂಸ್ಥೆಯು ಬೆಂಗಳೂರಿನ ಜೈಗೋಪಾಲ್ ಗರೋಡಿಯ ರಾಷ್ಟೋತ್ಥಾನ ವಿದ್ಯಾಕೇಂದ್ರದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಫೈನಲ್ನಲ್ಲಿ ಬೆಂಗಳೂರು ಜಿಲ್ಲಾ ತಂಡವನ್ನು ಪರಾಭವಗೊಳಿಸಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಕೊಡಗಿನ ಸೋಮವಾರಪೇಟೆಯ ವಿದ್ಯಾರ್ಥಿ ತರುಣ್ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಸೆ.27 ರಂದು ದೆಹಲಿಯಲ್ಲಿ ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ತಂಡದಲ್ಲಿ ಮಂಗಳೂರಿನ ಶಕ್ತಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ತರುಣ್ ಮುರಳೀಧರ್, ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳಾದ ಯಶಸ್, ಯಶಸ್ವಿನ್ ಗೌಡ, ಅಕ್ಷಯ್ ನಾಯಕ್, ಧನ್ವಿತ್ ರೈ ಅವರನ್ನೊಳಗೊಂಡ ತಂಡದಲ್ಲಿ ಪಾಲ್ಗೊಂಡಿದ್ದರು. ಶಕ್ತಿ ಕಾಲೇಜಿನ ಕೋಚ್ ಮನೋಜ್ ಹಾಗೂ ವಿವೇಕಾನಂದ…
ಸೋಮವಾರಪೇಟೆ ಆ.26 NEWS DESK : ಸೋಮವಾರಪೇಟೆ ತಾಲ್ಲೂಕು ಮಳೆಯಿಂದ ಕಾಫಿ, ಕಾಳುಮೆಣಸು ಫಸಲು ಹಾನಿಯಾಗಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಸೋಮವಾರಪೇಟೆ ತಾಲ್ಲೂಕು ಕಾಫಿ ಬೆಳೆಗಾರರ ಸಂಘ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಬಿ.ಎಂ.ಮೋಹನ್ ಬೋಪಣ್ಣ ಮಾತನಾಡಿ, 2023-24ನೇ ಸಾಲಿನಲ್ಲಿ ಕಾಫಿ ಮತ್ತು ಕಾಳುಮೆಣಸು ಶೇ.70 ರಿಂದ 80ರಷ್ಟು ಫಸಲು ಹಾನಿಯಾಗಿದೆ. ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ವತಿಯಿಂದ ಹೆಕ್ಟೇರ್ಗೆ ಕನಿಷ್ಠ 1ಲಕ್ಷ ರೂ.ಗಳ ಬೆಳೆಹಾನಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. 2022-23ನೇ ಸಾಲಿನಲ್ಲಿ ವಾಡಿಕೆ ಹಿಂಗಾರು ಮಳೆ ಕಡಿಮೆಯಾದ ಹಿನ್ನೆಲೆ ಬಿಸಿಲಿನ ತಾಪಕ್ಕೆ ಅರೇಬಿಕಾ ಕಾಫಿ ಗಿಡಗಳು ಬಿಳಿಕಾಂಡಕೊರಕ ಕೀಟಬಾಧೆಯಿಂದ ನಾಶವಾದವು. ಮಾರ್ಚ್, ಏಪ್ರಿಲ್ನಲ್ಲಿ ಹೂಮಳೆ ಬರಲಿಲ್ಲ. ಕಡಿಮೆ ಪ್ರಮಾಣದಲ್ಲಿ ಮಳೆಬಿದ್ದು ಬಿಸಿಲಿನ ತಾಪಕ್ಕೆ ಹೂ ಸುಟ್ಟುಹೋಗಿ ನಷ್ಟವಾಯಿತು. ಜೂನ್, ಜುಲೈ ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇ.70ರಷ್ಟು ಹೆಚ್ಚಿನ ಮಳೆಯಾಗಿ ಕಾಫಿ, ಕಾಳುಮೆಣಸು ಫಸಲು ಶೇ.70 ರಷ್ಟು ಹಾನಿಯಾಗಿದೆ. ಕಾಳುಮೆಣಸು ಬಳ್ಳಿಗಳು ಸೊರಗು ರೋಗಕ್ಕೆ ತುತ್ತಾಗಿ ಬಳ್ಳಿಗಳು ನಾಶವಾಗಿವೆ. ಅರೇಬಿಕಾ ಕಾಫಿ…
ಮಡಿಕೇರಿ ಆ.26 NEWS DESK : ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಆ.29 ರಂದು ಮೂರ್ನಾಡಿನಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗುರುವಾರ ಬೆಳಿಗ್ಗೆ 10.30 ಗಂಟೆಗೆ ಮೂರ್ನಾಡು ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯ ಮಂಡಿಸಲಾಗುವುದು. ಆದಿಮಸಂಜಾತ ಕೊಡವರ ಭೂಮಿಯ ಹಕ್ಕನ್ನು ರಕ್ಷಿಸಲು ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಹೋರಾಟ ಅನಿವಾರ್ಯವಾಗಿದೆ. “ಕೊಡವ ಲ್ಯಾಂಡ್” ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್ಟಿ ಟ್ಯಾಗ್ ನೀಡುವುದು ಅಗತ್ಯವಾಗಿದೆ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಮತ್ತು ಜಿಲ್ಲೆಯಾದ್ಯಂತ ಶಾಂತಿಯುತ ಬೃಹತ್ ಮಾನವ ಸರಪಳಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಕೊಡವ ಲ್ಯಾಂಡ್ ಗೆ ಮಾರಕವಾಗಿರುವ ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ವಿಲ್ಲಾ, ಟೌನ್ ಶಿಪ್,…






