ಲೇಖಕ: admin

ಮಡಿಕೇರಿ ಆ.13 NEWS DESK : ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರದ ಸಚಿವಾಲಯದಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಕಳುಹಿಸಿಕೊಟ್ಟ ರಾಷ್ಟ್ರ ಧ್ವಜವನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಗೌರವಪೂರ್ವಕವಾಗಿ ಸ್ವೀಕರಿಸಿದರು.

Read More

ಮಡಿಕೇರಿ ಆ.13 NEWS DESK : ಕರ್ನಾಟಕ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕೊಡಗು ಜಿಲ್ಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ಜಿಲ್ಲೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಮಡಿಕೇರಿಯ ಭೋದಕ ಆಸ್ಪತ್ರೆಯಲ್ಲಿ “ಅಂತರಾಷ್ಟೀಯ ಯುವ ದಿನಾಚರಣೆ-2024 ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಎಚ್.ಐ.ವಿ/ಏಡ್ಸ್ ಹಾಗೂ ಲೈಂಗಿಕ ಸಂಪರ್ಕದ ಸೋಂಕಿನ ಕುರಿತು ಜಾಗೃತಿ ಮತ್ತು ತಡೆಗಟ್ಟುವ ಸಂಬಂಧ ರಾಷ್ಟ್ರದಾದ್ಯಂತ ಹಮ್ಮಿಕೊಂಡಿರುವ “Intensified IEC Campaign” ನ್ನು ಉದ್ಘಾಟನೆ ಮಾಡಲಾಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈಧ್ಯಕೀಯ ಅಧೀಕ್ಷಕ ಡಾ.ಸೋಮಶೇಖರ್ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಎಚ್.ಐ.ವಿ/ ಏಡ್ಸ್ ತಡೆಗಟ್ಟುವಲ್ಲಿ ಯುವಜನತೆಯ ಪಾತ್ರ ಅತೀ ಮುಖ್ಯ. ಆದ್ದರಿಂದ ತಮ್ಮನ್ನು ತಾವು ಎಚ್.ಐ.ವಿ ಬರದಂತೆ ತಡೆಗಟ್ಟಬೇಕು. ಮತ್ತು ಎಚ್.ಐ.ವಿ ಕುರಿತು ಅರಿವು ಮೂಡಿಸಬೇಕು ಎಂದರು. ಜಿಲ್ಲಾ ಆಸ್ಪತ್ರೆಯ…

Read More

ಕುಶಾಲನಗರ ಆ.13 NEWS DESK : ಸದೃಢ ರಾಷ್ಟ್ರವನ್ನಾಗಿ ನಿರ್ಮಿಸುವಲ್ಲಿ ಯುವ ಶಕ್ತಿಯ ಪಾತ್ರ ಪ್ರಮುಖವಾಗಿದೆ. ಇಂತಹ ಯುವ ಶಕ್ತಿಯನ್ನು ಮಾದಕ ವ್ಯಸನದಿಂದ ಮುಕ್ತರಾಗಿರುವಂತೆ, ಅವರನ್ನು ರಕ್ಷಿಸಿಕೊಳ್ಳುವ ಹೊಣೆಗಾರಿಕೆ ಪ್ರತಿಯೊಬ್ಬ ಭಾರತೀಯ ನಾಗರಿಕನ ಮೇಲಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಸೀನಪ್ಪ ಅಭಿಪ್ರಾಯಿಸಿದರು. ಚಿಕ್ಕ ಅಳುವಾರದ ಜ್ಞಾನಕಾವೇರಿ ಆವರಣದ ಹಾರಂಗಿ ಸಭಾಂಗಣದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತ ಸರ್ಕಾರ, 78ನೇ ಸ್ವಾತಂತ್ರ‍್ಯ ದಿನಾಚರಣೆ – 2024ರ ಅಂಗವಾಗಿ ನಶಾ ಮುಕ್ತ ಭಾರತ ಅಭಿಯಾನ -2024 ರ ಪ್ರಯುಕ್ತ  ಕೊಡಗು ವಿಶ್ವವಿದ್ಯಾಲಯದಿಂದ ಆಯೋಜಿಸಲಾಗಿದ್ದ “ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳು” ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ನಮ್ಮ ದೇಶದ ಯುವ ಜನತೆಯನ್ನು ಗುರಿಯಾಗಿಸಿಕೊಂಡು ಹೊರ ರಾಷ್ಟ್ರಗಳಿಂದ ಬರುವಂತಹ ಮಾದಕ ವಸ್ತುಗಳನ್ನು ತಡೆಗಟ್ಟುವ ಹೊಣೆಗಾರಿಕೆ ನಮ್ಮದಾಗಿದೆ. ದೇಶದ ಅತ್ಯಮೂಲ್ಯ ಸಂಪತ್ತು ನಮ್ಮ ಯುವ ಶಕ್ತಿಯು ಹಾದಿ ತಪ್ಪದಂತೆ ಕಾಪಾಡಿಕೊಳ್ಳುಬೇಕು. ಕುಟುಂಬ ಮತ್ತು ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮವನ್ನುಂಟು ಮಾಡುವ ಇಂತಹ ಸಾಮಾಜಿಕ…

Read More

ಮಡಿಕೇರಿ ಆ.13 NEWS DESK : ವಿರಾಜಪೇಟೆ ತಾಲೂಕಿನ, ಬೊಳ್ಳುಮಾಡು ಗ್ರಾಮದ ಮಾತಂಡ ಶಕು ಅಕ್ಕಮ್ಮ ಹಾಗೂ ಮನು ಇವರ ಗದ್ದೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ “ಬೇಲ್ ನಮ್ಮೆ” (ಪೈಪೋಟಿ) ಕಾರ್ಯಕ್ರಮ ನಡೆಯಲಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು,  ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ, ರಾಜ್ಯ ಕೃಷಿ ಸಚಿವರಾದ ಚೆಲುವರಾಯಸ್ವಾಮಿ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕೃಷಿ ನಿರ್ದೇಶಕರಾದ ಡಾ.ಸೋಮಶೇಖರ್, ವಿರಾಜಪೇಟೆ ತಹಶೀಲ್ದಾರ್ ಎಚ್.ಎನ್.ರಾಮಚಂದ್ರ, ಕಾಕೋಟು ಪರಂಬು ಗ್ರಾ.ಪಂ.ಅಧ್ಯಕ್ಷರಾದ ಬಟ್ಟಕಾಳಂಡ ಕಾಮುಣಿ ಸುರೇಶ್, ಬೊಳ್ಳುಮಾಡು ಮಹಿಳಾ ಕೃಷಿಕರಾದ ಮಾತಂಡ ಶಕುಅಕ್ಕಮ್ಮ ಇತರರು ಪಾಲ್ಗೊಳ್ಳಲಿದ್ದಾರೆ. ಕೊಡಗು ವಿಜ್ಞಾನ ವೇದಿಕೆಯಧ್ಯಕ್ಷರಾದ ನಿ.ಡೀನ್ ಡಾ.ಚೆಪ್ಪುಡಿರ ಜಿ.ಕುಶಾಲಪ್ಪನವರು “ಬೇಲ್‍ಪಣಿ: ಕಷ್ಟ-ಸುಖ-ಪರಿಹಾರ” ಎಂಬ ವಿಷಯದ ಬಗ್ಗೆ ವಿಚಾರ ಮಂಡನೆಯನ್ನು ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ (ನಾಟಿ…

Read More

ಮಡಿಕೇರಿ ಆ.13 NEWS DESK : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಬೈಕ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಆಗಸ್ಟ್ 21 ರಿಂದ ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ಎಲ್ಲಾ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‍ನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆಯ ದಿನವಾಗಿದೆ. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ…

Read More

ಮಡಿಕೇರಿ ಆ.13 NEWS DESK : ಒಲಂಪಿಕ್ಸ್ ಕ್ರೀಡೆಯು ಕ್ರಿಸ್ತ ಪೂರ್ವ 776ರಲ್ಲಿ ಗ್ರೀಕ್ ನ ಒಲಂಪಿಯಾದಲ್ಲಿ ಪ್ರಾರಂಭವಾಯಿತು. ಆದ್ದರಿಂದ ಒಲಂಪಿಕ್ ಗೇಮ್ಸ್ ಎಂಬ ಹೆಸರನ್ನು ಕೂಡ ಪಡೆದುಕೊಂಡಿತ್ತು. ಮೊದಲ ಆಧುನಿಕ ಒಲಂಪಿಕ್ಸ್ ಕ್ರೀಡೆಯು 1896ರಲ್ಲಿ ಗ್ರೀಕ್ ನ ಅಥೆನ್ಸ್ ನಲ್ಲಿ ಪ್ರಾರಂಭವಾಯಿತು. ಒಲಂಪಿಕ್ಸ್ ವಿಶ್ವದಲ್ಲೇ ಶ್ರೇಷ್ಠವಾದ ಕ್ರೀಡಾಕೂಟ. ಇದು 4 ವರ್ಷಗಳಿಗೊಮ್ಮೆ ನಡೆಯುತ್ತದೆ. ಒಲಂಪಿಕ್ಸ್ ಲಾಂಛನದಲ್ಲಿರುವ ಐದು ಉಂಗುರಗಳು ಇದು ಖಂಡಗಳಾದ ಆಸ್ಟ್ರೇಲಿಯ, ಏಷ್ಯಾ, ಆಫ್ರಿಕಾ, ಯುರೋಪ್ ಹಾಗೂ ಅಮೇರಿಕಾವನ್ನು ಪ್ರತಿನಿಧಿಸುತ್ತದೆ. ಈ ಐದು ಉಂಗುರದ ಬಣ್ಣಗಳು ಐದು ದೇಶದ ಧ್ವಜದಲ್ಲಿ ಕನಿಷ್ಠ ಒಂದು ಬಣ್ಣವನ್ನು ಪ್ರತಿನಿಧಿಸುತ್ತದೆ. ಕೊಡಗಿನಿಂದ 11 ಒಲಂಪಿಕ್ಸ್ ಹಾಕಿ ಆಟಗಾರರು, ಇತರ ಕ್ರೀಡೆಯಿಂದ 7 ಒಲಂಪಿಕ್ಸ್ ಕ್ರೀಡಾಪಟುಗಳು ಹಾಗೂ 5 ಒಲಂಪಿಕ್ಸ್ ತರಬೇತುದಾರರನ್ನು ಕೊಟ್ಟ ಪುಟ್ಟ ಜಿಲ್ಲೆ ಕೊಡಗು. ಹಾಕಿ ಆಟಗಾರರು ಬಿಳಿಮಗ್ಗ ಪಿ ಗೋವಿಂದ : ಮೂಲತಃ ಸೋಮವಾರಪೇಟೆ, 1972 ಮ್ಯುನಿಚ್ ಒಲಂಪಿಕ್ಸ್ ನ ಕಂಚಿನ ಪದಕ ವಿಜೇತ, 1976 ಮಾಂಟ್ರಿಲ್ ಒಲಂಪಿಕ್ಸ್ ನಲ್ಲಿ…

Read More

ಕೂಡಿಗೆ NEWS DESK   ಆ.12 : ತೊರೆನೂರು‌ ಗ್ರಾ.ಪಂ ವ್ಯಾಪ್ತಿಯ ಚಿಕ್ಕ ಅಳುವಾರ ಹಾಲು ಉತ್ಪಾದಕರ ಸಹಕಾರ ಸಂಘದ 2024-29ನೇ ಸಾಲಿಗೆ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷರಾಗಿ ಎ.ಎನ್.ಮಂಜುನಾಥ್, ಉಪಾಧ್ಯಕ್ಷರಾಗಿ ಮೋಹನ್ ಅವಿರೋಧವಾಗಿ ಆಯ್ಕೆಯಾದರು. 13 ಮಂದಿ ನಿರ್ದೇಶಕರ ಪೈಕಿ 9 ಮಂದಿ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಚುನಾವಣಾಧಿಕಾರಿಯಾಗಿ ಜಿಲ್ಲಾ ಸಹಕಾರ ಸಂಘದ ಅಧಿಕಾರಿ‌ ಮೋಹನ್ ಕಾರ್ಯನಿರ್ವಹಿಸಿದರು. ನೂತನ ಅಧ್ಯಕ್ಷ, ಉಪಾಧ್ಯಕ್ಷರ ಪರವಾಗಿ ತಾಲ್ಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ‌ ಸದಸ್ಯ, ಸಹಕಾರ ಸಂಘದ ಮಾಜಿ‌ ನಿರ್ದೇಶಕ  ಕೆ.ಎಸ್.ಕೃಷ್ಣೇಗೌಡ, ಕೆ.ಡಿ.ಪಿ.ಸದಸ್ಯ ಟಿ. ಬಿ.ಜಗದೀಶ್ ಮತ್ತಿತರರ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಯಿತು. ಈ‌ ಸಂದರ್ಭ ಸಂಘದ ನಿರ್ದೇಶಕರಾದ ಬಿ.ಜೆ.ಶಿವಪ್ಪ, ಎ.ಪಿ.ರಂಗಸ್ವಾಮಿ, ಲೋಕೇಶ್ ಎ.ಆರ್, ಎ.ಎಚ್.ಶಿವಶಂಕರ್, ಸಿ.ಡಿ.ಸ್ವಾತಿ, ಜಯಮ್ಮ, ಡಿ.ಆರ್.ಪ್ರೇಮಕುಮಾರ್ ಮತ್ತಿತರರು ಇದ್ದರು. (ವರದಿ : ಎನ್.ಆರ್.ಶೆಟ್ಟಿ)

Read More

ವಿರಾಜಪೇಟೆ NEWS DESK ಆ.12 : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ವಿರಾಜಪೇಟೆ ಗಡಿಯಾರ ಕಂಬದ ಬಳಿ ಹಿಂದೂ ಹಿತರಕ್ಷಣಾ ಸಮಿತಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿತು. ಹಿಂದುಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ಹಿಂದುಗಳಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕೆಂದು ಆಗ್ರಹಿಸಿದರು. ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ  ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿರುವುದು ಖಂಡನೀಯ. ಹಿಂದುಗಳಿಗೆ ಭದ್ರತೆ ಇಲ್ಲದಾಗಿದೆ, ಬಾಂಗ್ಲಾದೇಶದಲ್ಲಿ ಹಿಂದೂಗಳ ಜನಸಂಖ್ಯೆ ಇಳಿಕೆಯಾಗಿದೆ. ಬಹುಸಂಖ್ಯಾತರಿಂದ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದೌರ್ಜನ್ಯ, ಕಿರುಕುಳ ಹಾಗೂ ಹತ್ಯೆ ಪ್ರಕರಣಗಳು ಅಧಿಕವಾಗಿದೆ. ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಿ ಅಲ್ಲಿನ ಹಿಂದೂಗಳ ರಕ್ಷಣೆಯನ್ನು ಮಾಡಬೇಕು ಎಂದು ಒತ್ತಾಯಿಸಿದರು. ಹಿಂದೂ ಸಂಘಟನೆಗಳ ಪ್ರಮುಖರಾದ ಕುಟ್ಟಂಡ ಪ್ರಿನ್ಸ್ ಗಣಪತಿ, ವಿವೇಕ್ ರೈ, ಹೇಮಂತ್, ಭಾಜಪ ಮುಖಂಡರಾದ ಸುವಿನ್ ಗಣಪತಿ, ಶಶಿ ಸುಬ್ರಮಣಿ, ಪಟ್ರಪಂಡ ರಘು ನಾಣಯ್ಯ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಆ.12 NEWS DESK : 66/11 ಕೆವಿ ಶನಿವಾರಸಂತೆ ವಿದ್ಯುತ್ ವಿತರಣಾ ಕೇಂದ್ರದ ಎಫ್-3 ಶನಿವಾರಸಂತೆ ಟೌನ್ ಫೀಡರ್ ಜೊತೆಯಲ್ಲಿ ಹಾದುಹೋಗಿರುವ ಎಫ್-6 ಮಣಜೂರು ಫೀಡರ್‍ನ ಕೇಬಲ್ ದುರಸ್ತಿ ಕೆಲಸವಿರುವುದರಿಂದ ಆಗಸ್ಟ್, 13 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯ ವರೆಗೆ ಎಫ್6 ಮಣಜೂರು ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಶನಿವಾರಸಂತೆ, ಗುಡುಗಳಲೆ, ಮಾದ್ರೆ, ಕಾಜೂರು, ದೊಡ್ಡಕೊಳತ್ತೂರು, ಅಪ್ಪಶೆಟ್ಟಳ್ಳಿ, ಶೆಟ್ಟಿಗನಹಳ್ಳಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. ಹಾಗೆಯೇ 66/11ಕೆವಿ ಮಡಿಕೇರಿ, ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್1 ಕೋಟೆ, ಎಫ್5 ಜಿ.ಟಿ ರಸ್ತೆ ಹಾಗೂ ಎಫ್12 ರಾಜಾಸೀಟ್ ಫೀಡರ್‍ಗಳ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ಆಗಸ್ಟ್, 13 ರಂದು ಬೆಳಗ್ಗೆ 10 ರಿಂದ ಸಂಜೆ 05 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಮೈಸೂರು ರಸ್ತೆ, ಪುಟಾಣಿನಗರ, ದೇಚೂರು, ಜಯನಗರ,…

Read More

ಮಡಿಕೇರಿ NEWS DESK ಆ.12 : ಮೀಸಲಾತಿ ವಿಚಾರದ ಹಿನ್ನೆಲೆ ನೆರೆಯ ಬಾಂಗ್ಲಾದೇಶದಲ್ಲಿ ನಡೆದ ವಿದ್ಯಾರ್ಥಿಗಳ ಕ್ಷಿಪ್ರಕ್ರಾಂತಿಯ ಬೆನ್ನಲ್ಲೆ ಅಲ್ಲಿನ ಹಿಂದೂ ಸಮುದಾಯವನ್ನು ಕೇಂದ್ರವಾಗಿರಿಸಿಕೊಂಡು ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಸಮಾವೇಶಗೊಂಡ ಹಿಂದೂ ಸಂಘಟನೆಗಳ ಪ್ರಮುಖರಾದ ಕೆ.ಹೆಚ್.ಚೇತನ್ ಶಾಂತಿನಿಕೇತನ, ಕುಮಾರ್, ದುರ್ಗೇಶ್, ಚರಣ್, ಪುದಿಯೊಕ್ಕಡ ರಮೇಶ್, ಎಂ.ಧನಂಜಯ, ತಿಮ್ಮಯ್ಯ ಹಾಗೂ ಕಾರ್ಯಕರ್ತರು ‘ಮಾನವ ಸರಪಳಿ’ ರಚಿಸಿ ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂದೂ ಸಮುದಾಯದ ಮೇಲಿನ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಬಾಂಗ್ಲಾದೇಶದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪೀಳಿಗೆಗೆ ‘ಮೀಸಲಾತಿ’ ಘೋಷಣೆಯನ್ನು ವಿರೋಧಿಸಿ ಅಲ್ಲಿನ ವಿದ್ಯಾರ್ಥಿ ಸಮೂಹ ಕ್ಷಿಪ್ರಕ್ರಾಂತಿಯನ್ನು ನಡೆಸಿತು. ಈ ಸಂದರ್ಭ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಅಧಿಕಾರಕ್ಕೆ ಬಂದ ಪ್ರಧಾನಿ ದೇಶ ಬಿಟ್ಟು ಹೊರ ಹೋಗುವ ಪರಿಸ್ಥಿತಿ ನಿರ್ಮಾಣವಾದುದಲ್ಲದೆ, ನಿರಂಕುಶ ಆಡಳಿತ ಅಲ್ಲಿ ಕಾಣಿಸಿಕೊಂಡಿದೆ. ಮೀಸಲಾತಿ ಹಿನ್ನೆಲೆಯ ಹೋರಾಟಕ್ಕೆ ಅಮೇರಿಕಾ ಮತ್ತು ನೆರೆಯ ಪಾಕಿಸ್ತಾನಗಳು ಕುಮ್ಮಕ್ಕು…

Read More