ಮಡಿಕೇರಿ ಆ.26 NEWS DESK : ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯೆ ಹಾಗೂ ಸಾಹಿತಿ ಹಂಚೇಟಿರ ಫ್ಯಾನ್ಸಿ ಮುತ್ತಣ್ಣ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ತಮ್ಮ ಮಾವ ಮತ್ತು ಅತ್ತೆಯವರಾದ ದಿ. ಹಂಚೇಟಿರ ಕುಟ್ಟಪ್ಪ ಮತ್ತು ಕಾಮವ್ವ ದಂಪತಿಗಳ ಜ್ಞಾಪಕಾರ್ಥ ರೂ 50,000 ಗಳ ದತ್ತಿನಿಧಿ ಸ್ಥಾಪಿಸಿದ್ದಾರೆ. ದತ್ತಿಯ ಆಶಯವು ಕೊಡಗಿನ ಜಾನಪದ ಪ್ರಕಾರಗಳ ಹಿನ್ನೆಲೆ, ಹಾಡು, ಕುಣಿತ ಗಳ ಕುರಿತು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸುವುದು. ಕೊಡಗಿನ ಒಂದು ಪದವಿ ಕಾಲೇಜಿನಿಂದ ಒರ್ವ ವಿದ್ಯಾರ್ಥಿಗೆ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ, ಕೊಡಗಿನ ಜಾನಪದ ಕುರಿತು ಉಪನ್ಯಾಸ ಏರ್ಪಡಿಸುವುದು ಆಗಿದೆ. ದತ್ತಿಯ ಮೊತ್ತದ ಚೆಕ್ ಅನ್ನು ಜಿಲ್ಲಾ ಕಸಾಪದ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಮೂರ್ನಾಡು ಹೋಬಳಿ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್, ಸದಸ್ಯ ಬೊಳ್ಳಜಿರ ಬಿ.ಅಯ್ಯಪ್ಪ ಮತ್ತಿತರದ ಸಮ್ಮುಖದಲ್ಲಿ ಸ್ವೀಕರಿಸಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪತ್ರಿಕಾ…
ಲೇಖಕ: admin
ಮಡಿಕೇರಿ ಆ.26 NEWS DESK : ಇತರರಿಗೆ ಮಾದರಿಯಾಗಿರುವ “ನೊಂದವರ ಬಾಳಿನ ಆಶಾಕಿರಣ ಗೆಳೆಯರ ಬಳಗ” ಪ್ರತಿ ತಿಂಗಳ ಕೊನೆಯ ಭಾನುವಾರದಂದು ಆಶ್ರಮದಲ್ಲಿರುವ ನೊಂದ ಹಿರಿಯರಿಗೆ ಅನ್ನದಾನ ಹಾಗೂ ರಸಮಂದರಿ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದೆ. ಈ ಬಾರಿ ಮಡಿಕೇರಿಯ ತನಲ್, ವಿಕಾಸ್ ಮತ್ತು ಶಿವದೂತ ಆಶ್ರಮದಲ್ಲಿ ಬಳಗದ ಪ್ರಮುಖರು ಅನ್ನದಾನ ಮಾಡಿದರು. ಬಳಗದ ಕಾರ್ಯದರ್ಶಿ ಎಂ.ಎ.ಅಬ್ದುಲ್ ರಜಾಕ್ ಅವರು ಮಾತನಾಡಿ ಸದಸ್ಯ ನಾಬಿನ್ ಕೆವಿನ್ ಅವರು ಇತ್ತೀಚೆಗೆ ನಿಧನರಾದ ಹಿನ್ನೆಲೆ ರಸಮಂಜರಿ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿದೆ ಎಂದರು. ಪ್ರತಿ ತಿಂಗಳ ಕೊನೆಯ ಭಾನುವಾರ ನೊಂದವರೊಂದಿಗೆ ಬೆರೆತು ಮನಸ್ಸಿಗೆ ಕೊಂಚ ನೆಮ್ಮದಿ ನೀಡುವ ಅಳಿಲು ಸೇವೆಯಲ್ಲಿ ಬಳಗ ತೊಡಗಿಸಿಕೊಂಡಿದೆ. ಈ ಕಾರ್ಯಕ್ರಮಕ್ಕೆ ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿದರು. ಬಳಗದ ಅಧ್ಯಕ್ಷ ಮಹಮ್ಮದ್ ಆಲಿ, ಉಪಾಧ್ಯಕ್ಷ ಸುಲೈಮಾನ್, ಖಜಾಂಚಿ ಶಿವಣ್ಣ, ಸದಸ್ಯ ಗಿಲ್ಬರ್ಟ್ ಮತ್ತಿತರರು ಉಪಸ್ಥಿತರಿದ್ದರು. ನಾಬಿನ್ ಕೆವಿನ್ ಅವರ ನಿಧನಕ್ಕೆ ಬಳಗದ ಪ್ರಮುಖರು ಹಾಗೂ ಆಶ್ರಮವಾಸಿಗಳು ಇದೇ ಸಂದರ್ಭ ಮೌನಾಚರಣೆಯ ಮೂಲಕ…
ಕರ್ಕಾಳ ಆ.26 NEWS DESK : ಫಲವತ್ತಾದ ಮಣ್ಣೇ ಶ್ರೇಷ್ಠ ಸಂಪತ್ತು. ಆ ಮಣ್ಣಿನೊಂದಿಗೆ ನಮಗೆ ಅವಿನಾಭಾವ ಸಂಬಂಧ ಇದ್ದಾಗ ಮಾತ್ರ ಕೆಸರೆಂಬುದು ಆಪ್ತವಾಗುತ್ತಾ ಹೋಗುತ್ತದೆ. ರೈತನೇ ದೇಶವನ್ನು ಕಟ್ಟಬಲ್ಲವನು. ರೈತಾಪಿ ವರ್ಗ ನಿಷ್ಕ್ರಿಯವಾದರೆ ಬದುಕೇ ಇಲ್ಲ. ಆದ್ದರಿಂದ ವಿದ್ಯಾರ್ಥಿಗಳು ರೈತರ ಕಷ್ಟ, ಕೃಷಿಯಿಂದ ಸಿಗುವ ಆನಂದ ಅನುಭವದ ಮೂಲಕ ಪಡೆಯಬೇಕು ಎಂದು ಹಿರ್ಗಾನ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಸಂತೋಷ ಶೆಟ್ಟಿ ಹೇಳಿದರು. ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಕೆಸರುಡೊಂಜಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಪಶು ವೈದ್ಯ ಸಾಣೂರಿನ ಜ್ಞಾನದೇವ ಮಾತನಾಡಿ, ಇಂದು ಜಗತ್ತೇ ವಿಷಮಯವಾಗುತ್ತಿದೆ. ಆಹಾರ ಪದಾರ್ಥಗಳೆಲ್ಲ ಕಲುಷಿತಗೊಂಡಿವೆ. ಇಂದಿನ ತುರ್ತು ಅಗತ್ಯ ಸಂಪೂರ್ಣ ಸಾವಯವ ಪ್ರಧಾನವಾದ ಕೃಷಿ ನಡೆಸುವುದಾಗಿದೆ. ಕೃಷಿ ಕಷ್ಟಕರವಾದರೂ ಅದನ್ನು ಇಷ್ಟಪಟ್ಟು ಮಾಡಬೇಕಾಗಿದೆ ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಎಸ್.ಎಲ್.ಅಶ್ವಥ್ ಮಾತನಾಡಿ, ಕೃಷಿ ಮೂಲವೇ ನಾಗರಿಕತೆಯ ಮೂಲ. ಮಣ್ಣು ಕೇವಲ ಕೆಸರಲ್ಲ. ಬದಲಾಗಿ ಅದು…
ಮಡಿಕೇರಿ ಆ.26 NEWS DESK : ಮಡಿಕೇರಿಯ ಹಿಂದೂ ಮಲಯಾಳಿ ಸಂಘದ ಮಹಿಳಾ ಘಟಕದ ಅಧ್ಯಕ್ಷರಾಗಿ ಲತಾ ರಾಜನ್ ಅವರು ಅವಿರೋಧವಾಗಿ ಪುನರ್ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಅಂಜಲಿ ಅಶೋಕ್ ನೇಮಕಗೊಂಡಿದ್ದಾರೆ. ಸಂಘದ ಜಿಲ್ಲಾ ಕಚೇರಿಯಲ್ಲಿ ಅಧ್ಯಕ್ಷ ಕೆ.ವಿ.ಧರ್ಮೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯಕಾರಿಣಿ ಸದಸ್ಯರ ಆಯ್ಕೆಯ ಜವಾಬ್ದಾರಿಯನ್ನು ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗೆ ವಹಿಸಲಾಯಿತು. “ಓಣಾಘೋಷಂ” ಪ್ರಯುಕ್ತ ನಡೆಸಲಾಗುವ ಕ್ರೀಡಾ ಚಟುವಟಿಕೆಗಳ ಉಸ್ತುವಾರಿಯನ್ನು ಮಹಿಳಾ ಸದಸ್ಯರುಗಳಿಗೆ ನೀಡಲಾಯಿತು. ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಎಸ್.ದಿನೇಶ್, ಸಹ ಕಾರ್ಯದರ್ಶಿ ಹೆಚ್.ಪಿ.ಅಶೋಕ್, ಉಪಾಧ್ಯಕ್ಷರಾದ ಪಿ.ಟಿ.ಉತ್ತಮ್, ವಿಜಯಕುಮಾರ್, ಖಜಾಂಚಿ ಎಂ.ಪಿ.ರವಿ, ಸಹ ಖಜಾಂಚಿ ಪಿ.ವಿ.ಸುಬ್ರಮಣಿ, ಸಂಘಟನಾ ಕಾರ್ಯದರ್ಶಿ ಟಿ.ಆರ್.ಪ್ರಮೋದ್, ಯೂತ್ ವಿಂಗ್ ಅಧ್ಯಕ್ಷ ಆರ್.ಅರವಿಂದ್, ಪ್ರಚಾರ ಸಮಿತಿಯ ರವಿ ಅಪ್ಪುಕುಟ್ಟನ್ ಹಾಗೂ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಒ.ಎನ್.ಬಾಬು, ಮನು, ಸಿ.ಕೆ.ಪ್ರಭಾಕರ್, ಟಿ.ಬಿ.ಪ್ರಭಾಕರ್, ಎನ್.ಸಿ.ಸುನಿಲ್ ಉಪಸ್ಥಿತರಿದ್ದರು. ರಕ್ಷಾ ಬಂಧನದ ಪ್ರಯುಕ್ತ ಪರಸ್ಪರ ರಾಕಿ ಕಟ್ಟಿ ಸಿಹಿ ಹಂಚಿ ಸಭೆ ಸಂಭ್ರಮಿಸಿತು.
ಗೋಣಿಕೊಪ್ಪ ಆ.26 NEWS DESK : ಹಿಂದುಳಿದ ಸಮುದಾಯಗಳು ಸಮಾಜದ ಮುಂದುವರಿದ ಭಾಗವಾಗಲು ಸಂಘಟನೆಯಿಂದ ಸದೃಢರಾಗಿ ವಿದ್ಯೆಯಿಂದ ಪ್ರಬಲರಾಗಬೇಕು ಎಂದು ಕೇರಳ ತಲಶೇರಿ ನಿವೃತ್ತ ಶಿಕ್ಷಕ ವಿನಯನ್ ಕರೆ ನೀಡಿದರು. ಗೋಣಿಕೊಪ್ಪ ಪಟೇಲ್ ನಗರದಲ್ಲಿರುವ ಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ಗೋಣಿಕೊಪ್ಪಲು ಎಸ್ಎನ್ಡಿಪಿ ಶಾಖ ಯೋಗಂ ಆಯೋಜಿಸಿದ ಶ್ರೀ ನಾರಾಯಣ ಗುರುಗಳ 170ನೇ ಜಯಂತಿ ಆಚಾರಣೆಯಲ್ಲಿ ಮುಖ್ಯ ಭಾಷಣಗಾರರಾಗಿ ಮಾತನಾಡಿದರು. ಕತ್ತಲೆಯಿಂದ ಬೆಳಕಿನೆಡೆಗೆ ನಮ್ಮನ್ನು ದಾಟಿಸುವ ವ್ಯಕ್ತಿತ್ವ ಉಳ್ಳವರು ಗುರುಗಳಾಗುತ್ತಾರೆ. ಅಂತಹ ಮಹಾನ್ ಗುರು ನಾರಾಯಣ ಗುರುಗಳಾಗಿದ್ದಾರೆ. ಅವರ ಆದರ್ಶ ಪಾಲನೆ, ತತ್ವ, ಚಿಂತನೆಗಳು ನಮ್ಮೆಲ್ಲರ ಬದುಕಿನ ಬೆಳಕಾಗಬೇಕು ಎಂದು ಸಲಹೆ ನೀಡಿದರು. ದನಕನಗಳು ಬೇಕು ಎಂದು ಪ್ರಾರ್ಥಿಸುವ ಬದಲಾಗಿ ಜ್ಞಾನಕ್ಕಾಗಿ ಪ್ರಾರ್ಥಿಸುವುದರಿಂದ ಮನುಷ್ಯನಲ್ಲಿ ಶಾಂತಿ ನೆಲೆಸುತ್ತದೆ. ಜೀವನವನ್ನು ಸುಂದರವಾಗಿಸಿಕೊಳ್ಳಲು ಜ್ಞಾನದ ಬೆಳಕಿನಲ್ಲಿ ಹೊತ್ತಿಸಿಕೊಳ್ಳುವ ಪ್ರಾರ್ಥನೆಯಾಗಲಿ ಎಂದು ಅಭಿಪ್ರಾಯ ಮಂಡಿಸಿದರು. ನಂತರ ನಾರಾಯಣ ಗುರುಗಳ ಜೀವನವನ್ನು ಸಂಕ್ಷಿಪ್ತವಾಗಿ ವಿವರಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಮೋದ್ ಗಣಪತಿ,…
ಕುಶಾಲನಗರ ಆ.26 NEWS DESK : ಕುಶಾಲನಗರ ತಾಲ್ಲೂಕಿನ ತೊರೆನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ ಮತ್ತು ವಿದ್ಯಾರ್ಥಿ ಸಂಘದ ವತಿಯಿಂದ ಸರ್ಕಾರದ ಮಹತ್ವಾಕಾಂಕ್ಷೆಯ “ನಾವು ಮನುಜರು” ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ‘ನಾವು ಮನುಜರು’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಬಿ.ಆರ್.ಸತ್ಯನಾರಾಯಣ ‘ನಾವು ಮನುಜರು’ ಕಾರ್ಯಕ್ರಮದಡಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯನ್ನು ಬೆಳೆಸಲು “ನಾವು ಮನುಜರು” ಎಂಬ ವಿನೂತನ ಕಾರ್ಯಕ್ರಮವನ್ನು ಸಂಘಟಿಸಲಾಗುತ್ತಿದೆ ಎಂದರು. ಶಾಲಾ ಮಕ್ಕಳಲ್ಲಿ ಸಾಮರಸ್ಯ ಮೂಡಿಸುವ ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ಬಿತ್ತುವ ಮತ್ತು ವೈಜ್ಞಾನಿಕ ಮನೋಭಾವನೆ ಮೂಡಿಸಲು “ನಾವು ಮನುಜರು” ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು. ಕನ್ನಡ ಭಾಷಾ ಶಿಕ್ಷಕ ಟಿ.ಬಿ.ಮಂಜುನಾಥ್ ಮಾತನಾಡಿ, ಶಾಲಾ ಮಕ್ಕಳಲ್ಲಿ ಸಾಮರಸ್ಯ ಮೂಡಿಸುವ ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ಬಿತ್ತುವ ಮತ್ತು ವೈಜ್ಞಾನಿಕ ಮನೋಭಾವನೆ ಮೂಡಿಸಲು ನಾವು ಮನುಜರು ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು. ಕಾರ್ಯಕ್ರಮದ ರೂಪುರೇಷೆ ಕುರಿತು ಮಾಹಿತಿ ನೀಡಿದ ತೊರೆನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಂಪನ್ಮೂಲ…
ಕುಶಾಲನಗರ ಆ.26 NEWS DESK : ಮೈಸೂರಿನ ಜೆಎಸ್ಎಸ್ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸುವ ಮೂಲಕ ಹನ್ನೆರಡನೇ ಶತಮಾನದ ಶರಣರ ಸಾಹಿತ್ಯ ಹಾಗೂ ಸಂಸ್ಕ್ರತಿಯನ್ನು ಉದ್ದೀಪನಗೊಳಿಸುವ ದಿಸೆಯಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಸಂಸ್ಥೆಯನ್ನು ಕಟ್ಟಿದ ಡಾ.ರಾಜೇಂದ್ರ ಸ್ವಾಮೀಜಿ ಸ್ಮರಣಾರ್ಥ ಶರಣ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನವಾಗಿ ಆ.29 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಆಚರಿಸಲಾಗುತ್ತಿದೆ. ಹಾಗೆಯೇ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜೇಂದ್ರ ಸ್ವಾಮೀಜಿ ಸ್ಮರಣೆ ಹಾಗೂ ಶಸಾಪ ಸಂಸ್ಥಾಪನಾ ಕಾರ್ಯಕ್ರಮವೂ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಕಿಕೊಳ್ಳಲಾಗಿದೆ. ಅಂದು ಬೆಳಗ್ಗೆ 10.30 ಗಂಟೆಗೆ ಶಸಾಪದ ಗೌರವಾಧ್ಯಕ್ಷರೂ ಆಗಿರುವ ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಪೀಠಾಧ್ಯಕ್ಷ ಶ್ರೀ ಸದಾಶಿವ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯಲಿದೆ. ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಉದ್ಘಾಟಿಸಲಿದ್ದು, ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾಧ್ಯಕ್ಷ ಹೆಚ್.ವಿ.ಶಿವಪ್ಪ ಶ್ರೀ ರಾಜೇಂದ್ರ ಸ್ವಾಮೀಜಿ ಅವರ ಕುರಿತು ಮಾತನಾಡಲಿದ್ದಾರೆ. ಶರಣ…
ಅಬುಧಾಬಿ NEWS DESK ಆ.25 : ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕಳೆದ 9 ವರ್ಷಗಳ ಹಿಂದೆ ಸಮಾನ ಮನಸ್ಕ ಯುವ ಸಮೂಹದಿಂದ ಕೊಡಗು ಹಳೆ ವಿದ್ಯಾಥಿಗಳ ಸಂಘವು ದುಬೈ ಕೇಂದ್ರೀಕರಿಸಿ ಸಂಯುಕ್ತ ಅರಬ್ ಸಂಸ್ಥಾನದಲ್ಲಿರುವ ಕೊಡಗಿನ ಹಳೆ ವಿದ್ಯಾರ್ಥಿಗಳನ್ನು ಒಳಗೊಂಡು ರೂಪುಗೊಂಡಿತು. ಇದರ 2024-25ನೇ ಸಾಲಿನ ಕಾರ್ಯಕಾರಿ ಮಂಡಳಿಯ ಆಯ್ಕೆ ನಡೆದಿದ್ದು, ಅಸೋಸಿಯೇಷನ್ ಅಧ್ಯಕ್ಷರಾಗಿ ಅಬ್ದುಲ್ಲಾ ಕೊಂಡಂಗೇರಿ, ಉಪಾಧ್ಯಕ್ಷರಾಗಿ ಸೌರಭ್ ಗೋಣಿಕೊಪ್ಪ, ಮುಖ್ಯ ಕಾರ್ಯದರ್ಶಿಗಳಾಗಿ ರಫೀಕಲಿ ಕುಂಜಿಲ ಹಾಗೂ ಶಾಫಿ ಕೊಟ್ಟಮುಡಿ ಆಯ್ಕೆಯಾದರು. ಖಜಾಂಚಿಯಾಗಿ ಸಾದಿಕ್ ಕೊಳಕೇರಿ, ಸದಸ್ಯರುಗಳಾಗಿ ಆಗಿ ಇರ್ಫಾನ್ ಮೂರ್ನಾಡು, ಕವನ್ ಗೋಣಿಕೊಪ್ಪ, ಮುಜೀಬ್ ಕೊಂಡಂಗೇರಿ, ಪ್ರತಾಪ್ ಮಡಿಕೇರಿ, ಝಿಯಾ ಚೋಕಂಡಳ್ಳಿ, ಅಕ್ರಮ್ ಸೋಮವಾರಪೇಟೆ, ಶರತ್ ಮಡಿಕೇರಿ, ಗೌತಮ್ ವಿರಾಜಪೇಟೆ, ಸಲಹಾ ಸಮಿತಿಗೆ ಅಶ್ರಫ್ ಮಡಿಕೇರಿ, ಹಮೀದ್ ವಿರಾಜಪೇಟೆ ಹಾಗೂ ಸಲೀಂ ಮೂರ್ನಾಡು ನೇಮಕಗೊಂಡರು. ಕೊಡಗು ಹಳೆ ವಿಧ್ಯಾರ್ಥಿಗಳ ಸಂಘವು ಕಳೆದ ಹಲವು ವರ್ಷಗಳಿಂದ ಅನೇಕ ಮಾನವೀಯ, ಶೆಕ್ಷಣಿಕ ಮತ್ತು ಸಾಮಾಜಿಕ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದೆ. ಎಸ್ ಎಸ್…
ಗುಡ್ಡೆಹೊಸೂರು NEWS DESK ಆ.24 : ಲಾರಿ ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸಾನ್ನಪ್ಪಿರುವ ಘಟನೆ ಗುಡ್ಡೆಹೊಸೂರುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಲಾರಿಯಲ್ಲಿದ್ದ ಸುಂಟಿಕೊಪ್ಪದ ಕಾರ್ಮಿಕ ರಾಜು ಎಂಬುವವರೇ ಮೃತ ದುರ್ದೈವಿ. ಲಾರಿ ಚಾಲಕ 7ನೇ ಹೊಸಕೋಟೆಯ ಜಬ್ಬರ್ ಅವರಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಶಾಲನಗರದಿಂದ ಸುಂಟಿಕೊಪ್ಪಕ್ಕೆ ಬರುತ್ತಿದ್ದ ಲಾರಿ ಮತ್ತು ಕುಶಾಲನಗರದ ಕಡೆ ತೆರಳುತ್ತಿದ್ದ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿತು. ಪೊಲೀಸರು ಸ್ಥಳಕ್ಕೆ ಭೇಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೈಸೂರುNEWS DESK ಆ.24 : ಸಾವಿನಲ್ಲೂ ದಂಪತಿ ಒಂದಾದ ಘಟನೆ ಕೊಳ್ಳೆಗಾಲದ ಹಾನೂರುವಿನ ಮಂಗಲ ಗ್ರಾಮದ ರಾಮನಗುಡ್ಡದಲ್ಲಿ ನಡೆದಿದೆ. ರಾಜಶೇಖರ ವೀರಣ್ಣರಾಧ್ಯ (68) ಹಾಗೂ ಪತ್ನಿ ಸುಮಿತ್ರ (60)ಮೃತ ದುರ್ದೈವಿಗಳಾಗಿದ್ದಾರೆ. ಸುಮಿತ್ರ ಅವರಿಗೆ ಹೃದಯಾಘಾತವಾಗಿ ಆಸ್ಪತ್ರೆಗೆ ಸೇರಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ವಿಷಯ ತಿಳಿದ ಕೆಲವೇ ಕ್ಷಣಗಳಲ್ಲಿ ಪತಿ ರಾಜಶೇಖರ ವೀರಣ್ಣರಾಧ್ಯ ಅವರಿಗೂ ಹೃದಯಾಘಾತವಾಗಿದೆ. ಇವರು ಕೂಡ ಚಿಕಿತ್ಸೆ ಫಲಿಸದೆ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.






