ಲೇಖಕ: admin

*ರಾಜ್ಯ ಸರಕಾರದ ಸರ್ವಾಧಿಕಾರಿ ಧೋರಣೆ : ಪೊಲೀಸರ ಕ್ರಮಕ್ಕೆ ಸೋಮವಾರಪೇಟೆ ಬಿಜೆಪಿ ಅಸಮಾಧಾನ* ಮಡಿಕೇರಿ ಮೇ 6 : ಕೊಡಗು ಜಿಲ್ಲೆಯಲ್ಲಿ ಮಿತಿ ಮೀರಿರುವ ವನ್ಯಜೀವಿಗಳ ಉಪಟಳ ಹಾಗೂ ಸಿ ಮತ್ತು ಡಿ ಭೂಮಿಯ ಸಮಸ್ಯೆಯ ಕುರಿತು ಅರಣ್ಯ ಸಚಿವರ ಗಮನ ಸೆಳೆಯಲು ಗುಡ್ಡೆಹೊಸೂರು ವೃತ್ತದಲ್ಲಿ ನಿಂತಿದ್ದ ಬಿಜೆಪಿ ಪ್ರಮುಖರನ್ನು ಪೊಲೀಸರು ವಶಕ್ಕೆ ಪಡೆದಿರುವ ಕ್ರಮ ಖಂಡನೀಯವೆAದು ಸೋಮವಾರಪೇಟೆ ಬಿಜೆಪಿ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ವನ್ಯಜೀವಿ ದಾಳಿ ಮತ್ತು ಭೂಮಿ ಸಮಸ್ಯೆ ಜನರ ನಿದ್ದೆಗೆಡಿಸಿದೆ. ತಲೆತಲಾಂತರಗಳಿಂದ ಕೃಷಿ ಮಾಡಿಕೊಂಡು ಬಂದಿರುವ ರೈತರು ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ವನ್ಯಜೀವಿಗಳ ದಾಳಿಯಿಂದ ಅಮಾಯಕ ಮಾನವ ಜೀವಗಳು ಹಾಗೂ ಜಾನುವಾರುಗಳು ಬಲಿಯಾಗುತ್ತಿವೆ. ಪರಿಸ್ಥಿತಿ ಗಂಭೀರವಾಗಿದ್ದರೂ ಮತ್ತು ನಿರಂತರ ಪ್ರತಿಭಟನೆಗಳು ನಡೆಯುತ್ತಿದ್ದರೂ ಅರಣ್ಯ ಇಲಾಖೆ ಯಾವುದೇ ಸ್ಪಂದನೆಯನ್ನು ನೀಡುತ್ತಿಲ್ಲ. ಈ ಕಾರಣದಿಂದ ಅರಣ್ಯ ಸಚಿವರನ್ನು ಖುದ್ದಾಗಿ ಭೇಟಿಯಾಗಿ ಜಿಲ್ಲೆಯನ್ನು ಕಾಡುತ್ತಿರುವ ಅರಣ್ಯ ಇಲಾಖೆ ವ್ಯಾಪ್ತಿಯ ಸಮಸ್ಯೆಗಳನ್ನು ಗುಡ್ಡೆಹೊಸೂರಿನಲ್ಲಿ ವಿವರಿಸುವ ಪ್ರಯತ್ನವನ್ನು…

Read More

ಮಡಿಕೇರಿ NEWS DESK ಮೇ 6 : ವನ್ಯಜೀವಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನರ ಅಮೂಲ್ಯ ಜೀವ, ಬೆಳೆ ಹಾನಿ ತಪ್ಪಿಸಲು ಆಯ್ದ ಪ್ರದೇಶದಲ್ಲಿ, ಆಯ್ದ ವನ್ಯಜೀವಿಗಳ ಸಂತಾನ ನಿಯಂತ್ರಣದ ಸಲಹೆಗಳು ಬಂದಿದ್ದು, ಈ ಬಗ್ಗೆ ಸಾರ್ವಜನಿಕವಾಗಿ ತಜ್ಞರ ಮಟ್ಟದಲ್ಲಿ ಚರ್ಚೆ ಆಗುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ನೂತನ ತೂಗುಸೇತುವೆ ಮತ್ತು ಅಧಿಕಾರಿಗಳ ವಸತಿಗೃಹಕ್ಕೆ ಶಂಕುಸ್ಥಾಪನೆ ನೆರವೇರಿಸಿ, ನೂತನ ವಾಹನಗಳಿಗೆ ಹಸಿರು ನಿಶಾನೆ ತೋರಿ ಮಾತನಾಡಿದ ಅವರು, ಆನೆ-ಮಾನವ ಸಂಘರ್ಷ ನಿಯಂತ್ರಿಸಲು ತಜ್ಞರ ಸಮಿತಿ ರಚಿಸಲಾಗಿದ್ದು, ಅವರು ವರದಿ ನೀಡಿದ್ದಾರೆ. ಕಾಡಿನಂಚಿನ ಜನರು ಕೂಡ ಈ ಬಗ್ಗೆ ಸಲಹೆ ನೀಡಬೇಕು ಎಂದರು. ರೈಲ್ವೆ ಬ್ಯಾರಿಕೇಡ್, ಆನೆ ಕಂದಕ ನಿರ್ಮಾಣಕ್ಕೆ ಹಣಕಾಸಿನ ಕೊರತೆ ಇಲ್ಲ. ಅನುದಾನದ ಕೊರತೆ ಇಲ್ಲ. ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, ಆದಷ್ಟು ಶೀಘ್ರ ಹೆಚ್ಚಿನ ಬ್ಯಾರಿಕೇಡ್ ಅಳವಡಿಸಲಾಗುವುದು ಎಂದರು. ಅರಣ್ಯವಾಸಿಗಳು ಮತ್ತು ಅರಣ್ಯದಂಚಿನ…

Read More

ಮಡಿಕೇರಿ ಮೇ 6 NEWS DESK  : ಕೊಡಗು ಹೆಗ್ಗಡೆ ಸಮಾಜದ ವತಿಯಿಂದ ಹಾತೂರು ಶಾಲಾ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಕ್ರೀಡೋತ್ಸವಕ್ಕೆ ತೆರೆ ಎಳೆಯಲಾಯಿತು. ಕ್ರಿಕೆಟ್, ಥ್ರೋಬಾಲ್, ಹಗ್ಗಜಗ್ಗಾಟ ಸ್ಪರ್ಧೆಗಳು ಯಶಸ್ವಿಯಾಗಿ ನಡೆದವು. ಜನಾಂಗ ಬಾಂಧವರು ಉತ್ಸಾಹದಿಂದ ಭಾಗವಹಿಸಿದ್ದರು. :: ಹಿರಿಯರ ಕ್ರಿಕೆಟ್ : ಪಂದ್ಯದ ಫೈನಲ್ ನಲ್ಲಿ ಹಾತೂರು ತಂಡ, ಕಳೆದ ಬಾರಿಯ ಚಾಂಪಿಯನ್ ಹಾಲುಗುಂದ ತಂಡವನ್ನು ಸೋಲಿಸಿ ಈ ಬಾರಿಯ ಚಾಂಪಿಯನ್ ಪಟ್ಟ ಅಲಂಕರಿಸಿತು. ಟಾಸ್ ಗೆದ್ದ ಹಾತೂರು ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡು, ಹಾಲುಗುಂದ ತಂಡವನ್ನು 56 ರನ್‌ಗಳಿಗೆ ಆಲ್‌ಔಟ್ ಮಾಡಿತು. ಪ್ರತಿಯಾಗಿ ಹಾತೂರು ತಂಡ 1.4 ಓವರ್ ಬಾಕಿ ಇರುವಾಗಲೇ 57 ರನ್ ಗುರಿ ತಲುಪಿ ಸುಲಭ ಜಯ ಸಾಧಿಸಿತು. :: ಹಾಲುಗುಂದ ತಂಡ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿತು.: ಕಿರಿಯರ ಕ್ರಿಕೆಟ್ ನಲ್ಲಿ ಪೊನ್ನಂಪೇಟೆ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಬಿಟ್ಟಂಗಾಲ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತು. :: ಮಹಿಳೆಯರ…

Read More

ವಿರಾಜಪೇಟೆ ಮೇ 6 NEWS DESK : ಪೆರುಂಬಾಡಿಯ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿಯ ಎಸ್ಇಎ ಕಾಲೇಜು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ ಪಾಲ್ಗೊಂಡು ಶೇ100/ರ ಫಲಿತಾಂಶದೊಂದಿಗೆ ರಾಜ್ಯದಲ್ಲಿ 12ನೇ ಸ್ಥಾನ, ಜಿಲ್ಲೆಗೆ ನಾಲ್ಕನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಗೌರವ ಸಮರ್ಪಣೆಯೊಂದಿಗೆ ಅಭಿನಂದನ ಕಾರ್ಯಕ್ರಮ ಅಕಾಡೆಮಿ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕೊಡವ ಮುಸ್ಲಿಂ ಅಸೋಸಿಯೇಷನ್ ಅಧ್ಯಕ್ಷ ದುದ್ದಿಯಂಡ ಎಚ್ ಸೂಫಿ ಹಾಜಿ ಅಭಿನಂದನ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮುಂದಿನ ಭವಿಷ್ಯದ ಬಗ್ಗೆ ಚಿಂತನೆ ಮಾಡುವುದರ ಮೂಲಕ ಶಿಕ್ಷಣ ಕಲಿಕೆಯೊಂದಿಗೆ ಉತ್ತಮ ಪ್ರಜೆಗಳಾಗಿ ಗುರುತಿಸಿಕೊಂಡು ಸಾಧಿಸುವ ಛಲದೊಂದಿಗೆ ಪ್ರತಿಭಾನ್ವಿತರಾಗಿ ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯವಾಗಲಿದ್ದು, ಪೋಷಕರು ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಕಲಿಕೆಗೆ ಪ್ರೋತ್ಸಾಹ ನೀಡಬೇಕೆಂದು ಹೇಳಿದ ಅವರು ಸಂಶುಲ್ ಉಲಮ ಎಜುಕೇಶನಲ್ ಅಕಾಡೆಮಿ ಶಿಕ್ಷಣ ಸಂಸ್ಥೆ ಹೆಣ್ಣು ಮಕ್ಕಳ ಭವಿಷ್ಯದ ಬಗ್ಗೆ ಕಾಳಜಿ ವಹಿಸಿ ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಲು…

Read More

ಸೋಮವಾರಪೇಟೆ ಮೇ 5 NEWS DESK : ನಿವೇಶನ ರಹಿತ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ, ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ವಸತಿರಹಿತ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ 5ನೇ ದಿನಕ್ಕೆ ಕಾಲಿಟ್ಟಿದೆ. ಧರಣಿಯಲ್ಲಿ ವಸತಿ ರಹಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮೊದಲ ದಿನ ತಹಸೀಲ್ದಾರ್, ಡಿಎಫ್‍ಒ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಭೇಟಿ ನೀಡಿ ಧರಣಿನಿರತರನ್ನು ಚರ್ಚೆ ಮಾಡಿದ್ದು ಬಿಟ್ಟರೆ, ಧರಣಿ ಸ್ಥಳದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕಾಣಿಸಿಕೊಂಡಿಲ್ಲ. ಪ್ರಾರಂಭದಲ್ಲಿ 400ಕುಟಂಬಗಳು ಧರಣಿಯಲ್ಲಿ ಭಾಗವಹಿಸಿದ್ದರು. ಮಂಗಳವಾರ ಧರಣಿನಿರತರ ಸಂಖ್ಯೆ 600ಕ್ಕೆ ಏರಿದೆ. ವಸತಿರಹಿತರ ಧರಣಿಗೆ ಸಂಬಂಧಿಸಿದಂತೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ. ತಾತ್ಕಲಿಕ ಶೌಚಾಲಯ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಮಳೆಯಿಂದ ರಕ್ಷಣೆ ಪಡೆಯಲು ಟಾರ್ಪಲ್ ಹೊದಿಕೆಯ ಪೆಂಡಾಲ್ ಮಾಡಿಕೊಂಡಿದ್ದಾರೆ. ವಸತಿರಹಿತರು ಮನೆಯಿಂದ ಪಡಿತರ ತಂದುಕೊಂಡು ಅಡುಗೆ ಮಾಡಿಕೊಳ್ಳುಕೊಳ್ಳುತ್ತಿದ್ದಾರೆ. ವೃದ್ದ ಮಹಿಳೆಯರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ. ರಾತ್ರಿ ಮಲಗಿದ್ದಾಗ ಹಾವುಗಳ ಭಯವಿದೆ. ಇನ್ನೊಂದು ಕಾಡಾನೆಗಳ ಆತಂಕವೂ ಇದೆ ಎಂದು…

Read More

ಮಡಿಕೇರಿ ಮೇ 5 NEWS DESK : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪತ್ರಿಕಾ ಪ್ರವಾಸದ ಉಪಯೋಗಕ್ಕಾಗಿ ಹೊಸದಾಗಿ ಕೊಡಗು ಜಿಲ್ಲೆಗೆ ಒದಗಿಸಲಾಗಿರುವ ಮಿನಿ ಬಸ್‍ಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ನಗರದ ಜಿ.ಪಂ.ಭವನದ ಆವರಣದಲ್ಲಿ ಮಂಗಳವಾರ ಹಸಿರು ನಿಶಾನೆ ತೋರಿದರು. ಜಿಲ್ಲೆಯ ಪತ್ರಕರ್ತರು, ಶಾಸಕದ್ವಯರು ಹಾಗೂ ಸರ್ಕಾರ ಹೀಗೆ ಎಲ್ಲರ ಪ್ರಯತ್ನದಿಂದ ಜಿಲ್ಲೆಗೆ 32 ಆಸನದ ಮಿನಿ ಬಸ್ ಹಂಚಿಕೆ ಮಾಡಿದೆ ಎಂದು ಸಚಿವರು ತಿಳಿಸಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಮಿನಿ ಬಸ್‍ನ್ನು ಸ್ವತ: ಚಾಲನೆ ಮಾಡಿ ಉದ್ಘಾಟಿಸಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಪ್ರಾದೇಶಿಕ ಸಾರಿಗೆ ಅಧಿಕಾರಿ…

Read More

ಮಡಿಕೇರಿ ಮೇ 5 NEWS DESK : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದ್ದು, ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಾಕೀತು ಮಾಡಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯಾದ್ಯಂತ ಲೋಕೋಪಯೋಗಿ, ಪಂಚಾಯತ್ ರಾಜ್ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚುವುದು ಸೇರಿದಂತೆ ಅಗತ್ಯ ಕಾಮಗಾರಿ ಕೈಗೊಳ್ಳಬೇಕು ಎಂದು ಸಚಿವರು ನಿರ್ದೇಶನ ನೀಡಿದರು. ಈ ಕುರಿತು ಮಾತನಾಡಿದ ಶಾಸಕರಾದ ಡಾ.ಮಂತರ್‍ಗೌಡ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಜೊತೆಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದರು. ಐಗೂರು ಸೇತುವೆ ಶೀಘ್ರ ನಿರ್ಮಾಣ ಮಾಡಬೇಕು. ಗಾಳಿಬೀಡು ರಸ್ತೆ ಸರಿಪಡಿಸಬೇಕು. ಹಾಗೆಯೇ ಮುಟ್ಲು, ಹಮ್ಮಿಯಾಲ, ದೇವಸ್ತೂರು, ಹಂಚಿನಾಡು ಮತ್ತಿತರ ರಸ್ತೆಯನ್ನು ನಿರ್ವಹಿಸುವಂತೆ…

Read More

ಮಡಿಕೇರಿ ಮೇ 5 NEWS DESK : ಪ್ರಾಮಾಣಿಕ ರೀತಿಯಲ್ಲಿ ತಮ್ಮ ಶ್ರೀಮಂತ ಮತ್ತು ವಿಶಿಷ್ಟವಾದ ಮೂಲ ಸಂಸ್ಕೃತಿಯನ್ನು ಸಂರಕ್ಷಿಸಿಕೊಂಡು ಹೋಗುವ ಮೂಲಕ ಕೊಡವ ಸಮುದಾಯವರು ಮಾದರಿಯಾಗಿದ್ದಾರೆ. ಈ ಮೂಲಕ . ಪ್ರಪಂಚದಲ್ಲಿಯೇ ಕೊಡವರು ತನ್ನತವನ್ನು ಮೆರೆಯುತ್ತಿದ್ದಾರೆ ಎಂದು ಹಾವೇರಿ ಕ್ಷೇತ್ರದ ಸಂಸದ , ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶ್ಲಾಘಿಸಿದ್ದಾರೆ. ಕೊಡವರ ಪ್ರಾಮಾಣಿಕತೆ ಇಂದಿನ ಸಮಾಜದ ಅತ್ಯಗತ್ಯವಾಗಿದ್ದು, ಜಗತ್ತು ಕೂಡ ಪ್ರಾಮಾಣಿಕ ಜನರನ್ನೇ ಇಂದಿನ ದಿನಗಳಲ್ಲಿ ಹೆಚ್ಚು ಬಯಸುತ್ತಿದೆ ಎಂದೂ ಅವರು ಹೇಳಿದರು. ಮಾದಾಪುರ ಕೊಡವ ಸಮಾಜದ ನೂತನ ಭವನ ಲೋಕಾಪ೯ಣೆ ಮಾಡಿ ಅವರು ಮಾತನಾಡಿದರು. ಎಲ್ಲರೂ ಆಧುನೀಕತೆಯತ್ತ ನಾಗಾಲೋಟದಲ್ಲಿ ಸಾಗುತ್ತಿರುವಾಗ ಕೊಡವರು ಮಾತ್ರ ತಮ್ಮ ಹಳೇ ಸಂಸ್ಕೃತಿಯ ಬುನಾದಿಯೊಂದಿಗೆ ಆಧುನೀಕತೆಯನ್ನೂ ಅಳವಡಿಸಿಕೊಂಡು ಪ್ರಬಲ ಮತ್ತು ಶ್ರೀಮಂತ ಸಂಸ್ಕೃತಿಯನ್ನು ಹೊಂದಿದ ಜನಾಂಗವಾಗಿದ್ದಾರೆ ಎಂದು ಶ್ಲಾಘಿಸಿದ ಬಸವರಾಜ ಬೊಮ್ಮಾಯಿ ಕೊಡವರ ಈ ಜೀವನ ಕ್ರಮ ಎಲ್ಲಾ ಸಮುದಾಯಕ್ಕೂ ಮಾದರಿಯಾಗಿದೆ ಎಂದರು. ತೀವ್ರ ರೀತಿಯಲ್ಲಿ ಬೆಳೆಯುತ್ತಾ ಸಾಗಿರುವ ನಮ್ಮ ನಾಗರೀಕತೆಯಲ್ಲಿ ಯಾವಾಗ ನಾವು…

Read More

ಮಡಿಕೇರಿ ಮೇ 5 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಡಿಕೇರಿಯ ಇಕ್ಷಾ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು. ಇಕ್ಷಾ ಆಸ್ಪತ್ರೆಯಲ್ಲಿ ನೇತ್ರ ತಜ್ಞ ಡಾ. ಅಜ್ಜಿನಿಕಂಡ ಚಿಣ್ಣಪ್ಪ ನೇತೃತ್ವದ ವೈದ್ಯಕೀಯ ತಂಡದವರು ಪತ್ರಕರ್ತರ ಕಣ್ಣಿನ ತಪಾಸಣೆ ನಡೆಸಿದರು. 25ಕ್ಕೂ ಹೆಚ್ಚು ಪತ್ರಕರ್ತರು ಶಿಬಿರದ ಪ್ರಯೋಜನ ಪಡೆದುಕೊಂಡರು. ಈ ಸಂದರ್ಭ ಮಾತನಾಡಿದ ಡಾ. ಚಿಣ್ಣಪ್ಪ, ಪ್ರತಿಯೊಬ್ಬರು ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಬೇಕು. ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಮೊಬೈಲ್ ಹಾಗೂ ಗಣಕಯಂತ್ರ ಬಳಕೆಯಿಂದ ದೃಷ್ಟಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಎಚ್ಚರಿಕೆ ಅತ್ಯವಶ್ಯಕ ಎಂದು ಸಲಹೆ ನೀಡಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್. ಸವಿತಾ ರೈ, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್, ಉಪಾಧ್ಯಕ್ಷ ನವೀನ್ ಸುವರ್ಣ, ಕುಶಾಲನಗರ ತಾಲೂಕು ಘಟಕ ಅಧ್ಯಕ್ಷ ಎಂ.ಎನ್.…

Read More

   ಮಡಿಕೇರಿ ಮೇ 5 NEWS DESK : ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪೊನ್ನಂಪೇಟೆಯಲ್ಲಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಪಟ್ಟಣದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಕಾರ್ಯಕರ್ತರು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ಪರ ಘೋಷಣೆಗಳನ್ನು ಕೂಗಿದರು. ಮುಂದಿನ ದಿನಗಳಲ್ಲಿ ದೇಶದ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್ ಕುಮಾರ್, ತಾಲ್ಲೂಕು ಕಾರ್ಯದರ್ಶಿ ಕೋಟೇರ ಕಿಶನ್ ಉತ್ತಪ್ಪ, ವಿರಾಜಪೇಟೆ ಮಂಡಲ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ಆಲೇಮಾಡ ಸುದೀಪ್, ಪ್ರಮುಖರಾದ ಚಿರಿಯಪಂಡ ರಾಜಾ ನಂಜಪ್ಪ, ಚಿಂಡಮಾಡ ರಕ್ಷಿತ್, ಮೂಕಳೇರ ಲಕ್ಷ್ಮಣ್, ಮೂಕಳೇರ ರಮೇಶ್, ಅಡ್ಡಂಡ ಪ್ರಕಾಶ್, ಎಸ್‍ಸಿ ಮೋರ್ಚಾದ ರಮೇಶ್, ಮಧು, ಕೊಟ್ಟಂಗಡ ಸಜನ್ ಪೂವಣ್ಣ, ರೇಖಾ ಶ್ರೀಧರ್, ಗಾಂಡಂಗಡ ಕೌಶಿಕ್ ದೇವಯ್ಯ, ಕೋಳೇರ ರಾಜ ಹಾಗೂ ಕಾರ್ಯಕರ್ತರು…

Read More