ಮಡಿಕೇರಿ ಡಿ.26 : 1935 ನೇ ಇಸವಿ ಮಾರ್ಚ್ 15 ರಂದು ಪಾಂಡಂಡ ಕುಟ್ಟಪ್ಪ ಅವರು ವಿರಾಜಪೇಟೆಯಲ್ಲಿ ಜನಿಸಿದರು. ಕರಡ ಶಾಲೆಯಲ್ಲಿ ವಿದ್ಯಾಭ್ಯಾಸವನ್ನು ಮುಗಿಸಿದರು. ಇವರ ಧರ್ಮಪತ್ನಿ ಅಮ್ಮಣಿಚಂಡ ಲೀಲಾ ಕುಟ್ಟಪ್ಪ. ಇವರ ಮಗಳು ಸುಮನ್ ಬಿದ್ದಾಟಂಡ ಪ್ರದೀಪ್ ಅವರನ್ನು, ಇನ್ನೊಬ್ಬಳು ಮಗಳು ಸುಚಿತ ಬಲ್ಲಚಂಡ ಸುಬ್ರಮಣಿ ಅವರನ್ನು ಹಾಗೂ ಅವರ ಮಗ ಬೋಪಣ್ಣ ನುಚ್ಚಿಮಣಿಯಂಡ ಜ್ಯೋತಿ ಅವರನ್ನು ಮದುವೆಯಾದರು. ಹಾಕಿಯಲ್ಲಿ ಬಹಳಷ್ಟು ಪ್ರೀತಿ ಹೊಂದಿದ್ದ ಇವರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನೌಕರಿಗೆ ಸೇರಿದರು. ಅತಿ ಉನ್ನತ ತೀರ್ಪುಗಾರರಾಗಿ ಹೊರಹೊಮ್ಮಿದರು ಹಾಗೂ ಉನ್ನತ ಅಧಿಕಾರಿಯಾಗಿ ನಿವೃತ್ತಿ ಹೊಂದಿದರು. 1997ರಲ್ಲಿ ಕರಡದಲ್ಲಿ ಕೌಟಂಬಿಕ ಹಾಕಿ ಹಬ್ಬವನ್ನು ಆಯೋಜಿಸಬೇಕೆಂಬ ಚಿಂತನೆಯನ್ನು ತನ್ನ ಸಹೋದರ ಹಾಗೂ ಗ್ರಾಮಸ್ಥರೋಡನೆ ಚರ್ಚಿಸಿ, 60 ಕುಟುಂಬಗಳನ್ನು ಒಳಗೊಂಡ ಕೌಟುಂಬಿಕ ಹಾಕಿಯನ್ನು ಪ್ರಥಮವಾಗಿ ಪ್ರಾರಂಭಿಸಿದರು. *ಉದ್ದೇಶ* ಗ್ರಾಮದಲ್ಲಿ ಎಲ್ಲರೂ ಒಂದೆಡೆ ಸೇರುವಂತೆ, ಮಹಿಳೆಯರಿಗೆ ಸಮಾನವಾದ ಹಕ್ಕು, ಕೊಡಗಿನ ಆಚಾರ, ವಿಚಾರ, ಪದ್ಧತಿ, ಪರಂಪರೆಯನ್ನು ಕಾಪಾಡುವ, ವಧು-ವರರನ್ನು ನೋಡುವ, ಸಾಂಪ್ರದಾಯಿಕ ಕ್ರೀಡೆಯನ್ನು…
ಲೇಖಕ: admin
ಮಡಿಕೇರಿ ಡಿ.26 NEWS DESK : ಕೊಡಗು ಜಿಲ್ಲಾ ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ಮುಖಂಡರುಗಳ ನಿಯೋಗ ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿ ಮಾಡಿ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಿದರು. ಮೈಸೂರಿನ ಸಂಸದರ ಕಚೇರಿಯಲ್ಲಿ ಭೇಟಿ ಮಾಡಿದ ಪಕ್ಷದ ಮುಖಂಡರು ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ಮಸೀದಿ, ಮದರಸ, ಕಬರ್ ಸ್ಥಾನ ಹಾಗೂ ಸಮುದಾಯದ ಭವನಗಳಿಗೆ ಮೂಲ ಸೌಕರ್ಯ ಒದಗಿಸಲು ಹಾಗೂ ಅಲ್ಪಸಂಖ್ಯಾತ ಸಮುದಾಯದವರು ಹೆಚ್ಚಾಗಿ ವಾಸವಿರುವ ಭಾಗಗಳಿಗೆ ರಸ್ತೆ, ನೀರು ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಲು, ವಿಶೇಷ ಯೋಜನೆಯನ್ನು ರೂಪಿಸಲು ಹಾಗೂ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಲು ಮನವಿ ಮಾಡಿದರು. ನಿಯೋಗದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಶ್ರಫ್ ಹಾಕತ್ತೂರು, ಕುಶಾಲನಗರ ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಿಯಾಬುದ್ದೀನ್, ವಿರಾಜಪೇಟೆ ತಾಲೂಕು ಯುವ ಘಟಕದ ಅಧ್ಯಕ್ಷ ಸೈಫುದ್ದೀನ್ ಜಾಮಿಯಾಳ ,ಮೈಸೂರು ಜಿಲ್ಲಾ ಅಲ್ಪಸಂಖ್ಯಾತ ಘಟಕ ಕಾರ್ಯದರ್ಶಿಹಬಿದ್ ಹುಸೈನ್ ಸೇರಿದಂತೆ ಪಕ್ಷದ ಪ್ರಮುಖರು ಹಾಜರಿದ್ದರು.
ನವದೆಹಲಿ ಡಿ.26 NEWS DESK : ಕೇಂದ್ರ ರೈಲ್ವೆ ಸಚಿವಾಲಯವು ಡಿಸೆಂಬರ್ 21ರಂದು ಘೋಷಿಸಿದ್ದ ರೈಲು ಟಿಕೆಟ್ ದರ ಏರಿಕೆ ಇಂದಿನಿಂದ (ಶುಕ್ರವಾರ) ಜಾರಿಗೆ ಬಂದಿದೆ. 215 ಕಿಲೋಮೀಟರ್ಗಿಂತ ಹೆಚ್ಚು ದೂರದ ಪ್ರಯಾಣಗಳಿಗೆ ಅನ್ವಯವಾಗುವಂತೆ ಈ ಹೊಸ ದರವನ್ನು ಜಾರಿಗೊಳಿಸಲಾಗಿದೆ. ಸಾಮಾನ್ಯ (ಆರ್ಡಿನರಿ) ರೈಲುಗಳಲ್ಲಿ ಪ್ರತಿ ಕಿಲೋಮೀಟರ್ಗೆ 1 ಪೈಸೆ, ಹಾಗೂ ಎಸಿ ಮತ್ತು ಎಸಿ ಇಲ್ಲದ ಮೇಲ್ ಮತ್ತು ಎಕ್ಸ್ಪ್ರೆಸ್ ರೈಲುಗಳಲ್ಲಿ ಪ್ರತಿ ಕಿಲೋಮೀಟರ್ಗೆ 2 ಪೈಸೆಯಷ್ಟು ದರ ಹೆಚ್ಚಳ ಮಾಡಲಾಗಿದೆ. ಈ ದರ ಪರಿಷ್ಕರಣೆ ಅಲ್ಪ ಪ್ರಮಾಣದ ಏರಿಕೆಯಾಗಿದ್ದು, ಸಾಮಾನ್ಯ ಪ್ರಯಾಣಿಕರ ಮೇಲೆ ಅತಿಯಾದ ಹೊರೆ ಆಗದಂತೆ ನೋಡಿಕೊಳ್ಳಲಾಗಿದೆ ಎಂದು ರೈಲ್ವೆ ಸಚಿವಾಲಯ ಸ್ಪಷ್ಟಪಡಿಸಿದೆ.
ಮಡಿಕೇರಿ ಡಿ.26 NEWS DESK : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಲಾರಿ ಮತ್ತು ಸ್ಲೀಪರ್ ಕೋಚ್ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನಗೊಂಡಿರುವ ಘಟನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಟ್ರಕ್ ನಡುವೆ, ಚಿತ್ರದುರ್ಗದ ಹಿರಿಯೂರು ಬಳಿ ಅಪಘಾತ ಸಂಭವಿಸಿ, ಹಲವು ಪ್ರಯಾಣಿಕರು ಸಜೀವ ದಹನಗೊಂಡಿದ್ದು, ಉಳಿದವರು ಗಾಯಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ ಅವರ ಕುಟುಂಬ ವರ್ಗದವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ಹೊಸದಿಲ್ಲಿ ಡಿ.26 NEWS DESK : ವಿಳಂಬ ಶುಲ್ಕವನ್ನು ಪಾವತಿಸದ ಮತ್ತು ಆಧಾರ್ ಕಾರ್ಡ್ನ್ನು ತಮ್ಮ ಪಾನ್ ಕಾರ್ಡ್ ನೊಂದಿಗೆ ಜೋಡಣೆ ಮಾಡದವರಿಗೆ ಆ ಕಾರ್ಯವನ್ನು ಮುಗಿಸಲು ಡಿ.31 ಕೊನೆಯ ದಿನಾಂಕವಾಗಿದೆ ಮತ್ತು ಅಷ್ಟರೊಳಗೆ ಆಧಾರ್ ನೊಂದಿಗೆ ಜೋಡಣೆಯಾಗಿರದ ಪಾನ್ ಕಾರ್ಡ್ ಗಳು ನಿಷ್ಕ್ರಿಯಗೊಳ್ಳಲಿವೆ ಎಂದು ಆದಾಯ ತೆರಿಗೆ ಇಲಾಖೆಯು ಎಚ್ಚರಿಕೆ ನೀಡಿದೆ. ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳುವ ಅಪಾಯದ ಜೊತೆಗೆ ಅಂತಹವರು ಪಾನ್ ಕಾರ್ಡ್ಗಳ ಬಳಕೆಯನ್ನೊಳಗೊಂಡಿರುವ ಸೇವೆಗಳ ಅಲಭ್ಯತೆಯ ಸಂಭಾವ್ಯ ಅಪಾಯವನ್ನೂ ಎದುರಿಸಬೇಕಾಗಬಹುದು. ಜುಲೈ 1,2017ರಂದು ಅಥವಾ ಅದಕ್ಕೂ ಮುನ್ನ ಪಾನ್ ಕಾರ್ಡ್ ಪಡೆದಿರುವರು ಅದನ್ನು ಆಧಾರ್ ಜೊತೆ ಜೋಡಣೆ ಮಾಡುವುದು ಕಡ್ಡಾಯವಾಗಿದೆ. ಆಧಾರ್ ಜೋಡಣೆ ಸೇವೆಯು ಇ-ಫೈಲಿಂಗ್ ಪೋರ್ಟಲ್ ನಲ್ಲಿ ಲಭ್ಯವಿದೆ ಎಂದು ಇಲಾಖೆಯು ತಿಳಿಸಿದೆ. ಹೊಸ ಪಾನ್ ಕಾರ್ಡ್ ಅರ್ಜಿದಾರರಿಗೆ ಆಧಾರ್ ಆಧರಿತ ಪರಿಶೀಲನೆಯನ್ನು ನಿಯಮಗಳು ಕಡ್ಡಾಯಗೊಳಿಸಿವೆ.
ನಾಪೋಕ್ಲು ಡಿ.26 NEWS DESK : ಆಕ್ಸ್ಫರ್ಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರತಿಷ್ಠಿತ ಫ್ಯಾಕ್ಸ್ (FACEX) ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುತ್ತಮ ಸಾಧನೆ ಮಾಡುವುದರ ಮೂಲಕ ಕೀರ್ತಿ ತಂದಿದ್ದಾರೆ. ಕಕ್ಕಬೆ ಗ್ರಾಮ ಪಂಚಾಯತಿಯ ಕುಂಜಿಲ ಗ್ರಾಮದ ಆಕ್ಸ್ಫರ್ಡ್ ಇಂಗ್ಲಿಷ್ ಮೀಡಿಯಂ ಶಾಲೆಯ ಮೂವರು ವಿದ್ಯಾರ್ಥಿಗಳು ಕೋಝಿಕೋಡ್ನ ಟ್ರೇಡ್ ಸೆಂಟರ್ನಲ್ಲಿ ನಡೆದ ಪ್ರತಿಷ್ಠಿತ ಫ್ಯಾಕ್ಸ್ (FACEX) ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಸ್ಪರ್ಧೆಯಲ್ಲಿ ರಾಜ್ಯಾದ್ಯಂತ ಸುಮಾರು 2,000 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಠಿಣವಾದ ಆರಂಭಿಕ ಸುತ್ತುಗಳ ನಂತರ ಕೇವಲ 70 ವಿದ್ಯಾರ್ಥಿಗಳು ಮಾತ್ರ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದರು. ಇವರಲ್ಲಿ ಆಕ್ಸ್ಫರ್ಡ್ ಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿನಿಯರಾದ ಹನ್ನತ್ ಅಬ್ದುಲ್ ಅಜೀಜ್, ಆಯಿಷಾ ಕೆ.ಮೊಹಮ್ಮದ್ ಮತ್ತು ಸಫಾ ಕೆ.ಮಜಿದ್ ಫೈನಲಿಸ್ಟ್ಗಳಾಗಿ ಹೊರಹೊಮ್ಮಿರುವುದು ವಿಶೇಷ. ಅಂತಿಮ ಹಂತದ ಸ್ಪರ್ಧೆಯಲ್ಲಿ ದೇಶದ ವಿವಿಧ ಭಾಗಗಳ ಪ್ರತಿಭೆಗಳು ಭಾಗವಹಿಸಿದ್ದವು. ಇದರಲ್ಲಿ…
ಮಡಿಕೇರಿ NEWS DESK ಡಿ.25 : ವ್ಯಕ್ತಿತ್ವ ವಿಕಸನಕ್ಕೆ ಶಿಕ್ಷಣದೊಂದಿಗೆ ಸೃಜನಾತ್ಮಕ ಬೆಳವಣಿಗೆ ಅಗತ್ಯವಾಗಿದೆ. ಇದಕ್ಕಾಗಿ ಕ್ರೀಡೆ ಮತ್ತು ವಿವಿಧ ಕಲಾ ಪ್ರಕಾರಗಳಲ್ಲಿ ತೊಡಗಿಸಿಕೊಳ್ಳುವುದು ಬಹುಮುಖ್ಯವಾಗಿದೆ ಎಂದು ಸೋಮವಾರಪೇಟೆ ತಾಲ್ಲೂಕು ಮೀನುಗಾರಿಕಾ ಇಲಾಖಾ ಸಹಾಯಕ ನಿರ್ದೇಶಕರಾದ ಮಿಲನ ಭರತ್ ತಿಳಿಸಿದ್ದಾರೆ. ಶತಮಾನೋತ್ಸವ ಸಂಭ್ರಮದಲ್ಲಿರುವ ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ‘ಶತ ಸಂಭ್ರಮ’ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸೃಜನಾತ್ಮಕವಾದ ಕ್ರೀಡೆ ಮತ್ತು ಸಾಂಸ್ಕೃತಿಕ ಕಲಾ ಪ್ರಕಾರಗಳು ಪ್ರತಿಯೊಬ್ಬರನ್ನು ಸಮಾಜಕ್ಕೆ ತೆರೆದುಕೊಳ್ಳುವುದಕ್ಕೆ ಅನುವು ಮಾಡಿಕೊಡುತ್ತದೆ. ಈ ಹಿಂದೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪಠ್ಯೇತರವೆಂದು ಕರೆಯಲಾಗುತ್ತಿತ್ತು. ಆದರೆ ಪ್ರಸ್ತುತ ಇವುಗಳು ಶಿಕ್ಷಣಕ್ಕೆ ಪೂರಕವಾದ ಮತ್ತು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವ ಅವಿಭಾಜ್ಯ ಅಂಗವಾಗಿ ಮಾರ್ಪಟ್ಟಿದೆ. ಕ್ರೀಡೆ ಮತ್ತು ಸಾಂಸ್ಕೃತಿಕವಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದೆ ಕೇವಲ ಶಿಕ್ಷಣಕ್ಕೆ ಮಾತ್ರ ಒತ್ತು ನೀಡುವ ಶೇ.80 ರಷ್ಟು ಮಕ್ಕಳು ಉದ್ಯೋಗದ ಅರ್ಹತೆಯನ್ನು…
ಮಡಿಕೇರಿ NEWS DESK ಡಿ.25 : ಮಡಿಕೇರಿಯ ಕೊಡಗು ಗೌಡ ಸಮಾಜದ ಮೂರು ವರ್ಷಗಳ ಅವಧಿಯ ಆಡಳಿತ ಮಂಡಳಿಗೆ 15 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದಂಬೆಕೋಡಿ ಆನಂದ, ಸೂರ್ತಲೆ ಸೋಮಣ್ಣ, ಹುದೇರಿ ರಾಜೇಂದ್ರ, ಕೊಲ್ಯದ ಗಿರೀಶ್, ಮಂದ್ರಿರ ತೇಜಸ್, ಪುಳಕಂಡ ಸಂದೀಪ್, ಕೊಂಬನ ಪ್ರವೀಣ್, ಪೊನ್ನಚ್ಚನ ಮಧು, ತೋಟಂಬೈಲು ಅನಂತ ಕುಮಾರ್, ಪೈಕೇರ ಮನೋಹರ ಮಾದಪ್ಪ, ಕಾಳೇರಮ್ಮನ ನಂದಕುಮಾರ್, ಆಮೆ ಸೀತಾರಾಮ್, ಪೇರಿಯನ ಘನ ಶ್ಯಾಮ್, ಮಹಿಳಾ ತಂಡದಿಂದ ಚೊಕ್ಕಾಡಿ ಪ್ರೇಮ ರಾಘವಯ್ಯ ಹಾಗೂ ಮೂಲೆಮಜಲು ಅಮಿತಾ ಆಯ್ಕೆಯಾದರು. ಗೌಡ ಸಮಾಜದ ಸಭಾಂಗಣದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಯಾಗಿ ಪಾಣತ್ತಲೆ ಪಳಂಗಪ್ಪ ಕಾರ್ಯನಿರ್ವಹಿಸಿದರೆ ಕೊಡಗು ಗೌಡ ಸಮಾಜಗಳ ಒಕ್ಕೂಟ ಸಹಕಾರ ನೀಡಿತು. ನಿಕಟಪೂರ್ವ ಅಧ್ಯಕ್ಷ ಪೇರಿಯನ ಜಯಾನಂದ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ, ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು. ನಂತರ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಅವರು ನಮ್ಮ…
ಮಡಿಕೇರಿ NEWS DESK ಡಿ.25 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ವಾಣಿಜ್ಯ ಬೆಳೆಗಳಾದ ಕಾಫಿ ಮತ್ತು ಕಾಳು ಮೆಣಸು ಕಳವು ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಸೂಚನೆ ನೀಡಿದ್ದಾರೆ. ಕೊಯ್ಲು ಮಾಡಿರುವ ಕಾಫಿ ಮತ್ತು ಕಾಳು ಮೆಣಸನ್ನು ಸಂಗ್ರಹ ಮಾಡಿರುವ ಸ್ಥಳಗಳಿಂದ ಕಳವು ಮಾಡಿರುವ ಕುರಿತು ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿನ ಕಾಫಿ ಮತ್ತು ಕಾಳು ಮೆಣಸು ವ್ಯಾಪಾರ ಮಾಡುವವರೊಂದಿಗೆ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಹಾಗೂ ಕಾಫಿ ಮತ್ತು ಕಾಳು ಮೆಣಸು ವ್ಯಾಪಾರಸ್ಥರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸುವಂತೆ ಸ್ಥಳೀಯ ಪೊಲೀಸ್ ಠಾಣಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. ವ್ಯಾಪಾರಸ್ಥರು ಕಾಫಿ ಮತ್ತು ಕಾಳು ಮೆಣಸು ಖರೀದಿ ಮಾಡುವ ಸಂದರ್ಭ ಮಾರಾಟ ಮಾಡುವವರ ಸಂಪೂರ್ಣ ಮಾಹಿತಿ (ಹೆಸರು, ವಿಳಾಸ, ಮೊಬೈಲ್ ಸಂಖ್ಯೆ. ವಹಿವಾಟಿನ ವಿವರ ತೂಕ ಮತ್ತು ಮೊತ್ತ) ಯನ್ನು ಸಂಗ್ರಹಿಸಿ…
ಮಡಿಕೇರಿ ಡಿ.25 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ಗೌಡ ವಿಕಾಸ ವೇದಿಕೆ (ಸಾಮಾಜಿಕ ಮಾಧ್ಯಮ ವಿಭಾಗ) ಸಹಕಾರದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಗರದ ಗಾಂಧಿ ಭವನದಲ್ಲಿ ನಡೆದ ಅರೆಭಾಷೆ ‘ರಸಪ್ರಶ್ನೆ ಸ್ಪರ್ಧಾ’ ಕಾರ್ಯಕ್ರಮ ನಡೆಯಿತು. ಅರೆಭಾಷೆಯಲ್ಲಿ ಹಲವು ಪ್ರಶ್ನೆ ಕೇಳುವ ಮೂಲಕ ಅರೆಭಾಷೆ ಮತ್ತು ಕನ್ನಡದ ಶಬ್ದಕೋಶದ ಪದಗಳನ್ನು ಉತ್ತರಿಸುವ ಮೂಲಕ ಮೂವರು ವಿದ್ಯಾರ್ಥಿಗಳು ನಗದು ಬಹುಮಾನ ಪಡೆದರು. ಅರೆಭಾಷೆ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮದಲ್ಲಿ ದೂರದ ಬೆಂಗಳೂರು, ಕರಿಕೆ, ಸುಳ್ಯ, ಪೆರಾಜೆ, ಸಂಪಾಜೆ, ಕೊಯನಾಡು, ಭಾಗಮಂಡಲ. ಚೇರಂಬಾಣೆ, ಮೂರ್ನಾಡು, ಮದೆನಾಡು, ಮೇಕೇರಿ, ಮಡಿಕೇರಿಯ ವಿವಿಧ ಶಾಲೆಗಳಿಂದ 35 ವಿದ್ಯಾರ್ಥಿಗಳು ಭಾಗವಹಿಸಿ ಅರೆಭಾಷೆ ರಸಪ್ರಶ್ನೆ ಪರೀಕ್ಷೆ ಬರೆದರು. ಇವರಲ್ಲಿ 8 ವಿದ್ಯಾರ್ಥಿಗಳು 40 ಅಂಕಕ್ಕೆ 38 ಅಂಕವನ್ನು ಇಬ್ಬರು, 37 ಅಂಕವನ್ನು ಮೂವರು ಮತ್ತು 35 ಅಂಕವನ್ನು ಇಬ್ಬರು ಪಡೆದು ರಸಪ್ರಶ್ನೆ ಸುತ್ತಿಗೆ ಆಯ್ಕೆಯಾಗಿದ್ದರು. ಇವರಿಗೆ ‘ಥಟ್’ ಅಂತ ಹೇಳಿ ಕಾರ್ಯಕ್ರಮದ ರೀತಿ ಅರೆಭಾಷೆಯಲ್ಲಿ…






