ಲೇಖಕ: admin

ಮಡಿಕೇರಿ ಆ.12 NEWS DESK : ಸೋಮವಾರಪೇಟೆ ತಾಲ್ಲೂಕಿನ ನಗರೂರು ನಿವಾಸಿ, ಕಾಫಿ ಬೆಳೆಗಾರ ಎಸ್.ಎಸ್.ಬಸವರಾಜ್ (78) ಇಂದು ಬೆಳಗಿನ ಜಾವ ನಿಧಾನರಾದರು. ಮೃತರ ಅಂತ್ಯಕ್ರಿಯೆ ಸಂಜೆ 4 ಗಂಟೆಗೆ ಸೋಮವಾರಪೇಟೆಯ ವೀರಶೈವ ರುದ್ರ ಭೂಮಿಯಲ್ಲಿ ನೆರವೇರಲಿದೆ. ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ.

Read More

ಮಡಿಕೇರಿ ಆ.12 NEWS DESK : ಸುಂಟಿಕೊಪ್ಪ ನಾರ್ಗಾಣೆ ಗ್ರಾಮದ ಶ್ರೀದೇವಿ ಬಡಾವಣೆಯ ವಿನಾಯಕ ಸ್ಟೋರ್ಸ್ ಮಾಲೀಕರಾದ ಪಟ್ಟಮುತ್ತು ಅವರ ಪುತ್ರ ಮದನ್ ಕುಮಾರ್ (20) ಅನಾರೋಗ್ಯದಿಂದ ಮೈಸೂರು ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು. ಮದನ್ ಕುಮಾರ್ ಮೈಸೂರು ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿದ್ದರು.

Read More

ನಾಪೋಕ್ಲು ಆ.12 NEWS DESK : ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮೂರ್ನಾಡು ಗ್ರಾ.ಪಂ ಸಿಬ್ಬಂದಿಗಳು ಹಾಗೂ ಸ್ಥಳೀಯ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕ ಸಂಘದ ಸದಸ್ಯರು ಮೂರ್ನಾಡುವಿನಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದರು. ಮೂರ್ನಾಡು ಪ್ರಾಥಮಿಕ ಶಾಲೆಗೆ ಹೋಗುವ ಮಾರ್ಗ ಮತ್ತು ಶಾಲೆಯ ಆವರಣದಲ್ಲಿದ್ದ ಗಿಡಗಂಟಿಗಳನ್ನು ಕಡಿದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಶುಚಿಗೊಳಸಿದರು. ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು ಆ.12 NEWS DESK : ನಾಪೋಕ್ಲು ಪೊಲೀಸ್ ಠಾಣೆಯ ಕ್ರೈಂ ಬ್ರಾಂಚಿನ ಠಾಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದುಗ್ಗಳ ಶ್ರೀಧರ (ಬಾಚಿ ಗದ್ದೆ) ಜುಲೈ 31ಕ್ಕೆ ಸೇವೆಯಿಂದ ನಿವೃತ್ತಿ ಹೊಂದಿದ್ದು, ಅವರನ್ನು ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ನಿವೃತ್ತ ದುಗ್ಗಳ ಶ್ರೀಧರ ಹಾಗೂ ಪತ್ನಿ ಪಾರ್ವತಿ ದಂಪತಿಗಳನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು. ಸಂಪಾಜೆ ಗ್ರಾಮದವರಾದ ದುಗ್ಗಳ ಶ್ರೀಧರ್, 1981 ರಿಂದ 1991 ರವರೆಗೆ ದೂರವಾಣಿ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಬಳಿಕ ಪೊಲೀಸ್ ಇಲಾಖೆ ಸೇರಿ ವಿರಾಜಪೇಟೆಯ ಟೌನ್ ಸ್ಟೇಷನ್ ನಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಆರು ವರ್ಷಗಳ ಕಾಲ ಸೇವೆ ಸಲ್ಲಿಸಿದರು. ಬಳಿಕ ನಾಪೋಕ್ಲು ಪೋಲಿಸ್ ಠಾಣೆಯಲ್ಲಿ ಆರು ವರ್ಷ, ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರು ವರ್ಷ, ಹೆಡ್ ಕಾನ್ಸ್ಟೇಬಲ್ ಆಗಿ ಮಡಿಕೇರಿಯ ಗ್ರಾಮೀಣ ಸ್ಟೇಷನ್ ನಲ್ಲಿ ಆರು ವರ್ಷ ಸೇವೆ…

Read More

ನಾಪೋಕ್ಲು ಆ.12 NEWS DESK : ಅಂತಾರಾಷ್ಟ್ರೀಯ ಹಾಕಿಪಟು ಹಾಗೂ ಒಲಂಪಿಯನ್, ಪ್ರಸ್ತುತ ಬೆಂಗಳೂರಿನಲ್ಲಿ ಹಾಕಿ ಕರ್ನಾಟಕ ಸಂಸ್ಥೆಯ ಜನರಲ್ ಸೆಕ್ರೆಟರಿ ಮತ್ತು ಬೆಂಗಳೂರಿನ ಖೇಲೋ ಇಂಡಿಯಾದ ಪರ್ಫಾರ್ಮೆನ್ಸ್ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಅಂಜಪರವಂಡ ಸುಬ್ಬಯ್ಯ ಹಾಕಿ ಕ್ರೀಡೆ ಅಭಿವೃದ್ಧಿಗೆ ಉತ್ತೇಜನ ನೀಡುವ ಸಲುವಾಗಿ ಮೂರ್ನಾಡು ವಿದ್ಯಾಸಂಸ್ಥೆಗೆ 30 ಹಾಕಿ ಸ್ಟಿಕ್, 30 ಹಾಕಿ ಬಾಲ್ ಹಾಗೂ ಗೋಲ್ ಕೀಪರ್ ಕಿಟ್ ಸೇರಿ ಒಟ್ಟು 50,000 ರೂ,ಮೌಲ್ಯದ ಹಾಕಿ ಕ್ರೀಡಾ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಿದರು. ಡಾ.ಅಂಜಪರವಂಡ ಸುಬ್ಬಯ್ಯ ಮಾತನಾಡಿ, ಹಾಕಿ ಕ್ರೀಡೆಗೆ ಮೂರ್ನಾಡು ವಿದ್ಯಾ ಸಂಸ್ಥೆಯ ಕೊಡುಗೆ ಅಪಾರವಾಗಿದ್ದು, ಕ್ರೀಡೆಯನ್ನು ಉತ್ತೇಜಿಸಲು ಸಂಸ್ಥೆಗೆ ಇನ್ನೂ ಮುಂದಿನ ದಿನಗಳಲ್ಲಿ ತಮ್ಮಿಂದಾಗುವ ಕೊಡುಗೆಯನ್ನು ನೀಡುವ ಭರವಸೆ ನೀಡಿದರು. ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಡಾ.ಚೌರಿರ ಜಗತ್ ತಿಮ್ಮಯ್ಯ ಕೊಡುಗೆಯನ್ನು ಸ್ವೀಕರಿಸಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಯಶಸ್ಸನ್ನು ಸಾಧಿಸಿ ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಲು ದಾನಿಗಳು ನೀಡಿದ ಕೊಡುಗೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು. ಈ ಸಂದರ್ಭ ಮೂರ್ನಾಡು ವಿದ್ಯಾ ಸಂಸ್ಥೆಯ…

Read More

ಬೆಂಗಳೂರು ಆ.12 NEWS DESK : ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ವಿಶ್ವ ಆನೆ ದಿನದಂದು ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ಸಂದರ್ಭ ಡಿಸಿಎಂ ಡಿ.ಕೆ.ಶಿವಕುಮಾರ್, ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಕೇರಳ, ತಮಿಳುನಾಡು, ತೆಲಂಗಾಣ ಮತ್ತು ಜಾರ್ಖಂಡ್ ಅರಣ್ಯ ಸಚಿವರು ಹಾಗೂ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Read More

ಮಡಿಕೇರಿ ಆ.12 NEWS DESK : ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಪತ್ರಕರ್ತರು ಕಾರ್ಯನಿರ್ವಹಿಸಿದರೆ ಸಮಾಜದಲ್ಲಿ ಸಕರಾತ್ಮಕ ಬದಲಾವಣೆ ತರಲು ಸಾಧ್ಯವಿದೆ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಾನವೀಯ ತುಡಿಗಳಿಗೆ ಸ್ಪಂದಿಸುವ ಗುಣವನ್ನು ಪತ್ರಕರ್ತರು ಹೊಂದಿರಬೇಕು. ಮಾನವೀಯ ಸಂಬಂಧಗಳನ್ನು ಬೆಳದುಕೊಂಡು ಕೆಲಸ ಮಾಡಬೇಕಾದ ಪರಿಸ್ಥಿತಿ ಇಂದಿನ ಕಾಲಘಟ್ಟದಲ್ಲಿ ಬಂದಿದೆ. ಸಮಾಜದ ಕಷ್ಟ-ಕಾರ್ಪಣ್ಯಗಳಿಗೆ ಮಿಡಿಯಬೇಕಾದರೆ ನಮ್ಮಲ್ಲಿ ಮಾನವೀಯ ಅಂತಕರಣ ಇದ್ದರೆ ಮಾತ್ರ ಸಾಧ್ಯ. ಕೇವಲ ವರದಿಗಾರಿಗೆ ಮಾತ್ರ ಪತ್ರಕರ್ತರ ಕೆಲಸವಲ್ಲ. ಜನರ ಕಣ್ಣೀರಿಗೆ ಸ್ಪಂದಿಸುವ, ಅನ್ಯಾಯಕ್ಕೆ ಒಳಗಾದವರಿಗೆ ಧ್ವನಿಯಾಗುವ ಅವಕಾಶ ಮಾಧ್ಯಮ ಕ್ಷೇತ್ರದಲ್ಲಿ ದುಡಿಯುವ ಪತ್ರಕರ್ತರಿಗಿದೆ. ಇದರ ಸದ್ಬಳಕೆ ಆಗಬೇಕು ಎಂದರು. ಕೋವಿಡ್‍ನಿಂದ ಅನೇಕ ಪತ್ರಕರ್ತರು ಪಾಣ ಕಳೆದುಕೊಂಡರು. ಅವರ ಕುಟುಂಬಕ್ಕೆ ಸರಕಾರದಿಂದ ರೂ.5 ಲಕ್ಷ ಪರಿಹಾರ ಕೊಡಿಸುವ ಕೆಲಸ ಸಂಘಟನೆಯಿಂದಾಗಿದೆ.…

Read More

ಜೈಪುರ ಆ.12 NEWS DESK : ರಾಜಸ್ಥಾನದಾದ್ಯಂತ ಭಾರೀ ಮಳೆಯಾಗಿದ್ದು, ನಿನ್ನೆ ಭಾನುವಾರ 15 ಜನರ ದುರಂತ ಸಾವಿಗೆ ಕಾರಣವಾಗಿದೆ. ವಿವಿಧ ಜಿಲ್ಲೆಗಳಲ್ಲಿ ಸಾವು ಸಂಭವಿಸಿದೆ. ಭರತ್‌ಪುರದಲ್ಲಿ ಏಳು, ಜುಂಜುನುದಲ್ಲಿ ಮೂರು, ಕರೌಲಿಯಲ್ಲಿ ಮೂರು, ಜೋಧ್‌ಪುರದಲ್ಲಿ ಒಬ್ಬರು ಮತ್ತು ಬನ್ಸ್ವಾರಾದಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಮಾಹಿತಿ ಸಿಕ್ಕಿದೆ. ಪ್ರತ್ಯೇಕ ಘಟನೆಗಳಲ್ಲಿ, ಜೈಪುರ ಸಮೀಪದ ಕನೋಟಾ ಅಣೆಕಟ್ಟಿನಲ್ಲಿ ಐವರು ಯುವಕರು ಮುಳುಗಿ ಮೃತಪಟ್ಟಿದ್ದು, ಪತ್ತೆಗಾಗಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.ಭರತ್‌ಪುರದಲ್ಲಿ 14 ರಿಂದ 22 ವರ್ಷದೊಳಗಿನ ಏಳು ಯುವಕರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿರುವ ಭೀಕರ ಮಳೆ ಸಂಬಂಧಿತ ದುರಂತ ಸಂಭವಿಸಿದೆ.

Read More

ಕುಶಾಲನಗರ NEWS DESK ಆ.11 : ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಗ್ರೀನ್ ಅಂಡ್ ಗ್ರೀನ್ ಎಂಬ ಅಂತರರಾಷ್ಟ್ರೀಯಾ ಸಂಸ್ಥೆಯು ಕೊಡಮಾಡುವ ಗ್ರೀನ್ ಅವಾರ್ಡ್ ಪ್ರಶಸ್ತಿಗೆ ಭಾಜನವಾಗಿದೆ. ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಹಳ್ಳಿಯ ಗಿರಿಜನರ ಹಾಡಿಗೆ ಹೊಂದಿಕೊಂಡಂತೆ ಇರುವ ಸುಮಾರು 10 ಎಕರೆ ವಿಶಾಲ ಪ್ರದೇಶದಲ್ಲಿ ಕಳೆದ ಎರಡೂವರೆ ದಶಕಗಳ ಹಿಂದೆ ಆರಂಭವಾದ ಈ ವಸತಿ ಶಾಲೆಯಲ್ಲಿ ಗ್ರಾಮೀಣ ಪ್ರದೇಶಗಳ 250 ಮಂದಿ ಬಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಾ ಬಂದಿದ್ದು ಇಲ್ಲಿಯವರೆಗೆ ಹತ್ತಾರು ಸಾವಿರ ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಉಜ್ವಲವಾದ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ಶಾಲೆಯಲ್ಲಿನ ವಿಶಾಲ ಪ್ರದೇಶವನ್ನು ಹಸಿರು ಪರಿಸರವಾಗಿ ರೂಪಿಸುವ ಪಣ ತೊಟ್ಟ ಶಾಲಾ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಶಾಲಾ ಪರಿಸರದಲ್ಲಿ ನೂರಾರು ಸಂಖ್ಯೆಯ ಪರಿಸರ ಸ್ನೇಹಿ ಗಿಡಗಳನ್ನು ನೆಟ್ಟು ಪೋಷಿಸಿ ಮರಗಳನ್ನಾಗಿಸಿರುವುದು ಹಾಗೂ ಶಾಲೆಯ ಸ್ವಚ್ಛತೆ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಕಲಿಕೆ, ಪ್ರಾಂಶುಪಾಲರು ಹಾಗೂ ಬೋಧಕರಲ್ಲಿ ಅತ್ಯುತ್ತಮ ಹೊಂದಾಣಿಕೆ ಸೇರಿದಂತೆ ವಿವಿಧ ಆಯಾಮಗಳನ್ನು…

Read More

ಶ್ರೀಮಂಗಲ NEWS DESK ಆ.11 : ಜಬ್ಬೂಮಿ ಸಂಘಟನೆ, ರೂಟ್ಸ್ ಆಫ್ ಕೊಡಗು ಹಾಗೂ ವಿವಿಧ ಸಂಘಟನೆಗಳ ಜಂಟಿ ಆಶ್ರಯದಲ್ಲಿ “ಕೊಡಗಿನ ಕೃಷಿಯೊಂದಿಗೆ ಸಂಸ್ಕೃತಿ ಮಿಡಿತ ಹೊಂದಿದ್ದು, ಮರೆಯಾಗುತ್ತಿರುವ ಕೃಷಿ ಪರಂಪರೆ ಬಗ್ಗೆ ಅಭಿಮಾನ ಮೂಡಿಸಿ, ಉತ್ತೇಜಿಸಿ ಮತ್ತು ಕೊಡವ ಸಮುದಾಯಗಳ ನಡುವೆ ಬಾಂಧವ್ಯ ಬೆಸೆಯುವ ನಿಟ್ಟಿನಲ್ಲಿ ಆಯೋಜಿಸಿದ್ದ ಕೆಸರು ಗದ್ದೆ ಕ್ರೀಡಾಕೂಟ ಬಿಟ್ಟಂಗಾಲದಲ್ಲಿ ಸಂಭ್ರಮದಿಂದ ನಡೆಯಿತು. ಬಿಟ್ಟಂಗಾಲ ಗ್ರಾಮದ ನಾಯಡ ಕುಟುಂಬದ ಭತ್ತದ ಗದ್ದೆಯಲ್ಲಿ ಮುರುವಂಡ ಮಿಥುನ್ ಅಣ್ಣಯ್ಯ ಹಾಗೂ ಪೊನ್ನಕಚ್ಚಿರ ಪುನೀತ್ ಅವರ ಮೇಲುಸ್ತುವಾರಿಯ ಗದ್ದೆಯಲ್ಲಿ ನಡೆದ ಕ್ರೀಡಾಕೂಟದಲ್ಲಿ ನೂರಾರು ಕಿರಿಯರು, ಹಿರಿಯರು ಭಾಗವಹಿಸಿ, ಪ್ರೇಕ್ಷಕರ ಪ್ರೋತ್ಸಾಹದೊಂದಿಗೆ ಕೆಸರು ಗದ್ದೆಯಲ್ಲಿ ಎದ್ದು, ಬಿದ್ದು ಕ್ರೀಡಾ ಉತ್ಸಾಹ ಪ್ರದರ್ಶಿಸಿದರು. ನಾಟಿ ಗದ್ದೆಯ ಕ್ರೀಡಾ ಕೂಟದಲ್ಲಿ 6 ವರ್ಷದ ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರು ಭಾಗವಹಿಸಿ ಸಂಭ್ರಮಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಸಾಂಪ್ರದಾಯಿಕವಾಗಿ ಗೆಜ್ಜೆತಂಡ್ ಎದುರು ಪುಡಿಯೊಕ್ಕಡ ಹರೀಶ್ ಅವರ ಮೂಲಕ “ತಪ್ಪಡ್ಕ”ಕಟ್ಟಿ ಕಾರ್ಯಕ್ರಮದ ಯಶಸ್ಸು, ಕೊಡಗಿನ ಪ್ರಕೃತಿ, ಜೀವ ಜಲ, ಪರಂಪರೆಯ…

Read More