ಲೇಖಕ: admin

ಮಡಿಕೇರಿ ಆ.10 NEWS DESK : ಕನ್ನಡ ಜಾಣ-ಜಾಣೆಯರ ವೇದಿಕೆ ಬೆಂಗಳೂರು ಇವರ ಸಹಯೋಗದಲ್ಲಿ 2024ರ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಮೂರು ದಿನಗಳ ಪಿ.ಲಂಕೇಶ್ ಕೃತಿಗಳ ಅಧ್ಯಯನ ಶಿಬಿರ ನಡೆಸಲು ಉದ್ದೇಶಿಸಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 40 ವರ್ಷ ವಯಸ್ಸಿನ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್, 17 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ http://karnatakasahithyaacademy.org ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು ಇವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಮಡಿಕೇರಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಸಿಬ್ಬಂದಿಗಳನ್ನು ಕಚೇರಿ ವೇಳೆಯಲ್ಲಿ ಭೇಟಿ ಮಾಡಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ ಆ.10 NEWS DESK : ಸ್ಟಾಫ್ ಸೆಲೆಕ್ಷನ್ ಕಮಿಷನ್ ಭಾರತ ಸರ್ಕಾರ ಇವರು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡುವ ಶೀಘ್ರಲಿಪಿಗಾರರು ಗ್ರೇಡ್ ‘ಸಿ’ ಮತ್ತು ‘ಡಿ’ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್, 17 ಕೊನೆಯ ದಿನವಾಗಿದೆ. ವಿದ್ಯಾರ್ಹತೆ ಪಿಯುಸಿ ಅಥವಾ ತತ್ಸಮಾನ ಉತ್ತೀರ್ಣರಾಗಿ, ಶೀಘ್ರಲಿಪಿ ಮತ್ತು ಬೆರಳಚ್ಚು ಕೌಶಲ್ಯ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಯೋಮಿತಿ: ಸ್ಟೆನೋಗ್ರಾಫರ್ ಗ್ರೇಡ್ “ಸಿ” 01.08.2024ರಂತೆ 18 ರಿಂದ 30 ವರ್ಷಗಳು, ಸ್ಟೆನೋಗ್ರಾಫರ್ ಗ್ರೇಡ್ “ಡಿ “01.08.2024ರಂತೆ 18 ರಿಂದ 27 ವರ್ಷಗಳು, ಖಾಲಿ ಹುದ್ದೆಗಳ ಸಂಖ್ಯೆ: 2,006, ಶುಲ್ಕ ಪಾವತಿ ವಿಧಾನ: ಆನ್‍ಲೈನ್/ ನೆಟ್ ಬ್ಯಾಂಕಿಂಗ್ ಅಥವಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚಲನ್ ಮುಖಾಂತರ ಶುಲ್ಕ ಪಾವತಿ ಮಾಡಬಹುದಾಗಿದೆ. ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಪ್ರವರ್ಗ -2ಎ, 2ಬಿ, 3ಎ, 3ಬಿ, ಗೆ ಸೇರಿದ ಪುರುಷ ಅಭ್ಯರ್ಥಿಗಳಿಗೆ…

Read More

ಮೈಸೂರು NEWS DESK ಆ.9 : ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಮೈತ್ರಿ ಕೂಟ ನಡೆಸುತ್ತಿರುವ ಮೈಸೂರು ಚಲೋ 7ನೇ ದಿನದ ಪಾದಯಾತ್ರೆ ಇಂದು ಸಂಜೆ ಅರಮನೆ ನಗರಿ ಮೈಸೂರು ತಲುಪಿತು. ಆಗಸ್ಟ್ 10 ರ ಶನಿವಾರ ಮೈಸೂರಿನ ಮಹಾರಾಜ ಮೈದಾನದಲ್ಲಿ ಪಾದಯಾತ್ರೆಯ ಸಮಾರೋಪ ಸಮಾವೇಶ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿರೋಧ ಪಕ್ಷ ಉಪನಾಯಕ ಅರವಿಂದ್ ಬೆಲ್ಲದ್, ಮಾಜಿ ಉಪಮುಖ್ಯಮಂತ್ರಿಗಳಾದ ಡಾ ಸಿ.ಎನ್.ಅಶ್ವಥ್ ನಾರಾಯಣ್, ಸಂಸದ ಯುಧುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್  ಸದಸ್ಯ ಸಿ.ಟಿ.ರವಿ, ಮಾಜಿ ಸಚಿವ ಶ್ರೀರಾಮುಲು, ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕ ಸಿ.ಬಿ.ಸುರೇಶ್ ಬಾಬು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಸೋಮವಾರಪೇಟೆ NEWS DESK ಆ.9 : ಸೋಮವಾರಪೇಟೆ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಶುಕ್ರವಾರ ಶ್ರದ್ಧಾ ಭಕ್ತಿಯಿಂದ ನಾಗರಪಂಚಮಿ ಆಚರಿಸಲಾಯಿತು. ಇಲ್ಲಿನ ಶ್ರೀ ಮುತ್ತಪ್ಪ ಅಯ್ಯಪ್ಪ ದೇವಾಲಯದಲ್ಲಿ ಬೆಳಗ್ಗಿನಿಂದಲೇ ನಾಗರಬನದಲ್ಲಿ ವಿಶೇಷ ಪೂಜೆ ಅರ್ಚಕ ಮಣಿಕಂಠ ನಂಬೂದರಿ ನೇತೃತ್ವದಲ್ಲಿ ನಡೆಯಿತು. ನಾಗರ ಬನದಲ್ಲಿ ಹಾಲಭಿಷೇಕ, ಅರಶಿಣ, ಎಳನೀರು ಹಾಗೂ ಕುಂಕುಮ ಅಭಿಷೇಕ ಮತ್ತು ಮಹಾ ಮಂಗಳಾರತಿ ಮತ್ತು ದೀಪರಾಧನೆ ನಡೆಯಿತು ದೇವಾಲಯದಲ್ಲಿ ನಡೆದ ಪೂಜಾ ಕಾರ್ಯದಲ್ಲಿ ಹಲವು ಭಕ್ತರು ಪಾಲ್ಗೊಂಡಿದ್ದರು. ತಾಲ್ಲೂಕಿನ ಅರಿಶಿಣಗುಪ್ಪೆಯ ಶ್ರೀ ಮಂಜುನಾಥದೇವಾಲಯದ ನಾಗರಬನದಲ್ಲಿ, ಸೋಮೇಶ್ವರ ದೇವಾಲಯದ ನಾಗರಕಲ್ಲಿಗೂ ಜನರು ಹಾಲಿನ ಅಭಿಷೇಕ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.

Read More

ಸೋಮವಾರಪೇಟೆ NEWS DESK ಆ.9 : ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂದಗೋವೆ ಪೈಸಾರಿ ಗ್ರಾಮದಲ್ಲಿ ನಡೆದ ಕಾಡಾನೆ ಧಾಳಿಯಿಂದ ಗಾಯಗೊಂಡಿದ್ದ ವಾಟರ್‌ಮೆನ್ ಹುಸೇನ್ ಅವರಿಗೆ ಸೋಮವಾರಪೇಟೆ-ಕುಶಾಲನಗರ ತಾಲೂಕು ನೀರು ನಿರ್ವಾಹಕರ ಸಂಘದ ವತಿಯಿಂದ ಆರ್ಥಿಕ ನೆರವು ಒದಗಿಸಲಾಯಿತು. ಗಾಯಾಳುವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಸಂಘದ ಪದಾಧಿಕಾರಿಗಳು, ಚಿಕಿತ್ಸೆಗೆ ಆರ್ಥಿಕ ನೆರವು ಒದಗಿಸಿದರು. ಈ ಸಂದರ್ಭ ಸಂಘದ ಅಧ್ಯಕ್ಷ ಎಚ್.ಎನ್. ಶಂಕರ್, ಉಪಾಧ್ಯಕ್ಷ ಆಸಿಫ್, ಪ್ರಧಾನ ಕಾರ್ಯದರ್ಶಿ ಎಚ್.ಟಿ. ಶಶಿಕುಮಾರ್, ಪದಾಧಿಕಾರಿಗಳಾದ ಬಿ.ಆರ್. ವಸಂತ್, ಕೆ.ಪಿ. ಶಶಿಕುಮಾರ್ ಅವರುಗಳು ಉಪಸ್ಥಿತರಿದ್ದು, ನೆರವು ಹಸ್ತಾಂತರಿಸಿದರು.

Read More

ಸೋಮವಾರಪೇಟೆ NEWS DESK ಆ.9 : ಬೆಂಗಳೂರಿನ ಆಶಾ ಕಿರಣ ಕಲಾ ಟ್ರಸ್ಟ್ ವತಿಯಿಂದ ಗಳನ್ನು ಮಳೆಹಾನಿ ಸಂತ್ರಸ್ತರಿಗೆ ಆಹಾರ ಕಿಟ್ ಈಚೆಗೆ ವಿತರಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ ಅವರು ಮಳೆಯಿಂದ ಬಡವರು ಸಂಕಷ್ಟದಲ್ಲಿರುವ ಬಗ್ಗೆ ಟ್ರಸ್ಟ್ ಅಧ್ಯಕ್ಷರಾದ ಮಾಲತಿ ಅವರಿಗೆ ಮನವಿ ಸಲ್ಲಿಸಿದ ಮೇರೆಗೆ ರಾಮನಳ್ಳಿ, ಎಳೆನೀರುಗುಂಡಿ, ನಂದಿಗುಂದ, ಬೀಟಿಕಟ್ಟೆ, ಹೊನವಳ್ಳಿ, ಬೀಟಿಕಟ್ಟೆ, ಚನ್ನಾಪುರ, ಶುಂಠಿ ಗ್ರಾಮದ 27 ಕುಟುಂಬಗಳ ಸಂತ್ರಸ್ತರಿಗೆ ಆಹಾರ ಸಾಮಾಗ್ರಿಗಳ ಕಿಟ್ ಫ್ರಾನ್ಸಿಸ್ ಡಿಸೋಜ ವಿತರಿಸಿದರು.

Read More

ಗೋಣಿಕೊಪ್ಪ NEWS DESK ಆ.9 : ರಾಜ್ಯಸಭೆಯಲ್ಲಿ ಕೊಡವ ಹಾಕಿ ನಮ್ಮೆಯ ಕುರಿತು ಪ್ರಸ್ತಾಪಿಸಿ, ಕೊಡವರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ರಾಜ್ಯಸಭಾ ಸದಸ್ಯ ಅಜಯ್ ಮಾಖೇನ್ ಅವರಿಗೆ ಕೊಡವಾಮೆರ ಕೊಂಡಾಟ ಸಂಘಟನೆ ಕೊಡವ ಜನಾಂಗದ ಪರವಾಗಿ ಅಭಿನಂದನೆ ಸಲ್ಲಿಸಿದೆ. ಈ ಕುರಿತು ಪತ್ರ ಬರೆದಿರುವ ಸಂಘಟನೆ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಅವರು, ಅಜಯ್ ಮಾಕೇನ್ ಅವರಿಗೆ ಇಮೈಲ್, ಎಕ್ಸ್ ಮತ್ತು ವಾಟ್ಸಾಪ್ ಮೂಲಕ ಧನ್ಯವಾದದ ಸಂದೇಶ ಕಳುಹಿಸಿದ್ದಾರೆ. ಗಿನ್ನಿಸ್ ವಿಶ್ವ ದಾಖಲೆಯಲ್ಲಿ ಸ್ಥಾನ ಪಡೆದಿರುವ, ಕೊಡವ ಹಾಕಿ ನಮ್ಮೆಗೆ ಕೇಂದ್ರ ಸರ್ಕಾರ ಅನುದಾನ ನೀಡಬೇಕು, ಭಾರತ ಹಾಕಿಗೆ ಕೊಡವ ಜನಾಂಗ ನೀಡಿರುವ ಕೊಡುಗೆ ಅಪಾರವಾಗಿದ್ದು, ಅವರ ಈ ಸಾಧನೆಯೂ ಕೇಂದ್ರ ಸರ್ಕಾರದ ಯಾವುದೇ ಸಹಾಯ, ಅನುದಾನ  ಇಲ್ಲದೆಯೆ ಮಾಡಿರುವ ಹೆಗ್ಗಳಿಕೆಯಾಗಿದೆ. ಕೊಡಗಿನ ಕ್ರೀಡಾ ಸ್ಫೂರ್ತಿಯನ್ನ ಮನಗಂಡು ಸರ್ಕಾರ ತಕ್ಷಣ ಅರುಣಾಚಲದ ಕೂನೂರ್ ಮಾದರಿಯಲ್ಲಿ ಉನ್ನತ ದರ್ಜೆಯ ಕ್ರೀಡಾ ತರಭೇತಿ ಕೇಂದ್ರವನ್ನು ತೆರೆಯಬೇಕೆಂದು ಅಜಯ್ ಮಾಖೇನ್ ಕೇಂದ್ರ ಸರ್ಕಾರವನ್ನ ಒತ್ತಾಯಿಸಿದ್ದರು. ದೆಹಲಿ…

Read More

ಮಡಿಕೇರಿ NEWS DESK ಆ.9 : ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಯುವ ಸಮೂಹದಲ್ಲಿ ರಾಷ್ಟ್ರಭಕ್ತಿಯನ್ನು ಪ್ರೇರೇಪಿಸುವ ಉದ್ದೇಶದಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆ.11 ರಿಂದ 15ರವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರವರೆಗೆ ಜಿಲ್ಲೆಯ ಸೋಮವಾರಪೇಟೆ, ವಿರಾಜಪೇಟೆ, ಮಡಿಕೇರಿ ಗ್ರಾಮಾಂತರ ಮತ್ತು ಮಡಿಕೇರಿ ನಗರ ಮಂಡಲಗಳಲ್ಲಿ ಸ್ವಾತಂತ್ರ್ಯೋತ್ಸವದ ‘ಬೈಕ್ ಜಾಥ’ವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಆ.12 ರಿಂದ 14 ರವರೆಗೆ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಇರಬಹುದಾದ ಸ್ವಾತಂತ್ರ್ಯ ಹೋರಾಟಗಾರರನ್ನು ಗುರುತಿಸಿ ಸನ್ಮಾನಿಸಲಾಗುತ್ತದೆ. ಸ್ವಾತಂತ್ರ್ಯೋತ್ಸವ ಹೋರಾಟಗಾರರು ಇಲ್ಲವೆಂದಾದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಸ್ಥರನ್ನು ಗುರುತಿಸಿ, ಅವರ ಮನೆಗಳಿಗೆ ತೆರಳಿ ಗೌರವಿಸುವ ಮಹತ್ವದ ಕಾರ್ಯವನ್ನು ಪಕ್ಷ ಹಮ್ಮಿಕೊಂಡಿದೆ ಎಂದು ಹೇಳಿದರು. ::: “ಕರಾಳ ದಿನ” ಆಚರಣೆ ::: ಅಖಂಡವಾಗಿದ್ದ ಭಾರತ ವಿಭಜನೆಯಾದ ಆ.14ನ್ನು ‘ಕರಾಳ ದಿನ’ವನ್ನಾಗಿ ಆಚರಿಸಲು ಉದ್ದೇಶಿಸಲಾಗಿದೆ. ಅಂದು ದೇಶ ವಿಭಜನೆಗೆ ಕಾರಣವಾದ ಅಂಶಗಳು, ಅಂದು ನಡೆದ ಘಟನಾವಳಿಗಳ…

Read More

ಮಡಿಕೇರಿ NEWS DESK ಆ.9 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಬಡವರ್ಗದ ಮಂದಿ ಬದುಕು ಕಟ್ಟಿಕೊಂಡಿರುವ ಸಿ ಮತ್ತು ಡಿ ದರ್ಜೆಯ ಭೂಮಿಯನ್ನು ರಕ್ಷಿತಾರಣ್ಯ ವ್ಯಾಪ್ತಿಗೆ ತರುವ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿರುವ ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹೋರಾಟವನ್ನು ರೂಪಿಸುವ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಣ್ಯ ಸಂರಕ್ಷಣಾ ಸಮಿತಿಯ ಅಧ್ಯಕ್ಷರು ಗ್ರಾಮ ಪಂಚಾಯ್ತಿ ಪಿಡಿಒಗಳಿಗೆ ಆದೇಶ ಹೊರಡಿಸಿ, ಅವರ ವ್ಯಾಪ್ತಿಯಲ್ಲಿನ ರಕ್ಷಿತಾರಣ್ಯ ಮತ್ತು ಅವುಗಳ ಒತ್ತುವರಿಗಳ ಬಗ್ಗೆ ಮಾಹಿತಿಯನ್ನು ಕೇಳಿರುವ ಕ್ರಮ ಸರಿಯಲ್ಲ. ಗ್ರಾಮೀಣ ಭಾಗಗಳಲ್ಲಿ ಅಲ್ಪಸ್ವಲ್ಪ ಸಿ ಮತ್ತು ಡಿ ದರ್ಜೆಯ ಜಾಗವನ್ನು ಒತ್ತುವರಿ ಮಾಡಿ ಅವುಗಳಲ್ಲಿ ಬದುಕು ಕಟ್ಟಿಕೊಂಡ ದುರ್ಬಲ ವರ್ಗದವರನ್ನು ಅಲ್ಲಿಂದ ತೆರವುಗೊಳಿಸುವ ಪ್ರಯತ್ನ ನಡೆಸಿದರೆ ಪ್ರತಿಭಟನೆ ಅನಿವಾರ್ಯವಾಗುತ್ತದೆ ಎಂದರು. ಜಿಲ್ಲೆಯ ಬಹುತೇಕ ಗ್ರಾಮಿಣ ಭಾಗಗಳಲ್ಲಿ ಇರುವ ದೇವರಕಾಡುಗಳನ್ನು ಸ್ಥಳೀಯರು ಸಂರಕ್ಷಿಕೊAಡು ಬಂದಿದ್ದಾರೆ. ಸಾಕಷ್ಟು ಬಡ ಮಂದಿ ಒಂದಷ್ಟು ಸಿ ಮತ್ತು ಡಿ…

Read More

ಮಡಿಕೇರಿ NEWS DESK ಆ.9 : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ದೇಶದ ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ವೀರ ಯೋಧರ ಸ್ಮರಣೆ ಹಾಗೂ ಕಳೆದು ಹೋದ ಭಾರತದ ಭೂಭಾಗಗಳನ್ನು ಮತ್ತೆ ಪಡೆಯುವ ಸಂಕಲ್ಪದೊಂದಿಗೆ ಮಡಿಕೇರಿ ನಗರದಲ್ಲಿ ಹಿಂದು ಜಾಗರಣ ವೇದಿಕೆ ವತಿಯಿಂದ ಪಂಜಿನ ಮೆರವಣಿಗೆ ಮತ್ತು ವಾಹನ ಜಾಥಾ ನಡೆಯಿತು. ಶ್ರೀಚೌಡೇಶ್ವರಿ ದೇವಾಲಯದ ಬಳಿಯಿಂದ ಹಿಂದೂಪರ ಕಾರ್ಯಕರ್ತರು ಹಾಗೂ ಬಿಜೆಪಿ ಪ್ರಮುಖರು ಕೇಸರಿ ಧ್ವಜ, ಪಂಜು ಹಿಡಿದು ಸಾಗಿದರು. ಪ್ರಮುಖ ಬೀದಿಯಲ್ಲಿ ಘೋಷಣೆಗಳನ್ನು ಕೂಗಿ ಅಖಂಡ ಭಾರತದ ಸಂಕಲ್ಪ ಮಾಡಿದರು. ಮೆರವಣಿಗೆ ಮಹದೇವಪೇಟೆ, ಇಂದಿರಾಗಾಂಧಿ ವೃತ್ತ, ಹಳೆ ಖಾಸಗಿ ಬಸ್ ನಿಲ್ದಾಣವನ್ನು ಹಾದು ಜನರಲ್ ತಿಮ್ಮಯ್ಯ ವೃತ್ತದವರೆಗೆ ಸಾಗಿ ನಂತರ ಕೊಡವ ಸಮಾಜದಲ್ಲಿ ಸಮಾಪ್ತಿಯಾಯಿತು. ವಿವಿಧ ಹಿಂದೂ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡು ಅಖಂಡ ಭಾರತ ಸಂಕಲ್ಪದ ಘೋಷಣೆಗಳನ್ನು ಕೂಗಿದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಮಹಿಳಾ ಮೋರ್ಚಾ…

Read More