ಲೇಖಕ: admin

ಮಡಿಕೇರಿ NEWS DESK ಆ.9 : ವಿಶ್ವ ರಾಷ್ಟ್ರ ಸಂಸ್ಥೆಯ ಜಾಗತಿಕ ಆದಿಮ ಸಂಜಾತ ಜನಾಂಗಗಳ ಹಕ್ಕುಗಳ ದಿನಾಚರಣೆಯ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ಅಂತರಾಷ್ಟ್ರೀಯ ಕಾನೂನಿನ್ವಯ ಕೊಡವರ ಸಂವಿಧಾನಿಕ ಹಕ್ಕುಗಳನ್ನು ಮಂಡಿಸಿತು. ಸಾಂವಿಧಾನಿಕ ಹಕ್ಕುಗಳಿಂದ ವಂಚಿತವಾಗಿರುವ ಆದಿಮಸಂಜಾತ ಕೊಡವ ಬುಡಕಟ್ಟು ಜನರ ಹಕ್ಕೋತ್ತಯದ ಬಗ್ಗೆ ದೇಶದ ಆಡಳಿತ ವ್ಯವಸ್ಥೆ ಮತ್ತು ವಿಶ್ವದ ಗಮನ ಸೆಳೆಯವ ಸಲುವಾಗಿ ಸತ್ಯಾಗೃಹ ನಡೆಸಿರುವುದಾಗಿ ಧರಣಿಯ ನೇತೃತ್ವ ವಹಿಸಿದ್ದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದರು. ವಿಶ್ವ ರಾಷ್ಟ್ರ ಸಂಸ್ಥೆಯ ಅಂತರಾಷ್ಟ್ರೀಯ ಘೋಷಣೆಯ ಅನ್ವಯ ಆದಿಮ ಸಂಜಾತರ ಹಕ್ಕುಗಳ ರಕ್ಷಣೆಗೆ ರೂಪಿಸಿದ ವಿಧಿಗಳಾದ 3, 5, 26, 31 ಮತ್ತು 32ರ ಪ್ರಕಾರ ಕೊಡವ ಆದಿಮ ಸಂಜಾತರ ಹಕ್ಕುಗಳನ್ನು ಮಂಡನೆ ಮಾಡಿದರು. ಕೊಡವರು ಈ ಪವಿತ್ರ ಕೊಡವ ನೆಲದ ಮೂಲನಿವಾಸಿ ಆದಿಮಸಂಜಾತ ಬುಡಕಟ್ಟು ಸಮುದಾಯದವರಾಗಿದ್ದಾರೆ. ಕೊಡವರಿಗಿರುವ ಏಕೈಕ ನೆಲೆ ಕೊಡವ ಲ್ಯಾಂಡ್ ಕೊಡವರ ಸಾಂಪ್ರದಾಯಿಕ ಹಾಗೂ…

Read More

ಮಡಿಕೇರಿ ಆ.9 NEWS DESK : ವಯನಾಡು ನೆರೆ ಸಂತ್ರಸ್ತರಿಗೆ ಮಾದಾಪುರದ ಮಲ್ನಾಡ್ ಆಟೋ ಚಾಲಕರು ಮತ್ತು ಮಾಲೀಕರ ಸಂಘದಿಂದ ನೆರವು ನೀಡಲಾಯಿತು. ಮಾದಾಪುರದಿಂದ ಏಳು ಆಟೋದ ಮೂಲಕ 14 ಮಂದಿ ಚಾಲಕರು ತೆರಳಿ ಆಟೋ ಚಾಲಕರು ಮತ್ತು ಗ್ರಾಮಸ್ಥರು ನೀಡಿದ ದಿನಸಿ, ಬಟ್ಟೆ, ಚಪ್ಪಲ್ ಹಾಗೂ ಮಕ್ಕಳ ಕಿಟ್‍ಗಳನ್ನು ವಿತರಿಸಿದರು. ಅಲ್ಲದೆ ಸಂತ್ರಸ್ತರ ಯೋಗ ಕ್ಷೇಮವನ್ನು ವಿಚಾರಿಸಿ ಧೈರ್ಯ ತುಂಬಿದರು. ಈ ಸಂದರ್ಭ ಸಂಘದ ಅಧ್ಯಕ್ಷ ಪಿ.ಎಲ್.ಸುರೇಶ್, ಹೆಚ್.ಎಸ್.ಮಧು, ಸದಸ್ಯರಾದ ರಫಿಕ್, ಸುಶಾಂತ್, ಟಿ.ಜಿ.ಅವಿನಾಶ್, ಆರ್.ಜಿ.ಪ್ರವೀಣ್, ಹರೀಶ್, ಗಿರೀಶ್, ದೇವ್‍ದಾಸ್, ಶಶಿ, ಮನುಕುಮಾರ್, ಆರ್.ಮಂಜುನಾಥ್, ವಿನೋದ್ ಕುಮಾರ್, ಯೋಗೇಶ್ ಹಾಜರಿದ್ದರು.

Read More

ಮಡಿಕೇರಿ ಆ.9 NEWS DESK : ರಾಷ್ಟ್ರೀಯ ಸಮಗ್ರತೆ ಮತ್ತು ಶಾಂತಿಯ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಜುಲೈನಲ್ಲಿ ಕೊಡಗಿನಿಂದ ಕನ್ಯಾಕುಮಾರಿಯವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ವಯನಾಡಿನ ತುರ್ತು ಪರಿಸ್ಥಿತಿಯಿಂದ ರದ್ದುಗೊಳಿಸಲಾಗಿದ್ದು,  ಮುಂದಿನ ದಿನಗಳಲ್ಲಿ ಪೂರ್ಣಗೊಳಿಸುವುದಾಗಿ ಉಡುಪಿಯ ಕಡೆಕಾರ್ ನಿವಾಸಿ ಜಯಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ.   ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜು.20 ರಂದು ಸೋಮವಾರಪೇಟೆ ತಾಲ್ಲೂಕಿನ ಗೌಡಳ್ಳಿಯ ಬಿಜಿಎಸ್ ಶಾಲೆಯಿಂದ ಆರಂಭಗೊಂಡ ಪಾದಯಾತ್ರೆಗೆ ಆಸ್ಕರ್ ಫರ್ನಾಂಡಿಸ್ ಅವರ ಅಭಿಮಾನಿಗಳು ಹಾಗೂ ಶಾಲಾ ಮುಖ್ಯೋಪಾಧ್ಯರಾದ ರತ್ನಾ ದೇವೇಗೌಡ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಚಾಲನೆ ನೀಡಿದ್ದು, ಶನಿವಾರಸಂತೆ, ಸೋಮವಾರಪೇಟೆ, ಕುಶಾಲನಗರ, ಪಿರಿಯಾಪಟ್ಟಣ, ಆನೇಚೌಕೂರು, ಗೋಣಿಕೊಪ್ಪಲು, ಪೊನ್ನಂಪೇಟೆ, ಶ್ರೀಮಂಗಲ, ಕುಟ್ಟ, ತೌಳಪಟ್ಟಿ, ಕಾಟಿಕುಳ್ಳ, ಮಾನಂದವಾಡಿ ಮೂಲಕ 190 ಕಿ.ಮೀ ಕ್ರಮಿಸಿದ ಪಾದಯಾತ್ರೆಯು ಜು.29 ರಂದು ಸಂಜೆ ಕಲ್ಪೆಟ್ಟ, ವಯನಾಡು ತಲುಪಿತು.   ಆದರೆ, ಜು.30 ರಂದು ಬೆಳಿಗ್ಗೆ 7 ಗಂಟೆಗೆ ಚೂರಲ್ಮಲಾದಲ್ಲಿ ಭೂಕುಸಿತದಿಂದಾಗಿ ನಿಧಾನಗೊಂಡಿದ್ದು, ಕಲ್ಪೆಟ್ಟಾ ಮತ್ತು ವಯನಾಡ್ ತುರ್ತುವಿನಲ್ಲಿ ತುರ್ತು ಪರಿಸ್ಥಿತಿ ಇದ್ದ ಕಾರಣ ನಾನು ನನ್ನ ಪಾದಯಾತ್ರೆಯನ್ನು…

Read More

ವಿರಾಜಪೇಟೆ ಆ.9 NEWS DESK : ನಾಗರಪಂಚಮಿಯ ಪ್ರಯುಕ್ತ ಬೇಟೋಳಿ ಗ್ರಾಮದ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಾಲಯದ ಶ್ರೀ ನಾಗ ಗುಡಿಯಲ್ಲಿ ನಾಗ ತಂಬಿಲ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ಜರುಗಿತು. ದೇವಾಲಯದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಅವರ ನೇತೃತ್ವದಲ್ಲಿ  ಶ್ರೀ ಮಹಾಗಣಪತಿ, ಪುದುಪಾಡಿ ಅಯ್ಯಪ್ಪ ಸ್ವಾಮಿ ಹಾಗೂ ವನದುರ್ಗೆ ದೇವರುಗಳಿಗೆ ಪೂಜೆ ಸಲ್ಲಿಸಲಾಯಿತು. ನಂತರ ನಾಗ ದೇವರ ಗುಡಿಯಲ್ಲಿ ಸಂಕಲ್ಪ ಪೂಜೆ,  ಹಾಲಿನ ಅಭಿಷೇಕ ಹಾಗೂ ಸೀಯಾಳ ಅಭಿಷೇಕ, ನಾಗ ತಂಬಿಲ ಸೇವೆ ಹೂವಿನ ವಿಶೇಷ ಅಲಂಕಾರ ಹಾಗೂ ಪುಷ್ಪಾರ್ಚನೆ, ಕುಂಕುಮಾರ್ಚನೆ ಸೇವೆ ನೆರವೇರಿತು.  ಮಹಾಪೂಜೆಯ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು. ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನಾಗದೇವರಿಗೆ ಹಾಲಿನ ಅಭಿಷೇಕ ಹಾಗೂ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.

Read More

ವಿರಾಜಪೇಟೆ ಆ.9 NEWS DESK : ಹೆಗ್ಗಳ ಗ್ರಾಮದಲ್ಲಿರುವ ಪಾಲ್ಟ್ ಮಕ್ಕಿ ನಾಗಬನದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.  ಅರ್ಚಕರು ಸಂಕಲ್ಪ, ಹಾಲಿನ ಮತ್ತು ಸೀಯಾಳ ಅಭಿಷೇಕ, ಕುಂಕುಮಾರ್ಚನೆ ಸೇವೆಗಳನ್ನು ನೆರವೇರಿಸಿ ನಾಗ ತಂಬಿಲವನ್ನು ಮಾಡಿದರು. ಶ್ರೀ ನಾಗ ಮೂರ್ತಿಗೆ ವಿಶೇಷ ಅಲಂಕಾರ ಸೇವೆಯನ್ನು ಸಲ್ಲಿಸಿದರು. ನಂತರ ಮಹಾಪೂಜೆ, ಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನೆರವೇರಿತು.  ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಪ್ರಧಾನ ಅರ್ಚಕ ವೇಣುಗೋಪಾಲ್ ಭಟ್ ರವರ ನೇತೃತ್ವದಲ್ಲಿ ನಡೆಯಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಗನ ಕಲ್ಲಿಗೆ ಪುಷ್ಪಾರ್ಚನೆ ಮತ್ತು ಹಾಲಿನ ಅಭಿಷೇಕ ಮಾಡಿದರು.

Read More

ವಿರಾಜಪೇಟೆ ಆ.9 NEWS DESK : ವಿರಾಜಪೇಟೆಯ ಕೂರ್ಗ್ ವ್ಯಾಲಿ ಶಾಲೆಯ2024-25 ನೇ ಸಾಲಿನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ವಿರಾಜಪೇಟೆ ಕಾವೇರಿ ಕಾಲೇಜಿನ ಉಪನ್ಯಾಸಕರಾದ ಡಾ.ಕೆ.ಜಿ.ವೀಣಾ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಸಾಮಾಜಿಕ ಬದ್ಧತೆಯ ಜೊತೆಗೆ ಬದುಕಿಗೆ ಪೂರಕವಾದ ಮೌಲ್ಯಗಳನ್ನು ಅರಿಯುವತ್ತ ಗಮನ ಹರಿಸಬೇಕು. ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವದ ಗುಣಗಳನ್ನು ರೂಢಿಸಿಕೊಳ್ಳಬೇಕು ಮತ್ತು ಪೋಷಕರು ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ನೀತಿ ಕಥೆಯನ್ನು ಹೇಳಿಕೊಡುವುದರಿಂದ ವ್ಯಕ್ತಿತ್ವದಲ್ಲಿ ಬದಲಾವಣೆ ಮಾಡಬಹುದು ಎಂದು ಹೇಳಿದರು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರ ಮತ್ತು ಪೋಷಕರ ಪಾತ್ರ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು. ಮುಖ್ಯ ಶಿಕ್ಷಕರು ಮತ್ತು ಶಾಲೆಯ ನಿರ್ವಾಹಕರಾದ ಸುಮಾ, ಚಿತ್ರ ಬಾನು ವಿದ್ಯಾರ್ಥಿ ಸಂಘಕ್ಕೆ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕೂರ್ಗ್ ವ್ಯಾಲಿ ಶಾಲೆಯ ವಿದ್ಯಾರ್ಥಿ ತಂಡದ ಹಿರಿಯ ವಿದ್ಯಾರ್ಥಿಯಾಗಿ ಮಹಮ್ಮದ್ ರಫಾನ ಹಾಗೂ ಹಿರಿಯ ವಿದ್ಯಾರ್ಥಿನಿಯಾಗಿ ಸಮೈರ ಬಾನು ಶಾಲಾ ನಾಯಕನಾಗಿ ನರೇಂದ್ರ, ಶಾಲಾ ಉಪನಾಯಕನಾಗಿ ಸಮರ್ಥ್, ಕ್ರೀಡಾ ನಾಯಕನಾಗಿ…

Read More

ಮಡಿಕೇರಿ NEWS DESK  ಆ.9 :  ವಿರಾಜಪೇಟೆ ಬಳಿಯ ಎವರ್ ಗ್ರೀನ್ ಕೌಂಟಿಯ ಭಜನ್ ಬೋಪಣ್ಣ ಅವರಿಗೆ  2024 ರ ಏಷ್ಯನ್ ಐಕಾನ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕೊಡಗಿನಲ್ಲಿ ಪ್ರವಾಸೋದ್ಯಮ ಮತ್ತು ಆತಿಥ್ಯ ಕ್ಷೇತ್ರಕ್ಕೆ ಭಜನ್ ಬೋಪಣ್ಣ ನೀಡಿರುವ ಕೊಡುಗೆ ಹಿನ್ನಲೆಯಲ್ಲಿ ಶ್ರೀಲಂಕಾದ  ಕೋಲೊಂಬೋದಲ್ಲಿನ ಭಂಡಾರನಾಯಿಕೆ ಸ್ಮಾರಕ ಸಭಾಭವನದಲ್ಲಿ ಆಯೋಜಿತ ಸಮಾರಂಭದಲ್ಲಿ  ಎನಿಎಲ್ಪ್ ಸಂಸ್ಥೆ ವತಿಯಿಂದ ಈ ಪ್ರಶಸ್ತಿ ನೀಡಲಾಯಿತು,  ಭಾರತೀಯ ಪ್ರವಾಸೋದ್ಯಮ ಕ್ಷೇತ್ರದ ಕುರಿತಂತೆ ಸಮಾರಂಭದಲ್ಲಿ ಮಾತನಾಡಿದ ಭಜನ್ ಬೋಪಣ್ಣ, ಜಗತ್ತಿನ ಎಲ್ಲೆಡೆಗಳಿಂದಲೂ ಎಲ್ಲಾ ವಗ೯ದ  ಪ್ರವಾಸಿಗರನ್ನೂ ಆಕಷಿ೯ಸಬಲ್ಲಂಥ ಪ್ರವಾಸೀ ತಾಣಗಳು ಭಾರತದಲ್ಲಿದೆ ಎಂದು ಹೆಮ್ಮೆಯಿಂದ ನುಡಿದರು. ಅಂತೆಯೇ ಪ್ರಾಕೖತ್ತಿಕ ವಿಕೋಪಗಳು ಸಂಭವಿಸಿದ ಸಂದಭ೯ಗಳಲ್ಲಿ ಪ್ರವಾಸೋದ್ಯಮದಲ್ಲಿರುವ ಉದ್ಯಮಿಗಳು ಯಾವೆಲ್ಲಾ ರೀತಿಯಲ್ಲಿ ಸ್ಥಳೀಯ ಸಮುದಾಯಗಳ ನೆರವಿಗೆ ಸ್ಪಂದಿಸುತ್ತಾರೆ ಎಂಬ ಬಗ್ಗೆಯೂ ಕೊಡಗಿನಲ್ಲಿ ಸಂಭವಿಸಿದ ವಿಕೋಪದ ಉದಾಹರಣೆಯೊಂದಿಗೆ ಭಜನ್ ವಿವರಿಸಿದರು. ಶ್ರೀಲಂಕಾದ ರಾಜ್ಯಪಾಲರು, ಸಾಕ್೯ ಸಮಿತಿ ಸದಸ್ಯರು,ಪ್ರಧಾನಿಗಳು, ಮಾಜಿ ಪ್ರಧಾನಿಗಳೂ ಸೇರಿದಂತೆ ಗಣ್ಯಾತಿಗಣ್ಯರು ಕಾಯ೯ಕ್ರಮದಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಆ.9 NEWS DESK : ನಗರದ ಕೊಡಗು ವಿದ್ಯಾಲಯದ ದೈಹಿಕ ಶಿಕ್ಷಕರಾದ ದಿನೇಶ್ ಮತ್ತು ಪಾರ್ವತಿ ಅವರನ್ನು ಶಾಲಾ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 2012 ರಿಂದ ಶಾಲೆಯ ವಿದ್ಯಾರ್ಥಿಗಳಿಗೆ ಹಾಕಿ ಕ್ರೀಡೆಯಲ್ಲಿ ಗೆಲುವಿನ ಹಾದಿಗ ಸೂಕ್ತ ಮಾಗ೯ದ೯ಶನ ಮಾಡುತ್ತಾ ಬಂದಿರುವ ದಿನೇಶ್, ಈ ವರ್ಷವೂ ಶಾಲೆಯ ಹಾಕಿ ತಂಡವು ದಕ್ಷಿಣ ವಲಯದಲ್ಲಿ ಜಯಗಳಿಸುವ ಮೂಲಕ ರಾಷ್ಟ್ರೀಯ ಮಟ್ಟದ ವಿಜೇತರಾಗಿ ಐತಿಹಾಸಿಕ ಸಾಧನೆ ಮಾಡಲು ಕಾರಣರಾಗಿದ್ದಾರೆ. ಈ ವರ್ಷ ದಿನೇಶ್ ಅವರ ಮಾರ್ಗದರ್ಶನದಲ್ಲಿ ಬಾಲಕರು ಮತ್ತು ಬಾಲಕಿಯರು ದ್ವಿತೀಯ ಸ್ಥಾನ ಪಡೆದು ಭೂಪಾಲದಲ್ಲಿ ನಡೆಯುವ ರಾಷ್ಟ್ರೀಯ ಹಾಕಿ ಟೂರ್ನಿಗೆ ಸಜ್ಜಾಗಿದ್ದಾರೆ. ಹಾಕಿ ಇಂಡಿಯಾ ಸೆಮಿನಾರ್‌ನಲ್ಲಿ ಲೆವೆಲ್ ಒನ್ ತರಬೇತಿದಾರರಾಗಿ ಗುರುತಿಸಿಕೊಂಡಿರುವ ದಿನೇಶ್, ರಾಜ್ಯ ಮಟ್ಟದ ಪಂದ್ಯಗಳಲ್ಲಿ ಅಂಪೈರ್ ಆಗಿ ಕೂಡ ಕಾರ್ಯನಿರ್ವಹಿಸುತ್ತಿದ್ದಾರೆ. ಶಾಲೆಯ ರಿಂಕ್ ಹಾಕಿ ವಿಜೇತ ತಂಡದ ಆಟಗಾರರನ್ನೂ ಈ ಸಂದರ್ಭ ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಸುಮಿತ್ರಾ ಸನ್ಮಾನಿಸಿದರು. ಅಂತೆಯೇ ಕ್ರೀಡಾ ತರಬೇತುಗಾರರಾದ ಪಾರ್ವತಿ ಅವರಿಗೂ ಪ್ರಶಂಸನಾ…

Read More

ಮಡಿಕೇರಿ NEWS DESK ಆ.9 : ಮಡಿಕೇರಿ ದಸರಾ ದಶಮಂಟಪ ಸಮಿತಿಯ ನೂತನ ಅಧ್ಯಕ್ಷರಾಗಿ ಜಿ.ಸಿ.ಜಗದೀಶ್, ಪ್ರಧಾನ ಕಾರ್ಯದರ್ಶಿಯಾಗಿ ಯೋಗೇಶ್ ಹೆಚ್.ಎಲ್ ಹಾಗೂ ಖಜಾಂಚಿಯಾಗಿ ಸದಾ ಮುದ್ದಪ್ಪ ಆಯ್ಕೆಯಾಗಿದ್ದಾರೆ.

Read More

ನಾಪೋಕ್ಲು ಆ.9 NEWS DESK : ಮರಂದೋಡ ಗ್ರಾಮದಲ್ಲಿ ಕಾಡಾನೆಗಳ ದಾಳಿಯಿಂದ ಭತ್ತದ ಗದ್ದೆಗಳು ಹಾನಿಗೀಡಾಗಿದ್ದು, ಕೃಷಿಕರು ಆತಂಕ ಪಡುವಂತಾಗಿದೆ. ಗ್ರಾಮದ ಕೃಷಿಕರಾದ ಚೋಯಮಾದಂಡ ಪೂಣಚ್ಚ, ವಿಜು ಮೊಣ್ಣಪ್ಪ,ಸರು ಅಪ್ಪಚ್ಚು ಅವರ ಗದ್ದೆಗಳಲ್ಲಿ ಅಡ್ಡಾಡಿರುವ ಕಾಡಾನೆಗಳು ನಾಟಿ ಮಾಡಿದ್ದ ಪೈರುಗಳನ್ನು ತುಳಿದು ನಾಶಪಡಿಸಿವೆ. ಸಮೀಪದ ಕಾಫಿ ತೋಟಗಳಿಗೂ ನುಗ್ಗಿ ಹಾನಿಪಡಿಸಿದೆ. ಕಳೆದ ಹತ್ತು ದಿನಗಳಿಂದ ಕಾಡಾನೆಗಳು ಗ್ರಾಮದ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದು,  ಸಂಬಂಧಪಟ್ಟ ಅಧಿಕಾರಿಗಳು ಅರಣ್ಯ ಇಲಾಖೆ ಕಾಡಾನೆಗಳನ್ನು ಕಾಡಿಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.  ಗ್ರಾಮದಲ್ಲಿ ಹಾಗಲಿನ ವೇಳೆಯೆ ಕಾಡಾನೆಗಳ ಓಡಾಡುತ್ತಿದ್ದು, ಕೂಲಿಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಇತೆರೆಡೆ ತೆರಳಲು ಭಯಪಡುವಂತಾಗಿದೆ ಎಂದು ಪಂಚಾಯಿತಿ ಸದಸ್ಯ ಹರೀಶ್ ಮೊಣ್ಣಪ್ಪ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ವರದಿ : ದುಗ್ಗಳ ಸದಾನಂದ 

Read More