ಮಡಿಕೇರಿ NEWS DESK ಆ.9 : ನಾಪೋಕ್ಲು ಕೊಡವ ಸಮಾಜದ ಕಾರ್ಯದರ್ಶಿಯಾಗಿ ಕುಲ್ಲೇಟಿರ ಅಜಿತ್ ನಾಣಯ್ಯ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಕಳೆದ ಸೆಪ್ಟಂಬರ್ ನಲ್ಲಿ ನಡೆದ ನಾಪೋಕ್ಲು ಕೊಡವ ಸಮಾಜದ ಚುನಾವಣೆ ಸಂದರ್ಭ ತೆರವಾಗಿದ್ದ ಕಾರ್ಯದರ್ಶಿ ಸ್ಥಾನಕ್ಕೆ ಅಜಿತ್ ನಾಣಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು. ಸಮಾಜದ ವಾರ್ಷಿಕ ಮಹಾಸಭೆಯ ನಿರ್ಣಯದಂತೆ ಇತ್ತೀಚೆಗೆ ಅವರು ಅಧಿಕಾರ ವಹಿಸಿಕೊಂಡರು. ಈ ಹಿಂದೆ ನಾಪೋಕ್ಲು ಕೊಡವ ಸಾಮಾಜದ ನಿರ್ದೇಶಕರಾಗಿ, ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿರುವ ಅಜಿತ್ ನಾಣಯ್ಯ ಅವರು, ಕೊಡಗು ಪತ್ರಕರ್ತರ ಸಂಘದ ಸದಸ್ಯರಾಗಿದ್ದು, ವಿವಿಧ ಸಂಘ ಸಂಸ್ಥೆಗಳಲ್ಲೂ ಸೇವೆ ಸಲ್ಲಿಸುತ್ತಿದ್ದಾರೆ.
ಲೇಖಕ: admin
ನಾಪೋಕ್ಲು ಆ.9 NEWS DESK : ಕಕ್ಕುಂದ ಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಶ್ರಾವಣ ಶನಿವಾರ ಪೂಜಾ ಕಾರ್ಯಕ್ರಮಗಳು ಆ.10 ರಿಂದ 31 ರವರೆಗೆ ನಡೆಯಲಿವೆ. ಆ ದಿನಗಳಂದು ಬೆಳಿಗ್ಗೆ ಏಳು ಗಂಟೆಗೆ ಅಭಿಷೇಕ, 11 ಗಂಟೆಯಿಂದ 12 ಗಂಟೆವರೆಗೆ ಸೇವೆಯ ಸಂಕಲ್ಪ, ಮಧ್ಯಾಹ್ನ 12.30 ಕ್ಕೆ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಬಳಿಕ ಅನ್ನದಾನ ನೆರವೇರಿಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯ ಪಾಲ್ಗೊಳ್ಳುವಂತೆ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಆ.9 NEWS DESK : 2020-21 ರಲ್ಲಿ ಅಥವಾ ನಂತರ ಐ.ಟಿ.ಐ ಉತ್ತೀರ್ಣರಾಗಿರುವ, ತಾಂತ್ರಿಕ ಕೌಶಲ್ಯದ ಕೋರ್ಸ್ನಲ್ಲಿ ಪ್ರಮಾಣ ಪತ್ರ ಹೊಂದಿರುವ 18 ರಿಂದ 23 ವರ್ಷ ವಯೋಮಿತಿಯವರಾಗಿ ದುಬೈ ಶಿಪ್ಯಾರ್ಡ್ನಲ್ಲಿ ತರಬೇತಿ/ ನೇಮಕಾತಿಗೆ ಅವಕಾಶ ಕಲ್ಪಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ತರಬೇತಿ, ಉಚಿತ ವಿಮಾನ ಟಿಕೆಟ್, ಉಚಿತ ವಸತಿ, ಆರೋಗ್ಯ ವಿಮೆ, ವಾರ್ಷಿಕ ರಜೆಗಳು ಹಾಗೂ ಹಿಂದಿರುಗುವ ಪ್ರಯಾಣದ ವಿಮಾನ ಟಿಕೇಟ್ ಸೌಲಭ್ಯಗಳಿವೆ. ಅರ್ಜಿ ಸಲ್ಲಿಸಲು ಆ.11 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ವೆಬ್ಸೈಟ್ ವಿಳಾಸ http://imck.kaushalkar.com/ ಹಾಗೂ ಮೊ.ಸಂ.9483223884 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಉದ್ಯೋಗಾಧಿಕಾರಿ ರೇಖಾ ಗಣಪತಿ ತಿಳಿಸಿದ್ದಾರೆ.
ಮಡಿಕೇರಿ ಆ.9 NEWS DESK : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ದೇವಾಲಯದಲ್ಲಿರುವ ನಾಗನ ಕಟ್ಟೆಯ ನಾಗನಕಲ್ಲಿಗೆ ಹಾಲಿನ ಅಭಿಷೇಕ, ಅಲಂಕಾರ ಪೂಜೆ, ಎಳನೀರಭಿಷೇಕ, ಕ್ಷೀರಾಭಿಷೇಕ, ಸಂಕಲ್ಪ ಪೂಜೆ ಮಹಪೂಜೆ ಹಾಗೂ ವಿಶೇಷ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು.ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಗನ ಕಲ್ಲಿಗೆ ಪುಷ್ಪಾರ್ಚನೆ ಮತ್ತು ಹಾಲಿನ ಅಭಿಷೇಕ ಮಾಡಿದರು.
ಮಡಿಕೇರಿ ಆ.9 NEWS DESK : ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯನ್ನು ಕೊಡಗಿನ ವಿವಿಧೆಡೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ನಗರದ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯ, ಶ್ರೀ ದಂಡಿನ ಮಾರಿಯಮ್ಮ ದೇವಾಲಯ, ಶ್ರೀ ಕೋಟೆ ಮಾರಿಯಮ್ಮ ದೇವಾಲಯ, ಬ್ರಾಹ್ಮಣರ ಬೀದಿಯ ಅಶ್ವತ್ಥ ಕಟ್ಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ನಾಗನಕಲ್ಲಿಗೆ ಹಾಲಿನ ಅಭಿಷೇಕ, ಅಲಂಕಾರ ಪೂಜೆ, ಎಳನೀರಭಿಷೇಕ, ಕ್ಷೀರಾಭಿಷೇಕ, ಸಂಕಲ್ಪ ಪೂಜೆ ಮಹಪೂಜೆ ಹಾಗೂ ವಿಶೇಷ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು.ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಗನ ಕಲ್ಲಿಗೆ ಪುಷ್ಪಾರ್ಚನೆ ಮತ್ತು ಹಾಲಿನ ಅಭಿಷೇಕ ಮಾಡಿದರು.
ಮಡಿಕೇರಿ ಆ.9 NEWS DESK : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಆ.14 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕುಶಾಲನಗರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಸುಂಟಿಕೊಪ್ಪ NEWS DESK ಆ.9 : ಬೈಕ್ ಮರಕ್ಕೆ ಅಪ್ಪಳಿಸಿದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪ ರಾಷ್ಟ್ರೀಯ ಹೆದ್ದಾರಿಯ ಶಾಂತಿಗೇರಿ ಎಂಬಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕು ನವಿಲೂರು ಗ್ರಾಮದ ಆಕಾಶ್ ಹಾಗೂ ಪ್ರಸನ್ನ ಮೃತ ದುರ್ದೈವಿಗಳಾಗಿದ್ದಾರೆ. ಕಟ್ಟಡ ನಿರ್ಮಾಣದ ಸೆಂಟ್ರಿಂಗ್ ಕೆಲಸಕ್ಕೆಂದು ಪಿರಿಯಾಪಟ್ಟಣದಿಂದ ಮಡಿಕೇರಿಗೆ ಗುರುವಾರ ರಾತ್ರಿ ಆಗಮಿಸುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಆಕಾಶ್ ಸ್ಥಳದಲ್ಲೇ ಮೃತಪಟ್ಟರೆ, ಪ್ರಸನ್ನ ಚಿಕಿತ್ಸೆ ಫಲಕಾರಿಯಾಗದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿರಾಜಪೇಟೆ NEWS DESK ಆ.9 : ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕೊಡಗು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಪ್ರಥಮ, ತೃತೀಯ ಮತ್ತು ಐದನೇಯ ಸೆಮಿಸ್ಟರ್ ತರಗತಿಗಳು ಆಗಸ್ಟ್ 12 ರಿಂದ ಪ್ರಾರಂಭವಾಗಲಿದೆ ಎಂದು ಪ್ರಾಂಶುಪಾಲರಾದ ಡಾ ದಯಾನಂದ. ಕೆ.ಸಿ ತಿಳಿಸಿದ್ದಾರೆ.
ಸಂಟಿಕೊಪ್ಪ ಆ.9 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್ಬೈಲ್ ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರು ಶಿರಂಗಾಲ ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ಮಾಡಿದರು. ನಾಕೂರು ಶಿರಂಗಾಲ ಗ್ರಾ.ಪಂ ವ್ಯಾಪ್ತಿಯ ಕಾನ್ಬೈಲ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದ ವತಿಯಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿರಂಗಾಲ ಮಹಿಳಾ ಸ್ವ ಸಹಾಯ ಸಂಘಗಳಾದ ಸಪ್ತಪದಿ, ಪ್ರಗತಿ, ಭದ್ರಕಾಳಿ ಹಾಗೂ ಈಶ್ವರಿ ಸ್ವಸಹಾಯ ಸಂಘದ ಸದಸ್ಯರುಗಳು ಶಿರಂಗಾಲ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಬೆಳೆದಿದ್ದ ಗಿಡ ಗಂಟಿಗಳನ್ನು ಕಡಿದು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸ್ವಚ್ಛಗೊಳಿಸಿದರು. ಸ್ವಚ್ಛತಾ ಶ್ರಮದಾನಕ್ಕೆ ದೇವಾಲಯದ ಸಮಿತಿಯ ಅಧ್ಯಕ್ಷ ಡಿ.ಎನ್.ಧರ್ಮಪ್ಪ ಚಾಲನೆ ನೀಡಿದರು. ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಂಟಿಕೊಪ್ಪ ವಲಯ ಮೇಲ್ವಿಚಾರಕಿ ಭವ್ಯ, ಸೇವಾ ಪ್ರತಿನಿಧಿ ಯಶೋಧ, ದೇವಸ್ಥಾನ ಸಮಿತಿ ಪದಾಧಿಕಾರಿಗಳು ಹಾಗೂ ಸ್ವಸಹಾಯ ಸಂಘದ…
ಮಡಿಕೇರಿ ಆ.9 NEWS DESK : ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿಯಾಗಿರುವುದಿಲ್ಲ. ಇದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಸೂಚಿಸಿದೆ. ಹಾಗೆಯೇ ಪ್ರವಾಸೋದ್ಯಮ ಇಲಾಖೆಯಡಿಯಲ್ಲಿ ನೋಂದಣಿಗೊಳ್ಳದೆ ನಿಯಮ ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಹೋಂ-ಸ್ಟೇಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ ಪರವಾನಿಗೆ ಪಡೆದು ಕಾರ್ಯ ನಿರ್ವಹಿಸುತ್ತಿರುವ ಮತ್ತು ಪರವಾನಿಗೆ ಅವಧಿಯು 5 ವರ್ಷಗಳಿಗೆ ಮುಕ್ತಾಯಗೊಳ್ಳುತ್ತಿರುವ ಹೋಂ-ಸ್ಟೇಗಳು ಪರವಾನಿಗೆಯನ್ನು ನವೀಕರಿಸುವಂತೆ ತಿಳಿಸಲಾಗಿದೆ. ಹೋಂ-ಸ್ಟೇಗಳ ನೋಂದಣಿಗಾಗಿ ಪ್ರವಾಸೋದ್ಯಮ ಇಲಾಖೆಯು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಅಂತರ್ಜಾಲ ತಾಣ https://kttf.karnatakatourism.org/login ಮುಖಾಂತರ ಆನ್ಲೈನ್ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೋಂ-ಸ್ಟೇ ಪರಿವೀಕ್ಷಣೆಗಾಗಿ ಅಧಿಕಾರಿಗಳು ಭೇಟಿ ನೀಡಿದಾಗ ಹೋಂ-ಸ್ಟೇ ಪ್ರಮಾಣಪತ್ರ ಅಥವಾ ಹೋಂ-ಸ್ಟೇ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ದಾಖಲಾತಿಯನ್ನು ಹಾಜರುಪಡಿಸುವುದು. ಇಲ್ಲವಾದಲ್ಲಿ ಹೋಂ-ಸ್ಟೇ ಜಾಗದ ಮಾಲೀಕರ ಮೇಲೆ…






