ಮಡಿಕೇರಿ ಆ.8 NEWS DESK : ಸಂಸ್ಕೃತಿ ಸಿರಿ ಬಳಗ ಟ್ರಸ್ಟ್, ಕೊಡಗು ಮತ್ತು ನ್ಯಾಷನಲ್ ಮೆಡಿಕೋಸ್ ಸಂಸ್ಥೆಯ ಕೊಡಗು ಘಟಕದ ಸಂಯುಕ್ತಾಶ್ರಯದಲ್ಲಿ ಆ.15 ರಂದು ಮಡಿಕೇರಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಕವಿಗೋಷ್ಠಿ ಹಾಗೂ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ ನಡೆಯಲಿದೆ ಎಂದು ಟ್ರಸ್ಟ್ ನ ಸ್ಥಾಪಕಾಧ್ಯಕ್ಷರಾದ ಈರಮಂಡ ಹರಿಣಿ ವಿಜಯ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಪೋಲಿಸ್ ಮೈತ್ರಿ ಭವನದಲ್ಲಿ ಅಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ಉಚಿತ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ನಡೆಯಲಿದೆ. ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್ರಾಜ್ ಧ್ವಜಾರೋಹಣ ನೆರವೇರಿಸಿ ವೈದ್ಯಕೀಯ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಕವಿಗೋಷ್ಠಿ ಮತ್ತು ದೇಶಭಕ್ತಿ ಗಾಯನ ಸ್ಪರ್ಧೆಯನ್ನು ವಿಶೇಷ ಆಹ್ವಾನಿತರು ಹಾಗೂ ತೀರ್ಪುಗಾರರಾದ ಸಾಹಿತಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ, ಕನ್ನಡ ಸರಿಗಮಪ ಖ್ಯಾತಿಯ ಅನ್ವಿತ್ ಕುಮಾರ್ ಉದ್ಘಾಟಿಸಲಿದ್ದಾರೆ ಎಂದರು. 77ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಮ್ಮ ದೇಶದ ಆಂತರಿಕ ಭದ್ರತೆ ನಿರ್ವಹಿಸುತ್ತಿರುವ…
ಲೇಖಕ: admin
ಮಡಿಕೇರಿ ಆ.8 NEWS DESK : ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಐ ಮತ್ತು ಎಂಎಲ್ ವಿಭಾಗದ ವತಿಯಿಂದ ಕಾರ್ಗಿಲ್ ವಿಜಯ ದಿವಸವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ನಿವೃತ್ತ ಮೇಜರ್ ಡಾ. ಕುಶ್ವಂತ್ ಕೋಳಿಬೈಲು ಅಮರ್ ಜವಾನ್ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ಇಂಜಿನಿಯರ್ಗಳು ರಕ್ಷಣಾ ಇಲಾಖೆಯಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತಾರೆ ಎಂದು ಇಸ್ರೇಲ್ ದೇಶದ ಉದಾಹರಣೆಯೊಂದಿಗೆ ವಿವರಿಸಿದರು. ಅಲ್ಲದೆ ಹೇಗೆ ರಕ್ಷಣಾ ಇಲಾಖೆಯು ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುತ್ತಿದೆ ಎಂಬುದನ್ನು ತಿಳಿಸಿದರು. ಇಂದಿನ ಯುವ ಇಂಜಿನಿಯರ್ ಗಳು ಕೃತಕ ಬುದ್ದಿಮತ್ತೆಯನ್ನು ಬಳಸಿ ಹೊಸ ಅವಿಷ್ಕಾರಗಳನ್ನು ನಡೆಸಿ ದೇಶದ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಬೇಕೆಂದು ಕಿವಿ ಮಾತನ್ನು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾಡಿದ ಕೊಡವ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ರಾಕೇಶ್ ಪೂವಯ್ಯ ಮಾತನಾಡಿ, ದೇಶದ ಭದ್ರತೆಗೆ ಸೈನಿಕರ ಪಾತ್ರವು ಬಹು ಮುಖ್ಯವಾಗಿದೆ. ರಕ್ಷಣಾ ವ್ಯವಸ್ಥೆಯಲ್ಲಿ ತಂತ್ರಜ್ಞಾನದ ಪಾತ್ರ, ವಿದ್ಯಾರ್ಥಿಗಳು ಕೃತಕ ಬುದ್ದಿಮತ್ತೆಯನ್ನು ಬಳಸಿ ದೇಶದ ರಕ್ಷಣಾ…
ಕೊಡ್ಲಿಪೇಟೆ ಆ.8 NEWS DESK : ಸಮಾಜದಲ್ಲಿ ಇಂದು ನಡೆಯುತ್ತಿರುವ ಸಾಮಾಜಿಕ ಹಾಗೂ ಸಾಂಸ್ಕೃತಿಕ ತಲ್ಲಣಗಳಿಗೆ ವಚನ ಸಾಹಿತ್ಯ ದಿವ್ಯ ಔಷಧಿಯಾಗಿದೆ. ನಾಡಿನ ಸಂಸ್ಕೃತಿಗಳ ಅಧಃಪತನಕ್ಕೆ ಅನಕ್ಷರಸ್ಥರಿಗಿಂತ ಅಕ್ಷರಸ್ಥರ ಬೇಜವಬ್ದಾರಿಯ ವರ್ತನೆಗಳೇ ಕಾರಣ ಎಂದು ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ.ಜಮೀರ್ ಅಹಮದ್ ವಿಷಾದಿಸಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಕೊಡ್ಲಿಪೇಟೆಯಲ್ಲಿನ ಡಾ.ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸುತ್ತೂರು ಮಹಾಸಂಸ್ಥಾನ ಮಠದ ಶ್ರೀ ಗುರು ಪಂಚಾಕ್ಷರ ಶಿವಾಚಾರ್ಯರ ದತ್ತಿ “ಶರಣ ಸಂಸ್ಕೃತಿ ಪ್ರಸಾರ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮಾಜದಲ್ಲಿಂದು ಘಟಿಸುತ್ತಿರುವ ಬಹುತೇಕ ಸಮಸ್ಯೆಗಳಿಗೆ ಹನ್ನೆರಡನೇ ಶತಮಾನದ ವಚನಕಾರರು ನೀಡಿದ ಸಾಮಾಜಿಕ ಸಂದೇಶಗಳು ಪರಿಹಾರವಾಗಿವೆ. ಬಸವೇಶ್ವರರಾದಿಯಾಗಿ ವಚನಕಾರರು ನಡೆ ನುಡಿಗಳೆರಡನ್ನು ಒಂದಾಗಿಸಿ ಕಾಯಕವೇ ಕೈಲಾಸ, ಎನಗಿಂತ ಕಿರಿಯರಿಲ್ಲ. ಶಿವ ಶರಶರಣರಿಗಿಂತ ಹಿರಿಯರಿಲ್ಲ ಲೋಕದ ಡೊಂಕನ್ನು ನೀವೇಕೆ ತಿದ್ದುವಿರಿ.. ನಿಮ್ಮನ್ನು ನೀವು ತಿದ್ದಿಕೊಂಡು ನೋಡಿ. ಸಮಾಜವೇ ಬದಲಾಗಿರುತ್ತದೆ ಎಂದು ಸಾರಿದರು. ಕಲಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ ಎಂಬ…
ಬೆಂಗಳೂರು ಆ.8 NEWS DESK : ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾವುದೇ ಜಾತಿ, ಧರ್ಮ,ಭಾಷೆ, ಪ್ರದೇಶಗಳಿಗೆ ಸೇರಿದ ಎಲ್ಲ ಜನರಿಗೂ ಸಮಾನ ಅವಕಾಶಗಳು ದೊರೆಯಬೇಕು. ಜನರಿಗೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಗಳಿಸಲು ಸಾಧ್ಯ ಎಂಬುದರಲ್ಲಿ ನಂಬಿಕೆಯಿರಿಸಿದ್ದರು. ಅಂಬೇಡ್ಕರ್ ರವರ ಬಾಲ್ಯದಿಂದ ತಮ್ಮ ಜೀವಿತಾವಧಿಯಲ್ಲಿನ ಪ್ರಮುಖ ಸಾಧನೆಗಳನ್ನು ವಿವಿಧ ರೂಪದಲ್ಲಿ ಪ್ರದರ್ಶನದಲ್ಲಿ ಬಿಂಬಿಸಲಾಗಿದ್ದು, ಜನರು ಅವರ ಆಶಯಗಳ ಬಗ್ಗೆ ಅರಿಯಬಹುದಾಗಿದೆ. ಜನರು ಸಂವಿಧಾನದ ಬಗ್ಗೆ ಅರಿವು ಪಡೆದಾಗ ಮಾತ್ರ ಸಂವಿಧಾನದ ರೀತ್ಯ ನಡೆದುಕೊಳ್ಳಲು ಸಾಧ್ಯ. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ರವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯಲಾಗುತ್ತದೆ.ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ ಎಂದರು. ಆ.19 ವರೆಗೆ ಲಾಲ್…
ಮಡಿಕೇರಿ ಆ.8 NEWS DESK : ಬಾಳೆಲೆ ವಿಜಯಲಕ್ಷ್ಮಿ ಪ್ರೌಢ ಶಾಲೆ, ಕಾಕೂರು ಜೆಸಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಕಳತ್ ಮಾಡ್ ಪ್ರೌಢಶಾಲೆಯಲ್ಲಿ ವಿಶ್ವ ಶಾಂತಿಗಾಗಿ ಲೇಖನಿ ಅಭಿಯಾನ ನಡೆಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಶೇಕರ್ ಮಾತನಾಡಿ ಲೇಖನಿಯ ಮಹತ್ವವವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಲೇಖನಿ ಖಡ್ಗ ಕ್ಕಿಂತ ಹರಿತವಾದದ್ದು, ಲೇಖನಿ ಹಿಡಿಯಿರಿ ವಿಶ್ವ ಮಾನವರಾಗಿ, ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ, ವಿಶ್ವ ಶಾಂತಿ, ಲೇಖನಿ ಹಿಡಿಯಿರಿ ವಿಶ್ವ ಮಾನವರಾಗಿ, ಸಮಾಜದಲ್ಲಿ ತತ್ವ – ಸಿದ್ದಾಂತವನ್ನು ಬೆಂಬಲಿಸಬೇಕು, ಶಿಕ್ಷಣ ಪ್ರತಿಯೊಬ್ಬರು ಪಡೆಯಬೇಕು, ಪ್ರತಿಯೊರ್ವ ಹೆಣ್ಣುಮಕ್ಕಳು ಶಿಕ್ಷಣ ಪಡೆಯಬೇಕು, ಲೇಖನಿ ಮೂಲಕ ಮಾನವೀಯ ಸಂದೇಶ, ಲೇಖನಿ ಸಮಾಜದ ಅಂಕು ಡೊಂಕುಗಳನ್ನು ತಿದ್ದಿ ಸಮಾಜವನ್ನು ಶಾಂತಿ ಮಾರ್ಗದ ಕಡೆಗೆ ನಡೆಸುತ್ತದೆ, ಲೇಖನಿ ಹಿಡಿದು ಶಿಕ್ಷಕರಾಗಬಹುದು, ಡಾಕ್ಟರ್ ರಾಗಬಹುದು, ವಿಜ್ಞಾನಿ ಯಾಗಬಹುದು, ರೈತರಾಗಬಹುದು, ಯುದ್ಧ ಬೇಡ, ಶಾಂತಿ ಬೇಕು, ಲೇಖನಿಯನ್ನು ಗೌರವಿಸಿ, ಲೇಖನಿ ಹಿಡಿಯಿರಿ ಮೌಡ್ಯ ಮುಕ್ತ ಸಮಾಜ ನಿರ್ಮಾಣ ಮಾಡೋಣ, ಶಿಕ್ಷಣ ಪ್ರತಿಯೊಬ್ಬರ ಹಕ್ಕು ಸಮಾಜದಲ್ಲಿ…
ಮಡಿಕೇರಿ ಆ.8 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 2024-25 ನೇ ಸಾಲಿಗೆ ಇಲಾಖೆಯ ಬ್ಯಾಟರಿಚಾಲಿತ ಗಾಲಿಕುರ್ಚಿ, 10ನೇ ತರಗತಿ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕವನ್ನು ಮರು ಪಾವತಿಸುವ ಯೋಜನೆ, ವಿಕಲಚೇತನ ವ್ಯಕ್ತಿಗಳನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗಳಿಗೆ ಪ್ರೋತ್ಸಾಹ ಧನ ಯೋಜನೆಗಳಡಿ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.15 ಕೊನೆಯ ದಿನವಾಗಿದೆ. ಈ ಕಚೇರಿಗೆ ಅಥವಾ ಆಯಾಯ ತಾಲ್ಲೂಕಿನ ಗ್ರಾಮ ಪಂಚಾಯಿತಿಯಲ್ಲಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲೆಯ ಗ್ರಾಮ ಪಂಚಾಯತ್ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಆರ್ಡಬ್ಲ್ಯು ಹಾಗೂ ತಾಲ್ಲೂಕು ಪಂಚಾಯತ್ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್ಡಬ್ಲ್ಯುಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನವರು ಹರೀಶ್ ಟಿ.ಆರ್. ಮೊ.ಸಂ. 8861428931, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ ಮೊ.ಸಂ-9900883654 ಹಾಗೂ ಮಡಿಕೇರಿ ತಾಲ್ಲೂಕಿನವರು ರಾಜೇಶ್ ಮೊ.ಸಂ–8073192914 ಸಂಖ್ಯೆಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ.08272-295829 ನ್ನು ಕಚೇರಿ ವೇಳೆಯಲ್ಲಿ…
ಸುಂಟಿಕೊಪ್ಪ ಆ.8 NEWS DESK : ಸುಂಟಿಕೊಪ್ಪ ವಾಹನ ಚಾಲಕರ ಸಂಘದ 2024-25ನೇ ಸಾಲಿನ ಅಧ್ಯಕ್ಷರಾಗಿ ಕೆ.ವಿ.ಕಿಟ್ಟಣ್ಣ ರೈ, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಐ.ರಿಜ್ವಾನ್ ಆಯ್ಕೆಯಾಗಿದ್ದಾರೆ. ಸಂಘದ ಸಾರ್ವಜನಿಕ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಸುರೇಶ್ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಅಬ್ದುಲ್ಲ (ಅವುಲಕುಟ್ಟಿ), ಸಹಕಾರ್ಯದರ್ಶಿ ಪಿ.ಎಸ್.ರೀನು, ಖಜಾಂಚಿಯಾಗಿ ಅನೀಶ್, ಸಂಘಟನಾ ಕಾರ್ಯದರ್ಶಿಯಾಗಿ ಮುನೀರ್ ಕಂಬಿಬಾಣೆ, ಸಲಹಾ ಸಮಿತಿಗೆ ಸಿ.ಎ.ಬಸಪ್ಪ, ರಾಜ, ವಿನೀಶ್ಡಿಸೋಜ, ಇಸ್ಮಾಹಿಲ್(ಕಾಕ್ಕು), ಕೆ.ರವಿ, ಅತೀಕ್, ಸಂದೀಫ್, ಸುರೇಸ, ಅಸೀಸ್, ಅಸ್ಕರ್, ಸೈನುದ್ದೀನ್, ಶಕ್ತಿವೇಲು, ಮೋನು ಅವರನ್ನು ನೇಮಕ ಮಾಡಲಾಯಿತು. ಇದೇ ಸಂದರ್ಭ ಚಾಲಕ ಸಿ.ಎ.ಬಸಪ್ಪ ಅವರನ್ನು ನೂತನ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.
ಸುಂಟಿಕೊಪ್ಪ ಆ.8 NEWS DESK : ಸುಂಟಿಕೊಪ್ಪ ಪೊಲೀಸ್ ಠಾಣೆ ವತಿಯಿಂದ ಆಟೋ ಮತ್ತು ವಾಹನ ಚಾಲಕರಿಗೆ ರಸ್ತೆ ಸುರಕ್ಷತೆಯ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು. ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಮಾತನಾಡಿ, ಆಟೋ ಚಾಲಕರು ಮತ್ತು ವಾಹನ ಚಾಲಕರುಗಳು ರಸ್ತೆ ಸುರಕ್ಷತೆಯ ದಿಸೆಯಲ್ಲಿ ವಾಹನಗಳಲ್ಲಿ ಮಿತಿಗಿಂತ ಅಧಿಕ ಜನರನ್ನು ಕರೆದೋಯ್ಯವ ಸಂದರ್ಭದಲ್ಲಿ ಅವಘಡಗಳು ಸಂಭವಿಸಿದರೆ ಅಪರಾಧವಾಗುತ್ತದೆ. ಅಲ್ಲದೆ ವಿಮೆಪಡೆದುಕೊಳ್ಳಲು ಕಷ್ಟಸಾಧ್ಯವಾಗುತ್ತದೆ. ವಾಹನಗಳನ್ನು ಚಲಾಯಿಸುವಾಗ ರಸ್ತೆಯ ನಿಯಮಗಳನ್ನು ಚಾಲಕರು ಕಟ್ಟುನಿಟ್ಟಾಗಿ ಪಾಲಿಸಬೇಕು, ಅತೀಯಾದ ವೇಗದ ಚಾಲನೆಗೆ ಕಡಿವಾಣ ಹಾಕಬೇಕು ಮತ್ತು ಅಪಘಾತಗಳನ್ನು ತಡೆಯಬಹುದಾಗಿದೆ. ವಾಹನಗಳನ್ನು ಚಲಾಯಿಸುವ ಸಂದರ್ಭ ಪ್ರತಿಯೊಬ್ಬ ಚಾಲಕರು ಚಾಲಕರಿಗೆ ನೀಡಲಾಗಿರುವ ಪರವನಾಗಿ, ವಿಮೆ, ವಾಹನದ ದಾಖಲಾತಿಗಳನ್ನು ಕಡ್ಡಾಯವಾಗಿ ತಮ್ಮ ಬಳಿ ಇರಿಕೊಳ್ಳುವುದು, ಕಾಲಕ್ಕೆ ಅದನ್ನು ನವೀಕರಿಸಿಕೊಬೇಕು ಎಂದರು. ಆಟೋ ಮತ್ತು ವಾಹನಗಳಲ್ಲಿ ಶಾಲಾ ಮಕ್ಕಳನ್ನು ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಕರೆದೋಯ್ಯಬಾರದು. ಪ್ರಯಾಣಿಕರಿಂದ ದುಪ್ಪಟ್ಟು ಬಾಡಿಗೆ ವಸೂಲಾತಿ ಮಾಡುವುದು, ಸಮವಸ್ತ್ರ ಧರಿಸದೆ ಮತ್ತು ವಾಹನ ನಿಲುಗಡೆ…
ಸೋಮವಾರಪೇಟೆ ಆ.8 NEWS DESK : ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು. ತಹಶೀಲ್ದಾರ್ ನವೀನ್ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ಸದಸ್ಯರು ಮತ್ತು ವಿವಿಧ ಇಲಾಖಾಧಿಕಾರಿಗಳು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಪೂರ್ವಭಾವಿ ಸಭೆಗಳಿಗೆ ಬಹುತೇಕ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸದೆ ತಮ್ಮ ಇಲಾಖೆಯ ಸಿಬ್ಬಂದಿಗಳನ್ನು ಕಳುಹಿಸುತ್ತಿರುವ ಕುರಿತು ಅಸಮಾಧಾನ ವ್ಯಕ್ತವಾಯಿತು. ಪೊಲೀಸ್ ಇಲಾಖೆಯವರು ಪಥಸಂಚಲನದ ನೇತೃತ್ವವನ್ನು ವಹಿಸುವಂತೆ ತೀರ್ಮಾನಿಸಲಾಯಿತು. ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ತಾಲೂಕಿನಲ್ಲಿ ಅತೀ ಹೆಚ್ಚು ಅಂಕ ಪಡೆದ ತಲಾ ಈರ್ವರು ವಿದ್ಯಾರ್ಥಿಗಳನ್ನು ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಹಾಗು ಸರ್ಕಾರಿ ಇಲಾಖೆಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರನ್ನು ಗುರುತಿಸಿ ಗೌರವಿಸಲು ತೀರ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ ಹಾಗು ಅಗ್ನಿಶಾಮಕ ದಳದ ವತಿಯಿಂದ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ ನಡೆಯಲಿದೆ ಎಂದು ತಹಶೀಲ್ದಾರ್ ತಿಳಿಸಿದರು. ಸಭೆಯಲ್ಲಿ ಗ್ರೇಡ್ 2…
ಮಡಿಕೇರಿ NEWS DESK ಆ.7 : ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಿಬ್ಬೆಟ್ಟ ಗ್ರಾಮದಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 7 ಆರೋಪಿಗಳನ್ನು ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕುದುಮಾರು ಗ್ರಾಮದ ಕೆ.ರೋಷನ್(32), ಕನ್ಯಾನ ನಿವಾಸಿ ಸತೀಶ್ ರೈ(54), ಪಡೂರು ಗ್ರಾಮದ ಕೆ.ಗಣೇಶ(28), ವೀರಕೆಂಬ ಗ್ರಾಮದ ಕುಸುಮಕರ(39), ವಿರಾಜಪೇಟೆ ಶಿವಕೇರಿಯ ಸೂರ್ಯಪ್ರಸಾದ್ ಬಿ.ಎ(43), ಸೋಮವಾರಪೇಟೆ ವೆಂಕಟೇಶ್ವರ ಬ್ಲಾಕ್ ನಿವಾಸಿ ವಿನೋದ್ ಕುಮಾರ್ ಹೆಚ್.ಪಿ(36) ಹಾಗೂ ಕುಶಾಲನಗರ ತಾಲ್ಲೂಕು ಹೆಬ್ಬಾಲೆ ಗ್ರಾಮದ ಬಿ.ಮೋಹನ್ ಕುಮಾರ್(45) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳ ಬಳಿಯಿಂದ 3.2 ಲಕ್ಷ ರೂ. ನಗದು, ಕೃತ್ಯಕ್ಕೆ ಬಳಸಿದ್ದ 2 ಕಾರುಗಳು ಮತ್ತು 9 ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಶಾಮೀಲಾದ ಇತರ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ::: ಪ್ರಕರಣದ ಹಿನ್ನೆಲೆ ::: ಸೋಮವಾರಪೇಟೆಯ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಅನುಷಾ…






