ಲೇಖಕ: admin

ಕುಶಾಲನಗರ ಆ.7 NEWS DESK : ಶಾಲಾ ಮಕ್ಕಳ ಮನದಲ್ಲಿ ಸಾಮರಸ್ಯದ ಮೊಹರು ಬೆಳೆಸಲು ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಾವು ಮನುಜರು ವಿನೂತನ ಕಾರ್ಯಕ್ರಮ ನಡೆಯಿತು. ಶಾಲೆಯ ಎಸ್.ಡಿ.ಎಂ.ಸಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ( ಎನ್ನೆಸ್ಸೆಸ್) ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾವು ಮನುಜರು ಕಾರ್ಯಕ್ರಮದ ಉದ್ದೇಶ ಹಾಗೂ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿ ಪ್ರತಿಜ್ಞಾ ವಿಧಿ ಬೋಧಿಸಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಮಕ್ಕಳಲ್ಲಿ ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ, ಪರಿಸರ ಪ್ರಜ್ಞೆ, ಮೌಢ್ಯಗಳ ನಿವಾರಣೆ ಬಗ್ಗೆ ಜಾಗೃತಿ ಸೇರಿದಂತೆ ಸಾಂವಿಧಾನಿಕ ಮೌಲ್ಯಗಳನ್ನು ಬೆಳೆಸಲು ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಮೂಲಕ ಶಾಲೆಗಳಲ್ಲಿ ಪ್ರಸಕ್ತ ಸಾಲಿನಿಂದ “ನಾವು ಮನುಜರು” ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಇದರಿಂದ ಮಕ್ಕಳಲ್ಲಿ ಸಾಮಾಜಿಕ ಸಾಮರಸ್ಯ, ಸಹಬಾಳ್ವೆ, ಸಾಂವಿಧಾನಿಕ ಮೌಲ್ಯ ಬೆಳೆಸಲು ಸಾಧ್ಯ ಎಂದರು. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ, ಪರಿಸರ ಪ್ರಜ್ಞೆ, ಮೂಢನಂಬಿಕೆಗಳ ನಿರ್ಮೂಲನೆ ಮತ್ತು ಮೂಢನಂಬಿಕೆಗಳ ಸಮನ್ವಯತೆ ಮತ್ತು ವಿಜ್ಞಾನದ ಬಗ್ಗೆ ಜಾಗೃತಿ…

Read More

ಮಡಿಕೇರಿ ಆ.7 NEWS DESK : ಕೊಡಗು ಜಿಲ್ಲೆಯಲ್ಲಿ 2024ನೇ ಸಾಲಿನಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ಜಿಲ್ಲೆಯಲ್ಲಿನ ಕೂಲಿ ಕಾರ್ಮಿಕರಿಗೆ ಕೆಲಸ ಇಲ್ಲದೆ ದಿನ ನಿತ್ಯದ ಜೀವನ ನಡೆಸಲು ತೊಂದರೆ ಉಂಟಾಗಿದ್ದು, ಈ ಮಧ್ಯೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಲವಾರು ಹಣಕಾಸು ಸಂಸ್ಥೆಗಳು/ ಗಿರವಿದಾರರು ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಕೃಷಿಯೇತರ ಸಾಲಗಳನ್ನು ಪಡೆದಿರುತ್ತಾರೆ ಈ ಬಾಬು ಸದರಿ ಸಾಲ ನೀಡಿದ ಹಣಕಾಸು ಸಂಸ್ಥೆಗಳು ಪ್ರತೀ ವಾರ/ಮಾಹೆ ಕಂತುಗಳಲ್ಲಿ ಸಾಲ ವಸೂಲಿ ಮಾಡುತ್ತಿರುವುದು ಸರಿಯಷ್ಟೇ. ಈ ಸಂಸ್ಥೆಗಳಿಂದ ಸಾಲವನ್ನು ಪಡೆಯುವ ಸಾರ್ವಜನಿಕರು ಬಹುತೇಕ ಕೂಲಿ ಕಾರ್ಮಿಕರು, ಕೃಷಿಕರು ಮತ್ತು ಶ್ರಮಿಕರಾಗಿರುತ್ತಾರೆ. ಆದರೆ ಕೊಡಗು ಜಿಲ್ಲೆಯಲ್ಲಿ ಬಿದ್ದ ಭಾರೀ ಮಳೆಯಿಂದ ಕೂಲಿ ಕಾರ್ಮಿಕರು, ಕೃಷಿಕರು ಹಾಗೂ ಶ್ರಮೀಕ ವರ್ಗದ ಜನರಿಗೆ ಕೆಲಸವಿಲ್ಲದೆ ಅವರ ಆದಾಯದಲ್ಲಿ ವ್ಯತ್ಯಾಯ ಉಂಟಾಗಿರುತ್ತದೆ. ಇದರಿಂದ ಸದರಿಯವರಿಗೆ ಕಂತುಗಳನ್ನು ಪಾವತಿಸಲು ಕಷ್ಟಸಾಧ್ಯವಾಗಿದೆ ಈ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಹಣಕಾಸು ಸಂಸ್ಥೆಗಳು/ಗಿರವಿದಾರರು ಹಾಗೂ ಮೈಕ್ರೋ ಫೈನಾನ್ಸ್ ಸಾಲ ಸೌಲಭ್ಯ ನೀಡುವ ಸಂಸ್ಥೆಗಳು…

Read More

ಮಡಿಕೇರಿ NEWS DESK ಆ.7 : ಕೊಡಗು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ ನಗರದಲ್ಲಿ ಪ್ರತಿಭಟನೆ ನಡೆಸಿತು. ಬಿಎಸ್‌ಪಿ ಜಿಲ್ಲಾಧ್ಯಕ್ಷ ಆಟ್ರಂಗಡ ದಿವಿಲ್‌ಕುಮಾರ್ ನೇತೃತ್ವದಲ್ಲಿ ನಗರದ ಎಲ್‌ಐಸಿ ಕಚೇರಿ ಬಳಿ ಇರುವ ಬಹುಜನ ಸಮಾಜ ಪಾರ್ಟಿಯ ಮುಂಭಾಗ ಜಮಾಯಿಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಜಿಲ್ಲಾ ಕಚೇರಿ ಬಳಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಅಣಕು ಶವಯಾತ್ರೆಯೊಂದಿಗೆ ಕಾಲ್ನಡಿಗೆ ಮೂಲಕ ತೆರಳಿ ಮಾನವ ಸರಪಳಿ ರಚನೆ ಮಾಡಿ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಆಟ್ರಂಗಡ ದಿವಿಲ್‌ಕುಮಾರ್ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಳ್ಳೀರ ಹರೀಶ್, ಸ್ವಾತಂತ್ರ್ಯ ಬಂದು 77 ವರ್ಷ ಕಳೆದರೂ ಇನ್ನೂ ಕೂಡ ಕೊಡಗು ಜಿಲ್ಲೆಯ ಮೂಲ ನಿವಾಸಿಗಳು, ಬಡವರ್ಗದವರಿಗೆ ಮೂಲಭೂತ ಸೌಕರ್ಯಗಳು ಲಭಿಸಿಲ್ಲ. ಜಿಲ್ಲೆಯಲ್ಲಿ ಸಾಮಾನ್ಯವಾಗಿ ಮೂರರಿಂದ ನಾಲ್ಕು ತಿಂಗಳ ಕಾಲ ಮಳೆಗಾಲ ಇರುತ್ತದೆ. ಈ ಸಂದರ್ಭದಲ್ಲಿ ಸಾವನ್ನಪ್ಪುವವರ ಶವ ಸಂಸ್ಕಾರಕ್ಕೆ ಅಗತ್ಯವಾಗಿ ಬೇಕಾಗುವ ಕಟ್ಟಿಗೆಗಳು ಸಿಗುವುದಿಲ್ಲ.…

Read More

ಮಡಿಕೇರಿ ಆ.7 NEWS DESK : ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. 2023-24 ಮತ್ತು 2024-25ನೇ ಸಾಲಿನಿಂದ ಶಿಷ್ಯವೇತನಕ್ಕೆ ಆಯ್ಕೆ ಪ್ರಕ್ರಿಯೆಯನ್ನು ಮೊಬೈಲ್, ವಿಡಿಯೋ ಚಿತ್ರೀಕರಣದ ಮೂಲಕ ಆಯ್ಕೆ ಮಾಡಲು ಅಕಾಡೆಮಿ ತೀರ್ಮಾನಿಸಿದೆ. ಶಿಷ್ಯವೇತನ ಅರ್ಜಿಗಳ ಬಗ್ಗೆ ಮಾಹಿತಿಯನ್ನು ಅಕಾಡೆಮಿ ಪೇಸ್‍ಬುಕ್  (face book: com/karnatakasangeeta1978) ಮೂಲಕ ಪಡೆದು ವೆಬ್‍ಸೈಟ್ sangeetanrityaacademy.karnataka.gov.in ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು. ಸಂದರ್ಶನದ ಬದಲಿಗೆ ಅಭ್ಯರ್ಥಿಗಳು ಇನ್ನು ಮುಂದೆ ಅರ್ಜಿಯಲ್ಲಿ ನೀಡಿರುವ ಪಠ್ಯಕ್ರಮವನ್ನು ಮೊಬೈಲ್/ ವಿಡಿಯೋ ಚಿತ್ರೀಕರಿಸಿ, ಪೆನ್‍ಡ್ರೈವ್‍ನಲ್ಲಿ ಅಳವಡಿಸಿ, ಪೆನ್‍ಡ್ರೈವ್‍ನೊಂದಿಗೆ ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಕಾರ್ಯಾಲಯಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು. ಈ ರೀತಿಯಾಗಿ ಬಂದ ಅರ್ಜಿಗಳನ್ನು ಆಯಾಯ ಕಲಾ…

Read More

ನಾಪೋಕ್ಲು ಆ.7 NEWS DESK : ಪ್ರತಿಯೊಂದು ಸಮುದಾಯಗಳು ತಮ್ಮ ಸಂಸ್ಕೃತಿಗೆ ಸಂಬಂಧಪಟ್ಟ ಕಾರ್ಯಕ್ರಮಗಳನ್ನು ನಡೆಸುವಾಗ ಯುವಪೀಳಿಗೆಗೆ ಕೆಲವು ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಅವರಲ್ಲಿ ಸಂಸ್ಕೃತಿಯ ಬಗ್ಗೆ ಜ್ಞಾನ ಮತ್ತು ಜಾಗೃತಿಯನ್ನು ಮೂಡಿಸುವ ಅವಶ್ಯಕತೆ ಇದೆ ಎಂದು ಮೈಸೂರು ಗೌಡ ಸಮಾಜದ ನಿಕಟ ಪೂರ್ವ ಅಧ್ಯಕ್ಷ ತೋಟಂಬೈಲು ಮನೋಹರ್ ಅಭಿಪ್ರಾಯಪಟ್ಟರು. ಮೈಸೂರಿನ ಕೊಡಗು ಗೌಡ ಸಮಾಜ ಹಾಗೂ ಕೊಡಗು ಮತ್ತು ದಕ್ಷಿಣ ಕನ್ನಡ ಮಹಿಳಾ ಸಮಾಜಗಳ ಸಂಯುಕ್ತಾಶ್ರಯದಲ್ಲಿ ಮೈಸೂರು ಕೊಡವ ಸಮಾಜದಲ್ಲಿ ನಡೆದ “ಆಟಿ ಗೌಜಿ “ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ವರ್ಷದಿಂದ ವರ್ಷಕ್ಕೆ ಕಾರ್ಯಕ್ರಮಗಳಲ್ಲಿ ವೈವಿಧ್ಯತೆ ಮತ್ತು ಶ್ರೇಷ್ಠತೆಯನ್ನು ಕಾಯ್ದುಕೊಂಡು ಯುವಜನರನ್ನು ಆಕರ್ಷಿಸಬೇಕು ಎಂದರು. ರಂಗಾಯಣ ಕಲಾವಿದೆ ಹಾಗೂ ಕೊಡಗು ಮತ್ತು ದಕ್ಷಿಣ ಕನ್ನಡ ಮಹಿಳಾ ಸಮಾಜದ ನಿಕಟ ಪೂರ್ವ ಅಧ್ಯಕ್ಷೆ ಗೀತಾ ಮೋಂಟಡ್ಕ ಮಾತನಾಡಿ, ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮುದಾಯಗಳ ಸಂಸ್ಕೃತಿಯಲ್ಲಿ ಅನ್ಯೋನ್ಯತೆ ಇದ್ದರೂ ಆಯಾ ಪರಿಸರಕ್ಕೆ ಸಂಬಂಧಪಟ್ಟಂತೆ ಕೆಲವು ಬದಲಾವಣೆಗಳಿವೆ. ಆದರೆ ಪ್ರತಿಯೊಂದು…

Read More

ಮಡಿಕೇರಿ ಆ.7 NEWS DESK : ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ…

Read More

ಮಡಿಕೇರಿ ಆ.7 NEWS DESK : ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಶಾಲಾ ಕಾಲೇಜುಗಳ ಪಠ್ಯ ವಿಷಯಗಳಲ್ಲಿ ‘ಸಹಕಾರ’ ವಿಷಯ ಅಳವಡಿಕೆ’ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಮಾಹಿತಿ ತಂತ್ರಜ್ಞಾನ ಬಳಕೆ ಮತ್ತು ತಾಂತ್ರಿಕತೆ ಅಳವಡಿಕೆಯಿಂದ ಮಾತ್ರವೇ ಸಹಕಾರಿ ಚಳುವಳಿ ಬಲ್ಯಾಡ್ಯಗೊಳ್ಳಬಲ್ಲದು’ಎಂಬ ವಿಷಯದ ಬಗ್ಗೆ ಚರ್ಚಾ ಸ್ಪರ್ಧೆ ನಡೆಯಿತು. ಕೊಡಗು ಜಿಲ್ಲಾ ಸಹಕಾರಯೂನಿಯನ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಲೆಗಳಿಂದ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಪ್ರಬಂಧವನ್ನು ಮಂಡಿಸಿದರು. ನಂತರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ವಿಷಯದ ಕುರಿತಾಗಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಚರ್ಚಾ ಸ್ಪರ್ಧೆ ಕಾಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಎನ್.ಎ. ರವಿ ಬಸಪ್ಪ ವಹಿಸಿದ್ದರು. ಚರ್ಚಾ ಸ್ಪರ್ಧೆಯ ತೀರ್ಪುಗಾರರಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶೈಲಜಾ, ಯೂನಿಯನ್ ನಿರ್ದೇಶಕ ಕೆ.ಎಂ.ತಮ್ಮಯ್ಯ, ಕೆ.ಐ.ಸಿ.ಎಂ.ನ ಪ್ರಾಂಶುಪಾಲರಾದ ಡಾ. ಆರ್,ಎಸ್, ರೇಣುಕಾ ಹಾಗೂ ಪ್ರಬಂಧ ಪತ್ರಿಕೆಯ ಮೌಲ್ಯಮಾಪಕರಾಗಿ ಕೆ.ಐ.ಸಿ.ಎಂ.ನ ನಿವೃತ್ತ ಪ್ರಾಂಶುಪಾಲರಾದ ಎಂ.ಎಂ. ಶ್ಯಾಮಲಾ…

Read More

ಸುಂಟಿಕೊಪ್ಪ ಆ.7 NEWS DESK : ಕಾನ್‍ಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಾಕೂರು ಶಿರಂಗಾಲ ಗ್ರಾ.ಪಂ ವತಿಯಿಂದ ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಟ್ರ್ಯಾಕ್ ಸೂಟ್ ವಿತರಿಸಲಾಯಿತು. ಗ್ರಾ.ಪಂ ಸದಸ್ಯ ಕೊಳಂಬೆ ಸುಭಾಶ್ ಮಾತನಾಡಿ ಹಿಂದಿನ ಕಾಲದಲ್ಲಿ ನಾವು ಶಾಲೆಯಲ್ಲಿ ವ್ಯಾಸಾಂಗ ಮಾಡುವ ಸಂದರ್ಭ ಇಂತಹ ಸೌಲಭ್ಯ ಇರಲಿಲ್ಲ. ಇಂದಿನ ಕಾಲದಲ್ಲಿ ಸರಕಾರಿ ಶಾಲೆಗಳಲ್ಲಿ ಸಮವಸ್ತ್ರ, ಊಟ, ಕ್ಷೀರ ಭಾಗ್ಯ, ಆರೋಗ್ಯ ತಪಾಸಣೆ, ದಾನಿಗಳಿಂದ ಉಚಿತ ನೋಟ್ ಪುಸ್ತಕ, ಕ್ರೀಡಾ ಸಾಮಗ್ರಿ ಎಲ್ಲಾವನ್ನು ನೀಡುತ್ತಿದೆ. ಆದರೆ ಸರಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಇಳಿಮುಖಗೊಳ್ಳುತ್ತಿರುವುದು ವಿಷಾದನೀಯ ಎಂದ ಅವರು, ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ದಾಖಲಿಸಲು ಹೆಚ್ಚಿನ ಆಸಕ್ತಿ ತೋರಬೇಕೆಂದು ಮನವಿ ಮಾಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೂಳಪ್ಪ ಮಾತನಾಡಿ, ಪೋಷಕರು ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಶಾಲೆಗಳಿಗೆ ಕಳುಹಿಸಲಾಗುತ್ತಿದ್ದು, ಮಕ್ಕಳು ದುಶ್ಚಟಗಳಿಗೆ ಬಲಿಯಾಗದೆ ದೇಶದ ಉತ್ತಮ ಪ್ರಜೆಗಳಾಗಿ ಮೂಡಬೇಕೆಂದು ಕರೆ ನೀಡಿದರು.ಈ ಸಂದರ್ಭ ಮುಖ್ಯ ಶಿಕ್ಷಕರಾದ ಮೂರ್ತಿ…

Read More

ಪ್ಯಾರಿಸ್‌ NEWS DESK ಆ.6 : ಪ್ಯಾರಿಸ್‌ ಒಲಿಂಪಿಕ್ಸ್‌ ನಲ್ಲಿ ಮಹಿಳೆಯರ 50 ಕೆಜಿ ಫ್ರೀಸ್ಟೈಲ್‌ ವಿಭಾಗದಲ್ಲಿ ಭಾರತದ ವಿನೀಶ್‌ ಫೋಗಾಟ್‌ (Vinesh Phogat)ಅವರು ಫೈನಲ್‌ ಪ್ರವೇಶಿಸಿದ್ದಾರೆ. ಇಂದು ನಡೆದ ಸೆಮಿ ಫೈನಲ್‌ ಪಂದ್ಯದಲ್ಲಿ ಅವರು ಕ್ಯೂಬಾದ ಗುಸ್ಮನ್‌ ಲೋಪೆಜ್‌ ಅವರನ್ನು 5-0 ಅಂತರದಿಂದ ಸೋಲಿಸಿದರು. ಈ ಸಾಧನೆಯಿಂದ ವಿನೀಶ್‌ ಫೋಗಾಟ್‌ ಒಲಿಂಪಿಕ್‌ ಫೈನಲ್‌ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

Read More

ಸೋಮವಾರಪೇಟೆ NEWS DESK ಆ.6 : ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಸೌಲಭ್ಯ ದೊರಕುವಂತಾಗಬೇಕು ಎಂದು ತಪೋಕ್ಷೇತ್ರ ಮನೇಹಳ್ಳಿ ಮಠದ ಶ್ರೀ.ಮಹಾಂತ ಶಿವಲಿಂಗ  ಸ್ವಾಮೀಜಿ ಆಶಯ ವ್ಯಕ್ತಪಡಿಸಿದರು. ರಾಜ್ಯ ರಸ್ತೆ ಸಾರಿಗೆ ನಿಗಮ ಅರಕಲಗೂಡು ಡಿಪೋದಿಂದ ಮಾಗಲು,ಅಂಕನಹಳ್ಳಿ ಮೂಲಕ ಮನೆಹಳ್ಳಿ ಮಠಕ್ಕೆ ಬರುವ ಕೆ.ಎಸ್ ಆರ್.ಟಿ.ಸಿ. ನೂತನ ಬಸ್ಸ್ ಮಾರ್ಗಕ್ಕೆ ಮಠದ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದರು. ಕಳೆದ ಹಲವು ವರ್ಷಗಳಿಂದ ಈ ಭಾಗಕ್ಕೆ ಸರ್ಕಾರಿ ಬಸ್ಸ್ ನ ಬೇಡಿಕೆ ಇತ್ತು, ಇಲ್ಲಿನ ವಿದ್ಯಾರ್ಥಿಗಳು,ಗ್ರಾಮಸ್ಥರು ನಗರ ಪ್ರದೇಶಗಳಿಗೆ ತೆರಳಲು ಪರದಾಡುತ್ತಿದ್ದರು ಈ ಬಗ್ಗೆ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿಮಾಡಿ ಮನವಿ ಸಲ್ಲಿಸಿದ ಹಿನ್ನಲೆಯಲ್ಲಿ ಸಚಿವರು ಇಂದಿನಿಂದ ಬಸ್ಸ್ ಸೌಲಭ್ಯ ಕಲ್ಪಿಸಿದ್ದಾರೆ ಎಂದರು. ಬೆಳಿಗ್ಗೆ 8.30ಕೆ ಅರಕಲಗೂಡಿನಿಂದ ಹೊರಟು ಮಾಗಲು, ಅಂಕನಹಳ್ಳಿ ಮೂಲಕ ಶನಿವಾರಸಂತೆ ನಂತರ ಅರಕಲಗೂಡಿಗೆ ತೆರಳಲಿದೆ. ಸಂಜೆ 4 ಗಂಟೆಗೆ ಮತ್ತೊಂದು  ಬಸ್ ಇದೆ ಮಾರ್ಗವಾಗಿ ಸಂಚರಿಸಲಿದೆ ಎಂದರು. ಹಿಂದುಳಿದಿರುವ ಅಂಕನಳ್ಳಿ, ಮನೇಹಳ್ಳಿಯಂತ ಗ್ರಾಮಗಳಿಗೆ ಸರ್ಕಾರಿ ಬಸ್ ಸೌಲಭ್ಯ ಮರೀಚಿಕೆಯಾಗಿ ತ್ತು …

Read More