ಲೇಖಕ: admin

ಮಡಿಕೇರಿ NEWS DESK ಮಾ.15 : ನೂರಾರು ವರ್ಷಗಳ ಇತಿಹಾಸವಿರುವ ಕೊಡಗು ಜಿಲ್ಲೆಯ ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರ ವಿಶೇಷ ಆಸಕ್ತಿಯಿಂದ ಯೋಜನೆ ರೂಪಿಸಲಾಗಿದೆ. ಸರಕಾರದಿಂದ ರೂ.1.20 ಕೋಟಿ ಅನುದಾನವನ್ನು ಒದಗಿಸುವ ಮೂಲಕ ಐತಿಹಾಸಿಕ ಹಿನ್ನೆಲೆಯ ಸಾಂಸ್ಕೃತಿಕ ಕ್ಷೇತ್ರಗಳ ಅಭಿವೃದ್ಧಿಗೆ ಮಹತ್ವದ ಹೆಜ್ಜೆ ಇಡಲಾಗಿದೆ. ಈ ನಿಟ್ಟಿನಲ್ಲಿ ಪ್ರಪ್ರಥಮ ಬಾರಿಗೆ ಗ್ರಾಮೀಣ ಭಾಗದಲ್ಲಿರುವ ಸುಗ್ಗಿ ಕಟ್ಟೆಗಳ ಅಭಿವೃದ್ಧಿಗೆ ತಲಾ 10 ಲಕ್ಷ ಅನುದಾನ ಒದಗಿಸಲಾಗಿದೆ. ನಗರಳ್ಳಿ, ಕೂತಿ, ತೋಳೂರುಶೆಟ್ಟಳ್ಳಿ, ಕುಮಾರಳ್ಳಿ ಬಾಚಳ್ಳಿ, ಶಾಂತಳ್ಳಿ-ತಲ್ತರೆಶೆಟ್ಟಳ್ಳಿ, ಹಾನಗಲ್ಲು ಶೆಟ್ಟಳ್ಳಿ, ಯಡೂರು, ಚೌಡ್ಲು, ಕೊಡ್ಲಿಪೇಟೆ, ದುಂಡಳ್ಳಿ-ಮಾದ್ರೆ, ವಾಲ್ನೂರು-ತ್ಯಾಗತ್ತೂರು, ತಾಕೇರಿ ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ತಲಾ 10 ಲಕ್ಷದಂತೆ ಒಟ್ಟು ರೂ 1.20 ಕೋಟಿ ಅನುದಾನ ಮೀಸಲಿಡಲಾಗಿದೆ. ಯಡೂರು ಸುಗ್ಗಿಕಟ್ಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ಗೌಡ ಅವರು ಕಾಮಗಾರಿಗೆೆ ಭೂಮಿಪೂಜೆ ನೆರವೇರಿಸಿದರು. ಸುಗ್ಗಿ ಕಟ್ಟೆಗಳ ಇತಿಹಾಸವನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು. ಸ್ಥಳೀಯ ಜನಪ್ರತಿನಿಧಿಗಳು,…

Read More

ಸುಂಟಿಕೊಪ್ಪ NEWS DESK ಮಾ.15: ಸುಂಟಿಕೊಪ್ಪದಲ್ಲಿ ನಡೆಸಲು ಉದ್ದೇಶಲಾಗಿರುವ ಕೊಡಗು ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ಕುರಿತಾದ ಪೂರ್ವಬಾವಿ ಸಭೆಯನ್ನು ಖಾಸಗಿ ಹೋಟೆಲ್‌ವೊಂದರ ಸಭಾಂಗಣದಲ್ಲಿ ನಡೆಸಲಾಯಿತು. ಸುಂಟಿಕೊಪ್ಪ ಹೋಬಳಿ ಕಸಾಪ ಅಧ್ಯಕ್ಷ ಪಿ.ಎಫ್.ಸಬಾಸ್ಟಿನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಿ.ಎಂ.ಕೆ.ವಾಸು ರೈ, ಕುಶಾಲನಗರ ತಾಲೂಕು ಕಸಾಪದ ಸಂಘಟನಾ ಕಾರ್ಯದರ್ಶಿ ಗುಡ್ಡೆಮನೆ ಹರೀಶ್, ನಿರ್ದೇಶಕರಾದ ಬಿ.ಸಿ.ದಿನೇಶ್ ಕಸಾಪದ ಹಿರಿಯ ಸದಸ್ಯರುಗಳಾದ ಲೀಲಾಮೇದಪ್ಪ, ಕೆ.ಪಿ.ಜಗನ್ನಾಥ್,ಸುಂಟಿಕೊಪ್ಪ ಹೋ.ಕಸಾಪ ನಿಕಟಪೂರ್ವ ಅಧ್ಯಕ್ಷ ವಹೀದ್‌ಜಾನ್ ಮತ್ತಿತರರು ಪಾಲ್ಗೊಂಡಿದ್ದರು. ಸಭೆಯಲ್ಲಿ ಸಮ್ಮೇಳನ ನಡೆಸುವ ಕುರಿತು ವಿಸೃತವಾದ ಚರ್ಚೆ ವಿವಿಧ ಉಪಸಮಿತಿಗಳ ರಚನೆ ಹಾಗೂ ಇನ್ನಿತರ ವಿಷಯ ಕುರಿತು ಚರ್ಚಿಸಲು ಮಾ.24 ರ ಮಂಗಳವಾರದoದು ಪೂರ್ವಬಾವಿ ಸಭೆಯನ್ನು ಸುಂಟಿಕೊಪ್ಪ ಕೊಡವ ಸಮಾಜ ಸಭಾಂಗಣದಲ್ಲಿ ನಡೆಸಲು ತಿರ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಕಸಾಪದ ಹಿರಿಯ ಸದಸ್ಯ…

Read More

ಮಡಿಕೇರಿ NEWS DESK ಮಾ.15 : ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನವಾದ ಮಾ.21 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ “ವಿಚಾರ ಸಂಕಿರಣ” ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಆದಿಮಸಂಜಾತ ಏಕ-ಜನಾಂಗೀಯ ಪ್ರಕೃತಿ ಆರಾಧಕ ಆನಿಮಿಸ್ಟಿಕ್ ಕೊಡವರಿಗಾಗಿ ಸಂವಿಧಾನದ ಅಡಿಯಲ್ಲಿ “ಭೂ-ರಾಜಕೀಯ ಸ್ವಾಯತ್ತತೆ” ಮತ್ತು “ವಿಶೇಷ ಸ್ಥಾನಮಾನ”ಕ್ಕಾಗಿ ಶನಿವಾರ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಂಡಿರುವ “ಕೊಡವ ಕ್ವೆಸ್ಟ್” ವಿಚಾರ ಸಂಕಿರಣದಲ್ಲಿ ಶಾಸನ ರೂಪಿಸುವವರು, ನ್ಯಾಯವಾದಿಗಳು ಹಾಗೂ ಶಿಕ್ಷಣ ತಜ್ಞರು ಹಕ್ಕೊತ್ತಾಯದ ಕುರಿತು ಚರ್ಚಿಸಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಭಾರತದ ಈಶಾನ್ಯ ರಾಜ್ಯಗಳಿಗೆ 244 ಮತ್ತು 371 ನೇ ವಿಧಿಗಳಡಿಯಲ್ಲಿ ನೀಡಲಾಗಿರುವ ಮಾದರಿಯಲ್ಲೇ, ಅಲ್ಪಸಂಖ್ಯಾತ ಸೂಕ್ಷö್ಮ ಕೊಡವ ಜನಾಂಗದ ಭೂಮಿ, ಎಸ್‌ಟಿ ಜನಾಂಗೀಯ ವರ್ಗೀಕರಣ, ಕೊಡವರ ಧಾರ್ಮಿಕ ಸಂಸ್ಕಾರವಾದ ಸಾಂಪ್ರದಾಯಿಕ ಬಂದೂಕು ಹಕ್ಕು, ಭಾಷೆ, ಸಾಂಸ್ಕೃತಿಕ ಪರಂಪರೆ, ಸಾಂಪ್ರದಾಯಿಕ ಕಾನೂನು ಹಾಗೂ ಆರ್ಥಿಕ ಮತ್ತು ರಾಜಕೀಯ…

Read More

ಮಡಿಕೇರಿ NEWS DESK ಮಾ.15 : ಇದೇ ಮಾಚ್೯ 16 ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದ ವತಿಯಿಂದ ಇದೇ ಮೊದಲ ಬಾರಿಗೆ ಕೊಡಗಿನಲ್ಲಿ  ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ  ಆಯೋಜಿತವಾಗಿದೆ. ಕ್ರೀಡಾಕೂಟದಲ್ಲಿ 150  ವಿಶೇಷ ಕ್ರೀಡಾಥಿ೯ಗಳು ಪಾಲ್ಗೊಳ್ಳಲಿದ್ದಾರೆ ಎಂದು ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದ ನಿರ್ದೇಶಕರಾದ ಆರತಿ  ಸೋಮಯ್ಯ ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಮಾ.15 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಮಂಗಳೂರಿನ ಅಂಬೇಡ್ಕರ್ ಭವನದಲ್ಲಿ 2025ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಶನಿವಾರ ನಡೆಯಿತು.     ‌ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಡಾ.ಯು.ಟಿ.ಖಾದರ್ ಫರೀದ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಸುಳ್ಯ ಲಯನ್ಸ್ ಮಾಜಿ ರಾಜ್ಯಪಾಲರಾದ ಎಂ.ಬಿ.ಸದಾಶಿವ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ.ಎಂ.ಶಾಹೀದ್ ತೆಕ್ಕಿಲ್, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶಾಲೆಟ್ ಲವೀನಾ ಪಿಂಟೋ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ…

Read More

ಮಡಿಕೇರಿ NEWS DESK ಮಾ.15 :  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಹಾಗೂ ಪ್ರವಾಸೋದ್ಯಮ ಇಲಾಖೆ ಪಾಲುದಾರರು ಇವರ ಸಹಕಾರದಲ್ಲಿ ಮಾರ್ಚ್ 16 ರಂದು ಬೆಳಗ್ಗೆ 8 ಗಂಟೆಗೆ ರಾಜಾಸೀಟ್‌ನಲ್ಲಿ “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.      ಜಿಲ್ಲಾಧಿಕಾರಿಯವರು, ಜಿಲ್ಲಾ ಪಂಚಾಯತ್ ಸಿಇಒ ಅವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು, ಉಪ ವಿಭಾಗಾಧಿಕಾರಿಯವರು ಇತರರು ಪಾಲ್ಗೊಳ್ಳಲಿದ್ದಾರೆ. ಹೋಂಸ್ಟೇ, ಹೋಟೆಲ್, ರೆಸಾರ್ಟ್, ಟ್ಯಾಕ್ಸಿ ಮತ್ತು ಜೀಪ್ ಮಾಲೀಕರು ಈ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ NEWS DESK ಮಾ.15 : ಕುಶಾಲನಗರ ಪಟ್ಟಣದ ಚಿಕ್ಕಣ್ಣ ಬಡಾವಣೆಯಲ್ಲಿ ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಯಿತು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಕುಶಾಲನಗರ ಜನಪ್ರತಿನಿಧಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK ಮಾ.15 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಪುತ್ತೂರು ವಿಭಾಗದ ಮಡಿಕೇರಿ ಘಟಕದ ಡಿಪೋ ವ್ಯವಸ್ಥಾಪಕರಾಗಿ ಅಧಿಕಾರ ವಹಿಸಿಕೊಂಡಿರುವ ರಾಮ್ ಚಂದ್ ದರ್ಶನ್ ಅವರನ್ನು ಯುನೈಟೆಡ್ ಪ್ಲಾಂಟೇಷನ್ ವಕರ‍್ಸ್ ಯೂನಿಯನ್ (ಎಐಟಿಯುಸಿ) ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಹಾಗೂ ಪದಾಧಿಕಾರಿಗಳು ಭೇಟಿಯಾಗಿ ಅಭಿನಂದಿಸಿದರು.ಈ ಸಂದರ್ಭ ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕದ ಎಟಿಸಿ ಪದಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು. ರಾಮ್ ಚಂದ್ ದರ್ಶನ್ ಅವರು ಈ ಹಿಂದೆ ಪಿರಿಯಾಪಟ್ಟಣ ಘಟಕದಲ್ಲಿ ಘಟಕ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದರು.

Read More

ಮಡಿಕೇರಿ NEWS DESK ಮಾ.15 : ಥೈಲ್ಯಾಂಡ್ ನ ರಚ್ಚುಪುರಿ ಸ್ಟೇಡಿಯಂ ನಲ್ಲಿ ಇತ್ತೀಚೆಗೆ ನಡೆದ ಅಂತರಾಷ್ಟ್ರೀಯ ಮಟ್ಟದ 30ನೇ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ 60 ವಯೋಮಿತಿಯ ವಿಭಾಗದಲ್ಲಿ ಮಡಿಕೇರಿಯ ನಿವೃತ್ತ ಶ್ರುಶೂಷಕಿ ಅಧೀಕ್ಷಕಿ ಬಂಗಾಡುಮನೆ ವಸಂತಿ ಅವರು 1 ಚಿನ್ನ ಮತ್ತು 1 ಬೆಳ್ಳಿಯ ಪದಕವನ್ನು ಗೆದ್ದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯಿಂದ ಬಂಗಾಡುಮನೆ ವಸಂತಿ ಸೇರಿದಂತೆ ಇಬ್ಬರು ಕ್ರೀಡಾಪಟುಗಳು ಪಾಲ್ಗೊಂಡಿದ್ದರು. ಭಾರತ, ಫಿಲಿಫೈನ್ಸ್, ಯುಎಸ್‌ಎ, ನೆದರ್ ಲ್ಯಾಂಡ್, ಇಸ್ರೇಲ್, ಮಲೇಶಿಯಾ, ಸಿಂಗಾಪುರ್, ಶ್ರೀಲಂಕಾ, ಥೈಲ್ಯಾಂಡ್ ಸೇರಿದಂತೆ 10 ದೇಶಗಳ ಒಟ್ಟು 1024 ಕ್ರೀಡಾಪಟುಗಳು ಭಾಗವಹಿಸಿದ್ದರು.

Read More

ಮಡಿಕೇರಿ ಮಾ.13 NEWS DESK : ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷೆ ಸವಿತಾ ಭಟ್  ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಮುಂದಿದ್ದಾರೆ. ನಮಗೆ ಮಾದರಿಯಾದ ಮಹಿಳೆಯರನ್ನು ದೂರದಲ್ಲಿ ಹುಡುಕಬೇಕಾಗಿಲ್ಲ, ನಮ್ಮ ಸುತ್ತಮುತ್ತಲೇ ಅನೇಕ ಮಹಿಳೆಯರಿದ್ದಾರೆ. ಮಹಿಳೆಗೆ ಮುಖ್ಯವಾಗಿಬೇಕಾದದ್ದು ಸ್ವಾತಂತ್ರ್ಯ, ನೆಮ್ಮದಿಯ ಜೀವನ ಮತ್ತು ಮನೆಯವರಿಂದ ತಾವು ಮಾಡುವ‌ ಕೆಲಸಕ್ಕೆ ಪ್ರೋತ್ಸಾಹ. ಇಷ್ಟಿದ್ದರೆ ಮಹಿಳೆ ಏನು ಬೇಕಾದರೂ ಸಾಧಿಸಬಲ್ಲಳು, ಸಮಾಜಕ್ಕೆ ಕೊಡುಗೆಯನ್ನು ನೀಡಬಲ್ಲಳು ಎಂದರು. ಮಹಿಳಾ ದಿನಾಚರಣೆಯನ್ನು ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸಿದೆ, ವರ್ಷದ ಎಲ್ಲಾ ದಿನಗಳಲ್ಲೂ ಗೌರವ ಮತ್ತು ಒಳ್ಳೆಯ ಸ್ಥಾನ ಮಾನಗಳು ಸಿಗುವಂತಾಗಬೇಕು ಎಂದು ಸವಿತಾ ಭಟ್ ಅಭಿಪ್ರಾಯಪಟ್ಟರು.  ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯೆಯರಾದ ವಸುಂಧರಾ ಪ್ರಸನ್ನ, ಆಯಿಷಾ ಹಮೀದ್, ಉಮಾ ಈಶ್ವರ್, ಪ್ರೇಮಾ ರಾಘವಯ್ಯ, ಜಯಶೀಲಾ ಪ್ರಕಾಶ್, ವಸಂತಿ ಪೂಣಚ್ಚ ಉಪಸ್ಥಿತರಿದ್ದರು. ದೀಪಾಂಜಲಿ ತಂಡದವರು ಪ್ರಾರ್ಥಿಸಿದರು. ವಿದ್ಯಾ ದೇವರಾಜ್ , ಮೇಘಾ ಸುಜಯ್, ಶೈಲಾ…

Read More