ಮಡಿಕೇರಿ NEWS DESK ಆ.1 : ಮಳೆಹಾನಿ ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಕೊಡಗು ಜಿಲ್ಲೆಯಲ್ಲಿ ಕಾಳಜಿ ಕೇಂದ್ರಗಳನ್ನು ಆರಂಭಿಸಿರುವುದು ಬಿಟ್ಟರೆ ಬೇರೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲವೆAದು ಬಿಜೆಪಿ ಮುಖಂಡ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಟೀಕಿಸಿದ್ದಾರೆ. ಕೊಡಗು ಜಿಲ್ಲೆಯ ವಿವಿಧೆಡೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಅವರು ಸಂಕಷ್ಟದಲ್ಲಿರುವ ಜನರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಡಿಸಿಎಂ, ಪ್ರವಾಹ ಮತ್ತು ಭೂಕುಸಿತದಿಂದ ಸಂಭವಿಸುತ್ತಿರುವ ಸಮಸ್ಯೆಗಳಿಗೆ ಸರ್ಕಾರ ಶಾಶ್ವತ ಪರಿಹಾರ ಸೂಚಿಸಬೇಕು ಎಂದು ಒತ್ತಾಯಿಸಿದರು. ಅಧಿಕ ಮಳೆಯಿಂದ ಕೊಡಗು ಜಿಲ್ಲೆಯಲ್ಲಿ ಅಪಾರ ಹಾನಿಯಾಗಿದ್ದು, ಪರಿಹಾರದ ರೂಪದಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು. ಮನೆ ಕಳೆದುಕೊಂಡವರಿಗೆ ಮನೆ ಬಾಡಿಗೆ ನೀಡಬೇಕು ಮತ್ತು ನೂತನ ಮನೆ ನಿರ್ಮಿಸಿಕೊಡಬೇಕು. ಕಾಫಿ ಸೇರಿದಂತೆ ಎಲ್ಲಾ ಬೆಳೆಗಳು ನಾಶವಾಗಿದ್ದು, ಸರ್ಕಾರ ಬೆಳೆ ಪರಿಹಾರವನ್ನು ಶೀಘ್ರ ನೀಡಬೇಕು. ಜಿಲ್ಲೆಗೆ ಆಗಮಿಸಲಿರುವ ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದರು. ಭಾರೀ ಗಾಳಿಮಳೆಯಿಂದ ಹೆಚ್ಚಿನ…
ಲೇಖಕ: admin
ಮಡಿಕೇರಿ NEWS DESK ಆ.1 : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಗುರುವಾರ ಜಿಲ್ಲಾಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ನಡೆಯಿತು. ಆ.7 ರವರೆಗೆ ನಡೆಯುವ ‘ವಿಶ್ವ ಸ್ತನ್ಯಪಾನ ಸಪ್ತಾಹ’ ಕಾರ್ಯಕ್ರಮವನ್ನು “ಕೊರತೆಗಳನ್ನು ಕೊನೆಗೊಳಿಸಿ: ಸರ್ವರಿಗೂ ಸ್ತನ್ಯಪಾನದ ಬೆಂಬಲ ನೀಡಿ” ಎಂಬ ಘೋಷವಾಕ್ಯದೊಂದಿಗೆ ಗಿಡಕ್ಕೆ ನೀರು ಹಾಕುವ ಮೂಲಕ ಜಿಲ್ಲಾ ಶಸ್ತçಚಿಕಿತ್ಸಕರಾದ ಡಾ.ನಂಜುಂಡಯ್ಯ ಅವರು ಚಾಲನೆ ನೀಡಿದರು. ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಮಧುಸೂಧನ್ ಎ.ಆರ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಪ್ರತೀ ವರ್ಷದಂತೆ ಈ ವರ್ಷವೂ ಆಗಸ್ಟ್ 1 ರಿಂದ 7ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಆಚರಣೆ ಮಾಡಲಾಗುತ್ತಿದ್ದು, ಸಾರ್ವಜನಿಕರಿಗೆ ಸ್ತನ್ಯಪಾನದ ಪ್ರಯೋಜನಗಳನ್ನು ಉತ್ತೇಜಿಸಲು ಮತ್ತು ಮಕ್ಕಳ ಬೆಳವಣಿಗೆಗೆ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ಉತ್ತೇಜಿಸುವುದು ಇದರ ಉದ್ದೇಶವಾಗಿದ್ದು, ಜಿಲ್ಲೆಯಾದ್ಯಂತ ಎಲ್ಲಾ ಜಿಲ್ಲಾ ಆಸ್ಪತ್ರೆ/ ತಾಲ್ಲೂಕು ಆಸ್ಪತ್ರೆ, ಸ.ಆ.ಕೇಂದ್ರ, ಪ್ರಾ.ಆ.ಕೇಂದ್ರಗಳಲ್ಲಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು. ಜಿಲ್ಲಾ ಶಸ್ತçಚಿಕಿತ್ಸಕರಾದ ಡಾ.ನಂಜುAಡಯ್ಯ ಅವರು ಮಾತನಾಡಿ ಸ್ತನ್ಯಪಾನವು ಅಭಿವೃದ್ಧಿಶೀಲ…
ಮಡಿಕೇರಿ NEWS DESK ಆ.1 : ಕೊಡಗಿನ ಪರಿಸರಕ್ಕೆ ಪೂರಕವಾದ ಮತ್ತು ಸ್ಥಳೀಯವಾಗಿ ಲಭ್ಯವಾಗುವ ಕಚ್ಚಾ ವಸ್ತುಗಳನ್ನು ಬಳಸಿ ಉದ್ದಿಮೆಗಳ ಆರಂಭಕ್ಕೆ ಯುವ ಸಮೂಹಕ್ಕೆ ಪ್ರೇರಣೆ ನೀಡುವ ನಿಟ್ಟಿನಲ್ಲಿ ಕೊಡಗು ಹಿಂದು ಎಕನಾಮಿಕ್ ಫೋರಂ ಹಾಗೂ ಲಘು ಉದ್ಯೋಗ ಭಾರತಿ ಸಂಸ್ಥೆಯ ಮೈಸೂರು ವಿಭಾಗದ ವತಿಯಿಂದ ಆ.3 ರಂದು ಗೋಣಿಕೊಪ್ಪಲಿನಲ್ಲಿ ವಿಶೇಷ ಕಾರ್ಯಾಗಾರ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಕೊಡಗು ಹಿಂದು ಎಕನಾಮಿಕ್ ಫೋರಂನ ಕಾರ್ಯಾಧ್ಯಕ್ಷ ಟಿ.ಕೆ.ಸುಧೀರ್ ಈ ಕುರಿತು ಮಾಹಿತಿ ನೀಡಿ, ಅಂದು ಗೋಣಿಕೊಪ್ಪಲಿನ ಪರಿಮಳ ಮಂಗಳ ವಿಹಾರದಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ಯುವ ಉದ್ಯಮಿಗಳಿಗೆ ಕಾರ್ಯಾಗಾರದ ಮೂಲಕ ಉದ್ದಿಮೆಗಳ ಕುರಿತು ಅಗತ್ಯ ಮಾಹಿತಿಗಳನ್ನು ಒದಗಿಸಲಾಗುತ್ತದೆ ಎಂದು ತಿಳಿಸಿದರು. ಕಾರ್ಯಾಗಾರದಲ್ಲಿ ಸಿಎಸ್ಐಆರ್ ಮತ್ತು ಸಿಎಫ್ಟಿಆರ್ಐನ ಮುಖ್ಯ ವಿಜ್ಞಾನಿಗಳಾದ ಡಾ.ಪುಷ್ಪ ಎಸ್. ಮೂರ್ತಿ ಅವರು ಕೃಷಿ ಉತ್ಪನ್ನಗಳು, ಸಾಂಬಾರ ಪದಾರ್ಥ ಮತ್ತು ಪರಿಮಳ ತಂತ್ರಜ್ಞಾನಗಳ ಕುರಿತು ಮಾಹಿತಿ ಒದಗಿಸಲಿದ್ದಾರೆ. ಸಿಎಸ್ಐಆರ್ ಮತ್ತು ಸಿಎಫ್ಟಿಆರ್ಐನ ವಿಜ್ಞಾನಿ ಡಾ. ನೇಗಿ ಪಿ.ಎಸ್. ಅವರು, ಹಣ್ಣು…
ಮಡಿಕೇರಿ ಆ.1 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಚೆಂಬು ಸರಕಾರಿ ಪ್ರೌಢಶಾಲೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಮಡಿಕೇರಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಡಾ.ಸಂಪತ್ ಹಾಗೂ ಚೆಂಬು ಶಾಲೆಯ ಪ್ರಬಾರ ಮುಖ್ಯ ಶಿಕ್ಷಕ ಡಾ.ಯೋಗೇಶ್ ಉದ್ಘಾಟಿಸಿದರು. ನಂತರ ಮಾತನಾಡಿದ ಡಾ.ಸಂಪತ್ ರಕ್ತದಾನ ಮಹತ್ವದ ಕುರಿತು ವಿವರಿಸಿ ಜನರಲ್ಲಿ ಜಾಗೃತಿ ಮೂಡಿಸಿದರು. ಡಾ.ಯೋಗೇಶ್ ಮಾತನಾಡಿ ರಕ್ತದಾನ ಮಾಡುವುದರಿಂದ ಆಗುವ ಆರೋಗ್ಯದ ಅನುಕೂಲತೆ ಬಗ್ಗೆ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಚೆಂಬು ಪ್ರೌಢಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರಮೇಶ್ ಕುಮಾರ್ ನಂಬಿಯಾರ್, ರಕ್ತದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ. ಸ್ಕೌಟ್ಸ್ ಮತ್ತು ಗೈಡ್ಸ್ ಚೆಂಬು ಸ್ಥಳೀಯ ಸಂಸ್ಥೆ ಉತ್ತಮ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಮಾದರಿಯಾಗಿದೆ ಎಂದು ಶ್ಲಾಘಿಸಿದರು. ನಿವೃತ್ತ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿ, ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಕುದುರೆಪಾಯ ದೇವಿ ಭಜನಾ ಮಂಡಳಿಯ ಅಧ್ಯಕ್ಷ ಸತೀಶ್ ಪಾಡಿಕಾನ, ಚೆಂಬು…
ಮಡಿಕೇರಿ ಆ.1 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ.2 ರಂದು ಕೊಡಗು ಜಿಲ್ಲೆಗೆ ಭೇಟಿ ಸಂದರ್ಭ ಮಡಿಕೇರಿಗೆ ಆಗಮಿಸಲಿದ್ದು, ಈ ಸಂಬಂಧ ಸಂಚಾರಿ ಪೊಲೀಸ್ ಇಲಾಖೆಯಿಂದ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಈ ನಿಟ್ಟಿನಲ್ಲಿ ಮಡಿಕೇರಿಯ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಜನರಲ್ ತಿಮ್ಮಯ್ಯ ವೃತ್ತದ ವರೆಗೆ ರಸ್ತೆಯ ಎರಡು ಬದಿಯಲ್ಲಿಯೂ ಎಲ್ಲಾ ಮಾದರಿಯ ವಾಹನಗಳ ಪಾರ್ಕಿಂಗ್ ನ್ನು ಸಂಪೂರ್ಣವಾಗಿ ನಿಷೇದಿಸಲಾಗಿದೆ. ಅಲ್ಲದೆ ಅದೇ ಭಾಗದಲ್ಲಿ ತತಳ್ಳುಗಾಡಿ, ಪೆಟ್ಟಿಗೆ ಅಂಗಡಿ ಹಾಗೂ ಇನ್ನಿತರೆ ಬೀದಿವ್ಯಾಪಾರಕ್ಕೆ ಯಾವುದೇ ಅವಕಾಶವಿರುವುದಿಲ್ಲ.ಆದ್ದರಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಮಡಿಕೇರಿ ಆ.1 NEWS DESK : ಕರ್ನಾಟಕ ಟೆಕ್ವಾಂಡೊ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಬಸವೇಶ್ವರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಮುಕ್ತ ಟೆಕ್ವಾಂಡೊ ಚಾಂಪಿಯನ್ಶಿಪ್ನಲ್ಲಿ ಮಡಿಕೇರಿಯ ಕೂರ್ಗ್ ಟೆಕ್ವಾಂಡೊ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಚಿನ್ನ ಮತ್ತು ಬೆಳ್ಳಿ ಗೆದ್ದಿದ್ದಾರೆ. ಕೇಂದ್ರೀಯ ವಿದ್ಯಾಲಯದ 8ನೇ ತರಗತಿ ವಿದ್ಯಾರ್ಥಿ ಎಂ.ವೈ.ಗೌರವ್ 2 ಚಿನ್ನ, 1ನೇ ತರಗತಿ ವಿದ್ಯಾರ್ಥಿ ಎಂ.ವೈ.ಚುನೇಹ, 5ನೇ ತರಗತಿ ವಿದ್ಯಾರ್ಥಿ ದೃಪದ್ ಪಿ.ಮನಿಕೊತ್, 4ನೇ ತರಗತಿ ವಿದ್ಯಾರ್ಥಿ ಐಡೆನ್ ಜೆ.ತರಕಾನ್, 6ನೇ ತರಗತಿ ವಿದ್ಯಾರ್ಥಿ ಗುತ್ತಿಮುಂಡನ ಸಮರ್ಥ್, ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ನ 3ನೇ ತರಗತಿ ವಿದ್ಯಾರ್ಥಿ ತೇಜಸ್ ರಾಜು ವಿ. ತಲಾ 1 ಚಿನ್ನ ಹಾಗೂ 1 ಬೆಳ್ಳಿಯ ಪದಕವನ್ನು ಗೆದ್ದುಕೊಂಡಿದ್ದಾರೆ. ಕೂರ್ಗ್ ಟೆಕ್ವಾಂಡೊ ತರಬೇತಿ ಸಂಸ್ಥೆಯ ತರಬೇತುದಾರ ಬಿ.ಜಿ.ಲೋಕೇಶ್ ರೈ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.
ಮಡಿಕೇರಿ ಆ.1 NEWS DESK : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ಜಿಲ್ಲಾ ಘಟಕ, ಕುಶಾಲನಗರ ಪ್ರಸ್ ಕ್ಲಬ್ ಟ್ರಸ್ಟ್ ವತಿಯಿಂದ ಸಂಗಮ ಟಿ.ವಿ.ನ್ಯೂಸ್ ಚಾನಲ್ ಹಾಗೂ ವಂಶಿ ನ್ಯೂಸ್ ಬಳಗದ ಆಶ್ರಯದಲ್ಲಿ ಕುಶಾಲನಗರ ಪಟ್ಟಣದ ಗಾಯತ್ರಿ ಕಲ್ಯಾಣ ಮಂದಿರದಲ್ಲಿ ಪತ್ರಿಕಾ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಮಾಜದಲ್ಲಿ ವಿವಿಧ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ 15 ಮಂದಿಗೆ ‘ಕಾವೇರಿ ರತ್ನ’ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರ0ಜನ್ ಮಾತನಾಡಿ, ಸಂವಿಧಾನದ ನಾಲ್ಕನೇ ಅಂಗವಾದ ಪತ್ರಿಕಾ ರಂಗವು ಇಂದು ಕ್ರಿಯಾಶೀಲವಾಗಿ ಹಾಗೂ ಪ್ರಭಾವಿ ಮಾಧ್ಯಮವಾಗಿ ಬೆಳೆದಿದ್ದು, ರಾಜಕಾರಣಿಗಳು ಮತ್ತು ಅಧಿಕಾರಿ ವರ್ಗ ಸಮಾಜದ ಒಳಿತಿಗಾಗಿ ಕಾರ್ಯನಿರ್ವಹಿಸುವ ರೀತಿಯಲ್ಲಿ ತಪ್ಪುಗಳಿದ್ದಲ್ಲಿ ಅದನ್ನು ತಿದ್ದುವ ಮೂಲಕ ಸಕಾರಾತ್ಮಕ ವಿಮರ್ಶೆಗಳನ್ನು ಮಾಡುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು. ಸಮಾಜದಲ್ಲಿ ಉತ್ತಮ ಸೇವಾ ಕಾರ್ಯ ಮಾಡಿದವರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಅವರ ಸೇವೆಗೆ ಮತ್ತಷ್ಟು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ರಂಜನ್ ಹೇಳಿದರು. ಮುಖ್ಯ ಭಾಷಣ ಮಾಡಿದ…
ಮಡಿಕೇರಿ ಆ.1 NEWS DESK : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆ.2 ರಂದು ಮಧ್ಯಾಹ್ನ 2.30 ಗಂಟೆಗೆ ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದು, ಎಲ್ಲಾ ಘಟಕ ಮುಂಚೂಣಿ ನಾಯಕರು, ಕಾರ್ಯಕರ್ತರು ಕೊಪ್ಪ ಗೇಟ್ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೊಡಗು ಜಿಲ್ಲಾ ಜೆಡಿಎಸ್ ಕೋರಿದೆ.
ಮಡಿಕೇರಿ ಆ.1 NEWS DESK : ಕಳೆದ ಒಂದು ತಿಂಗಳಿನಿಂದ ಸುರಿಯುತ್ತಿರುವ ಗಾಳಿ ಸಹಿತ ಮಹಾಮಳೆಗೆ ಕೊಡಗು ಜಿಲ್ಲೆ ನಲುಗಿ ಹೋಗಿದ್ದು, ಅಪಾರ ನಷ್ಟ ಅನುಭವಿಸಿದೆ. ರಾಜ್ಯ ಸರ್ಕಾರ ತಕ್ಷಣ ಮಳೆಹಾನಿ ಪರಿಹಾರವಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಭಾರತೀಯ ಜನತಾ ಪಾರ್ಟಿಯ ವಿರಾಜಪೇಟೆ ಮಂಡಲ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಬಿಜೆಪಿಯ ವಿರಾಜಪೇಟೆ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅಧಿಕ ಮಳೆಯಿಂದ ಬೆಳೆ ಮತ್ತು ಮನೆಗಳು ವ್ಯಾಪಕವಾಗಿ ಹಾನಿಗೀಡಾಗಿದ್ದು, ಸರ್ಕಾರ ತುರ್ತು ಪರಿಹಾರ ಘೋಷಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯ ವಿವಿಧೆಡೆ ನೂರಾರು ಬಡವರ ಮನೆಗಳು ನೆಲಸಮವಾಗಿವೆ. ಅನೇಕ ಮನೆಗಳು ವಾಸಕ್ಕೆ ಯೋಗ್ಯವಿಲ್ಲದಂತೆ ಹಾನಿಗೀಡಾಗಿವೆ. ಹಲವು ಕುಟುಂಬಗಳು ಆಶ್ರಯವಿಲ್ಲದೆ ಅತಂತ್ರ ಪರಿಸ್ಥಿತಿಯಲ್ಲಿವೆ. ಆದರೆ ಸರ್ಕಾರ ಇಲ್ಲಿಯವರೆಗೆ ಎಷ್ಟು ಹಾನಿಗೆ ಎಷ್ಟು ಪ್ರಮಾಣದ ಪರಿಹಾರ ಎನ್ನುವುದನ್ನು ಘೋಷಿಸಿಲ್ಲ. ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ಮನೆ ಸಂಪೂರ್ಣ ಹಾನಿಯಾದರೆ 5ಲಕ್ಷ ರೂ. ಪರಿಹಾರ ನೀಡುತ್ತಿತ್ತು. ಈಗಿನ ಕಾಂಗ್ರೆಸ್ ಸರ್ಕಾರ ಶೇ.70 ಕ್ಕಿಂತ…
ಪ್ಯಾರಿಸ್ (ಫ್ರಾನ್ಸ್) ಆ.1 NEWS DESK : ಭಾರತದ ಶೂಟರ್ ಸ್ವಪ್ನಿಲ್ ಕುಸಾಲೆ 50 ಮೀಟರ್ ಏರ್ ರೈಫಲ್ 3 ಪೊಸಿಶನ್ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಪದಕಗಳ ಸಂಖ್ಯೆ ಮೂರಕ್ಕೇರಿದೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ ಭಾರತ ಶೂಟಿಂಗ್ ಸ್ಪರ್ಧೆಯಲ್ಲಿ 451.4 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕ ಗೆದ್ದಿದ್ದಾರೆ.ಪ್ಯಾರಿಸ್ ಒಲಿಂಪಿಕ್ಸ್ನ ಆರನೇ ದಿನವಾದ ಇಂದು ಭಾರತದ ಏಕೈಕ ಪದಕದ ಭರವಸೆ ಅವರ ಮೇಲಿತ್ತು. ಅದರಂತೆ ಪದಕ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.






