ಪ್ಯಾರಿಸ್ (ಫ್ರಾನ್ಸ್) ಆ.1 NEWS DESK : ಭಾರತದ ಶೂಟರ್ ಸ್ವಪ್ನಿಲ್ ಕುಸಾಲೆ 50 ಮೀಟರ್ ಏರ್ ರೈಫಲ್ 3 ಪೊಸಿಶನ್ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಪದಕಗಳ ಸಂಖ್ಯೆ ಮೂರಕ್ಕೇರಿದೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ ಭಾರತ ಶೂಟಿಂಗ್ ಸ್ಪರ್ಧೆಯಲ್ಲಿ 451.4 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕ ಗೆದ್ದಿದ್ದಾರೆ.ಪ್ಯಾರಿಸ್ ಒಲಿಂಪಿಕ್ಸ್ನ ಆರನೇ ದಿನವಾದ ಇಂದು ಭಾರತದ ಏಕೈಕ ಪದಕದ ಭರವಸೆ ಅವರ ಮೇಲಿತ್ತು. ಅದರಂತೆ ಪದಕ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಲೇಖಕ: admin
ಕುಶಾಲನಗರ ಆ.1 NEWS DESK : ಮನುಷ್ಯನ ನೋವು – ನಲಿವು, ದುಃಖ – ದುಮ್ಮಾನಗಳು ಹಾಗೂ ಆತನ ನಾಶಕ್ಕೆ ಆಸೆಗಳೇ ಕಾರಣವಾಗಿವೆ. ಮನುಷ್ಯ ನೆಮ್ಮದಿಯ ಬದುಕು ಕಟ್ಟಬೇಕಿದ್ದಲ್ಲಿ ಹನ್ನೆರಡನೇ ಶತಮಾನದ ವಚನಕಾರರ ತತ್ವ ಆದರ್ಶಗಳ ಪಾಲನೆಯೇ ಮೂಲ ಆಶಯವಾಗಬೇಕೆಂದು ಕುಶಾಲನಗರದ ಮಹಾತ್ಮಗಾಂಧಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಹೆಚ್.ಬಿ.ಲಿಂಗಮೂರ್ತಿ ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಬಸವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸುತ್ತೂರು ಜಗದ್ಗುರು ಶ್ರೀ ಗುರುಚನ್ನಬಸವ ಶಿವಾಚಾರ್ಯರ ದತ್ತಿ ಕಾರ್ಯಕ್ರಮ ” ಶರಣ ಸಂಸ್ಕೃತಿ ಪ್ರಸಾರ ಗೋಷ್ಠಿ ” ಉದ್ಘಾಟಿಸಿ ಮಾತನಾಡಿದ ಅವರು, ಬಸವಾದಿ ಶರಣರು ಹನ್ನೆರಡನೇ ಶತಮಾನದಲ್ಲಿ ಅನುಭವ ಮಂಟಪವನ್ನು ಸ್ಥಾಪಿಸಿ ನಡೆ ನುಡಿಗಳೆರಡು ಒಂದಾಗಿಸಿಕೊಂಡ ಎಲ್ಲಾ ಜಾತಿ ಸಮುದಾಯಗಳ ವಚನಕಾರರನ್ನು ಸೇರಿಸಿ ನಾಡಿಗೆ ಸಾರಿದ ಸಂದೇಶಗಳನ್ನು ನಾವು ಪಾಲಿಸಿದ್ದೇ ಆದಲ್ಲಿ ಜನ ಹಿತ ಹಾಗೂ ಲೋಕ ಹಿತ ಅಗ್ರಪಂತಿಯಲ್ಲಿರುತ್ತದೆ ಎಂದು ವಚನಗಳ ಮೂಲಕ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. “ಶರಣ ಸಂಸ್ಕೃತಿ – ಪ್ರಸಾರ…
ಮಡಿಕೇರಿ ಆ.1 NEWS DESK : ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯು ಸರ್ಕಾರದ ಒಂದು ಪ್ರತಿಷ್ಠಿತ ಸ್ವಾಯತ್ತ ಸಂಸ್ಥೆಯಾಗಿದ್ದು, ಗುಣಮಟ್ಟದ ಕ್ಯಾನ್ಸರ್ ಚಿಕಿತ್ಸೆಗೆ ಹೆಸರುವಾಸಿಯಾದ ಆಸ್ಪತ್ರೆಯಾಗಿರುತ್ತದೆ. ಕಿದ್ವಾಯಿ ಚಿಕಿತ್ಸೆಯಲ್ಲಿ ಕ್ಯಾನ್ಸರ್ಗೆ ಸಂಬ0ಧಿಸಿದ0ತೆ ಗುಣಮಟ್ಟದ ವಿವಿಧ ರೀತಿಯ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಬಡತನ ರೇಖೆಗಿಂತ(ಬಿಪಿಎಲ್) ಕೆಳಗಿರುವ ಜನರಿಗೆ ಉಚಿತ ಚಿಕಿತ್ಸೆಯನ್ನು ಹಾಗೂ ಬಡತನ ರೇಖೆಗಿಂತ ಮೇಲಿರುವ(ಎಪಿಎಲ್) ಜನರಿಗೆ ಅತಿ ಕಡಿಮೆ ದರದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಅದೇ ರೀತಿ ಪರಿಶಿಷ್ಟ ಪಂಗಡದ ಜನರಿಗೂ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉಚಿತವಾಗಿ ಗುಣಮಟ್ಟದ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಆದ್ದರಿಂದ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಪರಿಶಿಷ್ಟ ಪಂಗಡದ ಜನಾಂಗದವರು ಉಚಿತವಾಗಿ ಗುಣಮಟ್ಟದ ಚಿಕಿತ್ಸೆಯನ್ನು ಪಡೆದು ಗುಣಮುಖರಾಗಬಹುದಾಗಿದ್ದು, ಆಸಕ್ತರು ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಬೆಂಗಳೂರು ಇವರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
*ಆ.2ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ : ಮಳೆಹಾನಿ ಪ್ರದೇಶ ಪರಿಶೀಲನೆ*
ಮಡಿಕೇರಿ ಆ.1NEWS DESK : ಸೋಮವಾರಪೇಟೆ ತಾಲ್ಲೂಕಿನ ಚೆನ್ನಾಪುರ, ದೊಡ್ಡಮಳ್ತೆ, ಒಡೆಯನಪುರ ಗ್ರಾಮಗಳ ಮಳೆಹಾನಿ ಪ್ರದೇಶಗಳಿಗೆ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಸಂತ್ರಸ್ತರಿಗೆ ಆಹಾರ ಸಾಮಾಗ್ರಿಗಳನ್ನು ಒದಗಿಸಲಾಯಿತು.
ಮಡಿಕೇರಿ ಆ.1 NEWS DESK : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ರೂಢಿ ಸಂಪ್ರದಾಯದಂತೆ, ಕ್ರೋಧಿ ಸಂವತ್ಸರದ ಗ್ರೀಷ್ಮ ಋತುವಿನ ದಕ್ಷಿಣಾಯನದ ಕರ್ಕಾಟಕ ಮಾಸ ಆಷಾಢ ಕೃಷ್ಣಪಕ್ಷದ ಅಮಾವಾಸ್ಯೆಯಂದು ಆ.4 ರಂದು ಮಧ್ಯಾಹ್ನ 12 ಗಂಟೆಗೆ ಮಹಾ ಪೂಜೆಯ ನಂತರ ಶ್ರದ್ಧಾ ಭಕ್ತಿಯಿಂದ “ಪೊಲಿಂಕಾನ ಉತ್ಸವ”ವನ್ನು ಆಚರಿಸಲಾಗುವುದು. ಆದುದರಿಂದ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ “ಪೊಲಿಂಕಾನ ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿರುತ್ತಾರೆ.
ನಾಪೋಕ್ಲು ಆ.1 NEWS DESK : ನಾಪೋಕ್ಲು ಬಿಲ್ಲವ ಸಮಾಜದ ವತಿಯಿಂದ ಆ.4 ರಂದು ಆಟಿಡೊಂಜಿ ದಿನ -2024 ಕಾರ್ಯಕ್ರಮ ನಡೆಯಲಿದೆ ಎಂದು ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ.ಪ್ರತೀಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಪೋಕ್ಲು ಹೋಬಳಿ ಮಟ್ಟದಲ್ಲಿ ಸಮಾಜ ಬಾಂಧವರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಆಟಿಡೊಂಜಿ ದಿನ-2024 ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಬೆಳಿಗ್ಗೆ 11 ಗಂಟೆಗೆ ನಾಪೋಕ್ಲುವಿನ ಕೊಡವ ಸಮಾಜದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಇದಕ್ಕೂ ಮುನ್ನ ಬಿಲ್ಲವ ಸಮಾಜದ ಸಂಘದ ಉದ್ಘಾಟನೆ ನಡೆಯಲಿದ್ದು, ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವನ್ನು ಜಿಲ್ಲಾ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ಆಯೋಜಿಸಲಾಗಿದೆ. ಬಳಿಕ ಬಿಲ್ಲವ ಸಮಾಜದ ಮಹಾಸಭೆ ನಡೆಯಲಿದೆ ಎಂದರು. ಮಧ್ಯಾಹ್ನ 12 ಗಂಟೆಗೆ ಆಟಿ ಮಾಸದಲ್ಲಿ ತಯಾರಿಸುವ ವಿಶೇಷ ಖಾದ್ಯಗಳ ತಿನಿಸುಗಳ ಪ್ರದರ್ಶನ ಹಾಗೂ ಊಟೋಪಚಾರ ಹಮ್ಮಿಕೊಳ್ಳಲಾಗಿದೆ ಎಂದ ಅವರು ನಿರಂತರವಾಗಿ ಸಮಾಜ ಸೇವೆ ಮಾಡುವ ಉದ್ದೇಶದಿಂದ ಸಂಘವನ್ನು ಸ್ಥಾಪಿಸಲಾಗಿದ್ದು, ಕನಿಷ್ಠ 50 ಯೂನಿಟ್ ರಕ್ತ ಸಂಗ್ರಹಿಸುವ ಉದ್ದೇಶವನ್ನು ಹೊಂದಿದ್ದೇವೆ. ಮಧ್ಯಾಹ್ನ ಬಿಲ್ಲವ ಸಮಾಜದ…
ಮಡಿಕೇರಿ ಆ.1 NEWS DESK : ಐತಿಹಾಸಿಕ ನಾಡಹಬ್ಬ ಮಡಿಕೇರಿ ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಸಮಿತಿಯ ಜವಾಬ್ದಾರಿ ಈ ಬಾರಿ ಶ್ರೀ ಕೋಟೆಮಾರಿಯಮ್ಮ ದೇವಾಲಯಕ್ಕೆ ಸಿಕ್ಕಿದ್ದು, ಅಧ್ಯಕ್ಷರಾಗಿ ಜಿ.ಸಿ.ಜಗದೀಶ್ ಅಧಿಕಾರ ವಹಿಸಿಕೊಂಡರು. ನಗರದ ಕೋದಂಡರಾಮ ದೇವಾಲಯದ ಸಭಾಂಗಣದಲ್ಲಿ ನಡೆದ ದಶಮಂಟಪ ಸಮಿತಿ ಸಭೆಯಲ್ಲಿ ಕಳೆದ ಬಾರಿಯ ಅಧ್ಯಕ್ಷ ಹೆಚ್.ಮಂಜುನಾಥ್, ಜಿ.ಸಿ.ಜಗದೀಶ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ನೂತನ ಅಧ್ಯಕ್ಷರು, ಎಲ್ಲಾ ಮಂಟಪ ಸಮಿತಿಗಳನ್ನು ವಿಸ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಿನಿಂದ ದಸರಾ ಉತ್ಸವ ಆಚರಿಸಲಾಗವುದು. ಮಂಟಪಗಳಿಗೆ ಹೆಚ್ಚಿನ ಅನುದಾನ ಒದಗಿಸಲು ಪ್ರಯತ್ನಿಸಲಾಗುವುದು ಎಂದರು. ಹೆಚ್.ಮಂಜುನಾಥ್ ಮಾತನಾಡಿ, ಜಿಲ್ಲಾಡಳಿತ, ದಸರಾ ಸಮಿತಿ, ಶಾಸಕರ ಸಹಕಾರದಿಂದ ಕಳೆದ ಬಾರಿ ದಸರಾವನ್ನು ಉತ್ತಮವಾಗಿ ನಡೆಸಲಾಗಿದೆ ಎಂದರು. ದಸರಾ ಸಮಿತಿಯಿಂದ ದಶಮಂಟಪ ಸಮಿತಿಗೆ ಸೂಕ್ತ ಮಾನ್ಯತೆ ಸಿಗಬೇಕೆಂದರು. ದಸರಾ ಸಮಿತಿ ಕಾಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಕೋಟೆ ಗಣಪತಿ ದೇವಾಲಯದ ಬಿ.ಎಂ.ರಾಜೇಶ್, ಕರವಲೆ ಭಗವತಿ ದೇವಾಲಯದ ಗಜೇಂದ್ರ, ಕೋಟೆ ಗಣಪತಿ ದೇವಾಲಯದ ವಿಕ್ಕಿ, ದಶಮಂಟಪ ಸಮಿತಿ…
ಮಡಿಕೇರಿ ಆ.1 NEWS DESK : ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವರ್ಷಂಪ್ರತೀ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆ.6 ರಂದು ಪ್ರಬಂಧ ಸ್ಪರ್ಧೆ ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ ನಡೆಯಲಿದೆ. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣ, ಪೆನ್ಶನ್ ಲೇನ್, ಮಡಿಕೇರಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಶಾಲಾ ಕಾಲೇಜುಗಳ ಪಠ್ಯ ವಿಷಯಗಳಲ್ಲಿ “ಸಹಕಾರ” ವಿಷಯ ಅಳವಡಿಕೆ’ ‘Introduction of subject on Co operation in the syllabus of schools and colleges’ ವಿಷಯದ ಕುರಿತು ಪ್ರಬಂಧ ಸ್ಪರ್ಧೆಯನ್ನು ಪೂರ್ವಾಹ್ನ 10.30 ಗಂಟೆಗೆ ಏರ್ಪಡಿಸಲಾಗಿದೆ. ಅಲ್ಲದೆ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಮಾಹಿತಿ ತಂತ್ರಜ್ಞಾನ ಬಳಕೆ ಮತ್ತು ತಾಂತ್ರಿಕತೆ ಅಳವಡಿಕೆಯಿಂದ ಮಾತ್ರವೇ ಸಹಕಾರಿ ಚಳುವಳಿ ಬಲಾಡ್ಯಗೊಳ್ಳಬಲ್ಲದು’‘Co operative movement will be strengthened only when information technology and adoption of technology is accepted’ ವಿಷಯದ ಕುರಿತು ಚರ್ಚಾ ಸ್ಪರ್ಧೆಯನ್ನು ಅದೇ ದಿನ ಪೂರ್ವಾಹ್ನ 11 ಗಂಟೆಯಿ0ದ…
ಮಡಿಕೇರಿ ಆ.1 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ಮುಂಬರುವ ದಿನಗಳಲ್ಲಿ ಹಮ್ಮಿಕೊಳ್ಳುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಮತ್ತು ಹೊರಭಾಗದ ಕೊಡವ ಸಾಂಸ್ಕೃತಿಕ ಕಲಾವಿದರುಗಳು ಹಾಗೂ ಕಲಾತಂಡಗಳಿಗೆ ಅವಕಾಶ ಕಲ್ಪಿಸಲಾಗುವುದು. ಆದ್ದರಿಂದ ಕೊಡವ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಉಮ್ಮತ್ತಾಟ್, ಬೊಳಕಾಟ್, ಕೊಂಬಾಟ್, ಕಪ್ಪೆಯಾಟ್, ಚೌರಿಯಾಟ್, ಕೋಲಾಟ್, ಪರೆಯಕಳಿ, ಉರ್ಟಿಕೊಟ್ಟ್ ಆಟ್, ಬಿಲ್ಲಾಟ್, ಪೀಲಿಯಾಟ್, ಕಾಪಳಕಳಿ, ಕತ್ತಿಯಾಟ್, ದುಡಿಕೊಟ್ಟ್ ಪಾಟ್, ಧೋಳ್ಪಾಟ್, ದೇವಡ ಪಾಟ್, ಕೊಡವ ಸಂಸ್ಕೃತಿ ಹಾಗೂ ಸಾಹಿತ್ಯಕ್ಕೆ ಸೇರಿದಂತೆ ಇತರ ಕಲಾವಿದರುಗಳು ತಮ್ಮ ಹೆಸರು, ವಿಳಾಸ ಹಾಗೂ ದೂರವಾಣಿ ಸಂಖ್ಯೆಗಳ ವಿವರವನ್ನು ಅಕಾಡೆಮಿ ಕಛೇರಿಗೆ ದಿನಾಂಕ 31.08.2024ರ ಒಳಗೆ ಲಿಖಿತವಾಗಿ ತಲುಪಿಸಬಹುದು. ನೋಂದಾಯಿತ ತಂಡಗಳಿಗೆ ಹಾಗೂ ಕಲಾವಿದರುಗಳಿಗೆ ಅಕಾಡೆಮಿಯ ಕಾರ್ಯಕ್ರಮಗಳಲ್ಲಿ ತಮ್ಮ ಪ್ರತಿಭೆಗಳ ಪ್ರದರ್ಶನ ಹಾಗೂ ಸ್ಪರ್ಧೆಯ ಅನಾವರಣಕ್ಕೆ ಆದ್ಯತೆಯನ್ನು ನೀಡಲಾಗುವುದು ಎಂದು ಅಕಾಡೆಮಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08272-229074, 8971958996 ಸಂಪರ್ಕಿಸಬಹುದಾಗಿದೆ.






