ಮಡಿಕೇರಿ ಜು 31 NEWS DESK : ಮಡಿಕೇರಿ ಮೂಲದ ಮೇಜರ್ ಸುಮುಖ್ ಸ್ವರೂಪ್ ಚೆನ್ನೈ ನ “ಐ ಐ ಟಿ ಮದ್ರಾಸ್ ” ನಲ್ಲಿ ಎಂ.ಟೆಕ್ ಪದವಿಯಲ್ಲಿ ಶೇ.91 ಅಂಕಗಳಿಸಿ ತೇಗ೯ಡೆ ಹೊಂದಿದ್ದಾರೆ. “ಆಂತರಿಕ ಕರ್ಮಯೋಗ” ವಿಭಾಗದಲ್ಲಿ ಚಿನ್ನದ ಪದಕವನ್ನು ಗಳಿಸಿರುವ ಸ್ವರೂಪ್ ಗೆ ಚೆನ್ನೈ ನಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪ್ರದಾನ ಮಾಡಲಾಯಿತು. ಭಾರತೀಯ ಭೂಸೇನೆಯಲ್ಲಿ ಅಧಿಕಾರಿಯಾಗಿರುವ ಇವರು ಮಡಿಕೇರಿಯ ಸಿವಿಎಸ್ ಬ್ರದಸ್೯ ನ ಸಿ.ಎಸ್.ವಿಶಾಲಾಕ್ಷಿ ಮತ್ತು ದಿ.ಸಿ.ವಿ. ಸದಾಶಿವ ರಾವ್ ಅವರ ಮೊಮ್ಮಗನಾಗಿದ್ದು, ದಿ.ಸಿ.ಎಸ್.ರಾಮ್ ಸ್ವರೂಪ್ ಮತ್ತು ಸಿ.ಆರ್.ವಿದ್ಯಾ ದಂಪತಿಯ ಪುತ್ರ.
ಲೇಖಕ: admin
ಮಡಿಕೇರಿ ಜು.31 NEWS DESK : ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಂದ ಹಾರಂಗಿ ಪ್ರವಾಸಿ ಮಂದಿರದಲ್ಲಿ ಮಾಹಿತಿ ಪಡೆದರು. ರಸ್ತೆ, ಸೇತುವೆ, ವಿದ್ಯುತ್ ಕಂಬ ಮತ್ತು ಪರಿವರ್ತಕಗಳು, ಬೆಳೆ ಹಾಗೂ ಮನೆ ಹಾನಿ ಹೀಗೆ ಪ್ರಾಕೃತಿಕ ವಿಕೋಪದಿಂದ ಉಂಟಾದ ನಷ್ಟದ ಬಗ್ಗೆ ಮಾಹಿತಿ ಪಡೆದರು.
ಮಡಿಕೇರಿ ಜು.31 NEWS DESK : ಪಶ್ಚಿಮ ಘಟ್ಟವೂ ಸೇರಿದಂತೆ ದೇಶಾದ್ಯಂತ ಗುಡ್ಡ ಪ್ರದೇಶಗಳ ಸಂಪೂರ್ಣ ಅಧ್ಯಯನದ ಭೂಕುಸಿತ ಒಳಗಾಗುವ ಮ್ಯಾಪಿಂಗ್ (Landslide suspectibility Mapping-LSM) ಕುರಿತಂತೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (Geological survey of India-GSI) ಗೆ ಸರ್ಕಾರ ಹೆಚ್ಚಿನ ಹಣವನ್ನು ಮೀಸಲು ಇಟ್ಟು, ಈ ಮ್ಯಾಪ್ ಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಶಾಸಕ ಡಾ.ಮಂತರ್ ಗೌಡ ತಿಳಿಸಿದರು. ಭೂಕುಸಿತಕ್ಕೆ ಒಳಗಾಗುವ ಮ್ಯಾಪಿಂಗ್ (LSM) ಮೆಸ್ಕೋ (mesco) (1:10,000) ಸ್ಕೇಲ್ ಮೇಲೆ ನಡಿಯುತ್ತಿರುವ ಯೋಜನೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಇನ್ನಷ್ಟು ಹಣಕಾಸಿನ ನೆರವಿನ ಅಗತ್ಯ ಇದೆ ಎಂದು ಅವರು ಅಭಿಪ್ರಾಯಪಟ್ಟರು. ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಕೊಡಗಿನ ಗಾಳಿಬೀಡು-ಆಂಚಾಲ್ ಪ್ರದೇಶದ ಮ್ಯಾಪಿಂಗ್ ಸೇರಿದಂತೆ ಒಟ್ಟು 37 ಯೋಜನೆಗಳನ್ನು 2023-2024 ರಲ್ಲಿ ಕೈಗೊಂಡಿದೆ. ಆದರೆ ಈ ಯೋಜನೆಗಳು ವೇಗವಾಗಿ ಗುರಿ ಮುಟ್ಟಬೇಕಾದರೆ ಹಣಕಾಸಿನ ನೆರವು ಅಗತ್ಯವಿದೆ. ಈ ವಿಷಯವನ್ನು ನಾವು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ಶಾಸಕರು ಹೇಳಿದರು. ಭವಿಷ್ಯದ…
*ಕಣ್ಣೀರಿನ ಕಥೆ ಹೇಳುವ ವಯನಾಡಿನ ಚಿತ್ರಣ*
ನವದೆಹಲಿ ಜು.31 NEWS DESK : ಕೇಂದ್ರ ಲೋಕಸೇವಾ ಆಯೋಗದ ನೂತನ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಆಯ್ಕೆಯಾಗಿದ್ದು, ಆಗಸ್ಟ್ 1 ರಂದು ಅಧಿಕಾರ ಸ್ವೀಕರಿಸಲಿದ್ದಾರೆ . 1983ರ ಬ್ಯಾಚ್ನ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ವಿವಾದದ ಸಂದರ್ಭದಲ್ಲಿ ಯುಪಿಎಸ್ಸಿ ಮಾಜಿ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ ನೀಡಿದ ನಂತರ ಈ ಹುದ್ದೆ ಖಾಲಿಯಾಗಿತ್ತು. ಪ್ರೀತಿ ಸೂದನ್ ಕೇಂದ್ರದ ಮಾಜಿ ಆರೋಗ್ಯ ಕಾರ್ಯದರ್ಶಿಯಾಗಿದ್ದರು. ಅವರು 2022 ರಿಂದ UPSC ಸದಸ್ಯರಾಗಿದ್ದಾರೆ. ಪೂಜಾ ಖೇಡ್ಕರ್ ವಿವಾದ ಬೆಳಕಿಗೆ ಬಂದ ನಂತರ, UPSC ಮಾಜಿ ಮುಖ್ಯಸ್ಥ ಮಹೇಶ್ ಸೋನಿ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ರಾಜೀನಾಮೆ ನೀಡಿದ್ದರು. ಪ್ರೀತಿ ಆಂಧ್ರಪ್ರದೇಶ ಕೇಡರ್ನ ಐಎಎಸ್ ಅಧಿಕಾರಿ. ಅವರು ಆಹಾರ ಸಂಸ್ಕರಣೆ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಕಾರ್ಯದರ್ಶಿಯಾಗಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ರಕ್ಷಣಾ ಸಚಿವಾಲಯದಲ್ಲಿಯೂ ಕೆಲಸ ಮಾಡಿದ್ದಾರೆ.
ಸುಂಟಿಕೊಪ್ಪ ಜು.31 NEWS DESK : ನಂಜರಾಯಪಟ್ಟಣ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಎಸ್.ಡಿ.ಉದಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿ.ಜಿ.ಲೋಕೇಶ್ ನೇಮಕಗೊಂಡಿದ್ದಾರೆ. ನಂಜರಾಯಪಟ್ಟಣ ಪ್ರೌಢಶಾಲಾ ಸಭಾಂಗಣದಲ್ಲಿ ವಿದ್ಯಾ ಸಂಘದ ವತಿಯಿಂದ ನಡೆದ ಹಳೆಯ ವಿದ್ಯಾರ್ಥಿಗಳ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಭೆಯಲ್ಲಿ ಹಾಜರಿದ್ದ ಹಳೆಯ ವಿದ್ಯಾರ್ಥಿಗಳ ನಿರ್ದೇಶಕರುಗಳ ಪೈಕಿ ಉಪಾಧ್ಯಕ್ಷರಾಗಿ ಕೆ.ಟಿ.ಹರೀಶ್, ಖಜಾಂಚಿಯಾಗಿ ಕೆ.ಎ.ಅನೀಸ್, ನಿರ್ದೇಶಕರುಗಳಾಗಿ ಉಳುವಾರನ ಶಿವಕುಮಾರ್, ಸಿ.ಜೆ.ವಿಜೇಶ್, ಸೂರ್ಯಕುಮಾರ್, ಬೆಳ್ಳಿಯಪ್ಪ, ಪವನ್ ಚಿಂಟು, ಸಂದೀಪ್, ಆರಿಸ್, ಎ.ಪಿ.ಬಾಲಕೃಷ್ಣ, ಕೆ.ಜಿ.ದೇವಯ್ಯ, ಪ್ರಸನ್ನ ಹಾಗೂ ಹೆಚ್.ಕೆ.ಪ್ರಸಾದ್ ಅವರುಗಳನ್ನು ಆಯ್ಕೆ ಮಾಡಲಾಯಿತು.
ಮಡಿಕೇರಿ ಜು.31 NEWS DESK : ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಸರ್ವೋದಯ ಬಿ.ಇಡಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ವಾಣಿ ಅವರನ್ನು ಕೊಡಗು ವಿಶ್ವವಿದ್ಯಾಲಯದ ಉಪಕುಲಪತಿಗಳು ನಾಮನಿರ್ದೇಶನ ಮಾಡಿದ್ದಾರೆ.
ಸುಂಟಿಕೊಪ್ಪ ಜು.31 NEWS DESK : ಮನೆಗೆ ನುಗ್ಗಿದ ಕಳ್ಳರು ಚಿನ್ನ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ಸುಂಟಿಕೊಪ್ಪದ ಹೊಸಬಡಾವಣೆಯಲ್ಲಿ ನಡೆದಿದೆ. ಹೊಸಬಡಾವಣೆ ನಿವಾಸಿ ಮನು ಅಚ್ಚಮಯ್ಯ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯಲ್ಲಿ ಯಾರು ಇಲ್ಲದ ಸಂದರ್ಭವನ್ನು ಬಳಸಿಕೊಂಡು ಕಳ್ಳರು ಮನೆಯ ಬೀಗವನ್ನು ಮುರಿದು ಒಳನುಗ್ಗಿ ಮನೆಯಲ್ಲಿದ್ದ 3 ಕಪಾಟುಗಳನ್ನು ಜಾಲಾಡಿ 1 ಲಕ್ಷದ 75 ಸಾವಿರ ಮೌಲ್ಯದ 3 ಪೌನ್ ಚಿನ್ನ ಹಾಗೂ ರೂ.6 ಸಾವಿರ ನಗದನ್ನು ಅಪಹರಿಸಿ ಪರಾರಿಯಾಗಿದ್ದಾರೆ. ಕುಶಾಲನಗರ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್, ಠಾಣಾಧಿಕಾರಿ ಎಂ.ಸಿ.ಶ್ರೀಧರ್, ಅಪರಾಧ ಪತ್ತೆದಳದ ಅಧಿಕಾರಿ ಸ್ವಾಮಿ, ಬೆರಳಚ್ಚು ತಜ್ಞರು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು, ಅಪರಾಧ ವಿಭಾಗದ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದರು. ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಸೋಮವಾರಪೇಟೆ NEWS DESK ಜು.31 : ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ಮಂಡಲ ಕಾರ್ಯಕಾರಿಣಿ ಸಭೆ ಇಲ್ಲಿನ ಕೊಡವ ಸಮಾಜ ಸಭಾಂಗಣದಲ್ಲಿ ಮಂಡಲ ಅಧ್ಯಕ್ಷ ಗೌತಮ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಮಾಜೀ ಸಂಸದ ಪ್ರತಾಪ್ ಸಿಂಹ, ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆಗಳ ಮೂಲಕ ಯಾರಿಗೂ ಹಣ ಬರುತ್ತಿಲ್ಲ. ಈ ಗ್ಯಾರಂಟಿಗಳು ಕಾಂಗ್ರೆಸ್ ಎಲೆಕ್ಷನ್ಗಾಗಿ ಮಾಡಿದ ಗಿಮಿಕ್ ಎಂಬುದು ಜನರಿಗೆ ಮನದಟ್ಟಾಗಿದೆ. ಮಳೆಯಿಂದ ಹಾನಿಯಾದರೆ ಬಿಜೆಪಿ ಸರ್ಕಾರ ಲಕ್ಷ ಪರಿಹಾರ ನೀಡುತ್ತಿತ್ತು. ಈಗಿನ ಕಾಂಗ್ರೆಸ್ ಬಿಡಿಗಾಸೂ ನೀಡಿಲ್ಲ ಎಂದು ದೂರಿದರು. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಮುಖ್ಯಮಂತ್ರಿಗಳು ವಾಲ್ಮೀಕಿ ನಿಗಮ ಸೇರಿದಂತೆ ಮೂಡಾ ಹಗರಣದಲ್ಲಿ ಭಾಗಿಯಾಗಿದ್ದಾರೆ. ಎಸ್ಸಿ ಎಸ್ಟಿ ಮೀಸಲು ಅನುದಾನವನ್ನು ಬೇರೆಯ ಉದ್ದೇಶಕ್ಕೆ ಬಳಕೆ ಮಾಡಲಾಗಿದೆ. ಭ್ರಷ್ಟಾಚಾರ ಮಿತಿ ಮೀರುತ್ತಿದ್ದು, ಈ ಬಗ್ಗೆ ಜನರಿಗೆ ತಿಳಿಸಬೇಕು. ಭ್ರಷ್ಟತೆಯನ್ನು ಪ್ರಶ್ನಿಸುವ, ಪರಿಣಾಮಕಾರಿಯಾಗಿ ಹೋರಾಟ ರೂಪಿಸುವ ಅಗತ್ಯವಿದ್ದು, ಯುವ ನಾಯಕರು ಹೋರಾಟಕ್ಕೆ ಇಳಿಯಬೇಕು. ಆ ಮೂಲಕ 2028ರ ಚುನಾವಣೆಯಲ್ಲಿ ಕೊಡಗಿನ…
ಮಡಿಕೇರಿ ಜು.31 NEWS DESK : ಮಡಿಕೇರಿ – ಮಾಂದಲ್ ಪಟ್ಟಿ ಹಾಗೂ ಅಬ್ಬಿ ಫಾಲ್ಸ್ ಗೆ ಸಂಪರ್ಕ ಕಲ್ಪಿಸುವ ಭಗವತಿ ನಗರದ ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು, ಪಾದಾಚಾರಿಗಳು ಹಾಗೂ ವಾಹನ ಸಂಚಾರಕ್ಕೆ ಅಡಚಣೆಯನ್ನುಂಟು ಮಾಡುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯ ರಸ್ತೆಯು ಪ್ರಮುಖ ಪ್ರವಾಸಿತಾಣ ಅಬ್ಬಿಪಾಲ್ಸ್ ಗೆ ತೆರಳುವ ರಸ್ತೆಯಾಗಿದ್ದು, ಈ ರಸ್ತೆಯಲ್ಲಿ ನಿತ್ಯ ದೇಶ ವಿದೇಶದಿಂದ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ವಾಹನಗಳು ಸಂಚರಿಸುತ್ತಿದ್ದು, ವಾಹನಗಳು ಗುಂಡಿಯಲ್ಲಿ ಸಿಲುಕಿ ಸವಾರರು ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗುವಂತ್ತಾಗಿದೆ. ವಿದ್ಯಾರ್ಥಿಗಳು, ಸಾರ್ವಜನಿಕರು ನಡೆದಾಡುವುದೇ ಕಷ್ಟವಾಗಿದೆ, ರಸ್ತೆಯ ದುಸ್ಥಿತಿ ಕಂಡು ಸಾರ್ವಜನಿಕರು ಹಿಡಿಶಾಪ ಹಾಕುತ್ತಲೇ ಓಡಾಡುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ಗಮನ ಹರಸಿ, ರಸ್ತೆ ದುರಸ್ತಿಗೊಳಿಸುವ ಮೂಲಕ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.






