ಮಡಿಕೇರಿ NEWS DESK ಜು.31 : ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿ ಗ್ರಾಮದಲ್ಲಿ ಒಂಟಿ ಸಲಗವೊಂದು ಬೆಳ್ಳಂಬೆಳಗ್ಗೆ ಕಾಣಿಸಿಕೊಂಡು ಆತಂಕ ಮೂಡಿಸಿತು. ಬೆಳಿಗ್ಗೆ ಸುಮಾರು 6.30 ಗಂಟೆ ವೇಳೆಗೆ ಗ್ರಾಮದ ಮುಖ್ಯ ರಸ್ತೆಯಲ್ಲಿ ರಾಜಾರೋಷವಾಗಿ ಸಂಚರಿಸಿದ ಕಾಡಾನೆ ಗ್ರಾಮಸ್ಥರು ಕಿರುಚಿಕೊಂಡಾಗ ಅಕ್ಕಪಕ್ಕದ ತೋಟಗಳಿಗೆ ಪ್ರವೇಶಿಸಿತು. ಬೇಲಿ ಮತ್ತು ತೋಟದಲ್ಲಿನ ಗಿಡಗಳಿಗೆ ಹಾನಿಯಾಗಿದ್ದು, ನಿತ್ಯ ಈ ಒಂಟಿ ಸಲಗ ಗ್ರಾಮದಲ್ಲಿ ಸಂಚರಿಸುತ್ತಿರುವ ಬಗ್ಗೆ ಸ್ಥಳೀಯರು ಆತಂಕ ವಯಕ್ತಪಡಿಸಿದ್ದಾರೆ. ಇತ್ತೀಚೆಗಷ್ಟೆ ಬೆಳೆಗಾರರೊಬ್ಬರು ಒಂಟಿ ಸಲಗದ ದಾಳಿಯಿಂದ ಪಾರಾಗಿದ್ದರು. ಅರಣ್ಯ ಇಲಾಖೆ ಕಾಡಾನೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಲೇಖಕ: admin
ಮಡಿಕೇರಿ NEWS DESK ಜು.31 : ನಗರದ ಶ್ರೀ ಓಂಕಾರೇಶ್ವರ ದೇವಾಲಯದ ಗದ್ದೆಯಲ್ಲಿ ಇಂದು ನಾಟಿ ಕಾರ್ಯ ನಡೆಸಲಾಯಿತು. ಹುತ್ತರಿ ಹಬ್ಬದಂದು ಭತ್ತದ ತೆನೆಯನ್ನು ತೆಗೆಯಲು ಬೇಕಾದ ಭತ್ತದ ಸಸಿಯನ್ನು ಗದ್ದೆಯಲ್ಲಿ ನೆಡಲಾಯಿತು. ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ದೇವರಾಜು, ದೇವಾಲಯ ಸಮಿತಿಯ ಮಾಜಿ ಅಧ್ಯಕ್ಷ ಪುಲಿಯಂಡ ಜಗದೀಶ್, ಕೊಡಗು ಜಾನಪದ ಪರಿಷತ್ತಿನ ಉಪಾಧ್ಯಕ್ಷ ಅಂಬೆಕಲ್ ಕುಶಾಲಪ್ಪ, ಕೇಕಡ ವಾಸು ಪುಟ್ಟಯ್ಯ, ಸಿದ್ದರಾಜು, ಕೃಪಾ ದೇವರಾಜು, ಶಿಲ್ಪಾ ರವೀಂದ್ರ ರೈ, ಕೀತಿಯಂಡ ತೆಲ್ಮಾ ಕಾರ್ಯಪ್ಪ , ದಿವ್ಯಾ ಲೋಕೇಶ್, ರೇಷ್ಮಾ ಕುಶ, ಅಣ್ಣಪ್ಪ, ಕುಶಕುಮಾರ್, ನಾರಾಯಣ, ಮುತ್ತಪ್ಪ, ಹರೀಶ್ ಹಾಜರಿದ್ದರು.
ಮಡಿಕೇರಿ ಜು.31 NEWS DESK : ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಶ್ರೇಯೋಭಿವೃದ್ದಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ “ಕೃಷಿ ಪಂಡಿತ” ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕೃಷಿ ಪಂಡಿತ ಪ್ರಶಸ್ತಿಗೆ ಭಾಗವಹಿಸಲು ಇಚ್ಚಿಸುವ ರೈತರ ಸಂಶೋಧನೆ/ಸಾಧನೆಗಳು ಮೂಲ ಸ್ವರೂಪದಾಗಿದ್ದು, ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಸದರಿ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸ ಬಯಸುವ ರೈತ/ ರೈತ ಮಹಿಳೆಯರು ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ 31.08.2024 ರ ಒಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿರುತ್ತದೆ. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ NEWS DESK ಜು.31 : ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ದಯಾನಂದ.ಕೆ.ಸಿ ಅವರನ್ನು ಕೊಡಗು ವಿಶ್ವವಿದ್ಯಾಲಯದ ಉಪಕುಲಪತಿಗಳು ನಾಮನಿರ್ದೇಶನ ಮಾಡಿದ್ದಾರೆ. ಇವರು ಮೂಲತಃ ಭಾಗಮಂಡಲದ ತಾವೂರು ಗ್ರಾಮದ ಕೂಡಕಂಡಿ ಚಂದ್ರಹಾಸ ಹರಿಣಾಕ್ಷಿ ಇವರ ಪುತ್ರ. ಪ್ರಸ್ತುತ ಮಡಿಕೇರಿಯ ಕಾವೇರಿ ಬಡಾವಣೆಯಲ್ಲಿ ನೆಲೆಸಿರುವರು.
ಮಡಿಕೇರಿ ಜು.31 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸೋಮವಾರಪೇಟೆ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಸಂತ್ರಸ್ತರ ಸಮಸ್ಯೆ ಆಲಿಸಿ ಧೈರ್ಯ ತುಂಬಿದರು. ಸಂತ್ರಸ್ತರಿಗೆ ಯಾವುದೇ ಅನಾನುಕೂಲತೆ ಆಗದಂತೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಡಿಕೇರಿ NEWS DESK ಜು.31 : ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕಾವೇರಿ ಎನ್.ಪಿ ಅವರನ್ನು ಕೊಡಗು ವಿಶ್ವವಿದ್ಯಾಲಯದ ಉಪಕುಲಪತಿಗಳು ನಾಮನಿರ್ದೇಶನ ಮಾಡಿದ್ದಾರೆ.
ಮಡಿಕೇರಿ NEWS DESK ಜು.31 : ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಗೋಣಿಕೋಪ್ಪ ಕಾವೇರಿ ಕಾಲೇಜಿನ ಪ್ರಾಂಶುಪಾಲ ಡಾ.ಕಾವೇರಪ್ಪ ಎಂ.ಬಿ ಆವರನ್ನು ಕೊಡಗು ವಿಶ್ವವಿದ್ಯಾಲಯದ ಉಪಕುಲಪತಿಗಳು ನಾಮನಿರ್ದೇಶನ ಮಾಡಿದ್ದಾರೆ.
ಮಡಿಕೇರಿ ಜು.31 NEWS DESK : ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ-ಕೃಷಿ ಉತ್ಪಾದನಾ ಬಹುಮಾನ ಯೋಜನೆಯನ್ನು ಕೃಷಿ ಇಲಾಖಾ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ (2024-25) ಸಹ ರೈತ/ ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. ನೋಂದಣಿ ಶುಲ್ಕ: 2024-25ನೇ ಸಾಲಿನಿಂದ ಅನ್ವಯಿಸುವಂತೆ ಕೃಷಿ ಪ್ರಶಸ್ತಿಗೆ ನಿಗದಿ ಪಡಿಸಲಾಗಿರುವ ಪ್ರವೇಶ ಶುಲ್ಕವನ್ನು ರದ್ದುಪಡಿಸಲಾಗಿದೆ. ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ ಸ್ಪರ್ಧಾ ಬೆಳೆ ಬೆಳೆದಿರಬೇಕು. ಸ್ವಂತ ಜಮೀನು ಇರುವ ಬಗ್ಗೆ ಪಹಣಿ ಪತ್ರ ಹೊಂದಿರಬೇಕು. ಯಾವುದೇ ಹಂತದಲ್ಲಿ ಒಮ್ಮೆ ಬಹುಮಾನ ಪಡೆದ ರೈತ/ ರೈತ ಕುಟುಂಬದವರು ಮುಂದಿನ ಐದು ವರ್ಷಗಳ ಅವಧಿಗೆ ಆ ಹಂತದ ಬೆಳೆ ಸ್ಪರ್ಧೆಯ ಬಹುಮಾನಕ್ಕೆ ಅರ್ಹನಾಗಿರುವುದಿಲ್ಲ. ಆದರೆ ಆ ಮೇಲಿನ ಹಂತದ ಬೆಳೆ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿರುತ್ತದೆ. ತಾಲ್ಲೂಕು ಮಟ್ಟದಲ್ಲಿ ಬಹುಮಾನ ಪಡೆದವರು ಜಿಲ್ಲಾ ಮಟ್ಟಕ್ಕೆ ಸ್ಪರ್ಧಿಸಬಹುದಾಗಿದೆ ಮತ್ತು ಜಿಲ್ಲಾ ಮಟ್ಟದಲ್ಲಿ ಬಹುಮಾನ…
ಮಡಿಕೇರಿ ಜು.31 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅವರ ಅಧ್ಯಕ್ಷತೆಯಲ್ಲಿ ‘ಸಮಾಗಮ ಸಭೆಗೆ’ ಉತ್ತಮ ಸ್ಪಂದನೆ ದೊರೆಯಿತು. ನಗರದ ಗಾಂಧಿ ಭವನದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನೂತನ ಸದಸ್ಯರು, ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ಅರೆಭಾಷೆ ಸಮುದಾಯದ ವಿವಿಧ ಸಂಘಟನೆಗಳ ಅಧ್ಯಕ್ಷರು ಮತ್ತು ನಿರ್ದೇಶಕರು ಸೇರಿದಂತೆ ಹಲವರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ಸುಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಅಕಾಡೆಮಿ ಮೊದಲ ಸಭೆಯಲ್ಲಿ ಅಕಾಡೆಮಿ ಚಟುವಟಿಕೆ ಸಂಬಂಧಿಸಿದಂತೆ ಕಳೆದ ಎರಡು ಅವಧಿಯಲ್ಲಿನ ಫೆಲೋಶಿಪ್ನ ಪುಸ್ತಕ ಹೊರತರಲು ಬಾಕಿ ಇದ್ದು, ಮೊದಲ ಸಭೆಯಲ್ಲಿಯೇ ಪುಸ್ತಕ ಹೊರ ತರಲು ನಿರ್ಧರಿಸಿರುವುದು ವಿಶೇಷವಾಗಿದೆ ಎಂದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ‘ಹಿಂಗಾರ’ ಪುಸ್ತಕವನ್ನು ಹೊರತರಲಾಗುತ್ತಿದ್ದು, ಕಳೆದ 18…
ಮಡಿಕೇರಿ NEWS DESK ಜು.31 : ಭಾರೀ ಗಾಳಿ ಮಳೆಯ ಹಿನ್ನೆಲೆ ಕೊಡಗು ಜಿಲ್ಲೆಯ ವಿವಿಧ ಭಾಗಗಳ ಹಲವು ಕುಟುಂಬಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಭಾಗಮಂಡಲ ಹೋಬಳಿಯ ಭಾಗಮಂಡಲ ಗ್ರಾಮದ ಕಾಶಿ ಮಠದಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು, ಎರಡು ಕುಟುಂಬಗಳ ಏಳು ಸದಸ್ಯರು ಆಶ್ರಯ ಪಡೆದಿದ್ದಾರೆ. ವಿರಾಜಪೇಟೆ ತಾಲ್ಲೂಕು ಕರಡಿಗೋಡು ಗ್ರಾಮದ ಕಾವೇರಿ ನದಿ ದಡ ವ್ಯಾಪ್ತಿಯ ಹೊಳೆ ಕೆರೆ ಪೈಸಾರಿಯ ಪ್ರವಾಹದ ಅಪಾಯದ ಭೀತಿಯಲ್ಲಿರುವ ಕುಟುಂಬಗಳನ್ನು ಸಿದ್ದಾಪುರ ಸ್ವರ್ಣ ಮಾಲ ಕಲ್ಯಾಣ ಮಂಟಪಕ್ಕೆ ಭಾಗಶಃ ಸ್ಥಳಾಂತರಿಸಲಾಗಿದೆ. ವಿರಾಜಪೇಟೆ ಹೋಬಳಿ ತೋರ ಗ್ರಾಮದ ಭೂಕುಸಿತ ಪ್ರದೇಶದಲ್ಲಿರುವ ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಮಡಿಕೇರಿಯ ಇಂದಿರಾ ನಗರದಲ್ಲಿ ಎರಡು ಮನೆಗಳು ಅಪಾಯ ಸ್ಥಿತಿಯಲ್ಲಿದ್ದು, ಸದ್ರಿ ಮನೆಗಳಲ್ಲಿ ವಾಸಿಸುವವರಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಲು ತಿಳಿಸಲಾಗಿದೆ ಹಾಗೂ ಇಂದಿರಾ ನಗರದಲ್ಲಿರುವ ಸಮುದಾಯ ಭವನದಲ್ಲಿ ತಾತ್ಕಾಲಿಕವಾಗಿ ಇರುವಂತೆ ತಿಳಿಸಲಾಗಿದೆ. ಸಮುದಾಯ ಭವನದ ಸಮಿತಿಗೂ ಈ ಮಾಹಿತಿ ನೀಡಿ ಎರಡು ಕುಟುಂಬಗಳು…






