ಲೇಖಕ: admin

ಮಡಿಕೇರಿ ಜು.30 NEWS DESK : ಮಿಷನ್ ಮೋದಿ ಡೆಮಾಕ್ರಸಿ ಡೆವೆಲಪ್ ಮೆಂಟ್ ಟ್ರಸ್ಟ್ ಸಂಘಟನೆಯ ವಿಶೇಷ ಕಾರ್ಯಕಾರಣಿ ಸಭೆಯು ಹುಬ್ಬಳ್ಳಿಯಲ್ಲಿ ನಡೆಯಿತು. ಟ್ರಸ್ಟ್ ನ ರಾಷ್ಟ್ರೀಯ ಅಧ್ಯಕ್ಷ ರಾಮ್ ಗೋಪಾಲ್ ಕಾಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘಟನೆಯ ಧ್ಯೆಯವಾಕ್ಯ “ಹರ್ ಹರ್ ಮೋದಿ, ಘರ್ ಘರ್ ಮೋದಿ” ಎಂಬಂತೆ ಸಮಾಜದಲ್ಲಿ ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಕರ ತಂಡಗಳು ದೇಶದ 200ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ರಾಜ್ಯಗಳಿಗೂ ಕಾರ್ಯ ಚಟುವಟಿಕೆಗಳನ್ನು ವಿಸ್ತರಿಸುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು. ಸಭೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಗೋವಿಂದ ಕುಲಕರ್ಣಿ, ಮೈಸೂರು ಜಿಲ್ಲಾಧ್ಯಕ್ಷ ಲೋಕೇಶ್ ನಾಗಪ್ಪ, ಉಪಾಧ್ಯಕ್ಷ ಸುರೇಶ್ ಬಾಬು, ಸಂಘಟನಾ ಕಾರ್ಯದರ್ಶಿಗಳಾದ ರವಿಶಂಕರ್, ವಿಷ್ಣು ನಾಚಪ್ಪ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಪದಾಧಿಕಾರಿಗಳು ಹಾಜರಿದ್ದರು.

Read More

ಪ್ಯಾರಿಸ್ NEWS DESK ಜು.30 : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 10 ಮೀ. ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬ್ಜೋತ್ ಸಿಂಗ್ ಹಾಗೂ ಮನು ಭಾಕರ್ ಜೋಡಿ ಕಂಚಿನ ಪದಕ ಗೆದ್ದಿದೆ. ಆ ಮೂಲಕ ಭಾರತ ಮತ್ತೊಂದು ಪದಕವನ್ನು ತನ್ನದಾಗಿಸಿಕೊಂಡಿದೆ. ಒಂದೇ ಒಲಿಂಪಿಕ್ಸ್ ನಲ್ಲಿ 2 ಪದಕ ಜಯಿಸಿದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಮನು ಭಾಕರ್ ಪಾತ್ರರಾಗಿದ್ದಾರೆ. ಮಹಿಳೆಯರ 10 ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಎರಡು ದಿನಗಳ ಹಿಂದೆ ಕಂಚಿನ ಪದಕ ಗೆದ್ದು ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದ ಮನು, ಇದೀಗ 2ನೇ ಪದಕ ಗೆದ್ದಿದ್ದಾರೆ.

Read More

ಮಡಿಕೇರಿ ಜು.30 NEWS DESK : ಶ್ರೀಲಂಕಾದ ಕೊಲೊಂಬೊದಲ್ಲಿ ನಡೆಯುತ್ತಿರುವ ಸಿಲನ್ ಮಾಸ್ಟರ್ಸ್ ಇಂಟರ್‌ನ್ಯಾಷನಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ನಲ್ಲಿ ಕೊಡಗಿನ ತಾತಪಂಡ ಜ್ಯೋತಿ ಸೋಮಯ್ಯ ಎರಡು ಬೆಳ್ಳಿ ಪದಕ ಗೆದ್ದಿದ್ದಾರೆ. 60 ವಯೋಮಿತಿಯ ಸಿಂಗಲ್ಸ್ ವಿಭಾಗ ಮತ್ತು ಮಿಶ್ರ ಡಬಲ್ಸ್ 130 ಕಂಬೈನ್‌ಡ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.

Read More

ಸಕಲೇಶಪುರ NEWS DESK ಜು.30 : ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದ್ದು, ಸಕಲೇಶಪುರದ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ. ದೊಡ್ಡತಪ್ಪಲು ಸಮೀಪ ಒಂದು ಟ್ಯಾಂಕರ್, ಒಂದು ಟಿಪ್ಪರ್ ಮತ್ತು ಎರಡು ಕಾರುಗಳು ಭೂಕುಸಿತದ ಕೆಸರಿನಲ್ಲಿ ಸಿಲುಕಿಕೊಂಡಿವೆ. ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಭಾರೀ ಭೂಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿದೆ. ಪ್ರಯಾಣಿಕರು ಹಾಗೂ ವಾಹನ ಚಾಲಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

Read More

ಮಡಿಕೇರಿ ಜು.30 NEWS DESK : ಕಳೆದ 10 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ವಿಪರೀತ ಗಾಳಿಯಿಂದ ಕಂಬದ ಬದಲಾವಣೆ ಪದೇ ಪದೇ ವಿದ್ಯುತ್ ಜಾಲಕ್ಕೆ ಹಾನಿ ಉಂಟಾಗುತ್ತಿರುವುದರಿ0ದ ವಿದ್ಯುತ್ ವ್ಯತ್ಯಯವಾಗುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಮಡಿಕೇರಿ ವಿಭಾಗದ ಕಾರ್ಯನಿರ್ವಹಕ ಇಂಜಿನಿಯರ್ ಕೋರಿದ್ದಾರೆ. ತೀವ್ರವಾದ ಮಳೆಗಾಳಿಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಈವರೆಗೆ ಒಟ್ಟು 2454 ಕಂಬಗಳು ಹಾಗೂ 46 ಸಂಖ್ಯೆಯ ವಿದ್ಯುತ್ ಪರಿವರ್ತಕಗಳು ಮತ್ತು 1.72 ಕಿ.ಲೋಮೀಟರ್ ವಾಹಕಗಳು ಹಾನಿಗೊಳಗಾಗಿರುತ್ತದೆ. ಈಗಾಗಲೇ 2150 ಕಂಬಗಳನ್ನು ಹಾಗೂ ಎಲ್ಲಾ ಪರಿವರ್ತಕಗಳನ್ನು ದುರಸ್ಥಿಗೊಳಿಸಿ ಬದಲಾಯಿಸಲಾಗಿದೆ. ದೈನಂದಿನ ಚಟುವಟಿಕೆಯಲ್ಲಿ ಸರಾಸರಿ 100 ಕಂಬಗಳ ಬದಲಾವಣೆಯ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಮಳೆಗಾಳಿಯ ತೀವ್ರತೆ ಹೆಚ್ಚಾಗಿರುವುದರಿಂದ ಪ್ರತಿದಿನ ಸರಾಸರಿ 80-100 ಕಂಬಗಳ ಮುರಿವಿಕೆ ವರಿಯಾಗುತ್ತಿದೆ. ವಿದ್ಯುತ್ ಜಾಲದ ದುರಸ್ಥಿ ಕಾರ್ಯವನ್ನು ಚುರುಕುಗೊಳಿಸಲು, ವಿದ್ಯುತ್ ಜಾಲವನ್ನು ಪುನಃ ಸ್ಥಾಪಿಸಲು ಮಡಿಕೇರಿ ವಿಭಾಗದ 231 ಸಂಖ್ಯೆಯ ಸಿಬ್ಬಂದಿ, ಇತರೆ ವಿಭಾಗಗಳಿಂದ ಹಾಗೂ ಹೊರಗುತ್ತಿಗೆಯಿಂದ 136 ಸಿಬ್ಬಂದಿ, ವಿದ್ಯುತ್ ಗುತ್ತಿಗೆದಾರರ…

Read More

ನಾಪೋಕ್ಲು ಜು.30 NEWS DESK : ಸಾರ್ವಜನಿಕರು ದೂರವಾಣಿ ಕರೆ ಮಾಡಿ ಸಂಕಷ್ಟ ತೋಡಿಕೊಂಡಾಗ  ಅವರಿಗೆ ಸ್ಪಂದಿಸುವ ಗುಣವನ್ನು ರೂಡಿಸಿಕೊಳ್ಳಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಅಧಿಕಾರಿಗಳಿಗೆ ಸೂಚನೆ ನೀಡಿದರು. ಎಮ್ಮೆಮಾಡು ಪಂಚಾಯಿತಿ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳು ತಮ್ಮ ದೂರವಾಣಿ ಕರೆ ಸ್ವೀಕರಿಸುವುದಿಲ್ಲ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು. ಈ ಸಂದರ್ಭ ಮಾತನಾಡಿದ ಶಾಸಕರು, ಮಳೆಗಾಳಿಗೆ ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ವಿದ್ಯುತ್ ಮತ್ತು ನೀರಿನ ವ್ಯವಸ್ಥೆ ಸಹಜವಾಗಿ ಹದಗೆಡುತ್ತದೆ. ಈ ಸಂಧರ್ಭದಲ್ಲಿ ಜನರು ಸಂಭಂದಿಸಿದ ಅಧಿಕಾರಿ, ಸಿಬ್ಬಂದಿಗಳಿಗೆ ಕರೆ ಮಾಡುತ್ತಾರೆ. ಅವರ ಕರೆಯನ್ನು ಸ್ವೀಕರಿಸುವ ಸೌಜನ್ಯ ಬೆಳೆಸಿಕೊಳ್ಳಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅತೀ ಗಾಳಿಯಿಂದ ಜಿಲ್ಲೆಯಲ್ಲಿ 2318   ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಇವುಗಳನ್ನು ತ್ವರಿತವಾಗಿ ಸರಿಪಡಿಸಲು ಇಲಾಖೆಗೆ ಸೂಚನೆ ನೀಡಲಾಗಿದೆ ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿದರು. ಕ್ಷೇತ್ರದಲ್ಲಿ ಮಳೆಯಿಂದ ಹಾನಿಯಾಗಿರುವ ರಸ್ತೆಗಳ ಬಗ್ಗೆ…

Read More

ನಾಪೋಕ್ಲು ಜು.30 NEWS DESK : ನಾಪೋಕ್ಲು ಸ್ಥಳೀಯ ಲಯನ್ಸ್ ಕ್ಲಬ್ ಮತ್ತು ಗ್ರಾಮ ಪಂಚಾಯಿತಿಯ ಸಂಯುಕ್ತಾಶ್ರಯದಲ್ಲಿ ಡೆಂಗ್ಯೂ ಜ್ವರ ನಿಯಂತ್ರಣದ ಕುರಿತು ಜನಜಾಗೃತಿ ಕಾರ್ಯಕ್ರಮ ನಡೆಯಿತು. ನಾಪೋಕ್ಲು ಪಟ್ಟಣದ ಮುಖ್ಯ ಬೀದಿಗಳಲ್ಲಿ ಲಯನ್ಸ್ ಕ್ಲಬ್ ನ ಪದಾಧಿಕಾರಿಗಳು, ಗ್ರಾ.ಪಂ ಚುನಾಯಿತ ಪ್ರತಿನಿಧಿಗಳು ಹಾಗೂ ಲಿಯೋ ಕ್ಲಬ್ ನ ಪದಾಧಿಕಾರಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಬಿತ್ತಿ ಪತ್ರ ಹಂಚಿ ಮಾಹಿತಿ ನೀಡುವುದರ ಮೂಲಕ ಜಾಗೃತಿ ಮೂಡಿಸಿದರು. ಇದಕ್ಕೂ ಮೊದಲು ಗ್ರಾ.ಪಂ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಠಾಣಾಧಿಕಾರಿ ಮಂಜುನಾಥ್ ಉದ್ಘಾಟಿಸಿ ಮಾತನಾಡಿ, ಡೆಂಗ್ಯೂ ತಡೆಗಟ್ಟುವ ಹಾಗೂ ಸೈಬರ್ ಕ್ರೈಂ ಅಪರಾಧದ ಬಗ್ಗೆ ಮುನ್ನೆಚ್ಚರಿಕೆ ಮಾಹಿತಿ ನೀಡಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಬಿದ್ದಾಟ೦ಡ ಮೇರಿ ಚಿಟ್ಟಿಯಪ್ಪ ಮಾತನಾಡಿ, ಮಳೆಗಾಲದಲ್ಲಿ ಡೆಂಗ್ಯೂ ರೋಗ ಉಲ್ಪಣಿಸುತ್ತಿದೆ. ಜನರು ಜಾಗೃತರಾಗಿರಬೇಕು. ಮನೆಯ ಸುತ್ತಮುತ್ತಲಿನ ಪರಿಸರದಲ್ಲಿ ನೀರು ನಿಲ್ಲದಂತೆ ನೋಡಿಕೊಂಡು ಸೊಳ್ಳೆ ಉತ್ಪತ್ತಿಯಾಗುವುದನ್ನು ತಡೆಗಟ್ಟವ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಡೆಂಗ್ಯೂ…

Read More

ವಯನಾಡು NEWS DESK ಜು.30 : ಕೇರಳ ರಾಜ್ಯದ ವಯನಾಡು ಜಿಲ್ಲೆಯಲ್ಲಿ ಅಧಿಕ ಮಳೆಯಿಂದ ಸಂಭವಿಸಿದ ಜಲಸ್ಫೋಟ ಮತ್ತು ಗುಡ್ಡ ಕುಸಿತದಲ್ಲಿ ಮಕ್ಕಳು ಸೇರಿದಂತೆ 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಮಣ್ಣಿನಡಿ ಸಿಲುಕಿರುವ ಸಂಶಯವಿದೆ. ವಯನಾಡು ಜಿಲ್ಲೆಯಲ್ಲಿ ಭೂಕುಸಿತ ಮತ್ತು ಇತರ ಮಳೆ ಸಂಬಂಧಿತ ಅನಾಹುತಗಳ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ರಾಷ್ಟ್ರೀಯ ಆರೋಗ್ಯ ಮಿಷನ್ ನಿಯಂತ್ರಣ ಕೊಠಡಿಯನ್ನು ತೆರೆದಿದೆ. ತುರ್ತು ಸಹಾಯದ ಅಗತ್ಯವಿರುವವರು ಈ ಎರಡು ಸಂಖ್ಯೆಗಳ ಮೂಲಕ ಅಧಿಕಾರಿಗಳನ್ನು ಸಂಪರ್ಕಿಸಬಹುದು 9656938689 ಮತ್ತು 8086010833 ಎಂದು ಪ್ರಕಟಣೆ ತಿಳಿಸಿದೆ. ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿ ಬಳಿಯ ವಿವಿಧ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ನೂರಾರು ಮಂದಿ ಸಿಲುಕಿರುವ ಭೀತಿಯ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ಹೇಳಿದ್ದಾರೆ. ಭಾರೀ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ಚುರಲಮಲದಿಂದ ಮುಂಡಕೈಗೆ ಸಂಪರ್ಕ ಕಲ್ಪಿಸುವ ಸೇತುವೆ ಕೊಚ್ಚಿ…

Read More

ನಾಪೋಕ್ಲು ಜು.30 NEWS DESK : ಬೆಟ್ಟಗೇರಿ ಗ್ರಾಮ ಪಂಚಾಯಿತಿ ವ್ಯಾಪತಿಯ ಅರ್ವತೋಕ್ಲು ಗ್ರಾಮದ ಬೇಕೋಟ್ ಮಕ್ಕ ಕ್ಲಬ್ ವತಿಯಿಂದ ಸಾಂಪ್ರದಾಯಿಕ ಕ್ರೀಡೆಗಳಾದ ಗೂಟ ಓಟ, ದಂಪತಿಗಳಿಗೆ ಹಾಳೆಎಳೆಯುವುದು, ವಯೋಮಿತಿಗೆ ತಕ್ಕಂತೆ ಓಟದ ಸ್ಪರ್ಧೆ, ಮುಂತಾದ ಮನರಂಜನಾ ಕ್ರೀಡೆಗಳು ತಳೂರು ಎಂ.ಚಂಗಪ್ಪ ಹಾಗೂ ಕುಶಾಲಪ್ಪನವರ ಗದ್ದೆಯಲ್ಲಿ ನೆರವೇರಿತು. ಕ್ರಿಕೆಟ್ ನಲ್ಲಿ ಟೀಮ್ ಭಗವತಿ ಪ್ರಥಮ ಸ್ಥಾನ ಹಾಗೂ ಎಂಸಿಬಿ ಗೋಳಿಕಟ್ಟೆ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡವು. ಹಗ್ಗಜಗ್ಗಾಟ ಪುರುಷರ ಪಂದ್ಯಾವಳಿಯಲ್ಲಿ ಶ್ರೀ ರಾಮಭಕ್ತಾ0ಜನೇಯ “ಎ ” ತಂಡವು ಮೊದಲನೇ ಸ್ಥಾನ ಪಡೆದುಕೊಂಡರೆ, ಶ್ರೀ ರಾಮಭಕ್ತಾ0ಜನೇಯ “ಬಿ” ತಂಡವು ಎರಡನೇ ಸ್ಥಾನ ಪಡೆದುಕೊಂಡರು. ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾವಳಿಯಲ್ಲಿ ನಾಗಶ್ರೀ ಸುಳ್ಯ ತಂಡವು ಮೊದಲನೇ ಸ್ಥಾನ ಪಡೆದುಕೊಂಡರೆ, ಮಹಾದೇವ ಸ್ಪರ‍್ಟ್ ಕ್ಲಬ್ ಬಲಮುರಿ ಎರಡನೇ ಸ್ಥಾನ ಪಡೆದುಕೊಂಡರು. 20 ತಂಡಗಳನ್ನು ಒಳಗೊಂಡ ಕ್ರಿಕೆಟ್ ಪಂದ್ಯಾವಳಿ ಹಾಗೂ 7 ಮಂದಿಯನ್ನೊಳಗೊಂಡ ಪುರುಷರ ಮತ್ತು ಮಹಿಳೆಯರ ಹಗ್ಗ ಜಗ್ಗಾಟ ಹಾಗೂ ಮುಕ್ತ ಓಟ ಕ್ರೀಡಾಭಿಮಾನಿಗಳ ಗಮನ ಸೆಳೆಯಿತು.…

Read More