ಸೋಮವಾರಪೇಟೆ ಜು.30 NEWS DESK : ಸೋಮವಾರಪೇಟೆ ಪುಷ್ಪಗಿರಿ ಜೆಸಿಐ ವತಿಯಿಂದ ಉದ್ಯಮಿ ಹಾಗೂ ದಾನಿಗಳಾದ ಹರಪಳ್ಳಿ ರವೀಂದ್ರ ಅವರನ್ನು ಸನ್ಮಾನಿಸಲಾಯಿತು. ಸೋಮವಾರಪೇಟೆ ಜಾನಕಿ ಸಭಾಂಗಣದಲ್ಲಿ ನಡೆದ ವಲಯ ಮಟ್ಟದ ಜೇಸಿ ಮಹಿಳಾ ಸಮ್ಮೇಳನದಲ್ಲಿ ಜೆಸಿಐ ಪ್ರಮುಖರು ರವೀಂದ್ರ ಅವರನ್ನು ಸನ್ಮಾನಿಸಿ ಗೌರವಿಸಿದರು. ಜೆಸಿಐ ವಲಯಯಾಧ್ಯಕ್ಷೆ ಆಶಾ ಜೈನ್, ವಲಯ ಮಹಿಳಾ ಘಟಕದ ಅಧ್ಯಕ್ಷೆ ರೂಪ ಗೋಪಾಲಕೃಷ್ಣ, ರಾಷ್ಟ್ರೀಯ ಮಹಿಳಾ ಸಂಯೋಜಕಿ ಯಶಸ್ವಿನಿ, ಸೋಮವಾರಪೇಟೆ ಘಟಕದ ಅಧ್ಯಕ್ಷ ಎಸ್.ಆರ್.ವಸಂತ್, ಜೆಎಸಿ ವಲಯಾಧ್ಯಕ್ಷ ರಂಗಸ್ವಾಮಿ, ಕಾನೂನು ವಿಭಾಗದ ಸೌಜನ್ಯ ಹೆಗಡೆ, ವಲಯಾ ಉಪಾಧ್ಯಕ್ಷೆ ಮಾಯಾ ಗಿರೀಶ್, ಯುವ ಜೆಸಿ ಅಧ್ಯಕ್ಷ ಪ್ರಶಾಂತ್ ಸೇರಿದಂತೆ ಮತ್ತಿತರ ಗಣ್ಯರು ಹಾಜರಿದ್ದರು.
ಲೇಖಕ: admin
ಮಡಿಕೇರಿ ಜು.30 NEWS DESK : ದಕ್ಷಿಣ ಕೊಡಗಿನಲ್ಲಿ ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದೆ. ವಿರಾಜಪೇಟೆ ಹೋಬಳಿಯ ಬೇತ್ರಿ ಕಾವೇರಿ ನದಿಯ ಹಿನ್ನೀರಿನಲ್ಲಿ ಸಿಲುಕಿದ ಆರು ಮಂದಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಈ ಸಂದರ್ಭ ತಹಶೀಲ್ದಾರರಾದ ರಾಮಚಂದ್ರ ಮತ್ತು ನೋಡಲ್ ಅಧಿಕಾರಿಗಳು ಹಾಜರಿದ್ದರು.
ವಾರಪೇಟೆ NEWS DESK ಜು.30 : ಸೋಮವಾರಪೇಟೆ ತಾಲೂಕಿನ ಕುಂದಳ್ಳಿ, ಕುಮಾರಳ್ಳಿ ಗ್ರಾಮಕ್ಕೆ ವಿದ್ಯುತ್ ಒದಗಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಇಲ್ಲಿನ ಸೆಸ್ಕ್ ಕಾರ್ಯಪಾಲಕ ಅಭಿಯಂತರರ ಕಚೇರಿಗೆ ಮುತ್ತಿಗೆ ಹಾಕಿ ಸೋಮವಾರ ಪ್ರತಿಭಟಿಸಿದರು. ಕಳೆದ 20 ದಿನಗಳಿಂದ ಗ್ರಾಮಗಳಿಗೆ ವಿದ್ಯುತ್ ಸ್ಥಗಿತಗೊಂಡಿದೆ. ಸೆಸ್ಕ್ ಇಂಜಿನಿಯರ್ಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮಗಳು ಕತ್ತಲೆಯಲ್ಲಿ ಮುಳುಗಿವೆ. ಮುರಿದು ಬಿದ್ದಿರುವ ಕಂಬಗಳನ್ನು ಬದಲಾಯಿಸುವಲ್ಲಿ ಸೆಸ್ಕ್ ಇಂಜಿನಿಯರ್ ವಿಫಲರಾಗಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಯಡೂರು, ಕಂಬಳ್ಳಿ, ಮಾರ್ಗವು ಅರಣ್ಯ ಪ್ರದೇಶದೊಳಗೆ ಹಾದು ಹೋಗಿರುವುದರಿಂದ ಆಗಾಗ್ಗೆ ಮರಗಳು ಬಿದ್ದು, ಮಳೆಗಾಲದಲ್ಲಿ ತಿಂಗಳುಗಟ್ಟಲೆ ವಿದ್ಯುತ್ ಸ್ಥಗಿತವಾಗುತ್ತಿದೆ. ಈ ಹಿನ್ನೆಲೆ ಮಾರ್ಗವನ್ನು ಬದಲಿಸಬೇಕೆಂದು ಒತ್ತಾಯಿಸಿದರು. ಶಾಂತಳ್ಳಿಯಿಂದ ಬೆಟ್ಟದಳ್ಳಿ, ಬೇಕನಳ್ಳಿ, ಕುಂದಳ್ಳಿ ಮುಖ್ಯರಸ್ತೆಯ ಬದಿಯಲ್ಲಿ ಕಂಬಗಳನ್ನು ಅಳವಡಿಸಿ ಹೊಸ ಮಾರ್ಗ ರಚಿಸಬೇಕು. ಅಥವಾ ಬಸವನಕಟ್ಟೆ, ನಗರಳ್ಳಿಯಿಂದ ರಸ್ತೆ ಬದಿಯಲ್ಲಿ ಕಂಬಗಳನ್ನು ಅಳವಡಿಸಿ ಕುಂದಳ್ಳಿ, ಕುಮಾರಳ್ಳಿಗೆ ವಿದ್ಯುತ್ ಒದಗಿಸಬೇಕು. ಆಗಸ್ಟ್ ಅಂತ್ಯದೊಳಗೆ ಈ ಕೆಲಸ ಆರಂಭವಾಗದಿದ್ದರೆ ಸೆಸ್ಕ್ ಕಚೇರಿ ಎದುರು ಗ್ರಾಮಸ್ಥರು ಆಹೋರಾತ್ರಿ ಧರಣಿ…
ಮಡಿಕೇರಿ ಜು.30 NEWS DESK : ಕೊಡಗಿನಲ್ಲಿ ಕ್ರೀಡೆಯ ಸ್ವಚ್ಛ ಆಡಳಿತಗಾರ, ಸಂಘಟನೆಗಾರ, ತರಬೇತುದಾರ ಹಾಗು ಬಂಗಾರದ ಹೆಜ್ಜೆ ಗುರುತು ಮೂಡಿಸಿದ ನಿಸ್ವರ್ಥ ಸೇವಕ ಎಂದರೆ ಅದು ಚೆಪ್ಪುಡೀರ ಸುಭಾಷ್ ಮುತ್ತಣ್ಣನವರು. ಚೆಪ್ಪುಡೀರ ಅಪ್ಪಣ್ಣ ಹಾಗೂ ಬೊಳ್ಳಮ್ಮ (ತಾಮನೆ ಪಾಂಡಂಡ) ದಂಪತಿಗಳ ಪುತ್ರನಾಗಿ 20 ಜೂನ್ 1946 ರಂದು ಸುಭಾಷ್ ಮುತ್ತಣ್ಣನವರು ಜನಿಸಿದರು. ವಿದ್ಯಾಭ್ಯಾಸ : ಮಡಿಕೇರಿ ರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮುಗಿಸಿ, ಅಲಹಾಬಾದ್ ನಲ್ಲಿ ಬಿ.ಎಸ್ಸಿ. ಅಗ್ರಿಕಲ್ಚರ್ ಪರ್ಣಗೊಳಿಸಿದರು. ಕ್ರೀಡಾ ಸಾಧನೆ : ಅಲಹಾಬಾದ್ ವಿಶ್ವವಿದ್ಯಾನಿಲಯಕ್ಕೆ ಬಾಸ್ಕೆಟ್ ಬಾಲ್, ಹಾಕಿ, ಅಥ್ಲೆಟಿಕ್ಸ್ ಹಾಗೂ ಬಾಸ್ಕೆಟ್ ಬಾಲ್ ಆಟದಲ್ಲಿ ಉತ್ತರ ಪ್ರದೇಶವನ್ನು ಪ್ರತಿನಿಧಿಸುತ್ತಾರೆ. ಇವರ 400 ಮೀಟರ್ ಹರ್ಡ್ಲ್ಸ್ ನ ದಾಖಲೆ ಅಲಹಾಬಾದ್ ವಿಶ್ವವಿದ್ಯಾನಿಲಯದಲ್ಲಿ ಇನ್ನೂ ಇದೆ. ಲಯನ್ಸ್ ಕ್ಲಬ್ : ಲೈನ್ಸ್ ಕ್ಲಬ್ ನ ಚರ್ಟೆಡ್ ಸದಸ್ಯರಾಗಿ 1973 ರಲ್ಲಿ ಸೇರುತ್ತಾರೆ. ನಂತರದ ದಿನಗಳಲ್ಲಿ ಕ್ಲಬ್ ನ ಅಧ್ಯಕ್ಷ, ವಲಯದ ಅಧ್ಯಕ್ಷ, ಜಿಲ್ಲಾಧ್ಯಕ್ಷ ಹಾಗೂ ಗರ್ನರ್ ಆಗಿ ಪದವಿಯನ್ನು ಅಲಂಕರಿಸುತ್ತಾರೆ.…
ಮಡಿಕೇರಿ NEWS DESK ಜು.30 : ಕೊಡಗು ಜಿಲ್ಲೆಯಾದ್ಯಂತ ಮತ್ತೆ ವರುಣಾರ್ಭಟ ಆರಂಭಗೊAಡಿದೆ. ಸೋಮವಾರ ರಾತ್ರಿಯಿಂದ ಹಲವೆಡೆ ನಿರಂತರವಾಗಿ ಗಾಳಿ ಸಹಿತ ಮಳೆಯಾಗುತ್ತಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಭಾರೀ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಪ್ರವಾಹ ಏರ್ಪಟ್ಟಿದ್ದು, ಶ್ರೀಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳನ್ನು ನೀರು ಆವರಿಸಿದೆ. ಕಳೆದ 24 ಗಂಟೆಗಳಲ್ಲಿ ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ದಾಖಲೆಯ 11 ಇಂಚಿಗೂ ಅಧಿಕ ಮಳೆಯಾಗಿದೆ. ಮಡಿಕೇರಿ ಮತ್ತು ನಾಪೋಕ್ಲು ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ಮಳೆ ಮತ್ತಷ್ಟು ಬಿರುಸುಗೊಳ್ಳುವ ಲಕ್ಷಣಗಳು ಗೋಚರಿಸಿದ್ದು, ನದಿ ಹಾಗೂ ಬೆಟ್ಟಗುಡ್ಡ ಪ್ರದೇಶದ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.
ಮಡಿಕೇರಿ ಜು.29 NEWS DESK : ಧಾರಾಕಾರ ಮಳೆ : ಶಾಲೆಗಳಿಗೆ ರಜೆ
ವಿರಾಜಪೇಟೆ NEWS DESK ಜು.29 : ಕೊಂಚ ಬಿಡುವು ನೀಡಿದ್ದ ಮಳೆ ಸೋಮವಾರ ಧಾರಾಕಾರವಾಗಿ ಸುರಿದ ಪರಿಣಾಮ ವಿರಾಜಪೇಟೆ ಗೋಣಿಕೊಪ್ಪ ರಸ್ತೆಯ ರಾಜ ಕಾಲುವೆ ಬಳಿ ಪ್ರವಾಹ ಸದೃಶ್ಯ ಕಂಡು ಬಂತು. ಮತ್ತೆ ಮಳೆನೀರು ಮುಖ್ಯ ರಸ್ತೆಯನ್ನು ಆವರಿಸಿತು. ವಿರಾಜಪೇಟೆ ಖಾಸಗಿ ಬಸ್ ನಿಲ್ದಾಣ, ಅರಸು ನಗರ, ಮಟನ್ ಮಾರ್ಕೆಟ್, ಸುಭಾಷ್ ನಗರ, ವಿಜಯನಗರ , ಚೌಕಿ. ಮುಂತಾದ ಕಡೆಗಳಿಂದ ಮಳೆ ನೀರು ಹರಿದು ಇದೇ ಕಾಲುವೆಯನ್ನು ಸೇರುತ್ತದೆ. ವಿದ್ಯಾರ್ಥಿಗಳು ಹಾಗೂ ಪಾದಾಚಾರಿಗಳು ಮಳೆ ಮತ್ತು ಪ್ರವಾಹದ ರೀತಿಯ ನೀರಿನಿಂದ ಪರದಾಡುವಂತ್ತಾಯಿತು. ಮುಂದಿನ ದಿನಗಳಲ್ಲಿ ಈ ರೀತಿಯ ಪರಿಸ್ಥಿತಿ ಉದ್ಭವಿಸದಂತೆ ಆಡಳಿತ ವ್ಯವಸ್ಥೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಮಡಿಕೇರಿ ಜು.29 NEWS DESK : ಕೊಡವ ಎಜುಕೇಷನ್ ಸೊಸೈಟಿಯ ಅಧೀನಕ್ಕೊಳಪಡುವ ಪೊನ್ನಂಪೇಟೆಯ ಕೂರ್ಗ್ ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಎಐ ಮತ್ತು ಎಂಎಲ್ ವಿಭಾಗದ ವತಿಯಿಂದ ಎಐ ಅಪ್ರಿಸಿಯೇಷನ್ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಉದ್ಯೋಗಾವಕಾಶವನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ದೇಶದ ಪ್ರತಿಷ್ಠಿತ ಐಟಿ ಉದ್ಯಮ ಸಂಸ್ಥೆಯಾದ ಇನ್ಫೋಸಿಸ್ ಸಂಸ್ಥೆಯ ಸ್ಪಿಂಗ್ ಬೋರ್ಡ್ ವೇದಿಕೆಯೊಂದಿಗೆ ಸಿಐಟಿ ಕಾಲೇಜು ಒಡಂಬಡಿಕೆ ಮಾಡಿಕೊಂಡಿತು. ಈ ಮಹತ್ವದ ಯೋಜನೆಗೆ ಸಿ.ಐ.ಟಿ.ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಬಸವರಾಜ್ ಮತ್ತು ಇನ್ಫೋಸಿಸ್ ಸಂಸ್ಥೆಯ ಸಹ ಉಪಾಧ್ಯಕ್ಷ ಕೆ.ಎಸ್.ಸುಂದರ್ ಅವರು ಸ್ಪಿಂಗ್ ಬೋರ್ಡ್ ಒಡಂಬಡಿಕೆಗೆ ಸಹಿ ಹಾಕಿದರು. ಈ ಸಂದರ್ಭ ಇನ್ಫೋಸಿಸ್ ಸಂಸ್ಥೆಯ ಉಪಾಧ್ಯಕ್ಷರಾದ ಕೆ.ಎಸ್.ಸುಂದರ್ ಮಾತನಾಡಿ, ಕೃತಕ ಬುದ್ಧಿಮತ್ತೆ ಎನ್ನುವುದು ಪ್ರಸ್ತುತ ದಿನಗಳಲ್ಲಿ ಹೆಚ್ಚು ಜನಪ್ರಿಯತೆಯನ್ನು ಗಳಿಸಿದೆ ಮತ್ತು ವ್ಯಾಪಕವಾಗಿ ಎಲ್ಲೆಡೆ ಪಸರಿಸಿದೆ. ಇದು ವಿಪುಲ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡುತ್ತಿದೆ. ಈ ಎಐ ತಂತ್ರಜ್ಞಾನದ ಬಳಕೆಯಿಂದ ಕ್ಲಿಷ್ಟಕರವಾದ ಕೆಲಸವನ್ನು ಶೀಘ್ರವಾಗಿ ಪೂರ್ಣಗೊಳ್ಳಿಸಬಹುದಾಗಿದ್ದು, ಇದು ಮನುಷ್ಯನ ಅಸ್ತಿತ್ವವನ್ನು ತಂತ್ರಜ್ಞಾನದ…
ಮಡಿಕೇರಿ ಜು.29 NEWS DESK : ಮೇಯಲು ಬಿಟ್ಟಿದ್ದ 6 ಹಸುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪೊನ್ನಂಪೇಟೆ ತಾಲ್ಲೂಕಿನ ತೆರಾಲು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಕೃಷಿಕ ಬೊಜ್ಜಂಗಡ ನಟರಾಜ್(ನಂದ) ಎಂಬುವವರಿಗೆ ಹಸುಗಳು ಸಾವನ್ನಪ್ಪಿದ್ದು, ಹೈನುಗಾರಿಕೆಯೊಂದಿಗೆ ಬದುಕು ಕಟ್ಟಿಕೊಂಡಿದ್ದ ಕುಟುಂಬ ಇದೀಗ ಕಂಗಾಲಾಗಿದೆ. ತೆರಾಲು ಗ್ರಾಮದಲ್ಲಿ ಭಾರೀ ಗಾಳಿ ಸಹಿತ ಮಳೆ ಸುರಿಯುತ್ತಿದ್ದು, 11 ಕೆ.ವಿ ವಿದ್ಯುತ್ ತಂತಿ ತುಂಡಾಗಿ ರಸ್ತೆಗೆ ಬಿದ್ದಿದ್ದು, ಹಸುಗಳು ಬರುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ NEWS DESK ಜು.29 : ಆದಿಮಸಂಜಾತ ಕೊಡವ ಬುಡಕಟ್ಟು ಸಮುದಾಯವನ್ನು ಕೊಡವಲ್ಯಾಂಡ್ ನಿಂದಲೇ ಸ್ಥಾನಪಲ್ಲಟಗೊಳಿಸುವ ದುರುದ್ದೇಶದಿಂದ ಕೊಡವರನ್ನು ನಿತ್ಯ ಶೋಷಣೆಗೆ ಒಳಪಡಿಸಲಾಗುತ್ತಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಗಂಭೀರ ಆರೋಪ ಮಾಡಿದ್ದಾರೆ. ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿಯಲ್ಲಿ ಸಿಎನ್ಸಿ ವತಿಯಿಂದ ನಡೆದ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಭೂಮಾಫಿಯಾ, ಕಾರ್ಪೋರೇಟ್ ಮಾಫಿಯಾ, ರಾಜಕೀಯ ನಂಟು ಹೊಂದಿರುವ ಆರ್ಥಿಕ ಅಪರಾಧಿಗಳು ಸೇರಿದಂತೆ ದೇಶ ವಿದೇಶದ ಬಂಡವಾಳಶಾಹಿ ವರ್ಗ ಪವಿತ್ರ ಕಾವೇರಿ ನದಿ ಹುಟ್ಟುವ ಕೊಡವ ಭೂಮಿಯ ಎಲ್ಲಾ ಸಂಪನ್ಮೂಲಗಳನ್ನು ಯಾವುದೇ ಅಡೆತಡೆಗಳಿಲ್ಲದೆ ಅನುಭವಿಸುತ್ತಿದ್ದಾರೆ. ಆದರೆ ಕೊಡವರು ಕಾವೇರಿ ನೀರನ್ನು ಕೂಡ ಬಳಸಲು ಅನರ್ಹರು ಎನ್ನುವ ರೀತಿ ಆಡಳಿತ ವ್ಯವಸ್ಥೆ ಶೋಷಣೆ ಮಾಡುತ್ತಿದೆ. ಕೊಡಗನ್ನು ತಮ್ಮ ಆಕ್ರಮಿತ ವಸಾಹತು ಎಂದು, ಕೊಡವರು…






