ಸೋಮವಾರಪೇಟೆ ಮಾ.13 NEWS DESK : ಶಿಕ್ಷಣವೇ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುತ್ತದೆ. ಶಿಕ್ಷಣ ಪಡೆದ ಮಹಿಳೆ ಕುಟುಂಬದ ಅಭಿವೃದ್ಧಿಗೆ ಮಾತ್ರವಲ್ಲದೆ ಸಮಾಜದ ಪ್ರಗತಿಗೂ ಪ್ರಮುಖ ಪಾತ್ರವಹಿಸುತ್ತಾಳೆ ಎಂದು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಕೆ.ಹೆಚ್.ಧನಲಕ್ಷ್ಮೀ ಅಭಿಪ್ರಾಯಿಸಿದರು. ಕೊಡಗು ಜಿಲ್ಲೆ ಮತ್ತು ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ನಡೆದ ದಿ.ಸೀತಾಬಾಯಿ ಮತ್ತು ರಾಮಚಂದ್ರ ಕಾಮತ್ ಸ್ಮರಣಾರ್ಥ ದತ್ತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಪ್ರತಿಯೊಂದು ಕುಟುಂಬವೂ ಹೆಣ್ಣು ಮಕ್ಕಳ ಶಿಕ್ಷಣವನ್ನು ಅತ್ಯಂತ ಮಹತ್ವದ ಕರ್ತವ್ಯವೆಂದು ಪರಿಗಣಿಸಬೇಕು. ಇಂದಿನ ದಿನಗಳಲ್ಲಿ ಪೋಷಕರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವುದು ಸಂತಸದ ವಿಚಾರವಾಗಿದೆ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಉನ್ನತ ಶಿಕ್ಷಣ ಪಡೆಯಲು ಕೆಲ ತೊಂದರೆಗಳು ಎದುರಾಗುತ್ತಿವೆ. ಸಾರಿಗೆ, ಆರ್ಥಿಕ ಸಮಸ್ಯೆ ಮತ್ತು ಸಾಮಾಜಿಕ ಮನೋಭಾವನೆಗಳಂತಹ ಅಡೆತಡೆಗಳನ್ನು ನಿವಾರಿಸುವುದು ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು. ಪ್ರಾಚೀನ ಕಾಲದಲ್ಲಿ ಹೆಣ್ಣು…
ಲೇಖಕ: admin
ಮಡಿಕೇರಿ ಮಾ.13 NEWS DESK : ಕೊಡಗು ಅಖಿಲ ಅಮ್ಮಕೊಡವ ಸಮಾಜದ ಅಭಿವೃದ್ಧಿಗೆ ಸರ್ಕಾರದಿಂದ ಬಿಡುಗಡೆಯಾದ ರೂ.20 ಲಕ್ಷಗಳ ಚೆಕ್ ನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸಮಾಜದ ಅಧ್ಯಕ್ಷರಾದ ಬಾನಂಡ ಪ್ರಥ್ಯು ಅವರಿಗೆ ವಿಧಾನ ಸೌಧದಲ್ಲಿ ಹಸ್ತಾಂತರ ಮಾಡಿದರು. ಈ ಸಂದರ್ಭ ಅಮ್ಮ ಕೊಡವ ಸಮಾಜದ ಪ್ರಮುಖರಾದ ಪುತ್ತಾಮನೆ ಅನಿಲ್ ಪ್ರಸಾದ್, ನೇರಿಯಂಡಮ್ಮನ ಸುಬ್ರಮಣಿ, ಜನಾರ್ದನ, ಬಾನಂಡ ಸುನೀತ್, ಸೂದನ್, ಹೆಮ್ಮಚ್ಚಿಮನೆ ಎನ್ ಹರೀಶ್, ಹೆಚ್.ಎಂ.ಹರೀಶ್, ಮನ್ನಕಮನೆ ಎ.ಬಾಲಕೃಷ್ಣ, ಎಂ.ಎಂ.ಬಾಲಕೃಷ್ಣ, ಹೆಚ್.ಆರ್.ಮದನ್, ಪುತ್ತಾಮನೆ ಪರ್ವತ್, ಯತೀಶ್, ಹೆಚ್.ಎಂ.ಪ್ರಶಾಂತ್, ಕೊಡಿಂಜಮ್ಮನ ಬಾಲಕೃಷ್ಣ, ಶರಣು, ವಿಜು ಸೇರಿದಂತೆ ಇತರರು ಇದ್ದರು.
ವಿರಾಜಪೇಟೆ ಮಾ.13 NEWS DESK : ಪೂರ್ವಜರು ಪ್ರಕೃತಿಯೊಂದಿಗೆ ಒಡನಾಟದೊಂದಿಗೆ ಬಾಳಿ ಬದುಕು ಕಂಡಿದ್ದರು. ಸುಖಿ ಜೀವನ ನಡೆಸುತ್ತಿದ್ದರು. ಇದೀಗ ಆಧುನಿಕತೆ ಎಲ್ಲಡೆ ಪಸರಿಸಿ ಪೂರ್ವಜರು ನಡೆಸಿಕೊಂಡು ಬಂದ ಜೀವನ ಪದ್ಧತಿಯು ಕಣ್ಮರೆಯಾಗುತ್ತಿರುವುದನ್ನು ನಾವು ಮನ ಕಾಣುತ್ತಿದ್ದೇವೆ ಎಂದು ಮಡಿಕೇರಿ ಆಕಾಶವಾಣಿಯ ಉದ್ಘೋಷಕ ವಿನೋದ್ ಮೂಡಗದ್ದೆ ಅವರು ವಿಷಾದ ವ್ಯಕ್ತಪಡಿಸಿದರು. ಕೊಡಗು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಸಂತ ಅನ್ನಮ್ಮ ಪದವಿ ಕಾಲೇಜು ವಿರಾಜಪೇಟೆ ಆಶ್ರಯದಲ್ಲಿ ಕಲ್ತೋಡು ನಾಂಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 06 ದಿನಕಾಲ ವಾರ್ಷಿಕ ವಿಶೇಷ ಶಿಬಿರ ಆಯೋಜನೆಗೊಂಡಿತ್ತು. ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಸಮಾರಂಭ ಉದ್ದೇಶಿಸಿ ಮಾತನಾಡಿದ ವಿನೋದ್ ಅವರು ಸೇವೆ ಎಂಬುದು ಜೀವನದ ಅವಿಭಾಜ್ಯ ಅಂಗ ಎಂದು ಪರಿಗಣಿಸುವಂತಾಗಬೇಕು. ಸೇವಾ ಮನೋಭಾವ ಮತ್ತು ಪರಿಸರ ಜಾಗೃತಿ ವಿದ್ಯಾರ್ಥಿಗಳ ಜೀವನದಲ್ಲಿ ಜಾಗೃತವಾಗಬೇಕು ಎನ್ನುವ ಸದುದ್ದೇಶದಿಂದ ಗಾಂಧಿಜೀ ಅವರ ತತ್ವ ಸಿದ್ದಾಂತ ಜೀವಂತವಾಗಿರಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಅರಂಭಿಸಿತು.…
ಗೋಣಿಕೊಪ್ಪ ಮಾ.13 NEWS DESK : ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಸ್ಪಂದಿಸಿ ಕರಾಟೆ, ನೃತ್ಯ, ಯೋಗ ತರಬೇತಿಗಳನ್ನು ನೀಡಿದ ಶಿಕ್ಷಕರುಗಳನ್ನು ಮತ್ತು ಶಾಲೆಯ ಕಾರ್ಯಕ್ರಮಗಳಿಗೆ ಬಳಸಲು ಅನುಕೂಲಕರವಾದ ಪೋಡಿಯಂ ವಿತರಿಸಿದ ದಾನಿಯ ವೇಣುಗೋಪಾಲ್ಕಣ್ಣನ್ ಅವರನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಶಾಲೆಯ ಕಾರ್ಯಕ್ರಮಗಳಿಗೆ ಅನುಕೂಲಕ್ಕೆ ಅನುವು ಮಾಡಿಕೊಡುವ ಉದ್ದೇಶದೊಂದಿಗೆ ಕಣ್ಣನ್ಟೈರ್ಸ್ ಮಾಲೀಕ ವೇಣುಗೋಪಾಲ್ ಕಣ್ಣನ್ ತಮ್ಮ ತಂದೆ ಕಣ್ಣನ್ ಅವರ ಜ್ಞಾಪಕಾರ್ಥವಾಗಿ ಪೋಡಿಯಂ ಅನ್ನು ಶಾಲೆಗೆ ನೀಡಿದರು. ಕಳೆದ ಒಂದು ವರ್ಷಗಳಿಂದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಯೋಗ ಶಿಕ್ಷಣವನ್ನ ನೀಡಿದ ಯೋಗ ಶಿಕ್ಷಕಿ ನಾಮೇರ ಶರ್ಲಿ ಬೋಪಣ್ಣ, ಕರಾಟೆ ಶಿಕ್ಷಣವನ್ನು ನೀಡಿದ ಕಿಶೋರ್ ಕೆ.ಎ ಮತ್ತು ನೃತ್ಯ ತರಗತಿಯನ್ನು ನೀಡಿದ ವಿಘ್ನೇಶ್ ಅವರನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜಗದೀಶ್ಜೋಡುಬೀಟಿ ಮತ್ತು ಶಾಲೆಯ ಮುಖ್ಯೋಪಾಧ್ಯಾಯ ಹೆಚ್.ಕೆ.ಕುಮಾರ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಶಾಲೆಯ ವತಿಯಿಂದ ಸನ್ಮಾನಿಸಿ ಗೌರವಿಸಿದರು. ಶಾಲಾ ಅಭಿವೃದ್ಧಿ…
ಗೋಣಿಕೊಪ್ಪ ಮಾ.13 NEWS DESK : ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್ನ್ಯಾಷನಲ್” ಸಂಸ್ಥೆ ಪ್ರಸ್ತುತ ವಿವಿಧ ಸಾಧನೆಗಳಿಗೆ ಆರು ಪ್ರಶಸ್ತಿಯ ಗರಿಯನ್ನು ಮುಡಿಗೇರಿಸಿಕೊಂಡಿದೆ. ಬಿ.ಎನ್.ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿನ ತಂಡ ಕಳೆದ ಒಂದು ವರ್ಷ ಮಾಡಿದ ಸಾಮಾಜಿಕ ಚಟುವಟಿಕೆಗಳನ್ನು ಪರಿಗಣಿಸಿ ಈ ಪ್ರಶಸ್ತಿಗಳನ್ನು ನೀಡಲಾಗಿದೆ. ಬೆಂಗಳೂರಿನ ಅತ್ತಿಗುಪ್ಪೆ ಬಂಟರ ಸಂಘದ ಸಭಾಂಗಣದಲ್ಲಿ ನಡೆದ ಸೀನಿಯರ್ ಚೇಂಬರ್ “ಇಂಟರ್ನ್ಯಾಷನಲ್” ಇದರ 25ನೇ ನ್ಯಾಷನಲ್ ಕಾನ್ಕೋರ್ಸ್ ವಿಜಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಅತ್ಯುತ್ತಮ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮದ ವಿನ್ನರ್ಸ್ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಬಿ.ಎನ್.ಪ್ರಕಾಶ್ ಪಡೆದುಕೊಂಡಿದ್ದಾರೆ. ಅತ್ಯುತ್ತಮ ಲೀಜನ್ ಅಧಿಕಾರಿ ರನ್ನರ್ ಪ್ರಶಸ್ತಿಯನ್ನು ಸೀನಿಯರ್ ಪಿಪಿಎಫ್ ಎಂ.ಎಂ.ನಾಗೇಶ್ ಪಡೆದುಕೊಂಡಿದ್ದಾರೆ. ::ಎನ್ಡಿ ಶ್ರೇಷ್ಠತೆ ಪ್ರಶಸ್ತಿ :: ಏರಿಯಾ ಡಿ ಗೋಣಿಕೊಪ್ಪಲು ಲೀಜನ್ ಪಾಲಾಗಿದೆ. ಜತೆಗೆ ಗೋಣಿಕೊಪ್ಪ ಸೀರಿಯಲ್ ಚೇಂಬರ್ “ಇಂಟರ್ನ್ಯಾಷನಲ್” ಸಂಸ್ಥೆ, ಗಣನೀಯ ಸಾಧನೆಗಾಗಿ ಅಭಿನಂದನಾ ಪ್ರಶಸ್ತಿ ಮತ್ತು ಸ್ಪರ್ಧೆಯ ನಿಯಮ ಪಾಲನಾ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಸೀನಿಯರ್ ಪಿಪಿಎಫ್ ಪೊನ್ನಲತಂಡ ಕಿರಣ್ ಪೊನ್ನಪ್ಪ ಅತ್ಯುತ್ತಮ ಲೀಜನ್ ಸದಸ್ಯರನ್ನರ್…
ಮಡಿಕೇರಿ ಮಾ.13 NEWS DESK : ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಅಮಾಯಕ ಮಾನವ ಜೀವಗಳು ಬಲಿಯಾಗುತ್ತಿದ್ದರೂ ರಾಜ್ಯ ಸರಕಾರ ಹಾಗೂ ಅರಣ್ಯ ಇಲಾಖೆ ಯಾವುದೇ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿಲ್ಲವೆಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಅರಣ್ಯ ಭವನದ ಎದುರು ಪ್ರತಿಭಟನೆ ನಡೆಸಿತು. ಸಮೀಪದ ಹೆದ್ದಾರಿ ತಡೆದು ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಳೆದ ಎರಡು ವಾರಗಳಲ್ಲಿ ಸಿದ್ದಾಪುರ ವಿಭಾಗದಲ್ಲಿ ಇಬ್ಬರು ವ್ಯಕ್ತಿಗಳು ಹಾಗೂ ಬೆಟ್ಟತ್ತೂರು ಗ್ರಾಮದ ವಿದ್ಯಾರ್ಥಿನಿಯೊಬ್ಬಳು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಸಾಲು ಸಾಲು ಸಾವುಗಳು ಸಂಭವಿಸಿದರೂ ಸರಕಾರ ಸಮಸ್ಯೆಯ ಗಂಭೀರತೆಯನ್ನು ಅರಿತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಪ್ರಮುಖರು ಪೊಲೀಸರ ಬ್ಯಾರಿಕೇಡ್ ಗಳನ್ನು ನೂಕಿ ಅರಣ್ಯ ಭವನದ ಕಚೇರಿಗೆ ನುಗ್ಗಲೆತ್ನಿಸಿದ ಘಟನೆಯೂ ನಡೆಯಿತು. *ಬಂದ್ ಗೂ ಸಿದ್ಧ* ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ 2 ವಾರದ ಅವಧಿಯಲ್ಲಿ ಮೂವರು ಕಾಡಾನೆ ದಾಳಿಗೆ ಬಲಿಯಾಗಿದ್ದರು, ಅರಣ್ಯ ಇಲಾಖೆ ಸೂಕ್ತ ಕ್ರಮ…
ಸೋಮವಾರಪೇಟೆ NEWS DESK ಮಾ.13 : ಬಸವಣ್ಣ ಹಾಗೂ ಅಕ್ಕಮಹಾದೇವಿಯವರ ವಿರುದ್ಧ ಅವಹೇಳನಾಕಾರಿ ಪೋಸ್ಟ್ ಹಾಕಿರುವ ಕಿಡಿಗೇಡಿಯನ್ನು ಸರಕಾರ ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹಿಸಿದ್ದಾರೆ. ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರು ಹಾಗೂ ನಾಡಿನ ಮೊದಲ ಮಹಿಳಾ ಕವಯತ್ರಿ ಅಕ್ಕಮಹಾದೇವಿಯವರು ಈ ಕನ್ನಡ ನಾಡಿನ ಹೆಮ್ಮೆ. ಇವರುಗಳು 12ನೆ ಶತಮಾನದಲ್ಲಿಯೇ ಸಮಾಜದಲ್ಲಿ ಸುಧಾರಣೆ ತರಲು ಪ್ರಯತ್ನಿಸುವುದರೊಂದಿಗೆ ಈ ರಾಷ್ಟ್ರಕ್ಕೆ ಪ್ರಜಾಪ್ರಭುತ್ವದ ಅಡಿಪಾಯ ಹಾಕಿಕೊಟ್ಟ ಮಹಾನಿಯರು ಅಂತಹವರ ಬಗ್ಗೆ ರಮಾಕಾಂತ್ ಎಂಬ ಕಿಡಿಗೇಡಿಯೊಬ್ಬ ಅಸಹ್ಯ ಹಾಗೂ ಆಕ್ಷೇಪಾರ್ಹ ಪದಗಳನ್ನು ಬಳಸಿ ಪೋಸ್ಟ್ ಹಾಕಿರುವುದು ನಾಗರೀಕ ಸಮಾಜ ಸಹಿಸಲು ಸಾಧ್ಯವಿಲ್ಲಾ ಎಂದು ಮಹೇಶ್ ಕೆಡಿಕಾರಿದ್ದಾರೆ, ಆದ್ದರಿಂದ ಸರ್ಕಾರ ಈ ಕಿಡಿಗೇಡಿಯನ್ನು ತಕ್ಷಣ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಮಡಿಕೇರಿ ಮಾ.12 NEWS DESK : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಸಾಲು ಸಾಲು ಅಮಾಯಕ ಜೀವಗಳು ಬಲಿಯಾಗುತ್ತಿದ್ದರೂ ರಾಜ್ಯ ಸರಕಾರ ಯಾವುದೇ ತುರ್ತು ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿದೆ. ಸರಕಾರದ ಈ ನಿರ್ಲಕ್ಷ್ಯ ಮನೋಭಾವವನ್ನು ಸಹಿಸಲು ಸಾಧ್ಯವಿಲ್ಲವೆಂದು ಕೊಡಗು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಲ್ಲಿ ಮೂರು ಅಮಾಯಕ ಜೀವಗಳು ಕಾಡಾನೆ ದಾಳಿಗೆ ಬಲಿಯಾಗಿವೆ. ಇತ್ತೀಚೆಗಷ್ಟೇ ವಿದ್ಯಾರ್ಥಿನಿ ಹಾಗೂ ಮಹಿಳೆಯೋರ್ವರು ಮೃತಪಟ್ಟಿದ್ದು, ಇದೀಗ ಬೆಳೆಗಾರ ಗಣಪತಿ ಅವರು ಕಾಡಾನೆ ದಾಳಿಗೆ ತುತ್ತಾಗಿದ್ದಾರೆ. ಈ ಬೆಳವಣಿಗೆ ಅತ್ಯಂತ ದು:ಖಕರವಾಗಿದ್ದು, ಸರಕಾರ ಸಮಸ್ಯೆಯ ಗಂಭೀರತೆಯನ್ನು ಅರಿಯದೆ ಕೇವಲ ಪರಿಹಾದ ಚೆಕ್ ನೀಡಿ ಕೈತೊಳೆದುಕೊಳ್ಳುತ್ತಿದೆ ಎಂದು ಟೀಕಿಸಿದ್ದಾರೆ. ಅರಣ್ಯ ಸಚಿವರು ಕಾಡಾನೆ ಉಪಟಳ ತಡೆಗೆ ಸಂಬಂಧಿಸಿದಂತೆ ಕೇವಲ ಭರವಸೆಗಳನ್ನು ನೀಡುತ್ತಿದ್ದಾರೆಯೇ ಹೊರತು ಯಾವುದೇ ಯೋಜನೆಗಳು ಕಾರ್ಯಗತಗೊಳ್ಳುತ್ತಿಲ್ಲ. ಕಳೆದ ಎರಡು ವರ್ಷಗಳಿಂದ ವನ್ಯಜೀವಿಗಳ ದಾಳಿ…
ಕುಶಾಲನಗರ ಮಾ.11 NEWS DESK : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆಯಾಗಿದ್ದು, ಯಾವುದೇ ರೀತಿಯಲ್ಲಿ ವಯಸ್ಸಿನ ಮಿತಿ ಇರುವುದಿಲ್ಲ ಎಂದು ಪತ್ರಕರ್ತೆ ಹಾಗೂ ಕೊಡಗು ಜಿಲ್ಲಾ, ಸೌಂದರ್ಯವರ್ಧಕರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ವನಿತಾ ಚಂದ್ರಮೋಹನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ನಡೆದ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಕೇವಲ ಪ್ರಮಾಣ ಪತ್ರಕ್ಕೆ ಮಾತ್ರ ಸೀಮಿತವಾಗಬಾರದು. ವಯಸ್ಸಿನ ಅಂತರ ಗಮನಿಸದೇ, ಭ್ರಮೆಗಳನ್ನು ತೊರೆದು ಸ್ವಾವಲಂಬಿ ಬದುಕು ಕಾಣುವುದರೊಂದಿಗೆ ಪ್ರತಿಯೊಬ್ಬರೂ ತಮ್ಮನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭ ಮಾತನಾಡಿದ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ, ಮಹಿಳೆಯ ಸಾಮರ್ಥ್ಯ ಪ್ರತಿಭೆ ಕೇವಲ ನಾಲ್ಕು ಗೋಡೆಗಳಿಗೆ ಸೀಮಿತಗೊಳ್ಳಬಾರದು. ಬದುಕು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಉತ್ತಮವಾಗಿ ಕುಟುಂಬ ನಿರ್ವಹಣೆ ಮಾಡುವಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ…
ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ ನ್ಯಾಯ ದೊರಕಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ತಿಳಿಸಿದ್ದಾರೆ. ಕುಶಾಲನಗರದಲ್ಲಿ ಕುಶಾಲನಗರದ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ನೂತನವಾಗಿ ಸ್ಥಾಪನೆಗೊಂಡಿರುವ ತಾಲೂಕು ಕಾನೂನು ಸೇವಾ ಸಮಿತಿಯ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಕೆಲಸ ಕಾರ್ಯಗಳ ಒತ್ತಡ ಕಡಿಮೆಯಾಗಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಅವರು ಈ ಸಂಬಂಧ ಪ್ರಕರಣಗಳ ಇತ್ಯರ್ಥಕ್ಕೆ ವಕೀಲರುಗಳ ಸಹಾಯ ಪ್ರಮುಖವಾಗಿದೆ ಎಂದರು. ಯಾವುದೇ ವಿಷಯಗಳು ಭಾಷಣಕ್ಕೆ ಮಾತ್ರ ಸೀಮಿತ ಆಗಬಾರದು ಎಂದ ನ್ಯಾಯಾಧೀಶರು, ಅರಿವಿನ ಕೊರತೆಯಿಂದ ನೊಂದವರಿಗೆ ಸೌಲಭ್ಯ ಲಭಿಸಲು ಅಸಾಧ್ಯ ಎಂದು ಹೇಳಿದರು. ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ರಾಜಿ ತೀರ್ಮಾನಕ್ಕೆ ಅಥವಾ…






