ಮಡಿಕೇರಿ NEWS DESK ಆ.8: ಹಾಸನದ ಖಾಸಗಿ ಸುದ್ಧಿವಾಹಿನಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನೋರ್ವನ ಮೃತದೇಹ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಹರದೂರು ಹೊಳೆಯಲ್ಲಿ ಪತ್ತೆಯಾಗಿದೆ. ಇದು ಆತ್ಮಹತ್ಯೆ ಪ್ರಕರಣವೆಂದು ಶಂಕಿಸಲಾಗಿದೆ. ಹಾಸನದ ಕದಲಿ ಗ್ರಾಮದ ನಿವಾಸಿ ಹೇಮಂತ್ (27) ಮೃತ ವ್ಯಕ್ತಿ. ಹೇಮಂತ್ ಬುಧವಾರ ನಾಪತ್ತೆಯಾಗಿರುವ ಬಗ್ಗೆ ಅವರ ತಂದೆ ಪದ್ಮರಾಜ್ ಅವರು ಹಾಸನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಇಂದು ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹರದೂರು ಹೊಳೆಯ ಬದಿಯಲ್ಲಿ ಹೇಮಂತ್ ಅವರಿಗೆ ಸೇರಿದ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸಂಶಯ ವ್ಯಕ್ತವಾದ ಹಿನ್ನೆಲೆೆ ಹುಡುಕಾಟ ನಡೆಸಿದಾಗ ಹೊಳೆಯಲ್ಲಿ ಮೃತದೇಹ ಪತ್ತೆಯಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಲೇಖಕ: admin
ಮಡಿಕೇರಿ NEWS DESK ಆ.8 : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಮೂಡ ಅಕ್ರಮದ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅಪಪ್ರಚಾರ ಮಾಡುವ ಮೂಲಕ ರಾಜಕೀಯ ಪಿತೂರಿ ನಡೆಸುತ್ತಿವೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಅಹಿಂದ ಒಕ್ಕೂಟ, ಜಿಲ್ಲಾ ಕುರುಬ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದವು. ಸಂಘಟನೆಗಳ ಪ್ರಮುಖರು ಹಾಗೂ ನೂರಾರು ಕಾರ್ಯಕರ್ತರು ಪ್ರವಾಸಿ ಮಂದಿರದ ಬಳಿಯಿಂದ ಫೀ.ಮಾ.ಕಾರ್ಯಪ್ಪ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಘೋಷಣೆಗಳನ್ನು ಕೂಗಿದÀರು. ಕಾರ್ಯಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ರಾಜ್ಯದ ಬಡವರು ಹಾಗೂ ಅವಕಾಶ ವಂಚಿತ ಜನರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ನೆರವು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರಿಯತೆಯನ್ನು ಸಹಿಸದೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಆಧಾರ ರಹಿತ ಆರೋಪಗಳನ್ನು ಮಾಡುತ್ತಿವೆ.…
ಮಡಿಕೇರಿ ಆ.8 NEWS DESK : ಪ್ರಾಕೃತಿಕ ವಿಕೋಪದಿಂದ ಸಂಭವಿಸುವ ಸಾವಿಗಿಂತ, ಸ್ವಯಂಕೃತ ತಪ್ಪುಗಳಿಂದ ಉಂಟಾಗುವ ಸಾವಿನ ಸಂಖ್ಯೆ ಹೆಚ್ಚಿದೆ. ಕಳೆದ 4 ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಮದ್ಯ ಮತ್ತು ಮಾದಕ ವಸ್ತುಗಳಿಗೆ ತುತ್ತಾಗಿ ಸುಮಾರು 144 ಮಂದಿ ಮೃತಪಟ್ಟಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಕಾರದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಗುರುವಾರ ಡಾ.ಮಹಾಂತ ಶಿವಯೋಗಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ನಡೆದ ‘ವ್ಯಸನ ಮುಕ್ತ ದಿನಾಚರಣೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇಂದಿನ ತಂತ್ರಜ್ಞಾನ ಯುಗದಲ್ಲಿ ಪ್ರಾಕೃತಿಕ ವಿಕೋಪದ ಬಗ್ಗೆ ಮುನ್ನೆಚ್ಚರ ವಹಿಸಿದರೂ ಸಹ ಅಲ್ಲಲ್ಲಿ ವಿಕೋಪಗಳು ಸಂಭವಿಸಿ ಸಾವು ನೋವುಗಳು ಉಂಟಾಗುತ್ತದೆ. ಆದರೆ ಸ್ವಯಂಕೃತದಿಂದ ಪ್ರತಿನಿತ್ಯ ಒಂದಲ್ಲ…
ವಿರಾಜಪೇಟೆ ಆ.8 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದ ವತಿಯಿಂದ ಕೆದಮುಳ್ಳೂರು ವ್ಯಾಪ್ತಿಯ ತೋರ ಗ್ರಾಮದ ಕಾಳಜಿ ಕೇಂದ್ರದಲ್ಲಿರುವ ಮೂವತ್ತು ಮಂದಿಗೆ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ನಿರ್ದೇಶಕರಾದ ಲೀಲಾವತಿ, ತಾಲ್ಲೂಕು ಯೋಜನಾಧಿಕಾರಿ ದಿನೇಶ್, ಒಕ್ಕೂಟದ ಅಧ್ಯಕ್ಷ ಅರುಣ್ ಕುಮಾರ್, ಪ್ರಭುಕುಮಾರ್ ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಗ್ರಾಮಸ್ಥರು ಹಾಜರಿದ್ದರು.
ಮಡಿಕೇರಿ ಆ.8 NEWS DESK : ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆ.9 ರಂದು ಕುಶಾಲನಗರದ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರಿಗೆ ಪ್ರಬಂಧ ಸ್ಪರ್ಧೆ ಮತ್ತು ದೇಶ ಭಕ್ತಿಗೀತೆ ಹಾಡುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಇರುವ ಸರ್ಕಾರಿ, ಅನುದಾನ ರಹಿತ, ಅನುದಾನ ಸಹಿತ ಮತ್ತು ಖಾಸಗಿ ಶಾಲೆಯ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದು ಕಾರ್ಯದರ್ಶಿ ಎಸ್.ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಶಾಲನಗರ ಆ.8 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನರ ಸಹಭಾಗಿತ್ವದಲ್ಲಿ ಸ್ವಾತಂತ್ರ್ಯೋತ್ಸವದ ಸಂದರ್ಭ ರಾಜ್ಯದ ಎಲ್ಲೆಡೆ ಸುಮಾರು 17 ಸಾವಿರ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ತಿಳಿಸಿದ್ದಾರೆ. ಕಳೆದ ಎಂಟು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಈ ಕಾರ್ಯಕ್ರಮ ಇಂದಿನಿಂದ ಆ.8 ರಿಂದ ಒಂದು ವಾರ ತನಕ ನಡೆಯಲಿದೆ. ಮಾನಸಿಕ ನೆಮ್ಮದಿ ಶಾಂತಿಗಾಗಿ ಜನರು ಶ್ರದ್ಧಾ ಕೇಂದ್ರಗಳಿಗೆ ಆಗಮಿಸುತ್ತಿದ್ದು, ಅಂತಹ ಕೇಂದ್ರಗಳು ಗ್ರಾಮದ ಅತಿ ಮುಖ್ಯ ಭಾಗವಾಗಿದ್ದು ಅವುಗಳ ಸ್ವಚ್ಛತೆ ಅತಿ ಅಗತ್ಯವಾಗಿದೆ ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವಿ ಹೆಗ್ಗಡೆ ಅವರ ಚಿಂತನೆಯಾಗಿದೆ. ವರ್ಷದಲ್ಲಿ ಎರಡು ಬಾರಿ ಮಕರ ಸಂಕ್ರಾಂತಿ ಮತ್ತು ಸ್ವಾತಂತ್ರ್ಯೋತ್ಸವ ಸಂದರ್ಭ ಸಪ್ತಾಹದ ಮೂಲಕ ಶ್ರದ್ಧಾ ಕೇಂದ್ರಗಳಾದ ದೇವಾಲಯ ಬಸದಿ ಮಸೀದಿ ಚರ್ಚ್ ಗಳ ಮತ್ತು ನದಿ…
ಮಡಿಕೇರಿ ಆ.8 NEWS DESK : ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 41ನೇ ರಾಜ್ಯ ಮಟ್ಟದ ಟೆಕ್ವಾಂಡೋ ಸ್ಪರ್ಧೆಯಲ್ಲಿ ಕೊಡಗು ಜಿಲ್ಲೆಯ ಮರ್ಕರ ಟೆಕ್ವಾಂಡೋ ಕ್ಲಬ್ನ ವಿದ್ಯಾರ್ಥಿಗಳು ಭಾಗವಹಿಸಿ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದಿದ್ದಾರೆ. ಕೊಡಗು ವಿದ್ಯಾಲಯ ಶಾಲೆಯ ದಕ್ಷ್, ಹರ್ಷ್ ಕರುಂಬಯ್ಯ ಚಿನ್ನ, ಎನ್.ಕೆ.ಪ್ರಜ್ಞಾ, ಎನ್.ಕೆ.ದಿವಿತ್, ದಾನೀಶ್, ಆಯಾನ್ ಕಾನ್ ಬೆಳ್ಳಿ ಹಾಗೂ ಡಿಶಾಂತ್, ಪಾವನಿ, ಕ್ರಿಶ್, ಸಾದ್ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. ಸಂತ ಮೈಕಲರ ಶಾಲೆಯ ಆರೂಷ್, ಅನನ್ಯ ಬೆಳ್ಳಿ, ಸಂತ ಜೋಸೆಫರ ಶಾಲೆಯ ಅನಿಯಾ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರು ಮಡಿಕೇರಿಯ ಮರ್ಕರ ಟೆಕ್ವಾಂಡೋ ಕ್ಲಬ್ನ ಮಾಸ್ಟರ್ ಕುಶಾಲ್ ಕುಮಾರ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಈ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗೆದ್ದು ಆಯ್ಕೆಯಾದ ವಿದ್ಯಾರ್ಥಿಗಳು ಆ.27 ರಿಂದ 29ರ ವರೆಗೆ ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ಕರ್ನಾಟಕ ಒಲಿಂಪಿಕ್ ಸಂಸ್ಥೆ ವತಿಯಿಂದ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುವ 3ನೇ ಕರ್ನಾಟಕ ಮಿನಿ…
ಮಡಿಕೇರಿ ಆ.8 NEWS DESK : ಆಶಾ ಕಿರಣ ಕಲಾ ಟ್ರಸ್ಟ್ ವತಿಯಿಂದ ನೀಡಲಾದ ಆಹಾರದ ಕಿಟ್ ಅನ್ನು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಸಂತ್ರಸ್ತರಿಗೆ ವಿತರಿಸಲಾಯಿತು. ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ ಸೋಮವಾರಪೇಟೆ ತಾಲೂಕಿನಲ್ಲಿ ಮನೆ ಕಳೆದುಕೊಂಡ ಹಾಗೂ ಹಾನಿಗೊಳಗಾದ ಮನೆಗಳ ಕುಟುಂಬಸ್ಥರಿಗೆ ವೇದಿಕೆಯ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ ವಿತರಿಸಿದರು. ಈ ಸಂದರ್ಭ ಮಾತನಾಡಿದ ಫ್ರಾನ್ಸಿಸ್ ಡಿಸೋಜ ಜಿಲ್ಲೆಯಲ್ಲಿ ಮಳೆಯಿಂದ ಹಲವು ಮನೆಗಳು ಹಾನಿಯಾಗಿರುವ ಬಗ್ಗೆ ಆಶಾ ಕಿರಣ ಕಲಾ ಟ್ರಸ್ಟ್ ಅಧ್ಯಕ್ಷರಾದ ಮಾಲತಿ ಅವರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಪಂದಿಸಿದ ಅವರು ಸುಮಾರು 27 ಕುಟುಂಬಸ್ಥರಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಿದ್ದು, ಅದನ್ನು ವೇದಿಕೆಯ ಮೂಲಕ ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದರು. ಅಲ್ಲದೇ ಮನವಿ ತಕ್ಷಣ ಸ್ಪಂದಿಸಿದಕ್ಕೆ ಧನ್ಯವಾದ ಅರ್ಪಿಸಿದರು. ಈ ಸಂದರ್ಭ ವೇದಿಕೆಯ ಪ್ರಮುಖರಾದ ಧೀವನ್ ಡಿಸೋಜಾ, ನಂದಿಗುದ್ದ ಗ್ರಾಮದ ವೇದ, ಚನ್ನಾಪುರ ಗ್ರಾಮದ ರತಿಶ್ ಪೂಜಾರಿ, ಬಿಟಿಕಟ್ಟೆ ಗ್ರಾಮದ ಟಿ.ಆರ್.ರಾಮಚಂದ್ರ ಹಾಗೂ ವಿಶ್ವ, ಪ್ರಸನ್ನ, ನಾಗರಾಜ್ ಇತರರು ಹಾಜರಿದ್ದರು.
ಮಡಿಕೇರಿ ಆ.8 NEWS DESK : ಸಂಸ್ಕೃತಿ ಸಿರಿ ಬಳಗ ಟ್ರಸ್ಟ್, ಕೊಡಗು ಮತ್ತು ನ್ಯಾಷನಲ್ ಮೆಡಿಕೋಸ್ ಸಂಸ್ಥೆಯ ಕೊಡಗು ಘಟಕದ ಸಂಯುಕ್ತಾಶ್ರಯದಲ್ಲಿ ಆ.15 ರಂದು ಮಡಿಕೇರಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಕವಿಗೋಷ್ಠಿ ಹಾಗೂ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ ನಡೆಯಲಿದೆ ಎಂದು ಟ್ರಸ್ಟ್ ನ ಸ್ಥಾಪಕಾಧ್ಯಕ್ಷರಾದ ಈರಮಂಡ ಹರಿಣಿ ವಿಜಯ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಪೋಲಿಸ್ ಮೈತ್ರಿ ಭವನದಲ್ಲಿ ಅಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ಉಚಿತ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ನಡೆಯಲಿದೆ. ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್ರಾಜ್ ಧ್ವಜಾರೋಹಣ ನೆರವೇರಿಸಿ ವೈದ್ಯಕೀಯ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಕವಿಗೋಷ್ಠಿ ಮತ್ತು ದೇಶಭಕ್ತಿ ಗಾಯನ ಸ್ಪರ್ಧೆಯನ್ನು ವಿಶೇಷ ಆಹ್ವಾನಿತರು ಹಾಗೂ ತೀರ್ಪುಗಾರರಾದ ಸಾಹಿತಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ, ಕನ್ನಡ ಸರಿಗಮಪ ಖ್ಯಾತಿಯ ಅನ್ವಿತ್ ಕುಮಾರ್ ಉದ್ಘಾಟಿಸಲಿದ್ದಾರೆ ಎಂದರು. 77ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಮ್ಮ ದೇಶದ ಆಂತರಿಕ ಭದ್ರತೆ ನಿರ್ವಹಿಸುತ್ತಿರುವ…
ಮಡಿಕೇರಿ ಆ.8 NEWS DESK : ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಐ ಮತ್ತು ಎಂಎಲ್ ವಿಭಾಗದ ವತಿಯಿಂದ ಕಾರ್ಗಿಲ್ ವಿಜಯ ದಿವಸವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ನಿವೃತ್ತ ಮೇಜರ್ ಡಾ. ಕುಶ್ವಂತ್ ಕೋಳಿಬೈಲು ಅಮರ್ ಜವಾನ್ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ಇಂಜಿನಿಯರ್ಗಳು ರಕ್ಷಣಾ ಇಲಾಖೆಯಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತಾರೆ ಎಂದು ಇಸ್ರೇಲ್ ದೇಶದ ಉದಾಹರಣೆಯೊಂದಿಗೆ ವಿವರಿಸಿದರು. ಅಲ್ಲದೆ ಹೇಗೆ ರಕ್ಷಣಾ ಇಲಾಖೆಯು ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುತ್ತಿದೆ ಎಂಬುದನ್ನು ತಿಳಿಸಿದರು. ಇಂದಿನ ಯುವ ಇಂಜಿನಿಯರ್ ಗಳು ಕೃತಕ ಬುದ್ದಿಮತ್ತೆಯನ್ನು ಬಳಸಿ ಹೊಸ ಅವಿಷ್ಕಾರಗಳನ್ನು ನಡೆಸಿ ದೇಶದ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಬೇಕೆಂದು ಕಿವಿ ಮಾತನ್ನು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾಡಿದ ಕೊಡವ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ರಾಕೇಶ್ ಪೂವಯ್ಯ ಮಾತನಾಡಿ, ದೇಶದ ಭದ್ರತೆಗೆ ಸೈನಿಕರ ಪಾತ್ರವು ಬಹು ಮುಖ್ಯವಾಗಿದೆ. ರಕ್ಷಣಾ ವ್ಯವಸ್ಥೆಯಲ್ಲಿ ತಂತ್ರಜ್ಞಾನದ ಪಾತ್ರ, ವಿದ್ಯಾರ್ಥಿಗಳು ಕೃತಕ ಬುದ್ದಿಮತ್ತೆಯನ್ನು ಬಳಸಿ ದೇಶದ ರಕ್ಷಣಾ…






