ಲೇಖಕ: admin

ಕುಶಾಲನಗರ NEWS DESK ಸೆ 10 : ಕುಶಾಲನಗರದ ಐತಿಹಾಸಿಕ  ಶ್ರೀ ಗಣಪತಿ ದೇವಸ್ಥಾನ‌ದ ಅಭಿವೃದ್ಧಿಗೆ ಸುದೀರ್ಘ 45 ವರ್ಷಗಳ‌ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಸಮಿತಿ ಆಡಳಿತ ಮಂಡಳಿಯ  ಅಧ್ಯಕ್ಷ ಸ್ಥಾನದಿಂದ ನಿವೃತ್ತಿ ಹೊಂದಿದ ವಿ.ಎನ್.ವಸಂತಕುಮಾರ್ ಅವರಿಗೆ ದೇವಸ್ಥಾನದ‌ ನೂತನ ಸಮಿತಿಯ ಆಡಳಿತ ಮಂಡಳಿ ವತಿಯಿಂದ ಪೌರ ಸನ್ಮಾನ ಕಾರ್ಯಕ್ರಮ ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕುಶಾಲನಗರ ಮಾರುತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಮಡಿಕೇರಿ ಕ್ಷೇತ್ರದ ಮಾಜಿ ಶಾಸಕ ಅಪ್ಪಚ್ಚುರಂಜನ್ ಚಾಲನೆ ನೀಡಿದರು.  ನಂತರ ಮಾತನಾಡಿದ ಅವರು, ದೇವಾಲಯ ಕಾರ್ಯಗಳನ್ನು ಸುಸೂತ್ರವಾಗಿ ನಡೆಸಿಕೊಂಡು ಬರಲು ಎಲ್ಲರಿಗೂ ಸಾಧ್ಯವಾಗುವುದಿಲ್ಲ. 1980 ರಲ್ಲಿ ಸಮಿತಿ ಅಧ್ಯಕ್ಷರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ‌ ವಸಂತಕುಮಾರ್ ಅವರ ಕಾರ್ಯ ಶ್ಲಾಘನೀಯ. ಧಾರ್ಮಿಕ ಕೆಲಸ ಕಾರ್ಯಗಳನ್ನು ನಡೆಸುವುದು ಕೇವಲ‌ ಸಂಪತ್ತಿನಿಂದ ಮಾತ್ರವಲ್ಲದೆ ಶುದ್ದ‌ ಮನಸ್ಥಿತಿ ಮೂಲಕ ಕೆಲಸ ನಿರ್ವಹಿಸಬೇಕಾದ ಜವಾಬ್ದಾರಿ ಇರುತ್ತದೆ. ಅಜಾತಶತ್ರು ಗುಣವುಳ್ಳ ಕಾರಣ ವಸಂತಕುಮಾರ್ ಅವರಿಂದ ಈ ಸುದೀರ್ಘ ಕಾರ್ಯ ಸಾಧ್ಯವಾಗಿದೆ. ಅವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಹಾರೈಸಿದರು. ವಿ.ಎನ್.ವಸಂತಕುಮಾರ್ ದಂಪತಿಗಳಿಗೆ ಸನ್ಮಾನ…

Read More

ಮಡಿಕೇರಿ NEWS DESK ಸೆ.10 : 371 ಜೆ  ಮೀಸಲಾತಿ ಕುರಿತು 42 ಅಭ್ಯರ್ಥಿಗಳು ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿ  ನ್ಯಾಯಾಲಯ ತಡೆಯಾಜ್ಞೆ ನೀಡಲಾಗಿತ್ತು. ಉಳಿದ 1100ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ತೊಂದರೆಯಾಗುತ್ತಿರುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಸಚಿವರೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚೆ  ನಡೆಸಿ ಅಗತ್ಯ ಕಾನೂನು ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ದಿನಾಂಕ  5/9/24  ಶಿಕ್ಷಕರ ದಿನಾಚರಣೆಯಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ  ಉನ್ನತ ಶಿಕ್ಷಣ  ಸಚಿವ ಎಂ.ಸಿ.ಸುಧಾಕರ್ ಅವರು ಗೆಜೆಟ್ ಪ್ರಕಟಣೆಯನ್ನು ಬಿಡುಗಡೆ ಮಾಡಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ನೀಡಿದ ಅಗತ್ಯ ಕಾನೂನು ಸಲಹೆಯಂತೆ ಸರ್ಕಾರ  ಆದೇಶ ಹೊರಡಿಸಿದೆ. ಸಹಾಯಕ ಪ್ರಾಧ್ಯಾಪಕರ 2021ರ ಆಯ್ಕೆ ಅಭ್ಯರ್ಥಿಗಳು ಶಾಸಕ ಎ.ಎಸ್ ಪೊನ್ನಣ್ಣ ಅವರನ್ನು ಇಂದು ವಿಧಾನಸೌಧದ ಕಚೇರಿಯಲ್ಲಿ ಅಭಿನಂದಿಸಿದರು.

Read More

ಮಡಿಕೇರಿ ಸೆ.10 NEWS DESK : ಕೊಡಗಿನಲ್ಲಿ 16ಕ್ಕೂ ಹೆಚ್ಚು ಗ್ಲಾಸ್ ಬ್ರಿಡ್ಜ್‍ಗಳ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ ಎಂದು ತಿಳಿದು ಬಂದಿದೆ. ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ಗಾಜಿನ ಸೇತುವೆಗಳು ನಿರ್ಮಾಣಗೊಂಡರೆ ಕೊಡವ ಲ್ಯಾಂಡ್ ನರಕವಾಗಲಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‍ಸಿ ವತಿಯಿಂದ ಚೇರಂಬಾಣೆಯಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಅತ್ಯಂತ ಸೂಕ್ಷ್ಮ ಪರಿಸರ ವಲಯವನ್ನು ಹೊಂದಿರುವ ಕೊಡಗಿನಲ್ಲಿ ಗ್ಲಾಸ್ ಬ್ರಿಡ್ಜ್ ಗಳ ನಿರ್ಮಾಣದಿಂದ ಜನದಟ್ಟಣೆ ಅಧಿಕವಾಗುತ್ತದೆ. ಇದನ್ನು ತಡೆದುಕೊಳ್ಳುವ ಶಕ್ತಿ ಕೊಡವ ಲ್ಯಾಂಡ್ ಗೆ ಇಲ್ಲದಾಗಿದೆ. ಈ ಯೋಜನೆ ಪರಿಸರದ ಮೇಲೆ ತೀವ್ರ ದುಷ್ಪರಿಣಾಮವನ್ನುಂಟು ಮಾಡಲಿದೆ ಎಂದರು. ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯ ಮೂಲಕ ರೆಸಾರ್ಟ್, ವಿಲ್ಲಾ, ಟೌನ್ ಶಿಪ್‍ಗಳ ನಿರ್ಮಾಣಕ್ಕಾಗಿ ಬೆಟ್ಟಗುಡ್ಡಗಳ ನಾಶ, ಮರಗಳ ಹನನವಾಗುತ್ತಿದೆ. ಪ್ರಾಕೃತಿಕ ವಿಕೋಪಕ್ಕೆ ಕಾರಣವಾಗಬಲ್ಲ ಈ…

Read More

ಮಡಿಕೇರಿ ಸೆ.10 NEWS DESK : ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಇದೇ ಸೆಪ್ಟೆಂಬರ್, 15 ರಂದು ಹಮ್ಮಿಕೊಳ್ಳಲಾಗಿದ್ದು, ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಸೇರಿದಂತೆ ಎಲ್ಲರೂ ಕೈಜೋಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮನವಿ ಮಾಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಬೀದರ್‍ನಿಂದ ಚಾಮರಾಜನಗರದ ವರೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದ್ದು, ಆ ನಿಟ್ಟಿನಲ್ಲಿ ಸ್ಥಳೀಯ ಹಂತದಲ್ಲಿ ಅಗತ್ಯ ಸಹಕಾರಕ್ಕೆ ಕೋರಿದರು. ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಸಂಪಾಜೆಯಿಂದ ಶಿರಂಗಾಲದ ಕಡುವಿನ ಹೊಸಹಳ್ಳಿ ಗಡಿಭಾಗದವರೆಗೆ ಮಾನವ ಸರಪಳಿ ನಡೆಸಲು ಉದ್ದೇಶಿಸಲಾಗಿದ್ದು, ಕೊಡಗು ಜಿಲ್ಲೆ ಅರಣ್ಯ ಪ್ರದೇಶ ಹೊಂದಿರುವುದರಿಂದ ಕೆಲವು ವಿನಾಯಿತಿಯನ್ನು ನೀಡಲಾಗಿದೆ ಎಂದು ತಿಳಿಸಿದರು. ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ರಾಷ್ಟ್ರೀಯ ಹಬ್ಬ ಮಾದರಿಯಲ್ಲಿ ಯಶಸ್ಸುಗೊಳಿಸಬೇಕಿದೆ. ಸದ್ಯ ಆಯಾಯ ಗ್ರಾಮ/ ಗ್ರಾಮ ಪಂಚಾಯತಿಗಳಲ್ಲಿ ಸ್ಥಳೀಯರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು…

Read More

ಮಡಿಕೇರಿ ಸೆ.10 NEWS DESK : ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನ ಮತ್ತು ಕಚೇರಿಯನ್ನು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿದರು. ನೂತನ ಪ್ರವೇಶ ದ್ವಾರವನ್ನು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷ ಕೊಡಂದೇರ ಪಿ.ಗಣಪತಿ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮಾಜಿ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಹಾಗೂ ಮತ್ತಿತರ ಗಣ್ಯರು ಹಾಜರಿದ್ದರು. ವಾರ್ಷಿಕ ಮಹಾಸಭೆ : ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಸಂಘದ 7ನೇ ವಾರ್ಷಿಕ ಮಹಾಸಭೆಯು ಸೆ.17 ರಂದು ಪೆರಾಜೆ ಶ್ರೀ ಅನ್ನಪೂರ್ಣೆಶ್ವರಿ ಕಲಾ ಮಂದಿರದಲ್ಲಿ ಪೂರ್ವಾಹ್ನ 10.40ಕ್ಕೆ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಕೆ.ಲೋಕೇಶ್ ತಿಳಿಸಿದ್ದಾರೆ.

Read More

ಮಡಿಕೇರಿ ಸೆ.10 NEWS DESK : ಚೆಸ್ಕಾಂ ಮಡಿಕೇರಿ ಉಪವಿಭಾಗ ಮತ್ತು ಮಡಿಕೇರಿ ವಿಭಾಗದ ವತಿಯಿಂದ ವಿದ್ಯುತ್ ಗುತ್ತಿಗೆದಾರರ ಸಹಕಾರದೊಂದಿಗೆ 55ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಮಂಗಳವಾರ ನಗರದ ಗಾಂಧಿ ಮೈದಾನದಲ್ಲಿ ಕ್ರೀಡಾಕೂಟ ನಡೆಯಿತು. ಚೆಸ್ಕಾಂ ಎಇಇ ವಿನಯ್ ಕುಮಾರ್ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಕ್ರೀಡಾ ಚಟುವಟಿಕೆಗಳಲ್ಲಿ ಇಲಾಖಾ ಸಿಬ್ಬಂದಿಗಳು ಪಾಲ್ಗೊಳ್ಳುವಂತೆ ಕೋರಿ ಶುಭ ಹಾರೈಸಿದರು. ಚೆಸ್ಕಾಂ ಸಹಾಯಕ ಇಂಜಿನಿಯರ್ ಸಂಪತ್ ಮಾತನಾಡಿ, ಈ ಹಿಂದಿನಿಂದಲು ಗಣೇಶೋತ್ಸವವನ್ನು ಇಲಾಖಾ ಸಿಬ್ಬಂದಿಗಳು ನಡೆಸಿಕೊಂಡು ಬರುತ್ತಿದ್ದು, ಅದನ್ನು ಮುಂದುವರಿಸಿಕೊಂಡು ಬರಲಾಗುತ್ತಿದೆ. ಉತ್ಸವದ ಹಿನ್ನೆಲೆಯಲ್ಲಿ ಇಲಾಖಾ ಸಿಬ್ಬಂದಿಗಳಿಗೆ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಮುಂಗಾರಿನ ಅವಧಿಯಲ್ಲಿ ವಿದ್ಯುತ್ ಸಮಸ್ಯೆಗಳನ್ನು ಬಗೆಹರಿಸಲು ಅವಿಶ್ರಾಂತವಾಗಿ ಶ್ರಮಿಸಿದ್ದ ಸಿಬ್ಬಂದಿಗಳ ಮನರಂಜನೆಗಾಗಿ ಮತ್ತು ನಿತ್ಯದ ಒತ್ತಡಗಳಿಂದ ಹೊರ ಬರಲು ಕ್ರೀಡಾ ಚಟುವಟಿಕೆ ಸಹಕಾರಿಯಾಗಿದೆ ಎಂದರು. ಕ್ರೀಡಾಕೂಟದಲ್ಲಿ ಚೆಸ್ಕಾಂ ಮಡಿಕೇರಿ ಉಪ ವಿಭಾಗದ ಸುಮಾರು 150 ಸಿಬ್ಬಂದಿಗಳು ಮತ್ತು ಮಡಿಕೇರಿ ವಿಭಾಗದ 50 ಕ್ಕೂ ಹೆಚ್ಚಿನ ಸಿಬ್ಬಂದಿಗಳು ಪಾಲ್ಗೊಳ್ಳುತ್ತಿರುವುದಾಗಿ ಮಾಹಿತಿ ನೀಡಿದರು. ಉದ್ಘಾಟನಾ ಸಮಾರಂಭದಲ್ಲಿ ಚೆಸ್ಕಾಂ…

Read More

ಮಡಿಕೇರಿ ಸೆ.10 NEWS DESK : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಆಂಬುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಆಂಬುಲೆನ್ಸ್ ಚಾಲಕನ ಕಾಲಿಗೆ ಗಂಭೀರ ಗಾಯಗೊಂಡಿರುವ ಘಟನೆ ಮೇಕೇರಿ ಸಮೀಪದ ಬಿಳಿಗೇರಿಯಲ್ಲಿ ನಡೆದಿದೆ.  ಆಂಬುಲೆನ್ಸ್ ನಲ್ಲಿ ಇದ್ದ ಮಹಿಳೆಯನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.  ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More

ಮಡಿಕೇರಿ ಸೆ.10 NEWS DESK : ಬ್ರಿಟಿಷ್ ಅಧಿಕಾರಿಗಳು ಭೇಟಿ ಮಾಡಿದ ಜ್ಞಾಪಕಾರ್ಥವಾಗಿ ವಿರಾಜಪೇಟೆ ಎಂದು ಅಂದು ನಾಮಕರಣಗೊಂಡ ವಿರಾಜಪೇಟೆಯನ್ನು ಮೂಲ ಹೆಸರಿನ ಮೂಲಕ ಅಧಿಕೃತವಾಗಿ ಗುರುತಿಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು ಒತ್ತಾಯಿಸಿದ್ದಾರೆ. ಈ ಕುರಿತು ವಿರಾಜಪೇಟೆ ಕ್ಷೇತ್ರದ ಶಾಸಕರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸುಮಾರು 18ನೇ ಶತಮಾನದ ನಂತರ ಈಗ ಇರುವ ಪುರಕ್ಕೆ ಅಂದಿನ ಕೊಡಗು ಆಡಳಿತಗಾರರನ್ನು ಬ್ರಿಟಿಷ್ ಅಧಿಕಾರಿಗಳು ಭೇಟಿ ಮಾಡಿದ ಜ್ಞಾಪಕಾರ್ಥವಾಗಿ ವಿರಾಜಪೇಟೆ ಎಂದು ಹೆಸರು ನೀಡಲಾಯಿತು. ಇದಕ್ಕೂ ಮೊದಲು ಈ ಪಟ್ಟಣಕ್ಕೆ ಬೇರೆಯದ್ದೇ ಹೆಸರಿತ್ತು ಎನ್ನುವುದು ಹಿರಿಯರ ವಾದವಾಗಿದೆ. ಜನರ ಭಾವನೆಗಳಿಗೆ ದಕ್ಕೆಯಾಗದಂತೆ ಸ್ಪಂದಿಸುವುದರೊಂದಿಗೆ ತಪ್ಪು ಸಂದೇಶವನ್ನು ದೂರ ಮಾಡಬೇಕು. ಇತಿಹಾಸ ತಜ್ಞರಿಂದ ಅಭಿಪ್ರಾಯ ಸಂಗ್ರಹಿಸಿ ಸರಿಯಾದ ವರದಿಯನ್ನು ಪ್ರಸ್ತುತಪಡಿಸಿ ಸರ್ಕಾರದ ವತಿಯಿಂದ ಮತ್ತೆ ಮೂಲ ಹೆಸರಿಗೆ ಬದಲಾವಣೆ ಮಾಡಬೇಕು…

Read More

ಮಡಿಕೇರಿ NEWS DESK ಸೆ.10 : ಮಡಿಕೇರಿಯ ವಿಂಗ್ಸ್ ಆಫ್ ಪ್ಯಾಶನ್ ಡ್ಯಾನ್ಸ್ ಸ್ಟುಡಿಯೋ 5ನೇ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಿಕೊಂಡಿತು. ಸಂಸ್ಥೆಯ ಸ್ಥಾಪಕರು, ನಿರ್ದೇಶಕರು ಹಾಗೂ ನೃತ್ಯ ಸಂಯೋಜಕರಾದ ಪ್ರೀತಾ ಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಸಂತ ಜೋಸೆಫರ ಪದವಿ ಪೂರ್ವ ಕಾಲೇಜ್ ನ ಉಪನ್ಯಾಸಕರಾದ ಜಯಲಕ್ಷ್ಮಿ ಕೆ. ಅವರು ಮನಸ್ಸು ಮತ್ತು ದೇಹದ ಸದೃಢತೆಗೆ ನೃತ್ಯ ಸಹಕಾರಿಯಾಗಿದೆ ಎಂದರು. ನಿಷ್ಠೆಯೊಂದಿಗೆ ಕಠಿಣ ಪರಿಶ್ರಮದಿಂದ ಮಕ್ಕಳು ಹಾಗೂ ಮಹಿಳೆಯರಲ್ಲಿ ಜೀವನೋತ್ಸಾಹ ತುಂಬುತ್ತಿರುವ ಪ್ರೀತಾ ಕೃಷ್ಣ ಅವರ ಸಾಧನೆ ಶ್ಲಾಘನೀಯ ಮತ್ತು ಇತರರಿಗೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ವಿಂಗ್ಸ್ ಆಫ್ ಪ್ಯಾಶನ್ ಡ್ಯಾನ್ಸ್ ಸ್ಟುಡಿಯೋದ ಸಂಗೀತ ಗುರುಗಳಾದ ಹರಿಚಂದ್ರ ಮಾತನಾಡಿ ಸಂಗೀತದ ಪ್ರಕಾರಗಳ ಬಗ್ಗೆ ವಿವರಿಸಿದರು. ::: ಬಹುಮಾನ ವಿತರಣೆ ::: “ವೈಟ್ ಲಾಸಿಂಗ್ ಮಂತ್” ಸ್ಪರ್ಧೆಯಲ್ಲಿ ವಿಜೇತರಾದ ಚೇತನಾ ಪೂಜಾರಿ ಹಾಗೂ ಪ್ರತಿಮಾ ಅವರಿಗೆ ಬಹುಮಾನ ವಿತರಿಸಿ ಗೌರವಿಸಲಾಯಿತು. ::: ನೃತ್ಯ ವೈವಿಧ್ಯ :::…

Read More

ಸುಂಟಿಕೊಪ್ಪ ಸೆ.10 NEWS DESK : ಸುಂಟಿಕೊಪ್ಪ ಸೇರಿದಂತೆ ಹೋಬಳಿ ವ್ಯಾಪ್ತಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಮೂರ್ತಿಯ ವಿಸರ್ಜನೋತ್ಸವವು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು. ಕೊಡಗರಹಳ್ಳಿ ವಿಘ್ನೇಶ್ವರ ಸೇವಾ ಸಂಘದ ಗೌರಿ ಗಣೇಶ ಮೂರ್ತಿಯನ್ನು ಕೊಡಗರಹಳ್ಳಿ ಪ್ರಮುಖ ಬೀದಿಯಲ್ಲಿ ವಿದ್ಯುತ್ ದೀಪ ಅಲಂಕೃತ ಭವ್ಯ ಮಂಟಪದಲ್ಲಿ ಭವ್ಯ ಶೋಭಯಾತ್ರೆ ನಡೆಸಿ ನಂತರ ಸ್ಥಳೀಯ ಕೆರೆಯಲ್ಲಿ ವಿಸರ್ಜಿಸಲಾಯಿತು. ಸುತ್ತಮುತ್ತಲಿನ ನೂರಾರು ಮಂದಿ ಮಳೆಯ ನಡುವೆ ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದರು. ಸೌಹಾರ್ದ ಸಾರಿದ ಮುಸ್ಲಿಂ ಕುಟುಂಬ : ಕೊಡಗರಹಳ್ಳಿಯ ಬೈತೂರಪ್ಪ ದೇವಾಲಯದ ಬಳಿಯ ಬಡಾವಣೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಮೂರ್ತಿಯ ವಿಸರ್ಜನೋತ್ಸವ ಮೆರವಣಿಗೆಯ ವೇಳೆ ಸ್ಥಳೀಯ ರಫೀಕ್ ಮತ್ತು ಇಬ್ರಾಹಿಂ ಕುಟುಂಬಸ್ಥರು ಹಿಂದೂಗಳಿಗೆ ಸಿಹಿ ಮತ್ತು ತಂಪು ಪಾನೀಯ ಹಂಚಿ ಸೌಹಾರ್ದತೆ ಮೆರೆದರು. ಮಾದಾಪುರ ರಸ್ತೆಯಲ್ಲಿರುವ ವೃಕ್ಷೋಧ್ಭವ ಶಕ್ತಿ ಮಹಾಗಣಪತಿ ದೇವಾಲಯದಲ್ಲಿ ಪ್ರತಿಷ್ಠಪಿಸಿದ್ದ ಗೌರಿ ಗಣೇಶ ಮೂರ್ತಿಗೆ ಮಹಾಪೂಜೆ ನೆರವೇರಿಸಿ ನಂತರ ಹರದೂರು ಹೊಳೆಯಲ್ಲಿ ವಿಸರ್ಜಿಸಲಾಯಿತು. ಚಿಣ್ಣರಿಂದ ಗಣೇಶ ಮೂರ್ತಿಯ…

Read More