ಮಡಿಕೇರಿ ಜು.27 NEWS DESK : ರಸ್ತೆ ಬದಿಯಲ್ಲಿ ನಿಲ್ಲಿಸಿದ ಆಟೋ ಮೇಲೆ ವಿದ್ಯುತ್ ಕಂಬ ಬಿದ್ದು ಹಾನಿಯಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಗೌಡಳ್ಳಿ ಗ್ರಾಮದಲ್ಲಿ ನಡೆದಿದೆ. ಜಯಪ್ಪ ಎಂಬುವರ ಆಟೋದ ಮೇಲೆ ವಿದ್ಯುತ್ ಕಂಬ ಬಿದ್ದಿದ್ದು, ಆಟೋ ಸಂಪೂರ್ಣ ಜಖಂ ಗೊಂಡಿದೆ. ವಿದ್ಯುತ್ ಇಲಾಖೆ ಆಟೋ ಚಾಲಕನಿಗೆ ಪರಿಹಾರ ನೀಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.
ಲೇಖಕ: admin
ಮಡಿಕೇರಿ ಜು.27 NEWS DESK : ಭಾಗಮಂಡಲ ಹೋಬಳಿಯ ದೋಣಿಕಾಡು ಎಂಬಲ್ಲಿ ಕಾವೇರಿ ನದಿ ನೀರಿನ ಪ್ರವಾಹದ ರಕ್ಷಣೆಗೆ ದೋಣಿ ಸಹಾಯದಿಂದ ನದಿ ದಾಟುವ ಜನರಿಗೆ ಸುರಕ್ಷತೆಗಾಗಿ ಜಿಲ್ಲಾಡಳಿತದಿಂದ ಜೀವ ರಕ್ಷಕ ಜಾಕೆಟ್ ಗಳನ್ನು ವಿತರಿಸಲಾಯಿತು.
ಮಡಿಕೇರಿ ಜು.27 NEWS DESK : ಭಾರಿ ಗಾಳಿ ಮಳೆಯಿಂದಾಗಿ ಕರ್ಣಂಗೇರಿ ಗ್ರಾಮದ ಮೊಣಕಾಲ್ಮುರಿ ಶಾಲೆಯ ಹಿಂಭಾಗದ ಹೆಚ್.ಆರ್.ಹೇಮವತಿ ಎಂಬುವವರ ಮನೆ ಮೇಲೆ ಮರ ಬಿದ್ದು ಸಂಪೂರ್ಣ ಹಾನಿಯಾಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಜಾನ್ಸನ್ ಪಿಂಟೋ ಹಾಗೂ ತಹಶೀಲ್ದಾರ್ ಪ್ರವೀಣ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಇದೇ ಸಂದರ್ಭ ಕುಟುಂಬದವರಿಗೆ ಆಹಾರ ಕಿಟ್ ವಿತರಿಸಲಾಯಿತು.
ಪುತ್ತೂರು ಜು.27 NEWS DESK : ಕೊರೆಯುವ ಚಳಿಯಲ್ಲಿ ಪರ್ವತದ ಮೇಲ್ಭಾಗದಿಂದ ಸುರಿಯುವ ಗುಂಡಿನ ದಾಳಿಯ ಮಧ್ಯೆ ಕಾರ್ಗಿಲ್ ಯುದ್ಧದಲ್ಲಿ ಕೆಚ್ಚೆದೆಯ ಹೋರಾಟವನ್ನು ಮಾಡಿ ಹುತಾತ್ಮರಾಗಿರುವ ಹಾಗೂ ಅದರಲ್ಲಿ ಪಾಲ್ಗೊಂಡಿರುವ ಸೇನಾಪಡೆಗಳ ಎಲ್ಲಾ ಅಧಿಕಾರಿಗಳೂ ನಿತ್ಯ ಸ್ಮರಣೀಯರು ಎಂದು ಭಾರತೀಯ ಸೇನಾಪಡೆಯ ವಿಶ್ರಾಂತ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಎಸ್.ಟಿ.ರಮಾಕಾಂತನ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿ0ಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಆಶ್ರಯದಲ್ಲಿ ನಡೆದ ಕಾರ್ಗಿಲ್ ವಿಜಯ ದಿವಸ ಸಮಾರಂಭದಲ್ಲಿ ಯೋಧ ನಮನವನ್ನು ಸಲ್ಲಿಸಿ ಮಾತಾಡಿದರು. ವಿಶ್ವದಲ್ಲಿಯೇ ಶ್ರೇಷ್ಟ ಸೇನಾ ಪಡೆಯನ್ನು ಹೊಂದಿರುವ ಭಾರತವು ತನ್ನ ಮೇಲೆ ದಾಳಿಗೆ ಬರುವ ಶತ್ರುವನ್ನು ಕ್ಷಣ ಮಾತ್ರದಲ್ಲಿ ಹುಟ್ಟಡಗಿಸುವ ಸಾಮರ್ಥ್ಯವನ್ನು ಹೊಂದಿದ್ದು ಇದು ನಮ್ಮೆಲರಿಗೂ ಹೆಮ್ಮೆಯಾಗಿದೆ ಎಂದರು. ಯುವ ಇಂಜಿನಿಯರುಗಳಿಗೆ ಸೇನೆಯಲ್ಲಿ ಅನೇಕ ಹುದ್ದೆಗಳಿವೆ. ಸಾಫ್ಟ್ವೇರ್ ಉದ್ಯೋಗಗಳಿಗಿಂತಲೂ ಉನ್ನತ ಮಟ್ಟದ ಜೀವನವನ್ನು ನಡೆಸುವುದಕ್ಕೆ ಬೇಕಾದ ಸವಲತ್ತುಗಳು ಸೇನಾ ಅಧಿಕಾರಿಗಳಿಗೆ ಲಭ್ಯವಿದೆ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಸೇನೆಯನ್ನು ಸೇರುವ ಆಶಯವನ್ನು ಬೆಳೆಸಿಕೊಳ್ಳಬೇಕು ಎಂದರು.…
ಕುಶಾಲನಗರ ಜು.27 NEWS DESK : ಕೊಡಗಿನ ಸೈನಿಕ ಶಾಲೆಯಲ್ಲಿ 25ನೇ ಕಾರ್ಗಿಲ್ ವಿಜಯ್ ದಿವಸವನ್ನು ಆಚರಿಸಲಾಯಿತು. ವಿಂಗ್ ಕಮಾಂಡರ್ ಪಿ.ಪ್ರಕಾಶ್ ರಾವ್, ಆಡಳಿತಾಧಿಕಾರಿ ಮತ್ತು ಉಪ ಪ್ರಾಂಶುಪಾಲರಾದ ಸ್ಕ್ವಾಡ್ರನ್ ಲೀಡರ್ ಮೊಹಮ್ಮದ್ ಶಾಜಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರ ತ್ಯಾಗವನ್ನು ಸ್ಮರಿಸುತ್ತಾ, ಯುದ್ಧ ವೀರರ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿದರು. ಜೆ.ಡಿ.ಎನ್.ಸಿ.ಸಿ ಕಂಪನಿಯ ಎನ್ಸಿಸಿ ಅಧಿಕಾರಿಗಳು ಮತ್ತು ಸೈನಿಕ ಶಾಲೆ ಕೊಡಗಿನ ಸೇನಾ ಸಿಬ್ಬಂದಿವರ್ಗದವರೂ ಸಹ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಅಧಿಕಾರಿಗಳು ಭಾರತೀಯ ಸಶಸ್ತ್ರ ಪಡೆಗಳು ರಾಷ್ಟ್ರದ ಸೇವೆಯಲ್ಲಿ ಶೌರ್ಯ ಮತ್ತು ತ್ಯಾಗವನ್ನು ಗೌರವಿಸಲು ಸ್ಮರಣಾರ್ಥವನ್ನು ಅತ್ಯಂತ ಹೆಮ್ಮೆ ಮತ್ತು ಉತ್ಸಾಹದಿಂದ ಆಯೋಜಿಸಲಾಗಿದೆ. ಈ ಮಹತ್ವದ ಘಟನೆಯು ಭಾರತೀಯ ವಾಯುಪಡೆಯ ಆಪರೇಷನ್ ಸಫೇದ್ ಸಾಗರ್ ಮತ್ತು ಭಾರತೀಯ ಸೇನೆಯ ಆಪರೇಷನ್ ವಿಜಯ್ನ ಪರಾಕಾಷ್ಠೆಯ ನಂತರ 1999 ರಲ್ಲಿ ಕಾರ್ಗಿಲ್ ಸಂಘರ್ಷದಲ್ಲಿ ಭಾರತದ ವಿಜಯದ 25 ನೇ ವಾರ್ಷಿಕೋತ್ಸವವನ್ನು ಸೂಚಿಸುವುದಾಗಿದೆ ಎಂದರು. ನಮ್ಮ ಭಾರತೀಯ ಸೇನೆಯ ಇತಿಹಾಸದಲ್ಲಿ…
ಮಡಿಕೇರಿ ಜು.27 NEWS DESK : ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾಗಿ ಜಿಲ್ಲೆಯ ಸಮಾಜ ಸೇವಕರಾದ ಮೇರಿಯಂಡ ಸಂಕೇತ್ ಪೂವಯ್ಯ ನೇಮಕಗೊಂಡಿದ್ದಾರೆ. ಮುಖ್ಯಮಂತ್ರಿಗಳು ಅಧ್ಯಕ್ಷರಾಗಿರುವ, ಅರಣ್ಯ ಸಚಿವರು ಉಪಾಧ್ಯಕ್ಷರಾಗಿರುವ ಮಂಡಳಿಯ ಮೂರು ವರ್ಷದ ಅವಧಿಗೆ ಸದಸ್ಯರಾಗಿ ಜಿಲ್ಲೆಯಿಂದ ಸಂಕೇತ್ ಪೂವಯ್ಯ ಅವರನ್ನು ನೇಮಕ ಮಾಡಿ ರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಪ್ಯಾರಿಸ್ ಜು.27 NEWS DESK : ಕ್ರಾಂತಿಯ ತೊಟ್ಟಿಲು ಎಂದು ಖ್ಯಾತಿಯನ್ನು ಹೊಂದಿರುವ ಪ್ಯಾರಿಸ್ ನಗರ 33ನೇ ಒಲಿಂಪಿಕ್ಸ್ 2024 ಉದ್ಘಾಟನಾ ಸಮಾರಂಭಕ್ಕೆ ಸಾಕ್ಷಿಯಾಯಿತು. ಒಲಿಂಪಿಕ್ಸ್ ಗೇಮ್ ಉದ್ಘಾಟನಾ ಸಮಾರಂಭವು ‘ಪರೇಡ್ ಆಫ್ ದಿ ನೇಷನ್ಸ್’ ನೊಂದಿಗೆ ಪ್ರಾರಂಭವಾಯಿತು, ಇದರಲ್ಲಿ 205 ದೇಶಗಳ ಕ್ರೀಡಾಪಟುಗಳು ಸಾಂಪ್ರದಾಯಿಕ ಸೀನ್ ನದಿಯಲ್ಲಿ ದೋಣಿಗಳಲ್ಲಿ ಪ್ರಯಾಣಿಸಿದರು. ಸಾಮಾನ್ಯವಾಗಿ ಸ್ಟೇಡಿಯಂ ಒಳಗೆ ನಡೆಯುವ ಕ್ರೀಡಾಪಟುಗಳ ಮೆರವಣಿಗೆಯು ಈ ಸಲ ಬೋಟ್ಗಳಲ್ಲಿ ಆಯೋಜಿಸಿ ಪ್ರೇಕ್ಷರನ್ನು ಭವ್ಯತೆ ಮತ್ತು ಸಾಂಕೇತಿಕವಾಗಿ ಆಕರ್ಷಿಸಿತು. 1900 ಮತ್ತು 1924 ರ ನಂತರ ಪ್ಯಾರಿಸ್ ಒಲಿಂಪಿಕ್ಸ್ಗೆ ಆತಿಥ್ಯ ವಹಿಸುತ್ತಿರುವುದು ಇದು ಮೂರನೇ ಬಾರಿ. ಆರು ಕಿಲೋಮೀಟರ್ ಪರೇಡ್ ಆಸ್ರ್ಲಿಟ್ಜ್ ಸೇತುವೆಯಿಂದ ಪ್ರಾರಂಭವಾಯಿತು. 85 ದೋಣಿಗಳಲ್ಲಿ 205 ರಾಷ್ಟ್ರಗಳ 6,800 ಕ್ಕೂ ಹೆಚ್ಚು ಕ್ರೀಡಾಪಟುಗಳು ಮತ್ತು ಒಂದು ನಿರಾಶ್ರಿತರ ಒಲಿಂಪಿಕ್ ತಂಡವನ್ನು ಹೊತ್ತೊಯ್ದವು, ಭಾರತದಿಂದ ಎರಡು ಬಾರಿ ಒಲಂಪಿಕ್ ಪದಕ ವಿಜೇತೆ ಪಿವಿ ಸಿಂಧು ಮತ್ತು ಟೇಬಲ್ ಟೆನ್ನಿಸ್ ದಂತಕತೆ ಎ ಶರತ್ ಕಮಲ್ ಭಾರತದ…
ಮಡಿಕೇರಿ ಜು.27 NEWS DESK : 25ನೇ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಕೊಡಗು ಮಾಜಿ ಸೈನಿಕರ ಸಂಘ ಮತ್ತು ಮಡಿಕೇರಿ ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ಮಡಿಕೇರಿ ನಗರಸಭೆಯ ಬಳಿ ಇರುವ ಯುದ್ಧ ಸ್ಮಾರಕ ಮತ್ತು ಜನರಲ್ ತಿಮ್ಮಯ್ಯ ಮ್ಯೂಸಿಯಂ ಯುದ್ಧ ಸ್ಮಾರಕದಲ್ಲಿ ಪುಷ್ಪಗುಚ್ಚವಿರಿಸಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಭಾರತಿಯ ಯೋಧರಿಗೆ ನಮನ ಸಲ್ಲಿಸಲಾಯಿತು. ಮೇಜರ್ ಚಿಂಗಪ್ಪನವರು ಕಾರ್ಗಿಲ್ ಯುದ್ಧದ ಭಾರತೀಯ ಯೋಧರ ತ್ಯಾಗದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು.
NEWS DESK *ಶ್ರೀ ಚಾಮುಂಡೇಶ್ವರಿ ಜನ್ಮೋತ್ಸವ* *ಜುಲೈ 27 ರಂದು ಇಂದು ಶನಿವಾರ ಆಷಾಢ ಕೃಷ್ಣ ಸಪ್ತಮಿ ರೇವತಿ ನಕ್ಷತ್ರದ ದಿನ ಜಗನ್ಮಾತೆ ಮೈಸೂರು ಶ್ರೀ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಉತ್ಸವ* ಶ್ರೀ ಚಾಮುಂಡೇಶ್ವರಿ ಪೌರಾಣಿಕ ಹಿನ್ನಲೆಯುಳ್ಳ ದೇವತೆಯಾಗಿದ್ದು, ‘ದೇವಿ ಮಹಾತ್ಮೆ’ ಪುರಾಣದ ಪ್ರಮುಖ ದೇವತೆಯಾಗಿದ್ದಾಳೆ. ಪೌರಾಣಿಕ ಹಿನ್ನೆಲೆಯ ಈ ಶಕ್ತಿ ದೇವತೆ ಬೆಟ್ಟದ ಮೇಲೆ ವಾಸವಾಗಿದ್ದ ಮಹಿಷಾಸುರನನ್ನು ವಧಿಸಿದಳೆಂಬ ಕಥೆ ‘ದೇವಿ ಮಹಾತ್ಮೆ’ ಯಲ್ಲಿ ವರ್ಣಿತವಾಗಿದೆ. ಶ್ರೀ ಚಾಮುಂಡೇಶ್ವರಿಯಿಂದಲೇ ಈ ಬೆಟ್ಟಕ್ಕೆ ಚಾಮುಂಡಿಬೆಟ್ಟ ವೆಂಬ ಹೆಸರು ಬಂದಿದೆ. ಸ್ಕಂದ ಪುರಾಣ ಮತ್ತಿತರ ಪ್ರಾಚೀನ ಗ್ರಂಥಗಳು ಎಂಟು ಬೆಟ್ಟಗಳಿಂದ ಸುತ್ತುವರಿದ ತ್ರಿಮುಕುಟ ಕ್ಷೇತ್ರ ವೆಂಬ ಪವಿತ್ರ ಕ್ಷೇತ್ರವನ್ನು ಉಲ್ಲೇಖಿಸುತ್ತದೆ. ಆದರ ಪಶ್ಚಿಮ ಭಾಗದಲ್ಲಿರುವ ಚಾಮುಂಡಿಬೆಟ್ಟವು ಎಂಟು ಬೆಟ್ಟಗಳ ಪೈಕಿ ಒಂದಾಗಿದೆ. ಚಾಮುಂಡಿಬೆಟ್ಟದಲ್ಲಿರುವ ಶ್ರೀ ಮಹಾಬಲೇಶ್ವರ ದೇವಸ್ಥಾನವು ಅತ್ಯಂತ ಪ್ರಾಚೀನವಾದುದು. ಹಿಂದೆ ಬೆಟ್ಟವನ್ನು ಮಹಾಬಲಾದ್ರಿ ಎಂದೂ ಸಹ ಕರೆಯಲಾಗುತ್ತಿತ್ತು. ಹಿಂದೆ ಚಿಕ್ಕದೊಂದು ದೇವಸ್ಥಾನವಿದ್ದು, ಕ್ರಮೇಣ ಅಭಿವೃದ್ಧಿ ಹೊಂದಿ, ಹೆಚ್ಚಿನ ಪ್ರಾಮುಖ್ಯತೆ ಗಳಿಸಿ, ಶ್ರೀ…
ಮಡಿಕೇರಿ ಜು.27 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ತ್ರೈಮಾಸಿಕ ‘ಕೊಡವೋಲೆ’ ಸಂಚಿಕೆಯನ್ನು ಸಾಹಿತಿ ಕಲಾವಿದರಿಗೆ ಅವಕಾಶ ನೀಡುವ ಸಲುವಾಗಿ ಪ್ರಕಟಿಸಲಾಗುತ್ತಿದೆ. ಈಗಾಗಲೇ ಹಲವಾರು ಸಂಚಿಕೆ ಬಿಡುಗಡೆಯಾಗಿದೆ. ಆದ್ದರಿಂದ ಎಲ್ಲಿಯೂ ಪ್ರಕಟವಾಗದ ತಮ್ಮ ಸ್ವಂತ ರಚನೆಯ ಕೊಡವ ಭಾಷೆಯಲ್ಲಿ ರಚಿಸಿದ ಕಥೆ, ಕವನ, ಚುಟುಕ, ವೈಚಾರಿಕ ಲೇಖನ, ನಗೆಹನಿ, ಪ್ರಬಂಧ, ಸಂಶೋಧನಾ ಲೇಖನಗಳನ್ನು ಇ-ಮೇಲ್ (kodava.acadamy@gmail.com) ಅಥವಾ ನುಡಿ ಫಾಂಟ್ನಲ್ಲಿ ಟೈಪ್ ಮಾಡಿ ಇಲ್ಲವೆ ಕೈ ಬರಹದಲ್ಲಿ ಅಚ್ಚುಕಟ್ಟಾಗಿ ಬರೆದು ದಿನಾಂಕ 31.08.2024ರ ಒಳಗಾಗಿ ಅಧ್ಯಕ್ಷರು/ರಿಜಿಸ್ಟ್ರಾರ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಮ್ಯಾನ್ಸ್ ಕಾಂಪೌ0ಡ್, ಮಡಿಕೇರಿ-571201 ಈ ಕಚೇರಿಗೆ ತಲುಪಿಸಲು ಕೋರಲಾಗಿದೆ. ಅರ್ಹವಾದುದ್ದನ್ನು ಮುಂದಿನ ‘ಕೊಡವೋಲೆ’ ಸಂಚಿಕೆಯಲ್ಲಿ ಪ್ರಕಟಿಸಲಾಗುವುದು. ಬರಹಗಾರರು ಬರೆದು ಕಳುಹಿಸುವಾಗ ಹೆಸರು ಮತ್ತು ಪೂರ್ಣ ವಿಳಾಸ ನಮೂದಿಸಬೇಕು ಮತ್ತು ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಬ್ಯಾಂಕ್ ಖಾತೆಯ ವಿವರವುಳ್ಳ ಪಾಸ್ಬುಕ್ನ ಜೆರಾಕ್ಸ್ ಪ್ರತಿಯನ್ನು ನೀಡಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ಕಚೇರಿ ದೂರವಾಣಿ 08272-229074…






