ಮಡಿಕೇರಿ ಜು.26 NEWS DESK : ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಜು.29 ರಂದು ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿಯಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಅಂದು 10.30 ಗಂಟೆಗೆ ಮಾನವ ಸರಪಳಿ ನಿರ್ಮಿಸಿ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ವಿರೋಧಿಸಿ ಹಕ್ಕೊತ್ತಾಯ ಮಂಡಿಸಲಾಗುವುದು. ಕೊಡವ ಲ್ಯಾಂಡ್ ನ ಸಂರಕ್ಷಣೆಗಾಗಿ ಸರ್ವ ಕೊಡವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಅವರು ಮನವಿ ಮಾಡಿದ್ದಾರೆ. ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯ್ದೆ 79ಎ ಮತ್ತು 79ಬಿಯನ್ನು ದುರ್ಲಾಭಪಡಿಸಿಕೊಂಡು ಕೃಷಿ ಜಮೀನು, ಭತ್ತದ ಗದ್ದೆಗಳು ಮತ್ತು ಕಾಫಿ ತೋಟಗಳನ್ನು ಪರಿವರ್ತನೆ ಮಾಡಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲೂ ಆಂಧ್ರದ ಹಣ ಬಳಕೆಯಾಗುತ್ತಿದ್ದು, ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯಾಗುತ್ತಿದೆ. ಬೆಂಗಳೂರು, ತಿರುವನಂತಪುರ, ಚೆನ್ನೈ ಹೈದರಬಾದ್ ಸೇರಿದಂತೆ ದೇಶದ ವಿವಿಧೆಡೆಯ ಭೂಮಾಫಿಯ ಮತ್ತು…
ಲೇಖಕ: admin
ವಿರಾಜಪೇಟೆ ಜು.26 NEWS DESK : ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿರುವ ಘಟನೆ ವಿರಾಜಪೇಟೆ ಬಿಳುಗುಂದ ಗ್ರಾಮದಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಬಿಳುಗುಂದ ಗ್ರಾ.ಪಂ ವ್ಯಾಪ್ತಿಯ ಬಿಳುಗುಂದ ಗ್ರಾಮ ಮೇಕೇರಿ ಹರಿಜನ ಕಾಲೋನಿಯ ನಿವಾಸಿ ಕಾಂತಿ ಎಂಬವರ ಮನೆಯ ಒಂದು ಭಾಗ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ : ಕಿಶೋರ್ ಕುಮಾರ್ ಶೆಟ್ಟಿ
ಕುಶಾಲನಗರ ಜು.26 NEWS DESK : ಕುಶಾಲನಗರ ತಾಲೂಕು ಗುಡ್ಡೆ ಹೊಸೂರಿನಲ್ಲಿ ಶ್ರೀ ಧರ್ಮಸ್ಥಳ ಸಿರಿ ಮಿಲ್ಲೆಟ್ ಹೌಸ್ ಕೇಂದ್ರದವನ್ನು ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಎಂ.ಎನ್.ಚಂದ್ರಮೋಹನ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಆಹಾರ ಪದ್ಧತಿ ಬದಲಾವಣೆ ಮೂಲಕ ಆರೋಗ್ಯ ಸ್ಥಿತಿಯಲ್ಲಿ ಏರುಪೇರು ಉಂಟಾಗುವ ಸಾಧ್ಯತೆಗಳು ಅಧಿಕವಾಗಿದೆ. ಪ್ರತಿಯೊಬ್ಬರು ಆಹಾರ ವಸ್ತುಗಳ ಗುಣಮಟ್ಟಗಳ ಬಗ್ಗೆ ಎಚ್ಚರಿಕೆ ವಹಿಸಬೇಕಾಗಿದೆ ಎಂದರು. ಉತ್ತಮ ಆರೋಗ್ಯ ಮೂಲಕ ಸ್ವಾಸ್ಥ್ಯ ಸಮಾಜ ಕಾಣಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂರ್ಭ ನಡೆದ ಸರಳ ಕರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನರ್ದೇಶಕಿ ಲೀಲಾವತಿ ಅವರು ದೀಪ ಪ್ರಜ್ವಲನೆ ಮಾಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ದೀಪ ಪ್ರಜ್ವಲನೆ ಮಾಡಿ ಮಾತನಾಡಿದರು. ಧರ್ಮಸ್ಥಳ ಸಿರಿ ಮಿಲ್ಲೆಟ್ ಯೋಜನಾಧಿಕಾರಿ ಯು.ಎಂ.ರಮೇಶ್, ಸಿರಿ ಆಹಾರ ಧಾನ್ಯಗಳ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು. ಮುಖ್ಯ ಅತಿಥಿಗಳಾಗಿ…
ಮಡಿಕೇರಿ ಜು.26 NEWS DESK : ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೖತ್ತರಾದ ನಾಲ್ವರು ಯೋಧರಿಗೆ ಸನ್ಮಾನದ ಗೌರವ ಸಲ್ಲಿಸುವ ಮೂಲಕ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ಕಾಗಿ೯ಲ್ ವಿಜಯೋತ್ಸವ ಆಚರಿಸಲಾಯಿತು. ನಗರದ ರೋಟರಿ ಸಭಾಂಗಣದಲ್ಲಿ ಆಯೋಜಿತ ಕಾಗಿ೯ಲ್ ವಿಜಯ ದಿನದ ಸಮಾರಂಭದಲ್ಲಿ ಮಾಜಿ ಸೇನಾಧಿಕಾರಿಗಳಾದ ಹಾನರರಿ ಕ್ಯಾಪ್ನನ್ ಜಿ.ಎಸ್.ರಾಜಾರಾಮ್, ಎನ್.ಚಂದ್ರನ್, ಸಿ.ಪ್ರಮೋದ್ ಕುಮಾರ್, ಬಾಬು ಪ್ರಸಾದ್ ರೈ ಅವರನ್ನು ರೋಟರಿ ವುಡ್ಸ್ ಅಧ್ಯಕ್ಷ ಹರೀಶ್ ಕಿಗ್ಗಾಲು, ಕಾಯ೯ದಶಿ೯ ಕಿರಣ್ ಕುಂದರ್, ವಲಯ ಸೇನಾನಿ ಅನಿತಾ ಪೂವಯ್ಯ, ಅರಣ್ಯಾಧಿಕಾರಿ ಮಯೂರ್, ರೋಟರಿ ಪ್ರಮುಖರಾದ ಬಿ,ಜಿ, ಅನಂತಶಯನ, ಅನಿಲ್ ಹೆಚ್,ಟಿ, ಎಸ್ ಎಸ್ ಸಂಪತ್ ಕುಮಾರ್, ಸನ್ಮಾನಿಸಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿ.ಎಸ್.ರಾಜಾರಾಮ್, ಕಾಗಿ೯ಲ್ ಪ್ರದೇಶದಲ್ಲಿ ದೇಶರಕ್ಷಣೆಗಾಗಿ ಕತ೯ವ್ಯ ಸಲ್ಲಿಸುವುದು ಜೀವನದ ಮಹೋನ್ನತ ಅನುಭವವಾಗಿದೆ, ಕಾಗಿ೯ಲ್ ಸಮರದ ಬಳಿಯ ದೇಶದ ರಕ್ಷಣಾ ಇಲಾಖೆಯು ಕಾಗಿ೯ಲ್ ಗೆ ಅಗತ್ಯವಾಗಿದ್ದ ಅತ್ಯಾಧುನಿಕ ರಕ್ಷಣಾ ಉಪಕರಣ 445 ಕಿ.ಮೀ. ವಿದ್ಯುತ್ ಬೇಲಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಿತ್ತು…
ಮಡಿಕೇರಿ ಜು.26 NEWS DESK : ಯಡವನಾಡು ಗ್ರಾಮದ ಯಾಲದಾಳು ನಿತಿನ್ ಅವರ ತೋಟದಲ್ಲಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಣೆ ಮಾಡಲಾಗಿದೆ. ಉರಗ ತಜ್ಞ ಬಾರನ ಶೇಖರ್ ಹಾವನ್ನು ರಕ್ಷಿಸಿ ಅರಣ್ಯ ಇಲಾಖೆಯ ಡಿಆರ್ಎಫ್ ಚಂದ್ರಶೇಖರ್ ಹಾಗೂ ಸಿಬ್ಬಂದಿ ಭೀಮಣ್ಣ ಅವರ ನೇತೃತ್ವದಲ್ಲಿ ಯಡವನಾಡು ಮೀಸಲು ಅರಣ್ಯಕ್ಕೆ ಬಿಟ್ಟರು.
ವಿರಾಜಪೇಟೆ ಜು.26 NEWS DESK : ಕೆದಮುಳ್ಳೂರು ಗ್ರಾಮದ ತೆರ್ಮೆಮೊಟ್ಟೆ ನಿವಾಸಿ ವೃದ್ದೆ ಕಮಲ ಅವರ ವಾಸದ ಮನೆ ಕುಸಿದು ಬಿದ್ದು ವಾಸಿಸಲು ಮನೆ ಇಲ್ಲದ ಪರಿಸ್ಥಿತಿ ಎದುರಾಗಿತ್ತು. ಕುಟುಂಬಸ್ಥರಿAದ ವಿಚಾರ ತಿಳಿದುಕೊಂಡ ವಿರಾಜಪೇಟೆ ತಾಲೂಕು ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ.ಗಣೇಶ್ ಮನೆ ನಿರ್ಮಿಸಿಕೊಡುವ ಭರವಸೆ ನೀಡಿದಂತೆ ಮನೆ ನಿರ್ಮಾಣ ಮಾಡಿಕೊಟ್ಟಿದ್ದರು. ಗಣೇಶ್ ಅವರ ಮಾನವೀಯ ಕಾರ್ಯಕ್ಕೆ ಮನಸೋತ ಕೆದಮುಳ್ಳೂರು ಗ್ರಾಮದ ತೆರ್ಮೆಮೊಟ್ಟೆ ನಿವಾಸಿಗಳು ಹಾಗೂ ಕುಟುಂಬಸ್ಥರು ಗಣೇಶ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಕೆದಮುಳ್ಳೂರು ಗ್ರಾ.ಪಂ ಉಪಾಧ್ಯಕ್ಷ ಪರಮೇಶ್ ಮಾತನಾಡಿ ಮನೆ ಕುಸಿದು ಬಿದ್ದ ಸಂದರ್ಭ ಗ್ರಾಮಸ್ಥರು ಸೇರಿ ಅವರಿಗೆ ಸಹಾಯ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಅವರಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಪಂಚಾಯಿತಿ ವತಿಯಿಂದ ಮಾಡಿಕೊಡಲಾಗುತ್ತದೆ ಎಂದು ಭರವಸೆ ನೀಡಿದರಲ್ಲದೆ, ಮಾನವೀಯ ನೆಲೆಗಟ್ಟಿನಲ್ಲಿ ಬಡಕುಟುಂಬಕ್ಕೆ ಸಹಾಯ ಹಸ್ತ ಚಾಚಿ ಕುಟುಂಬಕ್ಕೆ ಆಸರೆಯಾಗಿದ್ದು ಮೆಚ್ಚುವ ಕಾರ್ಯ ಎಂದು ಶ್ಲಾಘನೆ ವ್ಯಕ್ತಪಡಿಸಿದರು. ಸ್ಥಳೀಯರಾದ ಗೌಡುದಾರೆ ಚೋಟು ಬಿದ್ದಪ್ಪ ಮಾತನಾಡಿ, ಸ್ಥಳೀಯ ಪಂಚಾಯಿತಿ…
ಮಡಿಕೇರಿ ಜು.26 NEWS DESK : ವಿರಾಜಪೇಟೆ ತಾಲ್ಲೂಕಿನ ಬೈರಾಂಬಾಡಿ ಶಾಲೆಯ ಕಟ್ಟಡದ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿಯಾಗಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್ ಭೇಟಿ ನೀಡಿ ಪರಿಶೀಲಿಸಿದರು.
ಮಡಿಕೇರಿ ಜು.26 NEWS DESK : ಕೊಡಗು ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು. ನಗರದ ಜನರಲ್ ತಿಮ್ಮಯ್ಯ ಮ್ಯೂಸಿಯಂ ಆವರಣದಲ್ಲಿರುವ ಅಮರ್ ಜವಾನ್ ಸ್ಮಾರಕದಲ್ಲಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಹುತಾತ್ಮರಿಗೆ ಪುಪ್ಪನಮನ ಸಲ್ಲಿಸಿದರು. ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ರವಿಕಾಳಪ್ಪ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಜಿಲ್ಲಾ ವಕ್ತಾರ ಅರುಣ್ ಕುಮಾರ್, ಜಿಲ್ಲಾ ಉಪಾಧ್ಯಕ್ಷರು ಮನು ಮಂಜುನಾಥ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ಅನಿತಪೂವಯ್ಯ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವಿನೋದ್, ಪ್ರಸಾದ್ ಚಂಗಪ್ಪ, ಮಡಿಕೇರಿ ನಗರ ಯುವ ಮೋರ್ಚಾದ ಅಧ್ಯಕ್ಷ ಪಾಂಡಿರ ಪೂಣಚ್ಚ, ಪ್ರಧಾನ ಕಾರ್ಯದರ್ಶಿಗಳಾದ ಮನು, ವಿಘ್ನೇಶ್, ಗ್ರಾಮಾಂತರ ಮಂಡಲ ಅಧ್ಯಕ್ಷ ಚೇತನ್ ಬಂಗೇರ, ಪ್ರಧಾನ ಕಾರ್ಯದರ್ಶಿಗಳಾದ ದರ್ಶನ್, ಪ್ರವೀಣ್, ನಗರ ಓ ಬಿ ಸಿ ಮೋರ್ಚಾದ ಅಧ್ಯಕ್ಷ ಗಜೇಂದ್ರ (ಕುಶ), ಮಡಿಕೇರಿ ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್, ನಗರ ಸಭೆ ಸ್ಥಾಯಿ…
ಮಡಿಕೇರಿ ಜು.26 NEWS DESK : ಶನಿವಾರಸಂತೆ ಹೋಬಳಿಯ ಮಾಲಂಬಿ ಬಳಿ ಕುಶಾಲನಗರ- ಶನಿವಾರಸಂತೆ ರಸ್ತೆ ಬದಿಯಲ್ಲಿ ಬೃಹತ್ ಮರ ಬಿದ್ದು ವಾಹನ ಸಂಚಾರಕ್ಕೆ ವ್ಯತ್ಯಯವಾಗಿದೆ. ಅಗ್ನಿಶಾಮಕ ಅಧಿಕಾರಿಗಳು ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.
ಮಡಿಕೇರಿ ಜು.26 NEWS DESK : ಹೆಚ್ಚಿನ ಮಳೆಗೆ ಸೋಮವಾರಪೇಟೆ – ಶಾಂತಳ್ಳಿ ಮುಖ್ಯರಸ್ತೆಯ ಜೇಡಿಗುಂಡಿ ಬಳಿ ಬರೆ ಕುಸಿದು ಸಂಪೂರ್ಣ ರಸ್ತೆ ಮುಚ್ಚಿಹೋಗಿದ್ದು, ಜೆಸಿಬಿ ಗಳ ಮೂಲಕ ರಸ್ತೆ ತೆರವು ಕಾರ್ಯ ನಡೆದಿದೆ.






