ಲೇಖಕ: admin

ಮಡಿಕೇರಿ ಮಾ.11 NEWS DESK : ಅರ್ಬುದ ಕಾಯಿಲೆಯಿಂದ ಬಳಲುತ್ತಿರುವ ಅರೆಕಾಡಿನ ವಸಂತ ಎಂಬವರ ಚಿಕಿತ್ಸೆಗೆ ಮಾನವೀಯ ಸ್ನೇಹಿತರ ಒಕ್ಕೂಟದಿಂದ ಹತ್ತು ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡಲಾಯಿತು. ಒಕ್ಕೂಟದ ಅಡ್ಮಿನ್ ಹನೀಫ್ ಸೋನಾ ಅವರ ಮುಂದಾಳತ್ವದಲ್ಲಿ ಮಡಿಕೇರಿಯಲ್ಲಿ ನಡೆದ ಕಾರುಣ್ಯ ಕಾರ್ಯಕ್ರಮದಲ್ಲಿ ಒಕ್ಕೂಟದ ಪ್ರತಿನಿಧಿ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಎಚ್.ಟಿ ಅವರು ಫಲಾನುಭವಿಯ ಪತ್ನಿ ಶಿವರಂಜಿನಿ ಅವರಿಗೆ ಒಕ್ಕೂಟದ ವತಿಯಿಂದ ಹತ್ತು ಸಾವಿರ ಮೊತ್ತದ ಚೆಕ್ಕನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅನಿಲ್, ಮಾನವೀಯ ಸ್ನೇಹಿತರ ಒಕ್ಕೂಟವು ಸಂಕಷ್ಟದಲ್ಲಿರುವವರಿಗೆ ನೆರವು ನೀಡುವ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಬಗ್ಗೆ ತಿಳಿಸಿದರಲ್ಲದೆ, ಫಲಾನುಭವಿ ವಸಂತ್ ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಶುಭ ಹಾರೈಸಿದರು. ಒಕ್ಕೂಟದ ಪ್ರತಿನಿಧಿಗಳಾದ ಸುರೇಶ್ ಬಿಳಿಗೇರಿ, ಸಂತೋಷ್ ಕೆ. ಟಿ., ಒಕ್ಕೂಟದ ಮಾಜಿ ಪ್ರತಿನಿಧಿ ಪ್ರಭಾಕರ್ ನಾಪೋಕ್ಲು, ಪತ್ರಕರ್ತ ವಿಶ್ವಗುಡ್ಡೆ ಮನೆ ಮುಂತಾದವರು ಹಾಜರಿದ್ದರು.

Read More

ಗೋಣಿಕೊಪ್ಪ ಮಾ.11 NEWS DESK : ಮಹಿಳೆಯರು ಸ್ವಾವಲಂಬಿಗಳಾಗುವ ಮೂಲಕ ಸಮಾಜದಲ್ಲಿ ಆದರ್ಶದ ಬದುಕು ಕಟ್ಟಬೇಕು ಎಂದು ಸಮಾಜ ಸೇವಕಿ ಚಾಂದಿನಿ ಅರುಣ್ ಮಾಚಯ್ಯ ಕರೆ ನೀಡಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲ್ಲೂಕು ಕದಳಿ ವೇದಿಕೆ ಹಾಗೂ ಮಾಯಮುಡಿ ಗ್ರಾಮದ ಶ್ರೀ ಗಣೇಶ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸಂಯುಕ್ತಾಶ್ರಯದಲ್ಲಿ ಮಾಯಮುಡಿಯ ಅಂಗನವಾಡಿ ಆವರಣದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ದೇಶ ಸ್ವಾತಂತ್ರ್ಯ ಗಳಿಸಿ ಎಂಭತ್ತು ವರ್ಷಗಳಾಗುತ್ತಾ ಬಂದರೂ ಕೂಡ ಮಹಿಳೆ ಅಬಲೆಯಲ್ಲ – ಸಬಲಳು. ಸಮಾಜದ ನಾನಾ ಸ್ತರಗಳಲ್ಲಿ ಪುರುಷನಿಗಿಂತಲೂ ಒಂದು ಹೆಜ್ಜೆ ಮುಂದೆ ತನ್ನ ಶಕ್ತಿ, ಸಹನೆ, ಸಾಮರ್ಥ್ಯ ಗಳನ್ನು ಸಾಬೀತು ಪಡಿಸುತ್ತಿರುವ ದಿಟ್ಟ ಮಹಿಳೆ. ತೊಟ್ಟಿಲು ತೂಗುವ ಮಹಿಳೆಯ ಕೈ ಆಕಾಶದಲ್ಲಿ ವಿಮಾನ ಹಾರಿಸುವ, ಗಗನ ಯಾತ್ರೆ ನಡೆಸುವ ಮಹತ್ತರ ಪಾತ್ರಗಳಲ್ಲಿ ಮಂಚೂಣಿಯಲ್ಲಿದ್ದಾಳೆ ಎಂದರು. ಮತ್ತೋರ್ವ ಅತಿಥಿ ಟಾಟು ಮೊಣ್ಣಪ್ಪ ಮಾತನಾಡಿ, ಮಹಿಳೆಯರಿಲ್ಲದ ಕುಟುಂಬಗಳನ್ನು ಊಹಿಸಲು ಅಸಾಧ್ಯ. ಕುಟುಂಬದ ಬೆಳಕು…

Read More

ಮಡಿಕೇರಿ ಮಾ.11 NEWS DESK : ಕೊಡಗು ವಿಶ್ವವಿದ್ಯಾಲಯದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಸಾಯಿ ಹಾಕಿ ತರಬೇತಿ ಕೇಂದ್ರದ ಸಹಯೋಗದಲ್ಲಿ ಫಿಟ್ ಇಂಡಿಯಾ ಪರಿಕಲ್ಪನೆಯೊಂದಿಗೆ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಾಲಿಬಾಲ್ ಪಂದ್ಯಾವಳಿ ನಡೆಯಿತು. ಮಡಿಕೇರಿ ತಾಲೂಕಿನ ಐದು ಕಾಲೇಜುಗಳ ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ಪಂದ್ಯಾವಳಿಯಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ತಂಡವು ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆದುಕೊಂಡಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಾಯಿ ಹಾಕಿ ತರಬೇತಿ ಕೇಂದ್ರ ಮಡಿಕೇರಿಯ ತರಬೇತಿದಾರರು ಮತ್ತು ಉಸ್ತುವಾರಿಯಾದ ಮಿನಿ ಉನ್ನಿ ರಾಜ್ ಭಾಗವಹಿಸಿದ್ದರು.  ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಮೇಜರ್ ರಾಘವ ಬಿ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ಪ್ರೊ. ತಿಪ್ಪೇಸ್ವಾಮಿ, ಭಾರತ ಹಾಕಿ ತಂಡದ ಕ್ಯಾಂಪರ್ ಅಕ್ಷತಾ, ಕಿಲೋ ಇಂಡಿಯಾ ಹಾಕಿ ತಂಡದ ಆಟಗಾರ್ತಿಯರಾದ ಸೀಮಾ ಆನಂದ್ ಪವರ್ ಹಾಗೂ ಗಧೇಲಾ ಗಾಯತ್ರಿ ಉಪಸ್ಥಿತರಿದ್ದರು. ವರದಿ : ಅಶೋಕ್ ಮಡಿಕೇರಿ 

Read More

ಮೈಸೂರು, ಮಾ.11 NEWS DESK : ದೇಶದ ಆರ್ಥಿಕತೆ ಕೊಡುಗೆಗಳನ್ನು ನೀಡಲು ಪ್ರಮುಖ ಪಾತ್ರ ವಹಿಸುವ ನಗರಗಳ ಅಭಿವೃದ್ಧಿಗೆ ಒತ್ತು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಈಗ ಮೈಸೂರಿಗೂ ವಿಶೇಷ ಕೊಡುಗೆ ನೀಡಲು ನಿರ್ಧರಿಸಿದೆ. ಮೈಸೂರನ್ನು “ನಗರ ಆರ್ಥಿಕ ವಲಯ” ಯೋಜನೆಗೆ ಸೇರ್ಪಡೆಗೊಳಿಸಲು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಸಲ್ಲಸಿದ್ದಾರೆ. ನವದೆಹಲಿಯಲ್ಲಿ ವಿತ್ತ ಸಚಿವರನ್ನು ಭೇಟಿ ಮಾಡಿದ ಸಂಸದ ಯದುವೀರ್‌ ಒಡೆಯರ್‌, ಬಜೆಟ್‌ನಲ್ಲಿ ಘೋಷಣೆ ಮಾಡಿರುವ “ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ನಗರವನ್ನೂ ಸೇರ್ಪಡೆ ಮಾಡಬೇಕು. ಸಾಂಸ್ಕೃತಿಕ ರಾಜಧಾನಿಯಾಗಿರುವ ಮೈಸೂರು ವಿಶ್ವಮಟ್ಟದಲ್ಲಿ ಖ್ಯಾತಿ ಪಡೆದುಕೊಂಡಿದೆ. ಅದನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಈ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. :: ಹಣಕಾಸು ಸಚಿವರಿಗೆ ಮನವಿ ಸಲ್ಲಿಕೆ ::  ಈ ಕುರಿತು ಮಾಹಿತಿ ನೀಡಿರುವ ಸಂಸದ ಯದುವೀರ್‌ ಒಡೆಯರ್‌, ನಗರ ಆರ್ಥಿಕ ವಲಯಕ್ಕೆ ಮೈಸೂರನ್ನು ಸೇರಿಸಬೇಕು ಎಂದು ಹಣಕಾಸು…

Read More

ಮಡಿಕೇರಿ ಮಾ.11 NEWS DESK : ಜಿಲ್ಲಾಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರಸ್ತಾಪವಿದ್ದು, ಇದನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಸಾಗುತ್ತಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ (ಜಿಲ್ಲಾಸ್ಪತ್ರೆ) ಡೀನ್ ಮತ್ತು ನಿರ್ದೇಶಕ ಡಾ. ಲೋಕೇಶ್ ಹೇಳಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಸ್ಪತ್ರೆ ಡೀನ್ ಅವರೊಂದಿಗೆ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಚರ್ಚಿಸಲಾದ ವಿಷಯಗಳ ಕುರಿತ ಪ್ರಗತಿ ಹಾಗೂ ಅನುಷ್ಠಾನÀ ಕುರಿತು ಮಾಹಿತಿ ಪಡೆಯುವ ನಿಟ್ಟಿನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ನೇತೃತ್ವದಲ್ಲಿ ಪತ್ರಕರ್ತರು ಜಿಲ್ಲಾಸ್ಪತ್ರೆಗೆ ತೆರಳಿ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿ, ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು. ಈ ಸಂದರ್ಭ ಪತ್ರಕರ್ತರೊಂದಿಗೆ ಮಾತನಾಡಿದ ಡಾ. ಲೋಕೇಶ್, ಪ್ರಸ್ತುತ ಜಿಲ್ಲಾಸ್ಪತ್ರೆ ವೇಗದಲ್ಲಿ ಅಭಿವೃದ್ಧಿ ಕಾಣುತ್ತಿದೆ. ವೈದ್ಯರ ಕೊರತೆಯಿದ್ದರೂ ಇರುವ ವೈದ್ಯರಿಂದ ರೋಗಿಗಳಿಗೆ ಅಗತ್ಯ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ರೇಡಿಯೋಲಾಜಿಸ್ಟ್ ಹೊರತುಪಡಿಸಿ ಬೇರೆಲ್ಲ ವಿಭಾಗದಲ್ಲೂ ವೈದ್ಯರಿದ್ದು, ಹುದ್ದೆ ಭರ್ತಿಗೆ ಆಹ್ವಾನಿಸಲಾಗಿದೆ.…

Read More

ಮಡಿಕೇರಿ ಮಾ.11 NEWS DESK : ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಜಾಗೃತಿ ಮೂಡಿಸಿದರು.  ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರ ಇರುವಂತೆ ಸಲಹೆ ನೀಡಿದರು.

Read More

ಮಡಿಕೇರಿ ಮಾ.11 NEWS DESK : ರಾಜಾಸೀಟು ಅಭಿವೃದ್ಧಿ ಮತ್ತು ಪ್ರವಾಸಿಗರ ಅನುಕೂಲಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜಾಸೀಟು ಬಳಿಯ ಕೂರ್ಗ್ ವಿಲೇಜ್ ನ್ನು ಸದುಪಯೋಗಪಡಿಸಿಕೊಳ್ಳುವ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಟಿಕೆಟ್ ಕೌಂಟರ್ ನಿರ್ಮಾಣ ಹಾಗೂ ಮತ್ತಿತರ ಸೌಲಭ್ಯ ಸಂಬಂಧ ಅಗತ್ಯ ಕ್ರಮವಹಿಸುವಂತೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಮಾಹಿತಿ ಕೇಂದ್ರ, ಪ್ರವಾಸಿ ಮಿತ್ರ, ಆಹಾರ ಕೇಂದ್ರ, ಸಿಸಿಟಿವಿ ಕ್ಯಾಮರಾ ಅಳವಡಿಸುವುದು, ಸೋಲಾರ್ ಲೈಟ್ ಅಳವಡಿಕೆ, ವಾಹನ ನಿಲುಗಡೆಗೆ ವ್ಯವಸ್ಥೆ ಮಾಡುವುದು, ಪುಟಾಣಿ ರೈಲು ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರು ಮುಂದಾಗಬೇಕು ಎಂದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ರಾಜಾಸೀಟು ಅಭಿವೃದ್ಧಿ ಸಂಬಂಧ ನಡೆದ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ,…

Read More

ಮಡಿಕೇರಿ NEWS DESK ಮಾ.11 : ಪ್ರತಿಷ್ಠಿತ ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನ ಕುಶಾಲಪ್ಪ ಅವರನ್ನು ಬಲ್ಲಮಾವಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಡಿಕೇರಿ ಕುಟುಂಬದಸ್ಥರ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಕೊಡಗಿನಲ್ಲಿ ಅವರು ಮಾಡುತ್ತಿರುವ ಉತ್ತಮ ಸಮಾಜ ಸೇವೆ, ಉದ್ಯಮ ಕ್ಷೇತ್ರದಲ್ಲಿನ ಸಾಧನೆಯನ್ನು ಇದೇ ಸಂದರ್ಭ ಕೊಂಡಾಡಲಾಯಿತು. ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ದುಬೈನಲ್ಲಿ ಸ್ವೀಕರಿಸಿ ಹಿಂದಿರುಗಿದ ಬೆನ್ನಲ್ಲೇ ಸಂಭ್ರಮದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕುಟುಂಬದ ಹಿರಿಯರಾದ ಎಡಿಕೇರಿ ಸೀತಾರಾಮ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಿತಿ ಪ್ರಮುಖರಾದ ಎಡಿಕೇರಿ ದೇವಯ್ಯ, ಎಡಿಕೇರಿ ಉತ್ತಪ್ಪ, ಎಡಿಕೇರಿ ಚಂದ್ರಶೇಖರ ಸೇರಿದಂತೆ ಕುಟುಂಬದ ಎಲ್ಲಾ ಸದಸ್ಯರು, ಗುರು, ಹಿರಿಯರು ಮತ್ತು ಬಂಧುಬಳಗ ಈ ಸಂದರ್ಭ ಉಪಸ್ಥಿತರಿದ್ದರು. ಪ್ರಸನ್ನ ಅವರನ್ನು ಅಭಿನಂದಿಸಿ ಮಾತನಾಡಿ ಅವರ ಸೇವೆ ಮತ್ತು ಸಾಧನೆಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಹಾಗೂ ಮುಂದಿನ ಭವಿಷ್ಯ ಇನ್ನಷ್ಟು ಉಜ್ವಲವಾಗಿರಲಿ ಎಂದು ಹಾರೈಸಿದರು.  ಕುಟುಂಬದ ಏಕತೆ, ಸಂಸ್ಕೃತಿ ಮತ್ತು ಸಾಧಕರಿಗೆ ಗೌರವ ಸಲ್ಲಿಸುವ ಸಲುವಾಗಿ ನಡೆದ ಈ ಕಾರ್ಯಕ್ರಮದಲ್ಲಿ 60…

Read More

ಮಡಿಕೇರಿ NEWS DESK ಮಾ.11 : ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನದ ಉದ್ಘಾಟನಾ ಸಮಾರಂಭ ಮಾ.15 ರಂದು ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇರಳ ಗೌಡ ಸಮಾಜದ ಅಧ್ಯಕ್ಷ ಅಯ್ಯಂಡ್ರ ರಾಘವಯ್ಯ ಅವರು ಭಾನುವಾರ ನಡೆಯುವ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ದಾನಿಗಳು, ಸಮಾಜದ ಬಾಂಧವರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸಹಕಾರದಿಂದ ನೂತನ ಸಮುದಾಯ ಭವನವನ್ನು ಎಲ್ಲಾ ಮೂಲಭೂತ ಸೌಲಭ್ಯಗಳೊಂದಿಗೆ ನಿರ್ಮಿಸಲಾಗಿದೆ. ನೂತನ ಸಮುದಾಯ ಭವನವನ್ನು ಬೆಳಿಗ್ಗೆ 10 ಗಂಟೆಗೆ ವಿಧಾನಸಭೆಯ ಮಾಜಿ ಅಧ್ಯಕ್ಷ ಕೊಂಬಾರನ ಜಿ.ಬೋಪಯ್ಯ ಅವರು ಉದ್ಘಾಟಿಸಲಿದ್ದಾರೆ. ಚೇರಳ ಗೌಡ ಸಮಾಜದ ಅಧ್ಯಕ್ಷ ಅಯ್ಯಂಡ್ರ ಸಿ.ರಾಘವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮಾಜಿ ಸಚಿವ ಮಂಡೇಪoಡ ಪಿ.ಅಪ್ಪಚ್ಚುರಂಜನ್, ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಮಂಡೇಪoಡ ಪಿ.ಸುನಿಲ್ ಸುಬ್ರಮಣಿ ಪಾಲ್ಗೊಳ್ಳಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕೊಡಗು ಗೌಡ ಸಮಾಜಗಳ…

Read More

ಬೆಂಗಳೂರು NEWS DESK ಮಾ.10: ಆನೆ-ಮಾನವ ಸಂಘರ್ಷ ನಿಯಂತ್ರಿಸಲು 2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲು ಹಳಿ ತಡೆಗೋಡೆ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನ ಪರಿಷತ್ತಿಗಿಂದು ತಿಳಿಸಿದ್ದಾರೆ. ಶೂನ್ಯವೇಳೆಯಲ್ಲಿ ಸುಜಾ ಕುಶಾಲಪ್ಪ ಅವರ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಫೆ.28ರಂದು ಕಾಡಿನಂಚಿನ ನಿವಾಸಿ 17 ವರ್ಷದ ಬಾಲಕಿ ಆನೆ ದಾಳಿಯಿಂದ ಮೃತಪಟ್ಟಿದ್ದರೆ, ಮಾ.9ರಂದು ಕಾಡಿನೊಳಗೇ ವಾಸಿಸುತ್ತಿದ್ದ 55 ವರ್ಷದ ಬುಡಕಟ್ಟು ಮಹಿಳೆ ಸಾವಿಗೀಡಾಗಿದ್ದಾರೆ ಇದು ಅತ್ಯಂತ ನೋವಿನ ಸಂಗತಿ ಎಂದರು. ಜೀವ ಅತ್ಯಂತ ಅಮೂಲ್ಯವಾದ್ದು, ಇದಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಅರಣ್ಯ ಇಲಾಖೆ ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆನೆ ನಿಗ್ರಹ ಕಂದಕ, ಸೌರ ವಿದ್ಯುತ್ ಬೇಲಿ ನಿರ್ವಹಣೆ ಮಾಡಲಾಗುತ್ತಿದೆ. 2 ಆನೆ ಕಾರ್ಯಪಡೆ ಕಾರ್ಯನಿರ್ವಹಿಸುತ್ತಿದೆ. ಈಗ 2 ಪುಂಡಾನೆಗಳ ಸೆರೆಗೆ ಮುಖ್ಯ ವನ್ಯಜೀವಿ ಪರಿಪಾಲಕರು ಆದೇಶ…

Read More