ಲೇಖಕ: admin

ಸುಂಟಿಕೊಪ್ಪ ಜ.22 NEWS DESK : ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬವು ನಡೆಯಿತು. ಸುಂಟಿಕೊಪ್ಪ ಕ್ಲಸ್ಟರ್ ಕೇಂದ್ರದ ವ್ಯಾಪ್ತಿಯ ಸರಕಾರಿ ಮಾದರಿ ಕಲಿಕಾ ಹಬ್ಬ ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಭಾಷೆ ಮತ್ತು ಗಣಿತದ ವಿಷಯಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮಾರಂಭದಲ್ಲಿ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪಿ.ಆರ್.ಸುನಿಲ್ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜೆ.ಲೋಕೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹೆಚ್.ಯು.ರಫೀಕ್‍ಖಾನ್, ಶಾಲಾ ಮುಖ್ಯೋಪಾದ್ಯಾಯರಾದ ಪಿ.ಇ.ನಂದ ಸಹಶಿಕ್ಷಕಿ ಸೌಭಾಗ್ಯ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಯಾದ ಸೀಮಾ, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲರಾದ ಬಾಲಕೃಷ್ಣ ಶಿಕ್ಷಕರು ಪೋಷಕರು ಪಾಲ್ಗೊಂಡಿದ್ದರು.

Read More

ಮಡಿಕೇರಿ ಜ.21 NEWS DESK : ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲಸ್‌ರ್‌ ನಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ ಜ.22 ರಿಂದ 26ರವರೆಗೆ ರಿಪಬ್ಲಿಕ್ ಸೇಲ್ ವಿಶೇಷ ರಿಯಾಯಿತಿ ಕೊಡುಗೆಗಳನ್ನು ಪ್ರಕಟಿಸಲಾಗಿದೆ. ಚಿನ್ನ ಹಾಗೂ ವಜ್ರಾಭರಣಗಳ ವಿಶೇಷ ಸಂಗ್ರಹವೇ ಗ್ರಾಹಕರಿಗೆ ಹಬ್ಬದ ವಾತಾವರಣ ಸೃಷ್ಟಿಸಿದೆ. 24ಕ್ಯಾರೆಟ್ ಚಿನ್ನದ ದರ 15,000 ದಾಟಿದೆ. ಈ ಫೆಸ್ಟಿವ್ ಶಾಪಿಂಗ್ ಸೀಸನ್‌ನಲ್ಲಿ ಚಿನ್ನದ ದರ ಬೆಲೆ ಏರಿಕೆಯ ಪರಿಣಾಮವನ್ನು ಕಡಿಮೆಮಾಡಲು ಈ ರಿಪಬ್ಲಿಕ್ ಸೇಲ್ ಆಫರ್ ಒಂದು ಸುವರ್ಣಾವಕಾಶ ಚಿನ್ನದ ಆಭರಣಗಳ ತಯಾರಿಕಾ ಶುಲ್ಕದ ಮೇಲೆ ಫ್ಲಾಟ್ ರೂ.3,500/-10 ಗ್ರಾಂಗೆ ರಿಯಾಯಿತಿ ನೀಡಲಾಗಿದೆ. ಚಿನ್ನದ ದರ ಏರಿಕೆಯಿಂದಾಗಿ ಲೈಟ್‌ವೈಟ್, 18ಕ್ಯಾರೆಟ್‌ ನಲ್ಲಿ ತಯಾರಿಸಿದಂತಹ ಗ್ಲೋ ಇಲೈಟ್ ವಜ್ರಾಭರಣಗಳು ಈಗ ಕೈಗೆಟಕುವ ದರದಲ್ಲಿ ಲಭ್ಯವಿದ್ದು ಅಷ್ಟೇ ಅಲ್ಲದೆ ವಜ್ರದ ಮೌಲ್ಯದ ಮೇಲೆ 90% ಬೈಬ್ಯಾಕ್ ಹೊಂದಿರುವ ಕಾರಣ ಮುಂದಿನ ದಿನಗಳಲ್ಲಿ ಅದನ್ನು ವಿನಿಮಯ ಮಾಡಲು ಅನುಕೂಲವಾಗುತ್ತದೆ. ಅಲ್ಲದೆ ವಜ್ರಾಭರಣಗಳ ಕ್ಯಾರಟ್ ಮೇಲೆ ರೂ.5000/- ಫ್ಲ್ಯಾಟ್…

Read More

ಮಡಿಕೇರಿ ಜ.22 NEWS DESK : ಪತ್ರಕರ್ತ ಪ್ರಶಾಂತ್. ಟಿ.ಆರ್ ವಿರಚಿತ ಸೌಪರ್ಣಿಕಾ ಕಾದಂಬರಿಗೆ ಅಕ್ಷರನಾದ ಪ್ರತಿಷ್ಠಾನ ನೀಡುವ ಪ್ರತಿಷ್ಠಿತ ಏಷ್ಯಾ ಗ್ಲೋಬಲ್ ಅವಾರ್ಡ್ ಸಂದಿದೆ. ಸೌಪರ್ಣಿಕಾ, ಸಾಹಿತ್ಯವನ್ನೇ ಉಸಿರಾಗಿಸಿಕೊಂಡ ಮಹಿಳೆಯ ಯಶೋಗಾಥೆಯನ್ನು ಒಳಗೊಂಡಿದೆ. ಈ ಕಾದಂಬರಿಯನ್ನು ಮೆಚ್ಚಿದ ಕನ್ನಡ ಚಿತ್ರರಂಗದ ಖ್ಯಾತ ನಟಿ, ಡಾ. ಮೇಘನಾ ಗಾಂವ್ಕರ್ ಹಿನ್ನುಡಿ ಬರೆದಿದ್ದು, ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ಪುಟ್ಟಣ ಕಣಗಾಲ್ ಪ್ರಶಸ್ತಿ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿರುವ ಕೆ. ಶಿವರುದ್ರಯ್ಯ ಮುನ್ನಡಿ ಬರೆದಿದ್ದಾರೆ. ವಿಶೇಷ ಎಂದರೆ ಸೌಪರ್ಣಿಕಾ ಕಾದಂಬರಿ “ಅವಳ ಕಣ್ಣಲಿ” ಶೀರ್ಷಿಕೆಯಲ್ಲಿ ಕಿರುಚಿತ್ರವಾಗಿಯೂ ಮೂಡಿಬರುತ್ತಿದೆ. ಈಗಾಗಲೇ ಚಿತ್ರೀಕರಣವೂ ಆರಂಭವಾಗಿದ್ದು, ಫೆಬ್ರವರಿಯಲ್ಲಿ ಬಿಡುಗಡೆಯಾಗಲಿದೆ. ಪ್ರಶಾಂತ್ ಈಗಾಗಲೇ “ಹೊನ್ನಮ್ಮನ ಕನಸು” ಹಾಗೂ “ಬಾಳ ಹಾದಿಯಲಿ ಬೆಳ್ಳಿಚುಕ್ಕಿ” ಕಾದಂಬರಿಗಳನ್ನು ರಚಿಸಿದ್ದಾರೆ. “ಹೊನ್ನಮ್ಮನ ಕನಸು” ಕಾದಂಬರಿಗೆ ರಾಜ್ಯಮಟ್ಟದ‌ ಪ್ರಶಸ್ತಿ ಸಂದಿದ್ದು, “ಬಾಳ ಹಾದಿಯಲಿ ಬೆಳ್ಳಿಚುಕ್ಕಿ”ಗೆ ಇಂಡಿಯನ್ ಐಕಾನ್ ಅವಾರ್ಡ್ ಹಾಗೂ ಪ್ರತಿಷ್ಠಿತ ಕೋವೆಂಟ್ರಿ ಅವಾರ್ಡ್ ಕೂಡ ಲಭಿಸಿದೆ.ಅಕ್ಷರನಾದ ಪ್ರತಿಷ್ಠಾನ ಸಾಹಿತ್ಯದಲ್ಲಿ ಸಾಧನೆ ಮಾಡಿದ ಗಣ್ಯರಿಗೆ…

Read More

ಮಡಿಕೇರಿ NEWS DESK ಜ.21 : ಗಡಿಗ್ರಾಮ ಕರಿಕೆಯಲ್ಲಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಶೀಘ್ರ ಕ್ರಮ ಕೈಗೊಳ್ಳಬೇಕು, ಕರಿಕೆ- ಭಾಗಮಂಡಲ ರಸ್ತೆಯ ಅಭಿವೃದ್ಧಿ ತ್ವರಿತಗೊಳಿಸಬೇಕು ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳ ಕುರಿತು ಕೊಡಗು ಜಿಲ್ಲಾ ಯೋಜನಾ ಸಮಿತಿ ಸದಸ್ಯ, ಕರಿಕೆ ಗ್ರಾ.ಪಂ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರ ಗಮನ ಸೆಳೆದಿದ್ದಾರೆ. 2026-27ನೇ ಸಾಲಿನಲ್ಲಿ ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆ ಸಂಬಂಧ ನಗರದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕರ್ನಾಟಕ ಕೇರಳ ಗಡಿ ಭಾಗವಾದ ಕರಿಕೆ ಗ್ರಾಮದ ಚೆಂಬೇರಿಯಲ್ಲಿ ಬಸ್ ನಿಲ್ದಾಣಕ್ಕೆ ಕಾಯ್ದಿರಿಸಿದ 0.69 ಏಕರೆ ಜಾಗದಲ್ಲಿ ಬಸ್ ನಿಲ್ದಾಣ ಮತ್ತು ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಕರಿಕೆ- ಭಾಗಮಂಡಲ ಅಂತರರಾಜ್ಯ ಹೆದ್ದಾರಿಯ 20ಕಿ.ಮೀ. ರಸ್ತೆಯನ್ನು ಅಗಲೀಕರಣ ಮತ್ತು ಮರು ಡಾಂಬರೀಕರಣ ಮಾಡಿ ಅಭಿವೃದ್ಧಿಪಡಿಸಬೇಕು. ಕರಿಕೆ ಗ್ರಾಮದ ಸರಕಾರಿ ಆರೋಗ್ಯ ಉಪಕೇಂದ್ರಕ್ಕೆ…

Read More

ಮಡಿಕೇರಿ ಜ.21 NEWS DESK : ಕೊಡವರು ಸೇರಿದಂತೆ ಎಲ್ಲರನ್ನೂ ಒಳಗೊಂಡ ಪರಿಪೂರ್ಣ ಗಣರಾಜ್ಯವನ್ನು ನಿರ್ಮಿಸಬೇಕು ಮತ್ತು ಸೂಕ್ಷ್ಮ ಆದಿಮಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ನಂಬುಗೆಯ ಕೊಡವರ 10 ಕಾನೂನುಬದ್ಧ ಆಕಾಂಕ್ಷೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜ.26 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು 77ನೇ ಗಣರಾಜ್ಯೋತ್ಸವದಂದು ಬೆಳಿಗ್ಗೆ 10.30 ರಿಂದ 11.30 ರವರೆಗೆ ಸತ್ಯಾಗ್ರಹ ನಡೆಸಿ ಕೊಡವ ಆತ್ಮಸಾಕ್ಷಿ, ಕೊಡವ ಒಮ್ಮತ ಮತ್ತು ಕೊಡವ ಪ್ರಜ್ಞೆಯ ಅಭಿವ್ಯಕ್ತಿಯನ್ನು ದೃಢೀಕರಿಸುವ ಕುರಿತು ಸಂವಿಧಾನಬದ್ಧವಾದ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಸಂವಿಧಾನದ 5, 6 ಮತ್ತು 8ನೇ ಪರಿಚ್ಛೇದಗಳೊಂದಿಗೆ 244ನೇ ಮತ್ತು 371ನೇ ವಿಧಿಯ ಅಡಿಯಲ್ಲಿ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯನ್ನು ರಚಿಸಬೇಕು. ಸ್ವ-ಆಡಳಿತ, ಸ್ವ-ನಿರ್ಣಯ ಹಕ್ಕುಗಳು, ಆದಿಸಮಸಂಜಾತ ಕೊಡವರಿಗೆ ವಿಶ್ವರಾಷ್ಟ್ರ ಸಂಸ್ಥೆಯ ಮಾನ್ಯತೆ ಕಲ್ಪಿಸಬೇಕು.…

Read More

ಮಡಿಕೇರಿ ಜ.21 NEWS DESK : ತೋಟಗಾರಿಕೆ ಇಲಾಖೆಯು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಇತರೆ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಭಾರತ ದೇಶದ ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ, 24 ರಿಂದ 26 ರವರೆಗೆ ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.  ಫಲಪುಷ್ಪ ಪ್ರದರ್ಶನದ ಉದ್ಘಾಟನೆಯು ಜನವರಿ, 24 ರಂದು ಮಧ್ಯಾಹ್ನ 3 ಗಂಟೆಗೆ ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವರು ನೆರವೇರಿಸಲಿದ್ದಾರೆ. ಜಿಲ್ಲೆಯ ಶಾಸಕರುಗಳು ಹಾಗೂ ಇತರೆ ಗಣ್ಯರು ಭಾಗವಹಿಸಲಿದ್ದಾರೆ. ಫಲಪುಷ್ಪ ಪ್ರದರ್ಶನದ ಅಂಗವಾಗಿ ಈಗಾಗಲೇ ರಾಜಾಸೀಟು ಉದ್ಯಾನವನದಲ್ಲಿ ಸುಮಾರು 8 ಸಾವಿರ ಕುಂದಗಳಲ್ಲಿ ವಿವಿಧ ಜಾತಿಯ ಹೂವುಗಳು ಹಾಗೂ ಬೆಡ್‍ಗಳಲ್ಲಿ ಸುಮಾರು 20 ಸಾವಿರ ವಿವಿಧ ಜಾತಿಯ ಹೂವುಗಳಾದ ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಡಯಾಂಥಸ್, ಇಂಪೇಷಿಯನ್ಸ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್, ಡೇಲಿಯಾ, ಇತ್ಯಾದಿಗಳನ್ನು ಪಾತಿಯಲ್ಲಿ ಹಾಗೂ ಕುಂಡಗಳಲ್ಲಿ ಬೆಳೆಯಲಾಗಿದೆ.  ಈ ವರ್ಷದ ಫಲಪುಷ್ಪ ಪ್ರದರ್ಶನದ ಪ್ರಮುಖ ಆಕರ್ಷಣೆಗಳು:…

Read More

ಮಡಿಕೇರಿ ಜ.21 NEWS DESK : ಬಡತನಕ್ಕೆ ಉಂಬುವ ಚಿಂತೆ, ಉಣಲಾದರೆ ಉಡುವ ಚಿಂತೆ, ಉಡಲಾದರೆ ಇಡುವ ಚಿಂತೆ, ಇಡಲಾದರೆ ಹೆಂಡಿರ ಚಿಂತೆ, ಹೆಂಡಿರಾದರೆ ಮಕ್ಕಳ ಚಿಂತೆ, ಮಕ್ಕಳಾದರೆ ಬದುಕಿನ ಚಿಂತೆ, ಬದುಕಾದರೆ ಕೇಡಿನ ಚಿಂತೆ, ಕೇಡಾದರೆ ಮರಣದ ಚಿಂತೆ, ಇಂತೀ ಹಲವು ಚಿಂತೆಯಲ್ಲಿ ಇರ್ಪುವರ ಕಂಡೆನು, ಶಿವನ ಚಿಂತೆಯಲ್ಲಿದ್ದವರೊಬ್ಬರನ್ನೂ ಕಾಣೆನೆಂದಾತ… ಎಂದು ನಿಜಶರಣ ಅಂಬಿಗರ ಚೌಡಯ್ಯ ಅವರು ವಚನದ ಮೂಲಕ ಸಾರಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿ ಸಂದರ್ಭದಲ್ಲಿ ನಗರದ ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಶ್ರುತಿಶ್ರೀ ಡಿ. ಅವರು ವಾಚಿಸಿದರು. 12ನೇ ಶತಮಾನದಲ್ಲಿ ಬಸವಣ್ಣ ಅವರು ಸೇರಿದಂತೆ ಎಲ್ಲಾ ವಚನಕಾರರ ಬಗ್ಗೆ ಮಾಹಿತಿ ತಿಳಿದುಕೊಳ್ಳುವಂತಾಗಬೇಕು. ಅಂಬಿಗರ ಚೌಡಯ್ಯ ಅವರು ಸಮಾಜಕ್ಕೆ ನೀಡಿರುವ ಸುಧಾರಣೆ ಮತ್ತು ಸಂದೇಶಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಹೇಳಿದರು. ಹನ್ನೆರಡನೇ ಶತಮಾನದಲ್ಲಿ…

Read More

ಮಡಿಕೇರಿ ಜ.21 NEWS DESK : ಭಾರತದಾದ್ಯಂತ ಲಕ್ಷಾಂತರ ಪುರುಷರಲ್ಲಿ ಪ್ರಾಸ್ಟೇಟ್ ಮತ್ತು ಮೂತ್ರಪಿಂಡ ಸಮಸ್ಯೆ ಹೆಚ್ಚಾಗುತ್ತಿದ್ದು, ಈ ಕಾಯಿಲೆಗಳ ಲಕ್ಷಣಗಳು ತೀವ್ರವಾಗುವ ಮುನ್ನವೇ ಎಚ್ಚರಿಕೆ ವಹಿಸುವುದು ಅತ್ಯಗತ್ಯ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೈಸೂರಿನ ಮಣಿಪಾಲ್ ಆಸ್ಪತ್ರೆಯ ಕಿಡ್ನಿ ಟ್ರಾನ್ಸ್‍ಪ್ಲಾಂಟ್ ಸರ್ಜನ್ ಹಾಗೂ ಯುರಾಲಜಿ ಮತ್ತು ಆಂಡ್ರಾಲಜಿ ವಿಭಾಗದ ಕನ್ಸಲ್ಟಂಟ್ ಡಾ.ಕೆ.ಎ.ತಿಮ್ಮಯ್ಯ ಹಾಗೂ ಕಿಡ್ನಿ ಟ್ರಾನ್ಸ್‍ಪ್ಲಾಂಟ್ ಫಿಸಿಶಿಯನ್ ಹಾಗೂ ನೆಫ್ರಾಲಜಿ ವಿಭಾಗದ ಕನ್ಸಲ್ಟಂಟ್ ಡಾ.ಪಿ.ಟಿ.ವಿಪಿನ್ ಕಾವೇರಪ್ಪ ಪುರುಷರಲ್ಲಿನ ಪ್ರಾಸ್ಟೇಟ್ ಮತ್ತು ಮೂತ್ರಪಿಂಡದ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿತು. ಡಾ.ಕೆ.ಎ.ತಿಮ್ಮಯ್ಯ ಮಾತನಾಡಿ, ರಾಷ್ಟ್ರೀಯ ಸಮೀಕ್ಷೆಗಳ ಪ್ರಕಾರ ಭಾರತದ ಶೇ.10 ರಿಂದ 13 ರಷ್ಟು ವಯಸ್ಕರು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕೆಲವು ರಾಜ್ಯಗಳಲ್ಲಿ ಇದರ ಪ್ರಮಾಣ ಹೆಚ್ಚಾಗಿ ಕಂಡುಬಂದಿದೆ. 50 ವರ್ಷ ಮೇಲ್ಪಟ್ಟ ಪುರುಷರಲ್ಲಿ ಪ್ರಾಸ್ಟೇಟ್ ಗ್ರಂಥಿ ದೊಡ್ಡದಾಗುವ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ ಎಂದು ತಿಳಿಸಿದರು. ಅನೇಕ ಪುರುಷರು ಪದೇ ಪದೇ ಮೂತ್ರ ವಿಸರ್ಜನೆ ಮಾಡುವುದು ಅಥವಾ…

Read More

ಮಡಿಕೇರಿ ಜ.21 NEWS DESK :  ದೇಶದ ಸ್ವಾತಂತ್ರ್ಯ ಮತ್ತು ಸಾರ್ವಭೌಮತ್ವವನ್ನು ರಕ್ಷಿಸುವಲ್ಲಿ ತಮ್ಮ ಜೀವನವನ್ನು ಸಮರ್ಪಿಸಿರುವ ಭಾರತೀಯ ಸೇನೆಯ ಶೌರ್ಯ, ತ್ಯಾಗ ಮತ್ತು ನಿಸ್ವಾರ್ಥ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಕೊಡಗು ಸೈನಿಕ ಶಾಲೆಯಲ್ಲಿ ಸೇನಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.  ಕಟಾರಿ ನಿಲಯದ ವಿದ್ಯಾರ್ಥಿಗಳು ಪ್ರೇರಣಾದಾಯಕ ಐಎಂಎ ಗೀತೆಯ ಗಾಯನದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್, ಭಾರತೀಯ ಸೇನೆಗೆ ಬದ್ಧತೆ, ಚಾರಿತ್ರ್ಯ, ಅಖಂಡತೆ, ನಿಷ್ಠೆ, ನೈತಿಕ ಧೈರ್ಯ ಮತ್ತು ಶಿಸ್ತು ಮುಖ್ಯವಾಗಿದ್ದು, ಈ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತಾಧಿಕಾರಿಗಳಾದ ವಿಂಗ್ ಕಮಾಂಡರ್ ಪಿ ಪ್ರಕಾಶ್ ರಾವ್, ಉಪಪ್ರಾಂಶುಪಾಲರಾದ ವಿಂಗ್ ಕಮಾಂಡರ್ ಮಹಮದ್ ಷಾಜಿ, ಹಿರಿಯ ಶಿಕ್ಷಕರು, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಭಾರತೀಯ ಸೇನೆ ಹಾಗೂ ಅದರ ವೈಭವಶಾಲಿ ಪರಂಪರೆಯ ಗೌರವಕ್ಕೆ ಅರ್ಥಪೂರ್ಣ ನಮನ ಸಲ್ಲಿಸಲಾಯಿತು.…

Read More

ಮಡಿಕೇರಿ ಜ.21 NEWS DESK : ಪೊನ್ನಂಪೇಟೆಯ 66/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಫೀಡರ್ ನಿರ್ವಹಣೆ/ ಜಿಒಎಸ್ ಬದಲಾವಣೆ ಕಾಮಗಾರಿ ಕೈಗೊಗೊಳ್ಳುತ್ತಿದೆ. ಈ ಕೇಂದ್ರದಿಂದ ಹೊರಹೊಮ್ಮುವ ಎಫ್1-ನಲ್ಲೂರು, ಎಫ್2-ಬಾಳೆಲೆ, ಎಫ್4-ತಿತಿಮತಿ, ಎಫ್5-ಪಾಲಿಬೆಟ್ಟ, ಎಫ್6 -ಬೇಗೂರು, ಎಫ್7-ಗೋಣಿಕೊಪ್ಪ, ಎಫ್8-ಪೊನ್ನಂಪೇಟೆ, ಎಫ್9-ಹಾತೂರು, ಎಫ್10-ಹೈಸೊಡ್ಲೂರು, ಎಫ್11-ಕೈಕೇರಿ, ಎಫ್12-ಬೆಕ್ಕಸೊಡ್ಲೂರು, ಎಫ್13 ದೇವನೂರು ಫೀಡರ್‍ನಲ್ಲಿ ಜನವರಿ, 22 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿ ಆಗುವ ಗ್ರಾಮಗಳಾದ ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಅತ್ತೂರು, ಕಾನೂರು, ಬಾಳೆಲೆ, ರಾಜಪುರ, ದೇವನೂರು, ಮಲ್ಲೂರು, ಕಿರುಗೂರು, ವಡ್ಡರಮಾಡು, ಮಾಯಮುಡಿ, ಸುಳುಗೋಡು, ಧನುಗಾಲ, ಕಾರ್ಮಾಡು, ಕೊಟ್ಟಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.

Read More