ಮೈಸೂರು ಜು.24 NEWS DESK : ಕೇಂದ್ರ ರಸ್ತೆ -ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿಯಾಗಿ ಮೈಸೂರು ಅಭಿವೃದ್ಧಿ ಕುರಿತು ಚರ್ಚಿಸಿದರು. ದೆಹಲಿಯ ಕಚೇರಿಯಲ್ಲಿ ಭೇಟಿಯಾದ ಅವರು ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್-ವೇ ಯಲ್ಲಿ ರಸ್ತೆ ಸುರಕ್ಷತೆಗಾಗಿ ಹೆಚ್ಚುವರಿ ಮಂಜೂರಾತಿ, ಮೈಸೂರು-ಕುಶಾಲನಗರ ಭಾಗಕ್ಕೆ ಭೂಸ್ವಾಧೀನ ಮತ್ತು ಅನುಮತಿ ಹಾಗೂ ಕೇರಳದಿಂದ ಕೊಳ್ಳೆಗಾಲದವರೆಗೆ 6 ಪಥಗಳ ಹೆದ್ದಾರಿಯನ್ನು ಮೇಲ್ದರ್ಜೆಗೇರಿಸಲು ಮನವಿ ಮಾಡಿದರು. *NH-275 ರ ಬೆಂಗಳೂರಿನಿಂದ ಮೈಸೂರು ವಿಭಾಗದಲ್ಲಿ ರಸ್ತೆ ಬಳಕೆದಾರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹೆಚ್ಚುವರಿ ಕಾಮಗಾರಿಗಳ ಮಂಜೂರಾತಿ. ಮೈಸೂರು ರಿಂಗ್ ರಸ್ತೆ ಮತ್ತು ಬೆಂಗಳೂರು – ಮೈಸೂರು ಹೆದ್ದಾರಿಯೊಂದಿಗೆ ಸಂಚಾರವನ್ನು ವಿಲೀನಗೊಳಿಸಲು ಮಣಿಪಾಲ್ ಆಸ್ಪತ್ರೆ ಜಂಕ್ಷನ್ನಲ್ಲಿ ಫ್ಲೈಓವರ್ ನಿರ್ಮಿಸುವ ಮೂಲಕ ಜಂಕ್ಷನ್ ಅಭಿವೃದ್ಧಿ, ಟೋಲ್ ಬೂತ್ಗಳ ಸ್ಥಾಪನೆಯೊಂದಿಗೆ ಪ್ರಯಾಣಿಕರ ಪ್ರವೇಶ ಮತ್ತು ನಿರ್ಗಮನ ನಿಬಂಧನೆಗಳ ಅಭಿವೃದ್ಧಿ ಇದು ವಿವಿಧ ಸ್ಥಳಗಳಿಗೆ ಪ್ರಯಾಣಿಸುವ ದಟ್ಟಣೆಯನ್ನು ನಿಯಂತ್ರಿಸುತ್ತದೆ. ಇದಲ್ಲದೆ, ರಚನೆಗಳು/ ( ROB) Railways…
ಲೇಖಕ: admin
ಮಡಿಕೇರಿ ಜು.24 NEWS DESK : ಕೊಡಗು ಜಿಲ್ಲಾ ಉಪ ವಿಭಾಗಾಧಿಕಾರಿಗಳ ಕಚೇರಿಯ ಪ್ರಥಮ ದರ್ಜೆ ಸಹಾಯಕರೊಬ್ಬರು ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಶಾಲನಗರ ಸಮೀಪ ಕೊಪ್ಪ ಸೇತುವೆ ಬಳಿ ನಡೆದಿದೆ. ಮಂಡ್ಯ ಮೂಲದ ಅರುಣ (52) ಎಂಬುವವರೇ ಆತ್ಮಹತ್ಯೆಗೆ ಶರಣಾದ ಸರ್ಕಾರಿ ಸಿಬ್ಬಂದಿಯಾಗಿದ್ದು, ಮೃತದೇಹ ಇನ್ನೂ ಕೂಡ ಪತ್ತೆಯಾಗಿಲ್ಲ. ಇಂದು ಮಡಿಕೇರಿಯಲ್ಲಿರುವ ಉಪ ವಿಭಾಗಾಧಿಕಾರಿಗಳ ಕಚೇರಿಗೆ ಕರ್ತವ್ಯಕ್ಕೆ ಹಾಜರಾಗಿದ್ದ ಅರುಣ ಅವರು ಮಧ್ಯಾಹ್ನದ ನಂತರ ಕೊಪ್ಪಕ್ಕೆ ಬಂದು ಜೀವ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ಮಡಿಕೇರಿಯ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಕುಶಾಲನಗರದಲ್ಲಿ ವಾಸವಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅಗ್ನಿಶಾಮಕ ದಳ, ಎನ್ಡಿಆರ್ಎಫ್, ನುರಿತ ಈಜು ತಜ್ಞರು ಹಾಗೂ ಸ್ಥಳೀಯರು ಕತ್ತಲಾಗುವವರೆಗೆ ಮೃತದೇಹದ ಶೋಧ ಕಾರ್ಯ ನಡೆಸಿದರು. ಅಧಿಕ ಮಳೆಯಿಂದ ನದಿಯಲ್ಲಿ ನೀರು ತುಂಬಿ ಹರಿಯುತ್ತಿರುವುದರಿಂದ ಮೃತದೇಹ ಪತ್ತೆಯಾಗಿಲ್ಲ. ಗುರುವಾರ ಮತ್ತೆ ಶೋಧ ಕಾರ್ಯ ನಡೆಯಲಿದೆ…
ಮಡಿಕೇರಿ ಜು.25 NEWS DESK : 33/11ಕೆವಿ ಮೂರ್ನಾಡು-ವಿರಾಜಪೇಟೆ ಮತ್ತು 33/11ಕೆವಿ ವಿರಾಜಪೇಟೆ-ಸಿದ್ದಾಪುರ ವಿದ್ಯುತ್ ಮಾರ್ಗಕ್ಕೆ ಬ್ರೇಕರ್ ಅಳವಡಿಸಲು ಜು.26 ರಂದು ಬೆಳಗ್ಗೆ 9 ರಿಂದ ಸಂಜೆ 3 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಸಿದ್ದಾಪುರ, ಇಂಜಿಲಗೇರಿ, ಮಾಲ್ದಾರೆ, ಗುಹ್ಯ, ನೆಲ್ಲಿಹುದಿಕೇರಿ, ಬಾಡಗಬಾಣಂಗಾಲ, ಪಾರಾಣೆ, ನಾಪೋಕ್ಲು, ಹೊದ್ದೂರು, ಮರುಗೋಡು, ಮೂರ್ನಾಡು, ಹಾಕತ್ತೂರು, ಕಾಂತೂರು, ಹೊಡವಾಡ, ಚೆಯ್ಯಂಡಾಣೆ, ಕಕ್ಕಬೆ, ನೆಲಜಿ, ಪಾಲೂರು, ಯವಕಪಾಡಿ, ಬೇತು ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಜು.24 NEWS DESK : ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಬಿಪಿಎಲ್ ಕುಟುಂಬದ 2 ಹೆಣ್ಣು ಮಕ್ಕಳಿಗೆ ಪ್ರತಿ ಮಗುವಿನ ಹೆಸರಿನಲ್ಲಿ ವಾರ್ಷಿಕ ರೂ.3000 ದಂತೆ 15 ವರ್ಷಗಳವರೆಗೆ ಒಟ್ಟು 45,000 ಗಳನ್ನು ಅಂಚೆ ಇಲಾಖೆಯಲ್ಲಿ ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಠೇವಣಿ ಹೂಡಲಾಗುತ್ತದೆ. ಮಗುವಿಗೆ 21 ವರ್ಷ ಪೂರ್ಣಗೊಂಡ ನಂತರ ಪರಿಪಕ್ವ ಮೊತ್ತ ಅಂದಾಜು 1.27 ಲಕ್ಷ ನೀಡಲಾಗುತ್ತದೆ. ಮಗುವನ್ನು ನೋಂದಾಯಿಸಲು ಅವಶ್ಯಕ ದಾಖಲೆಗಳು: ಅರ್ಜಿ ನಮೂನೆ, ಪೋಷಕರೊಂದಿಗೆ ಮಗುವಿನ ಭಾವಚಿತ್ರ, ಮಗುವಿನ ಜನನ ಪ್ರಮಾಣ ಪತ್ರದ ಪ್ರತಿ, ಆದ್ಯತಾ ಕುಟುಂಬ ಪಡಿತರ ಚೀಟಿಯ ಪ್ರತಿ/(ತಾಯಿಯ ಹೆಸರು ಇರುವ), ಪೋಷಕರ ಆಧಾರ್ ಕಾರ್ಡ್, ಮಗುವಿನ ಆಧಾರ್ ಕಾರ್ಡ್ ಪ್ರತಿ, ಪರಿಶಿಷ್ಟ ಜಾತಿ/ ಪಂಗಡಕ್ಕೆ ಸೇರಿದ್ದಲ್ಲಿ ಜಾತಿ ಪ್ರಮಾಣ ಪತ್ರ, ವಿವಾಹ ನೋಂದಣಿ ಪ್ರಮಾಣ ಪತ್ರ, ಪೋಷಕರ ಸ್ವಯಂ ಘೋಷಣಾ ವಿವಾಹ ದೃಢೀಕರಣ ಪತ್ರ(ನಮೂನೆ-6 ರಲ್ಲಿ), ಭರ್ತಿ ಮಾಡಿದ ಅರ್ಜಿಯನ್ನು ಮಗು ಹುಟ್ಟಿದ ದಿನಾಂಕದಿಂದ ೨ ವರ್ಷ ಪೂರ್ಣಗೊಳ್ಳುವ ಮೊದಲು…
ಮಡಿಕೇರಿ ಜು.24 NEWS DESK : ವಿಶ್ವಕ್ಕೆ ವಿಶೇಷ ಸ್ಥಾನಮಾನ ನೀಡಿದಂತಹ ಯುಗ ಹನ್ನೆರಡನೇ ಶತಮಾನ ಕಾಲಘಟ್ಟದಲ್ಲಿ ಮೂಡನಂಬಿಕೆ, ಮೌಡ್ಯತೆಯ ವಿರುದ್ಧ ಸಂದೇಶ ಸಾರಿದ ಶರಣರ ಯುಗವನ್ನು ಬಸವಯುಗ ಎಂದೆ ಹೇಳಲಾಗುತ್ತದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಮಾಜಿ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ನಡೆದ ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡಿದರು. ಹನ್ನೆರಡನೇ ಶತಮಾನ ಸುವರ್ಣ ಯುಗ, ಸೌಹಾರ್ಧ ಯುಗ, ಭಕ್ತಿಯುಗದಲ್ಲಿ ಅನೇಕ ಶರಣರು ತಮ್ಮ ವಚನಗಳ ಮೂಲಕ ಸಾಮಾಜಿಕ ಸಮಾನತೆ ಸಾರಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ದಾರ್ಶನಿಕರ ಪುಣ್ಯ ಪುರುಷರ, ದಾರ್ಶನಿಕರ ಆದರ್ಶಗಳನ್ನು ತಿಳಿದುಕೊಳ್ಳುವುದರೊಂದಿಗೆ ಅವರ ಚಿಂತನೆಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಇದರಲ್ಲಿ ಹಡಪದ ಅಪ್ಪಣ್ಣ ಸಾಮಾಜಿಕ ಕ್ರಾಂತಿಗಾಗಿ ಹೋರಾಡಿದವರು ಬಸವಣ್ಣನವರ ಅನುಭವ ಮಂಟಪದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದವರಲ್ಲಿ…
ಮಡಿಕೇರಿ ಜು.24 NEWS DESK : ವಿಧಾನ ಪರಿಷತ್ತಿನ ಸಭಾಪತಿಗಳ ಕಚೇರಿಯಲ್ಲಿ ಅನುಭವ ಮಂಟಪದ ಛಾಯಾಚಿತ್ರ ಗಳ ಬಿಡುಗಡೆ ಮತ್ತು ವಿತರಣಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಹೊರಟ್ಟಿ, ಸಚಿವರಾದ ಎನ್.ಎಸ್.ಬೋಸ್ ರಾಜ್, ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮತ್ತು ವಿಧಾನ ಪರಿಷತ್ತಿನ ಸದಸ್ಯರಾದ ನಾರಾಯಣಸ್ವಾಮಿ, ಬೋಜೇಗೌಡ ಉಪಸ್ಥಿತರಿದ್ದರು.
ಮಡಿಕೇರಿ ಜು.24 NEWS DESK : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜಿಲ್ಲೆಯ ಆರ್ಥಿಕ ಬೆನ್ನೆಲುಬಾಗಿರುವ ಕಾಫಿ ಫಸಲಿನ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಜಿಲ್ಲೆಯ ವಿವಿಧೆಡೆ ಹಲವು ತೋಟಗಳಲ್ಲಿ ಅತಿಯಾದ ಮಳೆೆಯಿಂದ ಉಂಟಾಗಿರುವ ಶೀತದ ವಾತಾವರಣದಿಂದ ಕಾಫಿ ಕಾಯಿಗಳು ಕೊಳೆತು ಉದುರಲಾರಂಭಿಸಿವೆ. ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ ಸರಾಸರಿ 68 ಇಂಚು ಮಳೆ ದಾಖಲಾಗಿದ್ದರೆ, ಮಡಿಕೇರಿ ತಾಲ್ಲೂಕಿನಲ್ಲಿ ದಾಖಲೆಯ 95 ಇಂಚು ಮಳೆಯಾಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ 74 ಇಂಚು, ವಿರಾಜಪೇಟೆ ತಾಲ್ಲೂಕಿನಲ್ಲಿ 64, ಪೊನ್ನಂಪೇಟೆ 64 ಇಂಚು, ಕುಶಾಲನಗರ ತಾಲ್ಲೂಕಿನಲ್ಲಿ 42 ಇಂಚಿನಷ್ಟು ಮಳೆ ದಾಖಲಾಗಿದೆ. ಅಂಕಿಅಂಶಗಳ ಆಧಾರದಲ್ಲಿ ಮಡಿಕೇರಿ ತಾಲ್ಲೂಕಿನಲ್ಲಿ ಅತೀ ಹೆಚ್ಚಿನ ಮಳೆಯಾಗಿದ್ದರೆ ಸಂಪಾಜೆ ಹೋಬಳಿ, ಭಾಗಮಂಡಲ, ನಾಪೋಕ್ಲು, ಶಾಂತಳ್ಳಿ, ಹುದಿಕೇರಿ, ದಕ್ಷಿಣ ಕೊಡಗಿನ ಬಹುತೇಕ ಗ್ರಾಮಗಳು ಮತ್ತು ಸೋಮವಾರಪೇಟೆ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಳೆಯಾಗಿದೆ. ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ಗಾಳಿ ಸಹಿತ ಧಾರಾಕಾರ ಮಳೆಗೆ ಪ್ರವಾಹದ ರೂಪದಲ್ಲಿ ತೋಟ ಮತ್ತು ಗದ್ದೆಗಳಿಗೆ…
ಮಡಿಕೇರಿ ಜು.24 NEWS DESK : ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಿಲ್ಲೆಯವರಾದ ಕರ್ತಚ್ಚಿರ ಜಿ.ಕುಮಾರ್ ದೇವಯ್ಯ ಅವರು ಮೇಜರ್ ಜನರಲ್ ಹುದ್ದೆಗೆ ಬಡ್ತಿ ಪಡೆದಿದ್ದಾರೆ. ಆರ್ಮಿ ಡೆಂಟಲ್ ದಳದಲ್ಲಿ ಕರ್ತವ್ಯದಲ್ಲಿರುವ ಇವರನ್ನು ಸೇನೆ ಮತ್ತು ನೌಕಾಪಡೆ ಎರಡರಲ್ಲಿನ ಸೇವೆಯ ಪರಿಗಣನೆಯೊಂದಿಗೆ ಬಡ್ತಿ ನೀಡಲಾಗಿದೆ. ಪ್ರಸ್ತುತ ನವದೆಹಲಿಯ ಸೇನಾ ಪ್ರಧಾನ ಕಚೇರಿಯಲ್ಲಿ ದಂತ ಸೇವೆಗಳ ಹೆಚ್ಚುವರಿ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಮೇಜರ್ ಜನರಲ್ ದೇವಯ್ಯ, ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದವರಾಗಿದ್ದು, ದಿ.ಕರ್ತಚ್ಚಿರ ಎಂ.ಗಣಪತಿ ಮತ್ತು ಪೊನ್ನಕ್ಕಿ (ತಾಮನೆ-ಪಟ್ಟಮಾಡ) ದಂಪತಿಯ ಪುತ್ರರಾಗಿದ್ದಾರೆ. ರೇಣುಕಾ (ತಾಮನೆ-ಪಟ್ಟಮಾಡ) ಅವನ್ನು ವಿವಾಹವಾಗಿದ್ದಾರೆ. ದಾವಣಗೆರೆಯ ಬಾಪೂಜಿ ಡೆಂಟಲ್ ಕಾಲೇಜಿನಲ್ಲಿ ಪದವಿ ಪಡೆದ ಅವರು ಪುಣೆಯ ಸಶಸ್ತ್ರ ಪಡೆಗಳ ವೈದ್ಯಕೀಯ ಕಾಲೇಜಿನಲ್ಲಿ ಮಾಸ್ಟರ್ ಆಫ್ ಡೆಂಟಲ್ ಸರ್ಜರಿಯೊಂದಿಗೆ ತಮ್ಮ ಶಿಕ್ಷಣವನ್ನು ಮುಂದುವರೆಸಿದರು. ಅವರ ಸೇವೆಯನ್ನು ಪ್ರತಿಷ್ಠಿತ ಪ್ರಶಸ್ತಿಗಳ ಮೂಲಕ ಗುರುತಿಸಲಾಗಿದೆ. 2006 ರಲ್ಲಿ FOC-in-C(WC) ಶ್ಲಾಘನೆ ಮತ್ತು 2011 ರಲ್ಲಿ ನೌಕಾಪಡೆಯ ಮುಖ್ಯಸ್ಥರಿಂದ ಶ್ಲಾಘನೆಗೊಳಪಟ್ಟಿದ್ದಾರೆ. ಸೈನಿಕರ ಜಿಲ್ಲೆಯಾದ ಕೊಡಗಿನ ಖ್ಯಾತಿಯನ್ನು…
ಮಡಿಕೇರಿ ಜು.24 NEWS DESK : ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಎನ್.ಯು.ನಾಚಪ್ಪ ಅವರು ಒತ್ತಾಯಿಸಿದ್ದಾರೆ. ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಸಿಎನ್ಸಿ ವತಿಯಿಂದ ವಿರಾಜಪೇಟೆ ಗಡಿಯಾರ ಕಂಬದ ಬಳಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಕೊಡವ ಲ್ಯಾಂಡ್ ನ ಸಂರಕ್ಷಣೆಗಾಗಿ ಸರ್ವ ಕೊಡವರು ಭೂಮಾಫಿಯಾದ ವಿರುದ್ಧ ಎಚ್ಚೆತ್ತುಕೊಳ್ಳಬೇಕೆಂದು ಕರೆ ನೀಡಿದರು. ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಕೊಡವರ ಪರ ನಡೆಸುತ್ತಿರುವ ಕಾನೂನು ಹೋರಾಟಕ್ಕೆ ವಿರುದ್ಧವಾಗಿ ಅರ್ಜಿ ಸಲ್ಲಿಸಲು ಕೆಲವು ಕೊಡವ ವಿರೋಧಿಗಳು ಷಡ್ಯಂತ್ರ ರೂಪಿಸಿದ್ದಾರೆ ಎಂದು ನಾಚಪ್ಪ ಆರೋಪಿಸಿದರು. ಭಾಗಮಂಡಲದಲ್ಲಿ ಕೊಡವ ಟ್ರಸ್ಟ್ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನದ ಕಾಮಗಾರಿಗೆ ಭೂಪರಿವರ್ತನೆ ಮಾಡಲು ಅವಕಾಶ ನೀಡಿಲ್ಲ. ಬಲಾಢ್ಯ ಸಂವಿಧಾನೇತರ ಶಕ್ತಿಗಳು ಇದಕ್ಕೆ ಅಡ್ಡಿಯಾಗಿವೆ. ಆದರೆ ಭೂಮಾಫಿಯಾ ಮತ್ತು ಕಾರ್ಪೋರೇಟ್…
ಮಡಿಕೇರಿ ಜು.26 NEWS DESK : ಕೊಡಗು ಹಿಂದು ಜಾಗರಣ ವೇದಿಕೆ ಹಾಗೂ ಮಡಿಕೇರಿಯ ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ಜು.26 ರಂದು ಕಾರ್ಗಿಲ್ ವಿಜಯ್ ದಿವಸ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಮುಖ್ಯರಸ್ತೆಯಲ್ಲಿರುವ ಹುತಾತ್ಮ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ಸಮರದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಲಾಗುವುದು. ಮುಖ್ಯ ಅತಿಥಿಗಳಾಗಿ ಭಾರತೀಯ ನೌಕಾದಳದ ನಿವೃತ್ತ ಸೇನಾಧಿಕಾರಿ ಚೋಂಡಿರ ಸುರೇಶ್, ಮಾಜಿ ಸೈನ್ಯಾಧಿಕಾರಿಗಳು, ಗಣ್ಯರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದು, ಸಾಮಾಜಿಕ ಕಾರ್ಯಕರ್ತ ಎಸ್.ಜಯಪ್ರಕಾಶ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ನಂತರ ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ಕಾರ್ಯಕ್ರಮಕ್ಕೆ ದೇಶಾಭಿಮಾನಿಗಳು, ಮಾಜಿ ಯೋಧರು, ಸಂಘ-ಸಂಸ್ಥೆಗಳ ಪ್ರಮುಖರು, ಯುವಕರು, ವಿದ್ಯಾರ್ಥಿ ಸಮೂಹ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಹಿಂದು ಜಾಗರಣ ವೇದಕೆ ಕೊಡಗು ಜಿಲ್ಲಾ ಸಂಯೋಜಕರು ತಿಳಿಸಿದ್ದಾರೆ.






