ಮಡಿಕೇರಿ ಜು.23 NEWS DESK : ಬಾಡಿಗೆ ವಾಹನಗಳಿಗೆ ‘ಪ್ಯಾನಿಕ್ ಬಟನ್’ ಮತ್ತು ‘ಜಿಪಿಆರ್ಎಸ್’ ಎನ್ನುವ ಅವೈಜ್ಞಾನಿಕ ಸಾಧನ ಅಳವಡಿಕೆಯನ್ನು ಸಾರಿಗೆ ಇಲಾಖೆ ಸರ್ಕಾರದ ಆದೇಶವನ್ನು ಕಡೆಗಣಿಸಿ ಕಡ್ಡಾಯ ಗೊಳಿಸಿದೆಯೆಂದು ಆರೋಪಿಸಿ, ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಆರ್ಗನೈಸೇಷನ್ನ ಕೊಡಗು ಜಿಲ್ಲಾ ಘಟಕ ಮಂಗಳವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಟ್ಯಾಕ್ಸಿ ಡ್ರೈವರ್ಸ್ ಆರ್ಗನೈಸೇಷನ್ನ ಜಿಲ್ಲಾಧ್ಯಕ್ಷ ಎಂ.ಎಸ್.ವಿನೋದ್ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ವಿನ್ಸೆಂಟ್ ಬಾಬು ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಚಾಲಕರು, ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿದರು. ಸಂಘದ ಜಿಲ್ಲಾಧ್ಯಕ್ಷ ಎಂ.ಎಸ್.ವಿನೋದ್ ಅವರು ಮಾತನಾಡಿ, ಕೇಂದ್ರ ಸಾರಿಗೆ ಇಲಾಖೆಯ ಆದೇಶದಂತೆ ರಾಜ್ಯ ಸಾರಿಗೆ ಇಲಾಖೆ ಟ್ಯಾಕ್ಸಿ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿಪಿಆರ್ಎಸ್ ಎನ್ನುವ ಅವೈಜ್ಞಾನಿಕವಾದ ಸಾಧನ ಅಳವಡಿಸಲು ಸೂಚಿಸಿದೆ. ಇದರಿಂದ ಆರ್ಥಿಕವಾಗಿ ತೊಂದರೆಯಲ್ಲಿರುವ ಟ್ಯಾಕ್ಸಿ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸೂಚಿತ ಸಾಧನವನ್ನು ವಾಹನಗಳಿಗೆ…
ಲೇಖಕ: admin
ಮಡಿಕೇರಿ ಜು.23 NEWS DESK : ಸರ್ಕಾರದ ಯೋಜನೆಗಳನ್ನು ಕಾಲಮಿತಿಯೊಳಗೆ ಅನುಷ್ಠಾನಗೊಳಿಸುವಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ಸೂಚಿಸಿದರು. ನಗರದ ಜಿ.ಪಂ.ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ತೆರಿಗೆ ವಸೂಲಾತಿ, ಗ್ರಂಥಾಲಯಗಳ ಉನ್ನತೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ತಿಳಿಸಿದರು. ಮಹಾತ್ಮಗಾಂಧಿ ನರೇಗಾ ಯೋಜನೆಯಡಿಯಲ್ಲಿ ಈಗಾಗಲೇ ಜಿಲ್ಲೆಗೆ 5 ಲಕ್ಷ ಮಾನವ ದಿನಗಳನ್ನು ಸೂಚಿಸುವ ಗುರಿ ನೀಡಲಾಗಿದೆ. ಈ ವರೆಗೆ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಮುಂದಿನ ದಿನಗಳಲ್ಲಿಯೂ ಸಾಕಷ್ಟು ಅಭಿವೃದ್ಧಿ ಕಾರ್ಯ ಮುಂದುವರೆಸಬೇಕು. ಸಾಮಾಜಿಕ ಲೆಕ್ಕಪರಿಶೋಧನೆಗೆ ಸಂಬಂಧಿಸಿದಂತೆ ವಸೂಲಾತಿ ಮಾಡಿ, ಕೈಗೊಂಡ ಕ್ರಮದ ಬಗ್ಗೆ ವರದಿ ನೀಡಬೇಕು ಎಂದು ಅವರು ತಿಳಿಸಿದರು. ಪ್ರತಿ ತಿಂಗಳು 50,000 ಮಾನವ ದಿನಗಳನ್ನು ಸೃಜಿಸಬೇಕು. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಪ್ರತಿ ತಿಂಗಳು ರೋಜ್ಗಾರ್ ದಿನಾಚರಣೆ ಮಾಡುವ ಮೂಲಕ ಜನರಿಗೆ ಯೋಜನೆಯ ಮಾಹಿತಿ ನೀಡಿ ಉದ್ಯೋಗ ಒದಗಿಸಬೇಕು. ಪ್ರತಿ ಗ್ರಾಮ…
ಮಡಿಕೇರಿ ಜು.23 NEWS DESK : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2024ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಈಗಾಗಲೇ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ. ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧೈಯವಾಕ್ಯದೊಂದಿಗೆ ಯು.ಜಿ.ಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ. ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ (ಬಿ.ಎ, ಬಿ.ಕಾಂ, ಬಿ.ಲಿಬ್ ಐಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್ಸಿ, ಬಿ.ಎಸ್.ಡಬ್ಲೂ) ಹಾಗೂ ಸ್ನಾತಕೋತ್ತರ ಪಿ.ಜಿ. ಕೋರ್ಸ್ಗಳಾದ (ಎಂ.ಎ, ಎಂ.ಎ- ಪತ್ರಿಕೋದ್ಯಮ, ಎಂ.ಕಾಂ, ಎಂ.ಬಿ.ಎ, ಎಂ.ಲಿಬ್ಐ.ಎಸ್ಸಿ, ಎಂ.ಎಸ್ಸಿ, ಎಂ.ಸಿ.ಎ, ಎಂ.ಎಸ್,ಡಬ್ಲೂ) (ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್., ಡಿಪ್ಲೋಮಾ ಪ್ರೋಗ್ರಾಮ್ಸ್., ಸರ್ಟಿಫಿಕೇಟ್ ಪ್ರೋಗ್ರಾಮ್ಸ್) ಕೋರ್ಸ್ಗಳಿಗೆ ಪ್ರವೇಶಾತಿ ಆರಂಭವಾಗಿರುತ್ತದೆ. ಪ್ರವೇಶಾತಿಗೆ ಈ ದಾಖಲೆಗಳು ಕಡ್ಡಾಯವಾಗಿರುತ್ತದೆ. ಎಸ್ಎಸ್ಲ್ಸಿ,…
ಕುಶಾಲನಗರ ಜು.23 NEWS DESK : ಕುಶಾಲನಗರ ನಾಡಪ್ರಭು ಪತ್ತಿನ ಸಹಕಾರ ಸಂಘ ಈ ಸಾಲಿನಲ್ಲಿ ರೂ.20 ಲಕ್ಷ 45 ಸಾವಿರ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷರಾದ ಎಂ.ಕೆ.ದಿನೇಶ್ ತಿಳಿಸಿದ್ದಾರೆ. ಅವರು ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಸಂಘವು ಪ್ರಾರಂಭವಾಗಿ 9 ವರ್ಷ ಸಂದಿದೆ. ಪ್ರಾರಂಭದಲ್ಲಿ 762 ಸದಸ್ಯರನ್ನು ಹೊಂದಿದ ಸಂಘ ಇದೀಗ ಎ ತರಗತಿಯ 861 ಸದಸ್ಯರು ಮತ್ತು ಸಿ ಗ್ರೇಡ್ 132 ಸದಸ್ಯರನ್ನು ಹೊಂದಿರುತ್ತದೆ. ಸಂಘವು ಒಂದು ಕೋಟಿ ಎಪ್ಪತ್ತು ಲಕ್ಷ 77 ಸಾವಿರದ 847 ರು. ಠೇವಣಿ ಹಾಗೂ 50 ಲಕ್ಷ 55 ಸಾವಿರದ 228 ರೂಗಳ ನಿಧಿಗಳನ್ನು ಹೊಂದಿದೆ. ಒಟ್ಟು 2 ಕೋಟಿ 84 ಲಕ್ಷ ರೂ.15 ಸಾವಿರ ದುಡಿಯುವ ಬಂಡವಾಳ ಇರುತ್ತದೆ ಎಂದು ಮಾಹಿತಿ ನೀಡಿದರು. ಸದಸ್ಯರ ಬೇಡಿಕೆಗೆ ತಕ್ಕಂತೆ ಜಾಮೀನು ಸಾಲ, ಆಭರಣ ಸಾಲ, ಜಂಟಿ ಬಾಧ್ಯತಾ ಗುಂಪು ಸಾಲ, ಕಂತಿನ ಜಾಮೀನು ಸಾಲ ಹಾಗೂ ಪಿಗ್ಮಿ ಸಾಲಗಳನ್ನು…
ಮಡಿಕೇರಿ ಜು.23 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಅವರೊಡನೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ ನಡೆಸಿ ಉಚ್ಚ ನ್ಯಾಯಾಲಯದ ಆದೇಶದಂತೆ ಖಾಯಂಗೊಳಿಸಲು ಸಚಿವರಿಗೆ ಮನವಿ ಮಾಡಿದರು. ಸಚಿವರು ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು. ಈ ಸಂದರ್ಭ ಕೊಡಗು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಅಶೋಕ್ ಆಲೂರು, ಎಫ್ಎಂ ಕೆಎಂಸಿ ಕಾಲೇಜಿನ ಪ್ರಾಂಶುಪಾಲ ಡಾ. ಮೇಜರ್ ಬಿ.ರಾಘವ್, ಉನ್ನತ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು, ಉಪನ್ಯಾಸಕರು ಭಾಗವಹಿಸಿದ್ದರು.
ಮಡಿಕೇರಿ ಜು.23 NEWS DESK : ಕೇಂದ್ರದ ವಿತ್ತ ಸಚಿವರಾದ ನಿರ್ಮಲಾ ಸೀತರಾಮನ್ ಅವರು ಏಳನೇ ಬಾರಿಗೆ ಮಂಡಿಸಿರುವ ಬಜೆಟ್ ಎಲ್ಲಾ ಕ್ಷೇತ್ರಗಳಿಗೂ ಆದ್ಯತೆ ನೀಡಿರುವ ವಿಕಸಿತ ಭಾರತದ ದೃಷ್ಟಿಕೋನದ ಬಜೆಟ್ ಆಗಿದೆ ಎಂದು ಕೊಡಗು ಜಾತ್ಯತೀತ ಜನತಾದಳದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮೂಟೆರ ಪುಷ್ಪಾವತಿ ರಮೇಶ್ ಅಭಿಪ್ರಾಯಪಟ್ಟಿದ್ದಾರೆ. ವಿಕಸಿತ ಭಾರತದ ದೃಷ್ಟಿಕೋನದಿಂದ ಕೂಡಿರುವ ಮತ್ತು ಸರ್ವ ಕ್ಷೇತ್ರಗಳಿಗೂ ಆದ್ಯತೆ ನೀಡಿರುವ ಪರಿಪೂರ್ಣ ಬಜೆಟ್ ಇದಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೈತರು, ಮಹಿಳೆಯರು, ಯುವ ಜನತೆ, ನಿರುದ್ಯೋಗಿಗಳು, ಮಧ್ಯಮ ಆದಾಯ (ವೇತನ) ಪಡೆಯುತ್ತಿರುವ ಉದ್ಯೋಗಿಗಳಿಗೆ ಹೆಚ್ಚು ಒತ್ತು ನೀಡಲಾಗಿದೆ. ಆದಾಯ ತೆರಿಗೆ ಲೆಕ್ಕಚಾರ ಮತ್ತು ಸರಳೀಕರಣ ಉತ್ತಮ ಕ್ರಮವಾಗಿದೆ. ಆದಾಯದ ಮಿತಿ ರೂ.7 ಲಕ್ಷಕ್ಕೆ ಏರಿಕೆ ಮಾಡಿರುವುದರಿಂದ ಮಧ್ಯಮ ವೇತನ ಪಡೆಯುವ ಉದ್ಯೋಗಿಗಳಿಗೆ ತೆರಿಗೆ ಭಾರ ಕಡಿಮೆಯಾಗುತ್ತದೆ. ಮಧ್ಯಮ ವರ್ಗದ ಜನರ ಜೀವನ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಯುವಕರಿಗೆ 4 ಕೋಟಿ ಉದ್ಯೋಗ ಸೃಷ್ಟಿ, ಕೌಶಲ್ಯ ತರಬೇತಿ, ಶಿಷ್ಯ ವೇತನ…
ಬೆಂಗಳೂರು ಜು.23 NEWS DESK : ಪೊಲೀಸ್ ಸಮವಸ್ತ್ರದಲ್ಲಿರುವ ಫೋಟೋ, ರೀಲ್ಸ್ ಮಾಡುವುದು, ಸ್ಟೇಟಸ್ ಅಪ್ಡೇಟ್ ಮಾಡುವುದು ಮತ್ತು ಸ್ಟೋರಿಗಳನ್ನು ಹಾಕುವುದು ಸೇರಿದಂತೆ ಇಲಾಖೆ ಸಂಬಂಧಿಸದ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡದಂತೆ ಎಲ್ಲಾ ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಎಚ್ಚರಿಕೆ ನೀಡಿದ್ದಾರೆ. ಪೊಲೀಸ್ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸುವಾಗ ಸಮವಸ್ತ್ರದಲ್ಲಿಯೇ ರೀಲ್ಸ್ ಮಾಡಿರುವ ಅನೇಕ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸ್ ಆಯುಕ್ತರು ಈ ಕ್ರಮ ತೆಗೆದುಕೊಂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ದಯಾನಂದ ಅವರು, ಸಮವಸ್ತ್ರದಲ್ಲಿರುವಾಗ ತಮ್ಮ ವೈಯಕ್ತಿಕ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಸಂಬಂಧವಿಲ್ಲದ ರೀಲ್ಸ್ ಗಳನ್ನು ಪೋಸ್ಟ್ ಮಾಡದಂತೆ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದರು. “ಪೊಲೀಸ್ ಸಮವಸ್ತ್ರವು ಸಾರ್ವಜನಿಕರ ಬಗೆಗಿನ ಬದ್ಧತೆ, ಸಮರ್ಪಣೆ ಮತ್ತು ಹೊಣೆಗಾರಿಕೆಯ ಸಂಕೇತವಾಗಿದೆ. ಅದನ್ನು ಧರಿಸುವಾಗ ನಾವು ಅತ್ಯಂತ ಕಾಳಜಿ ವಹಿಸಬೇಕು ಮತ್ತು ಗಂಭೀರವಾಗಿರಬೇಕು. ಸಮವಸ್ತ್ರದಲ್ಲಿರುವಾಗ ಅನುಚಿತವಾದ ವಿಷಯವನ್ನು ಪ್ರಸಾರ ಮಾಡುವುದರಿಂದ…
ಮಡಿಕೇರಿ ಜು.23 NEWS DESK : ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25 ರ ಬಜೆಟ್ ಮಂಡನೆ ಮಾಡಿದ್ದು, ಇದು ದೇಶದ ಬಜೆಟ್ ಅಲ್ಲ. ಬದಲಿಗೆ ಎರಡು ರಾಜ್ಯಗಳನ್ನು ಕೇಂದ್ರೀಕರಿಸಿದ ಋಣ ಸಂದಾಯದ ಬಜೆಟ್ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಟೀಕಿಸಿದ್ದಾರೆ. ಎನ್ಡಿಎ ಸರ್ಕಾರಕ್ಕೆ ಬೆಂಬಲ ನೀಡಿದ ಬಿಹಾರದ ಜೆಡಿಯು ಮತ್ತು ಆಂಧ್ರ ಪ್ರದೇಶದ ಟಿಡಿಪಿಯ ಋಣ ತೀರಿಸಲು ದೇಶದ 140 ಕೋಟಿ ಜನರ ತೆರಿಗೆ ಹಣವನ್ನು ಬಳಕೆ ಮಾಡಲಾಗಿದೆ. ಕರ್ನಾಟಕ ರಾಜ್ಯವನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ. ಒಕ್ಕೂಟ ವ್ಯವಸ್ಥೆಯಡಿ ಪ್ರತಿಯೊಂದು ರಾಜ್ಯವನ್ನು ಸಮಾನವಾಗಿ ಕಾಣುವುದು ಕೇಂದ್ರ ಸರ್ಕಾರದ ಹೊಣೆಗಾರಿಕೆಯಾಗಿದೆ. ಆದರೆ 26 ಸಾವಿರ ಕೋಟಿ ರೂ. ಬಿಹಾರ ರಾಜ್ಯಕ್ಕೆ ಮತ್ತು 15 ಸಾವಿರ ಕೋಟಿ ರೂ.ಗಳನ್ನು ಆಂಧ್ರ ಪ್ರದೇಶಕ್ಕೆ ಮೀಸಲಿಟ್ಟು, ಇತರ ರಾಜ್ಯಗಳ ಬಗ್ಗೆ ಮಲತಾಯಿ ಧೋರಣೆ ತಾಳಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.…
ಬೆಂಗಳೂರು ಜು.23 NEWS DESK : ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆಯು ಸಚಿವರಾದ ಕೆ.ವೆಂಕಟೇಶ್ ಅವರ ಉಪಸ್ಥಿತಿಯಲ್ಲಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆಯಿತು. ಹುಣಸೂರು, ಕೆ.ಆರ್.ನಗರ, ಕ್ಷೇತ್ರದ ಶಾಸಕರು, ಸಲಹಾ ಸಮಿತಿ ಸದಸ್ಯರು, ನೀರಾವರಿ ಇಲಾಖೆಯ ಹಿರಿಯ ಎಂಜಿನಿಯರ್ ಗಳು ಇತರರು ಪಾಲ್ಗೊಂಡಿದ್ದರು. ಸಭೆಯಲ್ಲಿ ಜುಲೈ 28 ರಿಂದ ಕಾಲುವೆಗಳಿಗೆ ನೀರು ಹರಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹಾರಂಗಿ ನೀರಾವರಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ ತಿಳಿಸಿದ್ದಾರೆ.
ನವದೆಹಲಿ ಜು.23 NEWS DESK : ಮೂರು ಕ್ಯಾನ್ಸರ್ ಔಷಧಗಳ ಮೇಲಿನ ಕಸ್ಟಮ್ ಡ್ಯೂಟಿ ತೆರವುಗೊಳಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಬಜೆಟ್ನಲ್ಲಿ ಘೋಷಿಸಿದ್ದಾರೆ. ಲೋಕಸಭೆಯಲ್ಲಿ 2024-25ನೇ ಸಾಲಿನ ಮುಂಗಡ ಪತ್ರ ಮಂಡಿಸಿದ ಅವರು ಎಕ್ಸ್-ರೇ ಟ್ಯೂಬ್ಗಳು ಮತ್ತು ಫ್ಲಾಟ್ ಪ್ಯಾನಲ್ ಡಿಟೆಕ್ಟರ್ಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇ.6 ರಷ್ಟು ಮತ್ತು ಪ್ಲಾಟಿನಂ ಮೇಲೆ ಶೇಕಡಾ 6.4 ರಷ್ಟು ಕಡಿಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ದೇಶದ ಆರೋಗ್ಯ ವ್ಯವಸ್ಥೆಗೆ ಸರ್ಕಾರವು 89,287 ಕೋಟಿ ರೂ ಗಳನ್ನು ನಿಗದಿಪಡಿಸಿದ್ದು, ಇದ್ದು ಈ ಹಿಂದಿನ ವರ್ಷದ 88,956 ಕೋಟಿಗಿಂತ ಸ್ವಲ್ಪ ಹೆಚ್ಚಾಗಿದೆ. ಔಷಧ ಉದ್ಯಮಕ್ಕೆ ಪಿಎಲ್ಐಗೆ ಸರ್ಕಾರ 2,143 ಕೋಟಿ ರೂ ಮಂಜೂರು ಮಾಡಿದೆ. ಫೆಬ್ರವರಿಯಲ್ಲಿ ಮಂಡಿಸಲಾದ 2024-25ರ ಮಧ್ಯಂತರ ಕೇಂದ್ರ ಬಜೆಟ್ನಲ್ಲಿ, ಹಣಕಾಸು ಸಚಿವರು ಆರೋಗ್ಯ ಕ್ಷೇತ್ರಕ್ಕೆ ಹಲವಾರು ಮಹತ್ವದ ಘೋಷಣೆಗಳನ್ನು ಮಾಡಿದ್ದರು. ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ 2024-25ಕ್ಕೆ 90,171 ಕೋಟಿ ರೂ ಮೀಸಲಿಟ್ಟಿದ್ದು, ಇದು 2023-24ರಲ್ಲಿ 79,221 ಕೋಟಿ ರೂ…






