ಮಡಿಕೇರಿ ಜು.22 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯಸಂಪದ (ಪಿಎಂಎಂಎಸ್ವೈ) ಯೋಜನೆಯಡಿ ವಿವಿಧ ಪರಿಸ್ಕೃತ ಘಟಕಗಳಾದ (1.4)ಹೊಸ ಮೀನುಕೃಷಿ ಕೊಳಗಳ ನಿರ್ಮಾಣ ಮತ್ತು (1.5) ಹೂಡಿಕೆ ವೆಚ್ಚಕ್ಕೆ ಸಹಾಯ(ಸಾಮಾನ್ಯ, ಮಹಿಳೆ ಮತ್ತು ಪ.ಜಾತಿ ಫಲಾನುಭವಿಗಳಿಗೆ ಮಾತ್ರ), (4.1)ಹಿತ್ತಲಿನ ಅಲಂಕಾರಿಕ ಮೀನು ಸಾಕಾಣಿಕೆ ಘಟಕ(ಸಾಗರ ಮತ್ತು ಶುದ್ಧ ನೀರು ಎರಡೂ) (1 ಸಾಮಾನ್ಯ ಮತ್ತು 1 ಮಹಿಳೆ), ಮತ್ತು (5.4) ಬ್ಯಾಕ್ಯಾರ್ಡ್ ಮಿನಿ ಆರ್ಎಎಸ್ ಘಟಕಗಳ ಸ್ಥಾಪನೆ(1 ಮಹಿಳೆ) ಈ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆ.8 ಕೊನೆಯ ದಿನವಾಗಿದೆ. ಈ ಉಪ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಫಲಾನುಭವಿಗಳಿಗೆ ಶೇ.40 ರಷ್ಟು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಮತ್ತು ಶೇ.60 ರಷ್ಟು ಪ.ಜಾತಿ ಮತ್ತು ಮಹಿಳಾ ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಡಿಕೇರಿ, ಪೊನ್ನಂಪೇಟೆ ಮತ್ತು ಸೋಮವಾರಪೇಟೆ ಅವರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಸಿ.ಎಸ್.ಸಚಿನ್…
ಲೇಖಕ: admin
ಮಡಿಕೇರಿ ಜು.22 NEWS DESK : ಕ್ರೀಡಾಪಟುಗಳು ಜೀವನದಲ್ಲಿ ಶಿಸ್ತು ಹಾಗೂ ಸಮಯ ಪಾಲನೆಯನ್ನು ಅಳವಡಿಸಿಕೊಂಡರೆ ಮಾತ್ರ ಕ್ರೀಡೆಯಲ್ಲಿ ಯಶಸ್ಸು ಸಾಧಿಸಲು ಸಾಧ್ಯವೆಂದು ಮಾಜಿ ಅಂತರರಾಷ್ಟ್ರೀಯ ರಗ್ಬಿ ಆಟಗಾರ ಹಾಗೂ ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ ಅಭಿಪ್ರಾಯಪಟ್ಟರು. ವಿರಾಜಪೇಟೆಯ ಪ್ರಗತಿ ಶಾಲೆಯಲ್ಲಿ ನಡೆದ, ಅಂಡರ್ 14 ಮಿನಿ ಒಲಿಂಪಿಕ್ ಕೊಡಗು ಫುಟ್ಬಾಲ್ ತಂಡಕ್ಕೆ ಆಯ್ಕೆಯಾದ ಬಾಲಕ ಮತ್ತು ಬಾಲಕಿಯರಿಗೆ ಕೌಶಲ್ಯ ತರಬೇತಿ ಮತ್ತು ಫಿಟ್ನೆಸ್ ತರಬೇತಿ ನೀಡಿ ಅವರು ಮಾತನಾಡಿದರು. ಕ್ರೀಡಾ ಜೀವನದಲ್ಲಿ ಯಶಸ್ಸು ಸಾಧಿಸಬೇಕೆಂದರೆ ಮುಖ್ಯವಾಗಿ ಕ್ರೀಡಾಪಟುಗಳು ಶಿಸ್ತು ಮತ್ತು ಸಮಯ ಪಾಲನೆ ಕಡ್ಡಾಯವಾಗಿ ಪಾಲಿಸಬೇಕು. ನಿರಂತರವಾಗಿ ಫಿಟ್ನೆಸ್ ಮುಂದುವರಿಸಿದರೆ ಮಾತ್ರ ಪ್ರತಿಭೆಯನ್ನು ಪ್ರದರ್ಶಿಸಲು ಸಾಧ್ಯ. ತರಬೇತಿ ನೀಡುವ ವೇಳೆಯಲ್ಲಿ ಕ್ರೀಡಾಪಟುಗಳು ಸರಿಯಾದ ಸಮಯಕ್ಕೆ ಆಗಮಿಸಬೇಕು. ಅದಲ್ಲದೇ ತಮ್ಮ ಕೋಚ್ ನೊಂದಿಗೆ ಉತ್ತಮ ರೀತಿಯಲ್ಲಿ ನಡೆದುಕೊಂಡರೆ ಮಾತ್ರ ಉತ್ತಮ ಕ್ರೀಡಾಪಟುವಾಗಿ ರೂಪುಗೊಳ್ಳಲು ಸಾಧ್ಯವೆಂದ ಮಾದಂಡ ತಿಮ್ಮಯ್ಯ ನವರು, ತರಬೇತುದಾರರು ಹೇಳಿಕೊಟ್ಟಿರುವ ಕೌಶಲ್ಯಗಳನ್ನು ಬರೀ ತರಬೇತಿ ವೇಳೆಯಲ್ಲಿ ಮಾತ್ರ ಸೀಮಿತಗೊಳಿಸದೆ,…
ಕಣಿವೆ ಜ.21 NEWS DESK : ಪ್ರತಿಯೊಬ್ಬರು ತಮ್ಮಲ್ಲಿನ ಗುಣ ದೋಷಗಳು ಹಾಗೂ ಅಹಂ ನಿರ್ಮೂಲನೆ ಮಾಡುವ ಮೂಲಕ ಉತ್ತಮವಾದ ಗುಣಸ್ವಭಾವಗಳನ್ನು ಸಂವರ್ಧಿಸಿಕೊಂಡಲ್ಲಿ ರಾಮರಾಜ್ಯದ ಕನಸು ನನಸಾಗುತ್ತದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ರಣರಾಗಿಣಿ ಬೆಂಗಳೂರು ಶಾಖೆಯ ಮುಖ್ಯಸ್ಥೆ ಭವ್ಯಗೌಡ ಆಶಿಸಿದರು. ಕುಶಾಲನಗರದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಹಮ್ಮಿಕೊಂಡಿದ್ದ ಗುರುಪೂರ್ಣಿಮೆ ಕಾರ್ಯಕ್ರಮದಲ್ಲಿ ಪ್ರವಚನ ನೀಡಿದ ಅವರು, ಭೂಮಿಯ ಮೇಲೆ ಯಾರೂ ಕೂಡ ಪರಿಪೂರ್ಣರಲ್ಲ. ಎಲ್ಲರಲ್ಲೂ ಒಂದಲ್ಲ ಒಂದು ದೋಷಗಳಿರುತ್ತವೆ. ಈ ದೋಷಗಳ ನಿರ್ಮೂಲನಕ್ಕೆ ಗುರುಗಳ ಕೃಪೆ ಬೇಕಿದೆ. ಹನ್ನೆರಡನೇ ಶತಮಾನದ ಶರಣ ಶ್ರೇಷ್ಠರಾದ ಬಸವಣ್ಣನವರು ಹೇಳಿದಂತೆ ಲೋಕದ ಡೊಂಕನ್ನು ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ ಎಂಬ ವಚನದ ಸಾರವನ್ನು ಎಲ್ಕರೂ ಅರಿತಲ್ಲಿ ಜೀವನವೇ ಪಾವನವಾಗುತ್ತದೆ. ಇಂದು ಬಹಳಷ್ಟು ಮಂದಿ ಹೆತ್ತವರನ್ನು ವೃದ್ಧಾಶ್ರಮಗಳಿಗೆ ಸೇರಿಸುತ್ತಿದ್ದಾರೆ. ಹಿಂದೂ ನಾವೆಲ್ಲಾ ಒಂದು ಎಂಬುದನ್ನು ಅರಿಯದೇ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿರುವುದು ಅನ್ಯ ಧರ್ಮೀಯರ ಅಟ್ಟಹಾಸಕ್ಕೆ ಕಾರಣವಾಗುತ್ತಿದೆ. ಹಿಂದೂ ಯುವಕರು ಬಹಳಷ್ಟು ಮಂದಿ ದುಶ್ಚಟಗಳಿಗೆ…
ಮಡಿಕೇರಿ ಜು.22 NEWS DESK : ಕೊಡಗು ಬಿಜೆಪಿ ವತಿಯಿಂದ ಗುರು ಪೂರ್ಣಿಮಾ ಅಂಗವಾಗಿ ಖ್ಯಾತ ವೈದ್ಯ ಬಿಜೆಪಿಯ ಹಿರಿಯ ನಾಯಕ ಡಾ. ಪಾಟ್ಕರ್ ದಂಪತಿಗಳಿಗೆ ಗುರು ವಂದನೆ ಸಲ್ಲಿಸಲಾಯಿತು. ಬಿಜೆಪಿಯ ಪ್ರಮುಖರು ಹಾಗೂ ಕಾರ್ಯಕರ್ತರು ಡಾ.ಪಾಟ್ಕರ್ ಅವರ ನಿವಾಸಕ್ಕೆ ತೆರಳಿ ದಂಪತಿಗಳನ್ನು ಸನ್ಮಾನಿಸಿ, ಆಶೀರ್ವಾದ ಪಡೆದರು. ಈ ಸಂದರ್ಭ ಬಿಜೆಪಿಯ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಮಹೇಶ್ ಜೈನಿ, ವಕ್ತಾರ ಅರುಣ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಮನು ಮಂಜುನಾಥ್, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾ ಖಜಾಂಚಿ ಕನ್ನಂಡ ಸಂಪತ್, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯ ದರ್ಶಿ ಸಂಗೀತ, ವೈಭವಿ ಕೀರ್ತಿ ಹಾಜರಿದ್ದರು.
ನಾಪೋಕ್ಲು ಜು.22 NEWS DESK : ಜಿಲ್ಲೆಯಲ್ಲಿ ಮಳೆಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ನದಿ, ತೊರೆ, ಗದ್ದೆ ತೋಟಗಳಲ್ಲಿ ತುಂಬಿಕೊಂಡಿದ್ದ ನೀರು ತಗ್ಗಿದೆ. ನಾಪೋಕ್ಲು – ಮೂರ್ನಾಡು ಸಂಪರ್ಕ ರಸ್ತೆಯ ಕಳೆದೆರಡು ದಿನಗಳಿಂದ ಕಾವೇರಿ ಪ್ರವಾಹದಿಂದಾಗಿ ಸಂಚಾರ ಸ್ಥಗಿತಗೊಂಡಿದ್ದು ಭಾನುವಾರ ಸಂಚಾರಕ್ಕೆ ಮುಕ್ತವಾಗಿದೆ. ನಾಪೋಕ್ಲು – ಕಲ್ಲುಮೊಟ್ಟೆ ರಸ್ತೆಯ ಚೆರಿಯ ಪರಂಬುವಿನಲ್ಲಿ ಕಾವೇರಿ ಪ್ರವಾಹದ ನೀರು ಹರಿಯುತ್ತಿದ್ದು ಸಂಪರ್ಕ ಸ್ಥಗಿತ ಮುಂದುವರೆದಿದೆ. ಎಮ್ಮೆಮಾಡು , ಕೈಕಾಡು ಸೇರಿದಂತೆ ಕಾವೇರಿ ನದಿ, ತೊರೆ ಪ್ರವಾಹದಿಂದ ಮುಳುಗಿದ್ದು ಬತ್ತ ಗದ್ದೆಗಳು, ಕಾಫಿ ತೋಟಗಳು ಇಳಿಮುಖಗೊಳ್ಳುತ್ತಿದೆ . ಗಾಳಿ-ಮಳೆಯಿಂದಾಗಿ ಹಲವೆಡೆ ಮರಗಳು ಬಿದ್ದು ನಷ್ಟ ಸಂಭವಿಸಿದೆ. ಬೇತು ಗ್ರಾಮದ ಮಕ್ಕಿ ಶಾಸ್ತಾವು ದೇವಾಲಯಕ್ಕೆ ತೆರಳುವ ರಸ್ತೆಯಲ್ಲಿ ಮರವೊಂದು ಮುರಿದುಬಿದ್ದಿದ್ದು ಬಳಿಕ ತೆರವುಗೊಳಿಸಲಾಯಿತು. ಬಲ್ಲಮಾವಟಿ ಗ್ರಾಮದ ಮಾದಪ್ಪ ಎನ್ ಪಿ ಅವರ ವಾಸದ ಮನೆಯು ಮಳೆ ಗಾಳಿಯಿಂದಾಗಿ ಹಾನಿಗೊಂಡಿದ್ದು ಸ್ನಾನದ ಕೋಣೆಯ ಗೋಡೆಯು ಕುಸಿದಿದೆ.ಹೆಂಚುಗಳು ಹಾನಿಗೊಂಡಿವೆ.ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. ನೆಲಜಿ,…
ಮಡಿಕೇರಿ ಜು.21 NEWS DESK : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆ ಹಾನಿ ಪ್ರದೇಶಗಳಿಗೆ ಭಾನುವಾರ ಭೇಟಿ ನೀಡಿ ವೀಕ್ಷಿಸಿದರು. ಮುಕ್ಕೊಡ್ಲು, ಐಗೂರು, ಮಲ್ಲಳ್ಳಿ ಜಲಪಾತ ಬಳಿ ಸೇತುವೆ ಹೀಗೆ ಮಳೆಹಾನಿ ಪ್ರದೇಶ ಹಾಗೂ ಮದಾಪುರ ಬಳಿಯ ಜಂಬೂರು ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಜನರ ಕುಂದುಕೊರತೆ ಆಲಿಸಿದರು. ಬಳಿಕ ಸೋಮವಾರಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು, ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದುರೀತಿಯ ಹಾನಿಯಾಗಿದ್ದು, ಈ ಸಂಬಂಧ ನಷ್ಟದ ಅಂದಾಜು ಮಾಡಿ ಮುಖ್ಯಮಂತ್ರಿ ಅವರು ಹಾಗೂ ಕಂದಾಯ ಸಚಿವರಿಗೆ ವರದಿ ನೀಡಿ, ವಿಶೇಷ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದರು. ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಡಳಿತ ಬಳಿ ಈಗಾಗಲೇ 30 ಕೋಟಿ ರೂ ಇದ್ದು, ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಹಣದ ಕೊರತೆ ಇಲ್ಲ ಎಂದು ಸಚಿವರು ಹೇಳಿದರು. ಮನೆ…
ಮಡಿಕೇರಿ ಜು.21 NEWS DESK : ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಜು.24 ರಂದು ವಿರಾಜಪೇಟೆ ಗಡಿಯಾರ ಕಂಬದ ಬಳಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಬುಧವಾರ ಬೆಳಿಗ್ಗೆ 10.30 ಗಂಟೆಗೆ ಮಾನವ ಸರಪಳಿ ನಿರ್ಮಿಸಿ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ವಿರೋಧಿಸಿ ಹಕ್ಕೊತ್ತಾಯ ಮಂಡಿಸಲಾಗುವುದು. ಕೊಡವ ಲ್ಯಾಂಡ್ ನ ಸಂರಕ್ಷಣೆಗಾಗಿ ಸರ್ವ ಕೊಡವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಅವರು ಮನವಿ ಮಾಡಿದ್ದಾರೆ. ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯ್ದೆ 79ಎ ಮತ್ತು 79ಬಿಯನ್ನು ದುರ್ಲಾಭಪಡಿಸಿಕೊಂಡು ಕೃಷಿ ಜಮೀನು, ಭತ್ತದ ಗದ್ದೆಗಳು ಮತ್ತು ಕಾಫಿ ತೋಟಗಳನ್ನು ಪರಿವರ್ತನೆ ಮಾಡಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲೂ ಆಂಧ್ರದ ಹಣ ಬಳಕೆಯಾಗುತ್ತಿದ್ದು, ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯಾಗುತ್ತಿದೆ. ಬೆಂಗಳೂರು, ತಿರುವನಂತಪುರ, ಚೆನ್ನೆöÊ, ಹೈದರಬಾದ್ ಸೇರಿದಂತೆ ದೇಶದ ವಿವಿಧೆಡೆಯ…
ಕುಶಾಲನಗರ ಜು.21 NEWS DESK : ಹನ್ನೆರಡನೇ ಶತಮಾನದಲ್ಲಿ ಇದ್ದಂತಹ ಒಡೆದು ಆಳುವ ನೀತಿಯನ್ನು ಖಂಡಿಸಿ ಸಮಾಜದಲ್ಲಿ ಸಮಾನತೆಗಾಗಿ ಹೋರಾಡಿದ ಶ್ರೇಷ್ಠ ಶರಣ ಹಡಪದ ಅಪ್ಪಣ್ಣ ಎಂದು ವಾಗ್ಮಿ ಹಾಗೂ ವಸತಿ ನಿಲಯದ ಮೇಲ್ವಿಚಾರಕ ಶ್ರೀಕಾಂತ್ ಹೇಳಿದರು. ಕುಶಾಲನಗರ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಸ್ಥಳೀಯ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಹಮ್ಮಿಕೊಂಡಿದ್ದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಪ್ರವಚನ ನೀಡಿದ ಅವರು, ಹನ್ನೆರಡನೇ ಶತಮಾನದಲ್ಲಿ ಸಮಾಜದಲ್ಲಿದ್ದ ಮೇಲು ಕೀಳು, ಬಡವ – ಬಲ್ಲಿದ ಎಂಬಿತ್ಯಾದಿ ತಾರತಮ್ಯ ಧೋರಣೆಗಳ ವಿರುದ್ಧ ಕಟುವಾದ ಶಬ್ಧಗಳಲ್ಲಿ ಖಂಡಿಸಿದ ಅಪ್ಪಣ್ಣ ಅವರು ಬಸವಣ್ಣನ ಆಪ್ತ ಕಾರ್ಯದರ್ಶಿಯಾಗಿದ್ದರು. ಹಡಪದ ಸಮುದಾಯದ ವಿರುದ್ದ ಅಂದು ಬೇರೂರಿದ್ಧ ಕಂದಾಚಾರದ ವಿರುದ್ಧ ಸಮರ ಸಾರಿದ್ದ ಬಸವಣ್ಣ ತಮ್ಮಲ್ಲಿಗೆ ಬರುವ ಎಲ್ಲರೂ ಮೊದಲು ಹಡಪದ ಅಪ್ಪಣ್ಣ ಅವರನ್ನು ಕಂಡು ಮಾತನಾಡಿ ಬರುವಂತಹ ವಾತಾವರಣವನ್ನು ಬಸವಣ್ಣನವರು ನಿರ್ಮಾಣ ಮಾಡಿದ್ದರು. ಶರಣರು ನುಡಿದಂತೆಯೇ ನಡೆದವರು. ಅವರ ನಂಬಿಕೆ ಹಾಗೂ ಆಚರಣೆಗಳಲ್ಲಿ ಯಾವುದೇ ಅಂತರವಿರಲಿಲ್ಲ. ಬಸವಾದಿ ಶರಣರು ಸತ್ಯ ಶುದ್ಧ ಕಾಯಕಕ್ಕೆ ನೀಡಿದ ಮಹತ್ವದಷ್ಟೇ…
ಕುಶಾಲನಗರ ಜು.21 NEWS DESK : ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಬೆಳೆದು ನಿಂತಿರುವ ಗಿಡಗಳ ಸಂರಕ್ಷಣೆ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕಾಗಿದೆ ಎಂದು ಹಿರಿಯ ವೈದ್ಯರು ಹಾಗೂ ರೋಟರಿ ಸದಸ್ಯರಾದ ಡಾ ದೇವದಾಸ್ ಭಟ್ ಕರೆ ನೀಡಿದ್ದಾರೆ. ಅವರು ಕುಶಾಲನಗರದಲ್ಲಿ ತಾಲೂಕು ಕಾರ್ಯದರ್ಶಿತ ಪತ್ರಕರ್ತರ ಸಂಘ ಮತ್ತು ರೋಟರಿ ಕುಶಾಲನಗರ, ಅರಣ್ಯ ಇಲಾಖೆ ಸಹಯೋಗದಲ್ಲಿ ನಡೆದ ಹೆದ್ದಾರಿ ಬದಿಯಲ್ಲಿ ನೆರಳು ಗಿಡ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪಟ್ಟಣದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಸಂಘ ಸಂಸ್ಥೆಗಳ ಮೂಲಕ ಬೆಳೆಸಿದ ಮರ ಗಿಡಗಳಿಗೆ ಹಾನಿಯಾಗದಂತೆ ನಾಗರಿಕರು ಎಚ್ಚರ ವಹಿಸಬೇಕು. ಪ್ರತಿಯೊಬ್ಬರೂ ಗಿಡ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಉತ್ತಮ ಪರಿಸರ ನಿರ್ಮಾಣಕ್ಕೆ ಕೈಜೋಡಿಸಬೇಕಾಗಿದೆ ಎಂದು ಹೇಳಿದರು. ಈ ಸಂದರ್ಭ ಮಾತನಾಡಿದ ಕುಶಾಲನಗರ ತಾಲೂಕು ಕಾರ್ಯಗತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ ಎನ್ ಚಂದ್ರಮೋಹನ್ ಸಂಘದ ಬೆಳ್ಳಿ ಹಬ್ಬದ ಅಂಗವಾಗಿ ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತ ವ್ಯಾಪ್ತಿಯಲ್ಲಿ 25 ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು. ಕುಶಾಲನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣ…
ಗುಂಡ್ಲುಪೇಟೆ ಜು.20 NEWS DESK : ಕಾರು ಮತ್ತು ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಎಪಿಎಂಸಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿ-766 ರಲ್ಲಿ ಶನಿವಾರ ರಾತ್ರಿ ನಡೆದಿದೆ. ಚಾಮರಾಜನಗರ ಅಂಬೇಡ್ಕರ್ ಬಡಾವಣೆ ನಿವಾಸಿಗಳಾದ ಮಹೇಶ್ ಹಾಗೂ ದರ್ಶನ್ ಮೃತ ದುರ್ದೈವಿಗಳು. ಚಾಲಕ ಕಿಟ್ಟಿ ಹಾಗೂ ಸಚಿನ್ ಗಾಯಾಳುಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಂಡ್ಲುಪೇಟೆಯಿಂದ ಮೈಸೂರು ಕಡೆಗೆ ಬರುತ್ತಿದ್ದ ಕಾರು, ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.






