ನವದೆಹಲಿ ಜು.31 NEWS DESK : ಕೇಂದ್ರ ಲೋಕಸೇವಾ ಆಯೋಗದ ನೂತನ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಆಯ್ಕೆಯಾಗಿದ್ದು, ಆಗಸ್ಟ್ 1 ರಂದು ಅಧಿಕಾರ ಸ್ವೀಕರಿಸಲಿದ್ದಾರೆ . 1983ರ ಬ್ಯಾಚ್ನ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ವಿವಾದದ ಸಂದರ್ಭದಲ್ಲಿ ಯುಪಿಎಸ್ಸಿ ಮಾಜಿ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ ನೀಡಿದ ನಂತರ ಈ ಹುದ್ದೆ ಖಾಲಿಯಾಗಿತ್ತು. ಪ್ರೀತಿ ಸೂದನ್ ಕೇಂದ್ರದ ಮಾಜಿ ಆರೋಗ್ಯ ಕಾರ್ಯದರ್ಶಿಯಾಗಿದ್ದರು. ಅವರು 2022 ರಿಂದ UPSC ಸದಸ್ಯರಾಗಿದ್ದಾರೆ. ಪೂಜಾ ಖೇಡ್ಕರ್ ವಿವಾದ ಬೆಳಕಿಗೆ ಬಂದ ನಂತರ, UPSC ಮಾಜಿ ಮುಖ್ಯಸ್ಥ ಮಹೇಶ್ ಸೋನಿ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ರಾಜೀನಾಮೆ ನೀಡಿದ್ದರು. ಪ್ರೀತಿ ಆಂಧ್ರಪ್ರದೇಶ ಕೇಡರ್ನ ಐಎಎಸ್ ಅಧಿಕಾರಿ. ಅವರು ಆಹಾರ ಸಂಸ್ಕರಣೆ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಕಾರ್ಯದರ್ಶಿಯಾಗಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ರಕ್ಷಣಾ ಸಚಿವಾಲಯದಲ್ಲಿಯೂ ಕೆಲಸ ಮಾಡಿದ್ದಾರೆ.
ಲೇಖಕ: admin
ಸುಂಟಿಕೊಪ್ಪ ಜು.31 NEWS DESK : ನಂಜರಾಯಪಟ್ಟಣ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಎಸ್.ಡಿ.ಉದಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿ.ಜಿ.ಲೋಕೇಶ್ ನೇಮಕಗೊಂಡಿದ್ದಾರೆ. ನಂಜರಾಯಪಟ್ಟಣ ಪ್ರೌಢಶಾಲಾ ಸಭಾಂಗಣದಲ್ಲಿ ವಿದ್ಯಾ ಸಂಘದ ವತಿಯಿಂದ ನಡೆದ ಹಳೆಯ ವಿದ್ಯಾರ್ಥಿಗಳ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಭೆಯಲ್ಲಿ ಹಾಜರಿದ್ದ ಹಳೆಯ ವಿದ್ಯಾರ್ಥಿಗಳ ನಿರ್ದೇಶಕರುಗಳ ಪೈಕಿ ಉಪಾಧ್ಯಕ್ಷರಾಗಿ ಕೆ.ಟಿ.ಹರೀಶ್, ಖಜಾಂಚಿಯಾಗಿ ಕೆ.ಎ.ಅನೀಸ್, ನಿರ್ದೇಶಕರುಗಳಾಗಿ ಉಳುವಾರನ ಶಿವಕುಮಾರ್, ಸಿ.ಜೆ.ವಿಜೇಶ್, ಸೂರ್ಯಕುಮಾರ್, ಬೆಳ್ಳಿಯಪ್ಪ, ಪವನ್ ಚಿಂಟು, ಸಂದೀಪ್, ಆರಿಸ್, ಎ.ಪಿ.ಬಾಲಕೃಷ್ಣ, ಕೆ.ಜಿ.ದೇವಯ್ಯ, ಪ್ರಸನ್ನ ಹಾಗೂ ಹೆಚ್.ಕೆ.ಪ್ರಸಾದ್ ಅವರುಗಳನ್ನು ಆಯ್ಕೆ ಮಾಡಲಾಯಿತು.
ಮಡಿಕೇರಿ ಜು.31 NEWS DESK : ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಸರ್ವೋದಯ ಬಿ.ಇಡಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ವಾಣಿ ಅವರನ್ನು ಕೊಡಗು ವಿಶ್ವವಿದ್ಯಾಲಯದ ಉಪಕುಲಪತಿಗಳು ನಾಮನಿರ್ದೇಶನ ಮಾಡಿದ್ದಾರೆ.
ಸುಂಟಿಕೊಪ್ಪ ಜು.31 NEWS DESK : ಮನೆಗೆ ನುಗ್ಗಿದ ಕಳ್ಳರು ಚಿನ್ನ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ಸುಂಟಿಕೊಪ್ಪದ ಹೊಸಬಡಾವಣೆಯಲ್ಲಿ ನಡೆದಿದೆ. ಹೊಸಬಡಾವಣೆ ನಿವಾಸಿ ಮನು ಅಚ್ಚಮಯ್ಯ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯಲ್ಲಿ ಯಾರು ಇಲ್ಲದ ಸಂದರ್ಭವನ್ನು ಬಳಸಿಕೊಂಡು ಕಳ್ಳರು ಮನೆಯ ಬೀಗವನ್ನು ಮುರಿದು ಒಳನುಗ್ಗಿ ಮನೆಯಲ್ಲಿದ್ದ 3 ಕಪಾಟುಗಳನ್ನು ಜಾಲಾಡಿ 1 ಲಕ್ಷದ 75 ಸಾವಿರ ಮೌಲ್ಯದ 3 ಪೌನ್ ಚಿನ್ನ ಹಾಗೂ ರೂ.6 ಸಾವಿರ ನಗದನ್ನು ಅಪಹರಿಸಿ ಪರಾರಿಯಾಗಿದ್ದಾರೆ. ಕುಶಾಲನಗರ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್, ಠಾಣಾಧಿಕಾರಿ ಎಂ.ಸಿ.ಶ್ರೀಧರ್, ಅಪರಾಧ ಪತ್ತೆದಳದ ಅಧಿಕಾರಿ ಸ್ವಾಮಿ, ಬೆರಳಚ್ಚು ತಜ್ಞರು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು, ಅಪರಾಧ ವಿಭಾಗದ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದರು. ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಸೋಮವಾರಪೇಟೆ NEWS DESK ಜು.31 : ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ಮಂಡಲ ಕಾರ್ಯಕಾರಿಣಿ ಸಭೆ ಇಲ್ಲಿನ ಕೊಡವ ಸಮಾಜ ಸಭಾಂಗಣದಲ್ಲಿ ಮಂಡಲ ಅಧ್ಯಕ್ಷ ಗೌತಮ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಮಾಜೀ ಸಂಸದ ಪ್ರತಾಪ್ ಸಿಂಹ, ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆಗಳ ಮೂಲಕ ಯಾರಿಗೂ ಹಣ ಬರುತ್ತಿಲ್ಲ. ಈ ಗ್ಯಾರಂಟಿಗಳು ಕಾಂಗ್ರೆಸ್ ಎಲೆಕ್ಷನ್ಗಾಗಿ ಮಾಡಿದ ಗಿಮಿಕ್ ಎಂಬುದು ಜನರಿಗೆ ಮನದಟ್ಟಾಗಿದೆ. ಮಳೆಯಿಂದ ಹಾನಿಯಾದರೆ ಬಿಜೆಪಿ ಸರ್ಕಾರ ಲಕ್ಷ ಪರಿಹಾರ ನೀಡುತ್ತಿತ್ತು. ಈಗಿನ ಕಾಂಗ್ರೆಸ್ ಬಿಡಿಗಾಸೂ ನೀಡಿಲ್ಲ ಎಂದು ದೂರಿದರು. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಮುಖ್ಯಮಂತ್ರಿಗಳು ವಾಲ್ಮೀಕಿ ನಿಗಮ ಸೇರಿದಂತೆ ಮೂಡಾ ಹಗರಣದಲ್ಲಿ ಭಾಗಿಯಾಗಿದ್ದಾರೆ. ಎಸ್ಸಿ ಎಸ್ಟಿ ಮೀಸಲು ಅನುದಾನವನ್ನು ಬೇರೆಯ ಉದ್ದೇಶಕ್ಕೆ ಬಳಕೆ ಮಾಡಲಾಗಿದೆ. ಭ್ರಷ್ಟಾಚಾರ ಮಿತಿ ಮೀರುತ್ತಿದ್ದು, ಈ ಬಗ್ಗೆ ಜನರಿಗೆ ತಿಳಿಸಬೇಕು. ಭ್ರಷ್ಟತೆಯನ್ನು ಪ್ರಶ್ನಿಸುವ, ಪರಿಣಾಮಕಾರಿಯಾಗಿ ಹೋರಾಟ ರೂಪಿಸುವ ಅಗತ್ಯವಿದ್ದು, ಯುವ ನಾಯಕರು ಹೋರಾಟಕ್ಕೆ ಇಳಿಯಬೇಕು. ಆ ಮೂಲಕ 2028ರ ಚುನಾವಣೆಯಲ್ಲಿ ಕೊಡಗಿನ…
ಮಡಿಕೇರಿ ಜು.31 NEWS DESK : ಮಡಿಕೇರಿ – ಮಾಂದಲ್ ಪಟ್ಟಿ ಹಾಗೂ ಅಬ್ಬಿ ಫಾಲ್ಸ್ ಗೆ ಸಂಪರ್ಕ ಕಲ್ಪಿಸುವ ಭಗವತಿ ನಗರದ ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು, ಪಾದಾಚಾರಿಗಳು ಹಾಗೂ ವಾಹನ ಸಂಚಾರಕ್ಕೆ ಅಡಚಣೆಯನ್ನುಂಟು ಮಾಡುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯ ರಸ್ತೆಯು ಪ್ರಮುಖ ಪ್ರವಾಸಿತಾಣ ಅಬ್ಬಿಪಾಲ್ಸ್ ಗೆ ತೆರಳುವ ರಸ್ತೆಯಾಗಿದ್ದು, ಈ ರಸ್ತೆಯಲ್ಲಿ ನಿತ್ಯ ದೇಶ ವಿದೇಶದಿಂದ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ವಾಹನಗಳು ಸಂಚರಿಸುತ್ತಿದ್ದು, ವಾಹನಗಳು ಗುಂಡಿಯಲ್ಲಿ ಸಿಲುಕಿ ಸವಾರರು ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗುವಂತ್ತಾಗಿದೆ. ವಿದ್ಯಾರ್ಥಿಗಳು, ಸಾರ್ವಜನಿಕರು ನಡೆದಾಡುವುದೇ ಕಷ್ಟವಾಗಿದೆ, ರಸ್ತೆಯ ದುಸ್ಥಿತಿ ಕಂಡು ಸಾರ್ವಜನಿಕರು ಹಿಡಿಶಾಪ ಹಾಕುತ್ತಲೇ ಓಡಾಡುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ಗಮನ ಹರಸಿ, ರಸ್ತೆ ದುರಸ್ತಿಗೊಳಿಸುವ ಮೂಲಕ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಮಡಿಕೇರಿ NEWS DESK ಜು.31 : ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿ ಗ್ರಾಮದಲ್ಲಿ ಒಂಟಿ ಸಲಗವೊಂದು ಬೆಳ್ಳಂಬೆಳಗ್ಗೆ ಕಾಣಿಸಿಕೊಂಡು ಆತಂಕ ಮೂಡಿಸಿತು. ಬೆಳಿಗ್ಗೆ ಸುಮಾರು 6.30 ಗಂಟೆ ವೇಳೆಗೆ ಗ್ರಾಮದ ಮುಖ್ಯ ರಸ್ತೆಯಲ್ಲಿ ರಾಜಾರೋಷವಾಗಿ ಸಂಚರಿಸಿದ ಕಾಡಾನೆ ಗ್ರಾಮಸ್ಥರು ಕಿರುಚಿಕೊಂಡಾಗ ಅಕ್ಕಪಕ್ಕದ ತೋಟಗಳಿಗೆ ಪ್ರವೇಶಿಸಿತು. ಬೇಲಿ ಮತ್ತು ತೋಟದಲ್ಲಿನ ಗಿಡಗಳಿಗೆ ಹಾನಿಯಾಗಿದ್ದು, ನಿತ್ಯ ಈ ಒಂಟಿ ಸಲಗ ಗ್ರಾಮದಲ್ಲಿ ಸಂಚರಿಸುತ್ತಿರುವ ಬಗ್ಗೆ ಸ್ಥಳೀಯರು ಆತಂಕ ವಯಕ್ತಪಡಿಸಿದ್ದಾರೆ. ಇತ್ತೀಚೆಗಷ್ಟೆ ಬೆಳೆಗಾರರೊಬ್ಬರು ಒಂಟಿ ಸಲಗದ ದಾಳಿಯಿಂದ ಪಾರಾಗಿದ್ದರು. ಅರಣ್ಯ ಇಲಾಖೆ ಕಾಡಾನೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಡಿಕೇರಿ NEWS DESK ಜು.31 : ನಗರದ ಶ್ರೀ ಓಂಕಾರೇಶ್ವರ ದೇವಾಲಯದ ಗದ್ದೆಯಲ್ಲಿ ಇಂದು ನಾಟಿ ಕಾರ್ಯ ನಡೆಸಲಾಯಿತು. ಹುತ್ತರಿ ಹಬ್ಬದಂದು ಭತ್ತದ ತೆನೆಯನ್ನು ತೆಗೆಯಲು ಬೇಕಾದ ಭತ್ತದ ಸಸಿಯನ್ನು ಗದ್ದೆಯಲ್ಲಿ ನೆಡಲಾಯಿತು. ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ದೇವರಾಜು, ದೇವಾಲಯ ಸಮಿತಿಯ ಮಾಜಿ ಅಧ್ಯಕ್ಷ ಪುಲಿಯಂಡ ಜಗದೀಶ್, ಕೊಡಗು ಜಾನಪದ ಪರಿಷತ್ತಿನ ಉಪಾಧ್ಯಕ್ಷ ಅಂಬೆಕಲ್ ಕುಶಾಲಪ್ಪ, ಕೇಕಡ ವಾಸು ಪುಟ್ಟಯ್ಯ, ಸಿದ್ದರಾಜು, ಕೃಪಾ ದೇವರಾಜು, ಶಿಲ್ಪಾ ರವೀಂದ್ರ ರೈ, ಕೀತಿಯಂಡ ತೆಲ್ಮಾ ಕಾರ್ಯಪ್ಪ , ದಿವ್ಯಾ ಲೋಕೇಶ್, ರೇಷ್ಮಾ ಕುಶ, ಅಣ್ಣಪ್ಪ, ಕುಶಕುಮಾರ್, ನಾರಾಯಣ, ಮುತ್ತಪ್ಪ, ಹರೀಶ್ ಹಾಜರಿದ್ದರು.
ಮಡಿಕೇರಿ ಜು.31 NEWS DESK : ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಶ್ರೇಯೋಭಿವೃದ್ದಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ “ಕೃಷಿ ಪಂಡಿತ” ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕೃಷಿ ಪಂಡಿತ ಪ್ರಶಸ್ತಿಗೆ ಭಾಗವಹಿಸಲು ಇಚ್ಚಿಸುವ ರೈತರ ಸಂಶೋಧನೆ/ಸಾಧನೆಗಳು ಮೂಲ ಸ್ವರೂಪದಾಗಿದ್ದು, ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಸದರಿ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸ ಬಯಸುವ ರೈತ/ ರೈತ ಮಹಿಳೆಯರು ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ 31.08.2024 ರ ಒಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿರುತ್ತದೆ. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ NEWS DESK ಜು.31 : ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ದಯಾನಂದ.ಕೆ.ಸಿ ಅವರನ್ನು ಕೊಡಗು ವಿಶ್ವವಿದ್ಯಾಲಯದ ಉಪಕುಲಪತಿಗಳು ನಾಮನಿರ್ದೇಶನ ಮಾಡಿದ್ದಾರೆ. ಇವರು ಮೂಲತಃ ಭಾಗಮಂಡಲದ ತಾವೂರು ಗ್ರಾಮದ ಕೂಡಕಂಡಿ ಚಂದ್ರಹಾಸ ಹರಿಣಾಕ್ಷಿ ಇವರ ಪುತ್ರ. ಪ್ರಸ್ತುತ ಮಡಿಕೇರಿಯ ಕಾವೇರಿ ಬಡಾವಣೆಯಲ್ಲಿ ನೆಲೆಸಿರುವರು.






