ಮಡಿಕೇರಿ ಜು.31 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸೋಮವಾರಪೇಟೆ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಸಂತ್ರಸ್ತರ ಸಮಸ್ಯೆ ಆಲಿಸಿ ಧೈರ್ಯ ತುಂಬಿದರು. ಸಂತ್ರಸ್ತರಿಗೆ ಯಾವುದೇ ಅನಾನುಕೂಲತೆ ಆಗದಂತೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಲೇಖಕ: admin
ಮಡಿಕೇರಿ NEWS DESK ಜು.31 : ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕಾವೇರಿ ಎನ್.ಪಿ ಅವರನ್ನು ಕೊಡಗು ವಿಶ್ವವಿದ್ಯಾಲಯದ ಉಪಕುಲಪತಿಗಳು ನಾಮನಿರ್ದೇಶನ ಮಾಡಿದ್ದಾರೆ.
ಮಡಿಕೇರಿ NEWS DESK ಜು.31 : ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಗೋಣಿಕೋಪ್ಪ ಕಾವೇರಿ ಕಾಲೇಜಿನ ಪ್ರಾಂಶುಪಾಲ ಡಾ.ಕಾವೇರಪ್ಪ ಎಂ.ಬಿ ಆವರನ್ನು ಕೊಡಗು ವಿಶ್ವವಿದ್ಯಾಲಯದ ಉಪಕುಲಪತಿಗಳು ನಾಮನಿರ್ದೇಶನ ಮಾಡಿದ್ದಾರೆ.
ಮಡಿಕೇರಿ ಜು.31 NEWS DESK : ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ-ಕೃಷಿ ಉತ್ಪಾದನಾ ಬಹುಮಾನ ಯೋಜನೆಯನ್ನು ಕೃಷಿ ಇಲಾಖಾ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ (2024-25) ಸಹ ರೈತ/ ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. ನೋಂದಣಿ ಶುಲ್ಕ: 2024-25ನೇ ಸಾಲಿನಿಂದ ಅನ್ವಯಿಸುವಂತೆ ಕೃಷಿ ಪ್ರಶಸ್ತಿಗೆ ನಿಗದಿ ಪಡಿಸಲಾಗಿರುವ ಪ್ರವೇಶ ಶುಲ್ಕವನ್ನು ರದ್ದುಪಡಿಸಲಾಗಿದೆ. ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ ಸ್ಪರ್ಧಾ ಬೆಳೆ ಬೆಳೆದಿರಬೇಕು. ಸ್ವಂತ ಜಮೀನು ಇರುವ ಬಗ್ಗೆ ಪಹಣಿ ಪತ್ರ ಹೊಂದಿರಬೇಕು. ಯಾವುದೇ ಹಂತದಲ್ಲಿ ಒಮ್ಮೆ ಬಹುಮಾನ ಪಡೆದ ರೈತ/ ರೈತ ಕುಟುಂಬದವರು ಮುಂದಿನ ಐದು ವರ್ಷಗಳ ಅವಧಿಗೆ ಆ ಹಂತದ ಬೆಳೆ ಸ್ಪರ್ಧೆಯ ಬಹುಮಾನಕ್ಕೆ ಅರ್ಹನಾಗಿರುವುದಿಲ್ಲ. ಆದರೆ ಆ ಮೇಲಿನ ಹಂತದ ಬೆಳೆ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿರುತ್ತದೆ. ತಾಲ್ಲೂಕು ಮಟ್ಟದಲ್ಲಿ ಬಹುಮಾನ ಪಡೆದವರು ಜಿಲ್ಲಾ ಮಟ್ಟಕ್ಕೆ ಸ್ಪರ್ಧಿಸಬಹುದಾಗಿದೆ ಮತ್ತು ಜಿಲ್ಲಾ ಮಟ್ಟದಲ್ಲಿ ಬಹುಮಾನ…
ಮಡಿಕೇರಿ ಜು.31 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅವರ ಅಧ್ಯಕ್ಷತೆಯಲ್ಲಿ ‘ಸಮಾಗಮ ಸಭೆಗೆ’ ಉತ್ತಮ ಸ್ಪಂದನೆ ದೊರೆಯಿತು. ನಗರದ ಗಾಂಧಿ ಭವನದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನೂತನ ಸದಸ್ಯರು, ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ಅರೆಭಾಷೆ ಸಮುದಾಯದ ವಿವಿಧ ಸಂಘಟನೆಗಳ ಅಧ್ಯಕ್ಷರು ಮತ್ತು ನಿರ್ದೇಶಕರು ಸೇರಿದಂತೆ ಹಲವರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ಸುಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಅಕಾಡೆಮಿ ಮೊದಲ ಸಭೆಯಲ್ಲಿ ಅಕಾಡೆಮಿ ಚಟುವಟಿಕೆ ಸಂಬಂಧಿಸಿದಂತೆ ಕಳೆದ ಎರಡು ಅವಧಿಯಲ್ಲಿನ ಫೆಲೋಶಿಪ್ನ ಪುಸ್ತಕ ಹೊರತರಲು ಬಾಕಿ ಇದ್ದು, ಮೊದಲ ಸಭೆಯಲ್ಲಿಯೇ ಪುಸ್ತಕ ಹೊರ ತರಲು ನಿರ್ಧರಿಸಿರುವುದು ವಿಶೇಷವಾಗಿದೆ ಎಂದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ‘ಹಿಂಗಾರ’ ಪುಸ್ತಕವನ್ನು ಹೊರತರಲಾಗುತ್ತಿದ್ದು, ಕಳೆದ 18…
ಮಡಿಕೇರಿ NEWS DESK ಜು.31 : ಭಾರೀ ಗಾಳಿ ಮಳೆಯ ಹಿನ್ನೆಲೆ ಕೊಡಗು ಜಿಲ್ಲೆಯ ವಿವಿಧ ಭಾಗಗಳ ಹಲವು ಕುಟುಂಬಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಭಾಗಮಂಡಲ ಹೋಬಳಿಯ ಭಾಗಮಂಡಲ ಗ್ರಾಮದ ಕಾಶಿ ಮಠದಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು, ಎರಡು ಕುಟುಂಬಗಳ ಏಳು ಸದಸ್ಯರು ಆಶ್ರಯ ಪಡೆದಿದ್ದಾರೆ. ವಿರಾಜಪೇಟೆ ತಾಲ್ಲೂಕು ಕರಡಿಗೋಡು ಗ್ರಾಮದ ಕಾವೇರಿ ನದಿ ದಡ ವ್ಯಾಪ್ತಿಯ ಹೊಳೆ ಕೆರೆ ಪೈಸಾರಿಯ ಪ್ರವಾಹದ ಅಪಾಯದ ಭೀತಿಯಲ್ಲಿರುವ ಕುಟುಂಬಗಳನ್ನು ಸಿದ್ದಾಪುರ ಸ್ವರ್ಣ ಮಾಲ ಕಲ್ಯಾಣ ಮಂಟಪಕ್ಕೆ ಭಾಗಶಃ ಸ್ಥಳಾಂತರಿಸಲಾಗಿದೆ. ವಿರಾಜಪೇಟೆ ಹೋಬಳಿ ತೋರ ಗ್ರಾಮದ ಭೂಕುಸಿತ ಪ್ರದೇಶದಲ್ಲಿರುವ ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಮಡಿಕೇರಿಯ ಇಂದಿರಾ ನಗರದಲ್ಲಿ ಎರಡು ಮನೆಗಳು ಅಪಾಯ ಸ್ಥಿತಿಯಲ್ಲಿದ್ದು, ಸದ್ರಿ ಮನೆಗಳಲ್ಲಿ ವಾಸಿಸುವವರಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಲು ತಿಳಿಸಲಾಗಿದೆ ಹಾಗೂ ಇಂದಿರಾ ನಗರದಲ್ಲಿರುವ ಸಮುದಾಯ ಭವನದಲ್ಲಿ ತಾತ್ಕಾಲಿಕವಾಗಿ ಇರುವಂತೆ ತಿಳಿಸಲಾಗಿದೆ. ಸಮುದಾಯ ಭವನದ ಸಮಿತಿಗೂ ಈ ಮಾಹಿತಿ ನೀಡಿ ಎರಡು ಕುಟುಂಬಗಳು…
*ಮಹಾಮಳೆ : ಕೊಡಗು ಜಿಲ್ಲೆಗೆ ಪ್ರವಾಸಕ್ಕೆ ಬರುವ ಪ್ರವಾಸಿಗರೇ ಗಮನಿಸಿ : ಇದು ಜಿಲ್ಲಾಡಳಿತದ ಮನವಿ*
ಮಡಿಕೇರಿ NEWS DESK ಜು.30 : ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ 31.07.2024ರ ಬುಧುವಾರದಂದು ನಡೆಯಲಿರುವ ಕೊಡಗು ವಿಶ್ವವಿದ್ಯಾಲಯದ 2ನೇ ಸೆಮಿಸ್ಟರ್ ಸ್ನಾತಕ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮುಂದೂಡಿದ ಸದರಿ ಪರೀಕ್ಷೆಗಳ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದು. ಮಿಕ್ಕುಳಿದ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಮುಂದುವರಿದು ಎಲ್ಲಾ ಸ್ನಾತಕೋತ್ತರ ಪದವಿ ತರಗತಿಗಳಿಗೆ 31.07.2024 ಬುಧುವಾರದಂದು ರಜೆಯನ್ನು ಘೋಷಿಸಲಾಗಿದೆ. ಕುಲಸಚಿವರು(ಪರೀಕ್ಷಾಂಗ) ಕೊಡಗು ವಿಶ್ವವಿದ್ಯಾಲಯ, ಕೊಡಗು.
ಮಡಿಕೇರಿ NEWS DESK ಜು.30 : ಕೇರಳ ರಾಜ್ಯದ ವಯನಾಡಿಲ್ಲಿ ಭೂಕುಸಿತ ಸಂಭವಿಸಿದ್ದು ಕೊಡಗು ಜಿಲ್ಲೆಯ ಸಾರ್ವಜನಿಕರು ಯಾರಾದರೂ ಸಿಲುಕಿಕೊಂಡಿದ್ದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ಕೊಡಗು , ಇಲ್ಲಿಗೆ ಸಂಪರ್ಕಿಸಲು ಕೋರಿದೆ. ದೂ:- 08272-221077/ 221099
ಮಡಿಕೇರಿ ಜು.30 NEWS DESK : ಕೇರಳ ರಾಜ್ಯದ ವಯನಾಡುವಿನಲ್ಲಿ ನಡೆದ ಜಲಸ್ಫೋಟ ದುರಂತದಲ್ಲಿ ಅಮಾಯಕ ಪ್ರವಾಸಿಗರು ಮೃತಪಟ್ಟಿರುವ ಬಗ್ಗೆ ಮಾಹಿತಿ ಇದೆ. ಕೊಡಗು ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗುತ್ತಿರುವುದರಿಂದ ಮುಂಜಾಗೃತಾ ಕ್ರಮವಾಗಿ ಮುಂದಿನ 7 ದಿನಗಳವರೆಗೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಬೇಕೆಂದು ಕೊಡಗು ರಕ್ಷಣಾ ವೇದಿಕೆ ಒತ್ತಾಯಿಸಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಕೊರವೇ ಅಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ, ವಯನಾಡುವಿನಲ್ಲಿ ಹೋಂಸ್ಟೇ ಮತ್ತು ರೆಸಾರ್ಟ್ಗಳಿದ್ದ ಗುಡ್ಡ ಕುಸಿದು ನೂರಾರು ಜನರೊಂದಿಗೆ ಅಮಾಯಕ ಪ್ರವಾಸಿಗರು ಕೂಡ ಮೃತಪಟ್ಟಿದ್ದಾರೆ. ಕೊಡಗು ಜಿಲ್ಲೆಯಲ್ಲೂ ಇದೇ ರೀತಿಯ ಅನಾಹುತ ಸಂಭವಿಸದಂತೆ ತಡೆಯಲು ಮಳೆಯ ತೀವ್ರತೆ ಕಡಿಮೆಯಾಗುವವರೆಗೆ ಪ್ರವಾಸಿಗರನ್ನು ನಿಷೇಧಿಸಬೇಕೆಂದು ಮನವಿ ಮಾಡಿದರು. ಪ್ರಸಿದ್ಧ ಪ್ರವಾಸಿತಾಣ ವಯನಾಡುವಿನಲ್ಲಿ ಧಾರಾಕಾರ ಮಳೆಯಿಂದ ಭೀಕರ ಭೂಕುಸಿತವಾಗಿ ಸ್ಥಳೀಯರೊಂದಿಗೆ ಪ್ರವಾಸಿಗರು ಕೂಡ ಸಾವನ್ನಪ್ಪಿದ್ದಾರೆ ಮತ್ತು ಕಣ್ಮರೆಯಾಗಿದ್ದಾರೆ. ಇದು ಕೇರಳದ ಪಕ್ಕದಲ್ಲೇ ಇರುವ ಕೊಡಗು ಜಿಲ್ಲೆಗೆ ಎಚ್ಚರಿಕೆಯ ಗಂಟೆಯಾಗಿದೆ. ದೇಶದ ಹೆಸರುವಾಸಿ ಪ್ರವಾಸಿತಾಣಗಳ ಪಟ್ಟಿಯಲ್ಲಿರುವ ಕೊಡಗಿನ ಬೆಟ್ಟಗುಡ್ಡಗಳ ಬಹುತೇಕ ಸ್ಥಳಗಳಲ್ಲಿ…






