ನಾಪೋಕ್ಲು ಸೆ.2 NEWS DESK : ಕೊಡಗು ನೆಹರು ಯುವ ಕೇಂದ್ರ, ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಜಿಲ್ಲಾ ಯುವ ಒಕ್ಕೂಟ ಮಡಿಕೇರಿ ಹಾಗೂ ಸಂಪಾಜೆಯ ಪಯಸ್ವಿನಿ ಯುವಕ ಸಂಘದ ವತಿಯಿಂದ ಸಂಪಾಜೆಯ ಶ್ರೀ ಪಂಚಲಿಂಗೇಶ್ವರ ದೇವಾಲಯದ ಆವರಣದಲ್ಲಿ ಪ್ರಥಮ ವರ್ಷದ ಕೆಸರು ಗದ್ದೆ ಗ್ರಾಮೀಣ ಕ್ರೀಡಾಕೂಟ ಸಂಭ್ರಮದಿಂದ ನಡೆಯಿತು. ಕೀಲಾರು ಗದ್ದೆಯಲ್ಲಿ ನಡೆದ ಕೆಸರು ಗದ್ದೆ ಕ್ರೀಡಾಕೂಟವನ್ನು ಶ್ರೀ ಪಂಚಲಿಂಗೇಶ್ವರ ದೇವಾಲಯದ ಪ್ರಧಾನ ಅರ್ಚಕ ಸತ್ಯ ನಾರಾಯಣ ಭಟ್ ನೆರವೇರಿಸಿದರು. ಪುರುಷರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಚೆಡವು ಆದರ್ಶ್ ಫ್ರೆಂಡ್ಸ್ ತಂಡವು ಪ್ರಥಮ ಸ್ಥಾನ ಪಡೆದುಕೊಂಡದ್ದು, ಸಂಪಾಜೆ ಶ್ರೀ ಮಹಾ ವಿಷ್ಣು ಬಳಗ ಸಂಪಾಜೆ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಮುಕ್ತ 510 ಕೆಜಿ ವಿಭಾಗ ದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಶ್ರೀ ವಿಷ್ಣು ಅಡ್ಕ ಪ್ರಥಮ ಸ್ಥಾನ ಗಳಿಸಿದರೆ, ಶ್ರೀ ವಿಷ್ಣು ಸಂಪ್ಯಾ ದ್ವಿತೀಯ ಸ್ಥಾನಗಳಿಸಿತು. ಅಡೂರು ಪ್ರೆಂಡ್ಸ್ ತಂಡ ತೃತೀಯ ಸ್ಥಾನವನ್ನು ಹಾಗೂ ಶ್ರೀ ಮಹಾ ವಿಷ್ಣು ಬಳಗ ಸಂಪಾಜೆ…
ಲೇಖಕ: admin
ಮಡಿಕೇರಿ NEWS DESK ಸೆ.2 : ನಗರದ ಕೊಡಗು ವಿದ್ಯಾಲಯದ ಹತ್ತನೇ ತರಗತಿ ವಿದ್ಯಾರ್ಥಿನಿ ಎ ಜಿ ಪರ್ಲಿನ್ ಪೊನ್ನಮ್ಮ ದಕ್ಷಿಣ ಭಾರತ ಸಬ್ ಜೂನಿಯರ್ ಮಹಿಳಾ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ದಕ್ಷಿಣ ಭಾರತ ತಂಡಕ್ಕೆ ನಾಯಕಿಯಾಗಿ ಆಯ್ಕೆಯಾದ್ದಾಳೆ. ಈ ಮೊದಲು ಕರ್ನಾಟಕ ಸಬ್ ಜೂನಿಯರ್ ಮಹಿಳೆಯರ ತಂಡದ ಉಪನಾಯಕಿಯಾಗಿ ಆಯ್ಕೆಯಾಗಿ ಎರಡು ಪಂದ್ಯಗಳಲ್ಲಿ ಉತ್ತಮ ಆಟಗಾರ್ತಿ ಎಂಬ ಬಿರುದುಗಳಿಸಿ ಇದೀಗ ದಕ್ಷಿಣ ಭಾರತ ಸಬ್ ಜೂನಿಯರ್ ಮಹಿಳಾ ತಂಡದ ಚುಕ್ಕಾಣಿ ಹಿಡಿದಿದ್ದಾಳೆ. ಪರ್ಲಿನ್ ಪೊನ್ನಮ್ಮ ಸೆಪ್ಟೆಂಬರ್ 7 ರವರೆಗೆ ಹರಿಯಾಣದಲ್ಲಿ ನಡೆಯುತ್ತಿರುವ ಅಖಿಲ ಭಾರತ ಅಂತರ್ ವಿಭಾಗ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಂಡಿದ್ದಾಳೆ ಎಂದು ಕೊಡಗು ವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಕುಶಾಲನಗರ, ಸೆ.2 NEWS DESK : ಕುಶಾಲನಗರ ಪಟ್ಟಣದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯಿನಿಯಾಗಿ ಸೇವೆ ಸಲ್ಲಿಸಿ ಆಗಸ್ಟ್ ಅಂತ್ಯಕ್ಕೆ ಸೇವಾ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯಿನಿ ಕೆ.ಆರ್.ರಾಣಿ ಅವರಿಗೆ ಶಾಲೆಯ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಬಿ.ಎನ್.ಪುಷ್ಪ, ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕಿಯಾಗಿ, ನಂತರ ಮುಖ್ಯ ಶಿಕ್ಷಕಿಯಾಗಿ ಬಡ್ತಿ ಹೊಂದಿ ಒಟ್ಟು 39 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಳ್ಳುತ್ತಿರುವ ಮುಖ್ಯ ಶಿಕ್ಷಕಿ ರಾಣಿ ಅವರು, ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿ ವಿದ್ಯಾರ್ಥಿ ವೃಂದ, ಪೋಷಕರು ಹಾಗೂ ಅಧಿಕಾರಿ ವರ್ಗದ ಪ್ರೀತಿಗೆ ಪಾತ್ರರಾಗಿದ್ದಾರೆ ಎಂದರು. ರಾಣಿ ಅವರ ನಿವೃತ್ತಿ ಜೀವನದಲ್ಲಿ ಕೂಡ ಶೈಕ್ಷಣಿಕ ಕ್ಷೇತ್ರದಲ್ಲಿ ಉಲ್ಲಾಸಭರಿತ ಜೀವನ ನಡೆಸಲಿ ಎಂದು ಶುಭಹಾರೈಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಮುಖ್ಯ ಶಿಕ್ಷಕಿ ಕೆ.ಆರ್.ರಾಣಿ, ಅಪಾರ ಜ್ಞಾನ ಮತ್ತು ಅನುಭವ ನೀಡಿರುವ ಶಿಕ್ಷಣ ಇಲಾಖೆಯು ಅಗಾಧವಾದುದ್ದು. ಈ ಇಲಾಖೆಯಿಂದ ತಾನು…
ಮಡಿಕೇರಿ ಸೆ.2 NEWS DESK : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಮಡಿಕೇರಿ ರೋಟರಿ, ಕಡಗದಾಳು ಸರ್ಕಾರಿ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ಗಿಡನೆಡುವ ಕಾರ್ಯಕ್ರಮ ನಡೆಯಿತು. ಕಡಗದಾಳು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಗಿಡ ನೆಟ್ಟು ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಆ ನಿಟ್ಟಿನಲ್ಲಿ ಮರ ಗಿಡಗಳನ್ನು ಬೆಳೆಸಿ ಉತ್ತಮ ಪರಿಸರವನ್ನು ಮುಂದಿನ ಪಿಳಿಗೆಗೆ ಕೊಡುಗೆಯಾಗಿ ನೀಡಬೇಕು ಎಂದು ಹೇಳಿದರು. ಬಾಲ್ಯ ವಿವಾಹವು ಸಾಮಾಜಿಕ ಪಿಡುಗಾಗಿದ್ದು, ಹೆಣ್ಣುಮಕ್ಕಳ ಭವಿಷ್ಯವನ್ನು ಕುಗ್ಗಿಸುತ್ತದೆ. ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣನ್ನು ಕಡೆಗಣಿಸಿದಲ್ಲಿ ಸಮಾಜ ಅಧಃಪತನಕ್ಕೆ ಹೋಗುತ್ತದೆ. ಆದ್ದರಿಂದ ಪ್ರತಿಯೊಬ್ಬರನ್ನೂ ಹೆಣ್ಣನ್ನು ಗೌರವಿಸಬೇಕು. ಸಮಾನ ಅವಕಾಶಗಳು ಸಿಗುವಂತಾಗಬೇಕು ಎಂದು ಶುಭ ಹೇಳಿದರು. ಆಧುನಿಕತೆ ಬೆಳೆದಂತೆ ಅವಕಾಶಗಳು ಸಹ ವಿಫಲವಾಗಿವೆ. ಆ ನಿಟ್ಟಿನಲ್ಲಿ ವೃತ್ತಿ ಕೌಶಲ್ಯ ಬೆಳೆಸಿಕೊಂಡು ಲಭ್ಯವಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಇದೇ…
ಮಡಿಕೇರಿ ಸೆ.2 NEWS DESK : ಕಾವೇರಿ ಶಾಲೆಯ ಆಡಳಿತ ಮಂಡಳಿ ವತಿಯಿಂದ ಅಮ್ಮತ್ತಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25ರ ಸಾಲಿನ ವಲಯ ಮಟ್ಟದ ಕ್ರೀಡಾಕೂಟ ನಡೆಯಿತು. ಕಾವೇರಿ ವಿದ್ಯಾ ಸಂಸ್ಥೆಯ ಮುಖ್ಯಸ್ಥೆ ಹಾಗೂ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಗಾಲ್ಫ್ ಕ್ರೀಡೆಯ ತೀರ್ಪುಗಾರರಾದ ಕಾವೇರಿ ಮುತ್ತಣ್ಣ ಕ್ರೀಡಾ ದ್ವಜಾರೋಹಣ ನೆರವೇರಿಸಿ, ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತಾವು ಹೇಗೆ ತೊಡಗಿಸಿಕೊಳ್ಳಬೇಕು”ಎಂಬುದನ್ನು ತಿಳಿಸಿದರು. ಈ ಸಂದರ್ಭದಲ್ಲಿ ಅಮ್ಮತ್ತಿಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರುಕ್ಮಿಣಿ, ಪ್ರವೀಣ್ ವಿರಾಜಪೇಟೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸುಷಾ, ಪಾಲಿಬೆಟ್ಟ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕರುಂಬಯ್ಯ, ಅಮ್ಮತ್ತಿ, ಸರಕಾರಿ ಮಾದರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ದೊಡ್ಡ ತಮ್ಮಯ್ಯ, ಅಮ್ಮತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಚ್.ಎಸ್.ಸೋಮಕ್ಕ, ಕಾವೇರಿ ಶಾಲೆ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಸ್.ಸುದೇಶ್, ಕಾರ್ಯದರ್ಶಿ ಪಿ.ಎನ್.ವಿನೋದ್, ಕಾವೇರಿ ಶಾಲೆಯ ಪ್ರೌಢ ವಿಭಾಗದ ಮುಖ್ಯ ಶಿಕ್ಷಕಿ ಬಿ.ಎಸ್.ಜ್ಯೋತಿ, ಪ್ರಾಥಮಿಕ…
ನಾಪೋಕ್ಲು ಸೆ.2 NEWS DESK : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚಾರಿಸಲಾಯಿತು. ಮಡಿಕೇರಿಯ ಕ್ರೀಡಾ ಇಲಾಖೆ ಸಭಾಂಗಣದಲ್ಲಿ ದಿನದ ಅಂಗವಾಗಿ ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಸಂಯೋಜಕರಾದ ಗಾಯತ್ರಿ ಅವರು ಮೇಜರ್ ಧ್ಯಾನಚ೦ದ್ ಅವರಿಗೆ ಗೌರವ ಅರ್ಪಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿ.ಟಿ.ವಿಸ್ಮಯ ವಹಿಸಿದ್ದರು. ಅಥ್ಲೆಟಿಕ್ಸ್ ತರಬೇತುದಾರ ಕೆ.ಮಹಾಬಲ ಹಾಕಿ ತರಬೇತಿದಾರರಾದ ಬಿಂದಿಯ ಪಾಲ್ಗೊಂಡಿದ್ದರು. ಇದೇ ಸಂದರ್ಭ ಕ್ರೀಡಾ ನಿಲಯದ ಕ್ರೀಡಾಪಟುಗಳಿಗೆ ಹಾಕಿ ಸ್ಟಿಕ್ಗಳನ್ನು ವಿತರಿಸಲಾಯಿತು. ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಿ ವಿಜೇತರಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು. ವಿಜೇತರು :: ಗುಡ್ಡಗಾಡು ಓಟದ ಸ್ಪರ್ಧೆ 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಎಸ್.ಡಿ.ವೀನ್ ಪ್ರಥಮ, ಜಿ.ಎಂ.ರಾಹುಲ್ ದ್ವಿತೀಯ, ಕೆ.ಟಿ.ಯುವ ತೃತೀಯ, 14 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಎಸ್.ಎ.ನಿಸರ್ಗ ಪ್ರಥಮ, ಸಿ.ಕೆ.ಅಂಚಲ್ತೇಜಮ್ಮ ದ್ವಿತೀಯ, 16 ವರ್ಷದ ವಯೋಮಿತಿಯ ಬಾಲಕರ ವಿಭಾಗ ಶಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್ ಸ್ಪರ್ಧೆಯಲ್ಲಿ ನಿಷ್ಮಾ ದೇಶೀಯ ಪ್ರಥಮ, ಪುಲಿನ್ಪುವಯ್ಯ ದ್ವಿತೀಯ, ಬಾಲಕಿಯರ…
ವಿರಾಜಪೇಟೆ ಸೆ.2 NEWS DESK : 2024-25ನೇ ಸಾಲಿನ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟವು ಅಮ್ಮತ್ತಿ ಪ್ರೌಢಶಾಲಾ ಮೈದಾನದಲ್ಲಿ ನಡೆಯಿತು. ಬಾಲಕರ ಕಾಲ್ಚೆಂಡು ಪಂದ್ಯಾವಳಿಯಲ್ಲಿ ಕೊಂಡಂಗೇರಿಯ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನಡೆದ ಅಥ್ಲೆಟಿಕ್ಸ್ನಲ್ಲಿ ಶಾಲೆಯ ಅಪ್ರತಿಮ ಕ್ರೀಡಾಪಟು ಮೊಹಮ್ಮದ್ ಪಿ.ಹೆಚ್.ಮಿಸ್ಹಾಬ್ 100 ಮೀಟರ್ ಓಟದಲ್ಲಿ ಪ್ರಥಮ, 200 ಮೀಟರ್ ಓಟದಲ್ಲಿ ಪ್ರಥಮ ಹಾಗೂ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾನೆ. ಹೆಚ್.ಯು.ಮೊಹಮ್ಮದ್ ಹರ್ಷದ್ 200ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, ಮುಬಶೀರ್, ಪಿ.ಹೆಚ್.ಮೊಹಮ್ಮದ್ ಮಿಸ್ಹಾಬ್, ಹೆಚ್.ಯು.ಹರ್ಷದ್ ಹಾಗೂ ಪಿ.ಎಂ.ನಾಜಿಮ್ 4*100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಪ್ರಥಮ, ಮುಬಶೀರ್, ಪಿ.ಹೆಚ್.ಮೊಹಮ್ಮದ್ ಮಿಸ್ಹಾಬ್, ಹೆಚ್.ಯು.ಹರ್ಷದ್ ಹಾಗೂ ತೌಫೀಕ್ 4*400 ಮೀಟರ್ ರಿಲೇ ಸ್ಫರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ಇವರು ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು…
ಸುಂಟಿಕೊಪ್ಪ ಸೆ.2 NEWS DESK : ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಕಚೇರಿಯನ್ನು ಸಂಭ್ರಮ ಗ್ರೂಪ್ಸ್ ಹಾಗೂ ಎ.ಬಿ.ಗ್ರೂಪ್ಸ್ ಸಹಕಾರದೊಂದಿಗೆ ಅಭಿವೃದ್ಧಿಗೊಳಿಸಲಾಗಿದೆ ಎಂದು ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ ತಿಳಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ವಾಹನ ಚಾಲಕರ ಸಂಘದ ಕಚೇರಿಯಲ್ಲಿ ಕಾರ್ಯಚರಿಸುತ್ತಿದ್ದು ಕಚೇರಿ ಒಳಭಾಗವು ಶಿಥಿಲಾವಸ್ಥೆಯಲ್ಲಿರುವುದನ್ನು ಮನಗಂಡ ಸಂಭ್ರಮ ಗ್ರೂಪ್ಸ್ ಹಾಗೂ ಎ.ಬಿ.ಗ್ರೂಪ್ಸ್ನ ಮಾಲೀಕರು ಆರ್ಥಿಕ ನೆರವು ನೀಡುವ ಮೂಲಕ ಕಚೇರಿಗೆ ನೆಲಹಾಸು ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದಾರೆ. ಅದೇ ರೀತಿಯಲ್ಲಿ ಜಿ.ಪಂ.ಮಾಜಿ ಸದಸ್ಯ ಪಿ.ಎಂ.ಲತೀಫ್ ಕೇರಿಗೆ ಸಿ.ಸಿ.ಕ್ಯಾಮರ ಅಳವಡಿಸುವ ಮೂಲಕ ಸಂಘದ ಕಚೇರಿಯನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಕಿಟ್ಟಣ್ಣ ರೈ ಮಾಹಿತಿ ನೀಡಿದರು.
ಸುಂಟಿಕೊಪ್ಪ ಸೆ.2 NEWS DESK : ಮಾದಾಪುರ ಎಸ್ಜೆಎಂ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಜಗದ್ಗುರು ಜಯದೇವ ಸ್ವಾಮೀಜಿಯ 150ನೇ ಜನ್ಮದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಚೆಸ್ಕಾಂನ ಕಿರಿಯ ಅಭಿಯಂತಕ ಮಹದೇವ್ ಪ್ರಸಾದ್ ಶ್ರೀ ಜಗದ್ಗುರು ಜಯದೇವ ಅವರ ಜೀವನ ಚರಿತ್ರೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಶ್ರೀ ಜಗದ್ಗುರು ಜಯದೇವ ಸ್ವಾಮಿಗಳ 150ನೇ ಜನ್ಮದಿನದ ಅಂಗವಾಗಿ ಎಸ್ಜೆಎಂ ಶಾಲಾ ವತಿಯಿಂದ ಮಾದಪುರ ಪಂಚಾಯಿತಿ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕಾರಾಗಿರುವ ಗಣೇಶ್ ಮತ್ತು ಸಿದ್ದಿಕ್ ಅವರುಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಮೊದಲಿಗೆ ಶಿಕ್ಷಕರು ಪ್ರಿಯ ಮತ್ತು ಪ್ರಜ್ಞಾ ರವರು ಸ್ವಾಮೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಶಿಕ್ಷಕಿ ದೀಪಿಕಾ ಜಯದೇವ ಸ್ವಾಮಿಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಜೋರಾ ಸ್ವಾಗತಿಸಿ, ಅಂಕಿತ ನಿರೂಪಿಸಿ, ಶಿಕ್ಷಕಿ ನಿವೇದಿತಾ ವಂದಿಸಿದರು.
ಸುಂಟಿಕೊಪ್ಪ NEWS DESK ಸೆ.2 : ಸುಂಟಿಕೊಪ್ಪ ಎಸ್ಎನ್ಡಿಪಿ ಶಾಖಾ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಸಾದ್ ಕುಟ್ಟಪ್ಪ ಅವರನ್ನು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್, ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಸದಸ್ಯರುಗಳು ಮತ್ತು ಸಿಬ್ಬಂದಿ ವರ್ಗ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಸಾದ್ ಕುಟ್ಟಪ್ಪ ಸಮಾಜಕ್ಕೆ ನಾರಾಯಣ ಗುರುಗಳ ಆದರ್ಶವನ್ನು ಸಾರುವ ಒಂದು ದೊಡ್ಡ ಜವಾಬ್ದಾರಿ ಸಿಕ್ಕಿದೆ. ಮುಂದಿನ ದಿನಗಳಲ್ಲಿ ನಾರಾಯಣ ಗುರುಗಳ ಸಂಕಲ್ಪದ ಬಹಳಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. ಸದಸ್ಯರುಗಳಾದ ಪಿ.ಎಫ್.ಸಬಾಸ್ಟೀನ್, ಬಿ.ಎಂ.ಸುರೇಶ್ (ಪುಟ್ಟ), ಆಲಿಕುಟ್ಟಿ, ಶಬೀರ್, ರಫೀಕ್ ಖಾನ್, ಜಿನಾಷುದ್ದೀನ್, ಸೋಮನಾಥ್ ವಸಂತಿ, ನಾಗರತ್ನ, ಮಂಗಳಿ, ಗೀತಾ, ವನಿತಾ, ಸಿಬ್ಬಂದಿಗಳಾದ ಚಂದ್ರ ಕಲಾ, ಸಂದ್ಯಾ, ಶ್ರೀನಿವಾಸ್, ಮಂಜುನಾಥ್, ರಂಗ ಸ್ವಾಮಿ, ಮಂದಣ್ಣ ಮತ್ತಿತರರು ಹಾಜರಿದ್ದರು.






