ಲೇಖಕ: admin

ಮಡಿಕೇರಿ NEWS DESK ಜು.30 : ಕೊಡಗು ಜಿಲ್ಲೆಯಾದ್ಯಂತ ಮತ್ತೆ ವರುಣಾರ್ಭಟ ಆರಂಭಗೊAಡಿದೆ. ಸೋಮವಾರ ರಾತ್ರಿಯಿಂದ ಹಲವೆಡೆ ನಿರಂತರವಾಗಿ ಗಾಳಿ ಸಹಿತ ಮಳೆಯಾಗುತ್ತಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಭಾರೀ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಪ್ರವಾಹ ಏರ್ಪಟ್ಟಿದ್ದು, ಶ್ರೀಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳನ್ನು ನೀರು ಆವರಿಸಿದೆ. ಕಳೆದ 24 ಗಂಟೆಗಳಲ್ಲಿ ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ದಾಖಲೆಯ 11 ಇಂಚಿಗೂ ಅಧಿಕ ಮಳೆಯಾಗಿದೆ. ಮಡಿಕೇರಿ ಮತ್ತು ನಾಪೋಕ್ಲು ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ಮಳೆ ಮತ್ತಷ್ಟು ಬಿರುಸುಗೊಳ್ಳುವ ಲಕ್ಷಣಗಳು ಗೋಚರಿಸಿದ್ದು, ನದಿ ಹಾಗೂ ಬೆಟ್ಟಗುಡ್ಡ ಪ್ರದೇಶದ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.

Read More

ವಿರಾಜಪೇಟೆ NEWS DESK ಜು.29 : ಕೊಂಚ ಬಿಡುವು ನೀಡಿದ್ದ ಮಳೆ ಸೋಮವಾರ  ಧಾರಾಕಾರವಾಗಿ ಸುರಿದ ಪರಿಣಾಮ ವಿರಾಜಪೇಟೆ ಗೋಣಿಕೊಪ್ಪ ರಸ್ತೆಯ ರಾಜ ಕಾಲುವೆ ಬಳಿ ಪ್ರವಾಹ ಸದೃಶ್ಯ ಕಂಡು ಬಂತು. ಮತ್ತೆ ಮಳೆನೀರು ಮುಖ್ಯ ರಸ್ತೆಯನ್ನು ಆವರಿಸಿತು. ವಿರಾಜಪೇಟೆ ಖಾಸಗಿ ಬಸ್ ನಿಲ್ದಾಣ, ಅರಸು ನಗರ, ಮಟನ್ ಮಾರ್ಕೆಟ್,  ಸುಭಾಷ್ ನಗರ, ವಿಜಯನಗರ , ಚೌಕಿ. ಮುಂತಾದ ಕಡೆಗಳಿಂದ ಮಳೆ ನೀರು ಹರಿದು ಇದೇ ಕಾಲುವೆಯನ್ನು ಸೇರುತ್ತದೆ. ವಿದ್ಯಾರ್ಥಿಗಳು ಹಾಗೂ ಪಾದಾಚಾರಿಗಳು ಮಳೆ ಮತ್ತು ಪ್ರವಾಹದ ರೀತಿಯ ನೀರಿನಿಂದ ಪರದಾಡುವಂತ್ತಾಯಿತು. ಮುಂದಿನ ದಿನಗಳಲ್ಲಿ ಈ ರೀತಿಯ ಪರಿಸ್ಥಿತಿ ಉದ್ಭವಿಸದಂತೆ ಆಡಳಿತ ವ್ಯವಸ್ಥೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಜು.29 NEWS DESK : ಕೊಡವ ಎಜುಕೇಷನ್ ಸೊಸೈಟಿಯ ಅಧೀನಕ್ಕೊಳಪಡುವ ಪೊನ್ನಂಪೇಟೆಯ ಕೂರ್ಗ್ ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಎಐ ಮತ್ತು ಎಂಎಲ್ ವಿಭಾಗದ ವತಿಯಿಂದ ಎಐ ಅಪ್ರಿಸಿಯೇಷನ್ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಉದ್ಯೋಗಾವಕಾಶವನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ದೇಶದ ಪ್ರತಿಷ್ಠಿತ ಐಟಿ ಉದ್ಯಮ ಸಂಸ್ಥೆಯಾದ ಇನ್ಫೋಸಿಸ್ ಸಂಸ್ಥೆಯ ಸ್ಪಿಂಗ್ ಬೋರ್ಡ್ ವೇದಿಕೆಯೊಂದಿಗೆ ಸಿಐಟಿ ಕಾಲೇಜು ಒಡಂಬಡಿಕೆ ಮಾಡಿಕೊಂಡಿತು. ಈ ಮಹತ್ವದ ಯೋಜನೆಗೆ ಸಿ.ಐ.ಟಿ.ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಬಸವರಾಜ್ ಮತ್ತು ಇನ್ಫೋಸಿಸ್ ಸಂಸ್ಥೆಯ ಸಹ ಉಪಾಧ್ಯಕ್ಷ ಕೆ.ಎಸ್.ಸುಂದರ್ ಅವರು ಸ್ಪಿಂಗ್ ಬೋರ್ಡ್ ಒಡಂಬಡಿಕೆಗೆ ಸಹಿ ಹಾಕಿದರು. ಈ ಸಂದರ್ಭ ಇನ್ಫೋಸಿಸ್ ಸಂಸ್ಥೆಯ ಉಪಾಧ್ಯಕ್ಷರಾದ ಕೆ.ಎಸ್.ಸುಂದರ್ ಮಾತನಾಡಿ, ಕೃತಕ ಬುದ್ಧಿಮತ್ತೆ ಎನ್ನುವುದು ಪ್ರಸ್ತುತ ದಿನಗಳಲ್ಲಿ ಹೆಚ್ಚು ಜನಪ್ರಿಯತೆಯನ್ನು ಗಳಿಸಿದೆ ಮತ್ತು ವ್ಯಾಪಕವಾಗಿ ಎಲ್ಲೆಡೆ ಪಸರಿಸಿದೆ. ಇದು ವಿಪುಲ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡುತ್ತಿದೆ. ಈ ಎಐ ತಂತ್ರಜ್ಞಾನದ ಬಳಕೆಯಿಂದ ಕ್ಲಿಷ್ಟಕರವಾದ ಕೆಲಸವನ್ನು ಶೀಘ್ರವಾಗಿ ಪೂರ್ಣಗೊಳ್ಳಿಸಬಹುದಾಗಿದ್ದು, ಇದು ಮನುಷ್ಯನ ಅಸ್ತಿತ್ವವನ್ನು ತಂತ್ರಜ್ಞಾನದ…

Read More

ಮಡಿಕೇರಿ ಜು.29 NEWS DESK : ಮೇಯಲು ಬಿಟ್ಟಿದ್ದ 6 ಹಸುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪೊನ್ನಂಪೇಟೆ ತಾಲ್ಲೂಕಿನ ತೆರಾಲು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಕೃಷಿಕ ಬೊಜ್ಜಂಗಡ ನಟರಾಜ್(ನಂದ) ಎಂಬುವವರಿಗೆ ಹಸುಗಳು ಸಾವನ್ನಪ್ಪಿದ್ದು, ಹೈನುಗಾರಿಕೆಯೊಂದಿಗೆ ಬದುಕು ಕಟ್ಟಿಕೊಂಡಿದ್ದ ಕುಟುಂಬ ಇದೀಗ ಕಂಗಾಲಾಗಿದೆ. ತೆರಾಲು ಗ್ರಾಮದಲ್ಲಿ ಭಾರೀ ಗಾಳಿ ಸಹಿತ ಮಳೆ ಸುರಿಯುತ್ತಿದ್ದು, 11 ಕೆ.ವಿ ವಿದ್ಯುತ್ ತಂತಿ ತುಂಡಾಗಿ ರಸ್ತೆಗೆ ಬಿದ್ದಿದ್ದು, ಹಸುಗಳು ಬರುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಮಡಿಕೇರಿ NEWS DESK  ಜು.29 : ಆದಿಮಸಂಜಾತ ಕೊಡವ ಬುಡಕಟ್ಟು ಸಮುದಾಯವನ್ನು ಕೊಡವಲ್ಯಾಂಡ್ ನಿಂದಲೇ ಸ್ಥಾನಪಲ್ಲಟಗೊಳಿಸುವ ದುರುದ್ದೇಶದಿಂದ ಕೊಡವರನ್ನು ನಿತ್ಯ ಶೋಷಣೆಗೆ ಒಳಪಡಿಸಲಾಗುತ್ತಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಗಂಭೀರ ಆರೋಪ ಮಾಡಿದ್ದಾರೆ. ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿಯಲ್ಲಿ ಸಿಎನ್‌ಸಿ ವತಿಯಿಂದ ನಡೆದ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಭೂಮಾಫಿಯಾ, ಕಾರ್ಪೋರೇಟ್ ಮಾಫಿಯಾ, ರಾಜಕೀಯ ನಂಟು ಹೊಂದಿರುವ ಆರ್ಥಿಕ ಅಪರಾಧಿಗಳು ಸೇರಿದಂತೆ ದೇಶ ವಿದೇಶದ ಬಂಡವಾಳಶಾಹಿ ವರ್ಗ ಪವಿತ್ರ ಕಾವೇರಿ ನದಿ ಹುಟ್ಟುವ ಕೊಡವ ಭೂಮಿಯ ಎಲ್ಲಾ ಸಂಪನ್ಮೂಲಗಳನ್ನು ಯಾವುದೇ ಅಡೆತಡೆಗಳಿಲ್ಲದೆ ಅನುಭವಿಸುತ್ತಿದ್ದಾರೆ. ಆದರೆ ಕೊಡವರು ಕಾವೇರಿ ನೀರನ್ನು ಕೂಡ ಬಳಸಲು ಅನರ್ಹರು ಎನ್ನುವ ರೀತಿ ಆಡಳಿತ ವ್ಯವಸ್ಥೆ ಶೋಷಣೆ ಮಾಡುತ್ತಿದೆ. ಕೊಡಗನ್ನು ತಮ್ಮ ಆಕ್ರಮಿತ ವಸಾಹತು ಎಂದು, ಕೊಡವರು…

Read More

ಮಡಿಕೇರಿ ಜು.29 NEWS DESK : ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ 65 ನೇ ವಾರ್ಷಿಕ ಮಹಾಸಭೆಯಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ರೇಜು ಎಮ್.ಟಿ. ಅವರು 2024 ರ ಮಾರ್ಚ್, 31 ಕ್ಕೆ ಅಂತ್ಯಗೊ0ಡ ಹಣಕಾಸು ವರ್ಷ 2023-24 ರ ಸಂಸ್ಥೆಯ ವಾರ್ಷಿಕ ಕಾರ್ಯಾಚರಣೆಯಲ್ಲಿ ಪರಿಶೋಧಿಸಲ್ಪಟ್ಟ ಲೆಕ್ಕಪತ್ರಗಳ ಪ್ರಮುಖ ಅಂಶಗಳನ್ನು ಹಂಚಿಕೊ0ಡಿದ್ದಾರೆ. ಪ್ರಸಕ್ತ ಹಣಕಾಸು ವರ್ಷ 2023-24 ನೇ ಸಾಲಿನ ಆರ್ಥಿಕ ಸ್ಥಿತಿಯನ್ನು ಕ್ರೋಢೀಕರಿಸಲಾಗಿದ್ದು, ರೂ.143.28 ಕೋಟಿಗಳ ತೆರಿಗೆ ಪೂರ್ವ ದಾಖಲೆ ಲಾಭ ಹಾಗೂ ರೂ.115.58 ಕೋಟಿಗಳ ತೆರಿಗೆ ನಂತರದ ಲಾಭವನ್ನು ಸಂಸ್ಥೆಯು ಗಳಿಸಿದೆ. ಸಂಸ್ಥೆಯು 2023-24 ರ ಹಣಕಾಸು ವರ್ಷದಲ್ಲಿ ವಿವಿಧ ಸಾಲ ಯೋಜನೆಗಳ ಮೂಲಕ ರೂ.827.13 ಕೋಟಿಗಳ ಸಾಲ ಮಂಜೂರಾತಿ ಮಾಡಿದ್ದು, ಇದರಲ್ಲಿ ರೂ.775.76 ಕೋಟಿಗಳ ಮೊತ್ತದ ಮಂಜೂರಾತಿಯು 610 ಸೂಕ್ಷö್ಮ ಮತ್ತು ಸಣ್ಣ ಗಾತ್ರದ ಕೈಗಾರಿಕಾ ಉದ್ಯಮಗಳಿಗೆ ನೀಡಲಾಗಿದೆ. 2024ರ ಮಾರ್ಚ್ ಅಂತ್ಯದವರೆಗೆ ಸಂಚಿತ ಸಾಲ ಮಂಜೂರಾತಿಯ ಮೊತ್ತವು ರೂ.20,507.86 ಕೋಟಿಗಳನ್ನು 1,76,486 ಉದ್ಯಮಗಳಿಗೆ ನೀಡಲಾಗಿದೆ. ಈ…

Read More

ಮಡಿಕೇರಿ ಜು.29 : ಸರ್ವರ್ ಸಮಸ್ಯೆಗೆ ಪರಿಹಾರ ಸೂಚಿಸಬೇಕು, ಪಡಿತರ ವ್ಯವಸ್ಥೆಯನ್ನು ಸಮರ್ಪಕಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತ (ಮಾರ್ಕ್ಸ್ವಾದಿ) ಕಮ್ಯೂನಿಸ್ಟ್ ಪಕ್ಷ ನೆಲ್ಲಿಹುದಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನೆಲ್ಲಿಹುದಿಕೇರಿ ಗ್ರಾ.ಪಂ ಎದುರು ಜಮಾಯಿಸಿದ ಪಕ್ಷದ ಪ್ರಮುಖರು ಹಾಗೂ ಪದಾಧಿಕಾರಿಗಳು ಅವ್ಯವಸ್ಥೆಗಳ ವಿರುದ್ಧ ಘೋಷಣೆ ಕೂಗಿ, ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಪಕ್ಷದ ಕಾರ್ಯದರ್ಶಿ ಪಿ.ಆರ್.ಭರತ್ ಮಾತನಾಡಿ, ಆರ್ಥಿಕವಾಗಿ ದುರ್ಬಲರಾಗಿರುವ ವರ್ಗಕ್ಕೆ ಸಹಾಯವಾಗಲೆಂದು ಪಡಿತರ ವ್ಯವಸ್ಥೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಈ ವ್ಯವಸ್ಥೆಯಲ್ಲಿ ಸುಮಾರು 14 ದಿನಸಿ ಸಾಮಾಗ್ರಿಗಳನ್ನು ನೀಡಲಾಗುತ್ತಿದ್ದು, ಬೇರೆ ರಾಜ್ಯಗಳಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿದೆ. ಆದರೆ ನಮ್ಮ ಕರ್ನಾಟಕ ರಾಜ್ಯದಲ್ಲಿ ಒಬ್ಬರಿಗೆ ಕೇವಲ 5 ಕೆ.ಜಿ ಅಕ್ಕಿ ಮತ್ತು ಇನ್ನುಳಿದ 5 ಕೆ.ಜಿ ಅಕ್ಕಿಗೆ ಬದಲಾಗಿ 140 ರೂ.ಗಳನ್ನು ನಗದು ರೂಪದಲ್ಲಿ ನೀಡಲಾಗುತ್ತಿದೆ. ಉಳಿದ ಯಾವುದೇ ಸಾಮಾಗ್ರಿಗಳನ್ನು ನೀಡುತ್ತಿಲ್ಲ. ಚುನಾವಣೆ ಸಂದರ್ಭ ಮಾತ್ರ ಪೊಳ್ಳು ಭರವಸೆಗಳನ್ನು ನೀಡಲಾಗುತ್ತಿದೆ ಎಂದು ಟೀಕಿಸಿದರು. ಆರೋಗ್ಯ, ಉದ್ಯೋಗ ಮತ್ತಿತರ ಕ್ಷೇತ್ರಗಳ…

Read More

ಮಡಿಕೇರಿ NEWS DESK ಜು.29 : ಕರ್ನಾಟಕ ಜೂನಿಯರ್ ಫುಟ್ಬಾಲ್ ತಂಡಕ್ಕೆ ಕುಂಜಿಲ ಗ್ರಾಮದ ಕುಂಡಂಡ ಯೂಸುಫ್ ಮತ್ತು ನಸೀಮಾ ಅವರ ಮಗ ನಿಯಾಬ್ ಆಯ್ಕೆಯಾಗಿದ್ದಾರೆ, ತಾ ಜುಲೈ 27ರಿಂದ ಆಗಸ್ಟ್ 12ರ ವರೆಗೆ ಛತ್ತೀಸ್ಗಡದಲ್ಲಿ ನಡೆಯಲಿರುವ ರಾಷ್ಟ್ರೀಯ ಫುಟ್ಬಾಲ್ ಚಾಂಪಿಯನ್ ಶಿಪ್ ಬಿಸಿ ರಾಯ್ ಟ್ರೋಫಿ ಪಂದ್ಯಾವಳಿಯಲ್ಲಿ ಕೊಡಗಿನ ನಿಯಾಬ್ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ, ನಿಯಾಬ್ ತನ್ನ ಪ್ರಾಥಮಿಕ ಶಿಕ್ಷಣವನ್ನು ಕಕ್ಕಬೆಯ ಕೆಸಿಎಸ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಪಡೆದು ಸದ್ಯ ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಡಿ ವೈ ಈ ಎಸ್ ಕ್ರೀಡಾ ಶಾಲೆಯಲ್ಲಿ ತನ್ನ ವಿದ್ಯಾಭ್ಯಾಸ ಮುಂದುವರಿಸುತ್ತಿದ್ದಾರೆ.

Read More

ಮಡಿಕೇರಿ NEWS DESK ಜು.29 : ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ನ ಕೊಡಗು ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಎಲ್.ಅನಂತರಾವ್ ನೇಮಕಗೊಂಡಿದ್ದಾರೆ. ಕೇಂದ್ರ ಕಛೇರಿ ಬೆಂಗಳೂರಿನಲ್ಲಿ ಪರಿಷತ್ ರಾಜ್ಯಾಧ್ಯಕ್ಷ ಎಸ್.ಸುರೇಶ್ ರಾವ್ ಸಾಠೆ ಹಾಗೂ ಪ್ರಧಾನ ಕಾರ್ಯದರ್ಶಿ ಟಿ.ಆರ್.ಸುನೀಲ್ ಚವ್ಹಾಣ್ ಅವರು ಅನಂತರಾವ್ ಅವರಿಗೆ ನೇಮಕಾತಿ ಪತ್ರ ನೀಡಿದರು. ಈ ಸಂದರ್ಭ ರಾಜ್ಯ ಖಜಾಂಚಿ ಟಿ.ಆರ್.ವೆಂಕಟ ರಾವ್ ಚವ್ಹಾಣ್, ಸಲಹೆಗಾರ ವಿಠ್ಠಲ ರಾವ್ ಗಾಯಕ್ವಾಡ್, ವ್ಯವಸ್ಥಾಪಕ ಶ್ರೀನಿವಾಸ ಮಗರ್ ಮತ್ತಿತರರು ಉಪಸ್ಥಿತರಿದ್ದರು.

Read More