ಮಡಿಕೇರಿ ಜು.16 NEWS DESK : ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಸ್ಥಳದಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 275ರ ಕೊಡಗರಹಳ್ಳಿ ಹೊಸಕೋಟೆ ನಡುವಿನ ಮಾರುತಿ ನಗರದ ತಿರುವಿನಲ್ಲಿ ನಡೆದಿದೆ. ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಗರಗಂದೂರು ಗ್ರಾಮದ ಮಂಜು(25) ಹಾಗೂ ಸುಂಟಿಕೊಪ್ಪ ಸಮೀಪದ ಬಾಳೆಕಾಡು ಗ್ರಾಮದ ರಕ್ಷಿತ್ (22) ಮೃತ ದುರ್ದೈವಿಗಳಾಗಿದ್ದಾರೆ. ಮಂಜು ಹಾಗೂ ರಕ್ಷಿತ್ ಸುಂಟಿಕೊಪ್ಪದಿಂದ 7ನೇ ಹೊಸಕೋಟೆಗೆ ಊಟ ಮಾಡಿ ಬರಲೆಂದು ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಕುಶಾಲನಗರದಿಂದ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ಹೇಳಲಾಗಿದೆ. ಅಪಘಾತದ ಸಂದರ್ಭ ಇಬ್ಬರು ಹೆದ್ದಾರಿಗೆ ಬಿದಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಠಾಣಾಧಿಕಾರಿ ಎಂ.ಸಿ.ಶ್ರೀಧರ್, ಅಪರಾಧ ವಿಭಾಗದ ಸಬ್ಇನ್ಸ್ಪೆಕ್ಟರ್ ಸ್ವಾಮಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಲೇಖಕ: admin
ಮಡಿಕೇರಿ ಜು.16 NEWS DESK : ಮಡಿಕೇರಿ ಗ್ರಾಮಾಂತರ ಮಂಡಲ ವ್ಯಾಪ್ತಿಯ ಕಕ್ಕಬ್ಬೆ ಬಿಜೆಪಿ ಶಕ್ತಿಕೇಂದ್ರದ ಮರಂದೋಡ ಬೂತ್ ನ ಬಿಜೆಪಿ ಕಾರ್ಯಕರ್ತರು ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯಾದ ಹಿನ್ನೆಲೆಯಲ್ಲಿ ಕಕ್ಕಬ್ಬೆ ಬಿಜೆಪಿ ಕಚೇರಿಯಲ್ಲಿ ಪಕ್ಷದ ಸಭೆಯನ್ನು ಕರೆಯಲಾಗಿತ್ತು. ಶಕ್ತಿಕೇಂದ್ರದ ಪ್ರಮುಖ್ ಸುನಂದ ಅವರು ಮಾತನಾಡಿ ಚೋಯಮಾಡಂಡ ಐನ್ ಮನೆಗೆ ಹೋಗುವ ಸಂಪರ್ಕ ರಸ್ತೆಯ ಸ್ಥಗಿತಗೊಂಡಿರುವ ಕಾಮಗಾರಿಯನ್ನು ಪೂರ್ಣಗೊಳಿಸಲು ಮನವಿ ಪತ್ರವನ್ನು ನೀಡಲು ನಮ್ಮ ಕಾರ್ಯಕರ್ತರು ಹಾಗೂ ಕುಟುಂಬಸ್ಥರು ಕ್ಷೇತ್ರದ ಶಾಸಕರ ಗೃಹ ಕಚೇರಿಗೆ ಹೋಗಿದ್ದರು. ಈ ಸಂದರ್ಭ ಏಕಾಏಕಿ ಅವರಿಗೆ ಕಾಂಗ್ರೆಸ್ ಪಕ್ಷದ ಶಾಲುಗಳನ್ನು ಹಾಕಿದ್ದಾರೆ. ಶಾಸಕರಿಗೆ ಮತ್ತು ವೇದಿಕೆಯಲ್ಲಿದ್ದವರಿಗೆ ಮುಜುಗರವಾಗಬಾರದೆಂಬ ಉದ್ದೇಶದಿಂದ ನಮ್ಮ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಶಾಲನ್ನು ಹಾಕಿಸಿಕೊಂಡಿದ್ದಾರೆ. ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎನ್ನುವುದು ಸುಳ್ಳು ವದಂತಿ ಎಂದರು. ಸಭೆಯಲ್ಲಿ ಉಪಸ್ಥಿತರಿದ್ದ ಮಡಿಕೇರಿ ಗ್ರಾಮಾಂತರ ಮಂಡಲ ಯುವಮೋರ್ಚಾ ಅಧ್ಯಕ್ಷ ಚೇತನ್ ಬಂಗೇರ ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾಯಿತ ಪ್ರತಿನಿಧಿಯಾಗಿರುವ ಶಾಸಕರು…
ಮಡಿಕೇರಿ ಜು.16 NEWS DESK : ಮೇಕೇರಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಂಭಾಗದ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ವಾಹನಗಳು ಹಾಗೂ ಜನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಇದನ್ನು ಮನಗಂಡ ಗ್ರಾಮಸ್ಥರು ಗುಂಡಿಬಿದ್ದ ರಸ್ತೆಯನ್ನು ಶ್ರಮದಾನದ ಮೂಲಕ ಮುಚ್ಚಿದರು. ಕಳೆದ ಹಲವು ತಿಂಗಳುಗಳಿಂದ ಹೊಂಡ ಗುಂಡಿಗಳಾಗಿದ್ದ ರಸ್ತೆ ತುಂಬಾ ಮಳೆನೀರು ನಿಂತು ಸಂಚಾರ ಕಷ್ಟಕರವಾಗಿತ್ತು. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ತುಂಬಾ ನೀರು ತುಂಬಿ ಶಾಲೆಯ ವಿದ್ಯಾರ್ಥಿಗಳ ಓಡಾಟಕ್ಕೆ ತೊಂದರೆಯಾಗಿತ್ತು. ಮೇಕೇರಿ ಗ್ರಾ.ಪಂ ಸದಸ್ಯ ಎಂ.ಯು.ಹನೀಫ್ ಅವರ ನೇತೃತ್ವದಲ್ಲಿ ಗ್ರಾಮಸ್ಥರು ಗುಂಡಿಗಳನ್ನು ಮುಚ್ಚಿದರು. ರಸ್ತೆಯ ಎರಡೂ ಬದಿಯಲ್ಲಿ ನೀರು ಸರಾಗವಾಗಿ ಹರಿಯಲು ಚರಂಡಿ ವ್ಯವಸ್ಥೆ ಕಲ್ಪಿಸಿದರು. ಶ್ರಮದಾನದ ಕುರಿತು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಪೋಷಕರು ಪ್ರಶಂಸೆ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಎಂ.ಯು.ಹನೀಫ್ ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆ ಇದಾಗಿದ್ದು, ಹೊಂಡ, ಗುಂಡಿಗಳಿದ್ದ ಕಾರಣ ನೀರು ನಿಂತು ವಾಹನಗಳು ಮತ್ತು ವಿದ್ಯಾರ್ಥಿಗಳ ಸಂಚಾರ ಸುಗಮವಾಗಿರಲಿಲ್ಲ. ಮಕ್ಕಳ ಹಿತದೃಷ್ಟಿಯಿಂದ ಗ್ರಾಮಸ್ಥರು ಸೇರಿಕೊಂಡು ಶ್ರಮದಾನದ…
ಮಡಿಕೇರಿ ಜು.16 NEWS DESK : ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ವ್ಯಕ್ತಿಯಲ್ಲಿ, ಅವರೊಬ್ಬ ಮಹಾನ್ ಶಕ್ತಿ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂವಿಧಾನದ ಮೂಲಕ ಅವರು ನೀಡಿರುವ ಕೊಡುಗೆ ಮರೆಯುವಂತ್ತಿಲ್ಲವೆಂದು ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಬಣ್ಣಿಸಿದ್ದಾರೆ. ಜಿಲ್ಲಾ ಬುದ್ಧ ಪ್ರತಿಷ್ಠಾಪನ ಶಾಖೆ ವತಿಯಿಂದ ಮಡಿಕೇರಿಯ ಶಕ್ತಿ ವೃದ್ಧಾಶ್ರಮದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರು ವಕೀಲ ವೃತ್ತಿಗೆ ಸೇರ್ಪಡೆಗೊಂಡ ದಿನದ ಅಂಗವಾಗಿ ಜಿಲ್ಲೆಯ ವಕೀಲರುಗಳಿಗೆ ಗೌರವ ಸಮರ್ಪಣೆ ಹಾಗೂ ಬುದ್ಧ ಪೂರ್ಣಿಮೆ ಪ್ರಯುಕ್ತ ನಗರದ ಶಕ್ತಿ ಆಶ್ರಮದ ಹಿರಿಯ ನಾಗರಿಕರಿಗೆ ಬಟ್ಟೆ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಡಾ.ಅಂಬೇಡ್ಕರ್ ಅವರು ವ್ಯಕ್ತಿಯಲ್ಲ, ದೊಡ್ಡ ಶಕ್ತಿ. ಅವರು ವಕೀಲರಾಗಿ ಮಾಡಿದ ಕೆಲಸ, ಪ್ರಜಾತಂತ್ರ ವ್ಯವಸ್ಥೆಗೆ ನೀಡಿದ ಸಂವಿಧಾನದ ಕೊಡುಗೆ ಯಾರೂ ಮರೆಯುವಂತಿಲ್ಲ. ಅಂಬೇಡ್ಕರ್ ಅವರ ಆಶಯ ಮತ್ತು ಚಿಂತನೆ ಇನ್ನೂ ಸಕಾರಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಹಿರಿಯರನ್ನು ಹಾಗೂ ಪೋಷಕರನ್ನು ಗೌರವಿಸುವ ಮತ್ತು ಪ್ರೀತಿಸುವ ಗುಣ ಮೈಗೂಡಿಸಿಕೊಳ್ಳಬೇಕು. ಪೋಷಕರನ್ನು…
ಮಡಿಕೇರಿ ಜು.16 NEWS DESK : ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಹೆಚ್.ಡಿ.ಸಿಂಚನ ಇಂಡೋ-ನೇಪಾಳ ಅಂತರಾಷ್ಟ್ರೀಯ ಇನ್ವೀಟೆಷನಲ್ ಥ್ರೋಬಾಲ್ ಚಾಂಪಿಯನ್ ಷಿಪ್-2024ಕ್ಕೆ ಆಯ್ಕೆ ಯಾಗಿದ್ದಾರೆ. ಇವರು ವಿರಾಜಪೇಟೆ ತಾಲ್ಲೂಕಿನ ಬಿಳುಗುಂದ ಗ್ರಾಮದ ಹೆಚ್.ಪಿ.ದರ್ಶನ್ ಮತ್ತು ಹೆಚ್.ಡಿ.ಲತಾ ದಂಪತಿಯ ಪುತ್ರಿ. ನೇಪಾಳ ಪೋಕ್ಹಾರ್ ನಲ್ಲಿ ಜು.26 ರಿಂದ 30ರ ವರೆಗೆ ಪಂದ್ಯಾವಳಿ ನಡೆಯಲಿದೆ.
ಮಡಿಕೇರಿ ಜು.16 NEWS DESK : ಸಂಪಾಜೆ ಹೋಬಳಿ ವ್ಯಾಪ್ತಿಯ ಕೊಯನಾಡು ಸರಕಾರಿ ಪ್ರಾಥಮಿಕ ಶಾಲೆಯ ಹಿಂಭಾಗದ ಬರೆ ಕುಸಿದಿದ್ದು, ಶಾಲೆಯ ನಾಲ್ಕು ಕೋಣೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಶಾಲೆಯ ಕೋಣೆಗಳಲ್ಲಿದ್ದ ಪೀಠೋಪಕರಣಗಳು, ಲೇಖನ ಸಾಮಗ್ರಿಗಳು ಹಾಗೂ ಇತರ ಸಾಮಾಗ್ರಿಗಳನ್ನು ಸಾರ್ವಜನಿಕರು, ಶಾಲೆಯ ಸಿಬ್ಬಂದಿ ವರ್ಗದವರು, ಅಗ್ನಿಶಾಮಕ ದಳದ ತಂಡದವರು, ಕಂದಾಯ ಇಲಾಖೆಯ ಸಿಬ್ಬಂದಿಗಳು, ಗ್ರಾಮ ಪಂಚಾಯತಿಯ ಅಧ್ಯಕ್ಷರು, ಸದಸ್ಯರು ,ಗ್ರಾಮ ಪಂಚಾಯತಿಯ ಸಿಬ್ಬಂದಿ ವರ್ಗದವರು ಹಾಗೂ ಇತರರ ಸಹಕಾರದಿಂದ ಬೇರೆ ಕೋಣೆಗೆ ಸ್ಥಳಾಂತರಿಸಲಾಯಿತು. ಕೆಲವು ಪೀಠೋಪಕರಣ ಮಣ್ಣಿನಲ್ಲಿ ಸಿಲುಕಿ ಸಂಪೂರ್ಣವಾಗಿ ಹಾಳಾಗಿದೆ. ಮಡಿಕೇರಿ ತಾಲೂಕಿನ ತಹಶೀಲ್ದಾರ್ ಪ್ರವೀಣ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ರಂಗಧಾಮಪ್ಪ, ಕ್ಷೇತ್ರ ಶಿಕ್ಷಣ ಅಧಿಕಾರಿ ದೊಡ್ಡೇಗೌಡ, ನೋಡಲ್ ಅಧಿಕಾರಿ ಹೇಮಂತ್ ಕುಮಾರ್, ಪಿಡಿಒ ಇತರರು ಸ್ಥಳದಲ್ಲಿದ್ದರು.
ಮಡಿಕೇರಿ ಜು.16 NEWS DESK : ಯಾರೋ ಕಿಡಿಗೇಡಿಗಳು ನನ್ನ ಮೊಬೈಲ್ ಸಂಖ್ಯೆಯನ್ನು ಹ್ಯಾಕ್ ಮಾಡಿದ್ದು, ಜು.15 ರಂದು ಮಧ್ಯಾಹ್ನ 2 ಗಂಟೆಗೆ ಹಾಗೂ ರಾತ್ರಿ ವಾಟ್ಸಪ್ ಸಂಪರ್ಕದಲ್ಲಿರುವ ವ್ಯಕ್ತಿಗಳ ಸಂಖ್ಯೆಗಳಿಗೆ ಮತ್ತು ಗ್ರೂಪ್ಗಳಿಗೆ ಅಶ್ಲೀಲ ಸಂದೇಶಗಳನ್ನು ರವಾನಿಸಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆಯ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಿರುವುದಾಗಿ ದಲಿತ ಸಂಘರ್ಷ ಸಮಿತಿಯ ಮಡಿಕೇರಿ ತಾಲ್ಲೂಕು ಸಂಚಾಲಕ ಎ.ಪಿ.ದೀಪಕ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾನು ಸೋಮವಾರ ಕಾರ್ಯನಿಮಿತ್ತ ಮೈಸೂರಿನಲ್ಲಿದ್ದು, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ. ಕೆಲವರು ಕರೆ ಮಾಡಿ ಈ ಬಗ್ಗೆ ಪ್ರಶ್ನಿಸಿದಾಗ ನನ್ನ ಅರಿವಿಗೆ ಬಂದಿರುತ್ತದೆ. ನನಗೂ ಈ ಅಶ್ಲೀಲ ಸಂದೇಶಗಳಿಗೂ ಯಾವುದೇ ಸಂಬಂಧವಿಲ್ಲವೆಂದು ಸ್ಪಷ್ಟಪಡಿಸಿದರು. ನನ್ನ ಸಂಖ್ಯೆಯಿಂದ ಅಶ್ಲೀಲ ಸಂದೇಶ ಬಂದಲ್ಲಿ ಯಾವುದೇ ರೀತಿಯ ಪ್ರತ್ಯುತ್ತರ ನೀಡದಂತೆ ಮನವಿ ಮಾಡಿಕೊಳ್ಳುತ್ತೇನೆ. ನಾನು ಸಮಾಜ ಸೇವಕನಾಗಿದ್ದು, ಈ ಪ್ರಕರಣದಿಂದ ನನ್ನ ಸಾಮಾಜಿಕ ಜೀವನಕ್ಕೆ ಕಪ್ಪು ಚುಕ್ಕೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಈಗಾಗಲೇ…
ಮಡಿಕೇರಿ ಜು.16 NEWS DESK : ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಸಂಘದ ಮಾಸಿಕ ಸಭೆಯು ಮದಲಾಪುರ ಶ್ರೀ ಬಸವೇಶ್ವರ ದೇವಾಲಯದ ಸಭಾಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ನೂತನ ಜಿಲ್ಲಾಧ್ಯಕ್ಷ ಕೆ.ಕುಶಾಲಪ್ಪ, ಸಂಘವು ಹಲವು ವರ್ಷಗಳಿಂದ ನಿಷ್ಕ್ರಿಯಗೊಂಡಿದ್ದು, ಇದೀಗ ಹೊಸ ಆಡಳಿತ ಮಂಡಳಿಯ ಮುಂದಾಳತ್ವದಲ್ಲಿ ಸಭೆ ನಡೆಸಲಾಗಿದೆ ಎಂದರು. ಸಂಘವು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ಸೌಲಭ್ಯವನ್ನು ಒದಗಿಸಲು ಅನುಕೂಲ ಮಾಡಲು ಸಂಘ ಕಟ್ಟಿಬದ್ಧವಾಗಿದೆ. ಆ ಮೂಲಕ ಜಿಲ್ಲೆಯ ಕುಲಾಲ ಕುಂಬಾರ ಸಮಾಜದ ಬಂಧುಗಳು ಸಂಘವನ್ನು ಬಲಪಡಿಸಬೇಕು ಎಂದು ಕರೆ ನೀಡಿದರು. ಮುಂದಿನ ದಿನಗಳಲ್ಲಿ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಅಪಘಾತ ಪರಿಹಾರ, ಮರಣ ಫಂಡ್ ಇಂತಹ ಹಲವು ಯೋಜನೆಗಳು ಕಾರ್ಯಗತಗೊಳ್ಳಲಿದೆ ಅಲ್ಲದೇ ಸಮಾಜದ ಬಂಧುಗಳಿಗೆ ಕ್ರೀಡೋತ್ಸವ ಮಾಡುವ ಬಗ್ಗೆಯೂ ಶೀಘ್ರದಲ್ಲಿ ದಿನಾಂಕ ಪ್ರಕಟಿಸಲಾಗುವುದು ಎಂದು ಹೇಳಿದರು. ಎಲ್ಲಾ ಸಮಾಜಮುಖಿ ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳ ಪೂರ್ಣ ಸಹಕಾರ ಇದ್ದಾಗ ಮಾತ್ರ ಸಂಘ ಬಲಿಷ್ಠವಾಗಿ ಮುನ್ನುಗ್ಗಲು ಸಾಧ್ಯ ಎಂದ…
ಮಡಿಕೇರಿ ಜು.16 NEWS DESK : ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿನ ಉತ್ತಮ ಸೇವೆಗಾಗಿ ಮಡಿಕೇರಿಯ ಜಿಲ್ಲಾ ಕಾರಾಗೃಹದ ಅಧೀಕ್ಷರಾದ ಸಂಜಯ್ ಜಿತ್ತಿ, ಮುಖ್ಯ ವೀಕ್ಷಕರಾದ ಮಮತ 2023ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ. ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ನಡೆದ ಸಮಾರಂಭದಲ್ಲಿ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್ ಅವರು ಇಬ್ಬರಿಗೆ ಪ್ರದಕ ಪ್ರದಾನ ಮಾಡಿದರು.
ಮಡಿಕೇರಿ ಜು.16 NEWS DESK : ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಮಡಿಕೇರಿ ತಾಲ್ಲೂಕಿನ ಕೊಯನಾಡು ಸ. ಹಿ. ಪ್ರಾ. ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಘಟಕ ಕಾರ್ಯಾಚರಣೆ ನಡೆಸಿ ಶಾಲೆಯ ಒಳಗಿದ್ದ ವಸ್ತುಗಳನ್ನು ಹೊರತೆಗೆದರು.






