ಲೇಖಕ: admin

ಮಡಿಕೇರಿ ಜು.15 NEWS DESK : ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‍ಗಳಲ್ಲಿ ಖಾಲಿ ಇರುವ ಕ್ಲರಿಕಲ್ ಮತ್ತು ಪ್ರೊಬೇಶನರಿ ಆಫ಼ೀಸರ್ ಹುದ್ದೆಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಖಾ ಲಿ ಇರುವ ಕ್ಲರಿಕಲ್ ಹುದ್ದೆಗಳ ನೇಮಕಾತಿಗೆ ಐಬಿಪಿಎಸ್ ಸಂಸ್ಥೆ ಈಗಾಗಲೇ ಅರ್ಜಿ ಆಹ್ವಾನಿಸಿದೆ. ಈ ವರ್ಷದಲ್ಲಿ ಇಲ್ಲಿಯವರೆಗೆ ಒಟ್ಟು 15,215 ಕ್ಕೂ ಹೆಚ್ಚಿನ ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದಂತಾಗಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಖಾಲಿ ಇರುವ ಪ್ರೊಬೇಶನರಿ ಆಫ಼ೀಸರ್ ಹುದ್ದೆಗಳು, ಎಸ್‍ಬಿಐ, ಆರ್‍ಬಿಐ ಹಾಗೂ ಖಾಸಗಿ ಬ್ಯಾಂಕ್‍ಗಳಲ್ಲಿ ಖಾಲಿ ಇರುವ ಸಾವಿರಾರು ಕ್ಲರಿಕಲ್ ಹಾಗೂ ಪ್ರೊಬೇಶನರಿ ಆಫ಼ೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುವುದು ತಿಳಿದು ಬಂದಿದೆ. ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಶನ್‍ನಲ್ಲಿ ಬ್ಯಾಂಕ್ ನೇಮಕಾತಿ ಪರೀಕ್ಷೆಗಳ ತಯಾರಿಗೆ ಜುಲೈ, 16 ರಿಂದ 18 ರವರೆಗೆ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಡೆಮೋ ಉಚಿತ ತರಗತಿಗಳನ್ನು ಆಯೋಜಿಸಲಾಗಿದ್ದು, ಆಸಕ್ತರು ಈ ಅವಕಾಶದ ಉಪಯೋಗಪಡೆದುಕೊಳ್ಳಲು ಕೂಡಲೇ ಮೊಬೈಲ್ ಸಂಖ್ಯೆ 8660217739…

Read More

ಮಡಿಕೇರಿ ಜು.15 NEWS DESK : ಎಲ್ಲ ರೀತಿಯ ವಾಣಿಜ್ಯ, ಕೈಗಾರಿಕೆ ಮತ್ತು ವ್ಯಾಪಾರ ಸಂಸ್ಥೆಗಳು ಟ್ರಸ್ಟ್ ಗಳು ಸಮಾಲೋಚನ ಕೇಂದ್ರಗಳು ಹಾಗೂ ಆಸ್ಪತ್ರೆಗಳ ಪ್ರಯೋಗಾಲಗಳು ಮತ್ತು ಹೋಟೆಲ್ ಹಾಗೂ ಅಂಗಡಿ ಮುಗಟ್ಟು ಹಾಗೂ ಇನ್ನಿತರ ಕಡೆಗಳಲ್ಲಿನ ನಾಮ ಫಲಕಗಳಲ್ಲಿ ಶೇ.60 ರಷ್ಟು ಬಳಕೆ ಮಾಡುವಂತೆ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ  ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ವೇದಿಕೆಯ ಪ್ರಮುಖ ರವಿಗೌಡ, ಕರ್ನಾಟಕದಲ್ಲಿ ಕನ್ನಡ ಭಾಷೆ ಕಡ್ಡಾಯವಾಗಿ ಅನುಷ್ಠಾನಗೊಳಿಸುವ ಕುರಿತು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ -2022 ಮತ್ತು ತಿದ್ದುಪಡಿ 2024 ಸಮರ್ಪಕವಾಗಿ ಜಾರಿಗೊಳಿಸುವಂತೆ ಪ್ರಕಾರ ಆದೇಶ ಹೊರಡಿಸಿದೆ ಆದರೆ ಎಲ್ಲ ರೀತಿಯ ವಾಣಿಜ್ಯ.ಕೈಗಾರಿಕೆ. ಮತ್ತು ವ್ಯಾಪಾರ ಸಂಸ್ಥೆಗಳು ಟ್ರಸ್ಟ್ ಗಳು ಸಮಾಲೋಚನ ಕೇಂದ್ರಗಳು ಹಾಗೂ ಆಸ್ಪತ್ರೆಗಳ ಪ್ರಯೋಗಾಲಗಳು ಮತ್ತು ಹೋಟೆಲ್ ಹಾಗೂ ಅಂಗಡಿ ಮುಗಟ್ಟು ಹಾಗೂ ಇನ್ನಿತರ ಕಡೆಗಳಲ್ಲಿನ ನಾಮ ಫಲಕಗಳಲ್ಲಿ ಶೇ60 ರಷ್ಟು ಜಾಗದಲ್ಲಿ ಕನ್ನಡ ಅಕ್ಷರಗಳನ್ನು ಒಳಗೊಂಡಿರಬೇಕು ಎಂದು ಸರಕಾರದ ಆದೇಶವಿದ್ದರೂ ಕೂಡ ಮಡಿಕೇರಿ ತಾಲೂಕಿನ…

Read More

ಮಡಿಕೇರಿ ಜು.15 NEWS DESK : ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಕಾಮಗಾರಿ ಸ್ಥಳಕ್ಕೆ ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ  ಭೇಟಿ ನೀಡಿ ಪರಿಶೀಲಿಸಿದರು. ಕಾರ್ಮಿಕರು ಕೆಲಸದ ಸಮಯದಲ್ಲಿ ಸುರಕ್ಷಿತಾ ಕ್ರಮಗಳನ್ನು ಕೈಗೊಂಡು, ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ಎಚ್ಚರಿಗೆ ವಹಿಸುವಂತೆ ತಿಳಿವಳಿಕೆ ನೀಡಿದರು. ಹಾಗೆಯೇ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

Read More

ಮಡಿಕೇರಿ ಜು.24 NEWS DESK : ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿರುವುದರಿಂದ ಕುಶಾಲನಗರ ಸಮೀಪದ ಕಣಿವೆ ತೂಗು ಸೇತುವೆ ಬಳಿ ಜೀವನದಿ ಕಾವೇರಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ. ನದಿಯ ನೀರಿನ ಹರಿವು ಹೆಚ್ಚಿರುವುದರಿಂದ ತಹಶೀಲ್ದಾರ್ ಕಿರಣ್ ಗೌರಯ್ಯ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. 

Read More

ಮಡಿಕೇರಿ ಜು.15 NEWS DESK  : ಕೊಡಗಿನ ವಿವಿಧೆಡೆ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ವಿವಿಧೆಡೆ ಹಾನಿಯಾಗಿದೆ. ಮಡಿಕೇರಿ ಹೋಬಳಿ ಮರಗೋಡು ಗ್ರಾಮದ ಎಂ.ಕೆ.ಅಣ್ಣು ಅವರ ವಾಸದ ಮನೆಯು ಸಂಪೂರ್ಣ ಹಾನಿಯಾಗಿದೆ. ಸ್ಥಳಕ್ಕೆ ತಹಸೀಲ್ದಾರ್ ಪ್ರವೀಣ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ವೀಕ್ಷಿಸಿದರು. ಕುಟುಂಬವನ್ನು ಬೇರೊಂದು ಮನೆಗೆ ಸ್ಥಳಾಂತರಿಸಿದರು. ಮಾದಾಪಟ್ಟಣ ಗ್ರಾಮದ ನಿವಾಸಿ ಬಸವರಾಜು ಅವರ ವಾಸದ ಮನೆಯ ಗೋಡೆ ಹಾನಿ ಹಾನಿಯಾಗಿದೆ. ಈ ಸಂಬಂಧ ತಹಶೀಲ್ದಾರ್ ಕಿರಣ್ ಗೌರಯ್ಯ ಹಾಗೂ ಕಂದಾಯ ಪರಿವೀಕ್ಷಕರು ಸ್ಥಳ ಪರಿಶೀಲನೆ ಮಾಡಿದರು. ಕುಶಾಲನಗರ ಹೋಬಳಿಯ ಹೆಗ್ಗಡಳ್ಳಿ ಗ್ರಾಮದ ಲಕ್ಷ್ಮಿ ಎಂಬವರ ಮನೆಯ ಗೋಡೆ ಭಾಗವು ಹಾನಿಯಾಗಿದ್ದು ತಹಶೀಲ್ದಾರ್ ಕಿರಣ್ ಗೌರಯ್ಯ ಭೇಟಿ ನೀಡಿ ಪರಿಶೀಲಿಸಿದರು. ಭಾಗಮಂಡಲ ಹೋಬಳಿ ಬೆಟ್ಟತ್ತೂರು ಗ್ರಾಮದ ದೇವರಕೊಲ್ಲಿ ಎಂಬಲ್ಲಿ ಕುಡಿಯರ ಗೌರಮ್ಮ ಕರುಂಬಯ್ಯ ಅವರ ಮನೆ ಮೇಲೆ ಮರ ಬಿದ್ದು ಹೆಚ್ಚಿನ ಹಾನಿಯಾಗಿದೆ.

Read More

ಮಡಿಕೇರಿ ಜು.15 NEWS DESK : ಮಡಿಕೇರಿಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆ ಹಿನ್ನೆಲೆ ನಗರಸಭಾ ವ್ಯಾಪ್ತಿಯಲ್ಲಿ ಸಣ್ಣಪುಟ್ಟ ಹಾನಿ ಆಗಿರುವ ಪ್ರದೇಶಗಳಿಗೆ ಪೌರಾಯುಕ್ತ ವಿಜಯ್  ಭೇಟಿ ನೀಡಿ ಪರಿಶೀಲಿಸಿದರು.

Read More

ಬೆಂಗಳೂರು, ಜು.15 NEWS DESK : ರಕ್ಷಣಾ ಸಚಿವಾಲಯದ ಡೈರೆಕ್ಟರ್‌ ಜನರಲ್‌ ರಿಸೆಟ್ಲಮೆಂಟ್‌ (ಡಿಜಿಆರ್), ಮಾಜಿ ಯೋಧರಿಗಾಗಿ 2024ರ ಜುಲೈ 19ರಂದು ಜಾಲಹಳ್ಳಿಯ ವಾಯುಪಡೆ ನಿಲ್ದಾಣ(ಎಂಟಿ ಕಾಂಪ್ಲೆಕ್ಸ್), ಜಾಲಹಳ್ಳಿ ಪೂರ್ವ (ಸಿಟಿಐ ಸಮೀಪ) ಉದ್ಯೋಗ ಮೇಳವನ್ನು ಆಯೋಜಿಸಿದೆ. ನಿವೃತ್ತ ಯೋಧರಿಗೆ ಎರಡನೇ ಅವಕಾಶವನ್ನು ಕಲ್ಪಿಸಲು ಉದ್ಯೋಗ ಬಯಸುವವರು ಮತ್ತು ಉದ್ಯೋಗದಾತರ ನಡುವೆ ಸಂಪರ್ಕ ಕಲ್ಪಿಸುವುದು ಈ ಉದ್ಯೋಗ ಮೇಳದ ಉದ್ದೇಶವಾಗಿದೆ. ಎಲ್ಲಾ ಮಾಜಿ ಸೈನಿಕರ ನೋಂದಣಿಯು ಬೆಳಿಗ್ಗೆ 7 ರಿಂದ 10 ರವರೆಗೆ ಸ್ಥಳದಲ್ಲಿಯೇ ನಡೆಯುತ್ತದೆ. ನೋಂದಾಯಿಸಲು, ಇಎಸ್ ಎಂ ತಮ್ಮ ಇಎಸ್ಎಂ ಗುರುತಿನ ಚೀಟಿ ಮತ್ತು ಇತ್ತೀಚಿನ ಸಿವಿ ಅಥವಾ ಸ್ವವಿವರ (ಬಯೋಡೇಟಾ)ದ ಐದು ಪ್ರತಿಗಳನ್ನು ಛಾಯಾಚಿತ್ರದೊಂದಿಗೆ ತರಬೇಕು. ಉದ್ಯೋಗಾಕಾಂಕ್ಷಿ ಇಎಸ್ ಎಂಗಳು ಬಹುಬಗೆಯ ಉದ್ಯೋಗಾವಕಾಶಗಳು ಮತ್ತು ಅಡತಡೆ ರಹಿತ ನೇಮಕ ಪ್ರಕ್ರಿಯೆಗಳನ್ನು ಪಡೆಯುತ್ತಾರೆ. ವಿವಿಧ ಕಾರ್ಪೊರೇಟ್‌ ಸಂಸ್ಥೆಗಳು ಸಂದರ್ಶನ/ಪರಿಶೀಲನೆ ಮತ್ತು ನಂತರ ಹಿರಿಯ ಮೇಲ್ವಿಚಾರಕರು, ಮಧ್ಯಮ/ಹಿರಿಯ ಮಟ್ಟದ ವ್ಯವಸ್ಥಾಪಕರಿಂದ ಹಿಡಿದು ಕಾರ್ಯತಂತ್ರದ ಯೋಜಕರು ಮತ್ತು ಯೋಜನಾ ನಿರ್ದೇಶಕರವರೆಗಿನ ನೇಮಕಾತಿಗಳಲ್ಲಿ…

Read More

ಮಡಿಕೇರಿ ಜು.15 NEWS DESK : ಭಾರೀ ಗಾಳಿ ಮಳೆಯಿಂದಾಗಿ ಮನೆಯ ಮೇಲೆ ಮರ ಬಿದ್ದು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಸೋಮವಾರಪೇಟೆ ಹೋಬಳಿಯ ನೇಗಳ್ಳಿ ಕರ್ಕಳ್ಳಿ ಗ್ರಾಮದ ನಿವಾಸಿ ಜಯಂತಿ ಎಂಬವರ ಮನೆಯ ಮೇಲೆ ಮರ ಬಿದ್ದು ಮೇಲ್ಚಾವಣಿ ಮತ್ತು ಗೋಡೆ ಪೂರ್ಣ ಹಾನಿಯಾಗಿದೆ.  

Read More

ಮಡಿಕೇರಿ ಜು.15 NEWS DESK : ಹಳ್ಳಿಗಟ್ಟು ಮಾರಮ್ಮ ದೇವರ ವಾರ್ಷಿಕ ಉತ್ಸವವು ಜು.16 ರಂದು ನಡೆಯಲಿದೆ ಎಂದು ಶ್ರೀ ಗುಂಡಿಯತ್ ಅಯ್ಯಪ್ಪ, ಭದ್ರಕಾಳಿ ಹಾಗೂ ಮಾರಮ್ಮ ದೇವರ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಪ್ರತಿವರ್ಷದಂತೆ ಈ ಬಾರಿಯೂ ಕಕ್ಕಡ ಮಾಸಕ್ಕೆ ಒಂದು ದಿನ ಮುಂಚಿತವಾಗಿ ನಡೆಯಲಿದೆ. ಜು.16 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 3  ಗಂಟೆಯವರೆಗೆ ನಡೆಯಲಿದ್ದು, ಒಂದು ವಾರಗಳ ನಂತರ ಕಕ್ಕಡ ಮಾಸದಲ್ಲಿ ನಡೆಯುವ ಮತ್ತೊಂದು ಮಾರಿಗುಡಿ ಹಬ್ಬ ಜು.22 ರಂದು ನಡೆಯಲಿದೆ. ಹರಕೆ ಕಾಣಿಕೆ ಸಲ್ಲಿಸುವವರು ಈ ಎರಡು ದಿನಗಳಲ್ಲಿ ಯಾವ ದಿವಸ ಬೇಕಾದರೂ ಸಲ್ಲಿಸಬಹುದಾಗಿದೆ. ಊರಿನವರು ಮಾತ್ರವಲ್ಲದೆ ಯಾರು ಬೇಕಾದರೂ ಹಬ್ಬದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಜೋಡುಬೀಟಿಯಿಂದ ಮೂಕಳೇರ ಹಾಗೂ ಮಚ್ಚಿಯಂಡ ಬಲ್ಯಮನೆಗೆ ಹೋಗುವ ರಸ್ತೆಯಲ್ಲಿರುವ ಈ ದೇವಸ್ಥಾನಕ್ಕೆ ಪುರಾತನ ಕಾಲದ ಇತಿಹಾಸವಿದ್ದು ವರ್ಷಕ್ಕೆ ಎರಡು ಬಾರಿ ಮಾತ್ರ ಇಲ್ಲಿ ಪೂಜೆ ಪುನಸ್ಕಾರ ಹಾಗೂ…

Read More

ಬೆಂಗಳೂರು, ಜು.15 NEWS DESK : ವಿಧಾನಸೌಧದ ಪಶ್ಚಿಮ ದ್ವಾರವನ್ನು ನವೀಕರಿಸಲಾಗಿದ್ದು, ನವೀಕೃತ ಬಾಗಿಲನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ನನನ್ನೂ ಒಳಗೊಂಡಂತೆ, ವಿಧಾನಸಭೆಯ ಅಧ್ಯಕ್ಷ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಸಂಪುಟದ ಸಹೋದ್ಯೋಗಿಗಳು, ಶಾಸಕ ಮಿತ್ರರು ಸೇರಿ ಸಂತೋಷದಿಂದ ಉದ್ಘಾಟಿಸಿದ್ದೇವೆ ಎಂದು ಹೇಳಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಉಪಸ್ಥಿತರಿದ್ದರು.

Read More