ಲೇಖಕ: admin

ಮಡಿಕೇರಿ ಜು.14 NEWS DESK : ಮಡಿಕೇರಿಯ ಸಕಾ೯ರಿ ಬಾಲಕರ  ಬಾಲಮಂದಿರದ 27 ಮಕ್ಕಳಿಗೆ ರೋಟರಿ ವುಡ್ಸ್ ನಿಂದ ಬೆಚ್ಚನೆಯ ಜಕೀ೯ನ್ ವಿತರಿಸಲಾಯಿತು. ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ ರೋಟರಿ ವುಡ್ಸ್ ನಿದೇ೯ಶಕ, ಬಾಲಸುಬ್ರಹ್ಮಣ್ಯ ಅವರು ಕೊಡುಗೆಯಾಗಿ ನೀಡಿದ ಜಕೀ೯ನ್ ಗಳನ್ನು ರೋಟರಿ ವುಡ್ಸ್ ಅಧ್ಯಕ್ಷ ಹರೀಶ್ ಕಿಗ್ಗಾಲು, ಕಾಯ೯ದಶಿ೯ ಕಿರಣ್ ಕುಂದರ್ ಸಮ್ಮುಖದಲ್ಲಿ ಕೇಂದ್ರದ  ಆಪ್ತಸಮಾಲೋಚಕ   ನಾಗಭೂಷಣ್ ,  ಕಛೇರಿ ಸಿಬ್ಬಂದಿ ಹೆಚ್,  ಸೂರಜ್  ಅವರಿಗೆ ಹಸ್ತಾಂತರಸಲಾಯಿತು. ಈ ಸಂದಭ೯ ಮಾತನಾಡಿದ ಹರೀಶ್ ಕಿಗ್ಗಾಲು, ರೋಟರಿ ಸಂಸ್ಥೆಯು ಈ ವಷ೯ದಲ್ಲಿ ಅನೇಕ ವಿಭಿನ್ನ ಕಾಯ೯ಕ್ರಮಗಳನ್ನು ಆಯೋಜಿಸಲಿದೆ, ಮಳೆಗಾಲದಲ್ಲಿ ಹೆಚ್ಚುತ್ತಿರುವ ಛಳಿಯನ್ನು ಗಮನಿಸಿ ರೋಟರಿ ವುಡ್ಸ್ ಮೂಲಕ ಉದ್ಯಮಿ ಬಾಲಸುಬ್ರಹ್ಮಣ್ಯ ನೀಡಿದ ಜಕೀ೯ನ್ ಗಳನ್ನು ಮಕ್ಕಳಿಗೆ ನೀಡಿದ್ದೇವೆ ಶಾಲೆಗೆ ಮಳೆಯಲ್ಲಿ ತೆರಳುವ ಸಂದಭ೯ ಈ ಬೆಚ್ಚನೆಯ ಧಿರಿಸು  ಮಕ್ಕಳನ್ನು ಬೆಚ್ಚಗಿಡಲು ನೆರವಾಗಲಿದೆ ಎಂದರು. ರೋಟರಿ ವುಡ್ಸ್ ನ ಕೊಡುಗೆಯನ್ನು    ನಾಗಭೂಷಣ್ ಶ್ಲಾಘಿಸಿದರು, ರೋಟರಿ ವುಡ್ಸ್ ನಿದೇ೯ಶಕರಾದ ಧನಂಜಯ ಶಾಸ್ತ್ರೀ,…

Read More

ವಿರಾಜಪೇಟೆ ಜು.14 NEWS DESK : ವಿರಾಜಪೇಟೆಯ ರೋಟರಿ ಶಾಲೆಯಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ವಿರಾಜಪೇಟೆಯ ವೃತ್ತ ನಿರೀಕ್ಷಕರಾದ ಶಿವರುದ್ರ ಉಪಸ್ಥಿತರಿದ್ದು ಶಾಲಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹಿತನುಡಿಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಎಂ.ಬಿ. ಮಾದಪ್ಪ ವಹಿಸಿದ್ದರು. ಶಾಲಾ ಸಂಸತ್ತಿಗೆ ಚುನಾವಣೆಯ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳು ವಿವಿಧ ಇಲಾಖೆಯ ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ರೋಟರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಹೆಚ್.ಜೆ. ವಿಶಾಲಾಕ್ಷಿ ಹಾಗೂ ರೋಟರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಹಸೀನಾ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು, ಮತ್ತು ಪೋಷಕರು ಉಪಸ್ಥಿತರಿದ್ದರು.

Read More

ಮಡಿಕೇರಿ ಜು.14 NEWS DESK : ಹಾರಂಗಿ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಿದ್ದರಿಂದ 5 ಸಾವಿರ ಕ್ಯುಸೆಕ್ ನೀರನ್ನು ಭಾನುವಾರ ಸಂಜೆ ನದಿಗೆ ಹರಿಬಿಡಲಾಯಿತು. ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳಾಗಿದ್ದು, ಇಂದಿನ ಮಟ್ಟ 2854.65 ಅಡಿಗಳಾಗಿದ್ದು, ಸಂಜೆಯ ವೇಳೆ ಜಲಾಶಯದ ಒಳಹರಿವಿನ ಪ್ರಮಾಣ 6820 ಕ್ಯುಸೆಕ್‌ಗಳಿಗೆ ಏರಿಕೆಯಾದ ಹಿನ್ನೆಲೆಯಲ್ಲಿ ಹೆಚ್ಚುವರಿ ನೀರನ್ನು ನದಿಗೆ ಹರಿ ಬಿಡಲಾಗಿದೆಯೆಂದು ಜಲಾಶಯದ ಕಾರ್ಯಪಾಲಕ ಇಂಜಿನಿಯರ್ ಪುಟ್ಟಸ್ವಾಮಿ ಐ.ಕೆ. ತಿಳಿಸಿದ್ದಾರೆ.   ಭಾನುವಾರ ಮಧ್ಯಾಹ್ನದ ವೇಳೆ 4500 ಕ್ಯುಸೆಕ್ ನೀರು ಹರಿದು ಬರುತ್ತಿದ್ದರೆ, ಸಂಜೆಯ ವೇಳೆ ಈ ಪ್ರಮಾಣ ಏರಿಕೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಶೀಘ್ರವೇ ಜಲಾಶಯದ ನೀರಿನ ಮಟ್ಟ ಗರಿಷ್ಠ ಮಿತಿಯನ್ನು ತಲುಪಬಹುದೆಂದು ಹಾರಂಗಿ ಜಲಾಶಯದ ಕಾರ್ಯಪಾಲಕ ಇಂಜಿನಿಯರ್ ಪುಟ್ಟಸ್ವಾಮಿ ಐ.ಕೆ. ತಿಳಿಸಿದ್ದಾರೆ. ಈ ಹಿನ್ನೆಲೆ ಕಾವೇರಿ ನದಿ ಪಾತ್ರದಲ್ಲಿ ನೆಲೆಸಿರುವವರು ತಮ್ಮ ಆಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ…

Read More

ಮಡಿಕೇರಿ ಜು.14 NEWS DESK :  ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮಹಿಳಾ ಘಟಕ ಕದಳಿ ವೇದಿಕೆಯ ವಿರಾಜಪೇಟೆ ತಾಲ್ಲೂಕು ಅಧ್ಯಕ್ಷರಾಗಿ  ವಿರಾಜಪೇಟೆಯ ಆರ್ಜಿ ಗ್ರಾಮದ ಸಾಹಿತಿ ರಜಿತಾ  ಕಾರ್ಯಪ್ಪ ಅವರನ್ನು ನೇಮಕ ಮಾಡಲಾಗಿದೆ. ತಾಲ್ಲೂಕಿನಾದ್ಯಂತ ವಚನ ಸಾಹಿತ್ಯವನ್ನು ಮನೆ ಮನೆಗೆ ಮುಟ್ಟಿಸುವಂತಹ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಕದಳಿ ವೇದಿಕೆ ಕೊಡಗು ಜಿಲ್ಲಾಧ್ಯಕ್ಷೆ ಜಲಜಾ ಶೇಖರ್ ನೇಮಕ ಮಾಡಿದ್ದಾರೆ.

Read More

ಮಡಿಕೇರಿ ಜು.14 NEWS DESK :  ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮಹಿಳಾ ಘಟಕ ಕದಳಿ ವೇದಿಕೆಯ ಪೊನ್ನಂಪೇಟೆ  ತಾಲ್ಲೂಕು ಅಧ್ಯಕ್ಷರಾಗಿ ಮಾಯಮುಡಿ ಧನುಗಾಲ ಗ್ರಾಮದ  ಶೋಭಾ ರಾಣಿ  ಅವರನ್ನು ನೇಮಕ ಮಾಡಲಾಗಿದೆ. ತಾಲ್ಲೂಕಿನಾದ್ಯಂತ ವಚನ ಸಾಹಿತ್ಯವನ್ನು ಮನೆ ಮನೆಗೆ ಮುಟ್ಟಿಸುವಂತಹ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಕದಳಿ ವೇದಿಕೆ ಕೊಡಗು ಜಿಲ್ಲಾಧ್ಯಕ್ಷೆ ಜಲಜಾ ಶೇಖರ್ ನೇಮಕ ಮಾಡಿದ್ದಾರೆ.

Read More

ಮಡಿಕೇರಿ ಜು.14 NEWS DESK : ಆರೋಗ್ಯ ಇಲಾಖೆಯ ಹಿರಿಯ ನರ್ಸಿಂಗ್ ಅಧಿಕಾರಿ ಮಡಿಕೇರಿಯ ಬಂಗಾಡುಮನೆ ವಸಂತಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಪ್ರತಿಷ್ಠಿತ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಕಾರಣಕ್ಕಾಗಿ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಯೊಂದಿಗೆ ಬೆಸ್ಟ್ ನರ್ಸಿಂಗ್ ಆಫೀಸರ್ ಪ್ರಶಸ್ತಿ ಪತ್ರವನ್ನು ಇವರು ಪಡೆದಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಂಗ್ಲೋ ಇಂಡಿಯನ್ ಯುನಿಟಿ ಸೆಂಟರ್ ಸಹಯೋಗದಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್ ಅವರು ವಸಂತಿ ಅವರಿಗೆ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ 25 ವರ್ಷಗಳ ಕಾಲ ಉತ್ತಮ ಸೇವೆ ಸಲ್ಲಿಸಿರುವ ಬಂಗಾಡುಮನೆ ವಸಂತಿ ಅವರು, ಪ್ರಸ್ತುತ ಬಡ್ತಿ ಹೊಂದಿ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಹಿರಿಯ ನರ್ಸಿಂಗ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆಯಲ್ಲಿ ಹೆಚ್ಚು ಆಸಕ್ತಿ…

Read More

ಮಡಿಕೇರಿ ಜು.13 NEWS DESK : ಕೊಂಡಂಗೇರಿ ಎಲಿಯನ್ -ಗಾಡ್ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೆ ಜಾತ್ಯತೀತ ಜನತಾದಳದ ವತಿಯಿಂದ ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕಿ ಅಶ್ವಿನಿ, ಶಿಕ್ಷಕರಾದ ಯಮುನ, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಪಿ.ಎ.ಅಬ್ಬಾಸ್, ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರಾದ ಲೋಕೇಶ್, ಬೇಬಿ, ವಿರಾಜಪೇಟೆ ತಾಲ್ಲೂಕು ಯುವ ಜೆಡಿಎಸ್ ಅಧ್ಯಕ್ಷ ಸೈಫುದ್ದೀನ್, ನಜೀರ್ ಮತ್ತಿತರರು ಉಪಸ್ಥಿತರಿದ್ದರು.

Read More

ಮಡಿಕೇರಿ ಜು.13 NEWS DESK : ತಾಂತ್ರಿಕ ದೋಷದಿಂದ ಕಾರೊಂದು ಅಗ್ನಿಗಾಹುತಿಯಾದ ಘಟನೆ ಮಡಿಕೇರಿ ನಗರದ ಸಂಪಿಗೆಕಟ್ಟೆ ಬಳಿ ನಡೆದಿದೆ. ಮಡಿಕೇರಿ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಕಾರು ಸುಟ್ಟು ಕರಕಲಾಗಿದೆ. ಅಗ್ನಿ ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶನಿವಾರ ಬೆಳಗ್ಗೆ ಮಡಿಕೇರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ತಡೆಗೋಡೆಯೊಂದಕ್ಕೆ ಡಿಕ್ಕಿಯಾದ ಕಾರಣ ಹೆದ್ದಾರಿ ಬದಿ ನಿಲ್ಲಿಸಲಾಗಿತ್ತು. ಸಂಜೆ ಇದ್ದಕ್ಕಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದರು. ಬೆಂಗಳೂರಿನ ಶ್ರೀನಿವಾಸ್ ಎಂಬುವವರಿಗೆ ಸೇರಿದ ಕಾರು ಇದಾಗಿದೆ. ಮಡಿಕೇರಿ ಸಂಚಾರಿ ಪೊಲೀಸರು ಹಾಗೂ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯಿಂದ ಹೆದ್ದಾರಿಯಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.

Read More

ವಿರಾಜಪೇಟೆ ಜು.13 NEWS DESK : ತಿತಿಮತಿ ಸರ್ಕಾರಿ ಪಿಯು ಕಾಲೇಜಿನ 2024-25 ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಡಾ.ರಾಜೇಂದ್ರ ಪ್ರಸಾದ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಹತಾಶರಾಗದೇ ಏಕಾಗ್ರತೆಯಿಂದ ತಮ್ಮ ಗುರಿಮುಟ್ಟಬೇಕು ಎಂದು ಸಲಹೆ ನೀಡಿದರು. ದ ಉದ್ಘಾಟನಾ ಕಾರ್ಯಕ್ರಮ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು. ತಿತಿಮತಿ ವಿಎಸ್ಎಸ್ ಎನ್ ನ ಅಧ್ಯಕ್ಷ ರಾಮಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ಈ ಹಂತದಿಂದಲೇ ನಾಯಕತ್ವ ಗುಣವನ್ನು ಅಳವಡಿಸಿಕೊಳ್ಳಬೇಕು. ಮತ್ತು ವಿದ್ಯಾರ್ಥಿ ಸಂಘದಲ್ಲಿ ತನ್ನ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದರು. ಸ್ಥಳೀಯರು ಹಾಗೂ ಸಮಾಜ ಸೇವಕರಾದ ಮನು ನಂಜಪ್ಪ ಮಾತನಾಡಿ, ವಿದ್ಯಾರ್ಥಿಗಳು ಜೀವನದ ಪ್ರತೀ ಹಂತದಲ್ಲೂ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಚಾರ್ಲ್ಸ್ ಡಿಸೋಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಿತಿಮತಿ ಗ್ರಾ.ಪಂ ಸದಸ್ಯ ಅನೂಪ್ ಕುಮಾರ್, ತಿತಿಮತಿ ಪ್ರೌಢ ಶಾಲೆಯ ಮುಖ್ಯ…

Read More

ಮಡಿಕೇರಿ ಜು.13 NEWS DESK : ಕೊಂಡಂಗೇರಿ ಸರಕಾರಿ ಪ್ರೌಢ ಶಾಲೆಯಲ್ಲಿ ಶಾಲಾ ಸಂಸತ್ತು ಚುನಾವಣೆ ನಡೆಸಿ ವಿದ್ಯಾರ್ಥಿ ನಾಯಕರುಗಳನ್ನು ಆಯ್ಕೆ ಮಾಡಲಾಯಿತು. ಪ್ರಧಾನ ಮಂತ್ರಿಯಾಗಿ ಹೆಚ್.ಯು.ಮೊಹಮ್ಮದ್ ಹರ್ಷಾದ್, ಕ್ರೀಡಾ ಮಂತ್ರಿಯಾಗಿ ಹೆಚ್.ಎಂ.ಅಬ್ದುಲ್ ರಹಿಮಾನ್ ಅಜಿನಾಸ್, ಶಿಸ್ತು ಪಾಲನಾ ಮಂತ್ರಿಯಾಗಿ ಅಬೂಬಕರ್ ಸಿದ್ದೀಕ್ ಆಯ್ಕೆಯಾದರು. ಸ್ವಚ್ಛತಾ ಮಂತ್ರಿಯಾಗಿ ಕೆ.ಯು.ಫಾತಿಮತ್ ಫಾಹಿಜಾ, ತೋಟಗಾರಿಕಾ ಮಂತ್ರಿಯಾಗಿ ಪಿ.ಜೆ.ಫೈಜಲ್, ಹಣಕಾಸು ಮಂತ್ರಿಯಾಗಿ ಬಿ.ಎ.ಮೊಹಮ್ಮದ್ ಅಫ್ನಾನ್, ಆರೋಗ್ಯ ಮಂತ್ರಿಯಾಗಿ ಎಂ.ಎಸ್.ಶಮ್ನ, ವಾರ್ತಾ ಮಂತ್ರಿಯಾಗಿ ಆರ್.ಎ.ಆಯಿಷತು ಸಹಲ, ಸಾಂಸ್ಕೃತಿಕ ಮಂತ್ರಿಯಾಗಿ ಟಿ.ಐ.ಮೊಹಮ್ಮದ್ ಇಸಾಕ್, ನೀರಾವರಿ ಮಂತ್ರಿಯಾಗಿ ಎ.ಎಂ.ತೋಹ ಅವರನ್ನು ವಿದ್ಯಾರ್ಥಿಗಳು ಮತಚಲಾಯಿಸುವ ಮೂಲಕ ಆಯ್ಕೆ ಮಾಡಿದರು. ವಿರೋಧ ಪಕ್ಷದ ನಾಯಕನಾಗಿ ಪಿ.ಹೆಚ್.ಮೊಹಮ್ಮದ್ ಮಿಸ್ಹಾಬ ಆಯ್ಕೆ ಮಾಡಲಾಯಿತು. ಶಾಲಾ ಮುಖ್ಯ ಶಿಕ್ಷಕರಾದ ಜೆ.ಸಿ.ಜಯಂತಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ, ಮುಂದಿನ ದಿನಗಳಲ್ಲಿ ನಾಯಕರು ಮಾಡಬೇಕಾದ ಕರ್ತವ್ಯಗಳ ಬಗ್ಗೆ ವಿವರಿಸಿದರು. ಶಾಲೆಯ ಆಂಗ್ಲ ಭಾಷಾ ಶಿಕ್ಷಕರಾದ ಬಿ.ಎಂ.ಲವಿನ್ ಮತದಾನ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಶಾಲೆಯ ಇಐಅ ಕ್ಲಬ್…

Read More