ಲೇಖಕ: admin

ಸಿದ್ದಾಪುರ ಡಿ.23 NEWS DESK : ಯಂಗ್ ಇಂಡಿಯಾ ಯೂಥ್ ಕ್ಲಬ್ ನ 55ನೇ ಸುವರ್ಣ ಮಹೋತ್ಸವದ ಸಂಭ್ರಮಕ್ಕಾಗಿ ರಾಷ್ಟ್ರೀಯ ಮಟ್ಟದ ಮುಕ್ತ 5s ಫುಟ್ಬಾಲ್ ಪಂದ್ಯಾವಳಿ ಜ.9, 10 ಮತ್ತು 11 ರಂದು ಪಾಲಿಬೆಟ್ಟ ಮೈದಾನದಲ್ಲಿ ನಡೆಯಲಿದ್ದು, ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಯಂಗ್ ಇಂಡಿಯಾ ಯೂಥ್ ಕ್ಲಬ್ ಅಧ್ಯಕ್ಷ ಪಿ.ಎ.ಸಲೀಂ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳ ಮೂವತ್ತಕ್ಕೂ ಹೆಚ್ಚು ತಂಡಗಳು ಭಾಗವಹಿಸಲಿದ್ದು, ತಂಡಗಳ ನೋಂದಾವಣೆ ಕಾರ್ಯ ನಡೆಯುತ್ತಿದೆ. ಇದೇ ಪ್ರಥಮ ಬಾರಿಗೆ ರಾಷ್ಟ್ರೀಯ ಫುಟ್ಬಾಲ್ ಪಂದ್ಯಾವಳಿ ಗ್ಯಾಲರಿಯಲ್ಲಿ ನಡೆಯಲಿದ್ದು,  ಮೈದಾನದ ಸಿದ್ಧತೆಗೆ ಟಾಟಾ ಕಾಫಿ ಸಂಸ್ಥೆ ಹೆಚ್ಚಿನ ಸಹಕಾರ ನೀಡುತ್ತಿದೆ.  ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ದಾನಿಗಳು ಗಣ್ಯರು, ಹಿರಿಯ ಆಟಗಾರರು ಆಗಮಿಸಲಿದ್ದಾರೆ ಎಂದರು. ಸಂಘದ ಉಪಾಧ್ಯಕ್ಷ  ಮುಹಮ್ಮದ್ ಶಮೀಲ್ ಮಾತನಾಡಿ, 55 ವರ್ಷ ಪೂರೈಸಿರುವ ಯಂಗ್ ಇಂಡಿಯಾ ಯೂತ್ ಕ್ಲಬ್…

Read More

ಮಡಿಕೇರಿ ಡಿ.23 NEWS DESK : ಕೊಡಗಿನ ಹಿರಿಯ ಜಾನಪದ ಕಲಾವಿದರಾದ ಕುಡಿಯ ಸಮುದಾಯದ ಅಮ್ಮಣಿ ಅವರಿಗೆ ಕರ್ನಾಟಕ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ ಲಭಿಸಿದೆ. ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವ ಪ್ರಸಾದ್ ಹಾಗೂ ರಿಜಿಸ್ಟ್ರಾರ್ ಎನ್.ನಮೃತ ಅವರು ಇಂದು ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳನ್ನು ಘೋಷಿಸಿದ್ದಾರೆ. ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಹೆಗ್ಗಳ ಸಮೀಪದ ತೋರ ಗ್ರಾಮದ ಅಮ್ಮಣಿ ಅವರು ‘ಕುಡಿಯ ಜನಾಂಗದ ಹಾಡುಗಾರಿಕೆ ಮತ್ತು ಸೂಲಗಿತ್ತಿ’ ವಿಭಾಗಕ್ಕೆ ಸಂಬಂಧಿಸಿದಂತೆ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಕೊಡಗಿನ ಕುಡಿಯ ಸಮಾಜಕ್ಕೆ ಸೇರಿದ 60 ವರ್ಷದ ಅಮ್ಮಣಿ ಅವರು ಪತಿ ಭೀಮಯ್ಯ ಅವರೊಂದಿಗೆ ತೋರದಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಬದುಕು ಕಟ್ಟಿಕೊಂಡವರು. ಇವರು ಕಳೆದ ನಾಲ್ಕು ದಶಕಗಳಿಂದ ಕುಡಿಯ ಸಮೂಹದ ವಿಶಿಷ್ಟ ಸಂಸ್ಕøತಿಯ ಜಾನಪದ ಹಾಡು ಮತ್ತು ಕುಣಿತವನ್ನು ರಕ್ತಗತ ಮಾಡಿಕೊಂಡು ಅದನ್ನು ಯುವ ಸಮೂಹಕ್ಕೆ ತಲುಪಿಸುವ ಮಹತ್ತರ ಕಾರ್ಯವನ್ನು ಮಾಡುತ್ತಿದ್ದಾರೆ. ಅಮ್ಮಣಿ ಅವರು ಸೂಲಗಿತ್ತಿಯಾಗಿಯೂ ಸೇವೆ ಸಲ್ಲಿಸಿರುವುದು ವಿಶೇಷ. ಇವರ…

Read More

ಮಡಿಕೇರಿ ಡಿ.23 NEWS DESK : ಮರಗೋಡು ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವತಿಯಿಂದ ಮರಗೋಡು ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕೂಡಿಗೆ ಸರ್ಕಾರಿ ಕಾಲೇಜಿನ ಪಿ.ಜಿ.ಮಾನಸ ಮತ್ತು ಎ.ಮಾನಸ ಪ್ರಥಮ ಸ್ಥಾನ ಪಡೆದು ರೂ.10 ಸಾವಿರ ನಗದು ಬಹುಮಾನ ಮತ್ತು ಆಕರ್ಷಕ ಪಾರಿತೋಷಕ ಪಡೆದರು. ನೆಲ್ಲಿಹುದಿಕೇರಿ ಕಾಲೇಜಿನ ಸಫಾ ಮತ್ತು ಯುಕ್ತ ದ್ವಿತೀಯ ಸ್ಥಾನ ಮತ್ತು ಚೆನ್ನಮ್ಮ ಮಾದಾಪುರ ಕಾಲೇಜಿನ ಸುಕನ್ಯ ಮತ್ತು ರಕ್ಷಾ ತೃತೀಯ ಸ್ಥಾನ ಪಡೆದರು. ಸ್ಪರ್ಧೆಯನ್ನು ಪೊಕ್‍ಲಂಡ್ರ ಪ್ರಹ್ಲಾದ್ ಅವರು ನಡೆಸಿಕೊಟ್ಟರು. ರಸಪ್ರಶ್ನೆಯು ಎರಡು ಹಂತದಲ್ಲಿ ನಡೆಯಿತು. ಲಿಖಿತ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಅರ್ಹತೆ ಪಡೆದ 8 ತಂಡಗಳಿಗೆ ಮೌಖಿಕ ಪ್ರಶ್ನೋತರದ ಮೂಲಕ ವಿವಿಧ ವಿಷಯಗಳ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳಲ್ಲಿ ಜ್ಞಾನ ಅರಿವನ್ನು ಹೆಚ್ಚಿಸಲು ಪ್ರಯತ್ನಿಸಲಾಯಿತು. ವಿಜೇತ ವಿದ್ಯಾರ್ಥಿಗಳಿಗೆ ಆಕರ್ಷಕ ಬಹುಮಾನ ನೀಡಲಾಯಿತು. ಭಾರತಿ ವಿದ್ಯಾಸಂಸ್ಥೆಯ ಮಳ್ಳಂದೀರ ಕೃಷ್ಣರಾಜು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷದಲ್ಲಿ…

Read More

ಮಡಿಕೇರಿ ಡಿ.23 NEWS DESK : ತಾಲ್ಲೂಕಿನ ಊರುಬೈಲು ಬಳಿ 43 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಕಿರು ಸೇತುವೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ನಂತರ ಚೆಂಬು ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು. ಬಳಿಕ ಮಾತನಾಡಿದ ಶಾಸಕರು ಮಳೆಗಾಲದಲ್ಲಿ ತುಂಬಾ ತೊಂದರೆ ಅನುಭವಿಸುವ ಗ್ರಾಮಸ್ಥರ ಅನುಕೂಲಕ್ಕಾಗಿ ಕಿರು ಸೇತುವೆಯನ್ನು ಶಾಸಕರ ನಿಧಿಯಿಂದ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು. ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಸೇತುವೆ, ಸಾರಿಗೆ ಸಂಪರ್ಕ ಮತ್ತಿತರ ಕನಿಷ್ಠ ಸೌಲಭ್ಯಗಳು ಅತ್ಯಗತ್ಯ. ಆ ನಿಟ್ಟಿನಲ್ಲಿ ಮೂಲ ಸೌಲಭ್ಯ ಒದಗಿಸಲು ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು. ಬಳಿಕ ಅನ್ಯಾಳ ಭಾಗದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಕೈಗೊಳ್ಳಲಾಗುವ ತಡೆಗೋಡೆ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು. ಇದೇ ಸಂದರ್ಭ ನಿರ್ಮಾಣವಾಗಿರುವ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು. ಚೆಂಬು ಸರ್ಕಾರಿ ಹಿರಿಯ…

Read More

ಮಡಿಕೇರಿ ಡಿ.23 NEWS DESK : ಬದುಕು ಇತರರ ಕಷ್ಟ ಸಂಕಷ್ಟಗಳಿಗೆ ಪರಿಹಾರವಾಗುವ ರೀತಿಯಲ್ಲಿ ಇರಬೇಕು. ಸ್ವರ್ಗ ಎಂಬುದು ಇದೆ ಎಂಬುದು ಎಲ್ಲರಿಗೂ ತಿಳಿದ ವಿಚಾರ ಆದರೆ ಅದನ್ನು ಅನಭವಿಸಬೇಕಾದರೆ ನಿರಾಶ್ರಿತ, ನಿರ್ಗತಿಕ ಹಾಗೂ ಅನಾಥರ ಸೇವೆಯನ್ನು ಮಾಡುವ ಮೂಲಕ ಗಳಿಸಬೇಕು ಎಂದು ತನಲ್ ಟ್ರಸ್ಟ್ ಕೇರಳದ ವಡಗರ ವಿಭಾಗದ ಪ್ರತಿನಿಧಿ ಮೊಹಮ್ಮದ್ ಆಲಿ ಹೇಳಿದರು. ಮಡಿಕೇರಿಯ ತನಲ್ ಆಶ್ರಮದ 8ನೇ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ತನಲ್ ಸೇವಾ ಕೇಂದ್ರಗಳ ಅಧೀನದಲ್ಲಿ ದೇಶಾದ್ಯಾಂತ ಮೂರು ಲಕ್ಷದಷ್ಟು ಜನರು ಆಶ್ರಯ ಪಡುತ್ತಿದ್ದಾರೆ. 1330 ಶಾಲೆಗಳು ತನಲ್ ಆದೀನದಲ್ಲಿ ಕಾರ್ಯಚರಿಸುತ್ತಿದ್ದು, ಇನ್ನು ಅನೇಕ ಜನ ಹಸಿವು, ಬಡತನದಿಂದ ಬದುಕು ಸಾಗಿಸುತ್ತಿದ್ದಾರೆ ಎಂದು ಹೇಳಿದರು. ಅಧ್ಯಕ್ಷ ಮೊಹಮ್ಮದ್ ಮುಸ್ತಫ ತನಲ್ ಆಶ್ರಮದ ಪ್ರಾರಂಭ ಹಾಗೂ ಅದರ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿಸಿ, ಎಲ್ಲರನ್ನು ಸ್ವಾಗತಿಸಿದರು. ಅಬ್ದುಲಾ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಬಾಳೆಯಡ ದಿವ್ಯ ವಾರ್ಷಿಕ ವರದಿಯನ್ನು ಮಂಡಿಸಿದರು. ಕೋಶಾಧಿಕಾರಿ ಕರಾಮತ್ತುಲ್ಲಾ ಖಾನ್ ವರ್ಷದ…

Read More

ಮಡಿಕೇರಿ ಡಿ.23 NEWS DESK : ಮಡಿಕೇರಿ ತಾಲ್ಲೂಕಿನ ‘ಮರಗೋಡು’ ಗ್ರಾಮವನ್ನು ಸಂಪರ್ಕಿಸುವ ರಸ್ತೆಗಳು ಕಳೆದ ಒಂದೂವರೆ ದಶಕಗಳಿಂದ ಸೂಕ್ತ ನಿರ್ವಹಣೆ ಇಲ್ಲದೆ ಸಂಪೂರ್ಣವಾಗಿ ಹದಗೆಟ್ಟಿವೆ. ವ್ಯವಸ್ಥಿತ ರಸ್ತೆ ನಿರ್ವಹಣೆಗೆ ಆಗ್ರಹಿಸಿ ಡಿ.26 ರಂದು ಮರಗೋಡಿನಲ್ಲಿ ‘ರಸ್ತೆ ತಡೆ’ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಹಾಗೂ ಮರಗೋಡು ಆಟೋ ಚಾಲಕರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಹದಗೆಟ್ಟ ರಸ್ತೆಗಳ ಬಗ್ಗೆ ಮಾಹಿತಿ ನೀಡಿದ ಮರಗೋಡು ಆಟೋ ಚಾಲಕರ ಸಂಘದ ಅಧ್ಯಕ್ಷ ಪಿ.ಟಿ.ನಂದಕುಮಾರ್ ಅವರು, ಮರಗೋಡು ಗ್ರಾಮವನ್ನು ಜಿಲ್ಲಾ ಕೇಂದ್ರಕ್ಕೆ ಬೆಸೆಯುವ ‘ಮಡಿಕೇರಿ-ಕತ್ತಲೆಕಾಡು-ಹುಲಿತಾಳ-ಮರಗೋಡು-ಕಟ್ಟೆಮಾಡು’ ರಸ್ತೆ ಹಾಗೂ ‘ಮರಗೋಡು-ಅರೆಕಾಡು-ಸಿದ್ದಾಪುರ’ ರಸ್ತೆ ಕನಿಷ್ಟ ದುರಸ್ತಿ ಕಾರ್ಯವನ್ನು ಕಾಣದೆ ಹೊಂಡಗುಂಡಿಗಳಿಂದ ಕೂಡಿದ್ದು, ವಾಹನ ಹಾಗೂ ಜನ ಸಂಚಾರಕ್ಕೆ ಅಯೋಗ್ಯವಾಗಿ ಪರಿಣಮಿಸಿರುವುದಾಗಿ ಹೇಳಿದರು. ಕಳೆದ ಸುಮಾರು ಹದಿನೈದು ವರ್ಷಗಳಿಂದ ಮರಗೋಡು ಗ್ರಾಮ ಸಂಪರ್ಕ ರಸ್ತೆಗಳನ್ನು ದುರಸ್ತಿ ಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು ಕೇಳುತ್ತಲೆ ಬಂದಿದ್ದೇವೆ. ಆಯಾ ಸಂದರ್ಭಗಳಲ್ಲಿ ಆಶ್ವಾಸನೆಯಷ್ಟೆ ದೊರಕುತ್ತಿದ್ದು, ರಸ್ತೆ ದುರಸ್ತಿ ಪಡಿಸುವ ಯಾವ ಕಾರ್ಯವು ನಡೆದಿಲ್ಲವೆಂದು…

Read More

ವಿರಾಜಪೇಟೆ ಡಿ.23 NEWS DESK : ವಿರಾಜಪೇಟೆ ತಾಲ್ಲೂಕು ಪಾಲಿಬೆಟ್ಟ ಭಾಗದಲ್ಲಿ ಶಾಸಕರ ರೂ.20 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ವಿವಿಧ ರಸ್ತೆಗಳನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಈ ಭಾಗದ ಜನರ ಬೇಡಿಕೆಗಳಿಗೆ ಸ್ಪಂದಿಸುತ್ತಿರುವ ಶಾಸಕರು ಹಿಂದೆಂದೂ ಕಾಣದ ಅಭಿವೃದ್ಧಿ ಕಾಮಗಾರಿಗಳನ್ನು ಮಾಡುತ್ತಿರುವುದು ಈ ಭಾಗದ ಏಳಿಗೆಗೆ ಕಾರಣವಾಗಿದ್ದು, ಇದು ಮರೆಯಲಾಗದ ಸುವರ್ಣ ಕಾಲ ಎಂದು ಗ್ರಾಮಸ್ಥರು ಬಣ್ಣಿಸಿದ್ದರು. ಈ ಸಂದರ್ಭ ವಲಯ ಅಧ್ಯಕ್ಷರು ಕಾಳಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗಣೇಶ್, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷ ಹನೀಫ್, ತಾಲ್ಲೂಕು ಅಲ್ಪಸಂಖ್ಯಾತರ ಅಧ್ಯಕ್ಷರು ರಫೀಕ್, ರಜಾಕ್, ಪಂಚಾಯಿತಿ ಸದಸ್ಯರು ಪವಿತ್ರ, ನಾಸಿರ್, ಗಣಪತಿ, ಕಂಜಿತಂಡ ದೇಚಿ ಪೂವಣ್ಣ, ಗಣೇಶ್, ಕುಟ್ಟಂಡ ಕುಟ್ಟಪ್ಪ, ಪುಳಿಯಂಡ ಸತ್ಯ ಮಾದಪ್ಪ, ಕೊಂಗಂಡ ಮಾದಪ್ಪ, ಮಾಲೆಟೀರ ಗಣಪತಿ, ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಡಿ.23 NEWS DESK : ದಶಕಗಳ ಸಮಸ್ಯೆಯಾಗಿ ಕೊಡಗಿನ ಜಮ್ಮಾ ಹಿಡುವಳಿದಾರರನ್ನು ಕಾಡಿದ್ದ ಜಮ್ಮಾ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ, ಕರ್ನಾಟಕ ಭೂಕಂದಾಯ ಕಾಯ್ದೆಯ ತಿದ್ದುಪಡಿ ವಿದೇಯಕವನ್ನು ಸದನದಲ್ಲಿ ಮಂಡಿಸಿ, ಯಶಸ್ವೀಯಾಗಿ ಅನುಮೋದನೆ ಪಡೆಯುವಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಅವರಿಗೆ ಯುನೈಟೆಡ್ ಕೊಡವ ಆರ್ಗನೈಸೇಷನ್ – ಯುಕೊ ಸಂಘಟನೆಯ ಸದಸ್ಯರು ಅಭಿನಂದನೆ ಸಲ್ಲಿಸಿದರು. ಶಾಸಕ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಸ್ಮರಣಿಕೆ ನೀಡಿ ಅಭಿನಂದಿಸಿದರು. ನಂತರ ಮಾತನಾಡಿದ ಯುಕೊ ಸಂಘಟನೆಯ ಅಧ್ಯಕ್ಷರಾದ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ, ಸುಮಾರು 7 ದಶಕಗಳಿಂದ ಜೀವಂತವಾಗಿರುವ ಕೊಡಗಿನ ಈ ಸಮಸ್ಯೆಯು ಜಮ್ಮಾ ಹಿಡುವಳಿದಾರರ ಜೀವ ಹಿಂಡಿತ್ತು, ಕೊಡವರಿಗೆ ಜಮ್ಮಾ ಯಾರೂ ನೀಡಿದ ಜಾಗವಲ್ಲ, ಕೊಡವರ ಜಾಗಕ್ಕೆ ಭೂದಾಖಲಾತಿ ವ್ವಸ್ಥೆ ಜಾರಿಗೆ ಬಂದಾಗ ಜಮ್ಮಾ ಎಂದು ವರ್ಗೀಕರಣ ಮಾಡಲಾಯಿತಲ್ಲದೆ, ರಾಜನರಾಗಲಿ, ಬ್ರಿಟಿಷರು ನೀಡಿರುವ ಬಳುವಳಿ ಆಸ್ತಿಯಲ್ಲ. 1956 ರ ವರೆಗೆ ಕೂರ್ಗ್…

Read More

ಮಡಿಕೇರಿ ಡಿ.23 NEWS DESK : ಶ್ರೀ ಅಯ್ಯಪ್ಪ ದೀಪಾರಾಧನಾ ಸಮಿತಿ ವತಿಯಿಂದ ಡಿ.27 ರಂದು ಮಡಿಕೇರಿಯ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿ ಶ್ರೀ ಅಯ್ಯಪ್ಪ ದೀಪಾರಾಧನಾ ಉತ್ಸವ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಈ.ಹೇಮಂತ್ ಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮುಂಜಾನೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಬೆಳಿಗ್ಗೆ 6 ಗಂಟೆಗೆ ನಡೆ ತೆಗೆಯುವುದು, 6.5ಕ್ಕೆ ನಿರ್ಮಲ್ಯ ಪೂಜೆ, 6.30ಕ್ಕೆ ಗಣಪತಿ ಹೋಮ, 8 ಗಂಟೆಗೆ ಅಷ್ಟಾಭಿಷೇಕ ಸೇವೆ, 10.30 ಗಂಟೆಗೆ ತುಳಸಿ ಸಹಸ್ರನಾಮಾರ್ಚನೆ, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಮಂಗಳಾರತಿ ಹಾಗೂ ಪ್ರಸಾದ ವಿತರಣೆಯಾಗಲಿದೆ. ಮಧ್ಯಾಹ್ನ 1 ಗಂಟೆಗೆ ಪಾಲಕೊಂಬು ಪ್ರತಿಷ್ಠಾಪನೆ, 1.30 ಗಂಟೆಗೆ ತಾಯಂಬಕಂ (ಚಂಡೆಸೇವೆ) ನಡೆಯಲಿದೆ. ಸಂಜೆ 4 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಯ ಉತ್ಸವ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ಚಂಡೆ, ಮೇಳದೊಂದಿಗೆ ನಗರದ…

Read More

ಮಡಿಕೇರಿ NEWS DESK ಡಿ.23 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ಮಹದೇಶ್ವರ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ಆರಂಭಗೊಂಡಿತು. ಇಂದು ಗಣಪತಿ ಹೋಮ, ಬ್ರಹ್ಮರಾಕ್ಷಸನಿಗೆ ನೈವೇದ್ಯ ಸಮರ್ಪಣೆ, ದುರ್ಗಾಪೂಜೆ, ಹೊರೆಕಾಣಿಕೆ ಸಮರ್ಪಣೆ, ಮಹಾಪೂಜೆ ಮತ್ತು ಧ್ವಜಾರೋಹಣ ನೆರವೇರಿತು. ಡಿ.24 ಮತ್ತು 25 ರಂದು ನೈರ್ಮಲ್ಯ ಬಲಿ, ಧ್ವಜಸ್ತಂಭ ಪೂಜೆ, ಭೂತಬಲಿ ಹಾಗೂ ಮಹಾಪೂಜೆ ಜರುಗಲಿದೆ. ಡಿ.26 ರಂದು ತುಲಭಾರ ಸೇವೆ, ಧ್ವಜಸ್ತಂಭ ಪೂಜೆ, ನೃತ್ಯ ಬಲಿ, ವಸಂತ ಪೂಜೆ, ದೇವರ ಶಯನೋತ್ಸವ ಮತ್ತು ಮಹಾಪೂಜೆ ನಡೆಯಲಿದೆ. ಡಿ.27 ರಂದು ಕವಟ ಪೂಜೆ, ತೈಲಾಭ್ಯಂಜನ, ಪಂಚಭೂತ ಅಭಿಷೇಕ, ಧ್ವಜಸ್ತಂಭ ಪೂಜೆ, ದೇವರು ಜಳಕಕ್ಕೆ ಹೊರಡುವುದು, ದೇವಾಲಯದ ಆವರಣದಲ್ಲಿ ನೃತ್ಯ ಬಲಿ, ನಡೆ ಭಂಡಾರ, ಧ್ವಜಾರೋಹಣ ಮತ್ತು ಮಹಾಪೂಜೆ ಜರುಗಲಿದೆ. ಜಾತ್ರಮಹೋತ್ಸವದ ಕೊನೆಯ ದಿನವಾದ ಡಿ.28 ರಂದು ನವಕ ಕಲಶ ಪೂಜೆ, ಅಭಿಷೇಕ, ಪಂಚಾಮೃತ ಅಭಿಷೇಕ, ಮಹಾಪೂಜೆ, ತೀರ್ಥ ಪ್ರಸಾದ ಹಾಗೂ ಮಂತ್ರಾಕ್ಷತೆ ವಿತರಣೆಯಾಗಲಿದೆ. ಜಾತ್ರಾ ಮಹೋತ್ಸವದ ಆರು…

Read More