ಮಡಿಕೇರಿ ಜು.13 NEWS DESK : ವಿಶ್ವ ಹಿಂದೂ ಪರಿಷತ್ ನ ಕೊಡಗು ಜಿಲ್ಲಾಧ್ಯಕ್ಷರಾಗಿ ಸಿ.ಕೆ.ಬೋಪಣ್ಣ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ನಡೆದ ವಿಶ್ವ ಹಿಂದೂ ಪರಿಷತ್ ನ ಕರ್ನಾಟಕ ದಕ್ಷಿಣ ವಿಶೇಷ ಪ್ರಾಂತ ಬೈಠಕ್ ನಲ್ಲಿ ರಾಷ್ಟ್ರೀಯ ಪ್ರಮುಖರ ಸಮ್ಮುಖದಲ್ಲಿ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಯಿತು ಎಂದು ಜಿಲ್ಲಾ ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಜು.13 NEWS DESK : ಕೊಡಗು ಜಿಲ್ಲಾ ವಿಶ್ವವಾಣಿ ಪತ್ರಿಕೆಯ ವರದಿಗಾರ ಹಾಗೂ ಕೊಡಗು ಪತ್ರಕರ್ತರ ಸಂಘದ ಹಿರಿಯ ಸಲಹೆಗಾರ ಅನಿಲ್ ಹೆಚ್.ಟಿ. ಅವರಿಗೆ ಕಾಸರಗೋಡುವಿನ ಉದ್ಯಮಿ, ಸಮಾಜಸೇವಕ ಅಶ್ರಫ್ ಶಾ ಮಂತೂರು ಅವರು ಸ್ಥಾಪಿಸಿರುವ ದತ್ತಿ ನಿಧಿ ಪ್ರಶಸ್ತಿ ಲಭಿಸಿದೆ. ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಂಟಿ ಆಶ್ರಯದಲ್ಲಿ ಕಾಸರಗೋಡು ಸೀತಂಗೋಳಿ ಗ್ರಾಮದ ಲಯನ್ಸ್ ಸಭಾಭವನದಲ್ಲಿ ನಡೆದ ದತ್ತಿನಿಧಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ಪಿ.ಪ್ರಭಾಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ಸಂದರ್ಭ ಶಾಸಕ ಎ.ಕೆ.ಎಂ.ಅಶ್ರಫ್, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ, ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಕೆಯುಡಬ್ಲ್ಯೂಜೆ ಕೇರಳ ಘಟಕ ಅಧ್ಯಕ್ಷ ಅಬ್ದುಲ್ ರೆಹಮಾನ್, ಸುಬ್ಬಯ್ಯಕಟ್ಟಿ ಮತ್ತಿತರರು ಹಾಜರಿದ್ದರು.
ಮಂಗಳೂರು ಜು.13 NEWS DESK : ಮಾಧ್ಯಮ ಪ್ರತಿನಿಧಿಗಳು ಹಮ್ಮಿಕೊಂಡಿರುವ ಹಸಿರೇ ಉಸಿರು ಸೇರಿದಂತೆ ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾದ ಮಹತ್ವದ ಕಾರ್ಯಕ್ರಮವಾಗಿದೆ ಎಂದು ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆ ಗಾರರಾದ ಕೆ.ವಿ.ಪ್ರಭಾಕರ್ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಅರಣ್ಯ ಇಲಾಖೆ ಸಹಾಭಾಗಿತ್ವದಲ್ಲಿ ನಗರದ ಕದ್ರಿ ಪಾರ್ಕ್ ನಲ್ಲಿ ಹಮ್ಮಿಕೊಂಡ ‘ಹಸಿರೇ ಉಸಿರು’ ವನ ಮಹೋತ್ಸವ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಾಧ್ಯಮ ಪ್ರತಿನಿಧಿಗಳು ತಮ್ಮ ವೃತ್ತಿಯ ಜೊತೆ ಗ್ರಾಮ ವಾಸ್ತವ್ಯ, ವನಮಹೋತ್ಸವ, ಸರಕಾರಿ ಶಾಲೆ, ಅಂಗನವಾಡಿಗಳಿಗೆ ನೆರವು ಸೇರಿದಂತೆ ಸಾಮಾಜಿಕ ಹೊಣೆಗಾರಿಕೆಯನ್ನುಅರಿತು ಕಾರ್ಯ ನಿರ್ವಹಿಸುತ್ತಿರುವುದು ಮಾದರಿಯಾಗಿದೆ ಎಂದು ಪ್ರಭಾಕರ್ ಶುಭ ಹಾರೈಸಿದರು. ಈ ಸಂದರ್ಭ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪತ್ರಕರ್ತರು ಸಾಮಾಜಿಕ ಬದ್ಧತೆಯನ್ನು ಮರೆಯ ಬಾರದು. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ ಸಾಮಾಜಿಕ ಬದ್ಧತೆಯೊಂದಿಗೆ…
ಮಡಿಕೇರಿ ಜು.13 NEWS DESK : ಮಡಿಕೇರಿ ನಗರ ಸಂಚಾರಿ ಪೊಲೀಸ್ ಅಧಿಕಾರಿಗಳು ಮಾರುಕಟ್ಟೆ ಪ್ರದೇಶ ಸೇರಿದಂತೆ ವಿವಿಧೆಡೆ ಸುವ್ಯವಸ್ಥಿತ ಪಾರ್ಕಿಂಗ್ ವ್ಯವಸ್ಥೆಗೆ ಕ್ರಮ ಕೈಗೊಳ್ಳುತ್ತಿರುವುದು ಸ್ವಾಗತಾರ್ಹ. ಆದರೆ ಇದು ಒಂದು ದಿನಕ್ಕೆ ಸೀಮಿತವಾಗಬಾರದು ಎಂದು ನಗರಸಭೆಯ ಮಾಜಿ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯ ಕೆ.ಯು.ಅಬ್ದುಲ್ ರಜಾಕ್ ಮನವಿ ಮಾಡಿದ್ದಾರೆ. ಮಡಿಕೇರಿ ನಗರದಲ್ಲಿ ದಿನದಿಂದ ದಿನಕ್ಕೆ ವಾಹನದಟ್ಟಣೆ ಅಧಿಕವಾಗುತ್ತಿದ್ದು, ಪಾರ್ಕಿಂಗ್ ವ್ಯವಸ್ಥೆ ಹದಗೆಡುತ್ತಿದೆ. ಮಾರುಕಟ್ಟೆ, ರಾಜಾಸೀಟ್, ಕಾಲೇಜು ರಸ್ತೆ ಮತ್ತು ಕಾವೇರಿ ಹಾಲ್ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಅವಕಾಶ ಇಲ್ಲದಾಗಿದೆ. ಮಾರುಕಟ್ಟೆ ಭಾಗದಲ್ಲಿ ಪ್ರತಿ ಶುಕ್ರವಾರ ಎಲ್ಲೆಂದರಲ್ಲಿ ವಾಹನಗಳನ್ನು ನಿಲುಗಡೆಗೊಳಿಸುತ್ತಿರುವುದರಿಂದ ವಾಹನದಟ್ಟಣೆ ಉಂಟಾಗಿ ಜನ ಕಷ್ಟ ಪಡುವಂತ್ತಾಗಿದೆ. ಈ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನೆಲೆ ನಗರ ಸಂಚಾರಿ ಪೊಲೀಸ್ ಅಧಿಕಾರಿಗಳು ಈ ಶುಕ್ರವಾರ ಪಾರ್ಕಿಂಗ್ ವ್ಯವಸ್ಥೆಯನ್ನು ಸುಗಮಗೊಳಿಸಿದ್ದರು. ರಸ್ತೆಯಲ್ಲಿ ಎಲ್ಲೆಂದರಲ್ಲಿ ನಿಲುಗಡೆಗೊಂಡಿದ್ದ ವಾಹನಗಳನ್ನು ವ್ಯವಸ್ಥಿತವಾಗಿ ನಿಲುಗಡೆಗೊಳಿಸಲು ಪೊಲೀಸರು ಕ್ರಮ ಕೈಗೊಂಡ ಪರಿಣಾಮ ಮಾರುಕಟ್ಟೆ ಆವರಣ ಜನ…
ಮಡಿಕೇರಿ ಜು.13 NEWS DESK : ಕೊಡಗು ಜಿಲ್ಲಾ ಪಂಚಾಯತ್ ನಲ್ಲಿ ಕಳೆದ 1 ವರ್ಷಗಳಿಂದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ವರ್ಣಿತ್ ನೇಗಿ ಅವರಿಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು. ಕೊಡಗು ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ವಿವಿಧ ಇಲಾಖೆಗಳಿಂದ ಸನ್ಮಾನಿ ಬೀಳ್ಕೊಡುಗೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲೆಯ ಉತ್ತಮ ಆಡಳಿತಕ್ಕೆ ತಂಡದ ಕೋಚ್ ರೀತಿ ಶ್ರಮಿಸಿದ್ದು, ಮಾತು ಕಡಿಮೆ ಕೆಲಸ ಜಾಸ್ತಿ ಎಂಬ ತತ್ವದ ಮೇಲೆ ಕೆಲಸ ನಿರ್ವಹಿಸಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಅವರ ಮುಂದಿನ ವೃತ್ತಿ ಜೀವನದಲ್ಲಿ ಸಾಕಷ್ಟು ಯಶಸ್ಸು ಸಿಗಲಿ ಎಂದು ಶುಭ ಕೋರಿದರು. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ರಾಮಾರಾಜನ್ ಮಾತನಾಡಿ, ಸರ್ಕಾರಿ ಸೇವೆಯಲ್ಲಿ ವರ್ಗಾವಣೆ ಎಂಬುದು ನಿಶ್ಚಿತ. ಕುಟುಂಬದ ಸದಸ್ಯರಂತೆ ಹಾಗೂ ಉತ್ತಮ ಸ್ನೇಹಿತರಾಗಿ ಕಳೆದ ಒಂದು ವರ್ಷದಿಂದ ಇದ್ದು, ಇಂದು ವರ್ಗಾವಣೆಗೊಳ್ಳುತ್ತಿರುವುದು ಬೇಸರವನ್ನುಂಟು ಮಾಡಿದೆ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ…
ಕಾಸರಗೋಡು ಜು.13 NEWS DESK : ಕಾಸರಗೋಡು ಕನ್ನಡಿಗರಿಗೆ ಸರ್ಕಾರ ಧ್ವನಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಕಾಸರಗೋಡು ಪತ್ರಕರ್ತರ ಸಂಘದ ವತಿಯಿಂದ ನಡೆದ ದತ್ತಿನಿಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹೊರನಾಡಿನ ಕನ್ನಡಿಗರ ಅಭಿಮಾನ ದೊಡ್ಡದು. ವಿಶೇಷವಾಗಿ ಕಾಸರಗೋಡು ಕನ್ನಡಿಗರ ಭಾವನೆ ಅರ್ಥವಾಗುತ್ತದೆ. ನಿಮ್ಮ ಜೊತೆಯಲ್ಲಿ ಕರ್ನಾಟಕ ಸರ್ಕಾರ ಸದಾ ಇದೆ. ನಿಮ್ಮ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಗಡಿ ನಾಡಿನ ಕಾಸರಗೊಡು ಪತ್ರಕರ್ತರ ಬಸ್ ಪಾಸ್ ಕೊಡಿಸುವ ಭರವಸೆ ನೀಡಿದ ಕೆ.ವಿ.ಪ್ರಭಾಕರ್ ಅವರು, ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಸಿಎಂ ಜೊತೆಗೆ ಮಾತನಾಡಿ ಅನುದಾನ ಒದಗಿಸುವುದಾಗಿ ತಿಳಿಸಿದರು. ಬೆಂಗಳೂರಿನಲ್ಲಿ ನಾವು ರಾಜ್ಯೋತ್ಸವ ಕನ್ನಡಿಗರಾಗಿದ್ದೇವೆ. ಆದರೆ ನೀವು ವರ್ಷದ ಅನುಕಾಲವೂ ಕನ್ನಡ ಭಾಷೆ ಉಳಿಸುವ ಪ್ರಯತ್ನ ಮಾಡುತ್ತಿರುವುದು ಹೆಮ್ಮೆಯ ಮತ್ತು ಅಭಿಮಾನದ ಸಂಗತಿ ಎಂದರು. ಕಾಸರಗೋಡು ದತ್ತಿ ಪ್ರಶಸ್ತಿ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು,…
ಮಡಿಕೇರಿ ಜು.13 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಹುಟ್ಟು ಹಬ್ಬದ ಪ್ರಯುಕ್ತ ಚೇರಂಬಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸ್ವಚ್ಛತಾ ಶ್ರಮದಾನ ಮಾಡಿದರು. ಚೇರಂಬಾಣೆ (ಬೆಂಗೂರು )ಗ್ರಾ.ಪಂ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದ ಸುತ್ತಲು ಪ್ಲಾಸ್ಟಿಕ್ ತ್ಯಾಜ್ಯ, ಕಸ, ಕಡ್ಡಿಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷ ಮಿಲನ್ ಮುತ್ತಣ್ಣ, ಉಪಾಧ್ಯಕ್ಷ ಸೋಮಣ್ಣ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಿಪಿನ್ ಮತ್ತು ವಲಯ ಕಾರ್ಯದರ್ಶಿ ಕೆ.ಎಂ.ಬಶೀರ್, ಪಕ್ಷದ ಸದಸ್ಯರುಗಳಾದ ಕುಂಚೆಟ್ಟಿ ಗೋಪಾಲ, ಕಾರ್ಯಪ್ಪ, ಕೇಕಡ ತಮ್ಮಯ್ಯ, ಕೀಪಾಡ0ಡ ಜಗದೀಶ, ಪಟ್ಟಮಾಡ ಹೆಮ್ ಮಾದಪ್ಪ, ಉಡುದೋಳಿ ಶೇಖರ, ಕೇಕಡ ಡ್ಯೂಕ, ಮುಕ್ಕಾಟಿ ಸುಗು, ಇರ್ಷಾದ್ (ಇಚ್ಚು), ದೇವಯ್ಯ ಬೆಂಗೂರ್, ಶಿವ, ಮೋಹನ, ಕೂಡಕಂಡಿ ಲವ, ದಯಾನಂದ ಬೆಂಗೂರ್, ಯತೀಶ್ ಪರಂಬು ಹಾಗೂ ಪಂಚಾಯತ್ ಸದಸ್ಯ ಪಾಲ್ಗೊಂಡಿದ್ದರು.
ಮಡಿಕೇರಿ ಜು.13 NEWS DESK : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಕೆಲಸಗಳನ್ನು ಕಾರ್ಯಾಂಗದ ಮೂಲಕ ಪರಿಹರಿಸುವುದು ಶಾಸಕಾಂಗದ ಕರ್ತವ್ಯ ಆಗಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ‘ಜನಸ್ಪಂದನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹೇಳಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ನಡೆದ ‘ಜನಸ್ಪಂದನ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಂದಾಯ, ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಲೋಕೋಪಯೋಗಿ, ಸೆಸ್ಕ್, ಆರೋಗ್ಯ, ಶಿಕ್ಷಣ, ಪೌರಾಡಳಿತ, ಸೇರಿದಂತೆ ಹಲವು ಇಲಾಖೆ ವ್ಯಾಪ್ತಿಯ ಕೆಲಸ-ಕಾರ್ಯಗಳಿಗೆ ಸಾರ್ವಜನಿಕರಿಂದ ಪ್ರತಿನಿತ್ಯ ಹೆಚ್ಚಿನ ಮನವಿ ಸಲ್ಲಿಸುತ್ತಾರೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಶಾಸಕರು ತಿಳಿಸಿದರು. ಸಾರ್ವಜನಿಕರಿಗೆ ನ್ಯಾಯ ಒದಗಿಸುವುದು ಸರ್ಕಾರದ ಪ್ರಥಮ ಆದ್ಯತೆ ಆಗಿದೆ. ಸಲ್ಲಿಕೆಯಾದ ಅರ್ಜಿಗೆ ಮಾತ್ರ ಸೀಮಿತವಾಗದೆ. ಸ್ಥಳೀಯ ಎಲ್ಲಾ ರೀತಿಯ ಸಮಸ್ಯೆ ಬಗೆಹರಿಸುವುದು ಅತಿಮುಖ್ಯ ಎಂದು ಡಾ.ಮಂತರ್ ಗೌಡ ಅವರು…
ಕಡಂಗ ಜು.13 NEWS DESK : ರಾತ್ರಿ ಸುರಿದ ಬಾರಿ ಮಳೆಯಿಂದಾಗಿ ಕಡಂಗ ಚೆಯ್ಯಂಡಾಣೆ ಮುಖ್ಯ ರಸ್ತೆಯ ಪೊದ್ಧಮಾನಿ ಗ್ರಾಮದಲ್ಲಿರುವ ಬೃಹತ್ ಮಾವಿನ ಮರದ ಕೊಂಬೆ ರಸ್ತೆಗೆ ಬಿದ್ದಿದೆ. ಅಲ್ಲದೆ ವಿದ್ಯುತ್ ತಂತಿಗೆ ಹಾನಿಯಗಿದ್ದು, ಗ್ರಾಮದ ಸುತ್ತಮುತ್ತಲ ಮನೆಗಳಿಗೆ ಸಂಪರ್ಕ ಕಡಿತಗೊಂಡಿದೆ. ವರದಿ : ನೌಫಲ್
ಮಡಿಕೇರಿ ಜು.13 NEWS DESK : ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು.17 ರಂದು ನಡೆಯಲಿದೆ ಎಂದು ನೂತನ ಅಧ್ಯಕ್ಷ ಬಿ.ವೈ.ರಾಜೇಶ್ ಯಲ್ಲಪ್ಪ ತಿಳಿಸಿದ್ದಾರೆ. ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ತಾವು ಸೇರಿದಂತೆ ಸದಸ್ಯರುಗಳಾದ ಸುದಯ್ ನಾಣಯ್ಯ, ಕಾನೆಹಿತ್ಲು ಮೊಣ್ಣಪ್ಪ, ಆರ್.ಪಿ.ಚಂದ್ರಶೇಖರ್ ಹಾಗೂ ಮೀನಾಜ್ ಪ್ರವೀಣ್ ಅಧಿಕಾರ ಸ್ವೀಕರಿಸಲಿರುವುದಾಗಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.






