ಮಡಿಕೇರಿ ಜು.12 NEWS DESK : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆ.ಇ.ಎ) ನಡೆಸುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾರದರ್ಶಕತೆಯನ್ನು ತರಲು ಉದ್ದೇಶಿಸಿದ್ದು, ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಸಿ.ದಯಾನಂದ ಮತ್ತು ಕನ್ನಡ ವಿಭಾಗದ ಮುಖ್ಯಸ್ಥ ಡಾ. ಕೆ.ಬಸವರಾಜು ಅವರನ್ನು ಪರೀಕ್ಷಾ ಪರಿವೀಕ್ಷಕರಾಗಿ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ನೇಮಕ ಮಾಡಿದ್ದಾರೆ.
ಲೇಖಕ: admin
ಮಡಿಕೇರಿ ಜು.12 NEWS DESK : ಮುಡಾ ಪ್ರಕರಣ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ನೈತಿಕತೆ ಆಧಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ತನಿಖೆಗೆ ಸಹಕರಿಸಬೇಕು ಎಂದು ವಿಧಾನಸಭೆಯ ಮಾಜಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ನೀಡುತ್ತಿರುವ ಸ್ಪಷ್ಟೀಕರಣಗಳು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. 14 ನಿವೇಶನಗಳ ಹಂಚಿಕೆಯಲ್ಲಿ ನಿಯಮ ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. 2020 ರ ನಿಯಮಾನುಸಾರ ಮುಡಾ ಯಾವುದೇ ನಿರ್ಣಯ ಕೈಗೊಂಡರು ಅದನ್ನು ಸರ್ಕಾರಕ್ಕೆ ಕಳುಹಿಸಿ ಅನುಮತಿ ಪಡೆಯಬೇಕು. ಆದರೆ ಈ ಪ್ರಕರಣದಲ್ಲಿ ಮುಡಾ ನಿರ್ಣಯವನ್ನು ಸರ್ಕಾರಕ್ಕೆ ಕಳುಹಿಸಿಯೇ ಇಲ್ಲ ಎಂದು ಆರೋಪಿಸಿದರು. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ತನಿಖೆ ಮುಗಿಯುವವರೆಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಬಾರದು ಎಂದು ಆಗ್ರಹಿಸಿದರು. ಅಧಿಕಾರಿಗಳ ಮೂಲಕ ತನಿಖೆ ನಡೆಸುವುದಾಗಿ ಹೇಳುತ್ತಿದ್ದಾರೆ, ಮುಡಾ ಪ್ರಕರಣದಲ್ಲಿ ಸ್ವತ: ಮುಖ್ಯಮಂತ್ರಿಗಳ ಪತ್ನಿಯ…
ನಾಪೋಕ್ಲು ಜು.12 NEWS DESK : ನಾಪೋಕ್ಲು- ವಿರಾಜಪೇಟೆ ಮುಖ್ಯರಸ್ತೆಯ ಹಳೆ ತಾಲ್ಲೂಕು ಬಳಿ ರಸ್ತೆ ಸಂಪೂರ್ಣವಾಗಿ ಗುಂಡಿಮಯವಾಗಿದ್ದು, ಪಾದಾಚಾರಿಗಳು ಹಾಗೂ ವಾಹನ ಚಾಲಕರು ಪರದಾಡುವಂತಗಿದೆ. ಪಟ್ಟಣಕ್ಕೆ ಸಮೀಪದ ಹಳೆ ತಾಲೂಕು ಬಳಿಯ ಶ್ರೀ ಪೊನ್ನು ಮುತ್ತಪ್ಪ ದೇವಾಲಯದ ಪಕ್ಕದ ರಸ್ತೆಯಲ್ಲಿ ಹೊಂಡವಾಗಿದ್ದು, ವಾಹನಗಳು ರಸ್ತೆಯ ಅವ್ಯವಸ್ಥೆಯಿಂದ ಒಂದು ಪಾಶ್ವದಲ್ಲಿ ಚಲಿಸಲಾರದೆ ಮತ್ತೊಂದು ಕಡೆಯಲ್ಲಿ ಚಲಿಸುತ್ತಿದ್ದು, ಸಂಚಾರಕ್ಕೆ ಅಡಚಣೆಯನ್ನುಂಟು ಮಾಡುತ್ತಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಸ್ತೆ ಬದಿಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆಗಳು ಇಲ್ಲದೆ ರಸ್ತೆ ಗುಂಡಿಳಾಗಿದ್ದು ಕೆಸರು ನೀರು ತುಂಬಿಕೊಂಡಿದೆ. ಸಂತೆಯ ದಿನವಾದ ಸೋಮವಾರ ವಾಹನಗಳ ಸಂಖ್ಯೆ ಹೆಚ್ಚಿದ್ದು ಗುಂಡಿ ತಪ್ಪಿಸಲು ಹೋಗಿ ವಾಹನ ಚಾಲಕರು ಅಪಘಾತ ಸಂಭವಿಸಿರುವ ಘಟನೆಯೂ ನಡೆದಿದೆ. ಜನಪ್ರತಿನಿಧಿಗಳು ತಕ್ಷಣವೇ ರಸ್ತೆ ಗುಂಡಿಗಳನ್ನು ಮುಚ್ಚಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಮುಖ್ಯ ರಸ್ತೆಯಲ್ಲಿ ದಿನನಿತ್ಯ ಹಲವಾರು ವಾಹನಗಳು ಸಂಚರಿಸುತ್ತಿದ್ದು, ಚರಂಡಿ ಅವಸ್ಥೆ ಇಲ್ಲದೆ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಕೆಲವು ದಿನಗಳಿಂದ ರಸ್ತೆ…
ನಾಪೋಕ್ಲು ಜು.12 NEWS DESK : ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಕ್ಕಬ್ಬೆ ನಾಲಡಿ ಗ್ರಾಮ (ಮೇಕೆಕೊಪ್ಪ ) ದಲ್ಲಿನ ಕೆ.ಸಿ.ಪೊನ್ನಪ್ಪ ಎಂಬವರಿಗೆ ವೀಲ್ಚೇರ್ ವಿತರಿಸಲಾಯಿತು. ಈ ಸಂದರ್ಭ ಒಕ್ಕೂಟದ ಅಧ್ಯಕ್ಷೆ ಸರೋಜಿನಿ, ಮೇಲ್ವಿಚಾರಕ ಸುನಿಲ್, ಸೇವಾಪ್ರತಿನಿಧಿ ಉಮಾಲಕ್ಷ್ಮಿ ಹಾಗೂ ಸಂಘದ ಸದಸ್ಯರು ಹಾಜರಿದ್ದರು. ನಾಪೋಕ್ಲು ಸುಭಾಷ್ ನಗರ ಕಾರ್ಯಕ್ಷೇತ್ರದ ಪದಾಧಿಕಾರಿಗಳು ಪಾರ್ಶ್ಶ್ವ ವಾಯುವಿನಿಂದ ಬಳಲುತ್ತಿದ್ದ ಪೊನ್ನಪ್ಪ ಅವರಿಗೆ ವೀರ್ಚೇರ್ ಅಗತ್ಯ ಇರುವ ಬಗ್ಗೆ ವೀರೇಂದ್ರ ಹೆಗಡೆ ಅವರಿಗೆ ಮನವಿ ಸಲ್ಲಿಸಿದ್ದು, ಇದಕ್ಕೆ ಸ್ಪಂದಿಸಿದ ಅವರು ವೀಲ್ಚೇರ್ ಮಂಜೂರು ಮಾಡಿದ್ದರು. ವರದಿ : ದುಗ್ಗಳ ಸದಾನಂದ
(NEWS DESK) ಅಜೀರ್ಣ ಸಾಮಾನ್ಯವಾಗಿ ಎಲ್ಲರಲ್ಲಿಯೂ ಕಂಡು ಬರುವ ತೊಂದರೆಯಾಗಿದೆ. ಎಲ್ಲರನ್ನೂ ಒಂದಲ್ಲ ಒಂದು ದಿನ ಈ ತೊಂದರೆ ಕಾಡಿಸಿಯೇ ಕಾಡಿಸಿರುತ್ತದೆ. ಪ್ರಾರಂಭದಲ್ಲಿ ಇದು ಅತ್ಯಂತ ಸರಳವಾಗಿ ಕಾಣಿಸಿದರೂ, ಸತತ ಕಾಡುವ ಅಜೀರ್ಣ, ಹೊಟ್ಟಯುಬ್ಬರ, ಹೈಪರ್ ಎಸಿಡಿಟಿ, ಮಲಬದ್ಧತೆ, ಗ್ಯಾಸ್ ಟ್ರಬಲ್ ಮುಂತಾದ ತೊಂದರೆಗಳಿಗೆ ನಾಂದಿಯಾಗಬಹುದು. ಪ್ರತಿನಿತ್ಯ ಒಂದು ಅಥವಾ ಎರಡು ಬಾರಿ ಖಾಲಿ ಹೊಟ್ಟ್ಟೆಯಲ್ಲಿ ತಂಪು ಪಟ್ಟಿಯನ್ನು 20 ನಿಮಿಷಗಳಕಾಲ ಹಾಕಿಕೊಳ್ಳಬೇಕು. (ತಣ್ಣಿರಿನಲ್ಲಿ ನೆನೆಸಿದ ಬಟ್ಟೆಯನ್ನು ಎರಡು ಮೂರು ಸುತ್ತ ಹೊಟ್ಟ್ಟೆಗೆ ಕಟ್ಟಿ ಹೊರಗಿನಿಂದ ಒಣ ಉಲ್ಲನ್ ಬಟ್ಟೆಯನ್ನು ಸುತ್ತಬೇಕು.) ಆಯಸ್ಕಾಂತದ ಮೇಲೆ ಗಾಜಿನ ಬಾಟ್ಲಿಯಲ್ಲಿ ನೀರನ್ನು ಇಟ್ಟು ಉತ್ತರ ಹಾಗೂ ದಕ್ಷಿಣ ಧ್ರ್ರುವಗಳಲ್ಲಿ ಬೇರೆ ಬೇರೆಯಾಗಿ ಛಾರ್ಜ ಆದ ನೀರನ್ನು ಸಮ ಪ್ರಮಾಣದಲ್ಲಿ ಸೇರಿಸಿ ಪ್ರತಿನಿತ್ಯ ಮೂರು ಬಾರಿ ಒಂದೊಂದು ಗ್ಲಾಸ್ನಂತೆ ಸೇವಿಸಬೇಕು. (ಪ್ರಕೃತಿ ಚಿಕಿತ್ಸಕರ ಸಲಹೆ ಪಡೆದು ಈ ಚಿಕಿತ್ಸೆ ತೆಗೆದುಕೊಳ್ಳುವುದು ಉತ್ತಮ) ಮುಂಜಾನೆ ಎದ್ದ ಕೂಡಲೇ ಮೂರರಿಂದ ನಾಲ್ಕು ಲೋಟ ಶುದ್ಧವಾದ ನೀರನ್ನು ಸೇವಿಸುವುದರಿಂದ ಅಜೀರ್ಣ…
(NEWS DESK ) ಶಿವನಿಗೆ ಪವಿತ್ರವಾದ ಐದು ಪಂಚರಾಮ ಕ್ಷೇತ್ರಗಳಲ್ಲಿ ದ್ರಾಕ್ಷರಾಮ ಒಂದಾಗಿದೆ. ಈ ದೇವಾಲಯವು ಭಾರತದ ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯ ದ್ರಾಕ್ಷಾರಾಮಮ್ ಪಟ್ಟಣದಲ್ಲಿದೆ. ಈ ದೇವಾಲಯದಲ್ಲಿ ಭೀಮೇಶ್ವರ ಸ್ವಾಮಿಯು ಶಿವನನ್ನು ಉಲ್ಲೇಖಿಸುತ್ತಾನೆ. ದೇವಾಲಯದ ಇತಿಹಾಸ :: ಈ ದೇವಾಲಯದಲ್ಲಿನ ಶಾಸನಗಳು ಇದನ್ನು ಕ್ರಿ.ಶ 9 ಮತ್ತು 10ನೇ ಶತಮಾನಗಳ ನಡುವೆ ಪೂರ್ವ ಚಾಲುಕ್ಯ ರಾಜ ಭೀಮನು ನಿರ್ಮಿಸಿದನೆಂದು ಬಹಿರಂಗಪಡಿಸುತ್ತದೆ. ದೇವಾಲಯದ ದೊಡ್ಡ ಮಂಟಪವನ್ನು ಒಡಿಶಾದ ಪೂರ್ವ ಗಂಗಾ ರಾಜವಂಶದ ಒಂದನೇ ನರಸಿಂಗ ದೇವನ ಸೊಸೆ ಗಂಗಾ ಮಹಾದೇವಿ ನಿರ್ಮಿಸಿದಳು.ವಾಸ್ತುಶಿಲ್ಪ ಮತ್ತು ಶಿಲ್ಪಕಲೆಯಲ್ಲಿ, ದೇವಾಲಯವು ಚಾಲುಕ್ಯ ಮತ್ತು ಚೋಳ ಶೈಲಿಗಳ ಮಿಶ್ರಣವನ್ನು ಪ್ರತಿಬಿಂಬಿಸುತ್ತದೆ. ದೇವಾಲಯವು ಐತಿಹಾಸಿಕವಾಗಿ ಪ್ರಮುಖವಾಗಿದೆ. ಈ ಪ್ರದೇಶವನ್ನು ಆಳಿದ ಪೂರ್ವ ಚಾಲುಕ್ಯರು ಇದನ್ನು ನಿರ್ಮಿಸಿದರು. ಇದನ್ನು892 CE ಮತ್ತು 922 CE ರ ನಡುವೆ ನಿರ್ಮಿಸಲಾದ ಸಮರ್ಲಕೋಟದ (ಸಮಲ್ಕೋಟ್) ಭೀಮೇಶ್ವರಸ್ವಾಮಿ ದೇವಾಲಯಕ್ಕೆ ಮುಂಚಿತವಾಗಿ ನಿರ್ಮಿಸಲಾಗಿದೆ ಎಂದು ನಂಬಲಾಗಿದೆ. ದಂತಕಥೆ :: ದಕ್ಷ ಯಜ್ಞ ನಡೆದ ಸ್ಥಳವನ್ನು ದಕ್ಷರಾಮ ಎಂದು…
ಮಡಿಕೇರಿ ಜು.12 NEWS DESK : ವಿರಾಜಪೇಟೆ ತಾಲ್ಲೂಕಿನ ವಿರಾಜಪೇಟೆ-ಕರಡ ಜಿಲ್ಲಾ ಮುಖ್ಯ ರಸ್ತೆಯ ಕಿ.ಮೀ 16.40 ರಲ್ಲಿ ರಸ್ತೆ ಬದಿ ಬಿರುಕು ಬಿಟ್ಟು ಕುಸಿಯುತ್ತಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಸೆಪ್ಟೆಂಬರ್, 09 ರವರೆಗೆ (ದಿನಾಂಕ 09.09.2024ರ ವರೆಗೆ) ವಿರಾಜಪೇಟೆ ತಾಲ್ಲೂಕಿನ ವಿರಾಜಪೇಟೆ-ಕರಡ ಜಿಲ್ಲಾ ಮುಖ್ಯ ರಸ್ತೆಯ ತೆರಮೆಮೊಟ್ಟೆಯ (ಸರಪಳಿ ಕಿ.ಮೀ 16.40 ತೋರ ಹತ್ತಿರ) ಕುಸಿದಿರುವ ಭಾಗದಲ್ಲಿನ 400 ಮೀಟರ್ ರಸ್ತೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ. ಸಾರ್ವಜನಿಕರು ತೋರ–ಕೆದಮುಳ್ಳೂರು-ಬೋಯಿಕೇರಿ ಮಾರ್ಗ, ತೋರ-ಹೆಗ್ಗಳ–ಆರ್ಜಿ ಮಾರ್ಗವಾಗಿ ಬದಲಿ ರಸ್ತೆ ಬಳಸಬಹುದಾಗಿದೆ. ಅವಶ್ಯವಿರುವ ಸಂಜ್ಞೆ / ಸೂಚನಾ ಫಲಕವನ್ನು ಅಳವಡಿಸಲು ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಸೂಚನೆ ನೀಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ಮಡಿಕೇರಿ ಜು.12 NEWS DESK : ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜು.13 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು: ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಮತ್ತಿತರ), ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು: ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್…
ಮಡಿಕೇರಿ ಜು.11 NEWS DESK : ಪರಿಶುದ್ಧ ಕನ್ನಡ ಬಳಕೆಯ ಮೂಲಕವೇ ಸುಮಧುರ ನಿರೂಪಣಾ ಶೈಲಿಯಿಂದ ಕನ್ನಡಿಗರ ಮನಗೆದ್ದಿದ್ದ ನಿರೂಪಕಿ ಹಾಗೂ ನಟಿ ಅಪರ್ಣಾ(51) ನಿಧನ ಹೊಂದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಅಪರ್ಣ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.
ಸುಂಟಿಕೊಪ್ಪ ಜು.11 NEWS DESK : ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ರೂ.9.50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸ್ವಚ್ಛ ಸಂಕೀರ್ಣ ಘಟಕವನ್ನು ಮಡಿಕೇರಿ ಕ್ಷೇತ್ರದ ಶಾಸಕÀ ಡಾ.ಮಂತರ್ ಗೌಡ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು ಕಂಬಿಬಾಣೆ ವ್ಯಾಪ್ತಿಯಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಕಾಡಾನೆಗಳು ರಾತ್ರಿ ಹಗಲೆನ್ನದೆ ಗ್ರಾಮದಲ್ಲಿ ಸಂಚರಿಸಿ ಆತಂಕ ಸೃಷ್ಟಿಸುತ್ತಿರುವ ಬಗ್ಗೆ ಗ್ರಾ.ಪಂ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಗಮನ ಸೆಳೆದಾಗ ಸ್ಪಂದಿಸಿದ ಶಾಸಕರು, ರೈಲ್ವೆ ಕಂಬಿಗಳ ಬೇಲಿ ನಿರ್ಮಾಣ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಜಿಲ್ಲಾ ಪಂಚಾಯತ್ ರಾಜ್ ಅಭಿಯಂತರ ಫಯಾಜ್ ಆಹ್ಮದ್ ಮಾತನಾಡಿ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಈಗಾಗಲೇ ಸರಕಾರದಿಂದ ಅಂದಾಜು 51 ಲಕ್ಷ ರೂ. ಮತ್ತು ಅತ್ತೂರು ನಲ್ಲೂರು ಸರಕಾರಿ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ದುರಸ್ತಿಗಾಗಿ ರೂ.1.80 ಲಕ್ಷ ರೂ. ಮೊತ್ತವನ್ನು ಬಿಡುಗಡೆಗೊಂಡಿದೆ ಎಂದು ತಿಳಿಸಿದರು. ಈ ಸಂದರ್ಭ ತಾ.ಪಂ ನಿರ್ವಾಹಣಾಧಿಕಾರಿ ವೀರಣ್ಣ, ಗ್ರಾ.ಪಂ ಅಧ್ಯಕ್ಷೆ…






