ಲೇಖಕ: admin

ನಾಪೋಕ್ಲು ಆ.12 NEWS DESK : ಕಾರುಗುಂದ ಗೌಡ ಸಮಾಜದ ಆವರಣದಲ್ಲಿ ಬೆಟ್ಟಗೇರಿ ಉದಯ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ಪೋಷಕರ ಸಭೆ ನಡೆಯಿತು. ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿ ತಳೂರು ಕೇಶವ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಲೆಯ ವಿದ್ಯಾರ್ಥಿಗಳ ಇತ್ತೀಚಿನ ಶೈಕ್ಷಣಿಕ ಪ್ರಗತಿ, ಶಿಕ್ಷಣದ ಗುಣಮಟ್ಟ ಹಾಗೂ ಶಾಲೆಯಲ್ಲಿ ಎದುರಾಗುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು. ಶಾಲೆಯ ಶೈಕ್ಷಣಿಕ ವಾತಾವರಣವನ್ನು ಮತ್ತಷ್ಟು ಸುಧಾರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಪೋಷಕರು ಹಾಗೂ ಹಳೆಯ ವಿದ್ಯಾರ್ಥಿಗಳು ತಮ್ಮ ಸಲಹೆ-ಅಭಿಪ್ರಾಯಗಳನ್ನು ಹಂಚಿಕೊಂಡರು. ಶಾಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಎಲ್ಲಾ ಹಳೆಯ ವಿದ್ಯಾರ್ಥಿಗಳನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವ ನಿರ್ಧಾರ ಕೈಗೊಳ್ಳಲಾಯಿತು. ಇದರ ಅಂಗವಾಗಿ ಹಳೆಯ ವಿದ್ಯಾರ್ಥಿಗಳ ವೇದಿಕೆಗೆ ‘ಉದಯ ಹಳೆ ವಿದ್ಯಾರ್ಥಿಗಳ ಚಾರಿಟೇಬಲ್ ಟ್ರಸ್ಟ್’ ಎಂದು ನಾಮಕರಣ ಮಾಡಲಾಯಿತು. ಟ್ರಸ್ಟ್ ಮೂಲಕ ಶಾಲೆಯ ಶ್ರೇಯೋಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು ಎಂದು ಅಧ್ಯಕ್ಷ ತಳೂರು ಕೇಶವ ಕರೆ ನೀಡಿದರು. ಶಾಲೆಯ ಮುಂದಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ…

Read More

ವಿರಾಜಪೇಟೆ ಆ.12 NEWS DESK : ಓದುವ ಹವ್ಯಾಸ ಬೆಳೆಸುವುದರ ಜೊತೆಗೆ ಜ್ಞಾನವನ್ನು ವೃದ್ಧಿಸಿಕೊಳ್ಳುವಲ್ಲಿ ಗ್ರಂಥಾಲಯಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ವಿರಾಜಪೇಟೆ ಕಾವೇರಿ ಕಾಲೇಜಿನ ಪ್ರಾಂಶುಪಾಲೆ ಡಾ. ಕೆ.ಜಿ. ವೀಣಾ ಹೇಳಿದರು. ಕಾವೇರಿ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಭಾರತದ ಗ್ರಂಥಾಲಯ ಪಿತಾಮಹ ಡಾ. ಎಸ್.ಆರ್. ರಂಗನಾಥನ್ ಅವರ 134ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ಪ್ರತಿವರ್ಷ ಆಗಸ್ಟ್ 12ರಂದು ಗ್ರಂಥಪಾಲಕರ ದಿನಾಚರಣೆ ಆಚರಿಸಲಾಗುತ್ತಿದೆ. ಇಂದಿನ ಡಿಜಿಟಲ್ ಯುಗದಲ್ಲಿಯೂ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್.ಆರ್. ರಂಗನಾಥನ್ ಅವರನ್ನು ಸ್ಮರಿಸಬೇಕಾಗಿದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಗ್ರಂಥಾಲಯ ಹಾಗೂ ಅಂತರ್ಜಾಲದ ಮೂಲಕ ಜ್ಞಾನವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿರುವುದಕ್ಕೆ ಗ್ರಂಥಾಲಯಗಳ ಸೇವೆಯೂ ಪ್ರಮುಖ ಕಾರಣವಾಗಿದೆ ಎಂದರು. ಮನುಷ್ಯನ ಸರ್ವತೋಮುಖ ಬೆಳವಣಿಗೆಗೆ ಪುಸ್ತಕಗಳ ಓದು ಅಗತ್ಯ. ಪುಸ್ತಕಗಳನ್ನು ಓದುವುದರಿಂದ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಹೊಸ ವಿಚಾರಗಳನ್ನು ತಿಳಿದುಕೊಳ್ಳಲು ಸಹಕಾರಿಯಾಗುತ್ತದೆ. ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಪುಸ್ತಕಗಳನ್ನು ಓದುವ ಮೂಲಕ…

Read More

ಮಡಿಕೇರಿ ಆ.12 NEWS DESK : ಕೊಡಗು ಜಿಲ್ಲಾ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಣಾ ವೇದಿಕೆಗೆ ಸದಸ್ಯರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ವಿದ್ಯುತ್ ಕ್ಷೇತ್ರ, ಗ್ರಾಹಕರ ಹಾಗೂ ಕಾನೂನು ವಿಷಯಗಳಲ್ಲಿ ಅನುಭವ ಅಥವಾ ಸೂಕ್ತ ಜ್ಞಾನ ಹೊಂದಿರುವ ಅಭ್ಯರ್ಥಿಗಳು ತಮ್ಮ ವೈಯಕ್ತಿಕ ಮಾಹಿತಿಯೊಂದಿಗೆ ಅರ್ಜಿಯನ್ನು ಆಗಸ್ಟ್ 24, 2026ರೊಳಗೆ ಕಾರ್ಯನಿರ್ವಾಹಕ ಎಂಜಿನಿಯರ್ (ವಿ) ಅವರ ಕಚೇರಿ, ಕಾರ್ಯ ಮತ್ತು ಪಾಲನೆ ವಿಭಾಗ, ಮಡಿಕೇರಿ ಕಚೇರಿಗೆ ಅಥವಾ ಇಮೇಲ್ eeemdk@cescmysore.org cesceemdk@gmail.com ವಿಳಾಸಕ್ಕೆ ಅರ್ಜಿ ಸಲ್ಲಿಸುವಂತೆ ಚಾ.ವಿ.ಸ.ನಿ.ನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.  

Read More

ಮಡಿಕೇರಿ ಆ.12 NEWS DESK : ಪುಟಾಣಿ ನಗರದ ಅಂಗನವಾಡಿ ಕೇಂದ್ರದಲ್ಲಿ ಬಾಲ ವಿಕಾಸ ಸಮಿತಿ ವತಿಯಿಂದ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಅರಿವು ಕಾರ್ಯಕ್ರಮ ಹಾಗೂ ಬಾಲ ವಿಕಾಸಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಅಂಗನವಾಡಿ ಕೇಂದ್ರಗಳಲ್ಲಿ ಬಾಲ ವಿಕಾಸ ಸಮಿತಿ ಸದಸ್ಯರು ಹಾಗೂ ಅಂಗನವಾಡಿ ಕಾರ್ಯಕರ್ತರು ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು. ಅಂಗನವಾಡಿ ಕೇಂದ್ರಗಳು ನಿಯಮಾನುಸಾರ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವುದರ ಜೊತೆಗೆ ಸಮುದಾಯದ ಸಹಕಾರ ಪಡೆದು ಮಾದರಿ ಅಂಗನವಾಡಿ ಕೇಂದ್ರಗಳನ್ನಾಗಿ ರೂಪಿಸುವಲ್ಲಿ ಬಾಲ ವಿಕಾಸ ಸಮಿತಿ ಸದಸ್ಯರು ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಬಳಿಕ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಎದೆಹಾಲಿನ ಮಹತ್ವ, ಪೌಷ್ಟಿಕ ಆಹಾರ, ಸ್ವಚ್ಛತೆ ಹಾಗೂ ಸರಿಯಾದ ರೀತಿಯಲ್ಲಿ ಕೈ ತೊಳೆಯುವ ವಿಧಾನಗಳ ಕುರಿತು ವಿವರವಾಗಿ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ, ನಿವೃತ್ತ ಉಪಾಧ್ಯಾಯರಾದ ಪೊನ್ನಮ್ಮ,…

Read More

ಮಡಿಕೇರಿ ಆ.12 NEWS DESK : ನಗರದ ರಾಘವೇಂದ್ರ ದೇವಸ್ಥಾನ ಬಳಿಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ, ಗರ್ಭಿಣಿಯರು ಹಾಗೂ ಬಾಣಂತಿಯರ ಆರೋಗ್ಯ ತಪಾಸಣೆ ಮತ್ತು ಎದೆಹಾಲಿನ ಮಹತ್ವದ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ವೈದ್ಯೆ ಡಾ.ಸುಕೃತಾ ಅವರು ಮಕ್ಕಳ, ಗರ್ಭಿಣಿಯರು ಹಾಗೂ ಬಾಣಂತಿಯರ ಆರೋಗ್ಯ ತಪಾಸಣೆ ನಡೆಸಿ, ಚುಚ್ಚುಮದ್ದು ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಮಾಹಿತಿ ನೀಡಿದರು. ಭಾಗವಹಿಸಿದ್ದ ಮಕ್ಕಳ ತೂಕ ಮತ್ತು ಎತ್ತರವನ್ನು ಪರಿಶೀಲಿಸಿ, ಅಗತ್ಯ ಆರೋಗ್ಯ ಸಲಹೆಗಳನ್ನು ನೀಡಲಾಯಿತು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಅವರು ಎದೆಹಾಲಿನ ಮಹತ್ವ ಕುರಿತು ಮಾಹಿತಿ ನೀಡಿದರು. ತಾಯಿಯ ಎದೆಹಾಲು ಮಗುವಿಗೆ ಕೇವಲ ಆಹಾರವಲ್ಲ; ಅದು ಮಗುವಿನ ಆರೋಗ್ಯ, ಬೆಳವಣಿಗೆ ಹಾಗೂ ರೋಗ ನಿರೋಧಕ ಶಕ್ತಿಗೆ ಪ್ರಕೃತಿಯ ಕೊಡುಗೆಯಾಗಿದೆ. ನವಜಾತ ಶಿಶುವಿಗೆ ಎದೆಹಾಲು ಅತ್ಯುತ್ತಮ ಹಾಗೂ ಸಂಪೂರ್ಣ ಪೌಷ್ಟಿಕ ಆಹಾರವಾಗಿದೆ ಎಂದು ತಿಳಿಸಿದರು. ಹುಟ್ಟಿದ ಒಂದು ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಲು ಪ್ರಾರಂಭಿಸಿ, ಮೊದಲ ಆರು ತಿಂಗಳು ಕೇವಲ…

Read More

ಮಡಿಕೇರಿ ಆ.12 NEWS DESK : ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ವತಿಯಿಂದ ತೀವ್ರಗೊಳಿಸಿದ ಎಚ್‍ಐವಿ/ ಏಡ್ಸ್ ಜಾಗೃತಿ ಅಭಿಯಾನದ ಅಂಗವಾಗಿ ಅಂತರರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವಜನರಲ್ಲಿ ಎಚ್‍ಐವಿ/ ಏಡ್ಸ್ ಕುರಿತು ಅರಿವು ಮೂಡಿಸುವ ಹಾಗೂ ಏಡ್ಸ್ ಸುರಕ್ಷತಾ ಕಾರ್ಯಕ್ರಮದ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಸನತ್ ಕುಮಾರ್ ಅವರು ಉದ್ಘಾಟಿಸಿ ಮಾತನಾಡಿ, ಯುವಜನರಲ್ಲಿ ಎಚ್‍ಐವಿ/ ಏಡ್ಸ್ ಹರಡುವಿಕೆಯನ್ನು ತಡೆಗಟ್ಟುವಲ್ಲಿ ಜಾಗೃತಿ, ಮುನ್ನೆಚ್ಚರಿಕೆ ಹಾಗೂ ಜವಾಬ್ದಾರಿಯುತ ಆರೋಗ್ಯ ನಡೆಗಳ ಮಹತ್ವವನ್ನು ವಿವರಿಸಿದರು. ಎಚ್‍ಐವಿ ಸೋಂಕಿನ ತಡೆಗಟ್ಟುವಿಕೆ ಮತ್ತು ನಿಯಂತ್ರಣದಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು. ಜಿಲ್ಲಾ ಮೇಲ್ವಿಚಾರಕಿ ಸುನಿತಾ ಮುತ್ತಣ್ಣ ಅವರು ಮಾತನಾಡಿ, ಎಚ್‍ಐವಿ/ಏಡ್ಸ್‍ಗೆ ಸಂಬಂಧಿಸಿದ ಲಭ್ಯವಿರುವ ಸೇವೆಗಳು, ಪರೀಕ್ಷೆ ಹಾಗೂ ಸಮಾಲೋಚನಾ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಅಲ್ಲದೆ…

Read More

ಮಡಿಕೇರಿ ಆ.12 NEWS DESK : ಕಾವೇರಿ ನೀರು ಹಂಚಿಕೆ ವಿವಾದದ ನಡುವೆ ರಾಜಾಜಿನಗರ ಶಾಸಕ, ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರು ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾಜಾಜಿನಗರ ಕ್ಷೇತ್ರದ ಕಾರ್ಯಕರ್ತರೊಂದಿಗೆ ಜೀವನದಿ ಉಗಮ ಸ್ಥಾನ ತಲಕಾವೇರಿಗೆ ಆಗಮಿಸಿದ ಸುರೇಶ್ ಕುಮಾರ್, ಕಾವೇರಿಗೆ ನಮಿಸಿ ನಾಡಿನ ಸುಭಿಕ್ಷೆಗಾಗಿ ಪ್ರಾರ್ಥಿಸಿದರು. ಈ ವೇಳೆ ಮಾತನಾಡಿದ ಅವರು, ಕೆಆರ್‌ಎಸ್‌ನಲ್ಲಿ ಕಳೆದ ವರ್ಷ ಈ ಅವಧಿಯಲ್ಲಿ ಮೂರು ಬಾರಿ 100 ಅಡಿಗೂ ಹೆಚ್ಚು ನೀರು ತುಂಬಿತ್ತು. ಆದರೆ ಈ ಬಾರಿ ಸಕಾಲಕ್ಕೆ ಮಳೆಯಾದಗದೆ ಆತಂಕದ ವಾತಾವರಣವಿತ್ತು. ಹಾಗಾಗಿ ಡ್ಯಾಂ ಭರ್ತಿಯಾದರೆ ಬೆಂಗಳೂರಿಗರ ಪರವಾಗಿ ಜೀವನದಿ ಕಾವೇರಿಗೆ ಧನ್ಯವಾದ ಅರ್ಪಿಸಬೇಕೆಂದು ಅಂದುಕೊಂಡಿದ್ದೆ. ಕೆಲವು ದಿನಗಳಿಂದ ಕಾವೇರಿ ಪಾತ್ರದಲ್ಲಿ ಉತ್ತಮ ಮಳೆಯಾಗಿ ಆತಂಕ ದೂರವಾಗಿದೆ. ಹೀಗಾಗಿ ಇಂದು ಕ್ಷೇತ್ರಕ್ಕೆ ಬಂದು ಆ ಹರಕೆಯನ್ನು ನಾನು ತೀರಿಸಿದ್ದೇನೆ ಎಂದರು. ಕೊಡಗಿನಲ್ಲಿ ಮಳೆಯಾದರೆ, ಇಲ್ಲಿ ಕಾವೇರಿ ಉಕ್ಕಿ ಹರಿದರೆ ಮೈಸೂರು, ಮಂಡ್ಯ, ಬೆಂಗಳೂರಿನ ಮಂದಿ ನೆಮ್ಮದಿಯಿಂದ ಇರೋದಕ್ಕೆ ಸಾಧ್ಯ.…

Read More

ಕುಶಾಲನಗರ ಆ.12 NEWS DESK : ಆನೆ-ಮಾನವ ಸಹಬಾಳ್ವೆಯ ಕುರಿತು ಪ್ರತಿಯೊಬ್ಬರೂ ಅರಿವು ಮತ್ತು ಮಾಹಿತಿ ಹೊಂದುವ ಮೂಲಕ ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅಭಿಪ್ರಾಯಪಟ್ಟರು. ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ ವಿಶ್ವ ಆನೆ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ವನ್ಯಜೀವಿಗಳ ಸಂರಕ್ಷಣೆಯಲ್ಲಿ ಸಾರ್ವಜನಿಕರ ಸಹಯೋಗ ಅತ್ಯಂತ ಅಗತ್ಯ. ಯಾವುದೇ ಸಂದರ್ಭದಲ್ಲೂ ಜೀವಹಾನಿ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪೊಲೀಸ್ ಮತ್ತು ಅರಣ್ಯ ಇಲಾಖೆಗೆ ಸಾರ್ವಜನಿಕರಿಂದ ನಿರಂತರ ಸಹಕಾರ ದೊರೆತಲ್ಲಿ ವನ್ಯಜೀವಿ ಸಂಘರ್ಷ ಸೇರಿದಂತೆ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದರು. ಆನೆಗಳು ಸೇರಿದಂತೆ ಇತರ ವನ್ಯಜೀವಿಗಳ ಕುರಿತು ಮುಂದಿನ ಪೀಳಿಗೆಗೆ ಅರಿವು ಮತ್ತು ಜಾಗೃತಿ ಮೂಡಿಸುವುದು ಶಿಕ್ಷಕರು ಹಾಗೂ ಪೋಷಕರ ಜವಾಬ್ದಾರಿಯಾಗಿದೆ. ವನ್ಯಜೀವಿ ಸಂರಕ್ಷಣೆ ಕುರಿತು ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಜಾಗೃತಿ ಬೆಳೆಸಬೇಕು ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡ…

Read More

ಮಡಿಕೇರಿ NEWS DESK ಆ.12 : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ “ಪೊಲಿಂಕಾನ ಉತ್ಸವ” ವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದ ಮಹಾಗಣಪತಿ, ಮಹಾವಿಷ್ಣು, ಸುಬ್ರಹ್ಮಣ್ಯ ಹಾಗೂ ಭಗಂಡೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಬಾಳೆದಿಂಡಿನಿಂದ ತಯಾರಿಸಿದ ಸುಮಂಗಲಿ ಮಂಟಪಕ್ಕೆ ದೀಪ ಬೆಳಗಿ ಹರಶಿನ, ಕುಂಕುಮ, ಕರಿಮಣಿ, ತಾಳಿ, ಬಳೆ, ಸೀರೆ, ಬೆಳ್ಳಿತಟ್ಟೆ ಮತ್ತಿತರ ಆಭರಣವಿಟ್ಟು ಪೂಜೆ ಮಾಡಲಾಯಿತು. ನಂತರ ಶ್ರೀಭಗಂಡೇಶ್ವರ ದೇವಾಲಯದ ಸುತ್ತ ಪ್ರದಕ್ಷಿಣೆ ಬಂದು ವಾದ್ಯಗೋಷ್ಠಿಗಳೊಂದಿಗೆ ಕಾವೇರಿ, ಸುಜ್ಯೋತಿ ಹಾಗೂ ಕನ್ನಿಕೆ ನದಿಗಳ ತ್ರಿವೇಣಿ ಸಂಗಮಕ್ಕೆ ಬರಲಾಯಿತು. ನದಿಗೆ ವಿಶೇಷ ಪೂಜೆ ಸಲ್ಲಿಸಿ ಬಾಳೆದಿಂಡಿನಿಂದ ತಯಾರಿಸಿದ ಸುಮಂಗಲಿ ಮಂಟಪವನ್ನು ವಿಸರ್ಜಿಸಲಾಯಿತು. ನೂರಾರು ಭಕ್ತರು ‘ಪೊಲಿಂಕಾನ ಉತ್ಸವ’ ಕ್ಕೆ ಸಾಕ್ಷಿಯಾದರು. ಪ್ರತಿವರ್ಷ ಭೀಮನ ಅಮಾವಾಸ್ಯೆಯಂದು ‘ಪೊಲಿಂಕಾನ ಉತ್ಸವ’ ವನ್ನು ಆಚರಿಸಿ ತ್ರಿವೇಣಿ ಸಂಗಮದಲ್ಲಿ ತಾಯಿ ಕಾವೇರಿಗೆ ಬಾಗಿನ ಅರ್ಪಿಸುವ ಪದ್ಧತಿಯನ್ನು ಬಹಳ ಹಿಂದಿನಿಂದಲೂ ಆಚರಿಸಿಕೊಂಡು ಬರಲಾಗುತ್ತಿದೆ. ಉತ್ತಮ ಮಳೆಯಾಗಿ ನಾಡಿಗೆ ಸಮೃದ್ಧಿಯನ್ನು ನೀಡುವ ಕಾವೇರಿ ಮಾತೆಗೆ ವಿಶೇಷ…

Read More

ಮಡಿಕೇರಿ NEWS DESK ಆ.12 : ಕೊಡವ ಮಕ್ಕಡ ಕೂಟದ 126ನೇ ಪುಸ್ತಕ ಹಿರಿಯ ಪತ್ರಕರ್ತ ಎಂ.ಶ್ರೀಧರ್ ಹೂವಲ್ಲಿ ರಚಿತ “ಕಥಾಂಜಲಿ” ಪುಸ್ತಕ ಬಿಡುಗಡೆ ಸಮಾರಂಭ ಆ.16 ರಂದು ಮಡಿಕೇರಿಯಲ್ಲಿ ನಡೆಯಲಿದೆ. ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದ ಪತ್ರಿಕಾ ಭವನದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅಡಗೂರು ಹೆಚ್.ವಿಶ್ವನಾಥ್ ಅವರು “ಕಥಾಂಜಲಿ” ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಸಮಾಜ ಸೇವಕರುಗಳಾದ ಕೆ.ಎಂ.ಗಣೇಶ್, ಆಯಲಪಂಡ ಪುಷ್ಪ ಪೂಣಚ್ಚ, ದಮಯಂತಿ ಪೊನ್ನಪ್ಪ ಹಾಗೂ “ಕಥಾಂಜಲಿ” ಪುಸ್ತಕದ ಬರಹಗಾರ ಎಂ.ಶ್ರೀಧರ್ ಹೂವಲ್ಲಿ ಅವರು ಉಪಸ್ಥಿತರಿರುವರು. *ಕಥಾಂಜಲಿ* “ಕಥಾಂಜಲಿ” ಎಂ.ಶ್ರೀಧರ್ ಹೂವಲ್ಲಿ ಅವರು ರಚಿಸಿರುವ ಎರಡನೇ ಕೃತಿಯಾಗಿದ್ದು, ಇದರಲ್ಲಿ ಒಟ್ಟು 11 ಕಥೆಗಳಿವೆ. ಸಾಮಾಜಿಕ ಮತ್ತು ಸಾಂಸಾರಿಕ ಕಥಾ ವಸ್ತು ಅಡಕವಾಗಿದೆ. *ಲೇಖಕರ ಪರಿಚಯ* ಹಿರಿಯ ಪತ್ರಕರ್ತ ಎಂ.ಶ್ರೀಧರ್ ಹೂವಲ್ಲಿ ಅವರು…

Read More