ಸೋಮವಾರಪೇಟೆ ಏ.7 NEWS DESK : ಸೋಮವಾರಪೇಟೆ ತಾಲ್ಲೂಕಿನ ನಗರಳ್ಳಿ ಗ್ರಾಮದ ಸುಗ್ಗಿಬನದಲ್ಲಿ ಕೂತಿನಾಡು ಸುಗ್ಗಿ ಉತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಕೂತಿನಾಡಿಗೆ ಸೇರಿದ 18 ಗ್ರಾಮಗಳ ನಿವಾಸಿಗಳು ನಗರಳ್ಳಿ ಸುಗ್ಗಿಕಟ್ಟೆಯಲ್ಲಿ ಸೇರಿ ಗ್ರಾಮ ದೇವತೆ ಶ್ರೀ ಸಬ್ಬಮ್ಮ ದೇವಿಗೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಗ್ರಾಮದೇವತೆ ಸಬ್ಬಮ್ಮ ದೇವಿಗೆ ಪೂಜೆಸಲ್ಲಿಸಿ, ಗ್ರಾಮ ಸುಭಿಕ್ಷೆ ಹಾಗೂ ಮಳೆ, ಬೆಳೆ ಸಮೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ ಮಾಡಿದರು. ಸುಗ್ಗಿ ಉತ್ಸವದ ಕೊನೆ ದಿನವಾದ ಸೋಮವಾರ ಸುಗ್ಗಿ ದೇವರ ಬನದಲ್ಲಿ ಅಳವಡಿಸಲಾಗಿರುವ ಬೃಹತ್ ಕಲ್ಲಿನ ಕಂಬದಲ್ಲಿ 4 ಮಂದಿ ದೇವರ ಒಡೆಕಾರರನ್ನು ಬೆತ್ತದ ಉಯ್ಯಾಲೆಯಲ್ಲಿ ತೂಗುವ ಮೂಲಕ ಸುಗ್ಗಿ ಉತ್ಸವಕ್ಕೆ ತೆರೆ ಬಿದ್ದಿತು. ನಗರಳ್ಳಿ ಗ್ರಾಮದ ಶ್ರವಣ್, ಸಂದೀಪ್, ಸವಿನ್, ರಚನ್ ಹಳ್ಳಿಯೂರು, ಗಗನ್ ಜಕ್ಕನಳ್ಳಿ, ಶಶಿಕುಮಾರ್ ಹೆಮನಗದ್ದೆ, ದೇವರ ಒಡೆಕಾರರಾಗಿ ಕಾರ್ಯ ನಿರ್ವಹಿಸಿದರು. ರಮೇಶ್, ಪ್ರಕಾಶ್, ಪ್ರಸನ್ನ, ಕುಶಾಲ್, ಲೋಹಿತ್, ದೇವರ ಸೇವೆಕರಾಗಿ ಶ್ರದ್ಧೆಯಿಂದ ಕಾರ್ಯನಿರ್ವಹಿಸಿದರು. ಕೂತಿನಾಡು ಶ್ರೀ ಸಬ್ಬಮ್ಮ ದೇವರ ಸಮಿತಿ ಅಧ್ಯಕ್ಷರಾದ ಕೆ.ಬಿ.…
ಲೇಖಕ: admin
ಮಡಿಕೇರಿ ಏ.7 NEWS DESK : ನಾಪೋಕ್ಲುವಿನಲ್ಲಿ ಸಂಭ್ರಮದಿಂದ ನಡೆಯುತ್ತಿರುವ ಚೇನಂಡ ಕಪ್ ಹಾಕಿ ಉತ್ಸವದ ಪ್ರಯುಕ್ತ ಆಯೋಜನಾ ಸಮಿತಿ ಈಗಾಗಲೆ ಜಿಲ್ಲೆಯ ವಿವಿಧೆಡೆಗಳಲ್ಲಿ 2800ಕ್ಕೂ ಹೆಚ್ಚಿನ ಗಿಡಗಳನ್ನು ನೆಟ್ಟಿದೆಯಲ್ಲದೆ, ಪಂದ್ಯಾವಳಿಯಲ್ಲಿ ದಾಖಲಾಗುವ ಪ್ರತಿ ಗೋಲಿಗೊಂದು “ಗಿಡ” ಎನ್ನುವ ಗುರಿ ಹೊಂದಿರುವುದಾಗಿ ಚೇನಂಡ ಕಪ್ ಹಾಕಿ ಉತ್ಸವ ಆಯೋಜನಾ ಸಮಿತಿಯ ಪ್ರಮುಖರು ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಆಯೋಜನಾ ಸಮಿತಿಯ ಪ್ರಮುಖರು ಮಾತನಾಡಿ, ಕ್ರೀಡೆಯೊಂದಿಗೆ ಪರಿಸರಕ್ಕೂ ಒತ್ತು ನೀಡುವ ಚಿಂತನೆಯಂತೆ ಚೇನಂಡ ಕುಟುಂಬಸ್ಥರು ಈಗಾಗಲೆ ಟಿ.ಶೆಟ್ಟಿಗೇರಿ ಅಯ್ಯಪ್ಪ ದೇವಸ್ಥಾನಕ್ಕೆ ಒಳಪಟ್ಟ ಜಾಗದಲ್ಲಿ 1500 ಗಿಡಗಳನನ್ನು, ಕರಡ ಮಲೆತಿರಿಕೆಯಲ್ಲಿ, ಕೋಕೇರಿ ಭಗವತಿ ದೇವಸ್ಥಾನದ ಆವರಣ, ಸಿದ್ದಾಪುರದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ವೃಕ್ಷಾರೋಪಣ ಮಾಡಿದೆ. ಸೋಮವಾರಪೇಟೆಯಲ್ಲಿ ಶಾಸಕ ಡಾ.ಮಂತರ್ ಗೌಡ ಅವರು ಗಿಡ ನೆಡುವ ಕಾರ್ಯದಲ್ಲಿ ಕೈ ಜೋಡಿಸಿ ಗಮನ ಸೆಳೆದಿರುವುದಾಗಿ ಹೇಳಿದರು. :: ಸೋತ ತಂಡಕ್ಕೊಂದು “ಜೇನು ಪೆಟ್ಟಿಗೆ” :: ಪಂದ್ಯಾವಳಿಯಲ್ಲಿ 383 ತಂಡಗಳು ಪಾಲ್ಗೊಂಡಿದ್ದು, ಆರಂಭಿಕ ಸುತ್ತಿನ ಪಂದ್ಯಗಳು ಕುತೂಹಲ ಭರಿತವಾಗಿ ನಡೆಯುತ್ತಿವೆ. ಮೊದಲ…
ಕುಶಾಲನಗರ, NEWS DESK ಏಪ್ರಿಲ್ 06: ಸೈನಿಕ ಶಾಲೆ ಕೊಡಗಿನಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭವನ್ನು ಶಾಲೆಯ ಕುವೆಂಪು ವಿವಿದೊದ್ದೇಶ ಸಭಾಂಗಣದಲ್ಲಿ ಅತ್ಯಂತ ಹೆಮ್ಮೆ ಮತ್ತು ಗಾಂಭೀರ್ಯದಿಂದ ಆಯೋಜಿಸಲಾಗಿತ್ತು. ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿವಿಧ ಜವಾಬ್ದಾರಿಗಳನ್ನು ಶಾಲೆಯ ಅಧಿಕಾರಿಗಳು ಹಸ್ತಾಂತರಿಸುವ ಮೂಲಕ ಶಾಲೆಯ ನಾಯಕತ್ವದ ಪರಂಪರೆಯಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸಿದರು. ಸಮಾರಂಭವು ಜ್ಞಾನ, ಸಮಗ್ರತೆ ಮತ್ತು ಸೇವೆಯ ಮನೋಭಾವದ ಸಂಕೇತವಾಗಿ ಸಾಂಪ್ರದಾಯಿಕ ದೀಪ ಬೆಳಗುವುದರೊಂದಿಗೆ ಪ್ರಾರಂಭವಾಯಿತು. ಶಾಲೆಯ ಪ್ರಾಚಾರ್ಯರಾದ ಕರ್ನಲ್ ಅಮರ್ ಜೀತ್ ಸಿಂಗ್, ಆಡಳಿತಾಧಿಕಾರಿಗಳಾದ ವಿಂಗ್ ಕಮಾಂಡರ್ ಪಿ. ಪ್ರಕಾಶ್ ರಾವ್, ಉಪ ಪ್ರಾಚಾರ್ಯರಾದ ವಿಂಗ್ ಕಮಾಂಡರ್ ಮೊಹಮ್ಮದ್ ಶಾಜಿ ಮತ್ತು ಹಿರಿಯ ಶಿಕ್ಷಕರಾದ ಶ್ರೀ ಎನ್. ವಿಬಿನ್ ಕುಮಾರ್ ಅವರು ಶಾಲೆಯ ಹಿರಿಯ ವಿದ್ಯಾರ್ಥಿಗಳ ನಾಯಕರಿಗೆ ಭುಜದ ಮೇಲಿನ ಬ್ಯಾಡ್ಜಗಳನ್ನ ಅನಾವರಣಗೊಳಿಸುವ ಮೂಲಕ ವಿದ್ಯಾರ್ಥಿಗಳಿಗೆ ವಿವಿಧ ಜವಾಬ್ದಾರಿಗಳನ್ನು ಹಸ್ತಾಂತರಿಸಿದರು. ಇದರೊಂದಿಗೆ ವಿವಿಧ ನಿಲಯಗಳ ನಾಯಕರ ನೇಮಕಾತಿಗಳನ್ನು ಸಹ ಮಾಡಲಾಯಿತು. ವಿವಿಧ ನಿಲಯಗಳ ನಿಲಯ ಶಿಕ್ಷಕರು…
ಮಡಿಕೇರಿ ಏ.7 : ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರ ಅಹವಾಲುವನ್ನು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸುದೀರ್ಘ ಎರಡು ಗಂಟೆಗೂ ಹೆಚ್ಚು ಕಾಲ ಆಲಿಸಿ, ಮನವಿ ಸ್ವೀಕರಿಸಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರ ಕುಂದುಕೊರತೆಗಳನ್ನು ಆಲಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಮಾಜಿ ಸೈನಿಕರಿಗಾಗಿ ಕ್ಯಾಂಟಿನ್, ಸಮುದಾಯ ಭವನ, ಆಸ್ಪತ್ರೆ ಸೇರಿದಂತೆ ಹಲವು ಮೂಲ ಸೌಲಭ್ಯಕ್ಕೆ ಆದ್ಯತೆ ಮೇಲೆ ಜಾಗ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಮಡಿಕೇರಿ ಮತ್ತು ಪೊನ್ನಂಪೇಟೆಯಲ್ಲಿ ಮಾಜಿ ಸೈನಿಕರ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಕಾಯ್ದಿರಿಸಲಾಗುವುದು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನ ಕಾರ್ಯಕ್ರಮಕ್ಕೆ ಮಾಜಿ ಸೈನಿಕರನ್ನು ಆಹ್ವಾನಿಸಲಾಗುವುದು ಎಂದು ಸೋಮಶೇಖರ್ ಅವರು ತಿಳಿಸಿದರು. ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರ ಕುಂದುಕೊರತೆ ಆಲಿಸುವ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದಲ್ಲಿ ಉಪ ವಿಭಾಗಾಧಿಕಾರಿ ಅವರ ಉಪಸ್ಥಿತಿಯಲ್ಲಿ ಕುಂದುಕೊರತೆ ಆಲಿಸಲಾಗುವುದು, ಅದರಂತೆ…
ಕುಶಾಲನಗರ, NEWS DESK ಏ.07 : ಇಲ್ಲಿಗೆ ಸಮೀಪದ ರಂಗಸಮುದ್ರ ಗ್ರಾಮದ ಜೋಡಿ ಬಸವೇಶ್ವರ ದೇವರ ವಾರ್ಷಿಕ ಪೂಜೋತ್ಸವ ಮಂಗಳವಾರ ಶ್ರದ್ದಾಭಕ್ತಿಯಿಂದ ನೆರವೇರಿತು. ತಾ.6 ರಂದು ಸೋಮವಾರ ಬೆಳಗ್ಗೆ 7-30 ರಿಂದ ಆರಂಭವಾದ ದೇವರ ಧಾರ್ಮಿಕ ವಿಧಿಗಳು ಮಂಗಳವಾರ ಮಧ್ಯಾಹ್ನ 3 ಗಂಟೆವರೆಗೂ ನಿರಂತರವಾಗಿ ನಡೆದವು. ಸೋಮವಾರ ಸಂಜೆ ಗ್ರಾಮದ ಕಲ್ಲೇಗೌಡರ ಜಾನಕಿ ಮನೆಯಿಂದ ದೇವರ ಕಳಸವನ್ನು ಮಂಗಳವಾದ್ಯದೊಂದಿಗೆ ಮೆರವಣಿಗೆಯಲ್ಲಿ ತರಲಾಯಿತು. ಬಳಿಕ ರಾತ್ರಿ 8 ಗಂಟೆಗೆ ಗ್ರಾಮದ ಜೆ.ಜಿ. ಚಂದ್ರಶೇಖರ್ ಅವರ ಮನೆಯಿಂದ ಭಂಡಾರವನ್ನು ದೇವಾಲಯಕ್ಕೆ ತಂದು ಪೂಜಿಸಲಾಯಿತು. ಸೋಮವಾರ ರಾತ್ರಿ ಗ್ರಾಮದ ಕುಂಭನ ಬೆಳ್ಯಪ್ಪ ಕುಟುಂಬಸ್ಥರಿಂದ ಪೂಜಾ ಪ್ರಸಾದ ಅನ್ನದಾನ ನಡೆಯಿತು. ರಾತ್ರಿ 9-30 ಗಂಟೆಗೆ ದೇವರ ಗಂಗಾಸ್ನಾನಕ್ಕೆ ತೆರಳಲು ದೇವರ ಅಪ್ಪಣೆ ಪಡೆಯಲಾಯಿತು. ಮಂಗಳವಾರ ಮುಂಜಾನೆ 4 ಗಂಟೆಯಿಂದ ದೇವಾಲಯದ ಆವರಣದಲ್ಲಿ ಕೆಂಡಕೊಂಡದ ಪೂಜೆ ಆರಂಭವಾಯಿತು. ಮುಂಜಾನೆ 5 ಗಂಟೆಗೆ ದೇವರಿಗೆ ಅಭಿಷೇಕ ಪೂಜೆ. ಬೆಳಗ್ಗೆ 9 ಗಂಟೆಗೆ ವಾದ್ಯ ಮೇಳ, ಅಲಂಕೃತ ದೇವರ ಪಲ್ಲಕ್ಕಿ ಉತ್ಸವದೊಂದಿಗೆ…
ಮಡಿಕೇರಿ NEWS DESK ಏ.7 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ಆಯೋಜಿಸಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.6ರಂದು ನಡೆದ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ಅಮ್ಮಣಿಚಂಡ ಮತ್ತು ಕಂಬೆಯಂಡ ತಂಡಗಳ ನಡುವಿನ ಪಂದ್ಯದಲ್ಲಿ ಅಮ್ಮಣಿಚಂಡ 18 ರನ್ ಗಳ ಜಯ ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಅಮ್ಮಣಿಚಂಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 85 ರನ್ ಗಳನ್ನು ಗಳಿಸಿತು. ಕಂಬೆಯಂಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 67 ರನ್ ಗಳನ್ನಷ್ಟೇ ಸೇರಿಸಿ ಸೋಲೊಪ್ಪಿಕೊಂಡಿತು. ಅಜ್ಜೆಟ್ಟಿರ ಮತ್ತು ಕೊಲ್ಲಿರ ನಡುವಿನ ಹಣಾಹಣಿಯಲ್ಲಿ ಅಜ್ಜೆಟ್ಟಿರ 3 ರನ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಅಜ್ಜೆಟ್ಟಿರ 6 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 74 ರನ್ ಗಳನ್ನು ಗಳಿಸಿತು. ಕೊಲ್ಲಿರ ತಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 71 ರನ್ ಗಳನ್ನು ಸೇರಿಸಿ ಸೋಲು ಅನುಭವಿಸಿತು.…
*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.8 ರ ಪಂದ್ಯಗಳು* *ಮೈದಾನ 1* ಬೆಳಿಗ್ಗೆ 9 ಗಂಟೆಗೆ ಕುಂಜಿರ ಮತ್ತು ಅಪ್ಪಾರಂಡ, 10ಕ್ಕೆ ಕುಟ್ಟಂಡ (ಕಾರ್ಮಾಡು) ಮತ್ತು ಬಾಚಿನಾಡಂಡ, 11ಕ್ಕೆ ಬೈರೇಟಿರ (ಕಾಟಕೇರಿ) ಮತ್ತು ಅಪ್ಪುಮಣಿಯಂಡ, ಮಧ್ಯಾಹ್ನ 12ಕ್ಕೆ ಚೆಕ್ಕೇರ ಮತ್ತು ಬಲ್ಲಡಿಚಂಡ, 1ಕ್ಕೆ ಚೇನಂಡ ಮತ್ತು ಸರ್ಕಂಡ, 2ಕ್ಕೆ ಪಾಂಡ್ಯಂಡ ಮತ್ತು ಕುಂಧೀರ ಹಾಗೂ 3 ಗಂಟೆಗೆ ಬಾಚೆಟ್ಟಿರ ಮತ್ತು ಪೊನ್ನಚಂಡ *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಬೋಳಕಾರಂಡ (ಕೊಣಂಜಗೇರಿ) ಮತ್ತು ಬಾಳೆಕುಟ್ಟೀರ, 10ಕ್ಕೆ ಚೀಯಂಡಿರ ಮತ್ತು ಅಳಮೇಂಗಡ, 11ಕ್ಕೆ ಆದೇಂಗಡ ಮತ್ತು ಬಲ್ಲನಮಂಡ, ಮಧ್ಯಾಹ್ನ 12ಕ್ಕೆ ಮಣ್ಣೀರ (ವೆಸ್ಟ್ ನೆಮ್ಮಲೆ) ಮತ್ತು ಅಯ್ಯಕುಟ್ಟಿರ, 1ಕ್ಕೆ ಮುಂಡ್ಯೋಳಂಡ ಮತ್ತು ಮಲ್ಲಮಾಡ, 2ಕ್ಕೆ ಪಟ್ರಪಂಡ ಮತ್ತು ಬೊಟ್ಟಂಗಡ ಹಾಗೂ 3 ಗಂಟೆಗೆ ಪಾಲಚಂಡ (ಅರಪಟ್ಟ್) ಮತ್ತು ನೆಲ್ಲಿರ
ವಿರಾಜಪೇಟೆ ಏ.6 NEWS DESK : ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ, ದಮನಿತರ ಶೋಷಿತರ ಆಶಾ ಕಿರಣ, ಸಮ ಸಮಾಜದ ಕಾರಣಕರ್ತರಾದ ಡಾ. ಬಾಬು ಜಗಜೀವನ್ ರಾಂ ಅವರ 119 ನೇ ಜನ್ಮ ದಿನಾಚರಣೆಯನ್ನು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿರಾಜಪೇಟೆ ಡಾ ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಆಚರಿಸಲಾಯಿತು. ಮೇಲ್ವಿಚಾರಕರಾದ ಸುಮಯ್ಯ ಅವರು ದಿನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಸಿಹಿ ಹಂಚಿದರು. ಸಿಬ್ಬಂದಿಗಳಾದ ಕುಮಾರಿ, ಜ್ಯೋತಿ, ಅನಿತಾ ಹಾಜರಿದ್ದರು.
ಸುಂಟಿಕೊಪ್ಪ ಏ.6 NEWS DESK : ಮಾದಕ ವಸ್ತುಗಳ ಸೇವನೆಯನ್ನು ಸಂಪೂರ್ಣ ನಿರ್ಮೂಲನೆಗೊಳಿಸಲು ಪ್ರತಿಯೊಬ್ಬರು ಪಣತೊಡಬೇಕು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕರೆ ನೀಡಿದ್ದಾರೆ. ಸುಂಟಿಕೊಪ್ಪ ಸಲಾಫಿ ಮಸೀದಿ ಆವರಣದಲ್ಲಿ ಕೊಡಗು ಜಿಲ್ಲಾ ವಿಸ್ಡಂ ಇಸ್ಲಾಮಿಕ್ ಆರ್ಗನೈಷಶನ್ ಸಂಸ್ಥೆ ಕೊಡಗು ಜಿಲ್ಲಾ ಘಟಕದ ವತಿಯಿಂದ ಏರ್ಪಡಿಸಲಾಗಿದ್ದ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು ಸ್ವತಃ ವೈಧ್ಯನಾಗಿರುವ ನಾನು ಮಾದಕ ವಸ್ತುಗಳ ಸೇವನೆ ಮತ್ತು ದುಷ್ಪಾರಿಣಾಮಗಳಿಂದ ಚಿಕಿತ್ಸೆಗೆ ಒಳಗಾಗಿರುವ ಮತ್ತು ಆಸ್ಪತ್ರೆಗೆ ಸೇರಿರುವ ಅನೇಕರನ್ನು ನೋಡಿದ್ದೇನೆ. ದುರಾದೃಷ್ಟಕರ ವಿಚಾರವೆಂದರೇ ಒಂದು ಸಲ ರುಚಿ ನೋಡೊಣ ಎಂದು ಮಾದಕ ವಸ್ತುಗಳ ಸೇವನೆಯನ್ನು ಆರಂಭಿಸಿದರೆ ನಂತರ ಮಾದಕ ವಸ್ತುಗಳೇ ನಮ್ಮನ್ನು ತಿಂದು ಹಾಕುತ್ತದೆ ಎಂದರು. ಮಾದಕ ವಸ್ತುಗಳ ಚಟ ದೈಹಿಕವಾಗಿ ಮತ್ತು ಮಾನಸಿಕವಾಗಿ ನಮ್ಮನ್ನು ಅವುಗಳ ದಾಸರನ್ನಾಗಿ ಮಾಡಿ ಬಿಡುತ್ತದೆ. ಸಣ್ಣದಾಗಿ ಶುರುವಾಗುವ ಈ ಅಭ್ಯಾಸವು ಬೃಹತ್ ಕಾಯಿಲೆಯಾಗಿ ಮಾರ್ಪಟ್ಟು ಕುಟುಂಬ ಕಂಟಕವಾಗಿ ಪರಿಣಮಿಸುತ್ತದೆ. ಪೋಷಕರು, ಶಿಕ್ಷಕರು, ಸಮಾಜ…
ಸುಂಟಿಕೊಪ್ಪ ಏ.6 NEWS DESK : ಕೊಡಗರಹಳ್ಳಿಯಲ್ಲಿ ನೆಲೆಸಿರುವ ಶ್ರೀ ಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಹಬ್ಬ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆ ಶ್ರೀ ಗಣಹೋಮದೊಂದಿಗೆ ವಾಷೀಕ ಹಬ್ಬಕ್ಕೆ ಚಾಲನೆ ದೊರೆಯಿತು. ಶ್ರೀ ಬೈತೂರಪ್ಪ ಪೊವ್ವೆದಿ ಪರಿವಾರ ದೇವರುಗಳಿಗೆ ವಿಶೇಷ ಪೂಜೆ ಮತ್ತು ರುದ್ರಾಭೀಷೇಕವನ್ನು ದೇವಾಲಯದ ಪ್ರಧಾನ ಅರ್ಚಕರಾದ ರಾಘವೇಂದ್ರ ಭಟ್ ಮತ್ತು ನರಸಿಂಹ ಭಟ್ ಅವರ ತಂಡ ನೆರವೇರಿಸಿದರು. ದೇವತಕ್ಕರಾದ ಜಗ್ಗರಂಡ ಹ್ಯಾರಿ ಕಾರ್ಯಪ್ಪ ಅವರ ಮನೆಯಿಂದ ದೇವರ ಭಂಡಾರವನ್ನು ಅರ್ಚಕ ನರಸಿಂಹ ಭಟ್ ಅವರ ನೇತೃತ್ವದಲ್ಲಿ ಪೂಜೆ ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನೇರವೇರಿಸಿ ದುಡಿಕೊಟ್ ಪಾಟ್ ಸಾಂಪ್ರಾದಾಯಿಕ ಕೊಡವ ಓಲಗದೊಂದಿಗೆ ದೇವಾಲಯಕ್ಕೆ ತಂದು ಪೂಜೆ ನೆರವೇರಿಸಲಾಯಿತು. ಮಾಹಾಪೂಜೆಯ ಬಳಿಕ ತೀರ್ಥ ಪ್ರಸಾದದೊಂದಿಗೆ ಅನ್ನ ಸಂತರ್ಪಣೆ ನೇರವೇರಿತು. ದೇವಾಲಯದ ವಾರ್ಷಿಕ ಹಬ್ಬದ ಸಂದರ್ಭ ದೇವಾಲಯಕ್ಕೆ ಒಳಪಟ್ಟ ಕುಟುಂಬಗಳು ಸಾಂಪ್ರಾದಾಯಿಕ ವೇಷ ಭೂಷಣದೊಂದಿಗೆ ದೇವಾಲಯದ ಆವರಣದಲ್ಲಿ ಸೇರಿ ಸಾಂಪ್ರಾದಾಯಿಕ ಬೊಳಕಾಟ್ ನೃತ್ಯ ಸೇವೆ ಸಲ್ಲಿಸಿದರು. ವಿಶೇಷವೆಂದರೆ ಹಬ್ಬದ…






