ಲೇಖಕ: admin

ಮಡಿಕೇರಿ ಸೆ.5 NEWS DESK : ಜನರ ಮನೆ ಬಾಗಿಲಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವುದರ ಜೊತೆಗೆ, ಸಾರ್ವಜನಿಕರ ಕುಂದುಕೊರತೆ ಆಲಿಸಿ ಇತ್ಯರ್ಥಪಡಿಸುವಲ್ಲಿ ಸರ್ಕಾರ ಪ್ರಜಾಸೇವಾ ಅಭಿಯಾನ/ಆಂದೋಲನ ಆರಂಬೀಸಿದ್ದು, ಈ ಅವಕಾಶವನ್ನು ಸಾರ್ವಜನಿಕರು ಬಳಸಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ‘ಪ್ರಜಾಸೇವಾ ಆಂದೋಲನ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಜಾಸೇವಾ ಇಲಾಖೆಗೆ ಶನಿವಾರ ವಿಜಯನಗರದ ಕೂಡ್ಲಗಿಯಲ್ಲಿ ಚಾಲನೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ವಿವಿಧ ಜಿಲ್ಲೆಗಳಲ್ಲಿಯೂ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ ನೀಡಲಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು. ಮೊದಲ ಮತ್ತು ಮೂರನೇ ಶನಿವಾರದಂದು, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ, ಎರಡನೇ ಮತ್ತು ನಾಲ್ಕನೇ ಶನಿವಾರದಂದು ಶಾಸಕರ ನೇತೃತ್ವದಲ್ಲಿ ಆಯಾಯ ತಾಲ್ಲೂಕು ಅಥವಾ ವಿಧಾನಸಭಾ ಕ್ಷೇತ್ರವಾರು ಪ್ರಜಾಸೇವಾ ಅಭಿಯಾನ ನಡೆಯಲಿದೆ.…

Read More

ಮಡಿಕೇರಿ, NEWS DESK ಸೆ.5 : ಮಡಿಕೇರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹತ್ತು ದೇವಾಲಯಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಶಾಸಕರ ಅನುದಾನದಡಿ ಶಾಸಕ ಡಾ.ಮಂತರ್ ಗೌಡ ಅವರು ತಲಾ ರೂ.5 ಲಕ್ಷದಂತೆ ಅನುದಾನ ನೀಡಿದ್ದಾರೆ. ಎರಡು ದೇವಾಲಯಗಳಲ್ಲಿ ಕಾಮಗಾರಿ ಆರಂಭಕ್ಕೆ ಪೂಜಾ ಕಾರ್ಯಕ್ರಮ ನಡೆಯಿತು. ಶ್ರೀ ಚೌಡೇಶ್ವರಿ ದೇವಾಲಯ ಹಾಗೂ ಶ್ರೀ ಕೋದಂಡರಾಮ ದೇವಾಲಯದಲ್ಲಿ ಶಾಸಕ ಡಾ.ಮಂತರ್ ಗೌಡ ಅವರು ವಿಶೇಷ ಪೂಜೆ ಸಲ್ಲಿಸಿದರು. ಶಾಸಕರ ಅನುದಾನದಡಿ ಕ್ಷೇತ್ರದ ಒಟ್ಟು ಹತ್ತು ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ಒದಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬಾಕಿ ಇರುವ ಎಂಟು ದೇವಾಲಯಗಳಿಗೂ ಭೇಟಿ ನೀಡಿ ಕಾಮಗಾರಿಗಾಗಿ ಪೂಜೆಯಲ್ಲಿ ಪಾಲ್ಗೊಳ್ಳುವುದಾಗಿ ಶಾಸಕರು ತಿಳಿಸಿದರು. ದೇವಾಲಯ ಸಮಿತಿಯ ಪ್ರಮುಖರು, ಮೂಡ ಹಾಗೂ ನಗರಸಭೆಯ ಪ್ರತಿನಿಧಿಗಳು, ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಮತ್ತಿತರರು ಹಾಜರಿದ್ದರು.

Read More

ಮಡಿಕೇರಿ, NEWS DESK ಸೆ. 5: 1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ, ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ ಸೆ. 7ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡವ ಮಕ್ಕಡ ಕೂಟ, ಅಜ್ಜಮಾಡ ಒಕ್ಕ (ಕುಟುಂಬಸ್ಥರು) ಹಾಗೂ ಸ್ವಾ.ಲೀ. ಅಜ್ಜಮಾಡ ದೇವಯ್ಯ ಟ್ರಸ್ಟ್‌ನ ಸಹಯೋಗದಲ್ಲಿ ಬೆಳಗ್ಗೆ 11 ಗಂಟೆಗೆ ಸ್ವಾ.ಲೀ. ಅಜ್ಜಮಾಡ ಬಿ. ದೇವಯ್ಯ ವೃತ್ತದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಪುಣ್ಯಸ್ಮರಣೆಯನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ,…

Read More

ಮಡಿಕೇರಿ, NEWS DESK ಸೆ.5 : ಕೊಡವ ಕೂಟಾಳಿಯಡ ಕೂಟ ಸಂಘಟನೆಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೂತನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆಯು ಶನಿವಾರ ಪೊನ್ನಂಪೇಟೆ ಜೋಡುಬಿಟ್ಟಿಯಲ್ಲಿರುವ ಇಗ್ಗುತ್ತಪ್ಪ ಕೊಡವ ಸಂಘದ ಸಭಾಂಗಣದಲ್ಲಿ ಸಂಘಟನೆಯ ಅಧ್ಯಕ್ಷರಾಗಿದ್ದ ಚೊಟ್ಟಂಡ ಪ್ರಭು ಸೋಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಘಟನೆಯ ನೂತನ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಉಪಾಧ್ಯಕ್ಷರಾಗಿ ಆಚೆಯಡ ಗಗನ್ ಗಣಪತಿ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಮುತ್ತಣ್ಣ ಹಾಗೂ ಖಜಾಂಚಿಯಾಗಿ ಪಾಂಡಿರ ದಿವ್ಯಾ ಉತ್ತಪ್ಪ, ನಿರ್ದೇಶಕರುಗಳಾಗಿ ಅಜ್ಜಮಾಡ ಸಾವಿತ್ರಿ, ಚೆಕ್ಕೆರ ಧನ್ಯ ಅಶ್ವಥ್ ಹಾಗೂ ಕಾಡ್ಯಮಾಡ ಸುಮನ್ ಅವರು ಆಯ್ಕೆಯಾದರು. ನೂತನ ಅಧ್ಯಕ್ಷೆ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ಅವರು ಮಾತನಾಡಿ, ಕಳೆದ ಆರು ವರ್ಷಗಳಿಂದ ಸಂಘಟನೆಯು ಕೊಡವ ಜನಾಂಗದ ಹಿತದೃಷ್ಟಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿಯೂ ಸಂಘಟನೆಯ ಎಲ್ಲಾ ಸದಸ್ಯರ ಸಲಹೆ ಹಾಗೂ ಸಹಕಾರದೊಂದಿಗೆ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾರ್ಯರೂಪಕ್ಕೆ ತರಲಾಗುವುದು ಎಂದು ತಿಳಿಸಿದರು.…

Read More

ಮಡಿಕೇರಿ, NEWS DESK ಸೆ.5 : ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಪ್ಲೇಟ್, ಪೇಪರ್ ಕಪ್, ಆಹಾರ ಕಂಟೈನರ್ ಸೇರಿದಂತೆ ವಿವಿಧ ವಸ್ತುಗಳ ಬಳಕೆಗೆ ನಿಷೇಧ ಹೇರಿರುವ ನಗರಸಭೆಯ ನಿರ್ಧಾರಕ್ಕೆ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ನಿರ್ದೇಶಕ ಎಂ.ಧನAಜಯ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಡಿಕೇರಿ ಪ್ರವಾಸೋದ್ಯಮದ ಪ್ರಮುಖ ಕೇಂದ್ರವಾಗಿದ್ದು, ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ನಗರಕ್ಕೆ ಆಗಮಿಸುತ್ತಿದ್ದಾರೆ. ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಅದಕ್ಕೆ ಪೂರಕವಾಗಿ ಮೂಲಸೌಕರ್ಯ ಹಾಗೂ ಸಮರ್ಪಕ ತ್ಯಾಜ್ಯ ನಿರ್ವಹಣಾ ವ್ಯವಸ್ಥೆ ಕಲ್ಪಿಸಬೇಕಾದ ನಗರಸಭೆ ತ್ಯಾಜ್ಯ ನಿರ್ವಹಣೆಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬದಲು ಏಕಾಏಕಿ ವಿವಿಧ ವಸ್ತುಗಳ ಬಳಕೆಯನ್ನು ನಿಷೇಧಿಸುವ ನಿರ್ಧಾರ ಕೈಗೊಂಡಿರುವುದು ಅವೈಜ್ಞಾನಿಕ ಕ್ರಮವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದ ಯಾವುದೇ ಊರಿನಲ್ಲಿ ಅಡಿಕೆ ತಟ್ಟೆಗಳ ಬಳಕೆಗೆ ಇಂತಹ ನಿಷೇಧ ಹೇರಿರುವುದು ಕಂಡುಬರುವುದಿಲ್ಲ. ಪರಿಸರ ಸ್ನೇಹಿ ಪರ್ಯಾಯ ವಸ್ತುವಾಗಿರುವ ಅಡಿಕೆ ಹಾಳೆಯಿಂದ ತಯಾರಿಸಲಾದ ತಟ್ಟೆಗಳನ್ನು ನಿಷೇಧಿಸುವುದು ಸಮಂಜಸವಲ್ಲ…

Read More

ಕಕ್ಕಬೆ, NEWS DESK ಸೆ.05: ಕೊಡಗಿನ ದೇವನೆಲೆಗಳು, ಐನ್‌ಮನೆಗಳು, ಸಮಾಜಗಳು ಹಾಗೂ ವಿದ್ಯಾಸಂಸ್ಥೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕು. ಸಾಂಸ್ಕೃತಿಕವಾದ ಬೆಳವಣಿಗೆಯು ಸಾಹಿತ್ಯಕ್ಕೆ ಒತ್ತು ನೀಡುತ್ತದೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಕೊಡವ ಪುಸ್ತಕ ಪತ್ತಾಯ ಇದಕ್ಕೆ ಪೂರಕವಾಗಿ ಕೆಲಸ ಮಾಡುತ್ತಿದೆ. ಇದರಿಂದ ಆಯಾಯ ದೇವನೆಲೆಗಳ ಪೌರಾಣಿಕ ಹಿನ್ನೆಲೆ, ಚಾರಿತ್ರಿಕ ಘಟನಾವಳಿಗಳು, ಮಹತ್ವ-ಮಹಿಮೆಯನ್ನು ತಿಳಿದುಕೊಳ್ಳಲು ಅನುಕೂಲವಾಗುತ್ತದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಕಕ್ಕಬೆಯಲ್ಲಿರುವ ಪಾಡಿ ಶ್ರೀ ಇಗ್ಗುತಪ್ಪ ದೇವಸ್ಥಾನದಲ್ಲಿ ಅಕಾಡೆಮಿಯ 20ನೇ ಕೊಡವ ಪುಸ್ತಕ ಪತ್ತಾಯ ಅನಾವರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊಡಗಿನ ಊರೂರುಗಳಲ್ಲಿರುವ ಪುರಾತನ ದೇವನೆಲೆಗಳಲ್ಲಿ ಪುಸ್ತಕ ಪತ್ತಾಯ ಸ್ಥಾಪಿಸುವುದರಿಂದ ಅಲ್ಲಿಗೆ ಬರುವ ಭಕ್ತರಿಗೆ ಆಯಾಯ ದೇವಸ್ಥಾನಗಳು ಹಾಗೂ ಆ ಭಾಗದ ಊರು-ನಾಡುಗಳ ವಿಚಾರವಾಗಿ ಪುಸ್ತಕಗಳನ್ನು ಓದಿ ಅರಿತುಕೊಳ್ಳಲು ಅನುಕೂಲವಾಗುತ್ತದೆ ಎಂದರು. ದೇವಸ್ಥಾನಕ್ಕೆ ಬರುವ ಭಕ್ತರು ಬಿಡುವಿನ ವೇಳೆ ಇನ್ನಿತರೆ ಮಾತನಾಡುವುದರ ಬದಲು ಆಯಾಯ ಕ್ಷೇತ್ರದ ಮಹತ್ವ-ಮಹಿಮೆಯ ಬಗ್ಗೆ…

Read More

ಮಾದಾಪುರ, NEWS DESK ಸೆ. 5: ಡಾರ್ಜಿಲಿಂಗ್ ಗೂರ್ಖಾಲ್ಯಾಂಡ್, ವಿಶಾಖಪಟ್ಟಣಂ ಹಾಗೂ ಗೋದಾವರಿ ಗುಡ್ಡಗಾಡು ಪ್ರಾಂತ್ಯಗಳ ಮಾದರಿಯಲ್ಲಿ ಸಂವಿಧಾನದ 5ನೇ ಪರಿಚ್ಛೇದದ ಅಡಿಯಲ್ಲಿ ಕೊಡವಲ್ಯಾಂಡ್‌ಗೆ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡುವುದೊಂದೇ ಆದಿಮಸಂಜಾತ ಕೊಡವರು ಎದುರಿಸುತ್ತಿರುವ ಭೌಗೋಳಿಕ-ರಾಜಕೀಯ ದುರಂತಕ್ಕೆ ಪರಿಹಾರ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದರು. ಮಾದಾಪುರದಲ್ಲಿ ಶನಿವಾರ ಆಯೋಜಿಸಿದ್ದ ಸಿಎನ್‌ಸಿಯ 2ನೇ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆದಿಮಸಂಜಾತ ಕೊಡವರನ್ನು ಸಂವಿಧಾನದ ಅಡಿಯಲ್ಲಿ ವಿಶಿಷ್ಟ ಪ್ರಕೃತಿ ಆರಾಧಕ ಧಾರ್ಮಿಕ ಸಮುದಾಯವೆಂದು ಗುರುತಿಸಿ, ಕೊಡವಲ್ಯಾಂಡ್‌ಗೆ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಹಾಗೂ ಸ್ವಯಂ-ಆಡಳಿತದ ಭದ್ರತೆ ನೀಡಿದರೆ ಮಾತ್ರ ಕೊಡವರ ಜಮೀನು, ಜಲ, ಸಂಸ್ಕೃತಿ, ಪರಂಪರೆ, ಪರಿಸರ ಮತ್ತು ಜೀವವೈವಿಧ್ಯವನ್ನು ರಕ್ಷಿಸಲು ಸಾಧ್ಯ ಎಂದರು. ಕೊಡವರ ಪವಿತ್ರ ಕ್ಷೇತ್ರಗಳಾದ ಮಂದ್, ವಿಶಿಷ್ಟ ಕೊಡವ ವಂಶಾವಳಿ ಹಾಗೂ ಸಾಂಪ್ರದಾಯಿಕ ತಾಯ್ನಾಡಿನ ಇತಿಹಾಸವನ್ನು ಮುನ್ನೆಲೆಗೆ ತರಬೇಕು. 2027ರ ರಾಷ್ಟ್ರೀಯ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ಪ್ರತ್ಯೇಕವಾಗಿ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದರು. ಸಿಎನ್‌ಸಿ ವತಿಯಿಂದ ಕೊಡವ ಪ್ರಾಂತದಾದ್ಯಂತ…

Read More

ವಿರಾಜಪೇಟೆ, NEWS DESK ಸೆ.05:ಪ್ಲಾಸ್ಟಿಕ್ ಹಾಗೂ ಇನ್ನಿತರ ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಸಮರ್ಪಕವಾಗಿ ಕಸ ವಿಲೇವಾರಿ ಮಾಡಿ ಪರಿಸರ ಮಾಲಿನ್ಯವಾಗದಂತೆ ನೋಡಿಕೊಳ್ಳುವ ಜವಬ್ದಾರಿ ಎಲ್ಲರ ಮೇಲಿದೆ ಎಂದು ಬೇಟೋಳಿ ಗ್ರಾಮ ಪಂಚಾಯತಿ ಸಿಬ್ಬಂದಿ ಬಿ.ಎಸ್. ದಿನೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಕಾರ್ಯಾನುಭವ ಶಿಬಿರದ ಪ್ರಯುಕ್ತ ಶಿಬಿರಾರ್ಥಿಗಳು, ಬೇಟೋಳಿ ರಾಮನಗರದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ, ಬೇಟೋಳಿ ಗ್ರಾಮ ಪಂಚಾಯಿತಿಯ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ಗ್ರಾಮ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸ್ವಚ್ಛತೆಯೆಂಬುದು ಇತರರಿಂದ ಹೇಳಿಸಿ ಕೊಂಡು ಕಲಿಯುವಂತಹದಲ್ಲ . ಮನೆಯಿಂದಲೆ ಕಸವನ್ನು ಹೇಗೆ ವಿಲೇವಾರಿ ಮಾಡಬೇಕೆಂಬುದನ್ನು ತಿಳಿದವರು ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಎಸೆದು ಪ್ರಕೃತಿಯನ್ನು ಹಾಳು ಮಾಡುವ ಕೆಲಸ ಎಂದಿಗೂ ಮಾಡುವುದಿಲ್ಲ ಆದಷ್ಟು ರಸ್ತೆಯ ಬದಿಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಹಾಗೂ ಇನ್ನಿತರ ಕಸವನ್ನು ಎಸೆಯದೆ ಕಸದ ಬುಟ್ಟಿಯಲ್ಲಿ ಹಾಕುವ ಮನಸ್ಥಿತಿ ರೂಢಿಸಿಕೊಳ್ಳಿ. ನಿಮ್ಮಿಂದ ಸಾಧ್ಯವಾದಷ್ಟು ಸ್ವಚ್ಚತೆ ವಿಚಾರವನ್ನು, ಸ್ವಚ್ಚತೆಯ…

Read More

ಕುಶಾಲನಗರ NEWS DESK ಸೆ.05: ರಾಜ್ಯ ಹೆದ್ದಾರಿಗಳಲ್ಲಿ ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಹಂಪ್‌ಗಳು ವಾಹನ ಚಾಲಕರಿಗೆ ಸರಿಯಾಗಿ ಗೋಚರಿಸದೆ ಸರಣಿ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಕೊಡಗು ಜಿಲ್ಲಾ ಘಟಕ ರಸ್ತೆ ಸುರಕ್ಷತಾ ಕಾರ್ಯಕ್ಕೆ ಮುಂದಾಗಿದೆ. ಸಾರ್ವಜನಿಕರಿಂದ ನಿರಂತರವಾಗಿ ಬರುತ್ತಿದ್ದ ಅಪಘಾತಗಳ ದೂರುಗಳಿಗೆ ಸ್ಪಂದಿಸಿದ ಸಂಘಟನೆಯ ಪದಾಧಿಕಾರಿಗಳು ಸ್ವತಃ ರಸ್ತೆಗಿಳಿದು ಕುಶಾಲನಗರ ತಾಲೂಕಿನ ವಿವಿಧ ಪ್ರಮುಖ ರಸ್ತೆಗಳಲ್ಲಿರುವ ಹಂಪ್‌ಗಳಿಗೆ ಬಿಳಿ ಬಣ್ಣ ಬಳಿಯುವ ಮೂಲಕ ಗಮನ ಸೆಳೆದರು. ಮೈಸೂರಿನಿಂದ ಕುಶಾಲನಗರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಾಜ್ಯ ಹೆದ್ದಾರಿಯಲ್ಲಿ ಬೈಲಕುಪ್ಪೆಯ ಗೋಲ್ಡನ್ ಟೆಂಪಲ್‌ಗೆ ತೆರಳುವ ರಸ್ತೆಯ ಸಮೀಪದಲ್ಲಿದ್ದ ಹಂಪ್‌ಗೆ ಮೊದಲಿಗೆ ಬಣ್ಣ ಬಳಿಯಲಾಯಿತು. ವಾಹನಗಳು ವೇಗವಾಗಿ ಸಂಚರಿಸುವ ಈ ರಸ್ತೆಯಲ್ಲಿ ಹಂಪ್‌ಗಳು ಸರಿಯಾಗಿ ಕಾಣಿಸದೆ ಅಪಘಾತಗಳು ಸಂಭವಿಸುತ್ತಿದ್ದ ಹಿನ್ನೆಲೆಯಲ್ಲಿ, ಬಣ್ಣ ಬಳಿದ ಬಳಿಕ ದೂರದಿಂದಲೇ ಹಂಪ್‌ಗಳು ವಾಹನ ಚಾಲಕರಿಗೆ ಸ್ಪಷ್ಟವಾಗಿ ಗೋಚರಿಸುವಂತಾಗಿದೆ. ಇದೇ ರೀತಿಯಲ್ಲಿ ಕುಶಾಲನಗರ ಹಳೆ ಮಾರ್ಕೆಟ್ ರಸ್ತೆಯ ಎರಡು ಹಂಪ್‌ಗಳು, ಐಬಿ ರಸ್ತೆಯ ಎರಡು…

Read More

ಮೈಸೂರು, NEWS DESK ಸೆ.05: ಅಂಬಾರಿ ಆನೆ ಅಭಿಮನ್ಯುವಿಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಆತನಿಗೆ ಅಕ್ಷರ ತೇರಿನಲ್ಲಿ ಭಾವ ಪೂರ್ಣವಾಗಿ ಬೀಳ್ಕೊಡುವ ಹಾಗೂ ಹಿರಿಯ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಅಭಿನ್ಯುವಿನ ಕುರಿತು ಭಾವನಾತ್ಮಕವಾಗಿ ಬರೆದ ಎರಡು ಕೃತಿಗಳ ಬಿಡುಗಡೆ ಕಾರ್ಯಕ್ರಮ ಸೆಪ್ಟಂಬರ್ 9ನೇ ತಾರೀಕು ಬುಧವಾರ ಮೈಸೂರಿನಲ್ಲಿ ಆಯೋಜಿಸಲಾಗಿದೆ. ಮೈಸೂರು ಕಲ್ಚರಲ್ ಅಸೋಸಿಯೇಷನ್, ಅರಣ್ಯ ಇಲಾಖೆಯ ಮೈಸೂರು ವನ್ಯಜೀವಿ ವಿಭಾಗ ಹಾಗೂ ನಗರ ಕೇಂದ್ರ ಗ್ರಂಥಾಲಯ ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ ಅಕ್ಷಿ ಪ್ರಕಾಶನಗಳ ಸಹಯೋಗದಲ್ಲಿ ಕಾರ್ಯಕ್ರಮವನ್ನು ನಗರದ ಪೀಪಲ್ಸ್ ಪಾರ್ಕ್ನಲ್ಲಿರುವ ನಗರ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಐತಿಚಂಡ ರಮೇಶ್ ಉತ್ತಪ್ಪ ಅವರು ಕಳೆದ ಒಂದು ವರ್ಷದಿಂದ ಅಭಿಮನ್ಯುವಿನ ಕುರಿತು ಎರಡು ವಿಭಿನ್ನ ಕೃತಿಗಳನ್ನು ಬರೆದಿದ್ದಾರೆ. `ಮೌನದ ಮಹಾಪಯಣ, ಅಭಿಮನ್ಯುವಿಗೆ ಒಲವಿನ ಓಲೆ’ ಕೃತಿಯಲ್ಲಿ ಭಾವನಾತ್ಮವಾದ ಪತ್ರಗಳಿವೆ. ಅಭಿಮನ್ಯುವಿಗೆ ಪತ್ರಗಳ ಮೂಲಕ ಬೀಳ್ಕೊಡುವ ವಿಭಿನ್ನ ಪ್ರಯತ್ನವಾಗಿದೆ. ಲೇಖಕರ ಕಲ್ಪನೆಯಲ್ಲಿ ಅಭಿಮನ್ಯುವಿನೊಂದಿಗೆ ಒಡನಾಡಿದ ಆನೆಗಳು, ಮಾವುತರು, ಅಧಿಕಾರಿಗಳು,…

Read More