ಮಡಿಕೇರಿ ಜು.15 NEWS DESK : ಬಿಳಿಗೇರಿ ಹಾಗೂ ಅರ್ವತೋಕ್ಲು ಪ್ಲಾಂಟರ್ಸ್ ಕ್ಲಬ್ ವತಿಯಿಂದ ಜು.18 ಮತ್ತು 19, ರಂದು ಎರಡು ದಿನಗಳ ಕಾಲ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಬಿಳಿಗೇರಿಯ ತುಂತಜೆ ಕುಟುಂಬಸ್ಥರ ಕೆಸರುಗದ್ದೆಯಲ್ಲಿ ಕ್ರೀಡಾ ಹಬ್ಬ ನಡೆಯಲಿದ್ದು, ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸ್ಪರ್ಧೆಗಳು ಆರಂಭವಾಗಲಿವೆ. ಕ್ರೀಡಾಕೂಟದಲ್ಲಿ ಪುರುಷರು, ಮಹಿಳೆಯರು ಹಾಗೂ ಮಕ್ಕಳಿಗೆ ಪ್ರತ್ಯೇಕವಾಗಿ ವಿವಿಧ ಸಾಂಪ್ರದಾಯಿಕ ಮತ್ತು ಗ್ರಾಮೀಣ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಗಿದೆ. :: ಕ್ರೀಡಾಕೂಟದ ಪ್ರಮುಖ ಆಕರ್ಷಣೆಗಳು ಮತ್ತು ವಿಭಾಗಗಳು :: ಪುರುಷರ ವಿಭಾಗ :: ಕೆಸರುಗದ್ದೆ ಕ್ರಿಕೆಟ್, ಹಗ್ಗಜಗ್ಗಾಟ, ವಾಲಿಬಾಲ್, ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ (.22 ಹಾಗೂ ತೋಟದ ಕೋವಿ ಬಳಕೆಗೆ ಅವಕಾಶ), :: ಮಹಿಳೆಯರ ವಿಭಾಗ :: ಹಗ್ಗಜಗ್ಗಾಟ, ವಿವಿಧ ಮನರಂಜನಾ ಸ್ಪರ್ಧೆಗಳು ನಡೆಯಲಿದೆ. :: ಮಕ್ಕಳು, ಪುರುಷರು ಮತ್ತು ಮಹಿಳೆಯರಿಗಾಗಿ :: ವಯೋಮಿತಿಗೆ ಅನುಗುಣವಾಗಿ ವಿವಿಧ ಓಟದ ಸ್ಪರ್ಧೆಗಳು ಹಾಗೂ ವಿಶೇಷ ಮನರಂಜನಾ ಆಟಗಳು. :: ಹೆಸರು ನೋಂದಣಿ :: …
ಲೇಖಕ: admin
ಮಡಿಕೇರಿ ಜು.15 NEWS DESK : ಪೊನ್ನಂಪೇಟೆ ತಾಲೂಕು ಕೆ.ಬಾಡಗ ಗ್ರಾಮ ಪಂಚಾಯತ್ ವ್ಯಾಪ್ತಿಯ, ಚಂದನಕೇರೆ ಹಾಡಿಗೆ ಹೋಗುವ ನೂತನ ರಸ್ತೆ ನಿರ್ಮಾಣಕ್ಕೆ ಚಾಲನೆ ದೊರೆಯಿತು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಜಿಲ್ಲಾಧ್ಯಕ್ಷರಾದ ಧರ್ಮಜ ಉತ್ತಪ್ಪ, ರೂ 75 ಲಕ್ಷಗಳಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದ್ದು, ಸ್ಥಳೀಯರ ಬೇಡಿಕೆಗೆ ಸ್ಪಂದಿಸಿರುವ ಶಾಸಕರು, ವಿಶೇಷ ಅನುದಾನ ಬಳಸಿ ಈ ಅನುದಾನವನ್ನು ಒದಗಿಸಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭ ವಲಯ ಅಧ್ಯಕ್ಷರಾದ ಚಿಮ್ಮಣ್ಣಮಾಡ ರವಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಕಾಳಿಮಾಡ ಪ್ರಶಾಂತ್, ನಾಲ್ಕೇರಿ ವಲಯ ಅಧ್ಯಕ್ಷರಾದ ತಿತೀರ ಕಟ್ಟಿ ಕಾರ್ಯಪ್ಪ, ಕೆ ಬಾಡಗ ಪಂಚಾಯಿತಿ ಸದಸ್ಯರಾದ ಬೋಪಣ್ಣ, ಡಿಸಿಸಿ ಸದಸ್ಯರು ಹಾಗೂ ಹಿರಿಯರಾದ ನಟರಾಜ್, ಜಿಲ್ಲಾ ವಕ್ತರರು ತೆನ್ನಿರ ಮೈನಾ, ಪಕ್ಷದ ಮುಖಂಡರಾದ ವಿಶು, ಮಲ್ಲಪನೇರ ನಿಲ್ಲು ಗಣಪತಿ, ಚಂಗಪ್ಪ,…
ಸುಂಟಿಕೊಪ್ಪ ಜು.15 NEWS DESK : ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾನವ ವನ್ಯಜೀವಿಗಳ ಸಂಘರ್ಷ ತಡೆಗಟ್ಟಲು ತುರ್ತು ಕ್ರಮ ಕೈಗೊಳ್ಳುವ ಕುರಿತು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ಗೌಡ ಅವರು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಚರ್ಚಿಸಿದರು. ಕೆದಕಲ್ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹೊರೂರು, ಮೊದ್ದರೂ, ಕೆದಕಲ್ ನೇಗಾದಳ್, ಹಾಲೇರಿ, ಈರಳೆ ಓಳಮುಡಿ ಮತ್ತು ಅತ್ತೂರು ನಲ್ಲೂರು ಸೇರಿದಂತೆ ಸುತ್ತ ಮುತ್ತಲಿನ ಪ್ರದೇಶಗಳ ರೈತರು ಮತ್ತು ಬೆಳೆಗಾರರು ಸಭೆಯಲ್ಲಿ ಪಾಲ್ಗೊಂಡು ಕಾಡಾನೆ, ಕಾಡಾಮ್ಮೆ ಸೇರಿದಂತೆ ವನ್ಯ ಜೀವಿಗಳ ಹಾವಳಿ ಕುರಿತು ಜೀವಭಯ ಹಾಗೂ ಕೃಷಿ ಬೆಳೆಗಳಿಗೆ ಅಪಾರ ಹಾನಿಯಾಗುತ್ತಿದ್ದು, ಶಾಶ್ವತ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕರ ಮುಂದೆ ಆಹಾವಲು ಮಂಡಿಸಿದರು. ಲಿಖಿತ ಮನವಿಯನ್ನು ಸಭೆಯಲ್ಲಿ ಓದಿದ ಮಾಜಿ ಗ್ರಾ. ಪಂ. ಸದಸ್ಯ ವೆಂಕಪ್ಪ ಕೋಟ್ಯಾನ್ ಆನೆಕಾಡು ಮತ್ತು ಮೀನುಕೊಲ್ಲಿ ಅರಣ್ಯ ವಲಯಗಳಲ್ಲಿ ಜಂಟಿಕೊಂಬಿಂಗ್ ಕಾರ್ಯಚರಣೆಯನ್ನು ಅರಣ್ಯ ಇಲಾಖೆಯ ವಿವಿಧ ವಿಭಾಗಗಳ ಸಮನ್ವಯತೆಯಿಂದ ಕೈಗೊಳ್ಳಬೇಕು ಈಗಾಗಲೇ…
ಸೋಮವಾರಪೇಟೆ ಏ.15 NEWS DESK : ಐಸಿಎಆರ್–ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ, ಚೆಟ್ಟಳ್ಳಿಯಲ್ಲಿ ಅಭಿವೃದ್ಧಿಪಡಿಸಲಾದ ‘ಅರ್ಕಾ ಕೂರ್ಗ್ ರವಿ’ ಹಾಗೂ ‘ಅರ್ಕಾ ಸುಪ್ರೀಂ’ ಬೆಣ್ಣೆ ಹಣ್ಣಿನ (ಬಟರ್ ಫ್ರೂಟ್) ಸುಧಾರಿತ ತಳಿಗಳ ಪರಿಚಯಕ್ಕಾಗಿ ಬೆಂಗಳೂರು ಗ್ರಾಮೀಣ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಎಸ್. ವಡ್ಡಳ್ಳಿ ಗ್ರಾಮದ ಪ್ರಗತಿಪರ ರೈತ ಎಸ್. ರವೀಂದ್ರ ಅವರ ತೋಟದಲ್ಲಿ ಕ್ಷೇತ್ರೋತ್ಸವ ನಡೆಯಿತು. ಕಾರ್ಯಕ್ರಮವನ್ನು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಟಿ.ಕೆ. ಬೆಹರಾ ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಬೆಣ್ಣೆ ಹಣ್ಣಿನ ಬೇಡಿಕೆ ನಿರಂತರವಾಗಿ ಹೆಚ್ಚುತ್ತಿದ್ದು, ಸಂಶೋಧನೆಯ ಮೂಲಕ ಅಭಿವೃದ್ಧಿಪಡಿಸಿರುವ ಸುಧಾರಿತ ತಳಿಗಳು ರೈತರಿಗೆ ಉತ್ತಮ ಇಳುವರಿ ಹಾಗೂ ಹೆಚ್ಚಿನ ಆದಾಯ ತಂದುಕೊಡಲಿವೆ ಎಂದು ತಿಳಿಸಿದರು. ಸೋಮವಾರಪೇಟೆ ಸಮೀಪದ ಚೆಟ್ಟಳ್ಳಿ ಕೇಂದ್ರದಲ್ಲಿ ಹಲವು ವರ್ಷಗಳ ಸಂಶೋಧನೆಯ ಬಳಿಕ ಅಭಿವೃದ್ಧಿಪಡಿಸಲಾದ ‘ಅರ್ಕಾ ಕೂರ್ಗ್ ರವಿ’ ಮತ್ತು ‘ಅರ್ಕಾ ಸುಪ್ರೀಂ’ ತಳಿಗಳನ್ನು 2020ರಲ್ಲಿ ಬಿಡುಗಡೆ ಮಾಡಲಾಗಿತ್ತು. ಉತ್ತಮ ಗುಣಮಟ್ಟದ ಹಣ್ಣು, ಅಧಿಕ ಇಳುವರಿ ಹಾಗೂ ವಾಣಿಜ್ಯ ಕೃಷಿಗೆ ಹೊಂದುವ ಗುಣಲಕ್ಷಣಗಳಿಂದ…
ಮಡಿಕೇರಿ NEWS DESK ಜು.15 : ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿಯಾದ ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರನ್ನು ಭೇಟಿಯಾಗಿ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಕುರಿತು ಚರ್ಚಿಸಿದರು. ಸಿಎನ್ಸಿ ಕೊಡವರಿಗಾಗಿ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತಕ್ಕಾಗಿ ದೀರ್ಘಕಾಲದ, ಶಾಂತಿಯುತ ಹೋರಾಟವನ್ನು ನಡೆಸಿಕೊಂಡು ಬಂದಿದೆ. ವಂಶಪಾರoಪರ್ಯ ಭೂಮಿ, ಜಲಮೂಲಗಳು, “ಮಂದ್” ಮತ್ತು “ದೇವಕಾಡು”ಗಳಂತಹ ಸಾಂಸ್ಕೃತಿಕ ನೆಲೆಗಳ ರಕ್ಷಣೆ ಹಾಗೂ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಕ್ಕೊತ್ತಾಯ ಮಂಡಿಸಲಾಗಿದೆ. ಇತ್ತೀಚೆಗೆ ಮಿತಿ ಮೀರಿದ ಭೂ ಪರಿವರ್ತನೆ, ಹೊರಗಿನ ಬಂಡವಾಳಶಾಹಿ ಸಂಸ್ಥೆಗಳ ರೆಸಾರ್ಟ್ ಮತ್ತು ಟೌನ್ ಶಿಪ್ ಗಳ ಮಾಫಿಯಾಗಳಿಂದ ಕೊಡವ ನೆಲದ ಸೂರೆ, ಜನಸಂಖ್ಯಾ ಪಲ್ಲಟ, ಮಲ್ಮ ಕುಂದ್ ಸಮಸ್ಯೆ ಮತ್ತು ತಿದ್ದುಪಡಿ ಮಾಡಲಾದ ಭೂ ಕಾಯ್ದೆಗಳ ಅಡಿಯಲ್ಲಿ ಆದಿಮಸಂಜಾತ ಹಕ್ಕುಗಳ ದುರ್ಬಲಗೊಳಿಸುವಿಕೆಯ ಪ್ರಕ್ರಿಯೆ ನಡೆಯುತ್ತಿದೆ ಎಂದು ಎನ್.ಯು.ನಾಚಪ್ಪ ಗಮನ ಸೆಳೆದರು. ಸಿಎನ್ಸಿ ಬೇಡಿಕೆಗಳ ಕುರಿತು ಸಂವಿಧಾನಾತ್ಮಕ ಮತ್ತು ಕಾನೂನು ಅಂಶಗಳನ್ನು ಅಧ್ಯಯನ ಮಾಡಿ ಪ್ರಜಾಪ್ರಭುತ್ವದ…
ಮಡಿಕೇರಿ NEWS DESK ಜು.15 : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ, ಬೆಂಗಳೂರು ವತಿಯಿಂದ ಸಮಿತಿಯ ಕೊಡಗು ಜಿಲ್ಲಾ ಕಾರ್ಯದರ್ಶಿ ಹಾಗೂ ಕುಂದಲ್ಪಾಡಿ ಪೆರಾಜೆ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕುಮಾರ್ ಎನ್.ಎಸ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಬೆಂಗಳೂರಿನಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಆಯೋಜಿಸಿದ್ದ ವಿವಿಧ ಲೇಖಕರ ಆರು ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಕುಮಾರ್ ಎನ್.ಎಸ್ ಅವರನ್ನು ಸನ್ಮಾನಿಸಲಾಯಿತು. ಸಮಿತಿಯಲ್ಲಿ ಕುಮಾರ್ ಅವರು ಸಲ್ಲಿಸಿದ ಅತ್ಯುತ್ತಮ ಸೇವೆ ಮತ್ತು ಅತಿ ಹೆಚ್ಚು ಸದಸ್ಯತ್ವ ಮಾಡಿದ ಕಾರಣಕ್ಕಾಗಿ ಗೌರವಿಸಲಾಯಿತು. ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯಾಧ್ಯಕ್ಷ ಸಿ.ಆರ್.ಚಂದ್ರಶೇಖರ್, ಕರ್ನಾಟಕ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಲೇಖಕ ಹಾಗೂ ಚಿಂತಕ ಅಬ್ದುಲ್ ರೆಹಮಾನ್ ಪಾಷ, ವಿಮರ್ಶಕ ನಿರಂಜನ್, ರಾಜ್ಯ ಕಾರ್ಯದರ್ಶಿ ಈ ಬಸವರಾಜ್ ಮತ್ತಿತರ ಪ್ರಮುಖರು ಸನ್ಮಾನ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಮಡಿಕೇರಿ NEWS DESK ಜು.15 : ಆಹಾರ ಅರಸಿ ಬಂದ ಕಾಡಾನೆಗಳ ಹಿಂಡಿನಲ್ಲಿದ್ದ ಮರಿಯಾನೆಯೊಂದು ದಾರಿ ತಪ್ಪಿ ಸೆಫ್ಟಿಕ್ ಟ್ಯಾಂಕ್ ಗೆ ಬಿದ್ದ ಘಟನೆ ನೆಲ್ಯಹುದಿಕೇರಿ ವ್ಯಾಪ್ತಿಯ ನಲ್ವತ್ತೆಕ್ಕರೆಯಲ್ಲಿ ನಡೆದಿದೆ. ಕಾಡಾನೆಗಳ ಗುಂಪಿನಲ್ಲಿದ್ದ ಮರಿಯೊಂದು ನಿರ್ಮಾಣ ಹಂತದಲ್ಲಿರುವ ಹಿಂಗು ಗುಂಡಿಗೆ ಬಿದ್ದಿದೆ. ಮಂಗಳವಾರ ರಾತ್ರಿ 7.30 ಸುಮಾರಿಗೆ ಘಟನೆ ನಡೆದಿದ್ದು, ಗುಂಡಿಯಿಂದ ಮೇಲಕ್ಕೆರಲು ಮರಿಯಾನೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಹರಸಾಹಸ ಪಟ್ಟಿದೆ. ಕೂಡಲೇ ಅರಣ್ಯ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ತಲುಪುವ ಮುನ್ನವೇ ತಾಯಿಯಾನೆಯ ಸಹಾಯದಿಂದ ಗುಂಡಿಯಿಂದ ಮೇಲೇರಿದ ಮರಿ ಆನೆ ಗುಂಪಿನೊಂದಿಗೆ ಕಾಡಿನತ್ತ ಸಾಗಿದೆ. *ಇಲಾಖೆ ಮನವಿ* ಕಾಡಾನೆ ಮರಿಗಳು ತೆರೆದ ಗುಂಡಿಯೊಳಗೆ ಬೀಳಬಹುದಾದ ಸಾಧ್ಯತೆ ಇರುವ ಹಿನ್ನೆಲೆ, ತಮ್ಮ ಮನೆ, ಶಾಲೆ ಮತ್ತು ತೋಟಗಳಲ್ಲಿ ಮೇಲೆ ಮುಚ್ಚದೆ ಇರುವ ಕಸದ ಗುಂಡಿ ಹಾಗೂ ಸೆಪ್ಟಿಕ್ ಟ್ಯಾಂಕ್ ಗುಂಡಿಗಳನ್ನು ತುರ್ತಾಗಿ ಮುಚ್ಚುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ. ಘಟನೆ ಸಂಬಂಧ ಕುಶಾಲನಗರ ವಲಯ ಮೀನುಕೊಲ್ಲಿ ವಿಭಾಗದ DRFO ಸಚಿನ್ ನಿಂಬಾಳ್ಕರ್, ಅರಣ್ಯ…
ಮಡಿಕೇರಿ NEWS DESK ಜು.15 : ಮಡಿಕೇರಿ ನಗರದ ಇತಿಹಾಸ ಪ್ರಸಿದ್ಧ ಶ್ರೀ ಕೋಟೆ ಮಹಾ ಗಣಪತಿ ದಸರಾ ಮಂಟಪ ಸಮಿತಿ ಸುವರ್ಣ ಸಂಭ್ರಮದಲ್ಲಿದೆ. 50ನೇ ವರ್ಷದ ಮಂಟಪ ಸಮಿತಿ ಅಧ್ಯಕ್ಷರಾಗಿ ಯುವ ಉದ್ಯಮಿ, ಚಲನಚಿತ್ರ ನಿರ್ಮಾಪಕ ಹಾಗೂ ಸಮಾಜ ಸೇವಕ ಅವರೆಮಾದಂಡ ಶರಣ್ ಪೂಣಚ್ಚ ಆಯ್ಕೆಯಾಗಿದ್ದಾರೆ. ಸುವರ್ಣ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮ ಹಾಗೂ ಸಾಮಾಜಿಕ ಕಳಕಳಿಯ ಚಟುವಟಿಕೆಗಳನ್ನು ನಡೆಸಲು ಆಚರಣಾ ಸಮಿತಿಯನ್ನು ಕೂಡ ರಚಿಸಲಾಯಿತು. ಈ ಸಮಿತಿಯ ಅಧ್ಯಕ್ಷರಾಗಿ ಹಿರಿಯರಾದ ವಿ.ಪಿ.ಸತೀಶ್ ಭಟ್, ಎಂ.ಜಿ.ರಘುನಾಥ್ ರಾವ್ ಹಾಗೂ ಸತ್ಯನಾರಾಯಣ ರಾವ್ ನೇಮಕಗೊಂಡರು. ಕಾರ್ಯಕಾರಿಣಿ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. 50ನೇ ವರ್ಷದ ಪ್ರಯುಕ್ತ ಅದ್ದೂರಿ ಹಾಗೂ ಅರ್ಥಗರ್ಭಿತ ಕಾರ್ಯಕ್ರಮಗಳನ್ನು ಆಯೋಜಿಸಲು ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.
ವಿರಾಜಪೇಟೆ ಜು.14 NEWS DESK : ವಿರಾಜಪೇಟೆ ಪೀಠೋಪಕರಣ ತಯಾರಿಕೆಯ ಮಾಲೀಕರು ಹಾಗೂ ಕಾರ್ಮಿಕರ ಸಂಘದ ಮಹಾಸಭೆಯು ನಗರದ ಖಾಸಗಿ ಬಸ್ ನಿಲ್ದಾಣದ ಸ್ವಾಗತ್ ಸಭಾಂಗಣದಲ್ಲಿ ಯಶಸ್ವಿಯಾಗಿ ಜರುಗಿತು. ಸಭೆಯಲ್ಲಿ ಸಂಘದ ನೂತನ ಸಾಲಿನ ಆಡಳಿತ ಮಂಡಳಿಯನ್ನು ರಚಿಸಲಾಗಿದ್ದು, ನೂತನ ಅಧ್ಯಕ್ಷರಾಗಿ ಎನ್.ಸಿ.ವಿಜಯಕುಮಾರ್ ಅವರು ಸರ್ವಾನುಮತದಿಂದ ಆಯ್ಕೆಯಾದರು. ಇದೇ ಸಂದರ್ಭ ಮಾತನಾಡಿದ ನೂತನ ಅಧ್ಯಕ್ಷ ಎನ್.ಸಿ.ವಿಜಯಕುಮಾರ್ ಅವರು, “ಸಂಘದ ಸದಸ್ಯರು ಮತ್ತು ಕಾರ್ಮಿಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಸ್ಪರ ಚರ್ಚಿಸಿ ಬಗೆಹರಿಸಿಕೊಳ್ಳಲು ಹಾಗೂ ನಾವೆಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯಲು ಈ ಸಂಘವು ಉತ್ತಮ ವೇದಿಕೆಯಾಗಿದೆ. ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲಾಗುವುದು,” ಎಂದು ತಿಳಿಸಿದರು. ಮಹಾಸಭೆಯಲ್ಲಿ ಸಂಘದ ಪ್ರಮುಖ ಸದಸ್ಯರಾದ ದಾಮೋದರ ಆಚಾರ್ಯ, ಪ್ರಭಾಕರ್, ಸಿಜು, ಗಂಗಾಧರ್, ರವೀಂದ್ರ, ಶಶಿಧರ, ಮೋಹನ್, ಪ್ರವೀಣ್, ಹರಿದಾಸ ಸೇರಿದಂತೆ ಸಂಘದ ಪೀಠೋಪಕರಣ ಘಟಕದ ಹಲವಾರು ಮಾಲೀಕರು ಮತ್ತು ಕಾರ್ಮಿಕರು ಉಪಸ್ಥಿತರಿದ್ದರು. :: ನೂತನ ಪದಾಧಿಕಾರಿಗಳು :: ಅಧ್ಯಕ್ಷರಾಗಿ ಎನ್.ಸಿ. ವಿಜಯಕುಮಾರ್, ಉಪಾಧ್ಯಕ್ಷರಾಗಿ ಎನ್. ಸುರೇಶ್ ಕುಮಾರ್,…
ಮಡಿಕೇರಿ ಜು.14 NEWS DESK : ಕೊಡಗು ಪ್ರೆಸ್ ಕ್ಲಬ್ನ ಖಜಾಂಚಿಯಾಗಿ ಆರ್.ಆರ್.ಮನೋಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ನಿದೇರ್ಶಕರಾಗಿ ಪಿ.ವಿ.ಅಕ್ಷಯ್, ಟಿ.ಜೆ.ಕಿಶೋರ್ ಕುಮಾರ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






