ಮಡಿಕೇರಿ ಏ.27 NEWS DESK : ಮಡಿಕೇರಿ ನಗರದ ಗುರುಭ್ಯೋ ಮುನೀಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವ ಏ.29, 30 ಮತ್ತು ಮೇ 1 ರಂದು ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವಾಲಯ ಮತ್ತು ಉತ್ಸವ ಸಮಿತಿಯ ಪ್ರಮುಖರು ಮೂರು ದಿನಗಳ ಕಾಲ ನಡೆಯುವ ಗುರುಭ್ಯೋ ಮುನೀಶ್ವರ, ಚಾಮುಂಡೇಶ್ವರಿ ಹಾಗೂ ನಾಗ ದೇವರ ದೇವಾಲಯಗಳ ಲೋಕಾರ್ಪಣೆ ಮತ್ತು ವಿವಿಧ ಧಾರ್ಮಿಕ ವಿಧಿ ವಿಧಾನಗಳ ಕುರಿತು ಮಾಹಿತಿ ನೀಡಿದರು. ಏ.29 ರಂದು ಬೆಳಿಗ್ಗೆ 10-15ಕ್ಕೆ ಸಂಕಲ್ಪ, ಗುರು ಗಣಪತಿ ಪೂಜೆ, ಸ್ವಸ್ತಿ ಪುಣ್ಯವಾಚನ, ಸ್ಥಳ ಶುದ್ಧಿ, ರುದ್ರಪಾಠ ಪಠಣ, ಸುದರ್ಶನ ಪೂರ್ವಕ ಪ್ರಾಯಶ್ಚಿತ ತಿಲ ಹೋಮ ನಡೆಯಲಿದೆ. ಸಂಜೆ 6 ಗಂಟೆಗೆ ಬನ್ನಿ ಮಂಟಪದಿಂದ ಗುರುಭ್ಯೋ ಮುನೀಶ್ವರ ದೇವಾಲಯದವರೆಗೆ ಮಂಗಳವಾದ್ಯದೊಂದಿಗೆ ಕಳಶ ಮೆರವಣಿಗೆ ಸಾಗಲಿದೆ. 7-30 ಗಂಟೆಗೆ ಪ್ರಸನ್ನ ಪೂಜೆ ನೆರವೇರಲಿದೆ. ಏ.30 ರಂದು ಬೆಳಿಗ್ಗೆ 7 ಗಂಟೆಗೆ ಫಲನ್ಯಾಸದ ಪೂರ್ವಕ ಮಹಾಪ್ರಾರ್ಥನೆ, ಮಹಾಸಂಕಲ್ಪ, ಗುರುಗಣಪತಿ ಪೂಜೆ, ಸ್ವಸ್ತಿ ಪುಣ್ಯವಾಚನ, ಪ್ರಸಾದ ಶುದ್ಧಿ,…
ಲೇಖಕ: admin
ಮಡಿಕೇರಿ ಏ.27 NEWS DESK : ಕೊಡಗು ಪತ್ರಿಕಾ ಭವನ ಟ್ರಸ್ಟ್ನಿಂದ ಈ ಬಾರಿಯೂ 2026-27ನೇ ಸಾಲಿಗೆ ಸಂಬಂಧಿಸಿದಂತೆ ಶೈಕ್ಷಣಿಕ ನೆರವನ್ನು ವಿತರಿಸಲು ನಿರ್ಧರಿಸಲಾಗಿದೆ. ಶಿಕ್ಷಣಕ್ಕಾಗಿ ವಿತರಿಸಲಾಗುವ ಆರ್ಥಿಕ ನೆರವನ್ನು ಪ್ರಾಥಮಿಕ ಶಾಲೆಯಿಂದ ಪದವಿ ತರಗತಿಗಳವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಪತ್ರಕರ್ತರ ಮಕ್ಕಳು ಪಡೆಯಲು ಅರ್ಹರಾಗಿರುತ್ತಾರೆ. ನೆರವು ಪಡೆಯಲು ಇಚ್ಛಿಸುವವರು ಅಂಕಪಟ್ಟಿ, ಶಾಲೆಗೆ ಪಾವತಿಸಿದ ಶುಲ್ಕದ ನಕಲು ಪ್ರತಿಯೊಂದಿಗೆ ಅರ್ಜಿಯನ್ನು 16.05.2026 ರ ಶನಿವಾರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬಹುದು. ಅರ್ಜಿಗಳನ್ನು ‘ಮ್ಯಾನೇಜಿಂಗ್ ಟ್ರಸ್ಟಿ, ಕೊಡಗು ಪತ್ರಿಕಾ ಭವನ ಟ್ರಸ್ಟ್(ರಿ), ಪತ್ರಿಕಾ ಭವನ, ಕೈಗಾರಿಕಾ ಬಡಾವಣೆ.ಮಡಿಕೇರಿ-571201’ ಈ ವಿಳಾಸಕ್ಕೆ ಕಳುಹಿಸಿಕೊಡಬೇಕು. ಈ ಶೈಕ್ಷಣಿಕ ನೆರವನ್ನು ಪಡೆಯಲು ಇಚ್ಛಿಸುವ ಕೊಡಗು ಜಿಲ್ಲೆಯ ಪತ್ರಕರ್ತರು ನಿಗದಿತ ದಿನಾಂಕದೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸುವಂತೆ ಎಸ್.ಜಿ.ಉಮೇಶ್, ಪ್ರಧಾನ ಕಾರ್ಯದರ್ಶಿ. ಕೊಡಗು ಪತ್ರಿಕಾ ಭವನ ಟ್ರಸ್ಟ್, ಮಡಿಕೇರಿ ಇವರು ಕೋರಿದ್ದಾರೆ.
ಮಡಿಕೇರಿ ಏ.27 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.28ರ ಪುರುಷರ ಕ್ವಾರ್ಟರ್ ಫೈನಲ್ಸ್ ಪಂದ್ಯಗಳು. *ಮೈದಾನ 1* ಪುರುಷರ ಕ್ವಾರ್ಟರ್ ಫೈನಲ್ಸ್ (ಲಾಲು ಮುದ್ದಯ್ಯ ಮೈದಾನ) ಬೆಳಿಗ್ಗೆ 9 ಗಂಟೆಗೆ ಚೆಕ್ಕೇರ ಮತ್ತು ಮಲ್ಲಜ್ಜಿರ, 10.30ಕ್ಕೆ ಮೋಟನಾಳಿರ ಮತ್ತು ಪಂದ್ಯಂಡ, ಮಧ್ಯಾಹ್ನ 12 ಗಂಟೆಗೆ ಮಾಳೇಟಿರ (ಕೆದಮುಳ್ಳೂರು) ಮತ್ತು ಅಳಮೇಂಗಡ ಹಾಗೂ 1.30 ಕ್ಕೆ ನೆರವಂಡ ಮತ್ತು ಪಾರುವಂಡ
ಮಡಿಕೇರಿ ಏ.27 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.27 ರಂದು ಪುರುಷರ ಪ್ರೀ-ಕ್ವಾರ್ಟರ್ ಫೈನಲ್ಸ್ ನಲ್ಲಿ ಗೆಲುವು ಸಾಧಿಸಿದ ತಂಡಗಳು *ಮೈದಾನ 1* (ಲಾಲು ಮುದ್ದಯ್ಯ ಮೈದಾನ) ಮಂಡುವಂಡ ಮತ್ತು ಮಲ್ಲಜ್ಜಿರ ತಂಡಗಳ ನಡುವಿನ ಪಂದ್ಯದಲ್ಲಿ ಮಲ್ಲಜ್ಜಿರ ತಂಡಕ್ಕೆ 12 ರನ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಲ್ಲಜ್ಜಿರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 63 ರನ್ ಗಳನ್ನು ಸೇರಿಸಿತು. ಮಂಡುವಂಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 51 ರನ್ ಗಳನ್ನು ಗಳಿಸಿ ಸೋಲು ಕಂಡಿತು. ಮಲ್ಲಜ್ಜಿರ ರೋಷನ್ 48 ರನ್ ಗಳನ್ನು ಸೇರಿಸಿ ತಂಡದ ಗೆಲುವಿಗೆ ಸಹಕಾರಿಯಾದರು. ಮಂಡುವಂಡ ದುಷ್ಯಂತ್ 17 ರನ್ ಗಳನ್ನು ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಮಲ್ಲಜ್ಜಿರ ಪರ ಜಗನ್ 3 ವಿಕೆಟ್ ಪಡೆದರು. ಬೊಟ್ಟಂಗಡ…
ಮಡಿಕೇರಿ ಏ.27 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.27 ರಂದು ಮಹಿಳೆಯರ ಕ್ವಾರ್ಟರ್ ಫೈನಲ್ಸ್ ನಲ್ಲಿ ಗೆಲುವು ಸಾಧಿಸಿದ ತಂಡಗಳು *ಮೈದಾನ 1* (ಲಾಲು ಮುದ್ದಯ್ಯ ಮೈದಾನ) ಮುಕ್ಕಾಟಿರ (ಬೆಳ್ಳೂರು – ಹರಿಹರ) ಮತ್ತು ಪಾಸುರ ನಡುವಿನ ಪಂದ್ಯದಲ್ಲಿ ಮುಕ್ಕಾಟಿರ ತಂಡಕ್ಕೆ 4 ರನ್ ಗಳ ಜಯ ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮುಕ್ಕಾಟಿರ 5 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 43 ರನ್ ಗಳನ್ನು ಸೇರಿಸಿತು. ಪಾಸುರ 5 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 39 ರನ್ ಗಳನ್ನು ಗಳಿಸಿ ಸೋಲು ಕಂಡಿತು. ಮುಕ್ಕಾಟಿರ ಅಂಜನಾ 17 ರನ್ ಗಳನ್ನು ಗಳಿಸಿದರು. ಪಾಸುರ ಅಕ್ಷಿತಾ 22 ರನ್ ಗಳನ್ನು ಸೇರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಓಡಿಯಂಡ ಮತ್ತು ಚೆಕ್ಕೇರ ನಡುವಿನ ಹಣಾಹಣಿಯಲ್ಲಿ ಚೆಕ್ಕೇರ 5 ರನ್…
ಮಡಿಕೇರಿ NEWS DESK ಏ.27 : ಕರ್ನಾಟಕ ಕುಂಗ್ ಫೂ ಸಂಸ್ಥೆಯ ವತಿಯಿಂದ ಸೋಮವಾರಪೇಟೆಯಲ್ಲಿ ಕುಂಗ್ ಫೂ ಕಲರ್ ಬೆಲ್ಟ್ ಪರೀಕ್ಷೆ ನಡೆಯಿತು. ಚನ್ನಬಸಪ್ಪ ಹಾಲ್ ನಲ್ಲಿ ನಡೆದ ಪರೀಕ್ಷೆಯಲ್ಲಿ 30 ವಿದ್ಯಾರ್ಥಿಗಳಿಗೆ ಕಲರ್ ಬೆಲ್ಟ್ ವಿತರಿಸಲಾಯಿತು. ಕರ್ನಾಟಕ ಕುಂಗ್ ಫೂ ಸಂಸ್ಥೆಯ ಅಧ್ಯಕ್ಷರು ಹಾಗೂ ರಾಷ್ಟ್ರೀಯ ತರಬೇತುದಾರ ಎನ್.ಸಿ.ಸುದರ್ಶನ್ ಅವರ ನೇತೃತ್ವದಲ್ಲಿ ಪರೀಕ್ಷಕ ಚಂದ್ರು ಡಿ. ಪರೀಕ್ಷೆ ನಡೆಸಿಕೊಟ್ಟರು.
ಮಡಿಕೇರಿ NEWS DESK ಏ.26 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಪುರುಷರ ಪ್ರೀ-ಕ್ವಾರ್ಟರ್ ಫೈನಲ್ಸ್ ನಲ್ಲಿ ಗೆಲುವು ಸಾಧಿಸಿದ ತಂಡಗಳು *ಮೈದಾನ 1* (ಲಾಲು ಮುದ್ದಯ್ಯ ಮೈದಾನ)* ಮಾಳೇಟಿರ (ಕೆದಮುಳ್ಳೂರು) ಮತ್ತು ಕರಿನೆರವಂಡ ತಂಡಗಳ ನಡುವಿನ ಪಂದ್ಯದಲ್ಲಿ ಮಾಳೇಟಿರ 38 ರನ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಾಳೇಟಿರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 97 ರನ್ ಗಳನ್ನು ಸೇರಿಸಿತು. ಕರಿನೆರವಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 59 ರನ್ ಗಳನ್ನು ಗಳಿಸಿ ಸೋಲು ಕಂಡಿತು. ಮಾಳೇಟಿರ ಪರ ನವೀನ್ ಹಾಗೂ ಅನ್ಶುಲ್ ತಲಾ 2 ವಿಕೆಟ್ ಪಡೆದರು. ರಾಣೆ 50 ರನ್ ಗಳನ್ನು ಗಳಿಸಿದರು. ಕರಿನೆರವಂಡ ಪರ 2 ವಿಕೆಟ್ ಪಡೆದು 14 ರನ್ ಗಳನ್ನು ಸೇರಿಸಿದ ಗಗನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.…
ಮಡಿಕೇರಿ NEWS DESK ಏ.26 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.27ರ ಪುರುಷರ ಪ್ರಿ ಕ್ವಾರ್ಟರ್ ಮತ್ತು ಮಹಿಳೆಯರ ಕ್ವಾರ್ಟರ್ ಫೈನಲ್ಸ್ ಪಂದ್ಯಗಳು. *ಮೈದಾನ 1* ಪುರುಷರ ಪ್ರೀ ಕ್ವಾರ್ಟರ್ ಫೈನಲ್ಸ್ (ಲಾಲು ಮುದ್ದಯ್ಯ ಮೈದಾನ) ಬೆಳಿಗ್ಗೆ 9 ಗಂಟೆಗೆ ಮಂಡುವoಡ ಮತ್ತು ಮಲ್ಲಜ್ಜಿರ, 10ಕ್ಕೆ ಬೊಟ್ಟಂಗಡ ಮತ್ತು ಚೆಕ್ಕೇರ, 11ಕ್ಕೆ ಬೊಳಕಾರಂಡ (ಕೊಣಂಜಗೇರಿ) ಮತ್ತು ಮೋಟನಾಳಿರ ಹಾಗೂ 12 ಗಂಟೆಗೆ ಕೋಳೆರ ಮತ್ತು ಪಂದ್ಯoಡ *ಮಹಿಳೆಯರ ಕ್ವಾರ್ಟರ್ ಫೈನಲ್ಸ್* ಮಧ್ಯಾಹ್ನ 1 ಗಂಟೆಗೆ ಮುಕ್ಕಾಟಿರ (ಹರಿಹರ ) ಮತ್ತು ಪಾಸುರ ಹಾಗೂ 2ಕ್ಕೆ ಓಡಿಯಂಡ ಮತ್ತು ಚೆಕ್ಕೇರ
ಮಡಿಕೇರಿ NEWS DESK ಏ.26 : ರಾಜ್ಯ ಕಾಂಗ್ರೆಸ್ ಸರಕಾರ ಸ್ಥಳೀಯ ಸಂಸ್ಥೆಗಳಾದ ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಚುನಾವಣೆಯನ್ನು ನಡೆಸದೆ ನಿರ್ಲಕ್ಷö್ಯ ವಹಿಸಿರುವುದನ್ನು ಖಂಡಿಸಿ ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಏ.27 ರಂದು ಬೆಳಿಗ್ಗೆ 10.30 ಗಂಟೆಗೆ ಸೋಮವಾರಪೇಟೆ ತಾ.ಪಂ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ ಎಂದು ಸೋಮವಾರಪೇಟೆ ಮಂಡಲ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯ ಸರಕಾರ ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಗೆ ಗೌರವ ನೀಡದೆ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಸ್ಥಳೀಯ ಸಂಸ್ಥೆ ಚುನಾವಣೆಯನ್ನು ನಡೆಸಿದರೆ ಸರಕಾರದ ದುರಾಡಳಿತದ ವಿರುದ್ಧ ಜನ ಮತ ಹಾಕುವುದರಿಂದ ಕಾಂಗ್ರೆಸ್ ಸೋಲುವ ಭೀತಿಯನ್ನು ಎದುರಿಸುತ್ತಿದೆ. ಇದೇ ಕಾರಣದಿಂದ ಚುನಾವಣೆ ನಡೆಸದೆ ಕಾಲಹರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ತಕ್ಷಣ ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಚುನಾವಣೆಯನ್ನು ನಡೆಸಬೇಕೆಂದು ಆಗ್ರಹಿಸಿ ತಾ.ಪಂ ಕಾರ್ಯನಿರ್ವಹಣಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಲಾಗುವುದು. ಇದೇ ಸಂದರ್ಭ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು “ಭತೋತ್ಪಾದಕ”…
ಮಡಿಕೇರಿ NEWS DESK ಏ.26 : ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಮೀಸಲಾತಿ ಕುರಿತು ಸಹಿ ಸಂಗ್ರಹ ಕಾರ್ಯಕ್ರಮ ಏ.27 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ ಎಂದು ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಪುಷ್ಪಲತಾ ಜಿ.ಆರ್ ತಿಳಿಸಿದ್ದಾರೆ. ಮಹಿಳೆಯರಿಗೆ ಶೀಘ್ರ ಶೇ.33 ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲು ಸಹಿ ಸಂಗ್ರಹ ಅಭಿಯಾನ ನಡೆಸಲಾಗುತ್ತಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.






