ಲೇಖಕ: admin

ಮಡಿಕೇರಿ ಜೂ.8 NEWS DESK : ಸಮಾಜದ ಕಣ್ಣು ಹಾಗೂ ಕಿವಿಯಾಗಿರುವ ಪತ್ರಕರ್ತರು, ಸತ್ಯವನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಸಮಾಜ ಸೇವಕ ಹಾಗೂ ಉದ್ಯಮಿ, ಲೀಡಿಂಗ್ ಎಡ್ಜ್ ಅಡ್ವಟೈಸಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ನಿರ್ದೇಶಕ ಎಡಿಕೇರಿ ಪ್ರಸನ್ನ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಭಾನುವಾರ ನಡೆದ ಕೊಡಗು ಪ್ರೆಸ್‍ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ದಿನವಿಡೀ ಸುದ್ದಿಯ ಹಿಂದಿರುವ ಪತ್ರಕರ್ತರು ವರ್ಷಕ್ಕೊಮ್ಮೆ ಸಂಭ್ರಮದಿಂದ ಕಳೆಯುವುದು ಶ್ಲಾಘನೀಯ ಎಂದ ಅವರು, ಸಮಾಜದ ಕಣ್ಣು ಹಾಗೂ ಕಿವಿಯಾಗಿರುವ ಪತ್ರಕರ್ತರು, ಸತ್ಯವನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತಾರೆ. ಜತೆಗೆ ಮಾಧ್ಯಮ ಸ್ಪಂದನದ ಮೂಲಕ ಸಮಾಜದ ಕಣ್ಣೀರು ಒರೆಸುವ ಪತ್ರಕರ್ತರ ಸೇವೆ ಶ್ಲಾಘನೀಯ ಎಂದು ಪ್ರಸನ್ನ ಹೇಳಿದರು. ನಾವು ಮಾಡುವ ಸಮಾಜ ಸೇವೆಯನ್ನು ಯಾವುದೇ ಫಲಾಪೇಕ್ಷೆಯಿಲ್ಲದೆ ನಿರಂತರ ಮಾಡುತ್ತಲೇ ಇರಬೇಕು ಎಂದ ಅವರು, ನಾವು ಮಾಡುವ ಸೇವೆಯನ್ನು ದೇವರು ಗಮನಿಸುತ್ತಲೇ ಇರುತ್ತಾನೆ. ಒಂದಲ್ಲ ಒಂದು ದಿನ ನಮ್ಮ ಸೇವೆಗೆ ಪ್ರತಿಫಲ ಸಿಕ್ಕೇ…

Read More

ಮಡಿಕೇರಿ ಜೂ.8 NEWS DESK : ಶಿಕ್ಷಣದೊಂದಿಗೆ ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆ ಬೆಳೆಸಿಕೊಂಡು ಸಾಹಿತ್ಯಾಸಕ್ತರಾಗಬೇಕು ಎಂದು ಭಾರತ ಸರ್ಕಾರದ ದಕ್ಷಿಣ ವಲಯ ಸಾಂಸ್ಕೃತಿಕ ನಿರ್ದೇಶಕರಾದ ಕೆ.ಕೆ.ಗೋಪಾಲಕೃಷ್ಣ ಅವರು ಕರೆ ನೀಡಿದರು. ಕೇಂದ್ರ ಸಂಸ್ಕೃತಿ ಸಚಿವಾಲಯ, ದಕ್ಷಿಣ ವಲಯ ಸಾಂಸ್ಕøತಿಕ ಕೇಂದ್ರ, ತಂಜಾವೂರು ಹಾಗೂ ಕುಶಾಲನಗರ ದಕ್ಷಿಣ ಸಿರಿ ಸ್ನೇಹ ಬಳಗದ ವತಿಯಿಂದ ಕೊಡ್ಲಿಪೇಟೆಯ ಎಸ್‍ಜಿಎಸ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ‘ಮಾನ್ಸೂನ್ ಸಾಂಸ್ಕøತಿಕ ಉತ್ಸವ’ ಉದ್ಘಾಟಿಸಿ ಅವರು ಮಾತನಾಡಿದರು. ಭಾರತೀಯ ಸಂಸ್ಕೃತಿ ಸನಾತನ ಸಂಸ್ಕೃತಿ ಹೊಂದಿದ್ದು, ಸಮಾನತೆ, ಭಾತೃತ್ವ, ಏಕತೆ ಹೊಂದಿದೆ. ವಿಶ್ವದಲ್ಲಿಯೇ ಭಾರತೀಯ ಸಂಸ್ಕøತಿಗೆ ಹೆಚ್ಚಿನ ಸ್ಥಾನಮಾನ ಇದೆ ಎಂದರು. ಭಾರತ ಸರ್ಕಾರದ ದಕ್ಷಿಣ ವಲಯ ಸಾಂಸ್ಕøತಿಕ ಕೇಂದ್ರ ತಂಜಾವೂರಿನಲ್ಲಿ ಕೇಂದ್ರ ಕಚೇರಿ ಹೊಂದಿದ್ದು, ದಕ್ಷಿಣ ರಾಜ್ಯಗಳಲ್ಲಿ ಆಯಾಯ ಜಿಲ್ಲೆ, ರಾಜ್ಯಕ್ಕೆ ಸಂಬಂಧಿಸಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದೆ ಎಂದು ಹೇಳಿದರು. ಅದೇ ರೀತಿ ಕರ್ನಾಟಕ ರಾಜ್ಯದ ಕೊಡಗು ಜಿಲ್ಲೆಯ ಕಲಾವಿದರುಗಳಿಗೆ ಹಾಗೂ ಅಕ್ಕಪಕ್ಕದ ಜಿಲ್ಲೆಯ ಕಲಾವಿದರು…

Read More

ಮಡಿಕೇರಿ ಜೂ.8 NEWS DESK : ಎಚ್‍ಪಿವಿ ವೈರಸ್ ಅಂದರೆ ಹ್ಯೂಮನ್ ಪ್ಯಾಪಿಲೋಮ ವೈರಸ್ ಪ್ಯಾಪಿಲೋಮವಿರಿಡೆ ಎಂಬ ವೈರಸ್ ಜಾತಿಗೆ ಸೇರಿದ್ದು, ಇದರಲ್ಲಿ ಒಟ್ಟು 200 ಕ್ಕೂ ಹೆಚ್ಚು ಪ್ರಕಾರಗಳು ಇರುತ್ತದೆ. ಎಚ್‍ಪಿವಿ 16 ಮತ್ತು ಎಚ್‍ಪಿವಿ 18 ವೈರಸ್ ಇದು ಗರ್ಭಕಂಠದ ಕ್ಯಾನ್ಸರ್‍ಗೆ ಮೂಲ ಕಾರಣವಾಗಿರುತ್ತದೆ. ಇದನ್ನು 2030 ಒಳಗೆ ನಿರ್ಮೂಲನೆ ಮಾಡಲು ಜಾಗತಿಕ ಕಾರ್ಯಕ್ರಮ ರೂಪಿಸಲಾಗಿದೆ. ಇದು ಸುಮಾರು 35 ವರ್ಷದಿಂದ 45 ವರ್ಷದ ಒಳಗಿನವರಲ್ಲಿ ಹೆಚ್ಚು ಕಂಡು ಬರುತ್ತದೆ. ಭಾರತದಲ್ಲಿ ಮಹಿಳೆಯರಲ್ಲಿ ಸಂಭವಿಸುವ ಕ್ಯಾನ್ಸರ್ ಪ್ರಕರಣಗಳಲ್ಲಿ ಗರ್ಭಕಂಠ ಕ್ಯಾನ್ಸರ್ ಎರಡನೇ ಪ್ರಮುಖ ಕ್ಯಾನ್ಸರ್ ಆಗಿರುತ್ತದೆ. ವಯಸ್ಸಿನ ಪ್ರಮಾಣೀಕೃತ ಅಂದಾಜುಗಳು ಗರ್ಭಕಂಠದ ಕ್ಯಾನ್ಸರ್(2022) ಇವುಗಳು: ಘಟನೆ 1 ಲಕ್ಷ ಮಹಿಳೆಯರಿಗೆ ವರ್ಷಕ್ಕೆ 11.6. ಮರಣ ಪ್ರಮಾಣ 1 ಲಕ್ಷ ಮಹಿಳೆಯರಿಗೆ ವರ್ಷಕ್ಕೆ 5.1. ಬಾರತ ದೇಶದಲ್ಲಿ 2022 ರಲ್ಲಿ, ಒಟ್ಟು 79,103 ಹೊಸ ಪ್ರಕರಣಗಳು ಮತ್ತು 34,805 ಸಾವುಗಳು ಗರ್ಭಕಂಠದ ಕ್ಯಾನ್ಸರ್ ನಿಂದ ಸಂಭವಿಸಿವೆ ಎಂದು ವರದಿಯಾಗಿದೆ. ಎಚ್‍ಪಿವಿ…

Read More

ವಿರಾಜಪೇಟೆ ಜೂ.8 NEWS DESK : ಅಮೇರಿಕಾದ ಟೆಕ್ಸಾಸ್ ಫ್ರಿಸ್ಕೊ ಹಾಕಿ ಅಸೋಸಿಯೇಷನ್‍ನ ಸ್ಪರ್ಧಾತ್ಮಕ ತಂಡಗಳಿಗೆ ಕೊಡಗಿನ ಇಬ್ಬರು ಸಹೋದರರು ಆಯ್ಕೆಯಾಗುವ ಮೂಲಕ ಅಮೇರಿಕನ್ ಐಸ್ ಹಾಕಿಯಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಮೇಯನ್ ಮಾಚಯ್ಯ ಮೇರಿಯಂಡ(15) ಅವರನ್ನು ವರ್ಸಿಟಿ ತಂಡಕ್ಕೆ ಆಯ್ಕೆ ಮಾಡಲಾಗಿದ್ದು, ಅವರ ಕಿರಿಯ ಸಹೋದರ ಕ್ರಿಶ್ ಕಾರಿಯಪ್ಪ ಮೇರಿಯಂಡ (13). 2026ರ ಬೇಸಿಗೆ ಋತುವಿಗಾಗಿ ಜೂನಿಯರ್ ವಾರ್ಸಿಟಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇವರ ಈ ಸಾಧನೆಯು ಕರ್ನಾಟಕದ ಕುಟುಂಬಸ್ಥರು, ಸ್ನೇಹಿತರು ಮತ್ತು ಹಿತೈಷಿಗಳಲ್ಲಿ ಹೆಮ್ಮೆ ತಂದಿದೆ. ಐಸ್ ಹಾಕಿ ಒಂದು ಅಸಮಾನ್ಯ ಕ್ರೀಡೆಯಾಗಿದ್ದು, ಕೊಡಗಿನ ಈ ಸಹೋದರರು ತಮ್ಮ ಪರಿಶ್ರಮ ಹಾಗೂ ತರಬೇತಿಯಿಂದಾಗಿ ಉತ್ತರ ಅಮೇರಿಕಾದಲ್ಲಿ ಬಹು ಬೇಡಿಕೆ ಇರುವ ತಂಡಕ್ಕೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಫ್ರಿಸ್ಕೊದ ಇಂಡಿಪೆಂಡೆನ್ಸ್ ಸ್ಕೂಲ್‍ನಲ್ಲಿ 10ನೇ ತರಗತಿಯ ವಿದ್ಯಾರ್ಥಿಯಾಗಿರುವ ಮೇಯನ್ ಅಮೇರಿಕನ್ ಐಸ್ ಹಾಕಿಯಲ್ಲಿ ಉತ್ತಮ ಪ್ರದರ್ಶನದ ನಂತರ ವಾರ್ಸಿಟಿ ತಂಡಕ್ಕೆ ಬಡ್ತಿ ಪಡೆದಿದ್ದಾರೆ. ಇತ್ತೀಚೆಗೆ ನೆಲ್ಸನ್ ಮಿಡಲ್ ಸ್ಕೂಲ್‍ನಲ್ಲಿ…

Read More

ವಿರಾಜಪೇಟೆ ಜೂ.8 NEWS DESK : ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ವತಿಯಿಂದ ಬಸವ ಜಯಂತಿ ಅಂಗವಾಗಿ ಬಸವ ಶ್ರೀ ಕಾಯಕ ಶ್ರೇಷ್ಠ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಸಾಂಸ್ಕೃತಿಕ ಉತ್ಸವ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆಯಿತು. ಚಲನಚಿತ್ರ ನಟರಾದ ಅನಿರುದ್ದ ಜತಕರ್, ಪೋಲಿಸ್ ಮಹಾನಿರ್ದೇಶಕರು, ಮತ್ತು ಆಯುಕ್ತರಾಗಿದ್ದ ನಿವೃತ್ತ ಶಂಕರ ಬಿದರಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ದಾವಣಗೆರೆಯ ಪಾಂಡೋಮಟ್ಟಿ ವಿರಕ್ತಮಠದ ಗುರುಬಸವ ಸ್ಮಾಮಿಜಿಯವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಾವಿತ್ರಿಬಾಯಿ ಫುಲೆ ಸಂಘಟನೆಯ ರಾಜ್ರ್ಯಾಧ್ಯಕ್ಷ ಧಾರವಾಡದ ಲತಾ ಮುಳ್ಳುರು, ಸಮಾಜ ಸೇವಕರಾದ ಪರಮಾನಂದ ಬಸಪ್ಪ ಸನ್ನಟ್ಟಿ, ಸುಧಾಕರ್ ಎಸ್ ಜಡಗಿ, ಸಾದಿಕ್, ಷರೀಪ್, ಆರೀಫ ಬೀರೂರು, ಇನ್ನೂ ಅನೇಕ ಗಣ್ಯರು ಭಾಗವಹಿಸಿದ್ದರು. ನಾಟ್ಯ ಮಯೂರಿ ನೃತ್ಯ ಟ್ರಷ್ಟಿನ ಸಂಸ್ಥಾಪಕರಾದ ವಿದುಷಿ ಪ್ರೇಮಾಂಜಲಿ ಆಚಾರ್ಯ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ರಾಜ್ಯ ವಿವಿಧ ಕಡೆಗಳಿಂದ ಆಗಮಿಸಿದ ನೃತ್ಯ ಸಂಸ್ಥೆಗಳ ವಿದ್ಯಾರ್ಥಿಗಳು ಉತ್ತಮ ನೃತ್ಯ ಪ್ರದರ್ಶನ ನೀಡಿದರು.…

Read More

ಮಡಿಕೇರಿ ಜೂ.8 NEWS DESK : ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಜೂ.13 ರಂದು ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮುದಾಯದ ವಧು- ವರರ ಸಮಾವೇಶ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಘದ ಅಧ್ಯಕ್ಷ ಚೊಕ್ಕಾಡಿ ಎನ್.ಅಪ್ಪಯ್ಯ ಅವರು ಶನಿವಾರ ಬೆಳಿಗ್ಗೆ 10 ಗಂಟೆಗೆ ಮಡಿಕೇರಿಯ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಸಮಾವೇಶ ನಡೆಯಲಿದ್ದು, 9.30ಕ್ಕೆ ವಧು- ವರರ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದರು. ನೋಂದಣಿ ಶುಲ್ಕ ರೂ.500 ಪಾವತಿಸಬೇಕು, ವಧು- ವರರು ಕಡ್ಡಾಯವಾಗಿ ಭಾಗವಹಿಸಬೇಕು, ವಧುವಿಗೆ 18 ಹಾಗೂ ವರನಿಗೆ 21 ವರ್ಷವಾಗಿರಬೇಕು, ಪೋಸ್ಟ್ ಕಾರ್ಡ್ ಅಳತೆಯ ಫೋಟೋ, ಜಾತಕ, ಆಧಾರ್ ಕಾರ್ಡ್, ವಿದ್ಯಾರ್ಹತೆ, ಉದ್ಯೋಗ ಮತ್ತಿತರ ಮಾಹಿತಿ ನೀಡಬೇಕು. ಈ ಸಮಾವೇಶದಲ್ಲಿ ವಿಶೇಷ ಚೇತನರು, ವಿದುರ, ವಿಧವೆಯರು, ಮರು ವಿವಾಹ ಬಯಸುವವರು, ವಿಚ್ಛೇದಿತರು ಭಾಗವಹಿಸಬಹುದು. ವಿದೇಶಗಳಲ್ಲಿ ಅಥವಾ ಹೊರ ರಾಜ್ಯಗಳಲ್ಲಿ ನೆಲೆಸಿರುವ ಜನಾಂಗದ ಬಂಧುಗಳು ಪಾಲ್ಗೊಳ್ಳಬಹುದು ಎಂದು ತಿಳಿಸಿದರು. ಹೆಚ್ಚಿನ…

Read More

ಮಡಿಕೇರಿ ಜೂ.8 NEWS DESK : ಕೊಡಗು ಜಿಲ್ಲಾ ವೀರಶೈವ ಲಿಂಗಾಯತ ಸಮಾಜ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮತ್ತು ಯುವ ಘಟಕದ ಸಂಯುಕ್ತಾಶ್ರಯದಲ್ಲಿ ಬಸವ ಜಯಂತಿ, ಸಿದ್ಧಗಂಗಾ ಮಠದ ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳ ಜಯಂತಿ, ಜಗದ್ಗುರು ರೇಣುಕಾಚಾರ್ಯ ಜಯಂತಿ 250 ವರ್ಷ ಕೊಡಗನ್ನು ಆಳಿದ ಹಾಲೇರಿ ಅರಸರ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಹೆಮ್ಮನೆ ಪುಟ್ಟಬಸಪ್ಪ(ಕಲ್ಯಾಣಸ್ವಾಮಿ) ಅವರ ಸಂಸ್ಕರಣೋತ್ಸವ ಕಾರ್ಯಕ್ರಮ ಜೂ.13 ರಂದು ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಪೆÇೀಕ್ಷೇತ್ರ ಮನೆಹಳ್ಳಿ ಮಠದ ಮಹಾಂತ ಶಿವಲಿಂಗ ಸ್ವಾಮಿಗಳು ಶನಿವಾರ ಶನಿವಾರಸಂತೆಯ ಗುಡುಗಳಲೆ ಜಯದೇವ ಜಾತ್ರಾ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಬೆಳಿಗ್ಗೆ 8 ಗಂಟೆಗೆ ಮದ್ಯಪೇಟೆ ವಿಶ್ವೇಶ್ವರ ದೇವಾಲಯದಿಂದ ಗುಡುಗಳಲೆ ಜಾತ್ರಾ ಮೈದಾನದವರೆಗೆ ಶ್ರೀ ರೇಣುಕಾಚಾರ್ಯರ, ಜಗಜ್ಯೋತಿ ಬಸವೇಶ್ವರರ, ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳವರ, ಮನೆಹಳ್ಳಿ ಮಠದ ಅನಘ ನಿರಂಜನ ಶ್ರೀ ಗುರು ಸಿದ್ಧವೀರೇಶ್ವರ ಸ್ವಾಮಿಗಳ ಪ್ರಸ್ತುತ ಕೊಡಗಿನ ವೀರಶೈವ ಲಿಂಗಾಯತ ಮಠಗಳ…

Read More

ಮಡಿಕೇರಿ ಜೂ.8 NEWS DESK : ಇಂದಿನ ಆಧುನಿಕ ಯುಗದಲ್ಲಿ ಮಕ್ಕಳ ಮುಗ್ಧ ಮನಸ್ಸುಗಳಲ್ಲಿ ಭಾರತೀಯ ಸಂಸ್ಕಾರ, ಉತ್ತಮ ನೈತಿಕ ಮೌಲ್ಯಗಳು ಹಾಗೂ ದೇಶಭಕ್ತಿಯನ್ನು ಬಿತ್ತುವ ಸದುದ್ದೇಶದಿಂದ ಮಡಿಕೇರಿ ನಗರದ ಸಮರ್ಥ ವಸತಿಯಲ್ಲಿ ನೂತನ ‘ಬೃಂದಾವನ ಬಾಲಗೋಕುಲ’ ಶಾಖೆ ಉದ್ಘಾಟಿಸಲಾಯಿತು. ಸಮಾರಂಭಕ್ಕೆ ಪ್ರಮುಖರಾದ ಮಂಜುನಾಥ್ ಜಿ ಅವರು ಮಾರ್ಗದರ್ಶನ ನೀಡಿ ಶುಭ ಹಾರೈಸಿದರು. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಇಂತಹ ಸಂಸ್ಕಾರ ಕೇಂದ್ರಗಳು ಇಂದಿನ ಅಗತ್ಯವಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು. ಸಂಭ್ರಮದ ಉದ್ಘಾಟನಾ ಕಾರ್ಯಕ್ರಮ: ಸಮಾರಂಭದಲ್ಲಿ ಪುಟಾಣಿಗಳಿಂದ ಶ್ಲೋಕ ಮತ್ತು ಕಥಾ ಸಮಯದ ಕಾರ್ಯಕ್ರಮಗಳು ಜರುಗಿದವು. ಗೌರಿ ಅವರ ನಿತ್ಯ ಶ್ಲೋಕ ಪಠಣದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ, ಶ್ರುತಿ ಅವರು ಏಕಲವ್ಯನ ಕಥೆಯನ್ನು ರೋಚಕವಾಗಿ ಪ್ರಸ್ತುತಪಡಿಸಿದರು. ಮೇಘ ಅವರು ಭಗವದ್ಗೀತೆ ಪಠಣ ಮಾಡಿದರು ಹಾಗೂ ಸುಜಾತ ಅವರ ನೇತೃತ್ವದಲ್ಲಿ ಹನುಮಾನ್ ಚಾಲೀಸ ಭಜನೆ ನಡೆಯಿತು. ದಿನೇಶಣ್ಣ ಅವರ ನೇತೃತ್ವದಲ್ಲಿ ಮಕ್ಕಳಿಗೆ ವಿವಿಧ ಸಾಂಪ್ರದಾಯಿಕ ಆಟಗಳನ್ನು ಆಡಿಸಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ರಾಧಿಕಾ ನೆರವೇರಿಸಿದರು. ಪ್ರತಿ ಶನಿವಾರ ಉಚಿತ…

Read More

ಮಡಿಕೇರಿ NEWS DESK ಜೂ.8 : ರಾಜ್ಯದ ಸರಕಾರಿ ಶಾಲೆಗಳಲ್ಲಿ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದೆ. ಅನೇಕ ಸಮಸ್ಯೆಗಳು ಮತ್ತು ಕೊರತೆಗಳು ಶಾಲೆಗಳನ್ನು ಕಾಡುತ್ತಿದೆ. ನೂತನ ಮುಖ್ಯಮಂತ್ರಿಗಳು ಸಂಭ್ರಮಾಚರಣೆಯನ್ನು ಬಿಟ್ಟು ಸರಕಾರಿ ಶಾಲೆಗಳಿಗೆ ಭೇಟಿ ನೀಡಿ ಸಮಸ್ಯೆಗಳಿಗೆ ಪರಿಹಾರ ಸೂಚಿಸಲಿ ಎಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿದ್ದು, ಶಾಲಾ ಕೊಠಡಿ, ಪೀಠೋಪಕರಣಗಳು, ಶೌಚಾಲಯ ಸಮರ್ಪಕವಾಗಿಲ್ಲ. ನಲಿ-ಕಲಿ ಪದ್ಧತಿಯಿಂದ ದ್ವಿಭಾಷಾ ತರಗತಿಗಳ ವ್ಯವಸ್ಥೆಗೆ ಬದಲಾವಣೆ ಮಾಡಿರುವುದಾಗಿ ದೊಡ್ಡ ಪ್ರಮಾಣದಲ್ಲಿ ಪ್ರಚಾರ ಮಾಡಿಕೊಂಡಿದ್ದರೂ, ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಸರಕಾರಿ ಶಾಲೆಗಳು ದಾನಿಗಳಿಂದ ನೆರವು ಕೇಳುವ ಪರಿಸ್ಥಿತಿ ನಿರ್ಮಾಣವಾಗಿರುವುದು ದುರಂತ. ಕೆಲವು ಶಾಲೆಗಳಲ್ಲಿ ಬಿಸಿಯೂಟಕ್ಕೆ ಅಡುಗೆ ಅನಿಲದ ಕೊರತೆಯೂ ಎದುರಾಗಿರುವ ಮಾಹಿತಿ ಲಭಿಸಿದೆ. ರಾಜ್ಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಗೌರವಯುತ ಕಲಿಕಾ ವಾತಾವರಣ ಒದಗಿಸುವುದು ಸರಕಾರದ ಜವಾಬ್ದಾರಿಯಾಗಿದೆ.…

Read More

ಮಡಿಕೇರಿ NEWS DESK ಜೂ.8 : ಪ್ರತೀಶ್ ಪೂವಯ್ಯ ಕಾಸ್ಟಿಂಗ್ ಏಜೆನ್ಸಿ ಮತ್ತು ಪಾತಕ್ ಪ್ರೊಡಕ್ಷನ್ಸ್ ಸಹಯೋಗದಲ್ಲಿ ವಿರಾಜಪೇಟೆಯ ಶಾನ್‌ಭಾಗ್ ಸೆಂಟರ್ ರೂಫ್ ಟಾಪ್‌ನಲ್ಲಿ ಮಿಸೆಸ್, ಮಿಸ್, ಮಿಸ್ಟರ್, ಟೀನ್ ಬಾಯ್, ಟೀನ್ ಗರ್ಲ್, ಪ್ರಿನ್ಸ್ ಹಾಗೂ ಪ್ರಿನ್ಸೆಸ್ 2026 ಸ್ಪರ್ಧೆ ನಡೆಯಿತು. ಸ್ಪರ್ಧಿಗಳು ಆತ್ಮವಿಶ್ವಾಸ, ಪ್ರತಿಭೆ ಮತ್ತು ವ್ಯಕ್ತಿತ್ವದ ಮೂಲಕ ತೀರ್ಪುಗಾರರು ಹಾಗೂ ಪ್ರೇಕ್ಷಕರ ಮನಗೆದ್ದರು. ಎಲ್ಲಾ ವಿಭಾಗಗಳಲ್ಲಿಯೂ ತೀವ್ರ ಪೈಪೋಟಿ ಕಂಡು ಬಂದಿತು. ಕಾರ್ಯಕ್ರಮದ ತೀರ್ಪುಗಾರರಾಗಿ ನಟಿ ಹಾಗೂ ಸಮಾಜಸೇವಕಿ ಕಾಣತಂಡ ಬೀನಾ ಜಗದೀಶ್, ಮಿಸ್ ಸೌತ್ ಇಂಡಿಯಾ ಮಾಡೆಲ್ 2026ರ ಮೊಳ್ಳೆರ ನಿಶಿ ಅಪ್ಪಣ್ಣ ಹಾಗೂ ಮಿಸ್ಟರ್ ಕೂರ್ಗ್ 2023ರ ತಿತ್ತಿರ ಕುಟ್ಟಪ್ಪ ಭಾಗವಹಿಸಿದ್ದರು. ತಮ್ಮ ಅನುಭವ ಹಾಗೂ ಪರಿಣತಿಯಿಂದ ಸ್ಪರ್ಧೆಯನ್ನು ನ್ಯಾಯಯುತವಾಗಿ ಮೌಲ್ಯಮಾಪನ ಮಾಡಿದರು. ಕೊಡವ ಚಿತ್ರರಂಗ ಹಾಗೂ ಮನೋರಂಜನಾ ಕ್ಷೇತ್ರದ ಪುಗ್ಗೇರ ಆಕಾಶ್, ಚೇನಂಡ ಗಿರೀಶ್ ಪೂಣಚ್ಚ, ಸೋಮೆಯಂಡ ಬೋಸ್ ಬೆಳ್ಳಿಯಪ್ಪ, ತಾತಂಡ ಮಿನ್ನು, ಕುಪ್ಪಣಮಾಡ ಭೂಮಿಕಾ, ಕುಪ್ಪಣಮಾಡ ಜಾನ್ಸಿ, ಟಿ.ಡಿ.ಮೋಹನ್, ಸಂಕೇತ್ ಶಿವಪ್ಪ,…

Read More