ಲೇಖಕ: admin

ಕುಶಾಲನಗರ  ಜ.20 NEWS DESK : ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳ ಕಲಿಕಾ ಹಬ್ಬವು ಸಂತಸದ ಕಲಿಕೆ ಮತ್ತು ಸಂಭ್ರಮದ‌ ಕಲಿಕಾ ಹಬ್ಬ ಆಗಲಿ. ಮಕ್ಕಳ ಕ್ರಿಯಾತ್ಮಕ ಚಟುವಟಿಕೆಗೆ ಕಲಿಕಾ ಹಬ್ಬವು ಪೂರಕವಾಗಿದೆ ಎಂದು ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಹೇಳಿದರು. ಶಾಲಾ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು , ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಕುಶಾಲನಗರ ಕ್ಲಸ್ಟರ್ ನ ಸಂಯುಕ್ತಾಶ್ರಯದಲ್ಲಿ ಮುಳ್ಳುಸೋಗೆ ಬಳಿಯ ಗುಮ್ಮನಕೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  1 ರಿಂದ 5 ನೇ ತರಗತಿಯವರೆಗಿನ ಮಕ್ಕಳಿಗೆ ಮೂಲಭೂತ – ಸಾಕ್ಷರತೆ- ಸಂಖ್ಯಾಶಾಸ್ತ್ರ (ಎಫ್ ಎಲ್ ಎನ್ ) ಸಂಬಂಧಿಸಿದಂತೆ ಏರ್ಪಡಿಸಿದ್ದ ಮಕ್ಕಳ ಕಲಿಕಾ ಹಬ್ಬ : 2026 ಸಂಭ್ರಮದ ಉತ್ಸವದಲ್ಲಿ ಕಲಿಕಾ ಗೋಪುರದಲ್ಲಿ ಮಕ್ಕಳ ಕಲಿಕಾ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಲಿಕಾ ಹಬ್ಬವು ಮಕ್ಕಳ ಕಲಿಕಾ ಆಸಕ್ತಿ ಹೆಚ್ಚಿಸಲು ಸಹಕಾರಿಯಾಗಿದೆ ಎಂದರು.  ವಿದ್ಯಾರ್ಥಿಗಳಲ್ಲಿ ಕ್ರಿಯಾತ್ಮಕ ಚಟುವಟಿಕೆಗಳ ಮೂಲಕ ಸಂತಸದಾಯಕ ಕಲಿಕೆಗೆ…

Read More

ಗೋಣಿಕೊಪ್ಪ ಜ.20 NEWS DESK : ಪ್ರಗತಿ ಆಟೋಚಾಲಕರ ಮತ್ತು ಮಾಲೀಕರ ಸಂಘ ವತಿಯಿಂದ ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಆಟೋ ಚಾಲಕರಿಗೆ ಕಾರ್ಮಿಕ ಕಾರ್ಡ್ ವಿತರಣೆ ಮಾಡಲಾಯಿತು. ಗೋಣಿಕೊಪ್ಪ ಪಂಚಾಯಿತಿ ಹಳೆ ಕಟ್ಟಡ ಸಂಭಾಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 90ಕ್ಕೂ ಹೆಚ್ಚು ಆಟೋಚಾಲಕರಿಗೆ ವಿತರಣೆ ನಡೆಯಿತು. ಮಡಿಕೇರಿ ಕಾರ್ಮಿಕ ಇಲಾಖೆ ಅಧಿಕಾರಿ ವಾಣಿ ಮಾತನಾಡಿ, ಪ್ರಧಾನಮಂತ್ರಿ ಶ್ರಮಯೋಗಿ ಮಾನ್‍ಧನ್ ಪಿಂಚಣಿ ಸವಲತ್ತು ಪಡೆಯಲು 40 ವರ್ಷದ ಒಳಗಿನವರು ಅರ್ಹರಾಗಿರುತ್ತಾರೆ. ಜೊತೆಗೆ ಮೋಟರು ಸಾರಿಗೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆತರಲಾಗಿದೆ. ಈ ಯೋಜನೆಗಳ ಸದುಪಯೋಗಕ್ಕೆ ಆಟೋಚಾಲಕರು ಗಮನ ಹರಿಸಬೇಕು ಎಂದು ಹೇಳಿದರು. ಕಾರ್ಮಿಕ ಇಲಾಖೆಯಲ್ಲಿ ಸಿಗುವ ಹಲವಾರು ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಸಾಹಿತಿ ಜಗದೀಶ್ ಜೋಡುಬೀಟಿ ಮಾತನಾಡಿ, ಆಟೋಚಾಲಕರು ಸಾಮಾಜಿಕ ಬದ್ಧತೆಯೊಂದಿಗೆತಮ್ಮಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ನಾಡಿನ ನೆಲ-ಜಲ, ಸಂಸ್ಕøತಿ, ಭಾμÉಗಳ ಸಮೃದ್ಧಿ ಮತ್ತು ಮಹಿಳೆ, ಮಕ್ಕಳ, ವೃದ್ಧರ, ಅನಾರೋಗ್ಯ ಪೀಡಿತರ ಸುರಕ್ಷತೆಯೆಡೆಯ ಜವಾಬ್ದಾರಿಯು ಆಟೋಚಾಲಕರಾದ್ದಾಗಿದೆ.…

Read More

ಮಡಿಕೇರಿ ಜ.20 NEWS DESK : ಜನಪ್ರತಿನಿಧಿಗಳು ಹಾಗೂ ಗ್ರಾಹಕರ ನಡುವಿನ ಸೇತುವೆಯಂತೆ ಕಾರ್ಯನಿರ್ವಹಿತ್ತಿರುವ ಸಹಕಾರ ಸಂಘಗಳು ಭ್ರಷ್ಟಾಚಾರ ಮುಕ್ತವಾಗಿದ್ದಾಗ ಮಾತ್ರ ಸಹಕಾರಿ ಕ್ಷೇತ್ರದ ಬೆಳವಣಿಗೆ ಸಾಧ್ಯ ಎಂದು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ ಅಧ್ಯಕ್ಷ ಕೆ.ಪಿ.ಗಣಪತಿ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಸಂಯುಕ್ತಾಶ್ರಯದಲ್ಲಿ ನಗರದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಜಿಲ್ಲೆಯ ಪ್ಯಾಕ್ಸ್, ಪಿಕಾರ್ಡ್ ಬ್ಯಾಂಕ್, ಎ.ಪಿ.ಸಿ.ಎಂ.ಎಸ್ ಹಾಗೂ ಜೇನು ಸಹಕಾರ ಸಂಘಗಳ ಕಾರ್ಯನಿರ್ವಾಹಕರುಗಳಿಗೆ ಇತ್ತೀಚಿನ ಸಹಕಾರ ಕಾಯ್ದೆ, ಕಾನೂನು ತಿದ್ದುಪಡಿ ಮತ್ತು ಜಿ.ಎಸ್.ಟಿ, ಆದಾಯ ತೆರಿಗೆ ಕುರಿತು ಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿಂದೆ ಸಹಕಾರಿ ಕ್ಷೇತ್ರದಲ್ಲಿ ಕೊಡಗು ಇತರರಿಗೆ ಮಾದರಿಯಾಗಿತ್ತು, ಆದರೆ ಇಂದು ಅವ್ಯವಹಾರ ನುಸುಳಿದೆ. ಈ ಬಗ್ಗೆ ಪ್ರತಿಯೊಬ್ಬರು ಆತ್ಮಾವಲೋಕನ ಮಾಡಿಕೊಳ್ಳಬೇಕು, ಸಹಕಾರಿ ಕ್ಷೇತ್ರವನ್ನು ಭ್ರಷ್ಟಾಚಾರ ಮುಕ್ತಗೊಳಿಸಬೇಕು ಮತ್ತು ಸಹಕಾರ ಸಂಘಗಳ ಬೆಳವಣಿಗೆಗೆ ಶ್ರಮಿಸಬೇಕು ಎಂದು ಕರೆ ನೀಡಿದರು. ಸಹಕಾರ ಕ್ಷೇತ್ರದಲ್ಲಿ ಎಲ್ಲವನ್ನೂ…

Read More

ಮಡಿಕೇರಿ ಜ.20 NEWS DESK : ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದಲ್ಲಿ ಸಂಸ್ಥೆಯ ಸಮುದಾಯ ಆಧಾರಿತ ಪುನರ್ವಸತಿ ಯೋಜನೆ ಮತ್ತು ಬೆಂಗಳೂರಿನ ಶ್ರೀ ಕೇಶವ ಟ್ರಸ್ಟ್   ಸಹಯೋಗದೊಂದಿಗೆ ವಿಶೇಷಚೇತನರು ಮತ್ತು ಅವರ ಆರೈಕೆದಾರರಿಗೆ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು. ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ – ಕೊಡಗು ವಿಭಾಗದ ಅಧ್ಯಕ್ಷ  ಡಾ.ಶ್ಯಾಮ್ ಅಪ್ಪಣ್ಣ  ಶಿಬಿರದಲ್ಲಿ ಪಾಲ್ಗೊಂಡು, ಕಾಯಿಲೆಗಳನ್ನು ಮುಂಚಿತವಾಗಿ ನಿರ್ಣಯ ಮಾಡುವುದರ ಪ್ರಾಮುಖ್ಯತೆಯ ಕುರಿತು ಮಾಹಿತಿ ನೀಡಿದರಲ್ಲದೇ,   ಈ ಶಿಬಿರವು ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿ ಮುಂದಿನ ಚಿಕಿತ್ಸೆಯ ಸಿದ್ಧತೆಗೆ ಉತ್ತಮ ಅವಕಾಶ ಎಂದು ಹೇಳಿದರು.  ಬೆಂಗಳೂರಿನ ಶ್ರೀ ಕೇಶವ ಟ್ರಸ್ಟ್, ಪ್ರಭಾ ಕಣ್ಣಿನ ಚಿಕಿತ್ಸಾಲಯ, ವಿಠ್ಠಲ ಕಣ್ಣಿನ ಆಸ್ಪತ್ರೆಯ ಅಧ್ಯಕ್ಷ  ನೇತ್ರತಜ್ಞ ಡಾ. ಪ್ರವೀಣ್ ಆರ್. ಮೂರ್ತಿ   ಮಾತನಾಡಿ, ದೃಷ್ಟಿ ಸಮಸ್ಯೆಗಳಿಗೆ ಇರುವ ಥೆರಪಿಗಳ ಬಗ್ಗೆ ವಿವರಿಸಿ, ಚಿಕಿತ್ಸೆ ಮತ್ತು ಥೆರಪಿಗಳ ವಿಧಾನಗಳು ಮತ್ತು ರೋಗಿಗಳ ಪಾಲಕರಿಗೆ ತರಬೇತಿಯ ಬಗ್ಗೆ ಮಾಹಿತಿ ನೀಡಿದರು. ಬೆಂಗಳೂರಿನ ಆಪ್ಟೋಮೆಟ್ರಿ…

Read More

ಮಡಿಕೇರಿ ಜ.20 NEWS DESK : ಮಡಿಕೇರಿಯಲ್ಲಿರುವ ಕಾಂಗ್ರೆಸ್ ಪಕ್ಷದ ಸ್ವಂತ ನಿವೇಶನದಲ್ಲಿ ನಿರ್ಮಾಣ ಆಗುತ್ತಿರುವ, ನೂತನ ಕೊಡಗು ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿ ಕಾಮಗಾರಿಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಪರಿಶೀಲಿಸಿದರು. ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಬಿ ಶಾಂತಪ್ಪ ಹಾಜರಿದ್ದರು.

Read More

ನಾಪೋಕ್ಲು ಜ.20 NEWS DESK : ಮೈಸೂರಿನ ಕೊಡಗು ಗೌಡ ಸಮಾಜದ ಅಧ್ಯಕ್ಷರಾಗಿ ಕೊಂಬಾರನ ಬಸಪ್ಪ ಪುನರಾಯ್ಕೆ ಆಗಿದ್ದಾರೆ. ಸಮಾಜದಲ್ಲಿ ಜರುಗಿದ ವಾರ್ಷಿಕ ಮಹಾಸಭೆ ಹಾಗೂ ನೂತನ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಕೊಂಬಾರನ ಬಸಪ್ಪ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಚಂಡೀರ ಬಸಪ್ಪ, ಕಾರ್ಯದರ್ಶಿಯಾಗಿ ಪೊನ್ನೆಟಿ ನಂದ, ಖಜಾಂಚಿಯಾಗಿ ಉಳುವಾರನ ಸುರೇಶ್, ಸಹ ಕಾರ್ಯದರ್ಶಿಯಾಗಿ ನಡುಮನೆ ಚಂಗಪ್ಪ ಆಯ್ಕೆಯಾದರು. ನೂತನ ಆಡಳಿತ ಮಂಡಳಿಯ ನಿರ್ದೇಶಕರಾಗಿ ನಡುವಟ್ಟಿರ  ಲಕ್ಷ್ಮಣ್, ಪಟ್ಟಡ ಶಿವಕುಮಾರ್, ಹೊಸೂರು ರಾಘವಯ್ಯ, ಕುಂಟುಪುಣಿ ರಮೇಶ್, ಮೊಟ್ಟನ ಕೌಶಿಕ್, ಹಾಗೂ ಮಹಿಳಾ ನಿರ್ದೇಶಕರಾಗಿ ಕುಂಟುಪುಣಿ ಶೀಲ, ಚಪ್ಪೇರ ಯಮುನಾ, ಶಂಕರನ ಶ್ಯಾಮಲ ಅವರುಗಳು ಆಯ್ಕೆಯಾಗಿದ್ದಾರೆ. ವರದಿ : ದುಗ್ಗಳ ಸದಾನಂದ 

Read More

ಸೋಮವಾರಪೇಟೆ ಜ.20 NEWS DESK : ಕೊಡ್ಲಿಪೇಟೆ ಖ್ಯಾತೆ ಗ್ರಾಮದಲ್ಲಿರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯ  6ನೇ ತರಗತಿಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಈ ಶಾಲೆಗೆ ಪ್ರವೇಶ  ಆರಂಭವಾಗಿದ್ದು, ಫೆ.15 ಕೊನೆಯ ದಿನಾಂಕವಾಗಿದೆ. ಆಸಕ್ತಿ ಉಳ್ಳವರು ಸ್ಯಾಟ್ಸ್ ನಂಬರ್, ಜಾತಿ ಪ್ರಮಾಣ ಪತ್ರದ ನೋಂದಣಿ ಸಂಖ್ಯೆ, ಆದಾಯ ಪ್ರಮಾಣ ಪತ್ರದ ನೋಂದಣಿ ಸಂಖ್ಯೆಯೊಂದಿಗೆ https;//sevasindhuservices.karnataka.gov.in ಈ ವೆಬ್ ಸೈಟ್ ಮೂಲಕ ಸಲ್ಲಿಸಬೇಕೆಂದು ಶಾಲೆಯ ಪ್ರಾಂಶುಪಾಲರಾದ ಡಾ. ಗುರುಸ್ವಾಮಿಯವರು ತಿಸಿದರು.  ದಾಖಲಾತಿ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕರಾದ ಡಾ. ಮಂತರ್ ಗೌಡ ಅವರು, ಮಾತನಾಡಿದ  ಶಾಸಕ ಡಾ. ಮಂತರ್ ಗೌಡ, ವಸತಿ ಶಾಲೆಗಳಲ್ಲಿ ಬಡಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಇಲಾಖೆ ಅಡಿಯಲ್ಲಿ ನಮ್ಮ ಸರ್ಕಾರ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದೆ. ಮೊದಲಿಗೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಹೆಚ್ಚಿನದಾಗಿ ಅವಕಾಶ ಕೊಡಬೇಕು ಎಂದರು. ಈ ಶಾಲೆಯಲ್ಲಿ ಸಿಬಿಎಸ್‍ಇ ಪಠ್ಯಕ್ರಮ ಒಳಗೊಂಡಿದ್ದು, ವಿದ್ಯಾರ್ಥಿಗಳು ಇದನ್ನು…

Read More

ಸೋಮವಾರಪೇಟೆ ಜ.20 NEWS DESK : ಹಾನಗಲ್ಲು ಗ್ರಾಮ ಪಂಚಾಯಿತಿ ವತಿಯಿಂದ ಮಕ್ಕಳ ಗ್ರಾಮಸಭೆ ಹಾನಗಲ್ಲು ಶೆಟ್ಟಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.ಪಂಚಾಯಿತಿ ಅಧ್ಯಕ್ಷ ಯಶಾಂತ್ ಕುಮಾರ್ ಗ್ರಾಮಸಭೆಗೆ ಚಾಲನೆ ನೀಡಿದರು. ವಿದ್ಯಾರ್ಥಿನಿ ಹೆಚ್.ಈ.ಇಂಚರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಯಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಲ್ಕಂದೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಹಾನಗಲ್ಲು ಶೆಟ್ಟಳ್ಳಿ ಶಾಲೆಯ ವಿದ್ಯಾರ್ಥಿಗಳು ಸಮಸ್ಯೆಗಳ ಬಗ್ಗೆ ಪಂಚಾಯಿತಿ ಗಮನಕ್ಕೆ ತಂದರು. ಹಾನಗಲ್ಲು ಶಾಲೆಯ ಶೌಚಾಲಯ ದುರಸ್ತಿ ಮಾಡಿಕೊಡಿ, ಕೈತೊಳೆಯಲು ಸಿಂಕ್ ಅಳವಡಿಸಿಬೇಕು. ಶಾಲೆಯಲ್ಲಿ ಸಾಂಸ್ಕøತಿಕ ಕಾರ್ಯಕ್ರಮ ನಡೆಸಲು ಧ್ವನಿವರ್ಧಕ ಬೇಕು ಎಂದು ವಿದ್ಯಾರ್ಥಿಗಳಾದ ಪ್ರಥಮ್, ಭೂಮಿಕಾ, ಕಾರ್ತಿಕ್, ಜೇತಸ್, ಶೇಯಸ್ ಬೇಡಿಕೆಯಿಟ್ಟರು.ಕಲ್ಕಂದೂರು ಶಾಲೆಗೆ ತೆರಳುವ ಸಂದರ್ಭ ಹಾಗೂ ಮೈದಾನದಲ್ಲಿ ಆಟವಾಡುವ ಸಂದರ್ಭ ಬೀದಿನಾಯಿಗಳ ಕಾಟ ಹೆಚ್ಚಾಗಿದೆ. ಕೆಲವೊಮ್ಮೆ ಮಕ್ಕಳನ್ನು ಅಟ್ಟಿಸಿಕೊಂಡು ಬರುತ್ತವೆ. ಶಾಲೆಗೆ ತೆರಳಲು ಭಯವಾಗುತ್ತದೆ ಎಂದು ವಿದ್ಯಾರ್ಥಿನಿ ಪೂರ್ವಿ ಹೇಳಿದರು. ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿಗೆ ಪರದಾಡಬೇಕಿದೆ. ವಾಟರ್ ಫಿಲ್ಟರ್ ಕೊಡಿಸಿ…

Read More

ವಿರಾಜಪೇಟೆ ಜ.20 NEWS DESK : ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಬೇಕು. ಜೊತೆಗೆ ಪೋಷಕರು ಮಕ್ಕಳಿಗೆ ಸಂಸ್ಕಾರವನ್ನು ಕಲಿಸುವುದರ ಮೂಲಕ ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಿ ಎಂದು ಅರಮೇರಿ ಕಳಂಚೇರಿ ಮಠದ ಮಠಾಧಿಪತಿಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು  ಹೇಳಿದರು. ವಿರಾಜಪೇಟೆಯ ತಾಲ್ಲೂಕು ಮೈದಾನದಲ್ಲಿ ಜರುಗಿದ ಪಟ್ಟಣದ ಕೂರ್ಗ್ ವ್ಯಾಲಿ ಶಾಲೆಯ 25ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೂರ್ಗ್ ವ್ಯಾಲಿ ವಿದ್ಯಾಸಂಸ್ಥೆಯು 25 ವರ್ಷಗಳನ್ನು ಪೂರೈಸಿದ್ದು, ಉತ್ತಮ ಪ್ರಜೆಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದೆ. ಈ ಸಂಸ್ಥೆಯು ಕೇವಲ ವಿದ್ಯಾರ್ಜನೆಗೆ ಮಾತ್ರವಲ್ಲದೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಹಲವಾರು ಸಾಧನೆಗಳನ್ನು ಮಾಡಿ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು. ಪೋಷಕರು ವಿದ್ಯಾರ್ಥಿಗಳ ಶಿಕ್ಷಣದ ಕಡೆ ಹೆಚ್ಚು ಗಮನವನ್ನು ಹರಿಸಬೇಕು. ಹಾಗೆಯೇ ಅವರಿಗೆ ಸಂಸ್ಕಾರವನ್ನು ಕಲಿಸಿ ಎಂದು ಕರೆ ನೀಡಿದರು. ಸಂಸ್ಥೆಯು 25 ವರ್ಷ ಪೂರೈಸಲು ಆಡಳಿತ ಮಂಡಳಿಯ ಚಿತ್ರ ಭಾನು ಹಾಗೂ ಸುಮಚಿತ್ರ ಭಾನು ಅವರ ಪಾತ್ರ ಪ್ರಮುಖವಾಗಿದ್ದು, ಹಲವಾರು ಸವಾಲುಗಳನ್ನು ಎದುರಿಸಿ…

Read More

ನಾಪೋಕ್ಲು ಜ.20 NEWS DESK : ಬೇತು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಮಕ್ಕಿ ಶಾಸ್ತಾವು ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ಕೆರೆಯ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಸ್ಥಳೀಯರ ಕೋರಿಕೆ ಮೇರೆಗೆ ದೇವಸ್ಥಾನದ ಕೆರೆಗೆ ಭೇಟಿ ನೀಡಿ, ಪುರಾತನವಾದ ಕೆರೆಯು ಶಿಥಿಲಾವಸ್ಥೆಗೆ ತಲುಪಿರುವುದನ್ನು ಪರಿಶೀಲಿಸಿದರು. ಭಕ್ತರ ಹಾಗೂ ಸಮಿತಿಯವರ ದುರಸ್ತಿ ಕೋರಿಕೆಯನ್ನು ಮನ್ನಿಸಿದ ಶಾಸಕರು, ಅಧಿಕಾರಿಗಳೊಂದಿಗೆ ಮಾತನಾಡಿ ಈ ಕೆರೆಯ ಪುನರ್ ನಿರ್ಮಾಣಕ್ಕೆ ತಗಲುವ ವೆಚ್ಚಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು. ಮಾಹಿತಿ ಬಂದೊಡನೆ ಕೆರೆಯ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಸಕರು ತಿಳಿಸಿದರು. ಈ ಸಂದರ್ಭ ನಾಪೋಕ್ಲು ಪಂಚಾಯಿತಿ ಅಧ್ಯಕ್ಷರು ವನಜಾಕ್ಷಿ ರೇಣುಕೇಶ್, ಸದಸ್ಯರುಗಳಾದ ಕೆ.ಎ.ಇಸ್ಮಾಯಿಲ್, ಮಾಚೇಟಿರ ಕುಸು ಕುಶಾಲಪ್ಪ, ಕುಲ್ಲೇಟಿರ ಅರುಣ್ ಬೇಬ, ಹೇಮಾವತಿ, ಸಾಬಾ, ಪಾತಾಂಡ ಕಟ್ಟಿ, ಎಳ್ತಂಡ ಶಾಂತಿ, ದೇವಸ್ಥಾನದ ಅಧ್ಯಕ್ಷ ಕುಟ್ಟಜೆಟ್ಟಿರ ಶಾಮ್, ಪದಾಧಿಕಾರಿಗಳು ಗ್ರಾಮಸ್ಥರುಗಳಾದ ಕೊಂಡಿರ ಗಣೇಶ್, ಸುಬ್ರಮಣಿ…

Read More